Tag: ಸರ್ಕಾರಿ ನೌಕರರು

  • ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು: ಜಿತೇಂದ್ರ ಸಿಂಗ್

    ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು: ಜಿತೇಂದ್ರ ಸಿಂಗ್

    ನವದೆಹಲಿ: ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಇನ್ನೂ ಮುಂದೆ ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದರು.

    ಧಾರಕ ವಲಯವನ್ನು ಡಿ-ನೋಟಿಫೈ ಮಾಡುವವರೆಗೆ ಕೋವಿಡ್ ಕಂಟೈನ್‍ಮೆಂಟ್ ವಲಯದಲ್ಲಿ ವಾಸಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಬರುವುದರಿಂದ ವಿನಾಯಿತಿ ನೀಡಲಾಗಿದೆ. ಅಧೀನ ಕಾರ್ಯದರ್ಶಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು 50% ಕ್ಕೆ ನಿರ್ಬಂಧಿಸಲಾಗಿದೆ. ಉಳಿದ 50% ರಷ್ಟು ಜನರು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಸಿಬ್ಬಂದಿ ಸಚಿವಾಲಯ ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನೀವು ಸರಿಯಾಗಿ ಮಾಸ್ಕ್ ಧರಿಸಿದ್ರೆ ಲಾಕ್‍ಡೌನ್ ಮಾಡಲ್ಲ: ಅರವಿಂದ್ ಕೇಜ್ರಿವಾಲ್

    ಈ ಕುರಿತು ಮಾಹಿತಿ ನೀಡಿದ ಸಿಂಗ್ ಅವರು, ಭಾರತದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಅವರು ಮನೆಯಿಂದಲೇ ಕೆಲಸ ಮಾಡಬಹುದು ಎಂದು ತಿಳಿಸಿದರು.

    ಸಂಬಂಧಪಟ್ಟ ಎಲ್ಲ ಇಲಾಖೆಗಳಿಂದ ರೋಸ್ಟರ್‍ಗಳನ್ನು ಸಿದ್ಧಪಡಿಸಲಾಗುವುದು. ಕಚೇರಿಗೆ ಹಾಜರಾಗದ ಮತ್ತು ಮನೆಯಿಂದಲೇ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವಾಗಲೂ ದೂರವಾಣಿ ಮತ್ತು ಇತರ ಎಲೆಕ್ಟ್ರಾನಿಕ್ ಸಂವಹನಗಳ ಮೂಲಕ ಲಭ್ಯವಿರುತ್ತಾರೆ ಎಂದು ಹೇಳಿದರು.

    ದೆಹಲಿಯಲ್ಲಿ ನಿನ್ನೆ ಕೋವಿಡ್‍ನಿಂದಾಗಿ ಏಳು ಸಾವುಗಳು ಮತ್ತು 20,181 ಹೊಸ ಪ್ರಕರಣಗಳು ದಾಖಲಾಗಿದೆ. ಪಾಸಿಟಿವ್ ಪ್ರಮಾಣವು 19.60 ಪ್ರತಿಶತಕ್ಕೆ ಏರಿದೆ. ನವೀಕರಿಸಿದ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇಂದು ದೆಹಲಿಯಲ್ಲಿ ಒಂದೇ ದಿನದಲ್ಲಿ 1,59,632 ಪ್ರಕರಣಗಳು ಮತ್ತು 327 ಸಾವುಗಳು ಸಂಭವಿಸಿವೆ ಎಂದು ಆತಂಕ ವ್ಯಕ್ತಪಡಿಸಿದರು.

    ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) ಆದೇಶವನ್ನು ಹೊರಡಿಸಿದೆ. ಇದರ ಪ್ರಕಾರ ಸಾಧ್ಯವಾದಷ್ಟು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಧಿಕೃತ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

    ಕಚೇರಿ ಆವರಣದಲ್ಲಿ ನೂಕುನುಗ್ಗಲು ಉಂಟಾಗುವುದನ್ನು ತಪ್ಪಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ಸಮಯ ಪಾಲನೆ ಮಾಡಬೇಕು. ಆಗಾಗ್ಗೆ ಕೈ ತೊಳೆಯುವುದು, ಸ್ವಚ್ಫವಾಗಿರುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಬೇಕು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಟೈರ್ ಕೆಳಗೆ ಸಿಕ್ಕ ನೋಟ್ ತೆಗೆದುಕೊಳ್ಳಲು ವ್ಯಕ್ತಿ ಸರ್ಕಸ್

    ಡಿಒಪಿಟಿ ಆದೇಶದ ಪ್ರಕಾರ, ಪ್ರಸ್ತುತ ಹೊರಡಿಸಲಾದ ಮಾರ್ಗಸೂಚಿಗಳು ಜನವರಿ 31 ರವರೆಗೆ ಜಾರಿಯಲ್ಲಿರುತ್ತವೆ ಎಂದು ಹೇಳಿದರು.

  • ಸರ್ಕಾರಿ ನೌಕರರು ಬೇಕಾಬಿಟ್ಟಿ ಸಾಮಾಜಿಕ ಜಾಲತಾಣ ಬಳಕೆ ಮಾಡಿದರೆ ಹುಷಾರ್!

    ಸರ್ಕಾರಿ ನೌಕರರು ಬೇಕಾಬಿಟ್ಟಿ ಸಾಮಾಜಿಕ ಜಾಲತಾಣ ಬಳಕೆ ಮಾಡಿದರೆ ಹುಷಾರ್!

    ಬೆಂಗಳೂರು: ಸರ್ಕಾರಿ ನೌಕರರು ಇತ್ತಿಚೀನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಒಂದು ಪಕ್ಷದ ಪರ ಅಥವಾ ವಿರೋಧವಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಸರ್ಕಾರಿ ನೌಕರರ ಸಾಮಾಜಿಕ ಜಾಲತಾಣದ ಬಳಕೆಯ ಬಗ್ಗೆ ಕಡಿವಾಣ ಹಾಕಲು ಮುಂದಾಗಿದೆ.

    ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥ ಮನೋಭಾವವನ್ನು ಹೊಂದಿರಬೇಕು. ಜೊತೆಗೆ ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಹೇಳಿಕೆ ಕೊಡುವುದಾಗಲಿ ಪಕ್ಷಗಳ ಪರ ಗುರುತಿಸಿಕೊಂಡಿರುವುದು ಕಂಡುಬಂದರೆ ಸರ್ಕಾರ ನೌಕರರ ಮೇಲೆ ಕ್ರಮ ಕೈಗೊಳ್ಳುವ ಅವಕಾಶವಿದೆ. ಹಾಗಾಗಿ ಸರ್ಕಾರಿ ನೌಕಕರು ಸಮಾಜದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕೆಂಬುದನ್ನು ಸರ್ಕಾರಿ ನಿಯಮದಲ್ಲಿ ಸ್ಪಷ್ಟವಾಗಿದೆ. ಇದನ್ನೂ ಓದಿ: ವೇಸ್ಟ್ ಬಾಡಿ ಯಾರು ಅಂತ ಇಡೀ ರಾಜ್ಯಕ್ಕೆ ತಿಳಿದಿದೆ: ಜಾರಕಿಹೊಳಿಗೆ ತಿವಿದ ಸಿದ್ದರಾಮಯ್ಯ

    ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕಕರು ಸಾಮಾಜಿಕ ಜಾಲತಾಣದಲ್ಲಿ ಪಕ್ಷದ ಪರ ಅಥವಾ ವಿರೋಧವಾಗಿ ಲೇಖನ, ಅಭಿಪ್ರಾಯ, ವೀಡಿಯೋಗಳನ್ನು ಹಂಚಿಕೊಳ್ಳುವುದನ್ನು ಸರ್ಕಾರ ಗಮನಿಸಿದೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ನೌಕಕರು ಪ್ರದರ್ಶಿಸುವ ವರ್ತನೆಯು ಕೂಡ ರಾಜ್ಯ ನಾಗರಿಕ ಸೇವಾ(ನಡತೆ) ನಿಮಯಗಳು, 2021ರ ವ್ಯಾಪ್ತಿಗೆ ಒಳಪಡಿಸಿದೆ. ಈ ನಿಯಮಗಳಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವ ಸರ್ಕಾರಿ ನೌಕರರ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮ 1957ರ ಅವಕಾಶಗಳನ್ವಯ ಶಿಸ್ತುಕ್ರಮ ಕೈಗೊಳ್ಳುವಂತೆ ಆಯಾ ಪ್ರಾಧಿಕಾರಗಳಿಗೆ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

    ಇನ್ನುಮುಂದೆ ಸರ್ಕಾರಿ ನೌಕಕರು ಬೇಕಾಬಿಟ್ಟಿ ಸಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದಲ್ಲಿ ನಿಯಮಕ್ಕೆ ವಿರುದ್ಧವಾಗಿದ್ದರೆ ತಮ್ಮ ಸರ್ಕಾರಿ ಉದ್ಯೋಗಕ್ಕೆ ಕುತ್ತು ತರುವ ಸಾಧ್ಯತೆ ಹೆಚ್ಚಿದೆ.

  • UAEಯಲ್ಲಿ ನಾಲ್ಕೂವರೆ ದಿನ ಮಾತ್ರ ಕೆಲಸ – ಶನಿವಾರ, ಭಾನುವಾರ ವೀಕೆಂಡ್

    UAEಯಲ್ಲಿ ನಾಲ್ಕೂವರೆ ದಿನ ಮಾತ್ರ ಕೆಲಸ – ಶನಿವಾರ, ಭಾನುವಾರ ವೀಕೆಂಡ್

    ಅಬುಧಾಬಿ: ಎಲ್ಲಾ ಸರ್ಕಾರಿ ಘಟಕಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಇನ್ಮುಂದೆ ನಾಲ್ಕೂವರೆ ದಿನಗಳವರೆಗೂ ಕೆಲಸ ಮಾಡುವಂತೆ ಹೊಸ ವೇಳಾಪಟ್ಟಿಯನ್ನು ಜಾರಿಗೆ ತರಲು ಯುನೈಟೆಡ್ ಅರಬ್ ಎಮಿರೇಟ್ಸ್ ನಿರ್ಧರಿಸಿದೆ. ಶುಕ್ರವಾರ ಮಧ್ಯಾಹ್ನದ ಜೊತೆ ಶನಿವಾರ ಮತ್ತು ಭಾನುವಾರ ಹೊಸ ವಾರಾಂತ್ಯವೆಂದು ತೀರ್ಮಾನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತಂತೆ ಇಂದು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಲಾಗಿದ್ದು, 2022ರ ಜನವರಿ 1ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಇದು ಕೆಲಸದ ವಾರವನ್ನು ಪಾಶ್ಚಿಮಾತ್ಯ ವೇಳಾಪಟ್ಟಿಗಳಿಗೆ ಅನುಗುಣವಾಗಿ ಮಾಡುತ್ತದೆ. ಕೆಲಸದ ಜೀವನ ಸಮತೋಲನ ಮತ್ತು ಆರ್ಥಿಕ ಸ್ಪರ್ಧಾತ್ಮಕತೆಯನ್ನು ಸುಧಾರಿಸುವ ಗುರಿಯನ್ನು ಈ ಬದಲಾವಣೆ ಹೊಂದಿದೆ. ಐದು ದಿನಗಳಿಂದ ಕಡಿಮೆ ವಾರದ ಕೆಲಸ ಮಾಡಲು ಅವಕಾಶ ನೀಡಿದ ವಿಶ್ವದ ಏಕೈಕ ರಾಷ್ಟ್ರ ಯುಎಇ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ:  ಚಂದ್ರನ ಮೇಲೆ ಗುಡಿಸಲು? – ಫೋಟೋ ಶೇರ್ ಮಾಡಿದ ವಿಜ್ಞಾನಿಗಳು

    ಆರ್ಥಿಕ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಮತ್ತು ಜಾಗತಿಕ ಬೆಳವಣಿಗೆಗಳೊಂದಿಗೆ ವೇಗವನ್ನು ಹೆಚ್ಚಿಸುವ ದೃಷ್ಟಿಯಿಂದ ಯುಎಇಯು ಈ ಪರಿವರ್ತನೆಗೊಳಿಸಿದೆ ಎಂದು ಅಬುಧಾಬಿ ಸರ್ಕಾರಿ ಮಾಧ್ಯಮ ಕಚೇರಿ ಪ್ರಕಟಿಸಿದೆ. ಇದನ್ನೂ ಓದಿ:  ಯುಎಸ್, ಭಾರತದ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ CEO

    ಹೊಸ ವೇಳಾ ಪಟ್ಟಿಯ ಪ್ರಕಾರ ಸೋಮವಾರದಿಂದ ಗುರುವಾರದವರೆಗೆ ಎಂಟು ಗಂಟೆಗಳ ಪೂರ್ಣ ಕಾಲ ನೌಕರರು ಕೆಲಸ ಮಾಡಬೇಕಾಗಿರುತ್ತದೆ. ಆದರೆ ಶುಕ್ರವಾರ ಮಾತ್ರ ನಾಲ್ಕೂವರೆ ಗಂಟೆ ಕೆಲಸ ಮಾಡಬೇಕಾಗಿರುತ್ತದೆ. ಸರ್ಕಾರಿ ನೌಕರರು ಶುಕ್ರವಾರ ಕೂಡ ಕೆಲಸ ಮಾಡಲು ಬಯಸಿದ್ದಲ್ಲಿ ವರ್ಕ್ ಫ್ರಮ್ ಹೋಂ ಮೂಲಕ ಕೆಲಸ ಮಾಡಲು ಅನುಮತಿ ನೀಡಲಾಗಿದೆ.

    ಮುಸ್ಲಿಂ ರಾಷ್ಟ್ರಗಳಲ್ಲಿ, ಶುಕ್ರವಾರವನ್ನು ಸಾಮಾನ್ಯವಾಗಿ ವಾರದ ಅತ್ಯಂತ ಪವಿತ್ರ ದಿನವೆಂದು ಪರಿಗಣಿಸಲಾಗುತ್ತದೆ. ಯುಎಇಯಲ್ಲಿ ಶುಕ್ರವಾರದ ಮಧ್ಯಾಹ್ನ 1:15 ಕ್ಕೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಅಲ್ಲದೇ ಕೆಲವು ನೆರೆಯ ದೇಶಗಳಲ್ಲಿ ಕೂಡ ಪ್ರಾರ್ಥನೆ ಮುಗಿಯುವವರೆಗೂ ಅಂಗಡಿಗಳನ್ನು ತೆರೆಯುವ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ ಈ ಹೊಸ ವ್ಯವಸ್ಥೆ ಖಾಸಗಿ ವಲಯದಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳಿಗೆ ಮತ್ತು ಶಾಲೆಗಳಿಗೆ ಅನ್ವಯಿಸಲಾಗುತ್ತದೆಯೇ ಎಂಬುದರ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿಲ್ಲ.

    ಯುಎಇಯಲ್ಲಿ 2006 ರವರೆಗೆ ಗುರುವಾರ-ಶುಕ್ರವಾರ ವಾರಾಂತ್ಯ ಇತ್ತು. ನಂತರ ಖಾಸಗಿ ವಲಯವನ್ನು ಅನುಸರಿಸಿ ಶುಕ್ರವಾರ ಮತ್ತು ಶನಿವಾರಗಳಿಗೆ ಸ್ಥಳಾಂತರಗೊಂಡಿತು.

  • ಉತ್ತರ ಪ್ರದೇಶದ ಸರ್ಕಾರಿ ನೌಕರರು, ವಕೀಲರಿಗೆ 1 ರೂ.ಗೆ ಸಿಗಲಿದೆ ಮನೆ

    ಉತ್ತರ ಪ್ರದೇಶದ ಸರ್ಕಾರಿ ನೌಕರರು, ವಕೀಲರಿಗೆ 1 ರೂ.ಗೆ ಸಿಗಲಿದೆ ಮನೆ

    ಲಕ್ನೋ: ಸರ್ಕಾರಿ ನೌಕರರು ಹಾಗೂ ವಕೀಲರಿಗೆ 1 ರೂ.ನಲ್ಲಿ ಮನೆಯನ್ನು ಒದಗಿಸಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.

    2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಉತ್ತರ ಪ್ರದೇಶ ಸರ್ಕಾರ ರಾಜ್ಯದ ಜನತೆಗೆ ಸಿಹಿ ಸುದ್ದಿಯನ್ನು ನೀಡುತ್ತಿದ್ದು, ಈಗ ಸರ್ಕಾರಿ ನೌಕರರು ಹಾಗೂ ವಕೀಲರ ಸರದಿ ಬಂದಿದೆ.

    ಯೋಗಿ ಆದಿತ್ಯನಾಥ್ ಸರ್ಕಾರದ ಹೊಸ ಯೋಜನೆಯಡಿ, ಗ್ರೂಪ್ ಸಿ ಮತ್ತು ಡಿ ವರ್ಗದ ಸರ್ಕಾರಿ ನೌಕರರು ಮತ್ತು ವಕೀಲರಿಗೆ ಸಹಾಯಧನದ ಮೇಲೆ ಮನೆಗಳನ್ನು ನೀಡಲು ಮುಂದಾಗಿದೆ. ಮನೆ ಖರೀದಿಸುವ ಮಂದಿ ಭೂಮಿ ಶುಲ್ಕವಾಗಿ 1 ರೂಪಾಯಿ ನೀಡಬೇಕಾಗುತ್ತದೆ. ಇದನ್ನೂ ಓದಿ: ನಿರಾಣಿ ಸಿಎಂ ಆಗುವ ಅವಕಾಶವಿದೆ ಅನ್ನೋ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ವಿಜಯೇಂದ್ರ

    ಇನ್ನೂ ಈ ಯೋಜನೆ ಅಧಿಕೃತವಾಗಿ ಜಾರಿಯಾಗಿಲ್ಲ. 1 ರೂ.ಗೆ ಯಾವ ರೀತಿ ಮನೆಗಳನ್ನು ನೀಡಬಹುದು ಎಂಬುದರ ಬಗ್ಗೆ ಹಿರಿಯ ಅಧಿಕಾರಿಗಳು ಕರಡನ್ನು ತಯಾರಿ ಮಾಡಿದ್ದಾರೆ. ಈ ಕರಡಿಗೆ ಉನ್ನತ ಮಟ್ಟದಲ್ಲಿ ಅನುಮೋದನೆ ಸಿಕ್ಕಿದ ಬಳಿಕ ಕ್ಯಾಬಿನೆಟ್‍ನಲ್ಲಿ ಒಪ್ಪಿಗೆ ಪಡೆದು ಯೋಜನೆ ಜಾರಿಯಾಗಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಈ ಯೋಜನೆಯಲ್ಲಿ ಮನೆ ಖರೀದಿಸುವ ಮಂದಿಗೆ ಹಲವು ಷರತ್ತುಗಳನ್ನು ವಿಧಿಸಲಾಗುತ್ತದೆ. ಇದರಲ್ಲಿ ಮುಖ್ಯವಾಗಿ ಖರೀದಿಸಿದ ಮನೆಯನ್ನು 10 ವರ್ಷಗಳವರೆಗೆ ಮಾರಾಟ ಮಾಡಬಾರದು ಎಂಬ ಷರತ್ತನ್ನು ಇರಲಿದೆ ಎನ್ನಲಾಗುತ್ತದೆ.

    ಗ್ರೂಪ್ ಸಿ ಮತ್ತು ಡಿ ವರ್ಗದ ಸರ್ಕಾರಿ ನೌಕರರ ಸಂಬಳ ಕಡಿಮೆಯಿದೆ. ಹಲವರ ಬಳಿ ಮನೆ ಇಲ್ಲದ ಹಿನ್ನೆಲೆಯಲ್ಲಿ ಸರ್ಕಾರ ಚುನಾವಣಾ ಸಮಯದಲ್ಲೇ ಈ ಮಹತ್ವದ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಭಾರತದ ಅಂತರರಾಷ್ಟ್ರೀಯ ವಿಮಾನ ಪುನರಾರಂಭ ಮುಂದೂಡಿಕೆ

    ಈ ಯೋಜನೆ ಕುರಿತು ಅಧಿಕಾರಿ ಮತ್ತು ಸರ್ಕಾರದ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಶೀಘ್ರವೇ ಕ್ಯಾಬಿನೆಟ್‍ನಲ್ಲಿ ಯೋಜನೆಗೆ ಒಪ್ಪಿಗೆ ಸಿಗುವ ಸಾಧ್ಯತೆಯಿದೆ.

     

  • ತಂದೆ-ತಾಯಿ, ಅತ್ತೆ-ಮಾವರೊಂದಿಗೆ ಹೊಸ ವರ್ಷ ಆಚರಿಸಲು ನೌಕರರಿಗೆ 4 ದಿನ ರಜೆ- ಅಸ್ಸಾಂ ನಿರ್ಧಾರ

    ತಂದೆ-ತಾಯಿ, ಅತ್ತೆ-ಮಾವರೊಂದಿಗೆ ಹೊಸ ವರ್ಷ ಆಚರಿಸಲು ನೌಕರರಿಗೆ 4 ದಿನ ರಜೆ- ಅಸ್ಸಾಂ ನಿರ್ಧಾರ

    ದಿಸ್ಪುರ: ಹೊಸ ವರ್ಷದ ಸಂದರ್ಭದಲ್ಲಿ ತಂದೆ-ತಾಯಿ ಹಾಗೂ ಅತ್ತೆ-ಮಾವರನ್ನು ಭೇಟಿಯಾಗಲು ನೌಕರರಿಗೆ ನಾಲ್ಕು ದಿನಗಳ ರಜೆ ನೀಡಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ.

    2022ರ ಜನವರಿ ತಿಂಗಳಲ್ಲಿ 6-9ನೇ ತಾರೀಖಿನವರೆಗೆ ಸರ್ಕಾರಿ ನೌಕರರಿಗೆ ರಜೆ ನೀಡಲಾಗುವುದು. ತಂದೆ-ತಾಯಿ ಅಥವಾ ಅತ್ತೆ-ಮಾವ ಬದುಕಿಲ್ಲದಿದ್ದರೆ ಅಂತಹ ನೌಕರರಿಗೆ ಈ ವಿಶೇಷ ರಜೆ ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ನೇತೃತ್ವದ ಸಂಪುಟ ನಿರ್ಧಾರ ಕೈಗೊಂಡಿದೆ.  ಇದನ್ನೂ ಓದಿ: ವಿಶ್ವ ವಿಖ್ಯಾತ ಜೋಗ ಜಲಪಾತವನ್ನು ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್‌

    ಪಶ್ಚಿಮ ಅಸ್ಸಾಂನ ಬೊಂಗೈಗಾವ್‌ನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯಿತು. ರಾಜ್ಯದಲ್ಲಿ ನಿಯೋಜನೆಗೊಂಡಿರುವ ಸಚಿವರು, ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳು ಸಹ ಈ ರಜೆಗೆ ಅರ್ಹರಾಗಿರುತ್ತಾರೆ. ಆದರೆ ಪೊಲೀಸ್‌ ವರಿಷ್ಠಾಧಿಕಾರಿ ಶ್ರೇಣಿಯವರೆಗಿನ ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಕ್ಷೇತ್ರ ಸೇವಕರು ಈ ರಜೆಯನ್ನು ಪಡೆಯುವಂತಿಲ್ಲ ಎಂದು ಸಂಪುಟ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸ್ವೀಡನ್ ಪ್ರಥಮ ಮಹಿಳಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಒಂದೇ ದಿನಕ್ಕೆ ರಾಜೀನಾಮೆ ನೀಡಿದ ಆ್ಯಂಡರ್ಸನ್‌

    ಸರ್ಕಾರಿ ನೌಕರರು ತಮ್ಮ ಕುಟುಂಬದ ಸದಸ್ಯರೊಂದಿಗೆ ಹೊಸ ವರ್ಷ ಆಚರಿಸಲು ರಜೆ ನೀಡಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

  • ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ

    ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ದೀಪಾವಳಿ ಹಬ್ಬದ ಬಂಪರ್ ಉಡುಗೊರೆ ನೀಡಿದೆ.

    GOVT EMPLOYEES

    ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಶಾಲೆ ಆರಂಭವಾದ ಬಳಿಕ ಕಲ್ಯಾಣ ಕರ್ನಾಟಕದಲ್ಲಿ ಮಕ್ಕಳ ಹಾಜರಾತಿ ಕಡಿಮೆ ಇದೆ: ಬಿ.ಸಿ ನಾಗೇಶ್

    ಸದ್ಯ ಮೂಲವೇತನ ಆಧರಿಸಿ ಶೇ. 21.50ರಷ್ಟು ತುಟ್ಟಿ ಭತ್ಯೆ (ಡಿಎ) ನೀಡಲಾಗುತ್ತಿದೆ. ಹೊಸದಾಗಿ ಡಿಎ ಹೆಚ್ಚಳದಿಂದ ಇನ್ಮುಂದೆ ನೌಕರರು ಮೂಲವೇತನದ ಶೇ. 24.50ರಷ್ಟು ತುಟ್ಟಿ ಭತ್ಯೆ ಪಡೆಯಲಿದ್ದಾರೆ. ನಿವೃತ್ತ ಸರ್ಕರಿ ನೌಕರಿಗೂ ಇದು ಅನ್ವಯವಾಗಲಿದೆ.  ಇದನ್ನೂ ಓದಿ: ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ: ದೀಪಿಕಾ ದಾಸ್

    MONEY

    ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.

  • ಸಾರಿಗೆ ನೌಕರರ ವೇತನ ವಿಳಂಬ – ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೆಚ್‍ಡಿಕೆ

    ಸಾರಿಗೆ ನೌಕರರ ವೇತನ ವಿಳಂಬ – ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೆಚ್‍ಡಿಕೆ

    – ಕೂಡಲೇ ವೇತನ ಬಿಡುಗಡೆ ಮಾಡುವಂತೆ ಆಗ್ರಹ

    ಬೆಂಗಳೂರು: ರಾಜ್ಯ ಸಾರಿಗೆ ನೌಕರಿಗೆ ವೇತನ ವಿಳಂಬ ಮಾಡುತ್ತಿರುವ ಸರ್ಕಾರದ ನಡೆಯನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

    ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಕೂಡಲೇ ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರನ್ನು ಒತ್ತಾಯ ಮಾಡಿದ್ದಾರೆ.

    ಹೆಚ್‍ಡಿಕೆ ಹೇಳಿದ್ದೇನು?
    ಕೊರೊನಾ ಮಹಾಮಾರಿಯಿಂದ ತತ್ತರಿಸಿರುವ KSRTC ಮತ್ತು BMTC ನೌಕರರ ಮೇಲೆ ಸರ್ಕಾರಕ್ಕೆ ಅನಾದರ ಏಕೆ? ಈ ನೌಕರರಿಗೆ ಆಗಸ್ಟ್ ತಿಂಗಳಲ್ಲಿ ಅರ್ಧ ಸಂಬಳವೇ ಆಗಿದ್ದು, ಸೆಪ್ಟೆಂಬರ್ ತಿಂಗಳ ಪೂರ್ಣ ಸಂಬಳ ಆಗಿಲ್ಲ ಎನ್ನುವ ಮಾಹಿತಿ ನನಗೆ ಬಂದಿದೆ. ಇದನ್ನೂ ಓದಿ:  ಪಕ್ಷಿಗಳಿಗೆ ಪುನರ್ಜನ್ಮ ನೀಡುತ್ತಿರುವ ರಾಯಚೂರಿನ ಪಕ್ಷಿಪ್ರೇಮಿ ಸಲ್ಲಾವುದ್ದೀನ್

    ಮಕ್ಕಳು ತಪ್ಪು ಮಾಡುವುದು ಸಹಜ. ತಂದೆ ತಾಯಿ ಸ್ಥಾನದಲ್ಲಿರುವ ಸರ್ಕಾರ ಕ್ಷಮಿಸಿ ಔದಾರ್ಯ ತೋರಿಸುವ ದೊಡ್ಡ ಮನಸ್ಸು ಮಾಡಬೇಕು. ಸಾರಿಗೆ ನೌಕರರ ಮೇಲೆ ಹಗೆತನ ಸಾಧಿಸುವುದು ಬೇಡ. ಜೀವದ ಹಂಗು ತೊರೆದು, ಮಹಾಮಾರಿಯನ್ನು ಲೆಕ್ಕಿಸದೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ಸಾರಿಗೆ ನೌಕರರ ವೇತನ ವಿಳಂಬ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ತಕ್ಷಣವೇ ವೇತನ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು ಸಕಾಲಕ್ಕೆ ವೇತನ ಪಾವತಿಸಲು ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಕೂಡಲೇ ಕ್ರಮ ವಹಿಸಬೇಕು ಎಂದು ನಾನು ಒತ್ತಾಯ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ಶಾರೂಖ್, ಗೌರಿ ಖಾನ್ ಬೆಂಬಲಕ್ಕೆ ನಿಂತ ಸುಸ್ಸಾನೆ ಖಾನ್, ಮಿಕಾ ಸಿಂಗ್!

  • ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಯಡಿಯೂರಪ್ಪ ಬಂಪರ್ ಗಿಫ್ಟ್

    ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಯಡಿಯೂರಪ್ಪ ಬಂಪರ್ ಗಿಫ್ಟ್

    ಬೆಂಗಳೂರು: ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಹಿ ಸುದ್ದಿ ಕೊಟ್ಟಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ.

    ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿರುವ ಸಿಎಂ ಯಡಿಯೂರಪ್ಪ, ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.11.25 ರಿಂದ ಶೇ.21.50ಕ್ಕೆ ಹೆಚ್ಚಿಸಲು ಅನುಮತಿ ನೀಡಿದ್ದರು. ಅಂದರೆ ಶೇ.10ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಜುಲೈ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ.

    ತಾವು ರಾಜೀನಾಮೆ ಕೊಡುವ ಮುನ್ನವೇ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಲು ಸಿಎಂ ಯಡಿಯೂರಪ್ಪ ಹೇಳಿದ್ದರು. ಹೀಗಾಗಿ ಇಂದು ಆದೇಶಿಸಲಾಗಿದೆ. ವಾರದ ಹಿಂದೆ ತುಟ್ಟಿಭತ್ಯೆ ಪರಿಷ್ಕರಣೆಗೆ ಸಿಎಂ ಯಡಿಯೂರಪ್ಪ ಸಹಿ ಹಾಕಿದ್ದರು. ತಮ್ಮ ಭಾಷಣದಲ್ಲೂ ಸರ್ಕಾರಿ ನೌಕರರ ಬಗ್ಗೆ ಮಾತನಾಡಿ, ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ತುಟ್ಟಿ ಭತ್ಯೆ ಹೆಚ್ಚಳ ಆದೇಶ ಹೊರಬಿದ್ದಿದೆ.

  • ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ

    ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ

    ಬೆಂಗಳೂರು: 2021 ಹೊಸ ವರ್ಷದ ಮೊದಲ ವಾರದಲ್ಲೇ ಸರ್ಕಾರಿ ನೌಕರರ ಗಳಿಕೆ ರಜೆಯ ನಗದೀಕರಣ ಸೌಲಭ್ಯವನ್ನು ರದ್ದು ಪಡಿಸುವ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟಿದೆ.

    2021ನೇ ಜನವರಿ 1 ರಿಂದ ಡಿಸೆಂಬರ್ 31 ರವರೆಗಿನ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಗಳಿಕೆ ರಜೆಯ ನಗದೀಕರಣ ಸೌಲಭ್ಯವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಇದರಲ್ಲಿ ನಿವೃತ್ತಿ ಹೊಂದುವ ನೌಕರರಿಗೆ ಸ್ವಲ್ಪ ವಿನಾಯಿತಿ ಕೊಡಲಾಗಿದೆ.

    2021ರ ಜನವರಿಯಿಂದ ಡಿಸೆಂಬರ್‍ವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದುವ ಅರ್ಹ ಸರ್ಕಾರಿ ನೌಕರರು ಅಥವಾ ಅಧಿಕಾರಿಗಳಿಗೆ ಈ ಆದೇಶದಿಂದ ವಿನಾಯಿತಿ ಕೊಡಲಾಗಿದೆ ಎಂದು ಹಣಕಾಸು ಇಲಾಖೆ ತಿಳಿಸಿದೆ.

    ಹಣಕಾಸು ಇಲಾಖೆಯು ತನ್ನ ಹೊಸ ಆದೇಶದ ಪ್ರಕಾರ 2021ರ ಜನವರಿಯಿಂದ ಡಿಸೆಂಬರ್‍ವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದುವ ಅಧಿಕಾರಿಗಳು ಮತ್ತು ನೌಕರರು ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪಡೆಯಬಹುದೆಂದು ಸ್ಪಷ್ಟ ಪಡಿಸಿದೆ. ಈ ಆದೇಶವು ಸರ್ಕಾರದಿಂದ ಅನುದಾನ ಪಡೆಯುವ ಅಥವಾ ಪಡೆಯದಿರುವ ಸರ್ಕಾರದ ಎಲ್ಲಾ ಉದ್ಯಮ ಸಂಸ್ಥೆಗಳ ನೌಕರರಿಗೂ ಅನ್ವಯಿಸಲಿದೆ ಎಂದು ತಿಳಿಸಿದೆ.

  • ತಮಿಳುನಾಡು ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – ವಾರದಲ್ಲಿ 5 ದಿನ ಮಾತ್ರ ಕೆಲಸ

    ತಮಿಳುನಾಡು ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – ವಾರದಲ್ಲಿ 5 ದಿನ ಮಾತ್ರ ಕೆಲಸ

    ಚೆನ್ನೈ: 2021ರ ಜನವರಿ 1ರಿಂದ ತಮಿಳುನಾಡಿನ ಸರ್ಕಾರಿ ಕಚೇರಿಗಳು ವಾರದ 5 ದಿನ ಮಾತ್ರ ಕಾರ್ಯನಿರ್ವಹಿಸಲಿದೆ.

    ಸದ್ಯ ಇರುವ 6 ದಿನದ ಬದಲಾಗಿ 5 ದಿನ ಶೇ.100 ರಷ್ಟು ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸುವ ಆದೇಶಕ್ಕೆ ಮುಖ್ಯ ಕಾರ್ಯದರ್ಶಿ ಕೆ.ಷಣ್ಮುಗಂ ಸಹಿ ಹಾಕಿದ್ದಾರೆ.

     

    ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಮೇ ತಿಂಗಳಿನಲ್ಲಿ ವಾರದ 6 ದಿನ ಸರ್ಕಾರಿ ಕಚೇರಿಗಳು ತೆರೆಯಬೇಕು. ಅರ್ಧ ಉದ್ಯೋಗಿಗೊಂಡು ಒಂದು ದಿನ ಹಾಜರಾದರೆ ಉಳಿದ ಅರ್ಧ ಸಂಖ್ಯೆಯ ಉದ್ಯೋಗಿಗಳು ಮರು ದಿನ ಹಾಜರಾಗಬೇಕೆಂದು ಸರ್ಕಾರ ಆದೇಶ ಹೊರಡಿಸಿತ್ತು.

    ಸೆಪ್ಟೆಂಬರ್‌ನಲ್ಲಿ ಎಲ್ಲ ಸಿಬ್ಬಂದಿ ಕಚೇರಿಗೆ ಹಾಜರಾಗಬೇಕೆಂದು ಸರ್ಕಾರ ಸೂಚಿಸಿತ್ತು. ತಮಿಳುನಾಡಿನಲ್ಲಿ ಒಟ್ಟು 7,06,136 ಮಂದಿಗೆ ಸೋಂಕು ಬಂದಿದ್ದು, ಒಟ್ಟು 10,893 ಮಂದಿ ಬಲಿಯಾಗಿದ್ದರೆ. 6,63,456 ಮಂದಿ ಗುಣಮುಖರಾಗಿದ್ದು, 31,787 ಸಕ್ರಿಯ ಪ್ರಕರಣಗಳಿವೆ.