Tag: ಸರ್ಕಾರಿ ಪ್ರೌಢ ಶಾಲೆ

  • ಜ್ಞಾನ ದೀವಿಗೆ – ಹೊಸಪೇಟೆ ತಾಲೂಕಿನ 113 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

    ಜ್ಞಾನ ದೀವಿಗೆ – ಹೊಸಪೇಟೆ ತಾಲೂಕಿನ 113 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

    ಬಳ್ಳಾರಿ: ಪಬ್ಲಿಕ್ ಟಿವಿ ಜ್ಞಾನದೀವಿಗೆ ಕಾರ್ಯ ಮುಂದುವರೆದಿದ್ದು, ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾಕಬಾಳು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಒಟ್ಟು 113 ಮಕ್ಕಳಿಗೆ ಇಂದು ಉಚಿತವಾಗಿ ಟ್ಯಾಬ್ ವಿತರಣೆ ಮಾಡಲಾಯಿತು.

    ಅದೇ ರೀತಿಯ ಹೊಸಪೇಟೆ ತಾಲೂಕಿನ ಬೈಲುವದ್ದಗೇರಿ ಸರ್ಕಾರಿ ಪ್ರೌಢ ಶಾಲೆಯ 35 ಜನ ಹತ್ತನೇ ತರಗತಿ ಮಕ್ಕಳಿಗೆ ಒಟ್ಟು 17 ಟ್ಯಾಬ್ ಗಳನ್ನು ವಿತರಣೆ ಮಾಡಲಾಯಿತು.

    ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಸಹಕಾರದಿಂದ ಈ ಟ್ಯಾಬ್ ಗಳನ್ನು ವಿತರಣೆ ಮಾಡಲಾಗಿದ್ದು, ಸಚಿವರ ಸಂಬಂಧಿ ಸಂದೀಪ್ ಸಿಂಗ್ ಅವರು, ಇಂದು ಮಕ್ಕಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಿದರು.

    ಕಾಕಬಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ಯಾಬ್ ವಿತರಣೆ ಮಾಡಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ಸಮಯದಲ್ಲಿ ಬಡವರಿಗೆ ಸಹಾಯ ಮಾಡಲು ಅವಕಾಶ ಸಿಕ್ಕಿದ್ದು ಒಳ್ಳೆಯದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದು, ಅವರ ಉಜ್ವಲ ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಅಲ್ಲದೇ ಕೊರೊನಾ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಅವಕಾಶ ಸಿಕ್ಕಿರುವುದು ನಮ್ಮ ಪುಣ್ಯ ಎಂದಿದ್ದಾರೆ. ಇದನ್ನೂ ಓದಿ: ಮಂಗಳೂರು ವಕೀಲರ ಸಂಘದಿಂದ 500ಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸಿನ್

  • 4 ಶಾಲೆಯ ವಿದ್ಯಾರ್ಥಿಗಳಿಗೆ 205 ಟ್ಯಾಬ್ ವಿತರಿಸಿದ ಪುಟ್ಟಸ್ವಾಮಿಗೌಡ

    4 ಶಾಲೆಯ ವಿದ್ಯಾರ್ಥಿಗಳಿಗೆ 205 ಟ್ಯಾಬ್ ವಿತರಿಸಿದ ಪುಟ್ಟಸ್ವಾಮಿಗೌಡ

    ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ 4 ಸರ್ಕಾರಿ ಪ್ರೌಢ ಶಾಲೆಗಳ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಇಂದು ಕೆಹೆಚ್‍ಪಿ ಫೌಂಡೇಶನ್ ಅಧ್ಯಕ್ಷ ಹೆಚ್.ಕೆ ಪುಟ್ಟಸ್ವಾಮಿಗೌಡ ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಸಹಯೋಗದ ಜ್ಞಾನದೀವಿಗೆ ಅಭಿಯಾನದ ಮೂಲಕ ಫ್ರೀ ಟ್ಯಾಬ್ ವಿತರಿಸಿದರು.

    ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ 43 ಮಂದಿ ವಿದ್ಯಾರ್ಥಿಗಳಿಗೆ 22 ಟ್ಯಾಬ್ ಹಾಗೂ ಅಲಕಾಪುರ ಸರ್ಕಾರಿ ಪ್ರೌಢ ಶಾಲೆಯ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮ ಸೇರಿ 125 ಮಂದಿ ವಿದ್ಯಾರ್ಥಿಗಳಿಗೆ 62 ಟ್ಯಾಬ್ ಹಾಗೂ ಗೌರಿಬಿದನೂರು ನಗರದ ಕೋಟೆ ಬಾಲಕಿಯರ ಪ್ರೌಢ ಶಾಲೆಯ 215 ಮಂದಿ ಬಾಲಕಿಯರಿಗೆ 107 ಟ್ಯಾಬ್‍ಗಳು ಸೇರಿದಂತೆ ಹೆಚ್ ನಾಗಸಂದ್ರ ಸರ್ಕಾರಿ ಪ್ರೌಢ ಶಾಲೆಯ 27 ವಿದ್ಯಾರ್ಥಿಗಳಿಗೆ 14 ಟ್ಯಾಬ್‍ಗಳನ್ನು ನೀಡಿದರು.

    ಬೆಳಿಗ್ಗೆ 10 ಗಂಟೆಗೆ ಕಲ್ಲಿನಾಯಕನಹಳ್ಳಿ ಹಾಗೂ 12 ಗಂಟೆಗೆ ಅಲಕಾಪುರ, 2 ಗಂಟೆಗೆ ಗೌರಿಬಿದನೂರು ನಗರದ ಕೋಟೆ ಬಾಲಕಿಯರ ಶಾಲೆ ಸೇರಿದಂತೆ ಸಂಜೆ 4 ಗಂಟೆಗೆ ಹೆಚ್ ನಾಗಸಂದ್ರ ಶಾಲೆಯಲ್ಲಿ ಈ ಟ್ಯಾಬ್‍ಗಳನ್ನ ವಿತರಿಸಲಾಯಿತು.

    ಪಬ್ಲಿಕ್ ಟಿವಿ ರೋಟರಿ ಕ್ಲಬ್ ಹಾಗೂ ಟ್ಯಾಬ್ ಕೊಡುಗೆ ನೀಡಿದ ಹೆಚ್‍ಕೆಪಿ ಫೌಂಡೇಶನ್ ಅಧ್ಯಕ್ಷ ಪುಟ್ಟಸ್ವಾಮಿಗೌಡರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಕೊರೊನಾ ಸಂಕಷ್ಟ ಕಾಲದಲ್ಲಿ ರೋಟರಿ ಸಂಸ್ಥೆ ಸಹಯೋಗದೊಂದಿಗೆ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್‍ಆರ್ ರಂಗನಾಥ್‍ರವರು ರೂಪಿಸಿದ ಈ ಮಹಾಯಜ್ಞ ಪಬ್ಲಿಕ್ ಟಿವಿಯ ಜ್ಞಾನದೀವಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಿಕ್ಷಣ ಇಲಾಖಾಧಿಕಾರಿಗಳು, ಶಾಲೆಯ ಶಿಕ್ಷಕರು ಹಾಗೂ ಜನಪ್ರತಿನಿಧಿಗಳು ಅಭಿನಂದನೆ ತಿಳಿಸಿದರು.

    ಟ್ಯಾಬ್‍ಗಳನ್ನು ಪಡೆದ ವಿದ್ಯಾರ್ಥಿಗಳು ಈ ಬಾರಿ ಉತ್ತಮ ಫಲಿತಾಂಶ ಪಡೆದರೆ ಅದೇ ನೀವು ನಮಗೆ ನೀಡುವ ಫ್ರತಿಫಲ ಎಂದು ಹೆಚ್‍ಕೆ ಪುಟ್ಟಸ್ವಾಮಿಗೌಡ ತಮ್ಮ ಆಶಯವನ್ನು ವ್ಯಕ್ತಪಡಿಸಿದರು. ಅಂದಹಾಗೆ ಪುಟ್ಟಸ್ವಾಮಿಗೌಡರು 300 ಟ್ಯಾಬ್‍ಗಳಿಗೆ 10 ಲಕ್ಷದ 46 ಸಾವಿರ ರೂ. ದೇಣಿಗೆ ನೀಡಿದ್ದರು.