Tag: ಸರ್ಕಾರ ಯಡಿಯೂರಪ್ಪ

  • ST ಮೀಸಲಾತಿ ವಿಳಂಬ ಆದ್ರೆ ಉಗ್ರ ಹೋರಾಟ: ಪ್ರಸನ್ನಾನಂದಪುರಿ ಸ್ವಾಮೀಜಿ

    ST ಮೀಸಲಾತಿ ವಿಳಂಬ ಆದ್ರೆ ಉಗ್ರ ಹೋರಾಟ: ಪ್ರಸನ್ನಾನಂದಪುರಿ ಸ್ವಾಮೀಜಿ

    -ಯಡಿಯೂರಪ್ಪ ಮಾತಿಗೆ ತಪ್ಪಿ ಮನೆಯಲ್ಲಿ ಕುಳಿತುಕೊಂಡಿದ್ದಾರೆ

    ಬೆಳಗಾವಿ: ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಮುದಾಯ ಬೆಳೆಯಬೇಕಾದರೆ SC/ST ಸಮುದಾಯದಕ್ಕೆ ಮೀಸಲಾತಿ ನೀಡಬೇಕು. ಆದರೆ ಸರ್ಕಾರ ಈ ಬಗ್ಗೆ ಗಮನಹರಿಸುತ್ತಿಲ್ಲ ಇನ್ನೂ ಕೂಡ ವಿಳಂಬ ಆದ್ರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


    ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆದ ವಾಲ್ಮೀಕಿ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಸಮುದಾಯಗಳ ಆಶೋತ್ತರಗಳನ್ನು ಮರೆಯುತ್ತಿದೆ. ಮೀಸಲಾತಿ ಸಾಂವಿಧಾನಿಕ ಹಕ್ಕು ಕೊಡದೇ ಇದ್ದರೆ ಹೋರಾಟ ಮಾಡಬೇಕಾಗುತ್ತದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಭರವಸೆ ನೀಡಿದ್ದರು. ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿ ಬಂದ ಮೇಲೆ ಕೂಡಲೇ ಮೀಸಲಾತಿ ನೀಡಲಾಗುವುದು ಎಂದಿದ್ದರು ಎಂದರು. ಇದನ್ನೂ ಓದಿ: ಮೀಸಲಾತಿ ಕೊಟ್ಟರೆ ಮಠದಲ್ಲಿ ಬೊಮ್ಮಾಯಿ ಭಾವಚಿತ್ರ ಹಾಕಿ ಖಾಯಂ ಗೌರವ: ಬಸವ ಜಯ ಮೃತ್ಯುಂಜಯ ಶ್ರೀ

    Karnataka administered 29.5 Lakh covid vaccine doses in a single day CM Bommai Thanks Modi

    ಯಡಿಯೂರಪ್ಪ ಆಶ್ವಾಸನೆ ಕೊಟ್ಟು, ಮಾತು ಕೊಟ್ಟಿದ್ದರು ಇದೀಗ ಮಾತಿಗೆ ತಪ್ಪಿ ಮನೆಯಲ್ಲಿ ಕುಳಿತುಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ ನಮ್ಮ ಸಮುದಾಯದಕ್ಕೆ ಅನ್ಯಾಯ ಆಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಎಲ್ಲಾ ಶಾಸಕರು ಹೇಳಬೇಕು. ಎಸ್‍ಸಿ, ಎಸ್‍ಟಿ, ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಬೇಕು: ಸಿಜೆಐ ರಮಣ