Tag: ಸರ್ಜಾ ಕುಟುಂಬ

  • ನನ್ನ ಮೊಮ್ಮಗ ಸೂಪರ್ ಸ್ಟಾರ್ ಆಗ್ತಾನೆ ಎಂದು ಭವಿಷ್ಯ ನುಡಿದ ಸುಂದರ್ ರಾಜ್

    ನನ್ನ ಮೊಮ್ಮಗ ಸೂಪರ್ ಸ್ಟಾರ್ ಆಗ್ತಾನೆ ಎಂದು ಭವಿಷ್ಯ ನುಡಿದ ಸುಂದರ್ ರಾಜ್

    ಸ್ಯಾಂಡಲ್‌ವುಡ್‌ನ(Sandalwood) ಹಿರಿಯ ನಟ ಸುಂದರ್ ರಾಜ್(Sundar Raj) ಅವರದ್ದು ಕಲಾವಿದರ ಕುಟುಂಬ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇತ್ತೀಚೆಗೆ ಚಿತ್ರದ ಈವೆಂಟ್‌ವೊಂದಕ್ಕೆ ಸಾಥ್ ನೀಡಿದ್ದ ಸುಂದರ್ ರಾಜ್ ಮೊಮ್ಮಗ ರಾಯನ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. ನನ್ನ ಮೊಮ್ಮಗ ಸೂಪರ್ ಸ್ಟಾರ್ ಆಗ್ತಾನೆ ಎಂದು ಭವಿಷ್ಯ ನುಡಿದಿದ್ದಾರೆ.

    ನಟಿ ಮೇಘನಾ ರಾಜ್ ಬಹುಭಾಷಾ ನಟಿ, ತಾವು ಬೆಳೆದು, ಇದೀಗ ಸೊಸೆಯಾಗಿ ಸೇರಿರುವ ಕುಟುಂಬ ಕೂಡ ಕಲಾವಿದರ ಕುಟುಂಬವಾಗಿದ್ದು, ನಟನೆ ಎಂಬುದು ರಕ್ತಗತವಾಗಿ ಬಂದಿದೆ. ಹಾಗಾಗಿ ಸಮಾರಂಭವೊಂದರಲ್ಲಿ ಹಿರಿಯ ನಟ ಸುಂದರ್ ರಾಜ್ ನನ್ನ ಮೊಮ್ಮಗ ಸೂಪರ್ ಸ್ಟಾರ್ ಆಗ್ತಾನೆ ಎಂದು ಭವಿಷ್ಯ ನುಡಿದಿದ್ದಾರೆ.

    ಸುನಾಮಿ ಕಿಟ್ಟಿ ನಟನೆಯ ಹೊಸ ಚಿತ್ರದ ಟ್ರೈಲರ್ ಲಾಂಚ್ ಸಮಾರಂಭಕ್ಕೆ ಬಂದ ಸಂದರ್ಭದಲ್ಲಿ ಸುಂದರ್ ರಾಜ್, ಚಿತ್ರತಂಡಕ್ಕೆ ಶುಭ ಹಾರೈಸಿ ಮಾತನಾಡಿದ್ದಾರೆ. ನಮ್ಮ ಕುಟುಂಬದಲ್ಲಿ ಎಲ್ಲರೂ ಕಲಾವಿದರೇ ಇದ್ದೀವಿ. ನಾಯಕಿ ಮೇಘನಾ ಇದ್ದಾರೆ, ತಾಯಿ ಪಾತ್ರ ಮಾಡಿರುವ ಪ್ರಮಿಳಾ, ಶಕ್ತಿ ಪ್ರಸಾದ್, ಅರ್ಜುನ್ ಸರ್ಜಾ, ಚಿರು, ಧ್ರುವಾ ಸರ್ಜಾ ಹೀಗೆ ಎಲ್ಲರೂ ಕಲಾವಿದರೇ ಇದ್ದೀವಿ. ಈಗ ನನ್ನ ಮೊಮ್ಮಗ ಬಂದಿದ್ದಾನೆ. ಮುಂದೆ ಅವನು ಕೂಡ ಸೂಪರ್ ಸ್ಟಾರ್ ಆಗ್ತಾನೆ ಎಂದು ಭವಿಷ್ಯ ನುಡಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾನನಷ್ಟ ಮೊಕದ್ದಮೆ ಹೂಡಲು ಸರ್ಜಾ ಕುಟುಂಬಸ್ಥರು ಸಿದ್ಧತೆ?

    ಮಾನನಷ್ಟ ಮೊಕದ್ದಮೆ ಹೂಡಲು ಸರ್ಜಾ ಕುಟುಂಬಸ್ಥರು ಸಿದ್ಧತೆ?

    ಬೆಂಗಳೂರು: ನಟ ಚಿರಂಜೀವಿ ಸರ್ಜಾ ಸಾವಿನ ಬಗ್ಗೆ ವಿವಾದ ಹಿನ್ನೆಲೆಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ಸರ್ಜಾ ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಚಿರು ಸರ್ಜಾ ಸಾವಿನ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅನುಮಾನ ವ್ಯಕ್ತಪಡಿಸಿದ್ದರು. ಹೀಗಾಗಿ ಸರ್ಜಾ ಕುಟುಂಬ ಇಂದ್ರಜಿತ್ ಲಂಕೇಶ್ ಮೇಲೆ ಕಾನೂನು ಸಮರಕ್ಕೆ ನಿಂತಿದ್ದು, ಮಾನನಷ್ಟ ಮೊಕದ್ದಮೆ ಹೂಡಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸರ್ಜಾ ಕುರಿತ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ: ಇಂದ್ರಜಿತ್ ಲಂಕೇಶ್

    ಸರ್ಜಾ ಕುಟುಂಬದಸ್ಥರು ಈ ಸಂಬಂಧ ಖ್ಯಾತ ವಕೀಲರೊಬ್ಬರನ್ನು ಸಂಪರ್ಕ ಮಾಡಿ ಮಾತುಕತೆ ಕೂಡ ನಡೆಸಿದ್ದಾರೆ ಎಂದು ಹೇಳಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಚಿರಂಜೀವಿ ಸರ್ಜಾ ಸಾವಿನ ವಿಚಾರ ಎಳೆದು ತಂದಿದ್ದಕ್ಕೆ ಸರ್ಜಾ ಕುಟುಂಬದವರು ಇಂದ್ರಜಿತ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೇ ಸೋಮವಾರ ಸ್ಯಾಂಡಲ್‍ವುಡ್‍ನಲ್ಲಿ ಯಾರಿಗೆಲ್ಲಾ ಡ್ರಗ್ಸ್ ನಂಟಿದೆ, ಯಾರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಅನ್ನೋದರ ಬಗ್ಗೆ ಇಂದ್ರಜಿತ್ ಸಿಸಿಬಿ ಪೊಲೀಸರ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ತುಂಬಾ ಬೇಸರವಾಯ್ತು: ದರ್ಶನ್

    ಇದೇ ವೇಳೆ ಮಾತನಾಡಿದ್ದ ಇಂದ್ರಜಿತ್, ಯುವ ನಟ ಚಿರಂಜೀವಿ ಸರ್ಜಾ ಅವರ ಮರಣೋತ್ತರ ಪರೀಕ್ಷೆ ಕುರಿತು ನಾನು ಹೇಳಿದ್ದ ಹೇಳಿಕೆಯನ್ನು ವಾಪಸ್ ಪಡೆಯುತ್ತಿದ್ದೇನೆ ಹೇಳಿದ್ದರು.

    ಚಿರಂಜೀವಿ ಸರ್ಜಾ ಯುವ ನಟರಾಗಿದ್ದು, ಆದ್ದರಿಂದಲೇ ನಾನು ಹೇಳಿದ್ದೆ. ಅವರು ಈಗ ಇದ್ದಿದ್ದರೆ ಮೇಘನಾ ಅವರು ಖುಷಿಯಿಂದ ಇರುತ್ತಿದ್ದರು. ಸತ್ತವರ ಬಗ್ಗೆ ಮಾತನಾಡಬಾರದು. ಸರ್ಜಾ ಅವರ ಬಗ್ಗೆ ನನಗೆ ಹೆಚ್ಚು ನೋವಿದೆ. ಆದರೆ ಈ ಮೂಲಕ ಹೇಳುತ್ತಿರುವುದೇನೆಂದರೇ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ಡ್ರಗ್ ಮಾಫಿಯಾ ಎಂಬುವುದು ಬಹುದೊಡ್ಡದಾಗಿದೆ. ಅದನ್ನು ಸಂಪೂರ್ಣವಾಗಿ ನಿಲ್ಲಿಸಲು ಆಗದಿದ್ದರೂ ಯುವ ಜನತೆಗೆ ಒಂದು ಸಂದೇಶ ರವಾನೆ ಆಗಲಿ ಎಂಬುವುದಷ್ಟೇ ನನ್ನ ಉದ್ದೇಶ ಎಂದು ಸ್ಪಷ್ಟಪಡಿಸಿದ್ದರು.