Tag: ಸರ್ಜಿಕಲ್ ಚೇರ್

  • ದರ್ಶನ್‌ ಗ್ಯಾಂಗ್‌ನ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

    ದರ್ಶನ್‌ ಗ್ಯಾಂಗ್‌ನ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ್‌ನ (Darshan Gang) ಮತ್ತಿಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (Bail application) 57ನೇ ಸಿಸಿಹೆಚ್ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

    ದರ್ಶನ್ ಗ್ಯಾಂಗ್‌ನ ಎ16 ಆರೋಪಿ ಕೇಶವಮೂರ್ತಿ ಮತ್ತು ಎ10 ಆರೋಪಿ ವಿನಯ್ ಜಾಮೀನು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ 57ನೇ ಸಿಸಿಹೆಚ್ ನ್ಯಾಯಾಲಯ (CCH Court) ತಿರಸ್ಕರಿಸಿ ಆದೇಶಿಸಿದೆ. ಎರಡು ದಿನಗಳ ಹಿಂದೆಯಷ್ಟೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಮತ್ತು ಎ7 ಆರೋಪಿ ಅನುಕುಮಾರ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿತ್ತು. ಇದನ್ನೂ ಓದಿ: Kolkata Horror | ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅರೆಸ್ಟ್‌

    ಎ10 ಆರೋಪಿ ಆಗಿರುವ ವಿನಯ್‌ ಪಾತ್ರದ ಸಂಬಂಧ ಸಾಕ್ಷಿ ಇದೆ. ಸಿಆರ್‌ಪಿಸಿ 164 ಅಡಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಜಾಮೀನು ನೀಡಿದಲ್ಲಿ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಪ್ರಕರಣ ಇನ್ನೂ ತನಿಖೆ ಹಂತದಲ್ಲಿ ಇರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್‌ ತಿರಸ್ಕರಿದೆ. ಇದನ್ನೂ ಓದಿ: Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌!

    ʻದಾಸʼನಿಗೆ ಸರ್ಜಿಕಲ್‌ ಚೇರ್‌ ಭಾಗ್ಯ:
    ಬಳ್ಳಾರಿ ಜೈಲಲ್ಲಿರುವ ವಿಚಾರಣಾಧೀನ ಕೈದಿ, ನಟ ದರ್ಶನ್‌ಗೆ ಸರ್ಜಿಕಲ್ ಚೇರ್ ಬಳಸಲು ಕಾರಗೃಹ ಡಿಐಜಿ ಅನುಮತಿ ನೀಡಿದ್ದಾರೆ. ದರ್ಶನ್ ಆರೋಗ್ಯ ಕುರಿತಾಗಿ ವೈದ್ಯರು ನೀಡಿದ ವರದಿಗಳನ್ನು ಕೂಲಂಕಶವಾಗಿ ಪರಿಶೀಲಿಸಿದ ಡಿಐಜಿ, ಸರ್ಜಿಕಲ್ ಚೇರ್ ಬಳಕೆಗೆ ಸಮ್ಮತಿ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದರ್ಶನ್‌ಗೆ ಸರ್ಜಿಕಲ್ ಚೇರ್ ತಲುಪಿಸಿದೆ. ಇನ್ನು, ಹೈ-ಸೆಕ್ಯೂರಿಟಿ ಸೆಲ್‌ನಲ್ಲಿ ಇರುವ ಕಾರಣ ದರ್ಶನ್‌ಗೆ ಇತರೆ ಕೈದಿಗಳನ್ನು ಸಂಪರ್ಕ ಸಾಧ್ಯವಾಗ್ತಿಲ್ಲ. ಬೆಳಗ್ಗೆ ಮತ್ತು ಸಂಜೆ ಮಾತ್ರ ವಾಕಿಂಗ್‌ಗೆಂದು ಸೆಲ್‌ನಿಂದ ಹೊರಗೆ ಕರೆದೊಯ್ಯಲಾಗ್ತಿದೆ. ದರ್ಶನ್ ಮೇಲೆ ನಿಗಾ ಇಡಲು, ಅವರನ್ನು ಇರಿಸಲಾಗಿರುವ ಸೆಲ್‌ಗೆ 3 ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋ ಶೂಟ್‌ಗೆ ದೀಪಿಕಾ-ರಣವೀರ್‌ ಪೋಸ್‌; ಬಾಲಿವುಡ್‌ನ ಕ್ಯೂಟ್‌ ಕಪಲ್‌ ಫುಲ್‌ ಶೈನ್‌

  • ಜೈಲಿನಲ್ಲಿ ಕೊನೆಗೂ ದರ್ಶನ್ ಗೆ ಸಿಕ್ತು ಸರ್ಜಿಕಲ್ ಚೇರ್ ಭಾಗ್ಯ

    ಜೈಲಿನಲ್ಲಿ ಕೊನೆಗೂ ದರ್ಶನ್ ಗೆ ಸಿಕ್ತು ಸರ್ಜಿಕಲ್ ಚೇರ್ ಭಾಗ್ಯ

    ನಾರೋಗ್ಯದ ಕಾರಣದಿಂದಾಗಿ ತನಗೆ ಜೈಲಿನಲ್ಲಿ ಸರ್ಜಿಕಲ್ ಚೇರ್ (Surgical Chair) ಬೇಕು ಎಂದು ಜೈಲು ಡಿಐಜಿಗೆ ದರ್ಶನ್ (Darshan) ಮನವಿ ಮಾಡಿಕೊಂಡಿದ್ದರು. ಮನವಿಯನ್ನು ಪುರಸ್ಕರಿಸಿರೋ ಡಿಐಜಿ ಸರ್ಜಿಕಲ್ ಚೇರ್ ಕೂಲಂಕುಷವಾಗಿ ಆರೋಗ್ಯ ತಪಾಸಣೆ ಹಾಗೂ ರಿಪೋರ್ಟ್ ಪರಿಶೀಲನೆ ಬಳಿಕ ಚೇರ್ ಕೊಡಲು ಅಸ್ತು ಎಂದಿದ್ದಾರೆ. ದರ್ಶನ್ ಆರೋಗ್ಯದ ಬಗ್ಗೆ ವೈದ್ಯರು ಕೊಟ್ಟ ವರದಿ ಬಳಿಕ ಕಾರಾಗೃಹ ಇಲಾಖೆ ಡಿಐಜಿ ಸರ್ಜಿಕಲ್ ಚೇರ್ ಅನ್ನು ನೀಡಿದ್ದಾರೆ.

    ಅರ್ಥೋಪಿಡಿಕ್ ವೈದ್ಯರಿಂದ ತಪಾಸಣೆ ಹಾಗೂ ಪರಪ್ಪನ ಅಗ್ರಹಾರದಿಂದ ವರದಿ ತರಸಿಕೊಂಡು ಪರಿಶೀಲನೆ ಮಾಡಿರೋ ಡಿಐಜಿ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದರ್ಶನ್ ಗೆ ಸರ್ಜಿಕಲ್ ಚೇರ್ ತರಿಸಿ ಕೊಡಲಾಗಿದೆ. ಜಿಲ್ಲಾ ಆಸ್ಪತ್ರೆಯಿಂದ ಈಗಾಗಲೇ ಜೈಲಿಗೆ ಆ ಚೇರ್ ಬಂದಿದೆ.

    ದರ್ಶನ್ ಮನವಿ ಮೇರೆಗೆ ಮೆಡಿಕಲ್ ರಿಪೋರ್ಟ್ ಪರಿಸೀಲಿಸುವ ಜೊತೆಗೆ ಆರೋಗ್ಯ ತಪಾಸಣೆಯನ್ನೂ ವೈದ್ಯಾಧಿಕಾರಿಗಳು ಮಾಡಿದ್ದರು. ದರ್ಶನ್ ಗೆ ಸಮಸ್ಯೆ ಇರೋದನ್ನ ಕನ್ಫರ್ಮ್ ಮಾಡಿಕೊಂಡು ಸರ್ಜಿಕಲ್ ಚೇರ್ ಗೆ ಅವಕಾಶ ಮಾಡಿಕೊಟ್ಟಿದ್ದಾರೆ ಜೈಲಾಧಿಕಾರಿಗಳು.

    ಬಳ್ಳಾರಿ ಜೈಲಿನಲ್ಲಿ (Bellary Jail)  ನಾಲ್ಕನೇ ದಿನದ ರಾತ್ರಿ ಕಳೆದಿರೋ ಕೊಲೆ ಆರೋಪಿ ದರ್ಶನ್, ಬೆಳಗ್ಗೆ ಎದ್ದು ಅರ್ಧಗಂಟೆ ವಾಕ್ ಮಾಡಿದ್ದಾರೆ. ಜೈಲಿನ ಮೆನು ಪ್ರಕಾರ ಇವತ್ತು ಟಮೋಟ್ ಬಾತ್ ನೀಡಲಾಗಿದೆ. ಕಳೆದ ಎರಡು ದಿನಗಳಿಂದ ರಿಲಾಕ್ಸ್ ಮೂಡನಲ್ಲಿರೋ ದರ್ಶನ್, ಪತ್ನಿ ವಿಜಯಲಕ್ಷ್ಮಿ ಭೇಟಿ ಬಳಿಕ ನಿರಾಳರಾಗಿದ್ದರು.