Tag: ಸರ್ಜಿಕಲ್ ಸ್ಟ್ರೈಕ್

  • ಸರ್ಜಿಕಲ್ ಸ್ಟ್ರೈಕ್ ಮಾಡಿಲ್ಲ – ಆದ್ರೆ ಭಯೋತ್ಪಾದಕರನ್ನು ಕೊಲ್ಲಲಾಗಿದೆ: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಸರ್ಜಿಕಲ್ ಸ್ಟ್ರೈಕ್ ಮಾಡಿಲ್ಲ – ಆದ್ರೆ ಭಯೋತ್ಪಾದಕರನ್ನು ಕೊಲ್ಲಲಾಗಿದೆ: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ನವದೆಹಲಿ: ಭಾರತ (India) ಪಾಕಿಸ್ತಾನದ (Pakistan) ಮೇಲೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ (Surgical Strike) ನಡೆಸಿದೆ ಎಂದು ವರದಿಯಾದ ಕೆಲವೇ ಗಂಟೆಗಳ ಬಳಿಕ ರಕ್ಷಣಾ ಸಚಿವಾಲಯ (Defense Ministry) ಇದನ್ನು ಸುಳ್ಳು ಎಂದು ಸ್ಪಷ್ಟಪಡಿಸಿದೆ. ಆದರೆ ಜಮ್ಮು ಮತ್ತು ಕಾಶ್ಮೀರದ ಬಾಲಾಕೋಟ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (LoC) ಪಾಕಿಸ್ತಾನದಿಂದ ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರನ್ನು (Terrorists) ಕೊಲ್ಲಲಾಗಿದೆ ಎಂದು ತಿಳಿಸಿದೆ.

    ಸೋಮವಾರ ಬೆಳಗ್ಗೆ ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಗುರುತಿಸಿ ಅವರನ್ನು ಕೊಲ್ಲಲಾಗಿದೆ. ಅವರು ಬಾಲಕೋಟ್ ವಲಯದ ಹಮೀರ್‌ಪುರ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನ, ದಟ್ಟ ಮಂಜು, ದಟ್ಟ ಪೊದೆಗಳ ಅನುಕೂಲಗಳನ್ನು ಬಳಸಿಕೊಂಡು ಒಳನುಸುಳಲು ಪ್ರಯತ್ನಿಸುತ್ತಿದ್ದರು ಎಂದು ಸಚಿವಾಲಯ ತಿಳಿಸಿದೆ.

    ವರದಿ ಏನಿತ್ತು?
    ಮುಂಜಾನೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಭಾರತಿಯ ಸೇನೆ ಶನಿವಾರ ರಾತ್ರಿ ಎಲ್‌ಒಸಿಯಾದ್ಯಂತ 2.5 ಕಿ.ಮೀ ಮುಂದಕ್ಕೆ ಪ್ರವೇಶಿಸಿ ಪಾಕಿಸ್ತಾನಿ ಭಯೋತ್ಪಾದಕರ 4 ಲಾಂಚಿಂಗ್ ಪ್ಯಾಡ್‌ಗಳನ್ನು ನಾಶಪಡಿಸಿದೆ ಎಂದು ತಿಳಿಸಿತ್ತು. ಇದನ್ನೂ ಓದಿ: ಬುಧವಾರ ಆಗದಿದ್ರೆ ಆ.27ಕ್ಕೆ ಚಂದ್ರಯಾನ-3 ಲ್ಯಾಂಡಿಂಗ್

     

    ಈ ಸರ್ಜಿಕಲ್ ಸ್ಟ್ರೈಕ್‌ನಲ್ಲಿ 7-8 ಭಯೋತ್ಪಾದಕರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಬಳಿಕ ಎಲ್ಲಾ ಸೈನಿಕರು ಸುರಕ್ಷಿತವಾಗಿ ಮರಳಿದ್ದಾರೆ ಎಂದು ಹೇಳಿತ್ತು. ಆದರೆ ಬಳಿಕ ರಕ್ಷಣಾ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ಈ ವರದಿ ಸುಳ್ಳು ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿಗೆ ತಾಕತ್ತಿದ್ದರೆ ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲಿ – ಓವೈಸಿ ಸವಾಲು

    ಬಿಜೆಪಿಗೆ ತಾಕತ್ತಿದ್ದರೆ ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲಿ – ಓವೈಸಿ ಸವಾಲು

    ಹೈದರಾಬಾದ್: ಬಿಜೆಪಿಗೆ (BJP) ತಾಕತ್ತಿದ್ದರೆ ಚೀನಾದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸುವಂತೆ ಎಐಎಂಐಎಂ (AIMIM) ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಸವಾಲು ಹಾಕಿದ್ದಾರೆ. ಬಿಜೆಪಿ ಮುಖಂಡ ಬಂಡಿ ಸಂಜಯ್ ಕುಮಾರ್ ಅವರ ಸರ್ಜಿಕಲ್ ಸ್ಟ್ರೈಕ್ (Surgical Strike) ಹೇಳಿಕೆಗೆ ಓವೈಸಿ ಟಾಂಗ್ ಕೊಟ್ಟಿದ್ದಾರೆ.

    ಸಂಗಾರೆಡ್ಡಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡನ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಮ್ಮದೇ ದೇಶದ ನಗರದಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡುವುದಾಗಿ ಅವರು ಹೇಳುತ್ತಾರೆ. ಧೈರ್ಯವಿದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲಿ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!

    2020ರ ಹೈದರಾಬಾದ್ (Hyderabad) ಮುನ್ಸಿಪಲ್ ಚುನಾವಣೆಯ (Municipal Election) ವೇಳೆ ಬಂಡಿ ಸಂಜಯ್ ಕುಮಾರ್ ಅವರು, ಚುನಾವಣೆಯಲ್ಲಿ ಪಾಕಿಸ್ತಾನ (Pakistan), ಅಫ್ಘಾನಿಸ್ತಾನ ಅಥವಾ ರೋಹಿಂಗ್ಯಾ (Rohingya) ಸಮುದಾಯದ ಮತದಾರರನ್ನು ಒಳಗೊಂಡಿರಬಾರದು. ಒಮ್ಮೆ ನಾವು ಗೆದ್ದರೆ ನಗರದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ ಎಂದಿದ್ದರು. ಇದಕ್ಕೆ ಓವೈಸಿ ತಿರುಗೇಟು ನೀಡಿದ್ದಾರೆ.

    ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧವೂ ವಾಗ್ದಾಳಿ ನಡೆಸಿದ ಓವೈಸಿ, ರಾಜ್ಯದ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಮಂಜೂರಾಗಿದೆ. ಅದರ ಸ್ಟೇರಿಂಗ್ ನನ್ನ ಕೈಯಲ್ಲಿದೆ ಎಂದು ಅಮಿತ್ ಶಾ ಹೇಳುತ್ತಾರೆ. ಮತ್ಯಾಕೆ ಈ ಬಗ್ಗೆ ಅವರು ಚಿಂತಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ನಿರ್ಗತಿಕರನ್ನು ಕೆಲಸಕ್ಕೆಂದು ಕರೆದುಕೊಂಡು ಬಂದು ಕೂಡಿಹಾಕಿದ್ದ ದುರುಳ ಅರೆಸ್ಟ್ – 18 ಕಾರ್ಮಿಕರ ರಕ್ಷಣೆ

  • ಸರ್ಕಾರ ಸುಳ್ಳು ಹರಡುತ್ತಿದೆ, ಸರ್ಜಿಕಲ್ ಸ್ಟ್ರೈಕ್‌ ವರದಿ ಎಲ್ಲಿದೆ – ದಿಗ್ವಿಜಯ್ ಸಿಂಗ್ ಪ್ರಶ್ನೆ

    ಸರ್ಕಾರ ಸುಳ್ಳು ಹರಡುತ್ತಿದೆ, ಸರ್ಜಿಕಲ್ ಸ್ಟ್ರೈಕ್‌ ವರದಿ ಎಲ್ಲಿದೆ – ದಿಗ್ವಿಜಯ್ ಸಿಂಗ್ ಪ್ರಶ್ನೆ

    ಶ್ರೀನಗರ: ಬಿಜೆಪಿ (BJP) ನೇತೃತ್ವದ ಕೇಂದ್ರ ಸರ್ಕಾರ ಕೇವಲ ಸುಳ್ಳನ್ನೇ ಬಿತ್ತರಿಸುತ್ತಿದೆ. 2016ರ ಸರ್ಜಿಕಲ್ ಸ್ಟ್ರೈಕ್‌ (Surgical Strike 2016) ಹಾಗೂ 2019ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗಳ (Pulwama Terror Attack) ಬಗ್ಗೆ ಕೇಂದ್ರ ಸರ್ಕಾರ ಈವರೆಗೆ ಸಂಸತ್ತಿನಲ್ಲಿ ವರದಿ ಮಂಡಿಸಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijaya Singh) ವಾಗ್ದಾಳಿ ನಡೆಸಿದ್ದಾರೆ.

    ರಾಹುಲ್‌ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ (BJP Government) ಸುಳ್ಳನ್ನೇ ಹರಡುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲಿ ತ್ರಿ ಸದಸ್ಯ ಪೀಠದಲ್ಲಿ ಹಿಜಬ್ ಪ್ರಕರಣದ ವಿಚಾರಣೆ ನಡೆಸಲಾಗುವುದು: ಸಿಜೆಐ

    2019ರಲ್ಲಿ ಪಾಕಿಸ್ತಾನ (Pakistan) ಮೂಲದ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆ ನಡೆಸಿದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಪುಲ್ವಾಮಾದಲ್ಲಿ ಹುತಾತ್ಮರಾದರು. ಆಗ ಸಿಆರ್‌ಪಿಎಫ್ ಅಧಿಕಾರಿಗಳು ಸಿಬ್ಬಂದಿಯನ್ನ ಏರ್‌ಲಿಫ್ಟ್ ಮಾಡಬೇಕೆಂದು ಪ್ರಧಾನಿ ಮೋದಿಗೆ (Narendra Modi) ಮನವಿ ಮಾಡಿದ್ದರು. ಆದ್ರೆ ಮೋದಿ ಅದಕ್ಕೆ ಒಪ್ಪಲಿಲ್ಲ. ಇಂತಹ ಲೋಪ ಹೇಗೆ ಸಂಭವಿಸಿತು? ಈವರೆಗೆ ಪುಲ್ವಾಮಾ ದಾಳಿಯ ಕುರಿತು ಒಂದೇ ಒಂದು ವರದಿಯನ್ನೂ ಸಂಸತ್ತಿನ ಮುಂದೆ ಇಟ್ಟಿಲ್ಲ ಎಂದು ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದರು.

    ಪುಲ್ವಾಮಾ ದಾಳಿ ಬಳಿಕ ಸರ್ಜಿಕಲ್ ಸ್ಟ್ರೈಕ್‌ ನಡೆಸಲಾಗಿದೆ ಎಂದು ಹೇಳಿಕೊಂಡರು. ಆದ್ರೆ ಪುರಾವೆಗಳನ್ನ ತೋರಿಸಲಿಲ್ಲ. ಕೇವಲ ಸುಳ್ಳುಗಳನ್ನೇ ಹರಡಿದರು ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: 21 ದ್ವೀಪಗಳಿಗೆ ಪರಮವೀರ ಚಕ್ರ ಪಡೆದ ಸೈನಿಕರ ಹೆಸರು – ಬೋಸ್ ರಾಷ್ಟ್ರೀಯ ಸ್ಮಾರಕದ ಮಾದರಿ ಅನಾವರಣಗೊಳಿಸಿದ ಮೋದಿ

    ಅಷ್ಟೇ ಅಲ್ಲದೇ 2016ರಲ್ಲಿ ಜಮ್ಮು ಮತ್ತು ಕಾಶ್ಮೀರದ ಉರಿ ಪಟ್ಟಣದಲ್ಲಿರುವ ಸೇನೆಯ 12 ಬ್ರಿಗೇಡ್ ಪ್ರಧಾನ ಕಚೇರಿಗಳ ಮೇಲೆ ನಾಲ್ವರು ಭಯೋತ್ಪಾದಕರು ಗ್ರೇನೆಡ್ ದಾಳಿ ನಡೆಸಿದರು. ಈ ದಾಳಿಯಲ್ಲಿ 18 ಯೋಧರು ಹುತಾತ್ಮರಾದರು. ಉರಿ ಭಯೋತ್ಪಾದಕ ದಾಳಿಯ 10 ದಿನಗಳ ಬಳಿಕ ಸರ್ಜಿಕಲ್ ಸ್ಟ್ರೈಕ್‌ ನಡೆಸಲಾಯಿತು. ಅದರ ವರದಿಯನ್ನೂ ಸಂಸತ್ತಿನಲ್ಲಿ ಮಂಡಿಸಿಲ್ಲ ಎಂದು ಹೇಳಿದ್ದಾರೆ.

    ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ರಜೌರಿಯ ಧಂಗ್ರಿ ಮತ್ತು ಜಮ್ಮುವಿನ ನರ್ವಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದರು. ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ನಂತರವೂ ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದನೆ ಇನ್ನೂ ಜೀವಂತವಾಗಿದೆ. 370ನೇ ವಿಧಿ ರದ್ದಾದ ನಂತರ ಇಲ್ಲಿನ ಪರಿಸ್ಥಿತಿ ಬೆಳಕಿಗೆ ಬರುತ್ತಿಲ್ಲ. ಉದ್ದೇಶಿತ ಹತ್ಯೆ ಹಾಗೂ ಬಾಂಬ್ ಸ್ಫೋಟಗಳು ಮತ್ತೆ ಶುರುವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    2022ರ ಸೆಪ್ಟೆಂಬರ್ 27ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆಯು ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಚರಿಸುತ್ತಿದೆ. ಇದೇ ತಿಂಗಳ ಜನವರಿ 30ರಂದು ಶ್ರೀನಗರದಲ್ಲಿ ಮುಕ್ತಾಯವಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತೆಲಂಗಾಣ ಸಿಎಂ ಪಾಕಿಸ್ತಾನ, ಚೀನಾ ಏಜೆಂಟ್‌ : ಬಿಜೆಪಿ

    ತೆಲಂಗಾಣ ಸಿಎಂ ಪಾಕಿಸ್ತಾನ, ಚೀನಾ ಏಜೆಂಟ್‌ : ಬಿಜೆಪಿ

    ಹೈದರಾಬಾದ್: ಸರ್ಜಿಕಲ್‌ ಸ್ಟ್ರೈಕ್‌ಗೆ ಸಂಬಂಧಿಸಿದಂತೆ ಪುರಾವೆ ತೋರಿಸಿ ಎಂದು ಕೇಳಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಕೆಸಿಆರ್‌ ಒಬ್ಬ ಪಾಕಿಸ್ತಾನ, ಚೀನಾ ಏಜೆಂಟ್‌ ಎಂದು ಗುಡುಗಿದೆ.

    ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ ಅವರು ಭಾರತೀಯ ಸೇನೆಯನ್ನು ದುರ್ಬಲಗೊಳಿಸಲು ದೇಶದ್ರೋಹಿಯಂತೆ ಮಾತನಾಡುತ್ತಿದ್ದಾರೆ. ಪಾಕಿಸ್ತಾನ ಮತ್ತು ಚೀನಾದ ಏಜೆಂಟ್‌ ಆಗಿರುವ ನಿಮ್ಮಂತಹ ದೇಶದ್ರೋಹಿ ತೆಲಂಗಾಣ ನೆಲದಲ್ಲಿರಲು ಅರ್ಹರಲ್ಲ. ತೆಲಂಗಾಣ ಜನತೆ ನಿಮ್ಮನ್ನು ಓಡಿಸುವುದು ಖಚಿತ ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ರಾಹುಲ್ ವಿರುದ್ಧ ಹಿಮಂತ ಬಿಸ್ವಾ ವಿವಾದಾತ್ಮಕ ಹೇಳಿಕೆ – ತೆಲಂಗಾಣ ಕಾಂಗ್ರೆಸ್ ನಾಯಕರಿಂದ ದೂರು

    ಮುಖ್ಯಮಂತ್ರಿಗಳ ಹೇಳಿಕೆಗಳು ಜನರನ್ನು ಕೆರಳಿಸಿದ್ದು, ಅವರ ರಕ್ತ ಕುದಿಯುತ್ತಿದೆ. ಕೆಸಿಆರ್‌ ಅವರು ಭಾರತೀಯ ಸೇನೆಗೆ ಮಾಡಿದ ಅವಮಾನಕ್ಕೆ ಇಡೀ ಭಾರತವೇ ತಲೆತಗ್ಗಿಸುವಂತಾಗಿದೆ ಎಂದು ಹರಿಹಾಯ್ದಿದ್ದಾರೆ.

    ಸರ್ಜಿಕಲ್‌ ಸ್ಟ್ರೈಕ್‌ಗೆ ಸಂಬಂಧಿಸಿದ ಸಾಕ್ಷ್ಯವನ್ನು ಕೇಂದ್ರ ಸರ್ಕಾರ ತೋರಿಸಲಿ. ಈ ವಿಚಾರವಾಗಿ ಬಿಜೆಪಿಯವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಮೊದಲು ಅವರು ಜನತೆಗೆ ಪುರಾವೆ ತೋರಿಸಲಿ ಎಂದು ಕೆಸಿಆರ್‌ ಆಗ್ರಹಿಸಿದ್ದರು. ಇದನ್ನೂ ಓದಿ: ಬಂಡಾಯ ಗುಂಪುಗಳ ಜೊತೆ ಮಾತನಾಡಲು ಸರ್ಕಾರ ಸಿದ್ಧವಿದೆ: ರಾಜನಾಥ್ ಸಿಂಗ್

    ಉರಿಯ ಮೂಲ ಶಿಬಿರದಲ್ಲಿ ಭಾರತೀಯ ಸೇನೆಯ 19 ಯೋಧರು ಹತರಾದ ನಂತರ ಭಾರತೀಯ ಸೇನೆಯು 2016ರ ಸೆಪ್ಟೆಂಬರ್‌ನಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿತ್ತು.

    ಬಳಿಕ 2019ರ ಫೆ.14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಸಿಆರ್‌ಪಿಎಫ್‌ ಬೆಂಗಾವಲು ಪಡೆಯ ಮೇಲಿನ ದಾಳಿಯಲ್ಲಿ 40 ಯೋಧರು ಹುತಾತ್ಮರಾದರು. ಪುಲ್ವಾಮಾ ದಾಳಿಯ ಮೂರನೇ ವರ್ಷಾಚಾರಣೆ ನಿನ್ನೆ ನಡೆಯಿತು. ದೇಶದ ಜನತೆ ಹುತಾತ್ಮ ಯೋಧರನ್ನು ಸ್ಮರಿಸಿದ್ದರು.

    ಸ್ಮರಿಸಿ

  • ಸಿಎಂ ಕೆಸಿಆರ್‌ಗೆ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಪುರಾವೆ ನೀಡಿದ ಅಸ್ಸಾಂ ಸಿಎಂ

    ಸಿಎಂ ಕೆಸಿಆರ್‌ಗೆ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಪುರಾವೆ ನೀಡಿದ ಅಸ್ಸಾಂ ಸಿಎಂ

    ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹಾಗೂ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನಡುವಿನ ರಾಜಕೀಯ ಕಿತ್ತಾಟ ಮುದುವರಿದಿದ್ದು, ಹಿಮಂತ ಬಿಸ್ವಾ ಅವರು ಸರ್ಜಿಕಲ್ ಸ್ಟ್ರೈಕ್‍ನ ವೀಡಿಯೋ ಪುರಾವೆಯನ್ನು ನೀಡಿ ತಿರುಗೇಟು ನೀಡಿದ್ದಾರೆ.

    ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಕೆಸಿಆರ್ ಅವರಿಗೆ ನಮ್ಮ ವೀರ ಸೇನೆಯ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆ ಇಲ್ಲಿದೆ. ನೀವು ನಮ್ಮ ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ಅವರನ್ನು ಅವಮಾನಿಸುತ್ತಿದ್ದಿರಿ. ನವ ಭಾರತವು ನಮ್ಮ ಸೇನೆಗೆ ಅವಮಾನವಾದರೆ ಸಹಿಸುವುದಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

    2016ರಲ್ಲಿ ಪಾಕಿಸ್ತಾನದಲ್ಲಿ ಭಾರತ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರಲ್ಲಿ ನಡೆದ ವೈಮಾನಿಕ ದಾಳಿಯ ಪುರಾವೆಗಳನ್ನು ಕೇಂದ್ರವು ಪ್ರಸ್ತುತಪಡಿಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದರು. ಇದು ಭಾರೀ ಟೀಕೆಗೆ ಒಳಗಾಗಿತ್ತು. ಆದರೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ನಿನ್ನೆ ಪತ್ರಿಕಾಗೋಷ್ಠಿ ಮಾಡಿ ರಾಹುಲ್ ಗಾಂಧಿ ಅವರ ಪರ ವಹಿಸಿದ್ದರು.

    ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆ ಕೇಳಿದ್ದರಲ್ಲಿ ತಪ್ಪನಿಲ್ಲ, ಸರ್ಜಿಕಲ್ ಸ್ಟ್ರೈಕ್‍ನ ಪುರಾವೆಯನ್ನು ನನಗೂ ತೋರಿಸಿ. ಇದು ಭಾರತ ಸರ್ಕಾರದ ಜವಾಬ್ದಾರಿಯಾಗಿದೆ. ಜನರಲ್ಲಿ ಆತಂಕವಿದೆ. ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ. ಅದಕ್ಕಾಗುಯೇ ಜನರು ಸಾಕ್ಷಿಯನ್ನು ಕೇಳುತ್ತಿದ್ದಾರೆ ಎಂದ ಅವರು ಇದು ಪ್ರಜಾಪ್ರಜಾಭುತ್ವ ವ್ಯವಸ್ಥೆ ನೀವು ರಾಜನಲ್ಲ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಟ್ವೀಟ್ ವಿರುದ್ಧ ಒಂದು ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

    ಈ ಬಗ್ಗೆ ಮಾತನಾಡಿದ ಹಿಮಂತ ಬಿಸ್ವಾ ಕೆಸಿಆರ್ ಭಾರತ ಸೇನೆಯನ್ನು ಅನುಮಾನಿಸಿದ್ದಕ್ಕಾಗಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: 7 ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾಗಿದ್ದ ಭೂಪ ಅರೆಸ್ಟ್

  • ನನಗೆ ಸರ್ಜಿಕಲ್ ಸ್ಟ್ರೈಕ್ ಪುರಾವೆ ತೋರಿಸಿ: ಮೋದಿ ವಿರುದ್ಧ ಕೆಸಿಆರ್ ಕಿಡಿ

    ನನಗೆ ಸರ್ಜಿಕಲ್ ಸ್ಟ್ರೈಕ್ ಪುರಾವೆ ತೋರಿಸಿ: ಮೋದಿ ವಿರುದ್ಧ ಕೆಸಿಆರ್ ಕಿಡಿ

    – ಪಂಚರಾಜ್ಯ ಚುನಾವಣೆ ವೇಳೆಯೂ ಸದ್ದು ಮಾಡಿದ ಸರ್ಜಿಕಲ್ ಸ್ಟ್ರೈಕ್
    – ಬಿಜೆಪಿ ಸರ್ಕಾರ ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿ

    ಹೈದರಾಬಾದ್: ಲೋಕಸಭಾ ಚುನಾವಣೆಯ ವೇಳೆ ಸದ್ದು ಮಾಡಿದ್ದ ಸರ್ಜಿಕಲ್ ಸ್ಟ್ರೈಕ್ ಈಗ ಪಂಚರಾಜ್ಯ ಚುನಾವಣೆಯ ವೇಳೆ ಸದ್ದು ಮಾಡಿದೆ. ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ನಾನು ಸಹ ಪುರಾವೆ ನೋಡಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಕೇಳಿದ್ದರಲ್ಲಿ ಯಾವ ತಪ್ಪು ಇಲ್ಲ, ಸರ್ಕಾರ ಸರ್ಜಿಕಲ್ ಸ್ಟ್ರೈಕ್‍ನ ಸಾಕ್ಷಿ ನನಗೂ ತೊರಿಸಬೇಕು. ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ಅನ್ನು ಬಿಜೆಪಿ ರಾಜಕೀಯವಾಗಿ ಬಳಸುತ್ತಿದೆ. ಗಡಿಯಲ್ಲಿ ಹೋರಾಡುತ್ತಿರುವುದು ಸೇನೆಯಾಗಿದೆ. ಯಾರಾದರೂ ಶತ್ರುಗಳು ಸಾವನ್ನಪ್ಪುತ್ತಿದ್ದರೆ ಅದಕ್ಕೆ ಕಾರಣ ಸೈನಿಕರು. ಆ ಶ್ರೇಯಸ್ಸು ಸೇನೆಗೆ ಸೇರಬೇಕು ಬಿಜೆಪಿಗಲ್ಲ ಎಂದು ವಾಗ್ದಾಳಿ ನಡೆಸಿದರು.

    ಚುನಾವಣೆ ನಡೆಯುವ ರಾಜ್ಯಗಳಲ್ಲಿ ಮತದಾರರನ್ನು ತನ್ನ ಪರವಾಗಿ ಸಜ್ಜುಗೊಳಿಸಲು ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ಹೆಸರನ್ನು ಬಳಸಿಕೊಳ್ಳುತ್ತಿದೆ. ಸರ್ಜಿಕಲ್ ಸ್ಟ್ರೈಕ್ ಕುರಿತು ಪುರಾವೆ ಕೇಳುವುದರಲ್ಲಿ ತಪ್ಪೇನಿಲ್ಲ. ನಾನು ಕೂಡ ಈಗ ಸಾಕ್ಷಿಯನ್ನು ಕೇಳುತ್ತಿದ್ದೇನೆ. ಬಿಜೆಪಿಯು ಸರ್ಜಿಕಲ್ ದಾಳಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ನಾವು ಅದನ್ನು ಖಂಡಿತವಾಗಿ ಪ್ರಶ್ನಿಸುತ್ತೇವೆ ಎಂದು ಟೀಕಿಸಿದರು.

    ಬಿಜೆಪಿ ಸರ್ಕಾರ ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಅದನ್ನು ಸಾಧ್ಯವಾದಷ್ಟು ಬೇಗ ಅಧಿಕಾರದಿಂದ ಹೊರಗೆ ಕಳುಹಿಸಬೇಕು ಎಂದ ಅವರು, ರದ್ದಾದ ಕೃಷಿ ಮಸೂದೆಯಿಂದ ಹಿಡಿದು ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದವರೆಗೂ ಪ್ರಧಾನಿ ಮೋದಿಯನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಒಡಹುಟ್ಟಿದವರೇ ಕಾಂಗ್ರೆಸ್‌ ನಾಶ ಮಾಡ್ತಾರೆ, ಚಿಂತಿಸಬೇಡಿ: ಯೋಗಿ ಆದಿತ್ಯನಾಥ್‌

    ಈ ಹಿಂದೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬಾಲಾಕೋಟ್‍ನಲ್ಲಿ ಭಾರತ ಸೇನಾ ದಾಳಿ ನಡೆಸಿದ್ದು ನಿಜ ಎಂದು ಹೇಳುವ ಮೂಲಕ ಅಧಿಕೃತವಾಗಿ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದನ್ನು ಒಪ್ಪಿಕೊಂಡಿದ್ದರು. ಇದನ್ನೂ ಓದಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ – ಪ್ರಮುಖ ಆರೋಪಿ ಆಶಿಶ್ ಮಿಶ್ರಾ ನಾಳೆ ಬಿಡುಗಡೆ

    ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸ್ವತಃ ಈ ಬಗ್ಗೆ ಹೇಳಿಕೆ ನೀಡಿದ್ದರು. ಭಾರತದ ಸರ್ಜಿಕಲ್ ಸ್ಟ್ರೈಕ್‍ನಲ್ಲಿ ಅಪಾರ ಹಾನಿಯಾಗಿತ್ತು. ಬಾಂಬ್ ದಾಳಿಯಿಂದ ಹಾನಿ ಆಗಿತ್ತು ಎಂದು ಇಮ್ರಾನ್ ಖಾನ್ ತಿಳಿಸಿದ್ದರು. ಈ ಮೂಲಕ ಪಾಕಿಸ್ತಾನ ಭಾರತೀಯ ಸೇನೆಯಿಂದ ದಾಳಿ ಆಗಿರುವುದು ನಿಜ ಎಂದು ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದ್ದರು.

  • ಚೀನಾ ಮೇಲೆ ಕಣ್ಣಿಡಲು ಬಂತು ಇಸ್ರೇಲ್ ಡ್ರೋನ್

    ಚೀನಾ ಮೇಲೆ ಕಣ್ಣಿಡಲು ಬಂತು ಇಸ್ರೇಲ್ ಡ್ರೋನ್

    -52 ಗಂಟೆ, 3500 ಅಡಿ ಎತ್ತರದಲ್ಲಿ ಸಂಚರಿಸುವ ಸಾಮರ್ಥ್ಯ

    ನವದೆಹಲಿ: ಗಡಿಯಲ್ಲಿ ತಂಟೆ ಮಾಡುವ ಚೀನಾದ ಮೇಲೆ ಕಣ್ಣಿಡಲು ಭಾರತೀಯ ಸೇನೆಗೆ ಇದೀಗ ಇಸ್ರೇಲ್‍ನ ಅತ್ಯಾಧುನಿಕ ಡ್ರೋನ್‍ಗಳ ಬಲ ಬಂದಿದೆ. ಕೇಂದ್ರ ಸರ್ಕಾರ ನೀಡಿದ ತುರ್ತು ಖರೀದಿ ಅಧಿಕಾರ ಬಳಸಿಕೊಂಡು ಸೇನಾಪಡೆಯು ಇಸ್ರೇಲ್‍ನಿಂದ ಹೆರಾನ್ ಡ್ರೋನ್‍ಗಳನ್ನು ಖರೀದಿಸಿದೆ.

    ಶೀಘ್ರದಲ್ಲೇ ಈ ಡ್ರೋನ್‍ಗಳು ಪೂರ್ವ ಲಡಾಖ್ ಸೆಕ್ಟರ್‌ನಲ್ಲಿ ನಿಯೋಜನೆಯಾಗಲಿದ್ದು, ಚೀನಾದ ಚಟುವಟಿಕೆಗಳ ಮೇಲೆ ಕಣ್ಣಿಡಲಿವೆ ಎಂದು ಮೂಲಗಳು ಹೇಳಿವೆ. ಈಗಾಗಲೇ ಈ ಡ್ರೋನ್‍ಗಳು ಕಾರ್ಯಸನ್ನದ್ಧ ಸ್ಥಿತಿಯಲ್ಲಿವೆ. ಹಿಂದಿನಿಂದಲೂ ಭಾರತೀಯ ಸೇನೆಯಲ್ಲಿರುವ  ಡ್ರೋನ್‍ಗಳಿಗಿಂತ ಇವು ಹೆಚ್ಚು ಆಧುನಿಕವಾಗಿದ್ದು, ಇವುಗಳ ಆ್ಯಂಟಿ-ಜಾಮಿಂಗ್ ಸಾಮರ್ಥ್ಯ ಗರಿಷ್ಠ ಮಟ್ಟದ್ದಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಹಾಗೂ ಡೆಲ್ಟಾ ವೈರಸ್ ನಡುವಿನ ವ್ಯತ್ಯಾಸವೇನು?

    ಈ ಡ್ರೋನ್‍ಗಳು ಸತತ 52 ಗಂಟೆ ಹಾರಾಡುವ, ಗರಿಷ್ಠ 3500 ಅಡಿ ಎತ್ತರದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಇಂಥ 4 ಡ್ರೋನ್‍ಗಳನ್ನು ಖರೀದಿಸಲು ಭಾರತ 1500 ಕೋಟಿ ರೂಪಾಯಿ ಮೊತ್ತದ ಒಪ್ಪಂದ ಮಾಡಿಕೊಂಡಿತ್ತು. ಲಡಾಖ್ ಗಡಿಗೆ ರಷ್ಯಾ ನಿರ್ಮಿತ ಟ್ರಯಂಫ್ ಕ್ಷಿಪಣಿ ವ್ಯವಸ್ಥೆ ಅಣಿಗೊಳಿಸಲು ಭಾರತ ಸಜ್ಜಾಗಿರುವ ಹೊತ್ತಿನಲ್ಲೇ ಈ ಹೊಸ ಅಸ್ತ್ರವೂ ಲಭ್ಯವಾಗಿದೆ. ಇದನ್ನೂ ಓದಿ: ಕೋವಿಡ್‌ ವಾರಿಯರ್ಸ್‌ಗೆ ಬೂಸ್ಟರ್‌ ಡೋಸ್‌ ನೀಡುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ: ಸಿಎಂ

    ಪ್ರಧಾನಿ ನರೇಂದ್ರ ಮೋದಿ ಅವರು ಸೇನಾಪಡೆಗಳಿಗೆ 500 ಕೋಟಿ ರೂಪಾಯಿವರಿಗಿನ ಶಸ್ತ್ರಾಸ್ತ್ರಗಳನ್ನು ಖರೀದಿಸಲು ನೀಡಿದ್ದ ವಿಶೇಷ ಆರ್ಥಿಕ ಅಧಿಕಾರ ಬಳಸಿಕೊಂಡು ಭೂಸೇನಾಪಡೆ ಈ ಡ್ರೋನ್‍ಗಳನ್ನು ಖರೀದಿಸಿದೆ. ಜೊತೆಗೆ ಇದಕ್ಕಿಂತ ಸಣ್ಣ ಇನ್ನಷ್ಟು ಡ್ರೋನ್‍ಗಳನ್ನು ಭಾರತೀಯ ಕಂಪನಿಗಳಿಂದಲೇ ಖರೀದಿಸುತ್ತಿದೆ. ಚೀನಾದಿಂದ ಯುದ್ಧದ ಆತಂಕವಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸೇನಾಪಡೆಗಳಿಗೆ ತುರ್ತಾಗಿ ಅಗತ್ಯವಿರುವ ಶಸ್ತ್ರಾಸ್ತ್ರಗಳನ್ನು ಖರೀದಿಸಲು ವಿಶೇಷ ಆರ್ಥಿಕ ಅಧಿಕಾರ ನೀಡಿದ್ದರು, ಅದರಂತೆ ವಾಯುಪಡೆ ಹಾಗೂ ನೌಕಾಪಡೆಗಳು ಈಗಾಗಲೇ ಕೆಲ ಶಸ್ತ್ರಾಸ್ತ್ರಗಳನ್ನು ಖರೀದಿಸಿವೆ. 2019ರಲ್ಲಿ ಪಾಕಿಸ್ತಾನದ ಬಾಲಾಕೋಟ್ ಮೇಲಿನ ಸರ್ಜಿಕಲ್ ಸ್ಟ್ರೈಕ್ ನಂತರವೂ ಇದೇ ರೀತಿ ಸೇನಾಪಡೆಗಳಿಗೆ ತುರ್ತು ಖರೀದಿಯ ಅಧಿಕಾರ ನೀಡಲಾಗಿತ್ತು.

  • ಮತ್ತೆ ಸರ್ಜಿಕಲ್‌ ಸ್ಟ್ರೈಕ್‌? – ಪಾಕಿಸ್ತಾನಕ್ಕೆ ಅಮಿತ್‌ ಶಾ ಎಚ್ಚರಿಕೆ

    ಮತ್ತೆ ಸರ್ಜಿಕಲ್‌ ಸ್ಟ್ರೈಕ್‌? – ಪಾಕಿಸ್ತಾನಕ್ಕೆ ಅಮಿತ್‌ ಶಾ ಎಚ್ಚರಿಕೆ

    ಪಣಜಿ: ಪಾಕಿಸ್ತಾನದ ಮೇಲೆ ಮತ್ತೊಮ್ಮೆ ಭಾರತ ಸರ್ಜಿಕಲ್‌ ಸ್ಟ್ರೈಕ್‌ ದಾಳಿ ನಡೆಯುತ್ತಾ ಎಂಬ ಪ್ರಶ್ನೆ ಈಗ ಮತ್ತೊಮ್ಮೆ ಎದ್ದಿದೆ.

    ಗೃಹ ಸಚಿವ ಅಮಿತ್‌ ಶಾ ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ನೀಡಿದ ಖಡಕ್‌ ಹೇಳಿಕೆಯಿಂದ ಈಗ ಈ ಪ್ರಶ್ನೆ ಎದ್ದಿದೆ.

    ಜಮ್ಮುಕಾಶ್ಮೀರದಲ್ಲಿ ಜನಗಳ ಮೇಲೆ ಉಗ್ರರು ನಡೆಸುತ್ತಿರುವ ಹತ್ಯೆಯನ್ನು ನಿಲ್ಲಿಸದೇ ಇದ್ದರೆ ಮತ್ತೊಮ್ಮೆ ಪಾಕಿಸ್ತಾನದ ಮೇಲೆ ಸರ್ಜಿಕಲ್‌ ಸ್ಟ್ರೈಕ್‌ ನಡೆಸಬೇಕಾಗುತ್ತದೆ ಎಂದು ನೇರವಾದ ಎಚ್ಚರಿಕೆಯನ್ನು ನೀಡಿದ್ದಾರೆ. ಇದನ್ನೂ ಓದಿ: #Surgicalstrike2 ವಿಶ್ವದಲ್ಲೇ ನಂಬರ್ ಒನ್ ಟ್ರೆಂಡಿಂಗ್

    ಉಗ್ರರ ದಾಳಿಗಳನ್ನು ನಾವು ಸಹಿಸುವುದಿಲ್ಲ ಎನ್ನುವುದನ್ನು ನಾವು ಈಗಾಗಲೇ ಸಾಬೀತುಪಡಿಸಿದ್ದೇವೆ. ಮತ್ತೆ ಈ ರೀತಿಯ ದಾಳಿ ನಡೆದರೆ ಮತ್ತಷ್ಟು ಸರ್ಜಿಕಲ್‌ ಸ್ಟ್ರೈಕ್‌ ಬರುತ್ತದೆ ಎಂದು ಹೇಳಿದರು.

    ಪ್ರಧಾನಿ ಮೋದಿ ಮತ್ತು ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ನೇತೃತ್ವದಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಒಂದು ಮಹತ್ವದ ಹೆಜ್ಜೆಯಾಗಿದೆ. ಭಾರತದ ಗಡಿಯಲ್ಲಿ ಯಾರೂ ತೊಂದರೆ ಮಾಡಬಾರದು ಎಂದು ಸಂದೇಶವನ್ನು ಕಳುಹಿಸಿದ್ದೇವೆ. ಮಾತುಕತೆಗೆ ಸಮಯವಿತ್ತು, ಆದರೆ ಈಗ ಏನಿದ್ದರೂ ಪ್ರತ್ಯುತ್ತರ ನೀಡುವ ಸಮಯ ಎಂದರು. ಇದನ್ನೂ ಓದಿ: ಉದ್ಯೋಗಿಗಳ ಬೆಸ್ಟ್‌ ಕಂಪನಿ ಔಟ್‌ – ಭಾರತದ ಯಾವ ಕಂಪನಿಗೆ ಎಷ್ಟನೇ ಸ್ಥಾನ?

    ಸೆಪ್ಟೆಂಬರ್ 2016 ರಲ್ಲಿ ಭಾರತದ ಉರಿ, ಪಠಾಣ್‌ಕೋಟ್ ಮತ್ತು ಗುರುದಾಸ್‌ಪುರದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತವು ಮೊದಲ ಬಾರಿಗೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿತು. ಉರಿ ದಾಳಿಯ 11 ದಿನಗಳ ನಂತರ 2016 ರ ಸೆಪ್ಟೆಂಬರ್ 29 ರಂದು ಮೊದಲ ಬಾರಿಗೆ ಪಾಕ್‌ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿ ಉಗ್ರರನ್ನು ಹತ್ಯೆ ಮಾಡಿತ್ತು.

    2019 ರಲ್ಲಿ ಪುಲ್ವಾಮಾದಲ್ಲಿ ಉಗ್ರನೊಬ್ಬ ಸ್ಫೋಟಕ ತುಂಬಿದ್ದ ಇಕೋ ಕಾರನ್ನು ಸಿಆರ್‌ಪಿಎಫ್‌ ಸೈನಿಕರಿದ್ದ ಬಸ್ಸಿಗೆ ಗುದ್ದಿದ ಪರಿಣಾಮ 40 ಮಂದಿ ಹುತಾತ್ಮರಾಗಿದ್ದರು. ಈ ದಾಳಿ ಪ್ರತಿಯಾಗಿ ಭಾರತದ ವಾಯುಸೇನೆ ಆಕ್ರಮಿತ ಕಾಶ್ಮೀರ ಅಲ್ಲದೇ ಬಾಲಾಕೋಟ್‌ನಲ್ಲಿದ್ದ ಉಗ್ರರ ಶಿಬಿರದ ಮೇಲೆ ಬಾಂಬ್‌ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದರು ಎಂದು ವರದಿಯಾಗಿತ್ತು.

  • ಪಾಕ್ ಮೇಲೆ ಇರಾನ್ ಸರ್ಜಿಕಲ್ ಸ್ಟ್ರೈಕ್ – ಹಲವು ಉಗ್ರರು ಬಲಿ

    ಪಾಕ್ ಮೇಲೆ ಇರಾನ್ ಸರ್ಜಿಕಲ್ ಸ್ಟ್ರೈಕ್ – ಹಲವು ಉಗ್ರರು ಬಲಿ

    – ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಯಶಸ್ವಿ 3ನೇ ರಾಷ್ಟ್ರ
    – ಸೈನಿಕರನ್ನು ರಕ್ಷಿಸಲು, ಉಗ್ರರ ಗುಂಪನ್ನು ಗುರಿಯಾಗಿಸಿ ದಾಳಿ

    ಟೆಹರಾನ್: ಅಮೆರಿಕ, ಭಾರತದ ಬಳಿಕ ಇರಾನ್ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಒಳ ನುಗ್ಗಿ ನಡೆಸಿದ ದಾಳಿಗೆ ಹಲವು ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಫೆಬ್ರವರಿ 2ರ ರಾತ್ರಿ ಇರಾನ್‍ನ ಎಲೈಟ್ ರೆವಲ್ಯೂಶನರಿ ಗಾಡ್ರ್ಸ್(ಐಆರ್ ಜಿಸಿ) ಸೈನಿಕರು ದಾಳಿ ನಡೆಸಿದ್ದು, ಪಾಕ್‍ನ ಹಲವು ಸೇನಾಧಿಕಾರಿಗಳು ಈ ಸರ್ಜಿಕಲ್ ಸ್ಟ್ರೈಕ್‍ನಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇರಾನ್‍ನ ಇಬ್ಬರು ಸೈನಿಕರನ್ನು ಪಾಕಿಸ್ತಾನದ ಉಗ್ರರು ಮೂರು ವರ್ಷಗಳ ಹಿಂದೆ ಒತ್ತೆಯಾಳಾಗಿರಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಇರಾನ್ ಈ ಬೃಹತ್ ದಾಳಿ ನಡೆಸಿದ್ದು, ಭಯೋತ್ಪಾದಕರಿಗೆ ರಕ್ಷಣೆ ನೀಡಿದ್ದ ಹಲವು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಮಿಷನ್ ಸಕ್ಸಸ್‍ಫುಲ್ ಎಂದು ಫೆಬ್ರವರಿ 3ರಂದು ಐಆರ್ ಜಿಸಿ ಹೇಳಿಕೆ ಬಿಡುಗಡೆ ಮಾಡಿದ್ದು, ಕಿಡ್ನಾಪ್ ಆಗಿದ್ದ ಇಬ್ಬರು ಸೈನಿಕರನ್ನು ಸಹ ರಕ್ಷಿಸಲಾಗಿದೆ ಎಂದು ಹೇಳಿದೆ. ಎರಡೂವರೆ ವರ್ಷಗಳ ಹಿಂದೆ ಜೈಶ್ ಉಲ್-ಆಡ್ಲ್ ಸಂಘಟನೆಯಿಂದ ಅವರನ್ನು ಒತ್ತೆಯಾಳಾಗಿ ಮಾಡಿಕೊಳ್ಳಲಾಗಿತ್ತು. ಇದೀಗ ಸರ್ಜಿಕಲ್ ಸ್ಟ್ರೈಕ್ ವೇಳೆ ಅವರನ್ನು ರಕ್ಷಿಸಿ ಮರಳಿ ಇರಾನ್‍ಗೆ ಕರೆ ತರಲಾಗಿದೆ ಎಂದು ಐಆರ್ ಜಿಸಿ ಹೇಳಿಕೆ ನೀಡಿದೆ.

    ಅಕ್ಟೋಬರ್ 16,2018ರಲ್ಲಿ ಕನಿಷ್ಠ 12 ಐಆರ್ ಜಿಸಿ ಸೈನಿಕರನ್ನು ಜೈಶ್ ಉಲ್-ಆಡ್ಲ್ ಸಂಘಟನೆಯ ಉಗ್ರರು ಮರ್ಕಾವಾ, ಸಿಸ್ತಾನ್ ಹಾಗೂ ಬಲುಚಿಸ್ತಾನ್ ಪ್ರದೇಶದಲ್ಲಿ ಒತ್ತೆಯಾಳಾಗಿ ಇರಿಸಿಕೊಂಡಿತ್ತು. ಬಳಿಕ ಇವರನ್ನು ಬಿಡುಗಡೆ ಮಾಡಲು ಸೇನೆಯ ಅಧಿಕಾರಿಗಳು ಎರಡೂ ದೇಶಗಳ ಜಂಟಿ ಸಮಿತಿ ರಚಿಸಿದ್ದರು. ಇದರ ಫಲವಾಗಿ ಐವರನ್ನು ನವೆಂಬರ್ 15, 2018ರಲ್ಲಿ ಬಿಡುಗಡೆ ಮಾಡಲಾಗಿತ್ತು. ಮತ್ತೆ ನಾಲ್ವರು ಇರಾನಿ ಸೈನಿಕರನ್ನು ಮಾರ್ಚ್ 21, 2019ರಂದು ಪಾಕಿಸ್ತಾನಿ ಸೇನೆ ರಕ್ಷಣೆ ಮಾಡಿತ್ತು. ಇದೀಗ ಇರಾನ್ ಸರ್ಜಿಕಲ್ ಸ್ಟ್ರೈಕ್ ನಡೆಸುವ ಮೂಲಕ ಉಳಿದ ಇಬ್ಬರು ಸೈನಿಕರನ್ನು ರಕ್ಷಿಸಿದೆ.

  • ನೋಟು ನಿಷೇಧದ ಬಳಿಕ ಬಂಗಾರದ ಮೇಲೆ ಮೋದಿ ಸರ್ಕಾರದ ಸರ್ಜಿಕಲ್ ಸ್ಟ್ರೈಕ್

    ನೋಟು ನಿಷೇಧದ ಬಳಿಕ ಬಂಗಾರದ ಮೇಲೆ ಮೋದಿ ಸರ್ಕಾರದ ಸರ್ಜಿಕಲ್ ಸ್ಟ್ರೈಕ್

    – ಬಂಗಾರದ ಮೇಲೆ ಬೀಳುತ್ತೆ ಭಾರೀ ದಂಡ
    – ಕಪ್ಪುಹಣ ನಿಯಂತ್ರಣಕ್ಕೆ ಸರ್ಕಾರದ ಕ್ರಮ

    ನವದೆಹಲಿ: ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ.

    ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನು ನಿಗದಿ ಪಡಿಸಿದ ತೆರಿಗೆ ಪಾವತಿಸಿ ಸಕ್ರಮಗೊಳಿಸಲು ಮುಂದಾಗಿದೆ.

    ಆದಾಯ ತೆರಿಗೆ ಅಮ್ನೆಸ್ಟಿ ಸ್ಕೀಂ ಮಾದರಿಯಲ್ಲಿ ಕೇಂದ್ರ ಸರ್ಕಾರವು ಗೋಲ್ಡ್ ಅಮ್ನೆಸ್ಟಿ ಸ್ಕೀಮ್ ತರಲಿದೆ. ಈ ಸ್ಕೀಂ ಪ್ರಕಾರ ದಾಖಲೆ ಇಲ್ಲದ ಚಿನ್ನ ಅಕ್ರಮವಾಗಿದ್ದು ಈ ಚಿನ್ನವನ್ನು ಇಂತಿಷ್ಟು ಬೆಲೆ ತೆತ್ತು ಸಕ್ರಮ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ.

    ಆರ್ಥಿಕ ವ್ಯವಹಾರಗಳ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಈ ಗೋಲ್ಡ್ ಅಮ್ನೆಸ್ಟಿ ಸ್ಕೀಂ ರೂಪಿಸಿದ್ದು ಆರಂಭದಲ್ಲಿ ಸರ್ಕಾರ ಚಿನ್ನ ಸಂಗ್ರಹಕ್ಕೆ ಒಂದು ಮಿತಿಯನ್ನು ನಿಗದಿ ಪಡಿಸುತ್ತದೆ. ಈ ಪ್ರಮಾಣಕ್ಕಿಂತ ಕಡಿಮೆ ಚಿನ್ನವನ್ನು ಹೊಂದಿದ್ದರೆ ಅದರ ವಿವರವನ್ನು ತೋರಿಸುವ ಅಗತ್ಯವಿಲ್ಲ. ಆದರೆ ಆ ಮಿತಿಗಿಂತ ಜಾಸ್ತಿ ಪ್ರಮಾಣದಲ್ಲಿ ಚಿನ್ನ ಸಂಗ್ರಹ ಇದ್ದರೆ ಮೂಲವನ್ನು ತಿಳಿಸಬೇಕಾಗುತ್ತದೆ. ಆಭರಣ ಖರೀದಿಸಿದ ರಸೀದಿಯನ್ನು ನೀಡಬೇಕಾಗುತ್ತದೆ. ಒಂದು ವೇಳೆ ದಾಖಲೆಯಿಲ್ಲದ ಚಿನ್ನವಿದ್ದರೆ ಅದರ ವಿವರವನ್ನು ಸರ್ಕಾರಕ್ಕೆ ತೋರಿಸಬೇಕಾಗುತ್ತದೆ. ನಂತರ ಸರ್ಕಾರವೇ ನಿಗದಿಪಡಿಸಿದ ದಂಡವನ್ನು ತೆತ್ತು ಈ ಚಿನ್ನವನ್ನು ಸಕ್ರಮ ಮಾಡಿಕೊಳ್ಳಬೇಕಾಗುತ್ತದೆ.

    ಅಕ್ಟೋಬರ್ ಎರಡನೇ ವಾರದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಯೋಜನೆಯ ಬಗ್ಗೆ ನಿರ್ಧಾರ ಪ್ರಕಟವಾಗಬೇಕಿತ್ತು. ಆದರೆ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ನಿಗದಿಯಾಗಿದ್ದರಿಂದ ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚಿಸುವ ನಿರ್ಧಾರದಿಂದ ಸರ್ಕಾರ ಹಿಂದಕ್ಕೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ.

    ಚಿನ್ನದ ಮೇಲೆ ತೆರಿಗೆ ಯಾಕೆ?
    ನೋಟು ನಿಷೇಧದ ಬಳಿಕ ಹಣಕಾಸು ವ್ಯವಹಾರಗಳಿಗೆ ಕಠಿಣ ನೀತಿಯನ್ನು ತರಲಾಗಿದ್ದು ಬ್ಯಾಂಕಿನಿಂದ ನಗದು ಡ್ರಾ ಮಾಡಲು ಮಿತಿ ಹೇರಲಾಗಿದೆ. ಅಷ್ಟೇ ಅಲ್ಲದೇ ಆನ್‍ಲೈನ್ ವ್ಯವಹಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ವ್ಯವಹಾರಗಳು ದಾಖಲಾಗುತ್ತದೆ. ಇದರಿಂದ ಪಾರಾಗಲು ಕಪ್ಪು ಕುಳಗಳು ಭಾರೀ ಪ್ರಮಾಣದಲ್ಲಿ ಚಿನ್ನ ಖರೀದಿಸುತ್ತಿದ್ದಾರೆ. ಚಿನ್ನದ ಬೆಲೆ ವರ್ಷ ವರ್ಷ ಜಾಸ್ತಿ ಆಗುತ್ತಿರುವ ಕಾರಣ ಮತ್ತು ಇದನ್ನು ಸುಲಭವಾಗಿ ತೆಗೆದುಕೊಂಡು ಹೋಗಬಹುದಾದ ಆಸ್ತಿ ಆಗಿದ್ದರಿಂದ ಇದರ ಮೇಲೆಯೇ ಹೆಚ್ಚಿನ ಹಣವನ್ನು ಹೂಡಿಕೆ ಮಾಡಿ ಚಿನ್ನದ ಆಭರಣ/ ಬಾರ್ ಗಳನ್ನು ಖರೀದಿಸುತ್ತಿದ್ದಾರೆ. ಚಿನ್ನ ನೀಡುವುದರ ಮೂಲಕವೂ ಭ್ರಷ್ಟಾಚಾರ ನಡೆಯುತ್ತದೆ. ಯಾರ ಬಳಿ ಎಷ್ಟು ಚಿನ್ನ ಇದೆ ಎನ್ನುವ ಮಾಹಿತಿಯೂ ಸರ್ಕಾರದ ಬಳಿ ಇಲ್ಲದ ಕಾರಣ ಕಪ್ಪು ಕುಳಗಳು ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಸಂಗ್ರಹಿಸುತ್ತಿದ್ದಾರೆ. ಅದರಲ್ಲೂ ರಾಜಕಾರಣಿಗಳು ಮತ್ತು ಸರ್ಕಾರಿ ಉದ್ಯೋಗಿಗಳ ಮನೆ ಮೇಲೆ ದಾಳಿ ನಡೆದಾಗ ಕೆಜಿಗಟ್ಟಲೇ ಚಿನ್ನ ಇರುವುದು ಪತ್ತೆಯಾಗುತ್ತದೆ. ಹೀಗಾಗಿ ಅಕ್ರಮವಾಗಿ ಬಂದಿರುವ ಚಿನ್ನದ ಮೇಲೆ ನಿಗಾ ಇಡಲು ಸರ್ಕಾರ ಈಗ ತೆರಿಗೆ ಹೇರಲು ಮುಂದಾಗುತ್ತಿದೆ.

    ಗೊಂದಲವೂ ಇದೆ:
    ಹಿರಿಯರಿಂದ ಬಳುವಳಿಯಾಗಿ ಬಂದಿದ್ದ ಚಿನ್ನ ಸರ್ಕಾರ ನಿಗದಿ ಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿದ್ದರೆ ಅದು ಸಕ್ರಮವೋ? ಅಕ್ರಮವೋ ಎನ್ನುವ ಪ್ರಶ್ನೆಯೂ ಈಗ ಎದ್ದಿದೆ. ಸದ್ಯ ಸರ್ಕಾರ ಚಿನ್ನದ ಮೇಲೆ ತೆರಿಗೆ ವಿಧಿಸಲು ಮುಂದಾಗುತ್ತಿದೆ ಎನ್ನುವ ವಿಚಾರ ಮಾತ್ರ ಪ್ರಕಟವಾಗಿದ್ದು, ಈ ಗೋಲ್ಡ್ ಅಮ್ನೆಸ್ಟಿ ಸ್ಕೀಂ ಯಾವ ರೀತಿ ಇರುತ್ತದೆ ಎನ್ನುವ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಸರ್ಕಾರ ಎಲ್ಲ ಮಾಹಿತಿಗಳನ್ನು ನೀಡುವ ಮೂಲಕ ಎದ್ದಿರುವ ಎಲ್ಲ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆಯಿದೆ.