Tag: ಸರ್ಜಿಕಲ್ ಸ್ಟ್ರೈಕ್

  • ಪಾಕ್ ವಿರುದ್ಧ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ – ಉಗ್ರರ ನೆಲೆ ಮೇಲೆ ಬಾಂಬ್ ದಾಳಿ

    ಪಾಕ್ ವಿರುದ್ಧ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ – ಉಗ್ರರ ನೆಲೆ ಮೇಲೆ ಬಾಂಬ್ ದಾಳಿ

    ನವದೆಹಲಿ: ಪುಲ್ವಾಮಾ ದಾಳಿ ಬಳಿಕ ನಡೆದ ಏರ್ ಸರ್ಜಿಕಲ್ ಸ್ಟ್ರೈಕ್ ಪಾಕ್ ಆಕ್ರಮಿತ ಪ್ರದೇಶದಲ್ಲಿದ್ದ ಉಗ್ರರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿತ್ತು. ಬಳಿಕ ಭಾರತ ಮತ್ತೊಂದು ಬಹುದೊಡ್ಡ ದಾಳಿಯನ್ನು ಉಗ್ರರ ನೆಲೆಗಳ ಮೇಲೆ ನಡೆಸಿದೆ.

    ಪಾಕ್ ಆಕ್ರಮಿತ ಗಡಿ ಪ್ರದೇಶ 30 ಕಿಮೀ ಒಳ ಭಾಗದಲ್ಲಿ ನಿರ್ಮಿಸಲಾಗಿದ್ದ ಉಗ್ರರ ತರಬೇತಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಈ ಹಿಂದೆ ಪಾಕ್ ಆಕ್ರಮಿತ ಪ್ರದೇಶಕ್ಕೆ ನುಗ್ಗಿ ಸೈನಿಕರು ದಾಳಿ ನಡೆಸಿದ್ದರು. ಆದರೆ ಈ ಬಾರಿ ಆರ್ಟಿಲರಿ ಗನ್ ಮೂಲಕ ಬಾಂಬ್ ದಾಳಿ ನಡೆಸಲಾಗಿದೆ. ಗುಪ್ತಚರ ಇಲಾಖೆ ನೀಡಿರುವ ಖಚಿತ ಮಾಹಿತಿ ಮೇಲೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ಕುರಿತು ಯಾವುದೇ ಮಾಹಿತಿ ಅಧಿಕೃತವಾಗಿ ಭಾರತ ಸೇನೆ ನೀಡಿಲ್ಲ.

    ಜಮ್ಮು ಕಾಶ್ಮೀರದ ನೀಲಂ ಜೇಲಂ ಪ್ರಾಜೆಕ್ಟ್ ಬಳಿ ದಾಳಿ ನಡೆಸಲಾಗಿದೆ. ಈ ಹಿಂದೆ ನಡೆದಿದ್ದ ಎಲ್ಲಾ ದಾಳಿಗಳಿಗಿಂತಲೂ ಈ ದಾಳಿ ಭಿನ್ನವಾಗಿದೆ. ಆದರೆ ಘಟನೆಯಲ್ಲಿ ಎಷ್ಟು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿಲ್ಲ. ನೀಲಂ ಜೇಲಂ ಪ್ರಾಜೆಕ್ಟ್ ಪಾಕಿಸ್ತಾನ ಕೈಗೊಳ್ಳುತ್ತಿರುವ ಜಲ ವಿದ್ಯುತ್ ಯೋಜನೆ ಇದಾಗಿದ್ದು, ಈ ದಾಳಿಯಿಂದ ಯೋಜನೆಗೆ ಹಾನಿಯಾಗಿದೆ ಎಂದು ಪಾಕ್ ಮಾಧ್ಯಮಗಳು ವರದಿಯನ್ನು ಮಾಡಿದೆ.

    ಉಗ್ರರ ವಿರುದ್ಧದ ಕಾರ್ಯಾಚರಣೆಗೆ ಸತತ 1 ವಾರಗಳ ಕಾಲ ಸಿದ್ಧತೆ ನಡೆಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು ಕಾಶ್ಮೀರಕ್ಕೆ ಹೆಚ್ಚುವರಿ ಸೈನ್ಯವನ್ನು ರವಾನೆ ಮಾಡಲಾಗಿತ್ತು. ಆದರೆ ಈ ದಾಳಿ ಬಗ್ಗೆ ಭಾರತ ಸೇನೆ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಈ ಮೂಲಕ ಭಾರತೀಯ ಸೇನೆ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದೆ. ಈ ದಾಳಿಯ ಹಿನ್ನೆಲೆಯೇ ಅಮರನಾಥ ಯಾತ್ರೆಗೆ ತೆರಳಿದ್ದ ಭಕ್ತರಿಗೆ ತಡೆ ನೀಡಿ ವಾಪಸ್ ಕಳುಹಿಸಲಾಗಿತ್ತು. ಈ ದಾಳಿಯಿಂದ ಮುಂದೇ ಬರಬಹುದಾದ ಸವಾಲುಗಳನ್ನ ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

  • ಪಾಕ್ ದುಷ್ಕೃತ್ಯಕ್ಕೆ ಶಿಕ್ಷೆಯ ಮೂಲಕವೇ ಉತ್ತರ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

    ಪಾಕ್ ದುಷ್ಕೃತ್ಯಕ್ಕೆ ಶಿಕ್ಷೆಯ ಮೂಲಕವೇ ಉತ್ತರ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

    ನವದೆಹಲಿ: ಪಾಕಿಸ್ತಾನ ಸೇನೆ ಯಾವುದೇ ರೀತಿಯ ದುಷ್ಕೃತ್ಯ ನಡೆಸಿದಲ್ಲಿ ತಕ್ಕ ಶಿಕ್ಷೆ ನೀಡುವ ಮೂಲಕವೇ ಪ್ರತ್ಯುತ್ತರ ನೀಡಲಾಗುವುದು. ಭಯೋತ್ಪಾದನೆಯ ವಿರುದ್ಧದ ಹೋರಾಟದಿಂದ ಯಾವುದೇ ರೀತಿಯ ನಷ್ಟವಾಗುವುದಿಲ್ಲ ಎಂದು ಭಾರತೀಯ ಸೇನೆ ಮುಖ್ಯಸ್ಥ ಬಿಪಿನ್ ರಾವತ್ ಎಚ್ಚರಿಸಿದ್ದಾರೆ.

    ಕಾರ್ಗಿಲ್ ಯುದ್ಧದ 20ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಸೇನೆ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದು, ಒಳ ನುಸುಳುವಿಕೆಗೆ ಅವಕಾಶ ನೀಡುವ ಕುರಿತು ಆಲೋಚಿಸುತಿದ್ದು, ಇದಕ್ಕೆ ಭಾರತ ತಕ್ಕ ಉತ್ತರ ನೀಡಲಿದೆ. ಭಯೋತ್ಪಾದಕರಿಗೆ ಶಿಕ್ಷೆ ನೀಡಿದರೆ, ಯಾವುದೇ ನಷ್ಟವಿಲ್ಲ ಹಾಗೂ ಯಾವುದೇ ದೇಶ ವಿರೋಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

    ನಮ್ಮ ಸೇನೆ ಶಸ್ತ್ರ ಸಜ್ಜಿತವಾಗಿ ನಮ್ಮ ಗಡಿ ರಕ್ಷಿಸಲು ಸನ್ನದ್ಧವಾಗಿದೆ. ಎದುರೇಟು ಹಾಗೂ ಶಿಕ್ಷೆಯ ಮೂಲಕ ಪ್ರತಿಕ್ರಿಯೆ ನೀಡಿ ದುಷ್ಕೃತ್ಯಗಳನ್ನು ಹತ್ತಿಕ್ಕುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

    ವಿದೇಶಿಗರ ಆಕ್ರಮಣ ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡುವ ವಿಧಾನಗಳು ಬದಲಾಗಿವೆ. ಹೊಸ ವಿಧಾನಗಳನ್ನು ಅನುಸರಿಸಬೇಕಿದೆ. ಅಲ್ಲದೆ, ಸೈಬರ್ ಹಾಗೂ ಬಾಹ್ಯಾಕಾಶ ಕ್ಷೇತ್ರಗಳು ಇದೀಗ ಯುದ್ಧದ ಹೊಸ ರಣಾಂಗಣಗಳಾಗಿ ಮಾರ್ಪಟ್ಟಿದ್ದು, ಈ ಬಗ್ಗೆಯು ಅಧುನಿಕ ತಂತ್ರಜ್ಞಾನಗಳ ಮೂಲಕ ನಿಗಾ ವಹಿಸಬೇಕಿದೆ ಎಂದು ಬಿಪಿನ್ ರಾವತ್ ಅಭಿಪ್ರಾಯಪಟ್ಟಿದ್ದಾರೆ.

    ಯಾವುದೇ ಭಯೋತ್ಪಾದಕ ಕೃತ್ಯದ ವಿರುದ್ಧದ ಹೋರಾಟಕ್ಕೆ ಶಿಕ್ಷೆಯಾಗುವುದಿಲ್ಲ. ಉರಿ ಮತ್ತು ಬಾಲಾಕೋಟ್‍ನಂತಹ ಸರ್ಜಿಕಲ್ ಸ್ಟ್ರೈಕ್‍ಗಳ ಮೂಲಕ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದ ಜಯವೇ ರಾಜಕೀಯ ಮತ್ತು ಸೈನ್ಯದ ಸಂಕಲ್ಪಕ್ಕೆ ಸಾಕ್ಷಿ ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ.

  • 2016ಕ್ಕೂ ಮುನ್ನ ಯಾವುದೇ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ – ಭಾರತೀಯ ಸೇನೆ

    2016ಕ್ಕೂ ಮುನ್ನ ಯಾವುದೇ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ – ಭಾರತೀಯ ಸೇನೆ

    ನವದೆಹಲಿ: 2016ರ ಸೆಪ್ಟೆಂಬರ್‍ನಲ್ಲಿ ಉರಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್‍ನ್ನು ಬಿಟ್ಟರೆ ಅದಕ್ಕೂ ಮುನ್ನ ಯಾವುದೇ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ ಎಂದು ಭಾರತೀಯ ಸೇನೆ ಹೇಳಿದೆ.

    2016 ಕ್ಕೂ ಮುನ್ನ ಯಾವುದೇ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ. 2016ರ ಸೆಪ್ಟೆಂಬರ್ ನಲ್ಲಿ ಮೊದಲ ಸರ್ಜಿಕಲ್ ಸ್ಟ್ರೈಕ್ ನಡೆದಿದೆ ಎಂದು ಭಾರತೀಯ ಸೇನೆಯ ಉತ್ತರ ಕಮಾಂಡಿನ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

    ಸುದ್ದಿಗೋಷ್ಠಿ ವೇಳೆ ಮಾಧ್ಯಮಗಳು ಯುಪಿಎ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿದ್ಯಾ ಎನ್ನುವ ಪ್ರಶ್ನೆ ಕೇಳಿದ್ದಕ್ಕೆ ಅವರು, ಕೆಲ ದಿನಗಳ ಹಿಂದೆ ಮಾಹಿತಿ ಹಕ್ಕು ಕಾಯಿದೆ (ಆರ್ ಟಿ ಐ) ಅಡಿಯಲ್ಲಿ ಬಂದ ಅರ್ಜಿಯೊಂದಕ್ಕೆ ಡೈರೆಕ್ಟರ್ ಆಫ್ ಜನರಲ್ ಮಿಲಿಟರಿ ಆಪರೇಷನ್ (ಡಿಜಿಎಂಒ) ಈ ಪ್ರಶ್ನೆಗೆ ಉತ್ತರ ನೀಡಿದೆ. ರಾಜಕೀಯ ಪಕ್ಷಗಳು ಏನು ಹೇಳಿದೆಯೋ ಅದು ನನಗೆ ಸಂಬಂಧಿಸಿದ ವಿಚಾರವಲ್ಲ. ಡಿಜಿಎಂಒ ಏನು ಉತ್ತರ ನೀಡಿದೆಯೋ ಅದನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದರು.

    ಜಮ್ಮು- ಕಾಶ್ಮೀರದ ಮಾಹಿತಿ ಹಕ್ಕು ಕಾರ್ಯಕರ್ತ ರೋಹಿತ್ ಚೌಧರಿ ಯುಪಿಎ ಆಡಳಿದ ಅವಧಿಯಲ್ಲಿ(2004 ರಿಂದ 2014) ಗಡಿ ದಾಟಿ ಉಗ್ರರ ಮೇಲೆ ಸರ್ಜಿಕಲ್ ದಾಳಿ ನಡೆಸಲಾಗಿತ್ತೆ? ದಾಳಿ ನಡೆದಿದ್ದರೆ ಈ ಬಗ್ಗೆ ಮಾಹಿತಿ ನೀಡಿ ಎಂದು ಕೇಳಿದ್ದರು. ಈ ಪ್ರಶ್ನೆಗೆ ಡಿಜಿಎಂಒ ಲಭ್ಯವಿರುವ ದಾಖಲೆಗಳ ಪ್ರಕಾರ 2016ರ ಸೆ.29ಕ್ಕೂ ಮೊದಲು ಸರ್ಜಿಕಲ್ ದಾಳಿ ನಡೆದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಉತ್ತರಿಸಿತ್ತು.

    ಮೇ 2 ರಂದು ಕಾಂಗ್ರೆಸ್ ಸಂಸದ ರಾಜೀವ್ ಶುಕ್ಲಾ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆಸಿದ 6 ಸರ್ಜಿಕಲ್ ಸ್ಟ್ರೈಕ್ ನಡೆದಿದೆ. ಈ ಮೂಲಕ ನಮ್ಮ ಸರ್ಕಾರದ ಕಾಲದಲ್ಲೂ ಉಗ್ರರ ಮರಣಹೋಮ ಮಾಡಿದ್ದೇವೆ. ಈ ದಾಳಿಯನ್ನು ನಾವು ರಾಜಕೀಯವಾಗಿ ಪ್ರಚಾರಕ್ಕೆ ಬಳಸಿಕೊಂಡಿಲ್ಲ. ಅದರೆ ಮೋದಿ ಅವರ ಸರ್ಕಾರವು ಸೈನ್ಯದ ಶೌರ್ಯವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡಿದೆ ಎಂದು ದೂರಿದ್ದರು.

    2008 ರಿಂದ 2014ರ ವರೆಗೆ ನಡೆದಿರುವ 6 ಸರ್ಜಿಕಲ್ ಸ್ಟ್ರೈಕ್‍ಗಳ ವಿವರಗಳನ್ನು ಚಿತ್ರಗಳ ಸಮೇತ ಮಾಧ್ಯಮಗಳ ಮುಂದೆ ರಾಜೀವ್ ಶುಕ್ಲಾ ಬಿಡುಗಡೆ ಮಾಡಿದ್ದರು.

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪ್ರತಿಕ್ರಿಯಿಸಿ, ಮೋದಿ ದೇಶದಲ್ಲಿ ಆಗಿರುವ ಆರ್ಥಿಕ ಹಿನ್ನಡೆಯನ್ನು ಮರೆಮಾಚಲು ಸೇನೆಯ ಶೌರ್ಯದ ಕಾರ್ಯಗಳ ಬಗ್ಗೆ ಭಾಷಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದರು.

    ಜಮ್ಮು ಕಾಶ್ಮೀರದಲ್ಲಿರುವ ಉರಿ ಸೇನಾ ನೆಲೆಯ ಮೇಲಿನ ಉಗ್ರರ ದಾಳಿ ವೇಳೆ 19 ಯೋಧರು ಹುತಾತ್ಮರಾಗಿದ್ದರು. ಈ ದಾಳಿಗೆ ಪ್ರತೀಕಾರ ಎಂಬಂತೆ ಭಾರತೀಯ ಸೇನೆ ಸೆ.29 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳನ್ನು ಧ್ವಂಸ ಮಾಡಿ ಬಂದಿತ್ತು.

  • ಕಾಂಗ್ರೆಸ್ ಅವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾಹಿತಿಯಿಲ್ಲ – ರಕ್ಷಣಾ ಸಚಿವಾಲಯ

    ಕಾಂಗ್ರೆಸ್ ಅವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾಹಿತಿಯಿಲ್ಲ – ರಕ್ಷಣಾ ಸಚಿವಾಲಯ

    ನವದೆಹಲಿ: ಕಾಂಗ್ರೆಸ್ ಅವಧಿಯಲ್ಲಿ ನಡೆದಿರುವ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಯಾವುದೇ ಸುಳಿವುಗಳು ನಮಗೆ ದೊರೆತಿಲ್ಲ ಎಂದು ಭಾರತದ ರಕ್ಷಣಾ ಸಚಿವಾಲಯ (ಎಂ.ಒ.ಡಿ) ಸ್ಪಷ್ಟಪಡಿಸಿದೆ.

    ಕಾಶ್ಮೀರ ಮೂಲದ ರೋಹಿತ್ ಚೌಧರಿ ಎಂಬವರು ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.) ಯ ಆಡಿಯಲ್ಲಿ 2004 ರಿಂದ 2014ರ ವರೆಗೆ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾಹಿತಿ ನೀಡಬೇಕು ಎಂದು ರಕ್ಷಣಾ ಸಚಿವಾಯಲಕ್ಕೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಇಂದು ಉತ್ತರಿಸಿರುವ ಸಚಿವಾಲಯ, 2004 ರಿಂದ 2014ರ ವರೆಗೆ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನಮಗೆ ಯಾವುದೇ ಮಾಹಿತಿಗಳು ಲಭ್ಯವಿಲ್ಲ ಎಂದು ಹೇಳಿದೆ.

    2016 ಸೆಪ್ಟಂಬರ್ 29 ರಂದು ಉತ್ತರ ಕಾಶ್ಮೀರದ ಉರಿಯಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಿಟ್ಟರೆ ನಮಗೆ 2004 ರಿಂದ 2014ರ ಅವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಯಾವ ರೀತಿಯ ಮಾಹಿತಿಗಳೂ ಸಿಕಿಲ್ಲ ಎಂದು ಹೇಳಿದೆ. ಈ ಬಗ್ಗೆ ಮಾತನಾಡಿರುವ ರೋಹಿತ್ ಚೌಧರಿ, ಕಾಂಗ್ರೆಸ್ ನಾಯಕರು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಯುಪಿಎ ಆಡಳಿತದ ಅವಧಿಯಲ್ಲಿ ಯಾವುದೇ ಸರ್ಜಿಕಲ್ ಸ್ಟ್ರೈಕ್ ಆಗಿಲ್ಲ ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಇತ್ತೀಚೆಗೆ ತಮ್ಮ ಆಡಳಿತದ ಅವಧಿಯಲ್ಲಾದ 6 ಸರ್ಜಿಕಲ್ ಸ್ಟ್ರೈಕ್‍ಗಳ ಬಗ್ಗೆ ಚಿತ್ರಗಳ ಸಮೇತ ವಿವರಗಳನ್ನು ಬಿಡುಗಡೆ ಮಾಡಿತ್ತು. ನಮ್ಮ ಅವಧಿಯಲ್ಲೂ ಸರ್ಜಿಕಲ್ ಸ್ಟ್ರೈಕ್‍ಗಳು ನಡೆದಿವೆ. ಆದರೆ ನಾವು ಅದನ್ನು ಪ್ರಚಾರಕ್ಕೆ ಬಳಸಿಕೊಂಡಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ಅವರಿಗೆ ಟಾಂಗ್ ನೀಡಿದ್ದರು.

    ಇದಕ್ಕೆ ಪ್ರತಿಕ್ರಿಸಿದ ಮೋದಿ ಸಮಾವೇಶವೊಂದರಲ್ಲಿ ಕಾಂಗ್ರೆಸ್‍ನವರು ಕಾಗದ ಚೂರು ಮತ್ತು ವಿಡಿಯೋ ಗೇಮ್‍ಗಳಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡಬಲ್ಲರು ಎಂದು ಕುಟುಕಿದ್ದರು. ಇದನ್ನು ಓದಿ: ಕಾಂಗ್ರೆಸ್ ಪೇಪರ್‌ನಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡಿ ಮೀಟೂ ಅಂತ ಹೇಳ್ತಿದೆ: ಮೋದಿ

  • 2016ರ ಸರ್ಜಿಕಲ್ ಸ್ಟ್ರೈಕ್ ಕಾಂಗ್ರೆಸ್ ಹೇಳಿದ 6 ದಾಳಿಗಿಂತ ಭಿನ್ನ ಹೇಗೆ?

    2016ರ ಸರ್ಜಿಕಲ್ ಸ್ಟ್ರೈಕ್ ಕಾಂಗ್ರೆಸ್ ಹೇಳಿದ 6 ದಾಳಿಗಿಂತ ಭಿನ್ನ ಹೇಗೆ?

    ನವದೆಹಲಿ: 2016ರಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಅನ್ನು ಈ ಹಿಂದೆ ಸೇನೆ ನಡೆಸಿದ ಯಾವುದೇ ಕಾರ್ಯಾಚರಣೆಗೆ ಹೋಲಿಸಲು ಸಾಧ್ಯವಿಲ್ಲ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಗಡಿ ನಿಯಂತ್ರಣ ರೇಖೆಯನ್ನು ದಾಟುವ ಪ್ರಕ್ರಿಯೆ ಸಾಮಾನ್ಯವಾಗಿ ನಡೆಯುತ್ತಲೇ ಇರುತ್ತದೆ. ಈ ಕುರಿತು ಅಷ್ಟಾಗಿ ವರದಿಯಾಗುವುದಿಲ್ಲ. ಅಂತಹ ದಾಳಿಗಳು ಬೆಟಾಲಿಯನ್, ದಳ ಅಥವಾ ವಿಭಾಗೀಯ ಮಟ್ಟದಲ್ಲಿ ನಡೆಯುತ್ತವೆ. ಆದರೆ 2016ರಲ್ಲಿ ನಡೆದ ನಿರ್ಧಿಷ್ಟ ದಾಳಿಯ ಯೋಜನೆ ದೊಡ್ಡ ಮಟ್ಟದಲ್ಲಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

    ಸೇನಾ ಮುಖ್ಯಸ್ಥರು ಮತ್ತು ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿಗಳು ಒಟ್ಟಾಗಿ 2016ರ ಸರ್ಜಿಕಲ್ ಸ್ಟ್ರೈಕ್ ಯೋಜನೆ ರೂಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸರ್ಜಿಕಲ್ ಸ್ಟ್ರೈಕ್ ನೇತೃತ್ವವನ್ನು ವಹಿಸಿದ್ದ ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ ಪ್ರತಿಕ್ರಿಯಿಸಿ, ಈ ಹಿಂದೆ ಗಡಿ ನಿಯಂತ್ರಣ ರೇಖೆಯನ್ನು ದಾಟುವುದು ಸೇನೆಯಲ್ಲಿ ಸಾಮಾನ್ಯವಾಗಿರುತ್ತದೆ. ಆದರೆ 2016ರ ನಿರ್ಧಿಷ್ಟ ದಾಳಿಯ ಮಹತ್ವದ ನಿರ್ಧಾರವನ್ನು ರಾಜಕೀಯ ನಾಯಕರು ಕೈಗೊಂಡಿದ್ದರು. ಈ ದಾಳಿ ಈ ಹಿಂದೆ ನಡೆದ ದಾಳಿಗಿಂತ ಭಿನ್ನವಾಗಿದೆ ಎಂದು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

    ಕಾಂಗ್ರೆಸ್ ರಾಷ್ಟ್ರೀಯ ಭದ್ರತಾ ಕಾರ್ಯಪಡೆಯ ನೇತೃತ್ವವನ್ನು ಡಿಎಸ್ ಹೂಡಾ ವಹಿಸಿಕೊಂಡಿದ್ದು, ಈ ಸಂಬಂಧ ತಮ್ಮ ವರದಿಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೀಡಿತ್ತು.

    ಕಾಂಗ್ರೆಸ್ ಹೇಳಿದ್ದೇನು?:
    ಸುದ್ದಿಗೋಷ್ಠಿ ನಡೆಸಿ ಗುರುವಾರ ಮಾತನಾಡಿದ್ದ ಕಾಂಗ್ರೆಸ್ ಸಂಸದ ರಾಜೀವ್ ಶುಕ್ಲಾ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆಸಿದ 6 ಸರ್ಜಿಕಲ್ ಸ್ಟ್ರೈಕ್ ನಡೆದಿದೆ. ಈ ಮೂಲಕ ನಮ್ಮ ಸರ್ಕಾರದ ಕಾಲದಲ್ಲೂ ಉಗ್ರರ ಮಾರಣಹೋಮ ಮಾಡಿದ್ದೇವೆ ಎಂದು ಹೇಳಿದ್ದರು.

    ನಮ್ಮ ಪಕ್ಷದ ಆಧಿಕಾರದ ಅವಧಿಯಲ್ಲೂ ಸರ್ಜಿಕಲ್ ಸ್ಟ್ರೈಕ್ ಆಗಿವೆ ಅದರೆ ನಾವು ಅದನ್ನು ರಾಜಕೀಯವಾಗಿ ಪ್ರಚಾರಕ್ಕೆ ಬಳಸಿಕೊಂಡಿಲ್ಲ. ಆದರೆ ಪ್ರಧಾನಿ ಮೋದಿ ಅವರ ಸರ್ಕಾರವು ಸೈನ್ಯದ ಶೌರ್ಯವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡಿದೆ ಎಂದು ದೂರಿದ್ದರು. 2008 ರಿಂದ 2014ರ ವರೆಗೆ ನಡೆದಿರುವ 6 ಸರ್ಜಿಕಲ್ ಸ್ಟ್ರೈಕ್‍ಗಳ ವಿವರಗಳನ್ನು ಚಿತ್ರಗಳ ಸಮೇತ ಮಾಧ್ಯಮಗಳ ಮುಂದೆ ರಾಜೀವ್ ಶುಕ್ಲಾ ಬಿಡುಗಡೆ ಮಾಡಿದ್ದರು.

    ಈ ಹಿಂದೆ ವ್ಯಕ್ತಿಯೊಬ್ಬರು ಡೈರೆಕ್ಟರ್ ಜನರಲ್ ಆಫ್ ಮಿಲಿಟರಿ ಆಪರೇಷನ್(ಡಿಜಿಎಂಒ)ಗೆ ಮಾಹಿತಿ ಹಕ್ಕಿನ ಅಡಿ ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿರುವ ಬಗ್ಗೆ ಮಾಹಿತಿ ಕೊಡಿ ಎಂದು ಕೇಳಿಕೊಂಡಿದ್ದರು. ಈ ಪ್ರಶ್ನೆಗೆ ಡಿಜಿಎಂಒ, ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿದೆ ಎನ್ನುವುದಕ್ಕೆ ನಮ್ಮ ವಿಭಾಗದಲ್ಲಿ ಯಾವುದೇ ದಾಖಲೆಗಳು ಇಲ್ಲ ಎಂದು ಉತ್ತರ ನೀಡಿತ್ತು.

    2016ರ ಸೆಪ್ಟೆಂಬರ್ 29 ರಂದು ಡಿಜಿಎಂಒ ಸುದ್ದಿಗೋಷ್ಠಿ ನಡೆಸಿ ಭಾರತದ ಸೇನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಜಿಕಲ್ ಸ್ಟ್ರೈಕ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಆಧಾರವಾಗಿರಿಸಿ ವ್ಯಕ್ತಿಯೊಬ್ಬರು ಮಾಹಿತಿ ಹಕ್ಕಿನ ಅಡಿ ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿರುವ ಬಗ್ಗೆ ಮಾಹಿತಿ ನೀಡಿ ಎಂದು ಕೇಳಿದ್ದರು.

  • ಕಾಂಗ್ರೆಸ್ ಪೇಪರ್‌ನಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡಿ ಮೀಟೂ ಅಂತ ಹೇಳ್ತಿದೆ: ಮೋದಿ

    ಕಾಂಗ್ರೆಸ್ ಪೇಪರ್‌ನಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡಿ ಮೀಟೂ ಅಂತ ಹೇಳ್ತಿದೆ: ಮೋದಿ

    ಜೈಪುರ: ಕಾಂಗ್ರೆಸ್ ಕಾಗದ ಚೂರು ಮತ್ತು ವಿಡಿಯೋ ಗೇಮ್‍ನಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡುತ್ತದೆ ಎಂದು ಪ್ರಧಾನಿ ಮೋದಿ ಅವರು ಯುಪಿಎ ನಾಯಕರನ್ನು ಲೇವಡಿ ಮಾಡಿದ್ದಾರೆ.

    ಕಾಂಗ್ರೆಸ್ ನಮ್ಮ ಅಧಿಕಾರದ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವೆ ಎಂದು ಪಟ್ಟಿ ಬಿಡುಗಡೆ ಮಾಡಿದ ವಿಚಾರಕ್ಕೆ ರಾಜಸ್ಥಾನದ ಸಿಕಾರ್ ಲೋಕಸಭಾ ಕ್ಷೇತ್ರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮೋದಿ ತಿರುಗೇಟು ನೀಡಿದರು.

    ಕಾಗದ ಚೂರು ಮತ್ತು ವಿಡಿಯೋ ಗೇಮ್‍ನಲ್ಲಿ 6 ಅಲ್ಲ 25 ಸರ್ಜಿಕಲ್ ಸ್ಟ್ರೈಕ್ ಮಾಡಿದರೆ ಏನೂ ಪ್ರಯೋಜನ? ಕಾಂಗ್ರೆಸ್ ಮಾಡಿದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನನಗೆ ಅನುಮಾನವಿದೆ. ಯಾರಿಗೂ ಗೊತ್ತಾಗದ ರೀತಿಯಲ್ಲಿ ದಾಳಿ ನಡೆಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

    ಕಾಂಗ್ರೆಸ್ ನಾಯಕರು 2016ರ ಮೊದಲ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅಪಹಾಸ್ಯ ಮಾಡಿದರು. ನಂತರ ಅದರ ವಿರುದ್ಧ ಪ್ರತಿಭಟನೆ ಮಾಡಿದರು. ಈಗ ನೋಡಿದರೆ ನಮ್ಮ ಕಾಲದಲ್ಲೂ ಸರ್ಜಿಕಲ್ ಸ್ಟ್ರೈಕ್ ಮಾಡಿ ಮೀಟೂ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ರಿಮೋಟ್ ಕಂಟ್ರೋಲ್ ಆಡಳಿತದಲ್ಲಿ ಯಾವುದಾದರೂ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪತ್ರಿಕೆಯಲ್ಲಿ ಓದಿದ್ದೀರಾ? ಕಾಂಗ್ರೆಸ್ ಅವರು ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ಪಾಕಿಸ್ತಾನದವರಿಗೂ ತಿಳಿದಿರಲಿಲ್ಲವೇ? ಭಾರತೀಯರಿಗೂ ತಿಳಿಯದ ಹಾಗೆ ಸರ್ಜಿಕಲ್ ಸ್ಟ್ರೈಕ್ ಮಾಡಲು ಸಾಧ್ಯವೇ? ನನ್ನ ಮೇಲೆ ಜನರು ಇಟ್ಟಿರುವ ಪ್ರೀತಿ ಮತ್ತು ನಂಬಿಕೆ ನೋಡಿ ನಮಗೂ ಸ್ವಲ್ಪ ಆ ಪ್ರೀತಿ ತೋರಿಸಲಿ ಎನ್ನುವ ಕಾರಣಕ್ಕೆ ಚುನಾವಣೆಯ ಸಮಯದಲ್ಲಿ ಸರ್ಜಿಕಲ್ ಸ್ಟ್ರೈಕ್‍ನ ಪ್ರಸ್ತಾಪ ಮಾಡಿದ್ದಾರೆ ಎಂದರು.

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ನಮ್ಮ ಅಧಿಕಾರದ ಅವಧಿಯಲ್ಲೂ ಹಲವಾರು ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವೆ ಅದರೆ ನಾವು ಅದನ್ನು ಪ್ರಚಾರಕ್ಕೆ ಬಳಸಿಕೊಂಡಿಲ್ಲ ಎಂದು ಹೇಳಿದ್ದರು.

    ಗುರುವಾರ ಕಾಂಗ್ರೆಸ್ ತಮ್ಮ ಅಧಿಕಾರದ ಅವಧಿಯಲ್ಲಿ 2008 ರಿಂದ 2014 ರ ವರೆಗೆ ನಡೆದ 6 ಸರ್ಜಿಕಲ್ ಸ್ಟ್ರೈಕ್‍ಗಳ ವಿವರಗಳನ್ನು ಚಿತ್ರ ಸಮೇತ ಬಿಡುಗಡೆ ಮಾಡಿತ್ತು. ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಸುದ್ದಿ ಗೋಷ್ಠಿ ನಡೆಸಿ ನಮ್ಮ ಅವಧಿಯಲ್ಲೂ ಅನೇಕ ಸರ್ಜಿಕಲ್ ಸ್ಟ್ರೈಕ್‍ಗಳು ನಡೆದಿವೆ. ಅದರೆ ನಾವು ಅದನ್ನು ಪ್ರಚಾರಕ್ಕೆಂದು ಬಳಸಿಕೊಂಡಿಲ್ಲ ಎಂದು ಹೇಳಿದ್ದರು.

  • ನಮ್ಮ ಅವಧಿಯಲ್ಲೂ 6 ಸರ್ಜಿಕಲ್ ಸ್ಟ್ರೈಕ್ ನಡೆದಿದೆ – ಕಾಂಗ್ರೆಸ್ಸಿನಿಂದ ಪಟ್ಟಿ ಬಿಡುಗಡೆ

    ನಮ್ಮ ಅವಧಿಯಲ್ಲೂ 6 ಸರ್ಜಿಕಲ್ ಸ್ಟ್ರೈಕ್ ನಡೆದಿದೆ – ಕಾಂಗ್ರೆಸ್ಸಿನಿಂದ ಪಟ್ಟಿ ಬಿಡುಗಡೆ

    ನವದೆಹಲಿ: ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದನ್ನು ಚುನಾವಣಾ ಪ್ರಚಾರದಲ್ಲಿ ಬಳಸುತ್ತಿರುವ ಬಿಜೆಪಿಗೆ ತಿರುಗೇಟು ಎನ್ನುವಂತೆ ಯುಪಿಎ ತನ್ನ ಅವಧಿಯಲ್ಲಿ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಮಾಹಿತಿಯನ್ನು ಪ್ರಕಟಮಾಡಿದೆ.

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆಸಿದ 6 ಸರ್ಜಿಕಲ್ ಸ್ಟ್ರೈಕ್ ನಡೆದಿದೆ. ಈ ಮೂಲಕ ನಮ್ಮ ಸರ್ಕಾರದ ಕಾಲದಲ್ಲೂ ಉಗ್ರರ ಮರಣಹೋಮ ಮಾಡಿದ್ದೇವೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

    ಇದೇ ವೇಳೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಜೀವ್ ಶುಕ್ಲಾ, ನಮ್ಮ ಪಕ್ಷದ ಆಧಿಕಾರದ ಅವಧಿಯಲ್ಲೂ ಸರ್ಜಿಕಲ್ ಸ್ಟ್ರೈಕ್ ಆಗಿವೆ ಅದರೆ ನಾವು ಅದನ್ನು ರಾಜಕೀಯವಾಗಿ ಪ್ರಚಾರಕ್ಕೆ ಬಳಸಿಕೊಂಡಿಲ್ಲ. ಅದರೆ ಮೋದಿ ಅವರ ಸರ್ಕಾರವು ಸೈನ್ಯದ ಶೌರ್ಯವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡಿದೆ ಎಂದು ದೂರಿದರು.

    2008 ರಿಂದ 2014ರ ವರೆಗೆ ನಡೆದಿರುವ 6 ಸರ್ಜಿಕಲ್ ಸ್ಟ್ರೈಕ್‍ಗಳ ವಿವರಗಳನ್ನು ಚಿತ್ರಗಳ ಸಮೇತ ಇವತ್ತು ಮಾಧ್ಯಮಗಳ ಮುಂದೆ ರಾಜೀವ್ ಶುಕ್ಲಾ ಬಿಡುಗಡೆ ಮಾಡಿದರು.

    ಈ ವಿಚಾರದ ಬಗ್ಗೆ ಹೇಳಿಕೆ ನೀಡಿರುವ ಮನಮೋಹನ್ ಸಿಂಗ್ ಅವರು, ಮೋದಿ ದೇಶದಲ್ಲಿ ಆಗಿರುವ ಆರ್ಥಿಕ ಹಿನ್ನಡೆಯನ್ನು ಮರೆಮಾಚಲು ಸೇನೆಯ ಶೌರ್ಯದ ಕಾರ್ಯಗಳ ಬಗ್ಗೆ ಭಾಷಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

    ಯಾವಾಗ ಎಲ್ಲಿ?
    1. 2008 ಜೂನ್ 19 ರಂದು ಪಾಕಿಸ್ತಾನದ ಪೂಂಚ್ ಪ್ರದೇಶ
    2. 2008 ಆಗಸ್ಟ್ 30 ರಿಂದ ಸೆಪ್ಟೆಂಬರ್ 1ರವರೆಗೆ ಪಾಕ್ ಆಕ್ರಮಿತ ಶಾರದಾ ಸೆಕ್ಟರಿನ ನೀಲಂ ನದಿ ಕಣಿವ ಎ
    3. 2013 ಜನವರಿ 6 ರಂದು ಸಾವನ್ ಪಾತ್ರಾ ಚೆಕ್ ಪೋಸ್ಟ್
    4. 2013 ಜುಲೈ 27 ಮತ್ತು 28 ರಂದು ನಾಜಪುರ್ ಕಣಿವೆ ಪ್ರದೇಶ
    5. 2013 ಆಗಸ್ಟ್ 6 ರಂದು ನೀಲಮ್ ನದಿ ಕಣಿವೆಯಲ್ಲಿ
    6. 2014 ಜನವರಿ 14 ರಂದು ನೀಲಮ್ ನದಿ ಕಣಿವೆ

    2016ರ ಸರ್ಜಿಕಲ್ ಸ್ಟ್ರೈಕ್ ಬಳಿಕ ಕಾಂಗ್ರೆಸ್ ತನ್ನ ಅವಧಿಯಲ್ಲಿ ಸರ್ಜಿಕಲ್ ದಾಳಿ ನಡೆಸಿದೆ ಎಂದು ಹೇಳಿಕೊಂಡಿತ್ತು. ಈ ಸಂಬಂಧ ವ್ಯಕ್ತಿಯೊಬ್ಬರು ಡೈರೆಕ್ಟರ್ ಜನರಲ್ ಆಫ್ ಮಿಲಿಟರಿ ಆಪರೇಷನ್(ಡಿಜಿಎಂಒ)ಗೆ ಮಾಹಿತಿ ಹಕ್ಕಿನ ಅಡಿ ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿರುವ ಬಗ್ಗೆ ಮಾಹಿತಿ ಕೊಡಿ ಎಂದು ಕೇಳಿಕೊಂಡಿದ್ದರು.

    ಈ ಪ್ರಶ್ನೆಗೆ ಡಿಜಿಎಂಒ, ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿದೆ ಎನ್ನುವುದಕ್ಕೆ ನಮ್ಮ ವಿಭಾಗದಲ್ಲಿ ಯಾವುದೇ ದಾಖಲೆಗಳು ಇಲ್ಲ ಎಂದು ಉತ್ತರ ನೀಡಿತ್ತು.

    2016ರ ಸೆಪ್ಟೆಂಬರ್ 29 ರಂದು ಡಿಜಿಎಂಒ ಸುದ್ದಿಗೋಷ್ಠಿ ನಡೆಸಿ ಭಾರತದ ಸೇನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಜಿಕಲ್ ಸ್ಟ್ರೈಕ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಆಧಾರವಾಗಿರಿಸಿ ವ್ಯಕ್ತಿಯೊಬ್ಬರು ಮಾಹಿತಿ ಹಕ್ಕಿನ ಅಡಿ ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿರುವ ಬಗ್ಗೆ ಮಾಹಿತಿ ನೀಡಿ ಎಂದು ಕೇಳಿದ್ದರು.

  • ರಾವಣನ ಲಂಕೆಯಲ್ಲಿ ಬುರ್ಕಾ ನಿಷೇಧವಾದ್ರೆ ರಾಮನ ಅಯೋಧ್ಯೆಯಲ್ಲಿ ಯಾಕೆ ನಿಷೇಧಿಸಬಾರದು: ಶಿವಸೇನೆ

    ರಾವಣನ ಲಂಕೆಯಲ್ಲಿ ಬುರ್ಕಾ ನಿಷೇಧವಾದ್ರೆ ರಾಮನ ಅಯೋಧ್ಯೆಯಲ್ಲಿ ಯಾಕೆ ನಿಷೇಧಿಸಬಾರದು: ಶಿವಸೇನೆ

    ಮುಂಬೈ: ಶ್ರೀಲಂಕಾದಲ್ಲಿ ನಿಷೇಧಗೊಂಡಂತೆ ಭಾರತದಲ್ಲೂ ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕ ಸ್ಥಳದಲ್ಲಿ ಬುರ್ಕಾವನ್ನು ನಿಷೇಧಿಸಬೇಕೆಂದು ಮಹಾರಾಷ್ಟ್ರದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾದ ಶಿವಸೇನೆ ಆಗ್ರಹಿಸಿದೆ.

    ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದ ಸಂಪಾದಕೀಯದಲ್ಲಿ, ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರು ತಮ್ಮ ದೇಶದಲ್ಲಿ ಬುರ್ಕಾವನ್ನು ನಿಷೇಧ ಮಾಡಿದ್ದಾರೆ. ಅದೇ ರೀತಿಯಲ್ಲಿ ಭಾರತದಲ್ಲೂ ಬುರ್ಕಾವನ್ನು ನಿಷೇಧಿಸಬೇಕೆಂದು ಆಗ್ರಹಿಸಿದೆ.

    ಪ್ರಧಾನಿ ಮೋದಿ ಅವರು ಶ್ರೀಲಂಕಾದ ನಡೆಯನ್ನು ಅನುಸರಿಸಬೇಕು. ರಾವಣನ ಲಂಕೆಯಲ್ಲಿ ಬುರ್ಕಾ ನಿಷೇಧವಾದರೆ ರಾಮನ ಅಯೋಧ್ಯೆಯಲ್ಲಿ ಯಾಕೆ ನಿಷೇಧಿಸಬಾರದು ಎಂದು ಶಿವಸೇನೆ ಪ್ರಶ್ನಿಸಿದೆ.

    ಬುರ್ಕಾ ಧರಿಸುವುದರಿಂದ ಉಗ್ರರು ತಮ್ಮ ಮುಖ ಮುಚ್ಚಿಕೊಂಡು ಸುಲಭವಾಗಿ ತಪ್ಪಿಸಿಕೊಳ್ಳುತ್ತಾರೆ. ಈ ರೀತಿಯ ಸಂಪೂರ್ಣ ಮುಖ ಮುಚ್ಚಿಕೊಳ್ಳುವ ಉಡುಪುಗಳನ್ನು ಧರಿಸುವುದರಿಂದ ರಾಷ್ಟ್ರೀಯ ಭದ್ರತೆಗೆ ಹಿನ್ನಡೆಯಾಗುತ್ತಿದೆ. ಭಾರತದ ಮೇಲೂ ಉಗ್ರರು ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಭದ್ರತೆಯ ದೃಷ್ಟಿಯಿಂದ ನಮ್ಮ ದೇಶದಲ್ಲೂ ಬುರ್ಕಾವನ್ನು ನಿಷೇಧಿಸುವಂತೆ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಹೇಳಿದೆ.

    ಈ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ದೊಡ್ಡ ನಿರ್ಧಾರವನ್ನು ಕೈಗೊಳ್ಳಬೇಕು. ಉರಿ ದಾಳಿಯ ನಂತರ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಮತ್ತು ಪುಲ್ವಾಮಾ ದಾಳಿ ನಂತರ ಕೈಗೊಂಡ ಏರ್ ಸ್ಟ್ರೈಕ್ ನಿರ್ಧಾರದಂತೆ ಈ ವಿಚಾರದಲ್ಲೂ ವಿಶೇಷ ಆಸಕ್ತಿ ತೋರಿಸಿ ಬುರ್ಕಾವನ್ನು ನಿಷೇಧಿಸಬೇಕೆಂದು ಶಿವಸೇನೆ ಆಗ್ರಹಿಸಿದೆ.

    ಸರಣಿ ಬಾಂಬ್ ದಾಳಿ ನಡೆದ ನಂತರ ಶ್ರೀಲಂಕಾ ಸರ್ಕಾರ ಬುರ್ಕಾ ಸೇರಿದಂತೆ ಮುಖವನ್ನು ಸಂಪೂರ್ಣವಾಗಿ ಮುಚ್ಚುವಂತಹ ವಸ್ತ್ರ ಧರಿಸುವುದನ್ನು ನಿಷೇಧಿಸಿದೆ. ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರು ಸೋಮವಾರ ಈ ಆದೇಶವನ್ನು ಹೊರಡಿಸಿದ್ದಾರೆ. ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಮುಖವನ್ನು ಸಂಪೂರ್ಣ ಮುಚ್ಚಿಕೊಳ್ಳುವ ವಸ್ತ್ರವನ್ನು ನಿಷೇಧಿಸಲಾಗಿದೆ ಎಂದು ಅಧ್ಯಕ್ಷರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಂಪೂರ್ಣ ವಸ್ತ್ರವನ್ನು ಧರಿಸಿದರೆ ಸೇನಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತದೆ. ಹೀಗಾಗಿ ಮುಖವನ್ನು ಮುಚ್ಚಿಕೊಳ್ಳುವ ವಸ್ತ್ರಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಬುರ್ಕಾವನ್ನು ನಿಷೇಧ ಮಾಡಿದ ದೇಶಗಳ ಪೈಕಿ ಶ್ರೀಲಂಕಾ ಮೊದಲನೆಯದ್ದಲ್ಲ. ಈಗಾಗಲೇ ವಿಶ್ವದ 13 ದೇಶಗಳಲ್ಲಿ ಬುರ್ಕಾ ನಿಷೇಧಗೊಂಡಿದೆ. 2010ರಲ್ಲಿ ಉಗ್ರರ ದಾಳಿ ಬಳಿಕ ಫ್ರಾನ್ಸ್ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಕಾ ಧರಿಸುವುದನ್ನು ನಿಷೇಧಿಸಿತ್ತು. ನಂತರ ಬೆಲ್ಜಿಯಂ, ನೆದರ್ಲ್ಯಾಂಡ್ ಸರ್ಕಾರಗಳು ಬುರ್ಕಾ ನಿಷೇಧಿಸಿತ್ತು.

  • ರಜೆ ಇದ್ದರೂ ಮನೆಗೆ ತೆರಳದೇ ಕರ್ತವ್ಯಕ್ಕೆ ಅಭಿನಂದನ್ ಹಾಜರ್!

    ರಜೆ ಇದ್ದರೂ ಮನೆಗೆ ತೆರಳದೇ ಕರ್ತವ್ಯಕ್ಕೆ ಅಭಿನಂದನ್ ಹಾಜರ್!

    ಶ್ರೀನಗರ: ಪಾಕಿಸ್ತಾನದ ಅತ್ಯಾಧುನಿಕ ಯುದ್ಧ ವಿಮಾನ ಎಫ್ 16 ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

    ಅಭಿನಂದನ್ ಅವರಿಗೆ 4 ವಾರಗಳ ಆನಾರೋಗ್ಯದ ರಜೆ ಮೇಲೆ ಮನೆಗೆ ತೆರಳುವಂತೆ ಸಲಹೆ ನೀಡಲಾಗಿತ್ತು. ಆದರೆ ಅಭಿನಂದನ್ ಚೆನ್ನೈನಲ್ಲಿರುವ ಮನೆಗೆ ತೆರಳದೇ ಶ್ರೀನಗರದ ವಾಯುನೆಲೆಗೆ ಮರಳಿದ್ದಾರೆ. ಭಾರತಕ್ಕೆ ಮರಳಿದ ನಂತರ ವೈದ್ಯಕೀಯ ಚಿಕಿತ್ಸೆ, ವಾಯು ಸೇನೆಯ ವಿಚಾರಣೆಯ ನಂತರ ರಜೆಗೆ ತೆರಳುವಂತೆ ಸಲಹೆ ನೀಡಲಾಗಿತ್ತು. ಆದರೆ ಅಭಿನಂದನ್ ಮನೆಗೆ ತೆರಳದೇ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

    4 ವಾರಗಳ ಅನಾರೋಗ್ಯದ ರಜೆ ಮುಗಿದ ಬಳಿಕ ವಾಯುಸೇನೆಯ ವೈದ್ಯರು ಅಭಿನಂದನ್ ಅವರ ದೇಹ ಪರೀಕ್ಷೆ ನಡೆಸಲಿದ್ದಾರೆ. ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಅವರು ಮತ್ತೆ ಪೈಲಟ್ ಆಗಬಹುದೋ ಇಲ್ಲವೋ ಎನ್ನುವುದು ನಿರ್ಧಾರವಾಗಲಿದೆ.

    ಡಿ ಬ್ರೀಫಿಂಗ್ ವೇಳೆ ಅಭಿನಂದನ್ ಅವರು ಪಾಕ್ ಸೆರೆಯಲ್ಲಿದ್ದ ವೇಳೆ ನಡೆದ ಅನುಭವಗಳ ಬಗ್ಗೆ ವಿವರಿಸಿದ್ದಾರೆ. ಅದರಲ್ಲೂ ಪಾಕಿಸ್ತಾನಿ ಸೇನೆ ನೀಡಿದ ಮಾನಸಿಕ ಹಿಂಸೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಫೆ.27 ರಂದು ಮಿಗ್ 21 ವಿಮಾನದಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕ ಬಿದ್ದಿದ್ದ ಅಭಿನಂದನ್ 58 ಗಂಟೆಗಳ ಬಳಿಕ ಬಿಡುಗಡೆಯಾಗಿದ್ದರು.

    ಫೆ.14 ರಂದು ಪುಲ್ವಾಮಾದಲ್ಲಿ ನಡೆದ ದಾಳಿಯನ್ನು ಜೈಷ್-ಎ-ಮೊಹಮ್ಮದ್ ಸಂಘಟನೆ ಹೊಣೆ ಹೊತ್ತುಕೊಂಡ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪರಿಣಾಮ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರ ಬೆನ್ನಲ್ಲೇ ಭಾರತ ನೆಲವನ್ನು ಪ್ರವೇಶಿಸಿದ್ದ ಪಾಕ್ ಯುದ್ಧ ವಿಮಾನಗಳು ದಾಳಿ ನಡೆಸಲು ವಿಫಲವಾಗಿ ಹಿಂದಿರುಗಿತ್ತು. ಈ ಸಂದರ್ಭದಲ್ಲಿ ಪಾಕಿಸ್ತಾನ ಎಫ್ 16 ವಿಮಾನವನ್ನು ಚೇಸ್ ಮಾಡುತ್ತಿದ್ದಾಗ ಮಿಗ್ ವಿಮಾನ ಪತನಗೊಂಡು ಅಭಿನಂದನ್ ಪ್ಯಾರಾಚೂಟ್ ಸಹಾಯದಿಂದ ಧುಮುಕಿದ್ದರು.

    ಪಾಕ್ ಅಕ್ರಮಿತ ಪ್ರದೇಶದಲ್ಲಿ ಬಿದ್ದ ವೇಳೆ ಅಭಿನಂದನ್ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪರಿಣಾಮ ಗಾಯಗೊಂಡಿದ್ದರು. ಅದಕ್ಕೂ ಮುನ್ನವೇ ಸೇನೆಗೆ ಸಂಬಂಧಿಸಿದ್ದ ಮುಖ್ಯ ದಾಖಲೆಗಳು ಪಾಕಿಸ್ತಾನದ ಸೇನೆಗೆ ಸಿಗದಂತೆ ಮಾಡಿ ನಾಶ ಪಡಿಸಿದ್ದರು. ಅಲ್ಲದೇ ಕೆಲ ದಾಖಲೆಗಳನ್ನು ತಾವೇ ನುಂಗಿಹಾಕಿದ್ದರು. ಪಾಕಿಸ್ತಾನದಿಂದ ವಾಪಸ್ ಆದ ಬಳಿಕ ಮಾರ್ಚ್ 2 ರಂದು ಅಭಿನಂದನ್ ಅವರನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಆಗಿದ್ದರು. ಆ ಬಳಿಕ ದೆಹಲಿಯ ಸೇನೆಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು.

  • ‘ರಣಾಂಗಣ’ದಲ್ಲಿ ಸರ್ಜಿಕಲ್ ಸ್ಟ್ರೈಕ್!

    ‘ರಣಾಂಗಣ’ದಲ್ಲಿ ಸರ್ಜಿಕಲ್ ಸ್ಟ್ರೈಕ್!

    ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಹಿಂದಿಯಲ್ಲಿ ಉರಿ ಅನ್ನೋ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ಭಾರತೀಯ ಯೋಧರು ಉಗ್ರರ ವಿರುದ್ದ ಹೇಗೆಲ್ಲಾ ಸೆಣಸಾಡಿ ಜಯಿಸಿದರು ಎಂಬುದನ್ನು ಅದ್ಭುತವಾಗಿ ಕಟ್ಟಿಕೊಡಲಾಗಿತ್ತು. ಈ ಕಾರಣಕ್ಕೆ ಈ ಸಿನಿಮಾ ಜಗತ್ತಿನಾದ್ಯಂತ ಸದ್ದು ಮಾಡಿತ್ತು. ಈಗ ಅಂಥದ್ದೇ ಸಿನಿಮಾವೊಂದು ಸ್ಯಾಂಡಲ್‍ವುಡ್ಡಿನಲ್ಲಿ ನಿರ್ಮಾಣವಾಗುತ್ತಿದೆ.

    ಮೊನ್ನೆ ಮೊನ್ನೆ ಪುಲ್ವಾಮದಲ್ಲಿ ನಡೆದ ಹತ್ಯೆಗೆ ಪ್ರತೀಕಾರವಾಗಿ ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳನ್ನು ನಮ್ಮ ಸೈನಿಕರು ಧ್ವಂಸಗೊಳಿಸಿದ್ದು ಸೇರಿದಂತೆ ಹಲವಾರು ಪ್ರಮುಖ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾಗೆ ಕಥೆ ಹೆಣೆಯಲಾಗಿದೆ. ಅಂದಹಾಗೆ ಈ ಸಿನಿಮಾದ ಹೆಸರು `ರಣಾಂಗಣ’.

    ಈಗಾಗಲೇ ಮುಹೂರ್ತ ಆಚರಿಸಿಕೊಂಡಿರುವ ಈ ಚಿತ್ರದಲ್ಲಿ ನಮ್ಮ ಭಾರತೀಯ ಯೋಧರ ಹೋರಾಟದ ನೈಜ ಘಟನೆಗಳ ಕುರಿತಾದ ಕಥೆಯನ್ನು ಹೇಳಲಾಗುತ್ತಿದೆ. ಹೊಸ ಬಗೆಯು ಕಥಾನಕ ಹೊಂದಿರುವ ಈ ಚಿತ್ರ ಎರಡು ಛಾಪ್ಟರ್‍ಗಳಲ್ಲಿ ಮೂಡಿ ಬರಲಿದ್ದು, ಮೊದಲನೆಯ ಭಾಗದಲ್ಲಿ ನಿಜ ಜೀವನದ ಹಲವಾರು ಅಂಶಗಳನ್ನು ತೆಗೆದುಕೊಳ್ಳಲಾಗಿದೆ. ಭಾರತೀಯ ಚಿತ್ರರಂಗದಲ್ಲಿ ಸಂಪೂರ್ಣವಾಗಿ ಸೈನಿಕರ ಕುರಿತಂತೆ ನಿರ್ಮಾಣ ಮಾಡುತ್ತಿರುವ ವಿಶೇಷ ಚಲನಚಿತ್ರ ಇದಾಗಿದೆ.

    ಮಂಗಳೂರು ಬಂದರು, ರಾಮೇಶ್ವರ, ಹಿಮಾಚಲ ಪ್ರದೇಶ ಹಾಗೂ ಯುರೋಪ್ ನಲ್ಲಿರುವ ಸರ್ಬಿಯಾ ಸೇರಿದಂತೆ ಹಲವಾರು ವಿಭಿನ್ನ ಲೊಕೇಶನ್ ಗಳಲ್ಲಿ ರಣಾಂಗಣ ಚಿತ್ರದ ಚಿತ್ರೀಕರಣವನ್ನು ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಇದರ ಜೊತೆಗೆ ಚಿತ್ರದ ಕಥೆಯಲ್ಲಿ ಬರುವ ಯುದ್ಧದ ಸನ್ನಿವೇಶಗಳಿಗೆ ತಕ್ಕಂತೆ ಸೆಟ್ ಹಾಕಲು ಕಲಾ ನಿರ್ದೇಶಕ ಮನು ಜಗದ್ ಅವರು ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಪ್ರಮುಖವಾಗಿ ಭಾರತದ ಗಡಿ ಭಾಗದಲ್ಲಿ ನಡೆದ ಮೂರು ಪ್ರಮುಖ ಘಟನೆಗಳನ್ನು ತೆಗೆದುಕೊಂಡು ಕಥೆ ಹೆಣೆಯಲಾಗಿದೆ. ಆದರೆ ಆ ಬಗ್ಗೆ ಯಾವುದೇ ವಿವರವನ್ನು ಚಿತ್ರತಂಡ ಬಿಟ್ಟುಕೊಡಲಿಲ್ಲ. ಟಿ.ಎಸ್. ನಾಗಾಭರಣ, ವಾಸು ಅವರಂಥ ಹಿರಿಯ ನಿರ್ದೇಶಕರ ಜೊತೆ ಕೆಲಸ ಮಾಡಿ ಅನುಭವ ಪಡೆದಿರುವ ರೋಹಿತ್ ರಾವ್ ಇದೇ ಮೊದಲ ಬಾರಿಗೆ ಈ ಚಿತ್ರದ ಕತೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇವರು ಕನ್ನಡದಲ್ಲಿ ಈಗಾಗಲೇ ಹೆಸರು ಮಾಡಿರುವ ನಿರ್ದೇಶಕ ಮಹೇಶ್ ರಾವ್ ಅವರ ಸಹೋದರನಂತೆ.

    ಈ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ರೋಹಿತ್ ರಾವ್, ಗಡಿಯಲ್ಲಿ ನಮ್ಮ ದೇಶವನ್ನು ಕಾಯುತ್ತಿರುವ ಯೋಧ, ನಮಗೆ ಅನ್ನ ನೀಡಲು ಹೊಲದಲ್ಲಿ ಸದಾ ದುಡಿಯುವ ರೈತ, ಈ ಇಬ್ಬರೂ ಕಷ್ಟಪಡುತ್ತಿರುವುದರಿಂದಲೇ ನಾವುಗಳೆಲ್ಲಾ ನೆಮ್ಮದಿಯಿಂದ ಜೀವನ ನಡೆಸುತ್ತಿರುವುದು. ಇದನ್ನೇ ನಮ್ಮ ಚಿತ್ರದಲ್ಲಿ ಹೇಳಿದ್ದೇವೆ. ಈ ಚಿತ್ರವನ್ನು ನೋಡಿದ ಯಾರಿಗೇ ಆಗಲಿ ತಾನು ಕೂಡ ಸೈನ್ಯಕ್ಕೆ ಸೇರಬೇಕೆಂಬ ಉತ್ಸಾಹ ಖಂಡಿತ ಅವರಲ್ಲಿ ಮೂಡುತ್ತದೆ. ಜನವರಿ 15ರಂದು ಬರುವ ಸೈನಿಕರ ದಿನಾಚರಣೆಯಂದೇ ನಮ್ಮ ಚಿತ್ರವನ್ನು ಬಿಡುಗಡೆ ಮಾಡಲು ಯೋಚಿಸಿದ್ದು, ಆ ವೇಳೆಗೆ ಚಿತ್ರವನ್ನು ಕಂಪ್ಲೀಟ್ ಮಾಡಲು ಪ್ರಯತ್ನ ಮಾಡುತ್ತೇವೆ. ಇದು ದೇಶಭಕ್ತಿಯನ್ನು ಸಾರುವ ಕಥೆ ಹೊಂದಿರುವ ಚಿತ್ರವಾಗಿರುವ ಕಾರಣ ಕನ್ನಡ ಸೇರಿದಂತೆ ಹಿಂದಿ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಕೂಡ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ನಮ್ಮ ಭಾರತದಲ್ಲಿ ಒಟ್ಟು ಏಳು ಗಡಿಭಾಗಗಳಿವೆ, ಅದೇ ರೀತಿ ಈ ಚಿತ್ರದಲ್ಲಿ ಏಳು ಜನ ಖಳ ನಾಯಕರುಗಳು ನಟಿಸಲಿದ್ದಾರೆ. ಈ ಪೈಕಿ ಮೊದಲ ಹಂತದಲ್ಲಿ ರಘು, ಯೋಗೀಶ್ ಆಯ್ಕೆಯಾಗಿದ್ದಾರೆ, ಉಳಿದವರ ಹೆಸರನ್ನು ಸದ್ಯದಲ್ಲೇ ಅನೌನ್ಸ್ ಮಾಡುತ್ತೇವೆ ಎಂದರು.

    ಕಿರುತೆರೆಯ ಫೇಮಸ್ ಧಾರಾವಾಹಿ ರಾಧಾ ರಮಣ ಖ್ಯಾತಿಯ ನಟ ಸ್ಕಂದ ಅಶೋಕ್ ಈ ಚಿತ್ರದಲ್ಲಿ ನಾಯಕನಾಗಿ ಹಾಗೂ ದೇಶ ಕಾಯುವ ಸೈನಿಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ನಾಯಕಿ ಶಾನ್ವಿ ಶ್ರೀವಾತ್ಸವ್ ಆರಂಭದಲ್ಲಿ ಒಬ್ಬ ಪತ್ರಕರ್ತೆಯಾಗಿದ್ದು, ನಂತರ ಸೇನೆಗೆ ಸೇರುವ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜೀವನದಲ್ಲಿ ಒಮ್ಮೆಯಾದರೂ ಸೈನ್ಯಕ್ಕೆ ಸಂಬಂಧಿಸಿದ ಕಥೆ ಇರುವ ಸಿನಿಮಾದಲ್ಲಿ ನಟಿಸಬೇಕು ಎನ್ನುವುದು ಇವರ ಆಸೆಯಾಗಿತ್ತಂತೆ. ಅದು ಈ ಮೂಲಕ ಸಾಕಾರಗೊಂಡಿದೆ.