Tag: ಸರ್ಜಿಕಲ್ ಸ್ಟ್ರೈಕ್

  • ಮಿರಾಜ್ ವಿಮಾನವನ್ನೇ ಬಳಸಿದ್ದು ಯಾಕೆ? ಅಂಥ ವಿಶೇಷತೆ ಅದರಲ್ಲಿ ಏನಿದೆ?

    ಮಿರಾಜ್ ವಿಮಾನವನ್ನೇ ಬಳಸಿದ್ದು ಯಾಕೆ? ಅಂಥ ವಿಶೇಷತೆ ಅದರಲ್ಲಿ ಏನಿದೆ?

    ಬೆಂಗಳೂರು: ಇಂದು ಭಾರತೀಯ ವಾಯು ಪಡೆ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕ್ ಆಕ್ರಮಿತ ಕಾಶ್ಮೀರ ಒಳಗಡೆ ನುಗ್ಗಿ ಉಗ್ರ ತರಬೇತಿ ಕ್ಯಾಂಪ್‍ಗಳ ಮೇಲೆ ದಾಳಿ ಮಾಡಿ ಪುಲ್ವಾಮ ಉಗ್ರರು ದಾಳಿಗೆ ಪ್ರತ್ಯುತ್ತರ ನೀಡಿದೆ. ಈ ದಾಳಿಯಲ್ಲಿ ಕೇಂದ್ರ ಬಿಂದುವಾಗಿದ್ದು ಮಿರಾಜ್ ಯುದ್ಧವಿಮಾನ. ಈ ವಿಮಾನದ ಮೂಲಕ ಬಾಂಬ್ ದಾಳಿ ನಡೆಸಿ ಜೈಷ್ ಸಂಘಟನೆಯ ಮೂರು ಪ್ರಮುಖ ಕೇಂದ್ರಗಳನ್ನು ಧ್ವಂಸ ಮಾಡಿದೆ.

    ಮಿರಾಜ್-2000 ಯಾಕೆ ಬಳಸಲಾಯ್ತು?
    ಮಿರಾಜ್-2000 ಜೆಟ್ ಹಾರಾಡುವಾಗ ಅದರಿಂದ ಹೊರಬರುವ ಇಂಧನದ ಹೊಗೆ ಕಡಿಮೆ ಇರುತ್ತದೆ. ಆದರಿಂದ ನೆಲದ ಮೇಲಿರುವ ಸೈನ್ಯಕ್ಕೆ ಇದನ್ನ ಪತ್ತೆ ಮಾಡಲು ಕಷ್ಟವಾಗುತ್ತೆ. ಅದರ ಡೆಲ್ಟಾ ಪ್ಲಾನ್ ಅತೀ ಕಡಿಮೆ ಹೊಗೆಯನ್ನು ಹೊರಹಾಕುತ್ತದೆ. ಈ ವಿಶೇಷತೆ ಇರುವುದರಿಂದಲೇ ಮಿರಾಜ್-2000 ಜೆಟ್ ಅನ್ನು ಭಾರತೀಯ ಸೇನೆ ಉಗ್ರರನ್ನು ಮಟ್ಟ ಹಾಕಲು ಬಳಸಿಕೊಂಡಿದೆ. ಈ ವಿಮಾನ ಪ್ರತಿ ಗಂಟೆಗೆ 900 ಕಿ.ಮೀ ವೇಗದಲ್ಲಿ ಹಾರಾಟ ನಡೆಸುವ ಸಾಮಥ್ರ್ಯವನ್ನು ಹೊಂದಿದೆ. ಮಿರಾಜ್ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯುವ ಸಾಮಥ್ರ್ಯವಿದೆ. ಈ ಕಾರಣಕ್ಕಾಗಿಯೇ ಮಿರಾಜ್-2000 ಭಾರತೀಯ ವಾಯ ಸೇನೆಯಲ್ಲಿರುವ ಅತ್ಯತ್ತಮ ಬಲಿಷ್ಠವಾದ ಯುದ್ಧವಿಮಾನವಾಗಿದೆ.

    ಮಿರಾಜ್-2000 ಎಂದರೇನು?
    ಫ್ರಾನ್ಸಿನ ಡಸಾಲ್ಟ್ ಕಂಪನಿ ನಿರ್ಮಿಸಿದ ಮಿರಾಜ್ 2000 ಬಹು-ಕಾರ್ಯ ನಿರ್ವಹಿಸುವ ಯುದ್ಧ ಫೈಟರ್ ಜೆಟ್. ಇದು 1984ರಿಂದ ಫ್ರೆಂಚ್ ವಾಯುಪಡೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತವಾಗಿ ಈ ವಿಶೇಷ ಜೆಟ್ ಭಾರತ, ಈಜಿಪ್ಟ್, ಗ್ರೀಸ್, ಪೆರು, ಕತಾರ್, ತೈವಾನ್ ಹಾಗೂ ಯುನೈಟೆಡ್ ಅರಬ್ ಎಮಿರೆಟ್ಸ್ ಭದ್ರತಾ ಪಡೆಯ ಭಾಗವಾಗಿದೆ.

    ಇತಿಹಾಸವೇನು?
    ಏಕ ವ್ಯಕ್ತಿ ಅಥವಾ ಇಬ್ಬರು ಪೈಲಟ್‍ಗಳು ಕೂರುವ ಸಾಮಥ್ರ್ಯ ಹೊಂದಿರುವ ಮಿರಾಜ್ ವಿಮಾನವನ್ನು ಮೊದಲ ಬಾರಿಗೆ 1984ರಲ್ಲಿ ಸೇರ್ಪಡೆಯಾಯಿತು. ಬಳಿಕ ಈ ಯುದ್ಧ ವಿಮಾನದಲ್ಲಿ ಇನ್ನೆರಡು ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿ ಮಿರಾಜ್ 2000ಎನ್ ಹಾಗೂ ಮಿರಾಜ್ 2000ಡಿ ಯುದ್ಧ ವಿಮಾನವನ್ನು ತಯಾರಿಸಲಾಯಿತು. ಮಿರಾಜ್ 2000ಎನ್ ಅತ್ಯಂತ ವೇಗ ಹೊಂದಿರುವ ಹಾಗೂ ಎಲ್ಲಾ ಹವಾಮಾನದಲ್ಲೂ ಕಾರ್ಯ ನಿರ್ವಹಿಸುತ್ತದೆ. ಅಟೋಮ್ಯಟಿಕ್ ಆಗಿ ಲೇಸರ್ ಬಾಂಬ್ ಗಳನ್ನು ಟಾರ್ಗೆಟ್ ಸ್ಥಳಕ್ಕೆ ಹಾಕುವ ಸಾಮರ್ಥ್ಯ ಈ ವಿಮಾನಕ್ಕಿದೆ.

    ಕಮಾಂಡರ್ ಮುರಳಿ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ ಈ ವಿಮಾನದ ಜೊತೆಗಿನ ಅನುಭವವನ್ನು ಹಂಚಿಕೊಂಡಿದ್ದಾರೆ. ನಾನು ನನ್ನ ಪೂರ್ತಿ ವೃತ್ತಿ ಜೀವನವನ್ನು ಮಿರಾಜ್-2000ನಲ್ಲಿ ಕಳೆದಿದ್ದೇನೆ. 1984ರಿಂದ ನಾನು ನಿವೃತ್ತಿಯಾಗುವವರೆಗೂ ಮಿರಾಜ್-2000 ಜೆಟ್ ಚಲಾಯಿಸಿದ್ದೇನೆ. 1999ರ ಜೂನ್‍ನಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ನಾವು ಮಿರಾಜ್-ಜೆಟ್ ಬಳಸಿಕೊಂಡಿದ್ದೇವು. ಮಿರಾಜ್-2000 ಅತ್ಯಾಂತ ಬಲಿಷ್ಠವಾದ ಯುದ್ಧ ವಿಮಾನ. ಇಂದು ಬೆಳಗ್ಗೆ ಪಾಕ್ ಉಗ್ರರ ಕ್ಯಾಂಪ್ ಮೇಲೆ ಬಾಂಬ್ ದಾಳಿ ಮಾಡಿರುವುದು ಕೇವಲ ಲೇಸರ್ ಗೈಡೆಡ್ ಬಾಂಬ್ ಸ್ಟ್ರೈಕ್ಸ್ ಮಾತ್ರ ಮಾಡಿಲ್ಲ. ಮೊದಲು ಹೆರಾನ್(ಇಸ್ರೇಲ್ ನಿರ್ಮಿತ ಮಾನವ ರಹಿತ ಸರ್ವೇಕ್ಷಣಾ ವಾಹನ) ಬಿಟ್ಟು ಯಾವ ಸ್ಥಳವನ್ನು ಟಾರ್ಗೆಟ್‍ಗೆ ಮಾಡಬೇಕು ಅಂತ ಪ್ಲಾನ್ ಮಾಡಿಕೊಳ್ಳಲಾಗಿತ್ತು. ಪ್ಲಾನ್ ಪ್ರಕಾರ ಇಂದು ಬೆಳಗ್ಗೆ ದೂರದಿಂದಲೇ ಟಾರ್ಗೆಟ್‍ಗೆ ಗುರಿ ಮಾಡಿ ಲೇಸರ್ ಗೈಡೆಡ್ ಬಾಂಬ್ ಹಾಕಿದ್ದೇವೆ ಎಂದು ತಿಳಿಸಿದರು.

    ಸಾಮಾನ್ಯವಾಗಿ ಲೇಸರ್ ಬಾಂಬ್‍ಗಳು ಸುಮಾರು 500 ಕೆಜಿಕ್ಕಿಂತ ಹೆಚ್ಚು ತೂಕವನ್ನು ಹೊಂದಿರುತ್ತದೆ. ಇದು ಕೆಳಗೆ ಬಿದ್ದರೇ ಆ ಸ್ಥಳದಲ್ಲಿ ಬೂದಿ ಬಿಟ್ಟರೇ ಬೇರೇನೂ ಉಳಿಯುವುದಿಲ್ಲ. ಈ ದಾಳಿ ವೇಳೆ ಏರ್‍ಬಾರ್ನ್ ಅರ್ಲಿ ವಾರ್ನಿಂಗ್(ಎಇಡಬ್ಲ್ಯೂ) ಏರ್‌ಕ್ರಾಫ್ಟ್‌ ಬಳಕೆ ಮಾಡಿದ್ದೇವೆ. ಮುಜಫರಾಬಾದ್ ಬಳಿ ಗಿಲ್ಗಿಟ್ ಇದೆ. ಅಲ್ಲಿ ಪಾಕಿಸ್ತಾನ ಸೈನ್ಯದ ಕಚೇರಿಗಳು ಇವೆ. ನಾವು ನಡೆಸುತ್ತಿರುವ ದಾಳಿ ಪಾಕಿಸ್ತಾನಕ್ಕೆ ತಿಳಿಯದೇ ಇರಲು ಎಇಡಬ್ಲ್ಯೂ ಬಳಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಂಕರ್‌ಗಳನ್ನು ನಿರ್ಮಿಸಿ – ಎಲ್‍ಒಸಿ ನಿವಾಸಿಗಳಿಗೆ ಪಾಕ್ ಸೂಚನೆ

    ಬಂಕರ್‌ಗಳನ್ನು ನಿರ್ಮಿಸಿ – ಎಲ್‍ಒಸಿ ನಿವಾಸಿಗಳಿಗೆ ಪಾಕ್ ಸೂಚನೆ

    – ಖಾಸಗಿ ಆಸ್ಪತ್ರೆಗಳು ಶೇ.25ರಷ್ಟು ಹಾಸಿಗೆ ಸೈನಿಕರಿಗೆ ಮೀಸಲಿಡಿ
    – ಗುಂಪಾಗಿ ಚರ್ಚೆ ನಡೆಸಬೇಡಿ, ರಾತ್ರಿ ಲೈಟ್ ಹಾಕಬೇಡಿ
    – ಗ್ರಾಮಸ್ಥರಿಗೆ ಪಾಕ್ ಅಧಿಕಾರಿಗಳಿಗಳಿಂದ ಎಚ್ಚರಿಕೆ

    ಶ್ರೀನಗರ: ಯಾವುದೇ ಕ್ಷಣದಲ್ಲಿ ಭಾರತ ನಮ್ಮ ಮೇಲೆ ದಾಳಿ ಮಾಡಬಹುದು ಎನ್ನುವ ಭೀತಿಗೆ ಒಳಗಾಗಿರುವ ಪಾಕಿಸ್ತಾನ ಈಗ ಪಾಕ್ ಆಕ್ರಮಿತ ಕಾಶ್ಮೀರದ ಜನತೆಗೆ ಬಂಕರ್ ನಿರ್ಮಿಸುವಂತೆ ಸೂಚನೆ ನೀಡಿದೆ.

    ಗಡಿ ನಿಯಂತ್ರಣ ರೇಖೆಯ ಬಳಿ ಇರುವ ಗ್ರಾಮಸ್ಥರಿಗೆ ಪಾಕಿಸ್ತಾನದ ಅಧಿಕಾರಿಗಳು ಸುರಕ್ಷಿತ ಜಾಗಗಳಲ್ಲಿ ಸಂಚರಿಸಿ ಎಂದು ಸಲಹೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಗುಂಪಾಗಿ ಚರ್ಚೆ ನಡೆಸಬೇಡಿ ಎಂದು ಸೂಚಿಸಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    ರಾತ್ರಿಯ ವೇಳೆ ಅನಾವಶ್ಯಕವಾಗಿ ಲೈಟ್ ಹಾಕಬೇಡಿ. ಗಡಿ ನಿಯಂತ್ರಣ ರೇಖೆಯ ಬಳಿ ಪ್ರಾಣಿಗಳನ್ನು ತೆಗೆದುಕೊಂಡು ಹೋಗಬೇಡಿ. ಇದರ ಜೊತೆಗೆ ಯಾರ ಮನೆಯಲ್ಲಿ ಬಂಕರ್ ಗಳು ನಿರ್ಮಾಣವಾಗಿಲ್ಲವೋ ಅವರೆಲ್ಲ ಅದಷ್ಟು ಶೀಘ್ರವೇ ಬಂಕರ್ ಗಳನ್ನು ನಿರ್ಮಿಸಿ ಎನ್ನುವ ಸೂಚನೆಯನ್ನು ಸ್ಥಳೀಯ ಅಧಿಕಾರಿಗಳು ಗ್ರಾಮಸ್ಥರಿಗೆ ನೀಡಿದ್ದಾರೆ.

    ಒಂದು ವೇಳೆ ಯುದ್ಧ ನಡೆದರೆ ಅದಕ್ಕೂ ಸಿದ್ಧವಾಗಿರುವಂತೆ ಪಾಕಿಸ್ತಾನ ಸೇನೆ ಆಸ್ಪತ್ರೆಗಳಿಗೆ ಸೂಚಿಸಿದೆ. ಯುದ್ಧ ಆರಂಭವಾದರೆ ವೈದ್ಯಕೀಯ ಸಹಕಾರಕ್ಕೆ ಹೇಗೆ ಸಿದ್ಧವಾಗಿದ್ದೀರಿ. ನಿಮ್ಮಲ್ಲಿ ಎಷ್ಟು ಹಾಸಿಗೆಗಳಿವೆ ಎನ್ನುವುದನ್ನು ತಿಳಿಸಿ ಹೆಡ್‍ಕ್ವಾರ್ಟರ್ಸ್ ಕ್ವೆಟ್ಟಾ ಲಾಜಿಸ್ಟಿಕ್ಸ್ ಏರಿಯಾ( ಎಚ್‍ಕ್ಯೂಎಲ್‍ಎ) ಕಾಂಟೋನ್ಮೆಂಟ್ ಜಿಲಾನಿ ಆಸ್ಪತ್ರೆಗೆ ಫೆ.20 ರಂದು ಪತ್ರ ಬರೆದಿದೆ.  ಇದನ್ನೂ ಓದಿ: ಭಾರತ ಕೊಟ್ಟ ಶಾಕ್‍ಗೆ ತಲೆಬಾಗಿ ಉಗ್ರ ಸಂಘಟನೆ ನಿಷೇಧಿಸಿದ ಪಾಕ್

    ಒಂದು ವೇಳೆ ಪೂರ್ವ ಭಾಗದಲ್ಲಿ ಯುದ್ಧ ಆರಂಭವಾದರೆ ಕ್ವೆಟ್ಟಾ ಲಾಜಿಸ್ಟಿಕ್ಸ್ ಏರಿಯಾ ಸಿಂಧ್ ಮತ್ತು ಪಂಜಾಬ್ ಪ್ರದೇಶದಲ್ಲಿ ಗಾಯಗೊಂಡ ಸೈನಿಕರನ್ನು ರಕ್ಷಿಸಬೇಕಾಗುತ್ತದೆ. ಸೈನಿಕರಿಗೆ ಮಿಲಿಟರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಬಲೂಚಿಸ್ತಾನಕ್ಕೆ ಶಿಫ್ಟ್ ಮಾಡಲು ಪಾಕ್ ಸೇನೆ ನಿರ್ಧರಿಸಿದೆ. ಅಷ್ಟೇ ಅಲ್ಲದೇ ಖಾಸಗಿ ಆಸ್ಪತ್ರೆಗಳು ಶೇ.25 ರಷ್ಟು ಹಾಸಿಗೆಗಳನ್ನು ಗಾಯಗೊಂಡ ಸೈನಿಕರಿಗೆ ಮೀಸಲಿಡಬೇಕು ಎಂದು ಪಾಕ್ ಸೇನೆ ಪತ್ರದ ಮೂಲಕ ಈಗಲೇ ಸೂಚನೆ ನೀಡಿದೆ.

    ಉರಿ ಸೇನಾ ನೆಲೆಯ ಮೇಲೆ ಉಗ್ರರ ದಾಳಿ ಬಳಿಕ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಉಗ್ರರ ನೆಲೆಗಳನ್ನೇ ಧ್ವಂಸ ಮಾಡಿತ್ತು. ಈಗ ಪುಲ್ವಾಮಾ ದಾಳಿ ಬಳಿಕ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಬಹುದು ಎನ್ನುವ ಭೀತಿಯಿಂದ ಪಾಕ್ ಗ್ರಾಮಸ್ಥರಿಗೆ ಈಗಲೇ ಎಚ್ಚರಿಕೆ ನೀಡಿ ಎಲ್ಲ ದಾಳಿಗಳನ್ನು ಎದುರಿಸಲು ಸಿದ್ಧವಾಗಿರಿ ಎಂದು ಸೂಚಿಸಿದೆ.

    https://twitter.com/KashmirPivot/status/1098482610127466498

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

     

     

  • ಪಾಕ್ ವಿರುದ್ಧದ ಸರ್ಜಿಕಲ್ ದಾಳಿಗೆ 2 ವರ್ಷ

    ಪಾಕ್ ವಿರುದ್ಧದ ಸರ್ಜಿಕಲ್ ದಾಳಿಗೆ 2 ವರ್ಷ

    -ಮತ್ತೊಂದು ಸ್ಟ್ರೈಕ್ ಬಗ್ಗೆ ಸುಳಿವು ಕೊಟ್ಟ ರಾಜನಾಥ್ ಸಿಂಗ್!

    ನವದೆಹಲಿ: ಪಾಕಿಸ್ತಾನದ ಉಗ್ರರು ನಡೆಸಿದ್ದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ನಡೆಸಿದ್ದ ಸರ್ಜಿಕಲ್ ದಾಳಿಗೆ ಇಂದು ಎರಡು ವರ್ಷ ಪೂರ್ಣಗೊಂಡಿದೆ.

    ಹೌದು, ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ 2016ರ ಸೆಪ್ಟೆಂಬರ್ 18 ರಂದು ಪಾಕಿಸ್ತಾನದ ಉಗ್ರರು ದಾಳಿ ನಡೆಸಿ ಯೋಧರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ಐತಿಹಾಸಿಕ ಸರ್ಜಿಕಲ್ ದಾಳಿ ನಡೆಸಿತ್ತು. ಈ ದಾಳಿಗೆ 2 ವರ್ಷದ ವರ್ಷಾಚರಣೆಯನ್ನು ಸೇನೆ ಅದ್ಧೂರಿಯಾಗಿ ನೆರವೇರಿಸಿದೆ.

    ಭಾರತ ತನ್ನ ಸರ್ಜಿಕಲ್ ಸ್ಟ್ರೈಕ್ ಮುಖಾಂತರ ಇಡೀ ವಿಶ್ವಕ್ಕೆ ತನ್ನ ಸೇನೆಯ ಶಕ್ತಿ ಹಾಗೂ ಸಾಮರ್ಥ್ಯವನ್ನು ತೋರಿಸಿಕೊಟ್ಟಿತ್ತು. ಪಾಕಿಸ್ತಾನ ಆಶ್ರಯದಲ್ಲಿ ನಡೆಯುತ್ತಿದ್ದ ಉಗ್ರರಿಗೆ ಈ ದಾಳಿಯು ಬೆಚ್ಚಿ ಬೀಳುವಂತೆ ಮಾಡಿತ್ತು. ಅತ್ಯಂತ ಅಪಾಯಕಾರಿ ಕಾರ್ಯಾಚರಣೆಯನ್ನು ಸೇನೆ ಯಶಸ್ವಿಯಾಗಿ ನಡೆಸಿ, ಉಗ್ರರಿಗೆ ಸಿಂಹಸ್ವಪ್ನವಾಗಿ ಕಾಡಿತ್ತು. ಇದನ್ನೂ ಓದಿ: ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಿಡುಗಡೆಗೊಳಿಸಿದ ಕೇಂದ್ರ-ವಿಡಿಯೋ ನೋಡಿ

    ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಗೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಭಾರತೀಯ ಸೇನೆ ರಾಜಸ್ಥಾನದ ಜೋಧಪುರದಲ್ಲಿ `ಪರಾಕ್ರಮ ಪರ್ವ’ ಎಂಬ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ಅದ್ಧೂರಿಯಾಗಿ ಚಾಲನೆ ನೀಡಿ, ಸೇನಾ ನೆಲೆಯಾದ ಬ್ಯಾಟಲ್ ಆಕ್ಸ್ ಮೈದಾನದಲ್ಲಿ ಹುತಾತ್ಮ ಯೋಧರಿಗೆ ಗೌರವ ಸೂಚಿಸಿದ್ರು.

    ಭಾರತೀಯ ಸೇನೆ ತನ್ನ 2 ನೇ ವರ್ಷದ ಸರ್ಜಿಕಲ್ ಸ್ಟ್ರೈಕ್ ಆಚರಣೆಯಲ್ಲಿದೆ. ಆದರೆ ಪಾಕ್ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ 27 ಶಿಬಿರಗಳಲ್ಲಿರುವ 250 ಮಂದಿ ಉಗ್ರರು ಗಡಿ ನುಸುಳಲು ಯತ್ನಿಸ್ತಿದ್ದಾರೆ. ಭಾರತೀಯ ಯೋಧರು ನಡೆಸಿದ್ದ ಸರ್ಜಿಕಲ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನಿ ಉಗ್ರರು ಸಜ್ಜಾಗಿದ್ದಾರೆ ಎನ್ನುವ ಮಾಹಿತಿಯನ್ನು ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ. ಇದನ್ನೂ ಓದಿ:  ಸರ್ಜಿಕಲ್ ಸ್ಟ್ರೈಕ್‍ಗೆ ಚಿರತೆ ಮೂತ್ರ ಕೊಂಡೊಯ್ದಿದ್ದ ಭಾರತದ ಯೋಧರು – ಏನಿದರ ಹಿಂದಿನ ರಹಸ್ಯ?

    ಈ ಬಗ್ಗೆ ಶುಕ್ರವಾರ ಮುಜಾಫರ್ ನಗರದಲ್ಲಿ ಬಿಎಸ್‍ಎಫ್ ಯೋಧ ನರೇಂದ್ರ ಸಿಂಗ್ ಹತ್ಯೆ ಉಲ್ಲೇಖಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‍ರವರು, ಗಡಿಯಲ್ಲಿ ಏನೋ ನಡೆದಿದೆ. ಅದು ಏನೂ ಅಂತ ಹೇಳಲು ಸಾಧ್ಯವಿಲ್ಲ. ಆದರೆ ಎರಡು-ಮೂರು ದಿನಗಳ ಮುಂಚೆ ಏನೋ ದೊಡ್ಡದಾಗಿ, ಸರಿಯಾಗಿಯೇ ಆಗಿದೆ. ಇನ್ನು ಮುಂದೆಯೂ ಆಗುತ್ತಾ ಇರುತ್ತೆ ಎನ್ನುವ ಮೂಲಕ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸುಳಿವು ನೀಡಿದ್ದಾರೆ.

    ಸರ್ಜಿಕಲ್ ಸ್ಟ್ರೈಕ್ ನಡೆದಿದ್ದು ಯಾಕೆ?
    2016ರ ಸೆಪ್ಟೆಂಬರ್ 18 ರಂದು ಉಗ್ರರು ಜಮ್ಮು ಕಾಶ್ಮೀರದ ಉರಿಯಲ್ಲಿರುವ ಸೇನಾ ಕೇಂದ್ರ ಕಚೇರಿಗೆ ನುಗ್ಗಿ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾಗಿದ್ದರೆ 4 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಕಳೆದ ಎರಡು ದಶಕದಲ್ಲಿನ ಸೇನೆಯ ಮೇಲಿನ ಡೆಡ್ಲಿ ದಾಳಿ ಇದಾಗಿತ್ತು. ಈ ದಾಳಿಗೆ ಸೇಡು ತೀರಿಸಲು ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.

    2016ರ ಸಪ್ಟೆಂಬರ್ 28, 29ರ ಮಧ್ಯರಾತ್ರಿ ವೇಳೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಪ್ರವೇಶಿಸಿ ಸರ್ಜಿಕಲ್ ದಾಳಿ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು. ಈ ಕಾರ್ಯಾಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಡಿಜಿಎಂಒ ಅಧಿಕಾರಿ ಕಾರ್ಯಾಚರಣೆಯ ವಿವರವನ್ನು ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಿಡುಗಡೆಗೊಳಿಸಿದ ಕೇಂದ್ರ-ವಿಡಿಯೋ ನೋಡಿ

    ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಿಡುಗಡೆಗೊಳಿಸಿದ ಕೇಂದ್ರ-ವಿಡಿಯೋ ನೋಡಿ

    ನವದೆಹಲಿ: ಸರ್ಜಿಕಲ್ ಸ್ಟ್ರೈಕ್ ನಡೆದ 2 ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಕೈಗೊಂಡಿದ್ದ ಸರ್ಜಿಕಲ್ ಸ್ಟ್ರೈಕ್ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ.

    ಸರ್ಜಿಕಲ್ ಸ್ಟ್ರೈಕ್ ನಡೆದು ಸೆ.29 ಕ್ಕೆ 2ನೇ ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ವಿಡಿಯೋ ಬಿಡುಗಡೆ ಮಾಡಲಾಗಿದೆ. 2016 ಸೆ.29 ರಂದು ಸೇನೆ ಗಡಿ ರೇಖೆ ದಾಟಿ  ಸರ್ಜಿಕಲ್ ದಾಳಿ ನಡೆಸಿತ್ತು. ಜಮ್ಮು ಕಾಶ್ಮೀರದ ಉರಿ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಈ ದಾಳಿ ನಡೆಸಿತ್ತು. ಅಲ್ಲದೇ ಈ ದಾಳಿಯಲ್ಲಿ 20 ಉಗ್ರರನ್ನು ಹತ್ಯೆ ಮಾಡಿದ್ದಾಗಿ ಮಾಹಿತಿ ನೀಡಲಾಗಿತ್ತು.

    ಭಾರತ ಪ್ಯಾರಾ ಮಿಲಿಟರಿ ಫೋರ್ಸ್‍ ನ  ಕಮಾಂಡೋ ತಂಡ ನಡೆಸಿ ಯಶಸ್ವಿಯಾಗಿ ಉಗ್ರರ ತಾಣಗಳನ್ನು ನಾಶ ಪಡಿಸಿ ವಾಪಸ್ ಬಂದಿತ್ತು. ಕಳೆದ ಕೆಲ ದಿನಗಳ ಭಾರತೀಯ ಸೈನ್ಯದ ಮಾಜಿ ಜನರಲ್ ಒಬ್ಬರು ಸರ್ಜಿಕಲ್ ದಾಳಿ ವೇಳೆ ಚಿರತೆಯ ಮೂತ್ರ ತೆಗೆದುಕೊಂಡು ಹೋಗಿದ್ದಾಗಿ ಬಹಿರಂಗ ಪಡಿಸಿದ್ದರು.

    ಭಾರತ ಭೂ ಸೇನೆಯ ಮುಖ್ಯಸ್ಥರದ ಜನರಲ್ ಬಿಪಿನ್ ರಾವತ್ ಕಳೆದ ದಿನಗಳ ಹಿಂದೆ ಉಗ್ರರ ಮೇಲೆ ಮತ್ತೊಂದು ಸರ್ಜಿಕಲ್ ದಾಳಿ ನಡೆಸುವ ಅಗತ್ಯವಿದೆ. ಗಡಿಯಲ್ಲಿ ಪಾಕಿಸ್ತಾನ ನಡೆಯುತ್ತಿರುವ ಉಗ್ರರ ಚಟುವಟಿಕೆಗಳನ್ನು ನಿಯಂತ್ರಣ ಮಾಡದಿದ್ದರೆ ಇದು ಅನಿವಾರ್ಯ ಎಂದು ವಾಗ್ದಾಳಿ ನಡೆಸಿದ್ದರು.

    ಈ ಹಿಂದೆಯೂ ಸರ್ಜಿಕಲ್ ಸ್ಟ್ರೈಕ್ ಕುರಿತ ವಿಡಿಯೋಗಳನ್ನು ಖಾಸಗಿ ವಾಹಿನಿಯೊಂದು ಪ್ರಸಾರ ಮಾಡಿತ್ತು. ವಿಡಿಯೋದಲ್ಲಿ ದಾಳಿ ನಡೆದ ಸಮಯ ದಿನಾಂಕದ ಸಮೇತ ದೃಶ್ಯಗಳು ಲಭ್ಯವಾಗಿತ್ತು. ಯುಎವಿ ಮತ್ತು ಸೈನಿಕರು ಧರಿಸಿದ್ದ ಹೇಡ್ ಮೌಂಟೇನ್ ಕ್ಯಾಮೆರಾದಲ್ಲಿ ಕಾರ್ಯಾಚರಣೆಯನ್ನು ಸೆರೆ ಹಿಡಿಯಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

    https://twitter.com/ANI/status/1045231995544952832

    ವಿಡಿಯೋದಲ್ಲಿ ಸೈನಿಕರ ಮೊದಲ ಟಾರ್ಗೆಟ್ ಆಗಿದ್ದ ಉಗ್ರಗಾಮಿಗಳ ಕ್ಯಾಪ್‍ಗಳು ಸೆರೆಯಾಗಿದ್ದು, ಬಳಿಕ ಯೋಧರು ಅವುಗಳ ಮೇಲೆ ದಾಳಿ ನಡೆಸುವ ಸಂದರ್ಭದ ದೃಶ್ಯಗಳು ಲಭಿಸಿತ್ತು. ಬೆಳಗ್ಗೆ 6.16 ಸಮಯಕ್ಕೆ ಎರಡನೇ ಟಾರ್ಗೆಟ್ ಮೇಲೆ ದಾಳಿ ನಡೆಸಲಾಗಿದೆ. ಮೂರನೇ ಟಾರ್ಗೆಟ್ ಬಂಕರ್ ಆಗಿದ್ದು, ಕೊನೆಯ ಫ್ರೇಮ್ ನಲ್ಲಿ ಉಗ್ರರ ಬಂಕರ್ ನಾಶವಾಗುವ ದೃಶ್ಯಗಳನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಸರ್ಜಿಕಲ್ ಸ್ಟ್ರೈಕ್‍ಗೆ ಚಿರತೆ ಮೂತ್ರ ಕೊಂಡೊಯ್ದಿದ್ದ ಭಾರತದ ಯೋಧರು – ಏನಿದರ ಹಿಂದಿನ ರಹಸ್ಯ?

    ಸರ್ಜಿಕಲ್ ಸ್ಟ್ರೈಕ್‍ಗೆ ಚಿರತೆ ಮೂತ್ರ ಕೊಂಡೊಯ್ದಿದ್ದ ಭಾರತದ ಯೋಧರು – ಏನಿದರ ಹಿಂದಿನ ರಹಸ್ಯ?

    ಪುಣೆ: 2016 ಸೆಪ್ಟೆಂಬರ್ ನಲ್ಲಿ ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ನಡೆಸಿದ ಸರ್ಜಿಕಲ್ ದಾಳಿ ವೇಳೆ ಚಿರತೆಯ ಮೂತ್ರವನ್ನು ಕೊಂಡೊಯ್ದಿದ್ದರು ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಸುಮಾರು 15 ಕಿಮೀ ದೂರದ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ್ದ ಸೈನಿಕರು ಚಿರತೆ ಮೂತ್ರ ತೆಗೆದುಕೊಂಡು ಹೋಗಿದ್ದರು ಎಂದು ಮಾಜಿ ನಗ್ರೋಟಾ ಕಾಪ್ರ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ರಾಜೇಂದ್ರ ನಿಂಬೋರ್ಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಮಂಗಳವಾರ ಪುಣೆ ನಗರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ರಾಜೇಂದ್ರ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಸರ್ಜಿಕಲ್ ಸ್ಟ್ರೈಕ್ ಅನುಭವವನ್ನು ತಿಳಿಸಿದ ಅವರು, ಕಾರ್ಯಾಚರಣೆ ನಡೆಸುವ ವೇಳೆ ಕೆಲ ದೂರ ಹಳ್ಳಿಗಳನ್ನು ಕ್ರಮಿಸಿ ಸಾಗಬೇಕಿತ್ತು. ಈ ವೇಳೆ ನಾಯಿಗಳು ಯೋಧರ ವೇಳೆ ದಾಳಿ ನಡೆಸಿ ಶಬ್ಧ ಮಾಡುವ ಸಾಧ್ಯತೆಯೂ ಹೆಚ್ಚಿತ್ತು. ಇದನ್ನು ಎದುರಿಸಲು ಚಿರತೆಯ ಮೂತ್ರವನ್ನು ಹಳ್ಳಿಯ ಸುತ್ತಲು ಇರುವ ಮಾರ್ಗದಲ್ಲಿ ಚೆಲ್ಲಿ ನಾಯಿಗಳು ದಾಳಿ ನಡೆಸದಂತೆ ಎಚ್ಚರಿಕೆ ವಹಿಸಲಾಗಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ಸರ್ಜಿಕಲ್ ಸ್ಟ್ರೈಕ್‍ನಲ್ಲಿ ಯಾರೆಲ್ಲ ಇದ್ದರು ಅನ್ನೋದು ಈಗ ಬಹಿರಂಗವಾಯ್ತು

    ಯಾಕೆ ಈ ತಂತ್ರವನ್ನು ಬಳಸಿದ್ದು ಎಂದು ಕೇಳಿದ್ದಕ್ಕೆ, ನಾಯಿಗಳು ಚಿರತೆಯ ಮೂತ್ರದ ವಾಸನೆ ಕಂಡು ಹೆದರುತ್ತದೆ. ಅಲ್ಲದೇ ದಾಳಿ ನಡೆಸಬಹುದು ಎನ್ನುವ ಭಯದಿಂದ ಜೀವ ಉಳಿಸಲು ಆ ಸ್ಥಳದತ್ತ ಸುಳಿದಾಡುವುದಿಲ್ಲ. ಹೀಗಾಗಿ ಈ ತಂತ್ರವನ್ನು ಬಳಕೆ ಮಾಡಲಾಗಿದೆ ಎಂದು ವಿವರಿಸಿದರು.

    ಈ ಕಾರ್ಯಚರಣೆ ನಡೆಸಲು ಸೇನೆ ಸಾಕಷ್ಟು ಗೌಪ್ಯತೆಯನ್ನು ಕಾಪಾಡಿಕೊಂಡಿತ್ತು. ಅಂದಿನ ಕೇಂದ್ರ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ಕೂಡ ಸರ್ಜಿಕಲ್ ದಾಳಿ ನಡೆಸುವ ಒಂದು ವಾರದ ಹಿಂದೆಯಷ್ಟೇ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅಲ್ಲದೇ 1 ವಾರದಲ್ಲಿ ಯೋಜನೆ ಜಾರಿ ಮಾಡುವಂತೆ ಸೂಚಿಸಿದ್ದರು. ಯೋಧರಿಗೆ ಈ ಕುರಿತು ಮಾಹಿತಿ ನೀಡದೇ ಕೆಲ ಸಲಹೆ ಮಾತ್ರ ನೀಡಲಾಗಿತ್ತು. ದಾಳಿಯ ದಿನ ಮಾತ್ರ ಎಲ್ಲರಿಗೂ ಖಚಿತ ಸ್ಥಳದ ಬಗ್ಗೆ ಮಾಹಿತಿ ನೀಡಲಾಗಿತ್ತು ಎಂದು ಕಾರ್ಯಾಚರಣೆಗೆ ನಡೆಸಿದ್ದ ಸಿದ್ಧತೆಯನ್ನು ವಿವರಿಸಿದರು.

    ದಾಳಿ ನಡೆಸಲು ಮುಂಜಾನೆಯ ನಸುಕಿನ ವೇಳೆಯನ್ನೇ ತಂಡ ಆಯ್ಕೆ ಮಾಡಲಾಗಿತ್ತು. ಅಲ್ಲದೇ ಭಯೋತ್ಪಾದಕರು ಪ್ರತಿದಾಳಿ ನಡೆಸಬಹುದಾದ ಸ್ಥಳವನ್ನು ಗುರುತಿಸಲಾಗಿತ್ತು. ನಸುಕಿನ 3.30ರ ವೇಳೆ ಅತ್ಯುತ್ತಮ ದಾಳಿ ನಡೆಸಲು ಸೂಚನೆ ನೀಡಿ ಆ ವೇಳೆಗೆ ಸೂಕ್ತ ರಕ್ಷಣಾ ಸ್ಥಳಕ್ಕೆ ತೆರಳುವ ಯೋಜನೆ ಮಾಡಲಾಗಿತ್ತು. ದಾಳಿಯಲ್ಲಿ 29 ಭಯೋತ್ಪಾದಕರು ಹಾಗೂ ಉಗ್ರರರಿಗೆ ತರಬೇತಿ ನೀಡಲು ತೆರೆಯಲಾಗಿದ್ದ ಮೂರು ಲಾಂಚಿಂಗ್ ಪ್ಯಾಡ್ ಗಳನ್ನು ಧ್ವಂಸ ಮಾಡಿತ್ತು. ಸೇನೆಯ ಈ ಕಾರ್ಯಾಚರಣೆ ಪಾಕ್ ಮಿಲಿಟರಿ ನಾಯಕರಿಗೆ ಶಾಕ್ ನೀಡಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಜಿಕಲ್ ಸ್ಟ್ರೈಕ್ 2.0: ಗಡಿ ನುಗ್ಗಿ ಪಾಕ್ ಸೈನಿಕರನ್ನು ಹತ್ಯೆಗೈದ ‘ಘಾತಕ್’ ತಂಡ!

    ಅಂದಹಾಗೇ ಕಮಾಂಡರ್ ಲೆಫ್ಟಿನೆಂಟ್ ಜನರಲ್ ರಾಜೇಂದ್ರ ನಿಂಬೋರ್ಕರ್ ಅವರು ಸದ್ಯ ಸೇನೆಯಿಂದ ನಿವೃತ್ತರಾಗಿದ್ದು, ಜಮ್ಮು ಕಾಶ್ಮೀರದ ನೌಶೇರಾ ಸೆಕ್ಟರ್ ಬ್ರಿಗೇಡ್ ನ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ತಮ್ಮ ಕಾರ್ಯದ ಅವಧಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಸೆಕ್ಟರ್ ನ ಭೌಗೋಳಿಕ ಪ್ರದೇಶದ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿದ್ದರು. ಈ ವೇಳೆಯೇ ಅವರಿಗೆ ಭಾರತ ದಾಳಿ ನಡೆಸಲು ಯೋಜನೆ ರೂಪಿಸಿದ್ದ ಪ್ರದೇಶದಲ್ಲಿ ನಾಯಿಗಳ ದಾಳಿ ಖಚಿತವಾಗಿ ನಡೆಯುತ್ತದೆ ಎಂಬ ಮಾಹಿತಿ ತಿಳಿದಿತ್ತು. ಅಲ್ಲದೇ ರಾತ್ರಿ ವೇಳೆ ಚಿರತೆ ದಾಳಿಯಿಂದ ತಪ್ಪಿಸಿ ಕೊಳ್ಳಲು ಸೂಕ್ತ ಪ್ರದೇಶದಲ್ಲಿ ಗುಂಪು ಕೂಡಿರುತ್ತವೆ ಎಂಬ ಅತೀ ಸೂಕ್ಷ್ಮ ವಿಚಾರಗಳ ಬಗ್ಗೆಯೂ ತಿಳಿದಿದ್ದರು.

    ಸರ್ಜಿಕಲ್ ಸ್ಟ್ರೈಕ್ ನಡೆದಿದ್ದು ಯಾಕೆ?
    2016ರ ಸೆಪ್ಟೆಂಬರ್ 18 ರಂದು ಉಗ್ರರು ಜಮ್ಮು ಕಾಶ್ಮೀರದ ಉರಿಯಲ್ಲಿರುವ ಸೇನಾ ಕೇಂದ್ರ ಕಚೇರಿಗೆ ನುಗ್ಗಿ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾಗಿದ್ದರೆ 4 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಕಳೆದ ಎರಡು ದಶಕದಲ್ಲಿನ ಸೇನೆಯ ಮೇಲಿನ ಡೆಡ್ಲಿ ದಾಳಿ ಇದಾಗಿತ್ತು. ಈ ದಾಳಿಗೆ ಸೇಡು ತೀರಿಸಲು ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.

    2016ರ ಸಪ್ಟೆಂಬರ್ 28, 29ರ ಮಧ್ಯರಾತ್ರಿ ವೇಳೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಪ್ರವೇಶಿಸಿ ಸರ್ಜಿಕಲ್ ದಾಳಿ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು. ಈ ಕಾರ್ಯಾಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಡಿಜಿಎಂಒ ಅಧಿಕಾರಿ ಕಾರ್ಯಾಚರಣೆಯ ವಿವರವನ್ನು ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜಕೀಯ ಲಾಭಕ್ಕಾಗಿ ಬಿಜೆಪಿಯಿಂದ ಸರ್ಜಿಕಲ್ ಸ್ಟ್ರೈಕ್ ಬಳಕೆ: ಸುರ್ಜೆವಾಲಾ ಕಿಡಿ

    ರಾಜಕೀಯ ಲಾಭಕ್ಕಾಗಿ ಬಿಜೆಪಿಯಿಂದ ಸರ್ಜಿಕಲ್ ಸ್ಟ್ರೈಕ್ ಬಳಕೆ: ಸುರ್ಜೆವಾಲಾ ಕಿಡಿ

    ನವದೆಹಲಿ: ಬಿಜೆಪಿ ದೇಶದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ಸೈನಿಕರ ಬಲಿದಾನವನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ.

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿ ದೇಶದ ಸೈನ್ಯ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಅನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ. ಸೈನಿಕರು ದೇಶಕ್ಕಾಗಿ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಇದನ್ನು ತನ್ನ ರಾಜಕೀಯ ಉದ್ದೇಶದಲ್ಲಿ ಓಟು ಗಳಿಸಲು ಬಳಸಿಕೊಳ್ಳಬಾರದು. ಆದರೆ ಪ್ರಧಾನಿ ಇದನ್ನು ವೈಭವೀಕರಿಸಿ ತಮ್ಮ ರಾಜಕೀಯ ಉದ್ದೇಶಕ್ಕಾಗಿ ಬಳಸುತ್ತಿದ್ದಾರೆ. ಅಲ್ಲದೇ ಮೋದಿ ಸೈನ್ಯದ ಶ್ರಮವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ದೂರಿದರು.

    ಮೋದಿ ಸರ್ಕಾರ ಜೈ ಜವಾನ್ ಜೈ ಕಿಸಾನ್ ಘೋಷಣೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಹಿಂದೆ ಭಾರತದ ಪ್ರಧಾನಿಗಳಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಹೀಗೆ ಮಾಡಿದ್ದಾರಾ ಎಂದು ಮೋದಿಯನ್ನು ಇಡೀ ದೇಶವೇ ಕೇಳುತ್ತದೆ ಎಂದು ಪ್ರಶ್ನಿಸಿದರು.

    ದೇಶದ ಸೈನ್ಯದ ಈ ಕಾರ್ಯದ ಬಗ್ಗೆ ಹೆಮ್ಮೆಪಡುತ್ತದೆ. ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಈ ರೀತಿಯ ದಾಳಿಗಳನ್ನು ನಡೆಸಲಾಗಿತ್ತು. ಆದರೆ ಅದರ ಬಗ್ಗೆ ಹೇಳಿಕೊಂಡಿರಲಿಲ್ಲ. ಇಂಥಹ ಸರ್ಜಿಕಲ್ ಸ್ಟ್ರೈಕ್‍ಗಳು ಎರಡು ದಶಕಗಳಿಂದ ಸಾಕಷ್ಟು ನಡೆದಿವೆ ಎಂದರು.

    ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇನೆಯನ್ನು ಅವಮಾನಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಉಗ್ರರ ಆಕ್ರಮಣ ಹಾಗೂ ಕದನ ವಿರಾಮ ಉಲ್ಲಂಘನೆ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

     

    ಕಾಂಗ್ರೆಸ್ ಟೀಕೆಗೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ತನ್ನ ಅವಧಿಯಲ್ಲಿ ಇಂಥ ಸ್ಟ್ರೈಕ್ ಮಾಡಲಾಗಿಲ್ಲ. ಹಾಗಾಗಿ ಇಂಥ ವಿಡಿಯೋ ಬಿಡುಗಡೆ ಮಾಡಿಲ್ಲ. ಹಾಗೆಯೇ ನಾವೂ ಸಹ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಅದು ಹೇಗೆ ಜನ ಬಿಜೆಪಿ ಪರವಾಗಿ ಭಾವನೆಗಳನ್ನು ಬದಲಿಸಿಕೊಳ್ಳಲು ಸಾಧ್ಯವಾಗುತ್ತದೆ? ಒಂದು ವೇಳೆ ಕಾಂಗ್ರೆಸ್ ತನ್ನ ಅವಧಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದರೆ ಮುಚ್ಚಿಟ್ಟಿದ್ದು ಯಾಕೆ? ಅವರ ಈ ನಡೆ ಹೇಗಿದೆ ಎಂದರೆ ನರಿ ಕೈಗೆಟುಕದ ದ್ರಾಕ್ಷಿ ಹುಳಿ ಎನ್ನುವ ಹಳೆಯ ಗಾದೆ ಮಾತಿನಂತಿದೆ ಎಂದು ವ್ಯಗ್ಯವಾಡಿದರು.

    2016ರ ಸೆಪ್ಟೆಂಬರ್ 28, 29ರ ನಸುಕಿನ ಜಾವ ವೇಳೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಪ್ರವೇಶಿಸಿ ಸರ್ಜಿಕಲ್ ದಾಳಿ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು. ಈ ಕಾರ್ಯಾಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಡಿಜಿಎಂಒ ಕಾರ್ಯಾಚರಣೆಯ ವಿವರವನ್ನು ನೀಡಿದ್ದರು.

     

  • 636 ದಿನಗಳ ಬಳಿಕ ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಲಭ್ಯ

    636 ದಿನಗಳ ಬಳಿಕ ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಲಭ್ಯ

    ನವದೆಹಲಿ: ಬರೋಬ್ಬರಿ 636 ದಿನಗಳ ಬಳಿಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆ ವಿಡಿಯೋ ಬಿಡುಗಡೆಯಾಗಿದೆ.

    ಈ ಕುರಿತ ವಿಡಿಯೋವನ್ನು ಎರಡು ಖಾಸಗಿ ವಾಹಿನಿಗಳು ಪ್ರಸಾರ ಮಾಡಿದ್ದು, ವಿಡಿಯೋದಲ್ಲಿ ದಾಳಿ ನಡೆದ ಸಮಯ ದಿನಾಂಕದ ಸಮೇತ ದೃಶ್ಯಗಳು ಲಭ್ಯವಾಗಿದೆ. ಯುಎವಿ ಮತ್ತು ಸೈನಿಕರು ಧರಿಸಿದ್ದ ಹೇಡ್ ಮೌಂಟೇನ್ ಕ್ಯಾಮೆರಾದಲ್ಲಿ ಕಾರ್ಯಾಚರಣೆಯನ್ನು ಸೆರೆ ಹಿಡಿಯಲಾಗಿದೆ.

    ಮೊದಲು ವಿಡಿಯೋದಲ್ಲಿ ಸೈನಿಕರ ಮೊದಲ ಟಾರ್ಗೆಟ್ ಆಗಿದ್ದ ಉಗ್ರಗಾಮಿಗಳ ಕ್ಯಾಪ್‍ಗಳು ಸೆರೆಯಾಗಿದ್ದು, ಬಳಿಕ ಯೋಧರು ಅವುಗಳ ಮೇಲೆ ದಾಳಿ ನಡೆಸುವ ಸಂದರ್ಭದ ದೃಶ್ಯಗಳು ಲಭಿಸಿದೆ. ಬೆಳಗ್ಗೆ 6.16 ಸಮಯಕ್ಕೆ ಎರಡನೇ ಟಾರ್ಗೆಟ್ ಮೇಲೆ ದಾಳಿ ನಡೆಸಲಾಗಿದೆ. ಮೂರನೇ ಟಾರ್ಗೆಟ್ ಬಂಕರ್ ಆಗಿದ್ದು, ಕೊನೆಯ ಫ್ರೇಮ್ ನಲ್ಲಿ ಉಗ್ರರ ಬಂಕರ್ ನಾಶವಾಗುವ ದೃಶ್ಯಗಳನ್ನು ಕಾಣಬಹುದಾಗಿದೆ.

    2016ರ ಸೆಪ್ಟೆಂಬರ್ 28, 29ರ ನಸುಕಿನ ಜಾವ ವೇಳೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಪ್ರವೇಶಿಸಿ ಸರ್ಜಿಕಲ್ ದಾಳಿ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು. ಈ ಕಾರ್ಯಾಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಡಿಜಿಎಂಒ ಕಾರ್ಯಾಚರಣೆಯ ವಿವರವನ್ನು ನೀಡಿದ್ದರು.

  • ಸರ್ಜಿಕಲ್ ಸ್ಟ್ರೈಕ್ ಭಯ: 2 ಷರತ್ತು ಇರಿಸಿ ಶರಣಾಗ್ತೀನಿ ಎಂದ ದಾವೂದ್

    ಸರ್ಜಿಕಲ್ ಸ್ಟ್ರೈಕ್ ಭಯ: 2 ಷರತ್ತು ಇರಿಸಿ ಶರಣಾಗ್ತೀನಿ ಎಂದ ದಾವೂದ್

    ಮುಂಬೈ: ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಪ್ರಾಣಭಯ ಶುರುವಾಗಿದ್ದು ಶರಣಾಗುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾನೆ ಎಂದು ರಾಷ್ಟ್ರೀಯ ವಾಹಿನಿಯೊಂದು ಸುದ್ದಿ ಪ್ರಸಾರ ಮಾಡಿದೆ.

    ಉಗ್ರ ಒಸಾಮಾ ಬಿನ್ ಲಾಡೆನ್‍ನನ್ನು ಅಮೆರಿಕ ಹತ್ಯೆ ನಡೆಸಿದ್ದಂತೆ ನನ್ನನ್ನೂ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿ ಹೊಡೆದುರುಳಿಸಬಹುದು ಎನ್ನುವ ಭಯ ದಾವೂದ್‍ಗೆ ಕಾಡುತ್ತಿದ್ದು ಎರಡು ಷರತ್ತುಗಳೊಂದಿಗೆ ನಾನು ಶರಣಾಗುತ್ತೇನೆ ಎಂದು ಹೇಳಿದ್ದಾನೆ.

    ನಾನೇ ಭಾರತಕ್ಕೆ ಶರಣಾಗುತ್ತೇನೆ. ಆದರೆ ಸುಪ್ರೀಂ ಕೋರ್ಟ್ ಖ್ಯಾತ ವಕೀಲ ರಾಮ್ ಜೇಠ್ಮಲಾನಿ ಮಧ್ಯವರ್ತಿಯಾಗಬೇಕು. ಮುಂಬೈನ ಆರ್ಥರ್ ಜೈಲಲ್ಲೇ ಇರಿಸಬೇಕು ಎನ್ನುವ ಬೇಡಿಕೆಯಿಟ್ಟಿದ್ದಾನೆ ಎಂದು ಮುಂಬೈ ಪೊಲೀಸರ ವಶದಲ್ಲಿರುವ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಪರ ವಕೀಲ ತಿಳಿಸಿದ್ದಾರೆ.

    ದಾವೂದ್ ಶರಣಾಗತಿಗೆ ಸಂಬಂಧಿಸಿದಂತೆ ಸುದ್ದಿ ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ 2015ರ ಜುಲೈನಲ್ಲಿ ವಕೀಲ ರಾಮ್ ಜೇಠ್ಮಲಾನಿ ಅವರು, ದಾವೂದ್ ಈ ಹಿಂದೆ ನನ್ನ ಜೊತೆ ಭಾರತಕ್ಕೆ ನಾನು ಶರಣಾಗುತ್ತೇನೆ ಎಂದು ಹೇಳಿದ್ದ ಎನ್ನುವುದನ್ನು ತಿಳಿಸಿದ್ದರು. ಇದನ್ನೂ ಓದಿ: ಮೋದಿ ಸರ್ಕಾರ ಬಂದ್ಮೇಲೆ ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ್ದಾನೆ ದಾವೂದ್: ಸಹೋದರನೇ ಬಾಯ್ಬಿಟ್ಟ ಸತ್ಯ

    ಭಾರತಕ್ಕೆ ಶರಣಾಗಲು ದಾವೂದ್ ಬಯಸಿದ್ದ. ಆದರೆ ಅಂದಿನ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಶರದ್ ಪವಾರ್ ಆತನ ಭದ್ರತೆಯ ಬೇಡಿಕೆ ವಿಚಾರವಾಗಿ ಯಾವುದೇ ನಿರ್ಧಾರಕ್ಕೆ ಬಂದಿರಲಿಲ್ಲ. ಅಷ್ಟೇ ಅಲ್ಲದೇ ಯುಪಿಎ ಸರ್ಕಾರದಿಂದಲೂ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಸಿಗದ ಕಾರಣ ಆತ ಶರಣಾಗಲಿಲ್ಲ ಎಂದು ತಿಳಿಸಿದ್ದರು.

    ದಾವೂದ್ ಪ್ರಮುಖ ಆರೋಪಿಯಾಗಿರುವ 1993 ರ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸುಮಾರು 227 ಜನರು ದಾರಣವಾಗಿ ಸಾವನ್ನಪ್ಪಿದ್ದರು. ಜೊತೆಗೆ 713 ಜನ ಗಂಭೀರವಾಗಿ ಗಾಯಗೊಂಡಿದ್ದರು. ಅಷ್ಟೇ ಅಲ್ಲದೇ ಸುಮಾರು 27 ಕೋಟಿ. ರೂ ನಷ್ಟವಾಗಿತ್ತು. ಇದನ್ನೂ ಓದಿ: ಈ ಕಾರಣಕ್ಕೆ ಭಾರತಕ್ಕೆ ಡಾನ್ ದಾವೂದ್ ಬರೋದೇ ಇಲ್ವಂತೆ

     

  • ಸರ್ಜಿಕಲ್ ಸ್ಟ್ರೈಕ್ 2.0: ಗಡಿ ನುಗ್ಗಿ ಪಾಕ್ ಸೈನಿಕರನ್ನು ಹತ್ಯೆಗೈದ ‘ಘಾತಕ್’ ತಂಡ!

    ಸರ್ಜಿಕಲ್ ಸ್ಟ್ರೈಕ್ 2.0: ಗಡಿ ನುಗ್ಗಿ ಪಾಕ್ ಸೈನಿಕರನ್ನು ಹತ್ಯೆಗೈದ ‘ಘಾತಕ್’ ತಂಡ!

    ನವದೆಹಲಿ: ಒಂದು ವರ್ಷದ ಬಳಿಕ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಈ ಮೂಲಕ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸರಿಯಾಗಿ ಪಾಠ ಕಲಿಸಿದೆ.

    ಡಿಸೆಂಬರ್ 25ರ ಸಂಜೆಯ ವೇಳೆ ಸೈನಿಕರು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಕದನ ವಿರಾಮ ಉಲ್ಲಂಘಿಸಿ ಭಾರತದತ್ತ ದಾಳಿ ನಡೆಸುತ್ತಿದ್ದ ಮೂವರು ಪಾಕ್ ಸೈನಿಕರನ್ನು ಹತ್ಯೆ ಮಾಡಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.

    ರಾಖಿಕ್ರಿ, ರಾವಲ್ ಕೋಟ್ ಸೆಕ್ಟರ್ ಪಾಕ್ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ. ಭಾರತೀಯ ಸೇನೆಯ ‘ಘಾತಕ್’ ತಂಡ ಗಡಿ ನಿಯಂತ್ರಣ ರೇಖೆಯಿಂದ 200-300 ಮೀಟರ್ ದೂರ ನುಗ್ಗಿ ಈ ದಾಳಿ ನಡೆಸಿದೆ. ಸೇನೆಯ ನಾಲ್ಕು ತುಕಡಿಗಳು ಈ ದಾಳಿಯಲ್ಲಿ ಪಾಲ್ಗೊಂಡಿತ್ತು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದ ಬಗ್ಗೆ ದಾಖಲೆಗಳಿಲ್ಲ: ಡಿಜಿಎಂಒ

    ಪಾಕಿಸ್ತಾನಿ ಸೈನಿಕರು ಕೆಲ ದಿನಗಳ ಹಿಂದೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ಈ ಗುಂಡಿನ ದಾಳಿಗೆ ದಾಳಿ ಭಾರತದ ಯೋಧ ಪರ್ಗತ್ ಸಿಂಗ್ ಹುತಾತ್ಮರಾಗಿದ್ದರು. ಈ ದಾಳಿಗೆ ಪ್ರತಿಯಾಗಿ ಸೇನೆ ಈ ಕಾರ್ಯಾಚರಣೆ ನಡೆಸಿದೆ.

    2016ರ ಸಪ್ಟೆಂಬರ್ 28, 29ರ ಮಧ್ಯರಾತ್ರಿ ವೇಳೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಪ್ರವೇಶಿಸಿ ಸರ್ಜಿಕಲ್ ದಾಳಿ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು. ಈ ಕಾರ್ಯಾಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಡಿಜಿಎಂಒ ಅಧಿಕಾರಿ ಕಾರ್ಯಾಚರಣೆಯ ವಿವರವನ್ನು ನೀಡಿದ್ದರು. ಇದನ್ನೂ ಓದಿ: ಸರ್ಜಿಕಲ್ ಸ್ಟ್ರೈಕ್‍ನಲ್ಲಿ ಯಾರೆಲ್ಲ ಇದ್ದರು ಅನ್ನೋದು ಈಗ ಬಹಿರಂಗವಾಯ್ತು

  • ಗುಜರಾತ್ ಚುನಾವಣೆ ಹೊತ್ತಲ್ಲೇ ಬಿಡುಗಡೆಯಾಗಲಿದೆ ಮೋದಿ ಸಿನಿಮಾ

    ಗುಜರಾತ್ ಚುನಾವಣೆ ಹೊತ್ತಲ್ಲೇ ಬಿಡುಗಡೆಯಾಗಲಿದೆ ಮೋದಿ ಸಿನಿಮಾ

    ಅಹಮದಾಬಾದ್: ಗುಜರಾತ್ ಚುನಾವಣೆ ಹೊತ್ತಲ್ಲೇ ಮೋದಿ ಕುರಿತ ಸಿನಿಮಾ ರಿಲೀಸ್ ಆಗುತ್ತಿದೆ. ಮೋದಿ ಕಾ ಗಾಂವ್ ಅಂದ್ರೆ ಮೋದಿಯ ಹಳ್ಳಿ ಎನ್ನುವ ಹೆಸರಿನ ಸಿನಿಮಾ ಬಿಡುಗಡೆಯಾಗಲಿದೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ಕುರಿತು ಸಿನಿಮಾ ಆಗಿದ್ದು, ಸೆನ್ಸಾರ್ ಬೋರ್ಡ್ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಲು 9 ತಿಂಗಳು ತೆಗೆದುಕೊಂಡಿತ್ತು. ಈ ಸಿನಿಮಾ ಈಗ ಡಿಸೆಂಬರ್ ಮೊದಲ ವಾರ ಅಥವಾ ಎರಡನೇ ವಾರ ತೆರೆ ಕಾಣಲಿದೆ. ಡಿಸೆಂಬರ್ 9ರಂದು ಗುಜರಾತ್‍ ನಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸುತ್ತಿದೆ ಎಂದು ವರದಿಯಾಗಿದೆ.

    ಚಿತ್ರದ ನಿರ್ಮಾಪಕ ಸುರೇಶ್ ಜಾ, 9 ತಿಂಗಳು ಸಿನಿಮಾಕ್ಕಾಗಿ ಅಲೆದು ಈಗ ನೆಮ್ಮದಿಯಾಗಿದ್ದಾರೆ. ಈಗ ನಾನು ಆದಷ್ಟು ಬೇಗ ಸಿನಿಮಾ ಬಿಡುಗಡೆ ಮಾಡುತ್ತೇನೆ. ಡಿಸೆಂಬರ್ ಮೊದಲ ವಾರ ಅಥವಾ ಎರಡನೇ ವಾರ ಈ ಸಿನಿಮಾವನ್ನು ಬಿಡುಗಡೆ ಮಾಡಲು ಸೂಚನೆ ನೀಡಿದ್ದಾರೆ. ಗುಜರಾತ್ ನ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆಯಾಗುವ ತಯಾರಿ ನಡೆಸುತ್ತಿದ್ದೇವೆ. ಅಷ್ಟೇ ಅಲ್ಲದೇ ದೇಶದ ವಿವಿಧ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಸುರೇಶ್ ಜಾ ತಿಳಿಸಿದ್ದಾರೆ.

    ಚಿತ್ರದಲ್ಲಿ ನರೇಂದ್ರ ಮೋದಿ ಅವರ ಪಾತ್ರಕ್ಕೆ ನಾಗೇಂದ್ರ ಎಂದು ಹೆಸರಿಡಲಾಗಿದೆ. ಹ್ಯಾಪಿ ನ್ಯೂ ಇಯರ್ ಚಿತ್ರದಲ್ಲಿ ಅಭಿನಯಿಸಿದ್ದ ಥೇಠ್ ಮೋದಿಯಂತೆ ಕಾಣುವ ವಿಕಾಸ್ ಮಾಹಂತೆ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ಡಿಜಿಟಲ್ ಇಂಡಿಯಾ, ಸರ್ಜಿಕಲ್ ಸ್ಟ್ರೈಕ್, ಸ್ವಚ್ಛ ಭಾರತ ಅಭಿಯಾನ, ನೋಟು ನಿಷೇಧದಂತಹ ಮೋದಿ ಕೈಗೊಂಡ ದಿಟ್ಟ ನಿರ್ಧಾರಗಳ ಬಗ್ಗೆ ಸಿನಿಮಾದಲ್ಲಿ ಚಿತ್ರಿಸಲಾಗಿದೆ.