Tag: ಸರ್ಟಿಫಿಕೇಟ್

  • ‘ಓ ಮೈ ಗಾಡ್’ ವಯಸ್ಕರ ಚಿತ್ರ: ಅಕ್ಷಯ್ ಕುಮಾರ್ ಸಿನಿಮಾಗೆ ‘ಎ’ ಸರ್ಟಿಫಿಕೇಟ್

    ‘ಓ ಮೈ ಗಾಡ್’ ವಯಸ್ಕರ ಚಿತ್ರ: ಅಕ್ಷಯ್ ಕುಮಾರ್ ಸಿನಿಮಾಗೆ ‘ಎ’ ಸರ್ಟಿಫಿಕೇಟ್

    ಬಾಲಿವುಡ್ (Bollywood) ಹೆಸರಾಂತ ನಟ ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಓ ಮೈ ಗಾಡ್ 2’ (Oh My God 2)  ಸಿನಿಮಾ ವಿವಾದಿತ ಅಂಶಗಳು ಇರುವ ಕಾರಣದಿಂದಾಗಿ ಕೇಂದ್ರ ಚಲನಚಿತ್ರ ಪ್ರಮಾಣೀಕೃತ ಮಂಡಳಿ (ಸಿ.ಬಿ.ಎಫ್.ಸಿ) ಸೆನ್ಸಾರ್ ಪತ್ರವನ್ನು (Censor) ಕೊಡಲು ನಿರಾಕರಿಸಿತ್ತು (Denial). ಜೊತೆಗೆ ಈ ಸಿನಿಮಾವನ್ನು ಪರಿಶೀಲನಾ ಸಮಿತಿಗೆ ಕಳುಹಿಸಿ ಕೊಡಲಾಗಿತ್ತು. ಪರಿಶೀಲನಾ ಸಮಿತಿಯು ಕೊನೆಗೂ ಚಿತ್ರಕ್ಕೆ ಪ್ರಮಾಣ ಪತ್ರ ದಯಪಾಲಿಸಿದೆ.

    ಸಿಬಿಎಫ್ಸಿ ಸಿನಿಮಾದ ಒಟ್ಟು 20 ಕಡೆ ದೃಶ್ಯಗಳನ್ನು ಕತ್ತರಿಸಲು ತಿಳಿಸಲಾಗಿತ್ತು. ಕೆಲವು ಕಡೆ ಮಾತುಗಳನ್ನು ಮ್ಯೂಟ್ ಮಾಡಲು ಹೇಳಲಾಗಿತ್ತು. ಇಷ್ಟೆಲ್ಲ ಮಾಡಿದರೂ ಚಿತ್ರಕ್ಕೆ ವಯಸ್ಕರು ನೋಡಬಹುದಾದ ಸಿನಿಮಾ ಎಂದು ‘ಎ’ ಸರ್ಟಿಫಿಕೇಟ್ ನೀಡಲಾಗಿತ್ತು. ಇದೀಗ ಒಂದಷ್ಟು ಬದಲಾವಣೆಯನ್ನು ಮಾಡಿಕೊಳ್ಳಲು ಹೇಳುವ ಮೂಲಕ ಪರಿಶೀಲನಾ ಸಮಿತಿಯೂ ‘ಎ’ ಪ್ರಮಾಣ ಪತ್ರ ನೀಡಿದೆ. ಹಾಗಾಗಿ 18 ವರ್ಷ ತುಂಬಿದವರು ಮಾತ್ರ ಈ ಸಿನಿಮಾ ನೋಡಬಹುದಾಗಿದೆ.

    ಅಕ್ಷಯ್ ಕುಮಾರ್ ಈ ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದಾರೆ. ಈ ಪಾತ್ರದ ಮೂಲಕ ಲೈಂಗಿಕ ಶಿಕ್ಷಣವನ್ನು ಹೇಳಲು ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಸೆನ್ಸಾರ್ ಪತ್ರವನ್ನು ನೀಡಲು ನಿರಾಕರಿಸಿತ್ತು. ಲೈಂಗಿಕ ಶಿಕ್ಷಣದ ಕುರಿತಾಗಿ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಇಂತಹ ವಿಷಯವನ್ನು ಶಿವನ ಮೂಲಕ ಹೇಳಲು ಹೊರಟಿರುವುದು ಸೆನ್ಸಾರ್ ಮಂಡಳಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

    ಹತ್ತು ವರ್ಷಗಳ ಹಿಂದೆ ರಿಲೀಸ್ ಆಗಿದ್ದ ಓ ಮೈ ಗಾಡ್ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ಕೃಷ್ಣನಾಗಿ (Krishna) ಕಾಣಿಸಿಕೊಂಡಿದ್ದರು. ಈ ಬಾರಿ ಅವರು ಶಿವನ (Shiva) ಅವತಾರವೆತ್ತಿದ್ದಾರೆ. ಈ ಹಿಂದೆ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿತ್ತು. ಅದನ್ನು ಅಕ್ಷಯ್ ಅಭಿಮಾನಿಗಳು ಅಪಾರವಾಗಿ ಮೆಚ್ಚಿದ್ದರು.

     

    ಹೇಳಿ ಕೇಳಿ ಇದೊಂದು ಕಾಮಿಡಿ ಸಿನಿಮಾ. ಶಿವನ ರೂಪದಲ್ಲಿ ಬಂದಿರುವ ಅಕ್ಷಯ್, ಯಾವೆಲ್ಲ ಲೀಲೆಗಳನ್ನು ಪರದೆಯ ಮೇಲೆ ಆಡುತ್ತಾರೋ ಕಾದು ನೋಡಬೇಕು. ಟೀಸರ್ ನಲ್ಲಿಯೂ ಹಲವು ಕಾಮಿಡಿ ಅಂಶಗಳು ಇದ್ದು, ಇಡೀ ಸಿನಿಮಾ ಹಾಸ್ಯದ ರಸದೌತಣವನ್ನು ನೀಡುವುದು ಪಕ್ಕಾ ಅನ್ನುವಂತಿದೆ ರಿಲೀಸ್ ಆದ ಟೀಸರ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆನ್ಸಾರ್ ಸುಳಿಯಲ್ಲಿ ಅಕ್ಷಯ್ ನಟನೆಯ ‘ಓ ಮೈ ಗಾಡ್ 2’ ವಿಲವಿಲ

    ಸೆನ್ಸಾರ್ ಸುಳಿಯಲ್ಲಿ ಅಕ್ಷಯ್ ನಟನೆಯ ‘ಓ ಮೈ ಗಾಡ್ 2’ ವಿಲವಿಲ

    ಬಾಲಿವುಡ್ ಹೆಸರಾಂತ ನಟ ಅಕ್ಷಯ್ ಕುಮಾರ್ ನಟನೆಯ ‘ಓ ಮೈ ಗಾಡ್ 2’ ಸಿನಿಮಾಗೆ ಈವರೆಗೂ ಸೆನ್ಸಾರ್ ಮಂಡಳಿಯು ಪ್ರಮಾಣ ಪತ್ರ ನೀಡಿಲ್ಲ. ಹೀಗಾಗಿ ಸಹಜವಾಗಿಯೇ ಚಿತ್ರತಂಡಕ್ಕೆ ಆತಂಕ ಎದುರಾಗಿದೆ. ಆಗಸ್ಟ್ 11 ರಂದು ‘ಓ ಮೈಗಾಡ್ 2’ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಆದರೆ, ಈ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕೃತ ಮಂಡಳಿ (ಸಿ.ಬಿ.ಎಫ್.ಸಿ) ಸೆನ್ಸಾರ್ ಪತ್ರವನ್ನು (Censor) ಕೊಡಲು ನಿರಾಕರಿಸಿದೆ (Denial). ಜೊತೆಗೆ ಈ ಸಿನಿಮಾವನ್ನು ಪರಿಶೀಲನಾ ಸಮಿತಿಗೆ ಕಳುಹಿಸಿ ಕೊಡಲಾಗಿದೆ. ಹಾಗಾಗಿ ಚಿತ್ರ ಬಹುಶಃ ತಡವಾಗಬಹುದು ಎನ್ನುವುದು ಬಿಟೌನ್ ಮಾತು.

    ಅಕ್ಷಯ್ ಕುಮಾರ್ ಈ ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದಾರೆ. ಈ ಪಾತ್ರದ ಮೂಲಕ ಲೈಂಗಿಕ ಶಿಕ್ಷಣವನ್ನು ಹೇಳಲು ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಸೆನ್ಸಾರ್ ಪತ್ರವನ್ನು ನೀಡಲು ನಿರಾಕರಿಸಲಾಗಿದೆಯಂತೆ. ಲೈಂಗಿಕ ಶಿಕ್ಷಣದ ಕುರಿತಾಗಿ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಇಂತಹ ವಿಷಯವನ್ನು ಶಿವನ ಮೂಲಕ ಹೇಳಲು ಹೊರಟಿರುವುದು ಸೆನ್ಸಾರ್ ಮಂಡಳಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆದರೆ, ಈ ಹಿಂದೆ ರಿಲೀಸ್ ಆಗಿರುವ ಟೀಸರ್ ಗೆ ಸೆನ್ಸಾರ್ ಪತ್ರ ಸಿಕ್ಕಿದೆ.

     ‘ಓ ಮೈ ಗಾಡ್ 2’ (Oh My God 2) ಸಿನಿಮಾದ ಟೀಸರ್ ಮೊನ್ನೆಯಷ್ಟೇ ರಿಲೀಸ್ ಆಗಿದೆ. ಸಿನಿಮಾದಲ್ಲಿನ ಅಕ್ಷಯ್ (Akshay Kumar) ಅವತಾರಕ್ಕೆ ಅಭಿಮಾನಿಗಳು ಜೈ ಹೋ ಎಂದಿದ್ದಾರೆ. 2012ರಲ್ಲಿ ಈ ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿತ್ತು. ಇದೀಗ ಪಾರ್ಟ್ 2 ಸಿದ್ಧವಾಗಿದ್ದು ಅಕ್ಷಯ್ ಪಾತ್ರ ಕೂಡ ಬದಲಾಗಿದೆ. ಹತ್ತು ವರ್ಷಗಳ ಹಿಂದೆ ರಿಲೀಸ್ ಆಗಿದ್ದ ಓ ಮೈ ಗಾಡ್ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ಕೃಷ್ಣನಾಗಿ (Krishna) ಕಾಣಿಸಿಕೊಂಡಿದ್ದರು. ಈ ಬಾರಿ ಅವರು ಶಿವನ (Shiva) ಅವತಾರವೆತ್ತಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿತ್ತು. ಅದನ್ನು ಅಕ್ಷಯ್ ಅಭಿಮಾನಿಗಳು ಅಪಾರವಾಗಿ ಮೆಚ್ಚಿದ್ದರು. ಈಗಿನ ಟೀಸರ್ ಅನ್ನು ಅಷ್ಟೇ ಮೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ:‘BAD’ ಸಿನಿಮಾದಲ್ಲಿ ಪ್ರೀತಿಯ ಪ್ರತಿನಿಧಿಯಾದ ಅಪೂರ್ವ ಭಾರದ್ವಾಜ್

    ಹೇಳಿ ಕೇಳಿ ಇದೊಂದು ಕಾಮಿಡಿ ಸಿನಿಮಾ. ಶಿವನ ರೂಪದಲ್ಲಿ ಬಂದಿರುವ ಅಕ್ಷಯ್, ಯಾವೆಲ್ಲ ಲೀಲೆಗಳನ್ನು ಪರದೆಯ ಮೇಲೆ ಆಡುತ್ತಾರೋ ಕಾದು ನೋಡಬೇಕು. ಟೀಸರ್ ನಲ್ಲಿಯೂ ಹಲವು ಕಾಮಿಡಿ ಅಂಶಗಳು ಇದ್ದು, ಇಡೀ ಸಿನಿಮಾ ಹಾಸ್ಯದ ರಸದೌತಣವನ್ನು ನೀಡುವುದು ಪಕ್ಕಾ ಅನ್ನುವಂತಿದೆ ರಿಲೀಸ್ ಆದ ಟೀಸರ್.

     

    ಟೀಸರ್ ನೋಡಿ ಕೆಲವರು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗದಂತೆ ಎಚ್ಚವಹಿಸಿ ಎಂದು ಸಲಹೆ ನೀಡಿದರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಂದರೆ ಬೈಕಾಟ್ ಮಾಡುವುದಾಗಿಯೂ ಕೆಲವರು ಕಾಮೆಂಟ್ ಮಾಡಿದ್ದಾರೆ. ಅಂದಹಾಗೆ ಅಕ್ಷಯ್ ಕುಮಾರ್ ಜೊತೆ ಈ ಸಿನಿಮಾದಲ್ಲಿ ಯಾಮಿ ಗೌತಮ್, ಪಂಕಜ್ ತ್ರಿಪಾಠಿ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದುಡ್ಡು ಕೊಟ್ರೆ ಟ್ರೈನಿಂಗ್‌ ಇಲ್ಲದೇ ಸಿಗುತ್ತೆ ಬ್ಯೂಟಿಪಾರ್ಲರ್ ಸರ್ಟಿಫಿಕೇಟ್..!

    ದುಡ್ಡು ಕೊಟ್ರೆ ಟ್ರೈನಿಂಗ್‌ ಇಲ್ಲದೇ ಸಿಗುತ್ತೆ ಬ್ಯೂಟಿಪಾರ್ಲರ್ ಸರ್ಟಿಫಿಕೇಟ್..!

    ಬೆಂಗಳೂರು: ಬ್ಯೂಟಿ ಪಾರ್ಲರ್‌ಗೆ ಹೆಣ್ಣುಮಕ್ಕಳು ಹೋಗೋದು ಕಾಮನ್. ಕೆಲವರಂತೂ ತಿಂಗಳಿಗೆ ಒಂದು ಬಾರಿಯಾದ್ರೂ ಹೋಗೇ ಹೋಗ್ತಾರೆ. ಆದರೆ ಈಗ ಶಾಕಿಂಗ್ ವಿಷಯ ಬಯಲಾಗಿದೆ.

    ಬ್ಯೂಟಿಷಿಯನ್ಸ್ ಗಳು ನೋಂದಾಯಿತ ಬ್ಯೂಟಿಪಾರ್ಲರ್ ನಲ್ಲಿ ವರ್ಷಗಟ್ಟಲೇ ಟ್ರೈನಿಂಗ್‌ ಮಾಡಿ ಪ್ರಾಕ್ಟಿಕಲ್ ತರಬೇತಿಯನ್ನೂ ಪಡೆದುಕೊಂಡು ಅದಾದ ಬಳಿಕ ಅವರಿಗೆ ಸರ್ಟಿಫಿಕೇಟ್ ನೀಡಲಾಗುತ್ತದೆ. ಆದರೀಗ ನೋಂದಾಯಿತ ಪಾರ್ಲರ್ ಅಸೋಸಿಯೇಷನ್ ಹೆಸರಿನಲ್ಲಿಯೇ 10 ಸಾವಿರ ದುಡ್ಡು ಕೊಟ್ರೇ ಯಾರಿಗೆ ಬೇಕಾದ್ರೂ, ಎಷ್ಟು ಬೇಕಾದ್ರೂ ಪಟಾಫಟ್ ಅಂತಾ ಟ್ರೈನಿಂಗ್‌ ಕೇಳದೇ ಸರ್ಟಿಫಿಕೇಟ್ ಕೊಡುವ ಏಜೆಂಟರು ಹುಟ್ಟುಕೊಂಡಿದ್ದಾರೆ ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಇದನ್ನೂ ಓದಿ: ಹನುಮನ ಜನ್ಮಸ್ಥಳಕ್ಕಾಗಿ ನಿಲ್ಲದ ರಾಜ್ಯಗಳ ಕ್ಯಾತೆ – ಹನುಮಂತ ಹುಟ್ಟಿದ್ದು ಗೋವಾದಲ್ಲಿ ಎಂದ ಶ್ರೀನಿವಾಸ್ ಖಲಾಪ್

    ಸ್ವತಃ ಈ ಆರೋಪ ಮಾಡ್ತಾ ಇರೋದು ಕರ್ನಾಟಕ ಬ್ಯೂಟಿ ಪಾರ್ಲರ್ ಅಸೋಸಿಯೇಷನ್. ಇವರದ್ದೇ ಸಂಸ್ಥೆಯ ಹೆಸರು ಬಳಸಿಕೊಂಡು ಸರ್ಟಿಫಿಕೇಟ್ ಮಾಡಿ ಕೆಲ ಏಜೆಂಟ್‌ರು ಮಾರಾಟ ಮಾಡುತ್ತಾ ಇದ್ದಾರೆ ಎಂದು ಸಂಘಟನೆ ಆರೋಪಿಸಿದೆ. ಈ ಸಂಬಂಧ ಮಾತನಾಡಿರುವ ಆಡಿಯೋ ಸಹ ಲೀಕ್ ಆಗಿದೆ. ಇದನ್ನೂ ಓದಿ: ಗೋ ಶಾಲೆಯಲ್ಲಿ ಒಂದು ತಿಂಗಳ ಕಾಲ ಸೇವೆ – ಷರತ್ತು ವಿಧಿಸಿ ಆರೋಪಿಗೆ ಜಾಮೀನು

    ಈ ರೀತಿ ಬೇಕಾಬಿಟ್ಟಿ ದುಡ್ಡಿಗೆ ಸರ್ಟಿಫಿಕೇಟ್ ಮಾರಾಟ ಮಾಡೋದ್ರಿಂದ ಸೈಡ್‌ಎಫೆಕ್ಟ್ ಉಂಟಾಗುತ್ತದೆ. ಸಾಮಾನ್ಯವಾಗಿ ಆಯಾಯ ಚರ್ಮಕ್ಕೆ ಹೊಂದುವ ಪ್ರಾಡೆಕ್ಟ್ ಬಳಕೆ ಮಾಡಬೇಕು. ಕೆಲವು ಬಿಪಿ ಶುಗರ್ ಸಮಸ್ಯೆ ಇರೋರಿಗೆ ಕೆಲ ಪ್ರಾಡೆಕ್ಟ್ ಅಲರ್ಜಿ ಇರುತ್ತೆ. ಇದೆಲ್ಲವನ್ನು ತರಬೇತಿ ಪಡೆದುಕೊಂಡವರಿಗೆ ಅಷ್ಟೇ ಅರ್ಥವಾಗುತ್ತದೆ. ಆದರೆ ಹೀಗೆ ಟ್ರೈನಿಂಗ್‌ ಇಲ್ಲದೇ ಸರ್ಟಿಫಿಕೇಟ್ ಕೊಡುವ ದಂಧೆಯಿಂದ ನಿಜವಾಗಿಯೂ ತರಬೇತಿ ಪಡೆದವರಿಗೆ ಸಮಸ್ಯೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

    ಆಡಿಯೋ ನಲ್ಲಿ ಏನಿದೆ?

    • ಏಜೆಂಟ್ – ಅದು ಮಾಡಿಸಿರೋದು ಏಜೆಂಟ್
      ಅನಿತಾ – ಯಾರು?
    • ಏಜೆಂಟ್ – ಅದಕ್ಕೆ ಒಬ್ರು ಏಜೆಂಟ್ ರ‍್ತಾರೆ ಅವ್ರು ಮಾಡಿಸೋದು
      ಅನಿತಾ – ಹೋ ಅದಕ್ಕೆ ಏಜೆಂಟ್ ಬೇರೆ ರ‍್ತಾರಾ?
    • ಅನಿತಾ – ನಮ್ಗೆ ಬೇಕು ಅಂದ್ರೆ?
      ಏಜೆಂಟ್ – ಅದನ್ನು ಹತ್ತುಸಾವಿರ ಕೊಟ್ಟುಮಾಡಿಸಿರೋದು
    • ಏಜೆಂಟ್ – ನಿಮ್ಗೆ ಬೇಕಾದ್ರೇ ಹೇಳಿ ಮಾಡಿಸಿಕೊಡ್ತೀನಿ ನಾನು
      ಅನಿತಾ – ಹಂಗಾದ್ರೇ ಬೇಕು 2 ಸರ್ಟಿಫಿಕೇಟ್
    • ಏಜೆಂಟ್ – 2 ಯಾಕೆ 10 ಕೊಡ್ತೀನಿ ಬೇಕಾದ್ರೇ

  • ಇನ್ಮುಂದೆ ಗ್ರಾಮ ಪಂಚಾಯ್ತಿಯಲ್ಲೇ ಸಿಗಲಿದೆ ಮದುವೆ ಸರ್ಟಿಫಿಕೇಟ್: ಸರ್ಕಾರ ಆದೇಶ

    ಇನ್ಮುಂದೆ ಗ್ರಾಮ ಪಂಚಾಯ್ತಿಯಲ್ಲೇ ಸಿಗಲಿದೆ ಮದುವೆ ಸರ್ಟಿಫಿಕೇಟ್: ಸರ್ಕಾರ ಆದೇಶ

    ಬೆಂಗಳೂರು: ಇನ್ನು ಮುಂದೆ ಗ್ರಾಮ ಪಂಚಾಯ್ತಿಯಲ್ಲೇ ಮದುವೆ ಸರ್ಟಿಫಿಕೇಟ್ ಸಿಗಲಿದೆ. ಈ ಸಂಬಂಧ ಇಂದು ಸರ್ಕಾರ ಅಧಿಕೃತ ಆದೇಶವೊಂದನ್ನು ಹೊರಡಿಸಿದೆ.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಸರ್ಕಾರ ವಿವಾಹ ನೊಂದಣಿ ಅಧಿಕಾರವನ್ನು ಪಿಡಿಓಗಳಿಗೆ ಸರ್ಕಾರ ನೀಡಿದೆ. ಹೀಗಾಗಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಇನ್ನು ಮುಂದೆ ಮದುವೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ. ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ

    ಇಷ್ಟು ದಿ ಸಬ್ ರಿಜಿಸ್ಟರ್ ಆಫೀಸ್ ನಲ್ಲಿ ಮದುವೆ ನೋಂದಣಿಗೆ ಅವಕಾಶ ಇತ್ತು. ಮದುವೆ ನಡೆದ ಸ್ಥಳ ಅಥವಾ ಪತಿ-ಪತ್ನಿಯರು ವಾಸಿಸುವ ಸ್ಥಳದ ಅಧಿಕಾರ ವ್ಯಾಪ್ತಿ ಹೊಂದಿರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಸಬೇಕಿತ್ತು. ಅದಕ್ಕೆ ಅಗತ್ಯವಾದ ಅರ್ಜಿ ನಮೂನೆ ಅದೇ ಕಚೇರಿಯಲ್ಲಿ ದೊರೆಯುತ್ತಿತ್ತು. ಇಲ್ಲವೇ ಅದನ್ನು ಇಂಟರ್ನೆಟ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿತ್ತು.

    ಈ ಅರ್ಜಿಯನ್ನು ಎಚ್ಚರಿಕೆಯಿಂದ ತುಂಬಿ ನಂತರ ಮೂವರು ಸಾಕ್ಷಿಗಳು (ಸ್ನೇಹಿತರು, ಬಂಧುಗಳು) ಸಹಿ ಮಾಡಬೇಕಿತ್ತು. ಈ ಅರ್ಜಿಗೆ ವಧು-ವರ ಕೂಡ ಅಹಿ ಮಾಡಿ, ನಂತರ ಅದಕ್ಕೆ ಮೊಹರು ಹಾಕಿ ರಿಜಿಸ್ಟ್ರಾರ್ ಸಹಿ ಮಾಡುತ್ತಿದ್ದರು. ಆದರೆ ಇನ್ಮುಂದೆ ಗ್ರಾಮ ಪಂಚಾಯತಿ ಪಿಡಿಓಗೆ ಮದುವೆ ನೋಂದಣಿ ಅಧಿಕಾರವನ್ನು ಸರ್ಕಾರ ಕೊಟ್ಟಿದೆ.

  • ಬಿಡಿಸಿ ಸೀಟ್ ಗೆದ್ದು, ಸರ್ಟಿಫಿಕೇಟ್ ಸ್ವೀಕರಿಸಿಲು ಮಂಟಪ ಬಿಟ್ಟು ಹೋದ ವಧು

    ಬಿಡಿಸಿ ಸೀಟ್ ಗೆದ್ದು, ಸರ್ಟಿಫಿಕೇಟ್ ಸ್ವೀಕರಿಸಿಲು ಮಂಟಪ ಬಿಟ್ಟು ಹೋದ ವಧು

    ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯತ್ ಚುನಾವಣೆಯಲ್ಲಿ ಬ್ಲಾಕ್ ಡೆವಲಪ್‍ಮೆಂಟ್ ಕೌನ್ಸಿಲ್ ಸ್ಥಾನವನ್ನು ಗೆದ್ದಿರುವ ವಿಚಾರ ತಿಳಿದ ವಧು, ಮದುವೆ ಸಮಾರಂಭವನ್ನು ಅರ್ಧದಲ್ಲಿಯೇ ಬಿಟ್ಟು, ಮತ ಎಣಿಕೆ ಕೇಂದ್ರಕ್ಕೆ ಧಾವಿಸಿ ತನ್ನ ವಿಜೇತ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾರೆ.

    ಈ ಘಟನೆ ಭಾನುವಾರ ನಡೆದಿದ್ದು, ಪೂನಂ ಶರ್ಮಾ(28) ಎಂಬವರು ಹೂವಿನ ಹಾರವನ್ನು ವರನೊಂದಿಗೆ ವಿನಿಮಯ ಮಾಡಿಕೊಳ್ಳುತ್ತಿದ್ದ ವೇಳೆ ಈ ಸಿಹಿ ಸುದ್ದಿ ತಿಳಿದುಬಂದಿದೆ. ವಿಶೇಷವೆಂದರೆ ಪೂನಂ ಅವರ ವಿವಾಹವನ್ನು ಮೇ 2ರಂದು ನಿಗದಿ ಪಡಿಸಲಾಗಿತ್ತು ಮತ್ತು ಪಂಚಾಯತ್ ಚುನಾಣೆಯ ಎಣಿಕೆಯನ್ನೂ ಕೂಡ ಮೇ 2 ರಂದೇ ನಿಗದಿ ಪಡಿಸಲಾಗಿತ್ತು.

    ಪೂನಂ ಶರ್ಮಾ ಮದುವೆ ಮಂಟಪದಿಂದ 20 ಕಿ.ಮೀ ದೂರದಲ್ಲಿರುವ ಎಣಿಕೆ ಕೇಂದ್ರಕ್ಕೆ ಭಾನುವಾರ ರಾತ್ರಿ 9.30ಕ್ಕೆ ತಲುಪಿ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಈ ವೇಳೆ ಅವರು ವಧುವಿನ ಉಡುಪು ಗುಲಾಬಿ ಬಣ್ಣದ ಮಾಸ್ಕ್ ಧರಿಸಿರುವುದನ್ನು ಕಂಡು ಅಲ್ಲಿದ್ದವರು ಕಂಡು ಬೆರಗಾದರು. ಅಲ್ಲದೆ ಪ್ರಮಾಣ ಪತ್ರವನ್ನು ಅಧಿಕಾರಿಗಳಿಂದ ಸ್ವೀಕರಿಸುತ್ತಿರುವ ಫೋಟೋವನ್ನು ಸೆರೆ ಹಿಡಿಯಲಾಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ನಾನು ಈಗ ಬಿಡಿಸಿ ಸದಸ್ಯೆಯಾಗಿರುವುದು ನನ್ನ ಮದುವೆಗೆ ಸಿಕ್ಕ ಅತ್ಯುತ್ತಮ ಉಡುಗೊರೆಯಾಗಿದೆ. ಈ ಕ್ಷಣವನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ವರ್ಮಾಲಾ ಮೊದಲು ನಾನು 31 ಮತಗಳಿಂದ ಚುನಾವಣೆಯಲ್ಲಿ ಗೆದ್ದಿದ್ದೇನೆ. ನನ್ನ ಸೋದರ ಅಳಿಯಂದಿರು ನನಗೆ ಪ್ರಮಾಣಪತ್ರವನ್ನು ಸ್ವೀಕರಿಸಲು ಮದುವೆ ಮಂಟಪದಿಂದ ಹೊರಗಡೆ ಹೋಗಲು ಅವಕಾಶ ಮಾಡಿಕೊಟ್ಟರು. ನನ್ನ ಗೆಲುವಿನಿಂದ ಹಳ್ಳಿಯವರೆಲ್ಲ ಸಂತಸದಿಂದ ಇದ್ದಾರೆ ಎಂದು ಹೇಳಿದರು.

    ನಂತರ ಗೆದ್ದ ಬ್ಯಾಡ್ಜ್‌ನೊಂದಿಗೆ ಎಣಿಕೆ ಕೇಂದ್ರದಿಂದ ಪೂನಂ ಶರ್ಮಾ ಮಂಟಪಕ್ಕೆ ಹಿಂದಿರುಗಿದರು. ನಂತರ ಉಳಿದ ಮದುವೆಯ ಶಾಸ್ತ್ರಗಳನ್ನು ಮುಂದುವರೆಸಲಾಯಿತು.