Tag: ಸರ್ದಾರ್ ವಲ್ಲಭಭಾಯಿ ಪಟೇಲ್

  • ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ವಿಳಂಬ ಮಾಡಿತ್ತು: ಅಮಿತ್ ಶಾ ಕಿಡಿ

    ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ವಿಳಂಬ ಮಾಡಿತ್ತು: ಅಮಿತ್ ಶಾ ಕಿಡಿ

    ಪಾಟ್ನಾ: ಸರ್ದಾರ್ ವಲ್ಲಭಭಾಯಿ ಪಟೇಲ್‌ರಂತಹ (Sardhar Vallabhi Pattel) ಮಹಾನ್ ವ್ಯಕ್ತಿಗೆ ಭಾರತ ರತ್ನ ನೀಡಲು ಕಾಂಗ್ರೆಸ್ ಪಕ್ಷ 41 ವರ್ಷ ವಿಳಂಬ ಮಾಡಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಾಗ್ದಾಳಿ ನಡೆಸಿದ್ದಾರೆ.

    ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಅಮಿತ್ ಶಾ ಪಾಟ್ನಾದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ಲಕ್ಷದ್ವೀಪದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಸರ್ದಾರ್ ಪಟೇಲ್ ಕಾರಣರಾಗಿದ್ದರು. ಆದರೆ ದುರದೃಷ್ಟವಶಾತ್, ಅಂತಹ ಮಹಾನ್ ವ್ಯಕ್ತಿಗೆ ಭಾರತ ರತ್ನ ನೀಡಲು ಕಾಂಗ್ರೆಸ್ (Congress) 41 ವರ್ಷ ಕಾಲ ವಿಳಂಬ ಮಾಡಿತ್ತು ಎಂದು ದೂರಿದ್ದಾರೆ. ಇದನ್ನೂ ಓದಿ: ಚೀನಾ ಮೇಲಿನ ಟ್ಯಾರಿಫ್ ಶೇ. 57ರಿಂದ 47ಕ್ಕೆ ಇಳಿಸಿದ ಟ್ರಂಪ್

    ಪಟೇಲ್ ಅವರ ಮರಣದ ನಂತರ ಕಾಂಗ್ರೆಸ್ಸಿನವರು ಅವರ ಸಮಾಧಿಯಾಗಲಿ, ಸ್ಮಾರಕವಾಗಲಿ ಯಾವುದನ್ನೂ ನಿರ್ಮಿಸಿರಲಿಲ್ಲ. ನರೇಂದ್ರ ಮೋದಿ, ಗುಜರಾತ್ ಸಿಎಂ ಆದಾಗ, ಅವರ ಏಕತಾ ಪ್ರತಿಮೆಯ ನಿರ್ಮಾಣಕ್ಕೆ ಚಾಲನೆ ನೀಡಿದರು. ಇದು ಈಗ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ ಎಂದಿದ್ದಾರೆ.

    182 ಮೀ. ಎತ್ತರದ ಏಕತಾ ಪ್ರತಿಮೆಯನ್ನು ನಿರ್ಮಿಸಲು ರೈತರಿಂದ ಕಬ್ಬಿಣವನ್ನು ಸಂಗ್ರಹಿಸಲಾಯಿತು. ಇಂದು, ಇದು ಪ್ರಮುಖ ಪ್ರವಾಸಿ ತಾಣವಾಗಿದೆ. ಇದನ್ನು ನೋಡಲು ಭಾರತ ಮತ್ತು ವಿದೇಶಗಳಿಂದ ಕೋಟ್ಯಂತರ ಜನರು ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

  • ಗುಜರಾತ್ ಪ್ರವಾಸದಲ್ಲಿ ಎಚ್‍ಡಿಡಿ – ಏಕತಾ ಪ್ರತಿಮೆಗೆ ಭೇಟಿ

    ಗುಜರಾತ್ ಪ್ರವಾಸದಲ್ಲಿ ಎಚ್‍ಡಿಡಿ – ಏಕತಾ ಪ್ರತಿಮೆಗೆ ಭೇಟಿ

    ಗಾಂಧಿನಗರ: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಉಕ್ಕಿನ ಪ್ರತಿಮೆ ಇರುವ ಸ್ಥಳಕ್ಕೆ ಭಾರತದ ಮಾಜಿ ಪ್ರಧಾನಿ ದೇವೇಗೌಡ ಅವರು ಭೇಟಿ ನೀಡಿದ್ದಾರೆ.

    ಗುಜರಾತ್‍ನ ಅಹಮದಾಬಾದ್ ನಿಂದ 200 ಕಿ.ಮೀ ದೂರದಲ್ಲಿರುವ ಸರ್ದಾರ್ ಸರೋವರದ ಅಣೆಕಟ್ಟಿನ ಬಳಿ ಇರುವ ಸರ್ದಾರ್ ವಲ್ಲಭಬಾಯಿ ಅವರ 182 ಮೀಟರ್ ಉದ್ದದ ಏಕತಾ ಪ್ರತಿಮೆಯನ್ನು ದೇವೇಗೌಡರು ವೀಕ್ಷಿಸಿದ್ದಾರೆ.

    ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಗುಜರಾತ್‍ಗೆ ವಿಮಾನ ಮೂಲಕ ಪ್ರಯಾಣ ಬೆಳೆಸಿರುವ ಗೌಡರು, ಏಕತಾ ಪ್ರತಿಮೆಯ ಜೊತೆಗೆ ಗುಜರಾತ್ ನಲ್ಲಿರುವ ಇತರ ಪ್ರದೇಶಗಳಿಗೂ ಭೇಟಿ ನೀಡಲಿದ್ದಾರೆ. ಇದರ ಜೊತೆಗೆ ಗರುಡೇಶ್ವರ ದೇವಸ್ಥಾನ, ರಂಗ್ ಅವದೂತ್ ಮಹಾರಾಜ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.

    ದೇಶದ ಏಕತೆಗೆ ಶ್ರಮಿಸಿದ, ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಉದ್ದದ ಉಕ್ಕಿನ ಪ್ರತಿಮೆ 2018 ಅಕ್ಟೋಬರ್ 31 ಅನಾವರಣ ಮಾಡಲಾಯಿತು. ಈ ಮೂಲಕ ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಟೇಲರ `ಏಕತಾ ಪ್ರತಿಮೆ’ ಪಾತ್ರವಾಗಿದೆ. ವಲ್ಲಭಭಾಯ್ ಅವರ ಪೂರ್ಣ ಪ್ರತಿಮೆ ಇದಾಗಿದ್ದು ಧೋತಿ ಮತ್ತು ಜುಬ್ಬ ತೊಟ್ಟ ಸ್ಯಾಂಡಲ್ ಚಪ್ಪಲಿ ಧರಿಸಿರುವ ಪಟೇಲ್ ರ ಸರಳ ವ್ಯಕ್ತಿತ್ವವನ್ನು ನಾವು ಪ್ರತಿಮೆಯಲ್ಲಿ ಕಾಣಬಹುದು.

    ಈ ಯೋಜನೆ ಆರಂಭಗೊಂಡಿದ್ದು ಹೇಗೆ?
    2010 ರಲ್ಲಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗುಜರಾತ್ ರಾಜ್ಯವನ್ನು ಅಭಿವೃದ್ಧಿ ಪಡಿಸಲು ಈ ಯೋಜನೆಯನ್ನು ಘೋಷಿಸಿದ್ದರು. 2013 ರಲ್ಲಿ ಯೋಜನೆ ನಿರ್ಮಾಣ ಶಂಕುಸ್ಥಾಪನೆ ನಡೆಸಿ ಕಾಮಗಾರಿಯನ್ನು ಆರಂಭಿಸಲಾಯಿತು. 2015 ರಲ್ಲಿ ಹೈಡ್ರಲಾಜಿಕಲ್ ಸಮೀಕ್ಷೆ, ಸುರಂಗ ಪರೀಕ್ಷೆ, ನೆರಳು ಬೆಳಕಿನ ಅಧ್ಯಯನಗಳನ್ನು ಪೂರ್ಣಗೊಳಿಸಿದ ಎಲ್ ಆಂಡ್ ಟಿ ಸಂಸ್ಥೆಯೂ ಈ ಬೃಹತ್ ಯೋಜನೆ ಉಸ್ತುವಾರಿಯನ್ನು ಹೊತ್ತುಕೊಂಡು ಸಂಪೂರ್ಣ ಮಾಡಿದೆ. 182 ಮೀಟರ್ ಎತ್ತರ ಈ ಪ್ರತಿಮೆಗೆ 25 ಸಾವಿರ ಟನ್ ಉಕ್ಕು, 90 ಸಾವಿರ ಟನ್ ಸಿಮೆಂಟ್, ಸುಮಾರು ಏಳು ಕಿಲೋಮೀಟರ್ ತ್ರಿಜ್ಯದಿಂದ ಕಾಣುವ ಹಾಗೇ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ವಿಶೇಷವಾಗಿ ಈ ಪ್ರತಿಮೆ ನಿರ್ಮಾಣಕ್ಕೆ ದೇಶದ ಹಲವು ಕಡೆಯಿಂದ ಕಬ್ಬಿಣವನ್ನು ಸಂಗ್ರಹಿಸಲಾಗಿತ್ತು.

    ಎಷ್ಟು ಖರ್ಚಾಗಿದೆ?
    ವಿಶ್ವದ ಉತ್ಕೃಷ್ಟ ತಂತ್ರಜ್ಞಾನ ಮತ್ತು ವಾಸ್ತುಶಿಲ್ಪವನ್ನು ಏಕತಾ ಮೂರ್ತಿ ನಿರ್ಮಾಣಕ್ಕೆ ಬಳಸಿಕೊಳ್ಳಲಾಗಿದೆ. 2,989 ಕೋಟಿ ರೂ. ವೆಚ್ಚದಲ್ಲಿ ಉಕ್ಕಿನಷ್ಟೇ ಗಟ್ಟಿಯಾಗಿ ಪ್ರತಿಮೆ ನಿರ್ಮಿಸಲಾಗಿದೆ. ಪಿಪಿಪಿ ಮಾದರಿಯಲ್ಲಿ ಈ ಯೋಜನೆ ಪೂರ್ಣಗೊಂಡಿದ್ದು 2012-13ರ ಬಜೆಟ್ ನಲ್ಲಿ 100 ಕೋಟಿ, 2014-15ರ ಬಜೆಟ್ ನಲ್ಲಿ 500 ಕೋಟಿ ಹಣವನ್ನು ಗುಜರಾತ್ ಸರ್ಕಾರ ನೀಡಿತ್ತು. 200 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ 2014-15ರ ಬಜೆಟ್ ನಲ್ಲಿ ನೀಡಿತ್ತು.

    ಏನೆಲ್ಲ ವಿಶೇಷತೆಯಿದೆ?
    ಪ್ರತಿಮೆಯಲ್ಲೇ ಎರಡು ಲಿಫ್ಟ್ ಗಳಿವೆ. ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿ ಹಾಗೂ ಪ್ರವಾಸಿಗರ ವಸತಿಗಾಗಿ 52 ರೂಂಗಳಿರುವ ಶ್ರೇಷ್ಠ ಭಾರತ ಹೆಸರಿನ ತ್ರಿಸ್ಟಾರ್ ಲಾಡ್ಜ್ ನಿರ್ಮಿಸಿದೆ. ಸೆಲ್ಫಿ ಪಾಯಿಂಟ್, ರೆಸ್ಟೋರೆಂಟ್‍ಗಳು, ಫೆರ್ರಿ ಸೇವೆ, ಬೋಟಿಂಗ್ ಸೌಕರ್ಯವಿದೆ. 250 ಟೆಂಟ್‍ಗಳಿರುವ `ಟೆಂಟ್ ಸಿಟಿ’, 306 ಮೀಟರ್ ಉದ್ದದ ಮಾರ್ಬಲ್ ಫ್ಲೋರಿಂಗ್ ವಾಕ್‍ವೇ, ವೀಕ್ಷಣಾ ಗ್ಯಾಲರಿಯೂ ಇದೆ. ಪಟೇಲರಿಗೆ ಸಂಬಂಧಿಸಿದ ಮ್ಯೂಸಿಯಂ. ಆಡಿಯೊ-ವಿಡಿಯೋ ಗ್ಯಾಲರಿ, ಸಂಶೋಧನಾ ಕೇಂದ್ರವನ್ನು ತೆರೆಯಲಾಗಿದೆ. ನಾಲ್ಕು ಹಂತದಲ್ಲಿ ಕಾಮಗಾರಿ ಮಾಡಲಾಗಿದ್ದು ತ್ರೀಡಿ ತಂತ್ರಜ್ಞಾನದ ಮೂಲಕ ಪಟೇಲರ ಚಿತ್ರಗಳನ್ನು ಸೃಷ್ಟಿಸಿ ಅವರ ಸಾಧನೆಗಳನ್ನು ಪ್ರವಾಸಿಗರಿಗೆ ತಿಳಿಸಲಾಗುತ್ತದೆ.

  • ಪಕ್ಷಿ ಹಿಕ್ಕೆ ಹಾಕಿದೆ ಎಂದು ಪ್ರಧಾನಿಯನ್ನು ಕಿಚಾಯಿಸಿ ಮತ್ತೆ ಟ್ರೋಲ್ ಆದ ರಮ್ಯಾ

    ಪಕ್ಷಿ ಹಿಕ್ಕೆ ಹಾಕಿದೆ ಎಂದು ಪ್ರಧಾನಿಯನ್ನು ಕಿಚಾಯಿಸಿ ಮತ್ತೆ ಟ್ರೋಲ್ ಆದ ರಮ್ಯಾ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ವೀಟ್ ಮೂಲಕ ಕಾಲೆಳೆಯಲು ಹೋಗಿ ತಾನೆ ಟ್ರೋಲ್ ಆಗುತ್ತಿರುವ ಕಾಂಗ್ರೆಸ್ಸಿನ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಈಗ ಮತ್ತೆ ಟ್ರೋಲ್ ಆಗಿದ್ದಾರೆ.

    ಬುಧವಾರ ಗುಜರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸರ್ದಾರ್ ವಲ್ಲಭಭಾಯಿ ಪಟೇಲರ 182 ಅಡಿ ಎತ್ತರದ ಏಕತಾ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ್ದರು. ನರೇಂದ್ರ ಮೋದಿಯವರು ಪ್ರತಿಮೆ ಕಾಲ ಬಳಿ ನಿಂತು ತೆಗೆಸಿಕೊಂಡಿದ್ದ ಫೋಟೋವನ್ನು ನಟಿ ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ ಹಾಕಿ ಕಾಲೆಳೆಯಲು ಹೋಗಿದ್ದಾರೆ.

    https://twitter.com/divyaspandana/status/1057842482975817728

    ರಮ್ಯಾ ಟ್ವಿಟ್ಟರ್ ನಲ್ಲಿ, ಪುತ್ಥಳಿಯ ಬಳಿ ಮೋದಿ ನಿಂತಿರುವ ಚಿತ್ರವನ್ನು ಹಾಕಿ, ಹಕ್ಕಿ ಗಲೀಜು ಮಾಡಿದೆಯೇ? ಎಂಬ ಅಡಿಬರವನ್ನು ಹಾಕಿ ಪ್ರಶ್ನಿಸಿದ್ದರು.

    ಟ್ವೀಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ರಮ್ಯಾರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್‍ನಲ್ಲಿರುವ ಎಲ್ಲಾ ನಾಯಕರ ಸಂಸ್ಕೃತಿಯು ಹೀಗೆಯೇ? ರಾಹುಲ್ ಗಾಂಧಿ ಹೀಗೆ ಮಾಡಿ ಎಂದು ನಿಮಗೆ ಸಲಹೆ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

    ಸಾಂವಿಧಾನಿಕ ಸ್ಥಾನವಾದ ಪ್ರಧಾನಿ ಹುದ್ದೆ ಹೊಂದಿರುವ ವ್ಯಕ್ತಿಗೆ ನೀವು ಕೊಡುಗ ಗೌರವ ಇದೆಯೇ? ಸರ್ದಾರ್ ವಲ್ಲಭಭಾಯ್ ಪಟೇಲ್ ಹಾಗೂ ಮೋದಿಯವರಿಗೆ ನೀವು ಅವಮಾನ ಮಾಡಿದ್ದೀರಿ ಎಂದು ಇನ್ನೂ ಕೆಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಈ ಕುರಿತು ಮತ್ತೆ ಟ್ವೀಟ್‍ನಲ್ಲಿ ರಮ್ಯಾ, ನನ್ನ ವಿರುದ್ಧ ಟೀಕೆ ಮಾಡುವ ಮುನ್ನ, ಕನ್ನಡಿ ಮುಂದೆ ನಿಮ್ಮನ್ನು ನೀವು ನೋಡಿಕೊಳ್ಳಿ. ನನಗೆ ಅನಿಸಿದ್ದನ್ನು ನಾನು ಹೇಳಿದ್ದೇನೆ. ನಿಮ್ಮ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಬಗ್ಗೆ ನಾನು ಏನನ್ನು ಸ್ಪಷ್ಟಪಡಿಸುವುದಿಲ್ಲವೆಂದು ಬರೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಟೇಲರ ಪ್ರತಿಮೆ ಉದ್ಘಾಟನೆ ಮೋದಿಯ ಗಿಮಿಕ್ ಅಷ್ಟೇ: ಮಲ್ಲಿಕಾರ್ಜುನ ಖರ್ಗೆ

    ಪಟೇಲರ ಪ್ರತಿಮೆ ಉದ್ಘಾಟನೆ ಮೋದಿಯ ಗಿಮಿಕ್ ಅಷ್ಟೇ: ಮಲ್ಲಿಕಾರ್ಜುನ ಖರ್ಗೆ

    ಹುಬ್ಬಳ್ಳಿ: ಸರ್ದಾರ್ ವಲ್ಲಭಭಾಯಿ ಪಟೇಲರ ಮೂರ್ತಿ ಉದ್ಘಾಟಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರ ಮುಂಬರುವ ಲೋಕಸಭಾ ಚುನಾವಣೆಯ ಗಿಮಿಕ್ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಒಂದೊಂದು ವರ್ಷ, ಒಂದೊಂದು ರಾಷ್ಟ್ರ ನಾಯಕರ ನೆನಪು ಬರುತ್ತದೆ. ಇದು ಸಹ ಹಾಗೆ. ಇದೆಲ್ಲವೂ ಬಿಜೆಪಿಯವರ ಚುನಾವಣೆ ಗಿಮಿಕ್ ಅಷ್ಟೇ. ಆರ್‍ಎಸ್‍ಎಸ್ ಮತ್ತು ಬಿಜೆಪಿಯ ಯಾವುದೇ ಕಚೇರಿಗಳಲ್ಲಿ ಸ್ವತಂತ್ರ ಹೋರಾಟಗಾರರು ಹಾಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರಗಳಿಲ್ಲ. ಅವರ ಕಚೇರಿಯಲ್ಲಿ ಕೇವಲ ಆರ್‍ಎಸ್‍ಎಸ್ ನಾಯಕರ ಫೋಟೋಗಳಿವೆ. ಕಾಂಗ್ರೆಸ್ ಮೊದಲಿನಿಂದಲೂ ರಾಷ್ಟ್ರ ನಾಯಕರನ್ನು ಗೌರವಿಸುತ್ತಾ ಬಂದಿದೆ ಎಂದು ಹೇಳಿದರು.

    ಪ್ರಧಾನಿ ಮೋದಿ ಅವರ ಅಪ್ಪಣೆ ಇಲ್ಲದೇ, ಯಾವ ಗೃಹ ಮಂತ್ರಿಗಳು ಕೆಲಸ ಮಾಡುವುದಿಲ್ಲ. ಹೊಸ ಮೂರ್ತಿಗಳನ್ನು ಕಟ್ಟಿ, ಅವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಮೋದಿಯವರು ಹಲವು ಹಗರಣಗಳನ್ನು ಎದುರಿಸುತ್ತಿದ್ದಾರೆ. ಅದನ್ನು ಬೇರೆಡೆ ಸೆಳೆಯಲು ಬಿಜೆಪಿ ಈ ರೀತಿಯ ನಾಟಕ ಮಾಡುತ್ತಿದೆ ಎಂದು ಆರೋಪಿಸಿದರು.

    ರಾಜ್ಯದಲ್ಲಿ ನಡೆಯುತ್ತಿರುವ ಐದು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ. ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರೇ ನಮ್ಮ ಪ್ರಧಾನಿ ಅಭ್ಯರ್ಥಿ. ರಾಹುಲ್ ಗಾಂಧಿಯವರು ಖಚಿತವಾಗಿ ಪ್ರಧಾನಿಯಾಗುತ್ತಾರೆ. ಪಿ.ಚಿದಂಬರಂ ಅವರು ತಮ್ಮ ವೈಯಕ್ತಿವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕನ್ನಡ ರಾಜ್ಯೋತ್ಸವದ ದಿನವೇ ಪ್ರತ್ಯೇಕ ರಾಜ್ಯಕ್ಕಾಗಿ ಕಲಬುರಗಿಯಲ್ಲಿ ಹೋರಾಟ

    ಕನ್ನಡ ರಾಜ್ಯೋತ್ಸವದ ದಿನವೇ ಪ್ರತ್ಯೇಕ ರಾಜ್ಯಕ್ಕಾಗಿ ಕಲಬುರಗಿಯಲ್ಲಿ ಹೋರಾಟ

    ಕಲಬುರಗಿ: ಇಂದು ನಾಡಿನೆಲ್ಲೆಡೆ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಆದರೆ ಬಿಸಿಲೂರು ಕಲಬುರಗಿಯಲ್ಲಿ ಮಾತ್ರ ಪ್ರತ್ಯೇಕತೆಯ ಕೂಗು ತೀವ್ರಗೊಂಡಿದೆ. ರಾಜ್ಯೋತ್ಸವದ ದಿನವಾದ ಇಂದೇ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟಗಳು ನಡೆದಿವೆ.

    ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರು ಇಂದು ಬೆಳ್ಳಂ ಬೆಳಿಗ್ಗೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಲ್ ಬಳಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಮುಂದಾಗಿದ್ದು, ಮೂವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಪೊಲೀಸರು ಬಂಧಿಸಲು ಮುಂದಾಗುತ್ತಿದ್ದಂತೆಯೇ ಹೋರಾಟಗಾರರು ಬಂಧನಕ್ಕೆ ಬೆದರಿ ಓಡಿ ಹೋಗುವ ಮೂಲಕ ನಗೆಪಾಟಲಿಗೀಡಾದರು. ಇನ್ನೊಂದಡೆ ಹೈದರಾಬಾದ್ – ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರೂ ಸಹ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಲ್ ನಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಿದರು. ಈ ಕಾರ್ಯಕರ್ತರನ್ನೂ ಸಹ ಪೊಲೀಸರು ವಶಕ್ಕೆ ತೆಗೆದುಕೊಂಡರು.

  • ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆಯಂದು `ರನ್ ಫಾರ್ ಯುನಿಟಿ’- ಮೋದಿ

    ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆಯಂದು `ರನ್ ಫಾರ್ ಯುನಿಟಿ’- ಮೋದಿ

    ನವದೆಹಲಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ `ರನ್ ಫಾರ್ ಯುನಿಟಿ’ ಹೆಸರಿನಲ್ಲಿ ಬೃಹತ್ ಮ್ಯಾರಥಾನ್ ಆಯೋಜಿಸಿದೆ.

    ಮಂಗಳವಾರ ಭಾರತದ ಉಕ್ಕಿನ ಮನುಷ್ಯ ಅಂತಲೇ ಖ್ಯಾತಿಗಳಿಸಿರುವ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನವಾಗಿದ್ದು, ಧೀಮಂತ ನಾಯಕನ ಸ್ಮರಣೆಯನ್ನು ಇಡೀ ದೇಶ ಮಾಡಬೇಕಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ನಲ್ಲಿ ಕರೆ ನೀಡಿದ್ದಾರೆ.

    ಈ ಹಿನ್ನಲೆಯಲ್ಲಿ ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬೃಹತ್ ಮ್ಯಾರಥಾನ್ ಆಯೋಜಿಸಲಾಗಿದ್ದು, ಸ್ವಯಂಪ್ರೇರಿತವಾಗಿ ಭಾಗವಹಿಸುವಂತೆ ಕೇಂದ್ರದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೂ ಸೂಚಿಸಲಾಗಿದೆ.

    ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಜೊತೆಗೆ ಕೇಂದ್ರದ ಹಲವು ಮಂತ್ರಿಗಳು ಸಾಕ್ಷಿಯಾಗಲಿದ್ದಾರೆ. ಬೆಳಗ್ಗೆ ಏಳು ಗಂಟೆ ಯಿಂದ ಮ್ಯಾರಥಾನ್ ಆರಂಭವಾಗಲಿದ್ದು ಸಮಾರು ಇಪ್ಪತ್ತು ಸಾವಿರ ಜನರು ದೆಹಲಿಯಲ್ಲಿ ಸೇರುವ ನಿರೀಕ್ಷೆ ಮಾಡಲಾಗಿದೆ. ದೇಶದೆಲ್ಲೆಡೆ ರನ್ ಫಾರ್ ಯೂನಿಟಿ ಮ್ಯಾರಥಾನ್ ನಲ್ಲಿ ಭಾಗವಹಿಸುವಂತೆ ಸಾರ್ವಜನಿಕರಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.