Tag: ಸರ್ಫಿಂಗ್

  • ಸಸಿಹಿತ್ಲು ಬೀಚ್‍ನಲ್ಲಿ ಕಡಲಬ್ಬರದ ಅಲೆಗಳ ಜೊತೆ ಸರ್ಫರ್‌ಗಳ ಕಾದಾಟ!

    ಸಸಿಹಿತ್ಲು ಬೀಚ್‍ನಲ್ಲಿ ಕಡಲಬ್ಬರದ ಅಲೆಗಳ ಜೊತೆ ಸರ್ಫರ್‌ಗಳ ಕಾದಾಟ!

    – ದೇಶ-ವಿದೇಶಗಳಿಂದ ಬಂದ ಸರ್ಫರ್ ಗಳಿಂದ ಸಾಹಸ

    ಮಂಗಳೂರು: ಸದ್ಯ ಕಡಲನಗರಿ ಮಂಗಳೂರಿನಲ್ಲಿ ಸರ್ಫರ್ ಗಳದ್ದೇ ಹವಾ. ನಗರದ ಹೊರವಲಯದ ಸಸಿಹಿತ್ಲು ಬೀಚ್ ನಲ್ಲಿ (Sasihitlu Beach) ಸಾಹಸ ಲೋಕವೇ ನಿರ್ಮಾಣವಾಗಿದೆ. ಅರಬ್ಬೀ ಸಮುದ್ರದ (Arabian Sea) ರಕ್ಕಸ ಅಲೆಗಳಿಗೆ ಸಾಹಸಿಗಳು ಸವಾಲೆಸೆಯುತ್ತಿದ್ದಾರೆ.

    ಹೌದು. ಭಾರತ ಸರ್ಫಿಂಗ್ ಫೆಡರೇಶನ್, ಸರ್ಫಿಂಗ್ ಸ್ವಾಮಿ ಫೌಂಡೇಶನ್ ಮತ್ತು ಮಂತ್ರ ಸರ್ಫ್ ಕ್ಲಬ್ ಸಹಯೋಗದಲ್ಲಿ ಮಂಗಳೂರಿನಲ್ಲಿ ಓಪನ್ ಸರ್ಫಿಂಗ್ ಚಾಂಪಿಯನ್ ಶಿಪ್ ಕೂಟ ನಡೆಯುತ್ತಿದೆ. ಸುಂದರ ಸಸಿಹಿತ್ಲು ಬೀಚ್ ನಲ್ಲಿ ಕರಾವಳಿ ರಾಜ್ಯಗಳ ಪ್ರಮುಖ ಸರ್ಫರ್ ಗಳು ಕಡಲ ಅಲೆಗಳಿಗೆ ಸವಾಲೆಸೆಯುತ್ತಿದ್ದಾರೆ. ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಪಾಂಡಿಚೇರಿಯ ಸರ್ಫರ್ ಗಳು ಈ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಿದ್ದಾರೆ.

    ಮೂರು ದಿನಗಳ ಕಾಲ ನಡೆಯುವ ಈ ಸರ್ಫಿಂಗ್ ಚಾಂಪಿಯನ್ ಶಿಪ್‍ನಲ್ಲಿ ಪುರುಷರ ವಿಭಾಗ, ಮಹಿಳೆಯರ ವಿಭಾಗ, 16 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದ ಸ್ಪರ್ಧೆ ನಡೆದಿದೆ. ಈ ಮೊದಲು ಮಾರ್ಚ್ ನಲ್ಲಿ ಕೇರಳದ ವರ್ಕಲದಲ್ಲಿ ಮೊದಲ ಸ್ಪರ್ಧೆ ನಡೆದಿತ್ತು. ಈ ಬಾರಿಯ ಎರಡನೇ ಸ್ಪರ್ಧೆ ಸಸಿಹಿತ್ಲುನಲ್ಲಿ ನಡೆಯುತ್ತಿದೆ ಎಂದು ಸಫಿರ್ಂಗ್ ಸ್ವಾಮಿ ಫೌಂಡೇಶನ್ ಸದಸ್ಯ ರಾಮ್ ಮೋಹನ್ ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ಎಕ್ಸಿಟ್‌ ಪೋಲ್‌ಗಳು ಖಂಡಿತಾ ಸುಳ್ಳು: ಕೇಜ್ರಿವಾಲ್‌

    ಸರ್ಫರ್ ಗಳ ಸಾಹಸ ನೆರೆದಿದ್ದ ಪ್ರವಾಸಿಗರ ಗಮನಸೆಳೆದಿದೆ. ಈ ಸರ್ಫಿಂಗ್ ನೋಡಲೆಂದೇ ವಿದೇಶಗಳಿಂದ, ರಾಜ್ಯದ ಬೇರೆ ಬೇರೆ ಭಾಗಗಳಿಂದ ಆಸಕ್ತರು ಬಂದಿದ್ದರು. ಸುಡು ಬಿಸಿಲ ನಡುವೆ ಭಾರೀ ಗಾತ್ರದ ಅಲೆಗಳ ನಡುವೆ ಸರ್ಫರ್ ಗಳ ಸಾಹಸವನ್ನು ಕಣ್ತುಂಬಿಕೊಂಡು ಭೇಷ್ ಅಂದಿದ್ದಾರೆ.

    ಒಟ್ಟಿನಲ್ಲಿ ಮುಂಗಾರಿಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಕಡಲು ಮುಂಗಾರಿನ ಸ್ವಾಗತಕ್ಕೆ ಸಜ್ಜಾಗಿದೆ.ಅಲೆಗಳ ಭಾರೀ ಏರಿಳಿತ ಕಣ್ಣಿಗೆ ಭಯತಂದರೆ,‌ ಸರ್ಫರ್ ಗಳ ಸಾಹಸ ಮನಸ್ಸಿಗೆ ಮುದ ನೀಡಿದೆ.

  • ಸಮುದ್ರದ ಸುಳಿಯಲ್ಲಿ ಸಿಕ್ಕಿಬಿದ್ದ ಪ್ರವಾಸಿಗನ ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ

    ಸಮುದ್ರದ ಸುಳಿಯಲ್ಲಿ ಸಿಕ್ಕಿಬಿದ್ದ ಪ್ರವಾಸಿಗನ ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ

    ಕಾರವಾರ: ಸರ್ಫಿಂಗ್ ಮಾಡುವ ವೇಳೆ ಸಮುದ್ರ ಸುಳಿಗೆ ಸಿಕ್ಕಿ ಬಿದ್ದಿದ್ದ ಪ್ರವಾಸಿಗನನ್ನು ಪ್ರವಾಸೋದ್ಯಮ ಇಲಾಖೆಯ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕುಡ್ಲೆ ಬೀಚ್ ನಲ್ಲಿ ಈ ಘಟನೆ ನಡೆದಿದ್ದು, ಅಖಿಲೇಶ್ (30) ರನ್ನು ರಕ್ಷಣೆ ಮಾಡಲಾಗಿದೆ. ಅಖಿಲೇಶ್ ಸಮುದ್ರದಲ್ಲಿ ಸರ್ಫಿಂಗ್ ಮಾಡಲು ತೆರಳಿದ್ದ ವೇಳೆ ಅವಘಡ ಸಂಭವಿಸಿದೆ. ಲೈಫ್ ಗಾರ್ಡ್ ಗಳ ಕಾರ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಅವರ ಕಾರ್ಯವನ್ನು ನೋಡಿದ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಅಖಿಲೇಶ್ ಡೆಹ್ರಾಡೂನ್ ಮೂಲದರಾಗಿದ್ದು, ಇಂದು ಕುಡ್ಲೆ ಬೀಚ್‍ನಲ್ಲಿ ಸರ್ಫಿಂಗ್ ಮಾಡಲು ತೆರಳಿದ್ದರು. ಈ ವೇಳೆ ಸಮುದ್ರದಲ್ಲಿ ನೀರಿನ ಸುಳಿ ನಿರ್ಮಾಣವಾಗಿದ್ದು, ಸರ್ಫಿಂಗ್ ಮಾಡುವ ವೇಳೆ ಆಯಾ ತಪ್ಪಿ ಅಖಿಲೇಶ್ ಸುಳಿಯಲ್ಲಿ ಸಿಲುಕಿದ್ದರು. ಅಪಾಯದಲ್ಲಿ ಸಿಲುಕಿದ ಅವರು ರಕ್ಷಣೆಗಾಗಿ ಮೊರೆ ಇಟ್ಟಿದ್ದು, ಇದನ್ನು ಗಮನಿಸಿದ ಪ್ರವಾಸೋದ್ಯಮ ಇಲಾಖೆಯ ಲೈಫ್ ಗಾರ್ಡ್ ಸಿಬ್ಬಂದಿ ಸಂಜೀವ್ ಹೋಸ್ಕಟ್ಟಾ, ನಿತ್ಯಾನಂದ ಹರಿಕಂತ್ರ ಸಮುದ್ರಕ್ಕೆ ಇಳಿದು ಅಖಿಲೇಶ್ ಅವರನ್ನು ರಕ್ಷಣೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv