Tag: ಸರ್ವೆ

  • ರಮೇಶ್ ಕುಮಾರ್ ಅರಣ್ಯ ಭೂಮಿ ವಿವಾದ| ಜಂಟಿ ಸರ್ವೆ ಮುಕ್ತಾಯ – ಒಮ್ಮತಕ್ಕೆ ಬಾರದ ಅರಣ್ಯ, ಕಂದಾಯ ಇಲಾಖೆ

    ರಮೇಶ್ ಕುಮಾರ್ ಅರಣ್ಯ ಭೂಮಿ ವಿವಾದ| ಜಂಟಿ ಸರ್ವೆ ಮುಕ್ತಾಯ – ಒಮ್ಮತಕ್ಕೆ ಬಾರದ ಅರಣ್ಯ, ಕಂದಾಯ ಇಲಾಖೆ

    – ಪ್ರತ್ಯೇಕ ವಾದ ಮಂಡನೆ ಮಾಡಿದ ಅಧಿಕಾರಿಗಳು

    ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಅರಣ್ಯ ಭೂಮಿ ವಿವಾದ ಸದ್ಯಕ್ಕೆ ಮುಕ್ತಾಯವಾಗಿದೆ. ಆದರೆ ಜಂಟಿ ಸರ್ವೆ ಕಾರ್ಯ ಕಂದಾಯ ಹಾಗೂ ಅರಣ್ಯ ಇಲಾಖೆಗಳ ಮಧ್ಯೆ ಒಮ್ಮತ ಮೂಡಿಲ್ಲ.

    ಕಂದಾಯ ಇಲಾಖೆ (Revenue Department) ಮೇಲ್ನೋಟಕ್ಕೆ ಎಲ್ಲವೂ ಸರಿ ಇದೆ. ಗಡಿ ಗುರುತಿಸಿ, ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದೇವೆ. ಬಳಿಕ ಅಲ್ಲಿಂದ ನ್ಯಾಯಾಲಯಕ್ಕೆ ಸಲ್ಲಿಕೆಯಾಗಲಿದೆ ಎಂದು ವಾದ ಮಂಡನೆ ಮಾಡಿದ್ದಾರೆ. ಆದರೆ ಅರಣ್ಯ ಇಲಾಖೆ (Forest Department) ಒತ್ತುವರಿ ಆಗಿದೆ ಎಂಬ ವಾದ ಮಂಡನೆ ಮಾಡುವ ಮೂಲಕ ಹೊಸಹೂಡ್ಯ ಸರ್ವೆ ನಂ.1 ಮತ್ತು 2 ಸಂಪೂರ್ಣ ಅರಣ್ಯ ಭೂಮಿ. ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ. ಡಿಡಿಎಲ್‌ಆರ್ ನೀಡುವ ನಕ್ಷೆಯಲ್ಲಿ ಅರಣ್ಯ ಭೂಮಿ ತೋರಿಸದಿದ್ದರೆ ನಾನು ಸಹಿ ಹಾಕುವುದಿಲ್ಲ ಎಂದು ಡಿಸಿಎಫ್ ಸರೀನಾ ವಾದ ಮಂಡನೆ ಮಾಡಿದರು. ಇದನ್ನೂ ಓದಿ: ಶ್ರೀಹರಿಕೋಟಾದಲ್ಲಿ 3ನೇ ಉಡಾವಣಾ ಕೇಂದ್ರ ಸ್ಥಾಪನೆಗೆ ಸಂಪುಟ ಅಸ್ತು

     

    ಹೈಕೋರ್ಟ್ ನಿರ್ದೇಶನದ ಮೇರೆಗೆ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಯಿಂದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹೂಡ್ಯ ಸರ್ವೆ ನಂ 1 ಮತ್ತು 2 ಜಮೀನನ್ನು ಎರಡು ದಿನಗಳ ಕಾಲ ನಡೆಸಿದ ಸರ್ವೆ ಕಾರ್ಯ ಮುಕ್ತಾಯವಾಯಿತು. ಇದೇ ವೇಳೆ ಮಾತನಾಡಿದ ಕೋಲಾರ ಜಿಲ್ಲಾಧಿಕಾರಿ ಡಾ.ರವಿ, ಹೈಕೋರ್ಟ್ ಸೂಚನೆ ಪ್ರಕಾರ ಜಂಟಿ ಸರ್ವೆ ಮಾಡಲಾಗಿದೆ. ಹೊರ ಭಾಗದ ಕಂದಾಯ ಗ್ರಾಮದ ಗುರುತು ಮಾಡಲಾಗಿದೆ. ರೋವರ್ ಜೊತೆ ಚೈನ್ ಬಳಸಿ ಏಕಕಾಲದಲ್ಲಿ ಸರ್ವೆ ಮಾಡಲಾಗಿದೆ. ಅರಣ್ಯ ಇಲಾಖೆಯ ಗಡಿ ಗುರುತಿಸುವ ಕೆಲಸ ಜಂಟಿಯಾಗಿ ಮಾಡಿ ನಾಲ್ಕು ತಂಡಗಳಿಂದ ಸರ್ವೆ ಮಾಡಿ, ಸರ್ವೆ ನಂಬರ್‌ನ ಜಮೀನನ್ನು ಸೆರೆ ಹಿಡಿಯಲಾಗಿದೆ ಎಂದರು. ಇದನ್ನೂ ಓದಿ: Chhattisgarh| ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ- 12 ಮಾವೋವಾದಿಗಳು ಬಲಿ

    ಅರಣ್ಯ ಇಲಾಖೆಯ ಗಂಟರ್ಸ್ ಚೈನ್ ಮಾಪನ 100 ಲಿಂಕ್ 66 ಅಡಿ, ಕಂದಾಯ ಇಲಾಖೆಯ ಚೈನ್‌ನಲ್ಲಿ 50 ಲಿಂಕ್ಸ್ 30 ಅಡಿಯಾಗಿದೆ. ಸರ್ವೆ ನಂಬರ್ 1 ರಲ್ಲಿ 315 ಎಕರೆ ಹಾಗೂ ಸರ್ವೆ ನಂಬರ್ 2ರಲ್ಲಿ 113 ಎಕರೆ ಗುರುತಿಸಲು ನೋಟಿಫಿಕೇಶನ್ ಇದೆ. ಡಿಡಿಎಲ್‌ಆರ್ ನಮಗೆ ತಾಂತ್ರಿಕ ವರದಿ ನೀಡಬೇಕಿದೆ. ಪಿರ್ಯಾದುದಾರರು ಸಹ ಕೆಲವು ಮಾಹಿತಿ ಕೇಳಿದ್ದಾರೆ. ಅದರ ಮಾಹಿತಿ ಪಡೆಯಬೇಕಿದೆ. ಜ.30ರ ಒಳಗೆ ಹೈಕೋರ್ಟ್‌ಗೆ ವರದಿ ಸಲ್ಲಿಸುತ್ತೇವೆ. 1934ರ ಸರ್ಕಾರಿ ನೋಟಿಫಿಕೇಶನ್ ಹಾಗೂ 1944ರ ಗೆಜೆಟ್ ಬಿಟ್ಟು ಅರಣ್ಯ ಇಲಾಖೆಯವರು ಯಾವುದೇ ದಾಖಲೆ ಕೊಟ್ಟಿಲ್ಲ. ಮೇಲ್ನೋಟಕ್ಕೆ ನಮಗೆ ಏನೂ ಕಂಡು ಬಂದಿಲ್ಲ ಅನಿಸುತ್ತೆ ಎಂದು ಹೇಳಿದರು. ಇದನ್ನೂ ಓದಿ: ನ್ಯೂಕ್ಲಿಯರ್ ಶಕ್ತಿಗಿಂತ ಆಧ್ಯಾತ್ಮಿಕ ಶಕ್ತಿ ದೊಡ್ಡದು- ಉಪರಾಷ್ಟ್ರಪತಿ ಜಗದೀಪ್ ಧನಕರ್

     

    ಇನ್ನೂ ಅರಣ್ಯ ಇಲಾಖೆಗೆ ಸೇರಿದ ಜಾಗ ಒತ್ತುವರಿ ಆಗಿದೆ ಎಂದು ಮತ್ತೆ ವಾದ ಮಾಡಿದ ಅರಣ್ಯ ಇಲಾಖೆ ಡಿಸಿಎಫ್, ಗುಂಟರ್ಸ್ ಚೈನ್ ಬ್ರಿಟಿಷ್ ಕಾಲದಿಂದ ಬಳಕೆ ಆಗುತ್ತಿದೆ. ಇದರಲ್ಲಿ ಅಳತೆ ಸರಿಯಾಗಿ ಇರುತ್ತೆ ಎಂದು ಅಧೀನ ಕಾರ್ಯದರ್ಶಿ ಅವರೇ ಹೇಳಿದ್ದಾರೆ. ಹಾಗಾಗಿ ಅದರಲ್ಲಿ ಅಳತೆ ಮಾಡಿದ್ದೇವೆ, ಸರಿ ಇದೆ. ಹೊಸಹೂಡ್ಯಾ ಗ್ರಾಮದ ಸರ್ವೆ ನಂಬರ್ 1 ಹಾಗೂ 2 ರಲ್ಲಿ ನಮ್ಮ ಭೂಮಿ ಒತ್ತುವರಿ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ

    ಅರಣ್ಯ ಸೆಟಲ್ಮೆಂಟ್ ಮ್ಯಾಪ್ ನಮ್ಮ ಬಳಿ ಇದೆ. ಈಗ ಬೇಕಾದರೂ ನಾವು ಮ್ಯಾಪ್ ಸಿದ್ಧಪಡಿಸಬಹುದು. ಇಲ್ಲಿ ಒತ್ತುವರಿ ಆಗಿರೋದು ನಿಜ. ಸರ್ವೆ ನಂಬರ್ 1ರಲ್ಲಿ 315.32 ಎಕರೆ, ಸರ್ವೆ ನಂಬರ್ 2ರಲ್ಲಿ 113 ಎಕರೆ ಇದೆ. 1944ರಲ್ಲೇ ಗಡಿ ಗುರುತು ಆಗಿದೆ. ನಮಗೆ ಸರ್ವೆ ನಂಬರ್ 1 ಹಾಗೂ 2ರಲ್ಲಿರುವ ನಮ್ಮ ಅರಣ್ಯ ಇಲಾಖೆಯ ಜಾಗ ಸೇರಿಸಿದರೇ ಮಾತ್ರ ಸಹಿ ಹಾಕುತ್ತೇನೆ. ಇಲ್ಲವಾದರೆ ನಾನು ಡಿಡಿಎಲ್‌ಆರ್ ವರದಿಗೆ ಸಹಿ ಹಾಕೋದಿಲ್ಲ, ಮತ್ತೆ ಸರ್ವೆ ಆಗಲಿ ಬಿಡಿ ಎಂದರು. ಇದನ್ನೂ ಓದಿ: ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ

  • ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ವಿವಾದ – ಇಂದು ಜಂಟಿ ಸರ್ವೆ

    ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ವಿವಾದ – ಇಂದು ಜಂಟಿ ಸರ್ವೆ

    ಕೋಲಾರ: ಕಳೆದ 2 ದಶಕಗಳಿಂದ ವಿವಾದದ ಕೇಂದ್ರವಾಗಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೂ ಸಂಕ್ರಮಣ ಸಮೀಪವಾದಂತಿದೆ. ಸಂಕ್ರಾಂತಿ ಮಾರನೇ ದಿನವಾದ ಇಂದು ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ (Forest Land Encroachment) ಪ್ರಕರಣದ ಜಂಟಿ ಸರ್ವೆಗೆ (Survey) ದಿನಾಂಕ ನಿಗದಿ ಮಾಡಲಾಗಿದ್ದು, ಜಂಟಿ ಸರ್ವೆಗೆ ಜಿಲ್ಲಾಡಳಿತ ಸಿದ್ಧವಾಗಿದೆ.

    ಕಳೆದ ಎರಡು ತಿಂಗಳಲ್ಲಿ ಮೂರು ಬಾರಿ ಜಂಟಿ ಸರ್ವೆ ಕಾರ್ಯವನ್ನು ಮುಂದೂಡಲಾಗಿತ್ತು. ಆದರೆ ಅಂತಿಮವಾಗಿ ಇಂದು ಜಂಟಿ ಸರ್ವೆ ಕಾರ್ಯಕ್ಕೆ ದಿನ ನಿಗದಿ ಮಾಡಲಾಗಿದೆ. ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಕೋಲಾರ ಜಿಲ್ಲಾಡಳಿತ ಮಾಡಿಕೊಂಡಿದೆ. ಕಳೆದೆರಡು ದಶಕಗಳಿಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಕೇಳಿ ಬರುತ್ತಿರುವ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಹೈಕೋರ್ಟ್ ಅಂತಿಮ ಗಡುವು ನೀಡಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಜಂಟಿ ಸರ್ವೆ ಕಾರ್ಯ ನಿಗದಿ ಮಾಡಲಾಗಿದೆ. ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಯುವತಿ ಸಾವು, 8 ಮಂದಿಗೆ ಗಾಯ

    ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಜಿನಕಲಕುಂಟೆ ಅರಣ್ಯ ಪ್ರದೇಶದಲ್ಲಿನ ಹೊಸಹುಡ್ಯ ಗ್ರಾಮದ ಸರ್ವೆ ನಂ1 ಮತ್ತು 2ರಲ್ಲಿ 61.39 ಗುಂಟೆ ಅರಣ್ಯ ಭೂಮಿಯನ್ನು ರಮೇಶ್ ಕುಮಾರ್ ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಸದ್ಯ ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ಪರ-ವಿರೋಧ ಹೋರಾಟಗಳು ಕಳೆದ ಎರಡು ದಶಕಗಳಿಂದ ನಡೆಯುತ್ತಲೇ ಇದೆ. ಈ ನಡುವೆ ಹೈಕೋರ್ಟ್ ಸರ್ವೆ ಮಾಡಿ ಮುಗಿಸಿ ಜನವರಿ 30ರ ಒಳಗಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜಂಟಿ ಸರ್ವೆ ಮಾಡಲಾಗುತ್ತಿದೆ. ಇದನ್ನೂ ಓದಿ: ವಿವಿಧ ಖಾದ್ಯಗಳನ್ನು ತಂದು ವೃಕ್ಷಗಳ ಮಧ್ಯೆ ಕುಳಿತು ಊಟ ಮಾಡಿ ಸಂಭ್ರಮಿಸಿದ ಜನತೆ

    ಈ ವಿವಾದದಲ್ಲಿ ರಮೇಶ್ ಕುಮಾರ್ ಬೆನ್ನಿಗೆ ಇಡೀ ಸರ್ಕಾರ ನಿಂತಿದೆ. ಇದೆಲ್ಲದರ ನಡುವೆಯೂ ಹೈಕೋರ್ಟ್ನ ಆದೇಶದ ಪ್ರಕಾರ ಜಂಟಿ ಸರ್ವೆ ಮಾಡಿ ಮುಗಿಸಬೇಕಿದೆ. ಸರ್ಕಾರ ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಅಕ್ರಂ ಪಾಷಾ ಹಾಗೂ ಕೋಲಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕುಂಡಲುರನ್ನು ವರ್ಗಾವಣೆ ಮಾಡಿದೆ. ಇದೀಗ ನೂತನ ಡಿಸಿ ಎಂ.ಆರ್.ರವಿ&ಡಿಎಫ್‌ಓ ಸರಿನಾ ನೇತೃತ್ವದಲ್ಲಿ ಸರ್ವೆ ನಡೆಯಲಿದೆ. ಸರ್ವೆ ವೇಳೆ ರಮೇಶ್ ಕುಮಾರ್ ಉಪಸ್ಥಿತರಿರುವ ಸಾಧ್ಯತೆ ಇದೆ. ಹಾಗಾಗಿ ಇಷ್ಟು ವರ್ಷಗಳಲ್ಲಿ ಇಂದು ನಡೆಯಲಿರುವ ಜಂಟಿ ಸರ್ವೆ ಬಹಳ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು

    ಒಟ್ಟಿನಲ್ಲಿ 2 ದಶಕಗಳ ಒತ್ತುವರಿ ಆರೋಪ ಎದುರಿಸುತ್ತಿರುವ ರಮೇಶ್ ಕುಮಾರ್ ಆರೋಪದಿಂದ ಮುಕ್ತರಾಗುತ್ತಾರಾ? ಇಲ್ಲ ಒತ್ತುವರಿ ಸಾಬೀತಾಗಿ ಭೂಮಿಯನ್ನು ಬಿಟ್ಟು ಕೊಡುತ್ತಾರಾ ಅನ್ನೋದು ಇಂದಿನ ಸರ್ವೆ ನಿರ್ಧಾರ ಮಾಡಲಿದೆ. ಇದನ್ನೂ ಓದಿ: ಎಐಸಿಸಿ ನಾಯಕರ ಮುಂದೆ ಸಿಎಂ, ಡಿಸಿಎಂ ಕದನ – ತ್ರಿಮೂರ್ತಿ ಸಭೆಯ ಇನ್‌ಸೈಡ್ ಸ್ಟೋರಿ ಓದಿ

  • ಬಿಬಿಎಂಪಿಗೆ ಡಿಸಿಎಂ ಖಡಕ್ ವಾರ್ನಿಂಗ್ – ಸೋಮವಾರದಿಂದ ಅನಧಿಕೃತ ಕಟ್ಟಡಗಳ ಸರ್ವೆ ಆರಂಭ

    ಬಿಬಿಎಂಪಿಗೆ ಡಿಸಿಎಂ ಖಡಕ್ ವಾರ್ನಿಂಗ್ – ಸೋಮವಾರದಿಂದ ಅನಧಿಕೃತ ಕಟ್ಟಡಗಳ ಸರ್ವೆ ಆರಂಭ

    – ಸದೃಢ ಇಲ್ಲದ, ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

    ಬೆಂಗಳೂರು: ಬಾಬುಸಾಬ್ ಪಾಳ್ಯ ಕಟ್ಟಡ ದುರಂತ (Babusapalya Building Collapse) ಬಳಿಕ ನಗರದ ಕಟ್ಟಡಗಳ ಸಂಬಂಧ ಬಿಬಿಎಂಪಿ (BBMP) ಅಧಿಕಾರಿಗಳಿಗೆ ಡಿಸಿಎಂ ಖಡಕ್ ವಾರ್ನಿಂಗ್‌ ಕೊಟ್ಟಿದ್ದಾರೆ. ಅನಧಿಕೃತ ಕಟ್ಟಡ ತೆರವಿಗೆ‌ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದು, ಸೋಮವಾರದಿಂದಲೇ ಅಧಿಕಾರಿಗಳು ಅಖಾಡಕ್ಕಿಳಿದು ಸರ್ವೆ (Survey) ನಡೆಸಲಿದ್ದಾರೆ.

    ಮೂರು ದಿನದ ಹಿಂದೆ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ನಗರದಲ್ಲಿ ಅನಧಿಕೃತ, ಸದೃಢ ಇಲ್ಲದ ಕಟ್ಟಡಗಳ ಸರ್ವೆಗೆ ಸೂಚಿಸಿದ್ದು, ಸರ್ವೆ ಬಳಿಕ ಮುಲಾಜಿಲ್ಲದೇ ಅಂತಹ ಕಟ್ಟಡಗಳನ್ನು ತೆರವು ಮಾಡುವಂತೆ ಖುದ್ದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಒಡಿಶಾ ತೀರಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ – ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಬಾಬುಸಾಬ್ ಪಾಳ್ಯ ದುರಂತ ನಗರದ ಜನರನ್ನು ಬೆಚ್ಚಿ ಬೀಳಿಸಿದೆ. ಕೇವಲ ಜನರನ್ನು ಮಾತ್ರ ಅಲ್ಲದೇ ಸದ್ಯ ಈ ಸಂಬಂಧ ಡಿಸಿಎಂ ಹೊರಡಿಸಿರುವ ಆದೇಶ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿದವರಿಗೂ ಕೂಡ ನಿದ್ದೆ ಹಾಳು ಮಾಡಿದೆ. ಕಟ್ಟಡ ದುರಂತ ಬಳಿಕ ಎಚ್ಚೆತ್ತಿರುವ ಸರ್ಕಾರ ನಗರದಲ್ಲಿ ಅನಧಿಕೃತವಾಗಿ ನಿರ್ಮಾಣ ಆಗುತ್ತಿರುವ ಕಟ್ಟಡಗಳ ಸರ್ವೆಗೆ ಮುಂದಾಗಿದೆ. ಇದೇ ಸೋಮವಾರದಿಂದ ಬಿಬಿಎಂಪಿ ವಲಯ ಆಯುಕ್ತರ ನೇತೃತ್ವದಲ್ಲಿ ಫೀಲ್ಡಿಗಿಳಿಯಲಿರುವ ಅಧಿಕಾರಿಗಳು ಖುದ್ದು ಸರ್ವೆ ನಡೆಸಿ ಅನಧಿಕೃತ ನಿರ್ಮಾಣ, ಸಡಿಲಗೊಂಡ ಕಟ್ಟಡಗಳು, ಹೊಸ ಕಟ್ಟಡಗಳ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಈ ಮೂಲಕ ನಗರದಲ್ಲಿ ಅಪಾಯದಲ್ಲಿರುವ, ನಿಯಮ ಬಾಹಿರವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನ ತೆರವು ಮಾಡುವ ಮೊದಲ ಹೆಜ್ಜೆ ಆರಂಭವಾಗಲಿದೆ. ಇದನ್ನೂ ಓದಿ: ಐದು ಲಕ್ಷ ಕೋಟಿಯ ಸಾಮ್ರಾಜ್ಯ ಕಟ್ಟುವ ಕನಸಿದೆ: ಬಾಬಾ ರಾಮ್‌ದೇವ್‌

    ಇನ್ನೂ ಈ ಹಿಂದೆಯೇ ಡ್ರೋಣ್ ಮೂಲಕ ಅನಧಿಕೃತ ಕಟ್ಟಡ, ಹೆಚ್ಚುವರಿ ಅಂತಸ್ತು ನಿರ್ಮಾಣ ಸೇರಿದಂತೆ ನಿಯಮಬಾಹಿರ ನಿರ್ಮಾಣ ಕಟ್ಟಡಗಳ ಸರ್ವೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಖುದ್ದು ಅಧಿಕಾರಿಗಳಿಗೆ ದೈಹಿಕವಾಗಿ ಸರ್ವೆ ನಡೆಸಿ ರಿಪೋರ್ಟ್ ಸಿದ್ಧ ಮಾಡುವಂತೆ ಡಿಸಿಎಂ ಸೂಚಿಸಿದ್ದಾರೆ. ಅದು ಕೂಡ ಒಂದು ವಾರದಲ್ಲೇ ಈ ರಿಪೋರ್ಟ್ ಸಿದ್ಧವಾಗಬೇಕು. ಸಿದ್ಧವಾದ ರಿಪೋರ್ಟ್ ಪರಿಶೀಲನೆಗೊಂಡ ತಕ್ಷಣದಲ್ಲೇ ಅಂತಹ ಕಟ್ಟಡಗಳ ತೆರವು ಮಾಡುವಂತೆ ಡಿಸಿಎಂ ಸೂಚಿಸಿದ್ದಾರೆ. ಇದನ್ನೂ ಓದಿ: ರಸ್ತೆ ಮಧ್ಯೆ ಜೋತಾಡುತ್ತಿದ್ದ ವಿದ್ಯುತ್ ವೈರ್‌ಗೆ ಇಬ್ಬರು ರೈತರು ಬಲಿ

  • ಸರ್ವೆ ವಿರೋಧಿಸಿ ರೈತ ಕುಟುಂಬದಿಂದ ಆತ್ಮಹತ್ಯೆ ಬೆದರಿಕೆ

    ಸರ್ವೆ ವಿರೋಧಿಸಿ ರೈತ ಕುಟುಂಬದಿಂದ ಆತ್ಮಹತ್ಯೆ ಬೆದರಿಕೆ

    ಬಾಗಲಕೋಟೆ: ಕಂದಾಯ ಇಲಾಖೆ ಹಾಗೂ ಬಿಡಿಡಿಎ ಅಧಿಕಾರಿಗಳ ಸರ್ವೆ ವಿರೋಧಿಸಿ ರೈತ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಮುಚಖಂಡಿ ತಾಂಡಾದಲ್ಲಿ ನಡೆದಿದೆ.

    ಬಾಗಲಕೋಟೆ ತಾಲೂಕಿನ ಮುಚಖಂಡಿ ಪಾಂಡಪ್ಪ ಚಾಹಾಣ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಕುಟುಂಬ. ಕುಟುಂಬದ ಆನಂದ ಹಾಗೂ ಬಾಬು ಎಂಬವರಿಂದ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಕೆ ಹಾಕಿದ್ದಾರೆ. ಆಲಮಟ್ಟಿ ಜಲಾಶಯದ 524ರ ಎತ್ತರಕ್ಕನುಗುಣವಾಗಿ ಅಕ್ರಮವಾಗಿ ಭೂಮಿ ಮುಳಗಡೆಯಾಗಿದ್ದು, ಬಾಗಲಕೋಟೆ ಉಪವಿಭಾಗಾಧಿಕಾರಿಗಳು ಹಾಗೂ ತಂಡ ಜಮೀನು ಸರ್ವೆ ಮಾಡಲು ಬಂದಿದ್ದರು. ಇದನ್ನೂ ಓದಿ: ಹಾವು ತಪ್ಪಿಸಲು ಹೋಗಿ ತುಂಗಾ ನಾಲೆಗೆ ಬಿದ್ದ ಕಾರು – ಮಹಿಳೆ ಸಾವು

    ಈ ಹಿಂದೆ ರೈತ ಕುಟುಂಬವು ಭೂಸ್ವಾದೀನ ಪ್ರಕ್ರಿಯೆಗೆ ಸ್ಟೇ ತರಲು ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ್ದು, ಆದರೆ ಸ್ಟೇ ರದ್ದಾಗಿತ್ತು. ಈ ಹಿನ್ನೆಲೆ ಅಧಿಕಾರಿಗಳು ಸರ್ವೆಗೆ ಬಂದಿದ್ದರು. ಪಾಂಡಪ್ಪ ಅವರ 5 ಎಕರೆ ಗುಂಟೆ ಜಮೀನು ಮುಳುಗಡೆ ವ್ಯಾಪ್ತಿಗೆ ಬರಲಿದ್ದು, ಜಮೀನು ಕೊಡುವುದಕ್ಕೆ ರೈತ ಕುಟುಂಬವು ವಿರೋಧ ವ್ಯಕ್ತಪಡಿಸಿದೆ. ಇದನ್ನೂ ಓದಿ: ಬಡ್ಡಿ ಹಾವಳಿಗೆ ಬೆಂದು ಹೋದ ಶಿಕ್ಷಕಿಯ ಕುಟುಂಬ

    ಘಟನೆ ಕುರಿತು ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಕೆರೆ ಸರ್ವೆ ಕಾರ್ಯ, ಒತ್ತುವರಿ ತೆರವಿಗೆ ವಿಳಂಬ ಮಾಡಬೇಡಿ: ಡಿಸಿ ಜೆ ಮಂಜುನಾಥ್

    ಕೆರೆ ಸರ್ವೆ ಕಾರ್ಯ, ಒತ್ತುವರಿ ತೆರವಿಗೆ ವಿಳಂಬ ಮಾಡಬೇಡಿ: ಡಿಸಿ ಜೆ ಮಂಜುನಾಥ್

    ಬೆಂಗಳೂರು: ನಗರ, ಜಿಲ್ಲೆ ಕೆರೆಗಳನ್ನು ಶಾಶ್ವತ ಆಸ್ತಿಯನ್ನಾಗಿ ಅಭಿವೃದ್ಧಿಪಡಿಸಿ ನಮ್ಮ ಮುಂದಿನ ಪೀಳಿಗೆಗೆ ಸುರಕ್ಷಿತ ಪರಿಸರ ಉಳಿಸುವುದು ನಮ್ಮ ಜವಾಬ್ದಾರಿ. ಹಾಗಾಗಿ ಜಿಲ್ಲೆಯ ಎಲ್ಲ ಕೆರೆಗಳ ಸರ್ವೆ ಕಾರ್ಯ ಕೈಗೊಂಡು ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಾದ ಜೆ ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಇಂದು ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಕೆರೆಗಳ ಅಭಿವೃದ್ಧಿ ಕುರಿತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆರೆಗಳ ಸುತ್ತ ಗಡಿ ಗುರುತಿಸಿ, ಅದರ ಸುತ್ತ ಇರುವ ಬಫರ್ ಝೋನ್ ಪ್ರದೇಶದಲ್ಲಿ ಯಾವುದೇ ಕಟ್ಟಡ ಅಥವಾ ಇತರೆ ಕಾಮಗಾರಿಗಳಿಗೆ ಅನುಮತಿ ನೀಡುವಂತ್ತಿಲ್ಲ. ಈ ಬಗ್ಗೆ ಕೂಡಲೇ ಸರ್ವೆ ನಡೆಸಿ ಒತ್ತುವರಿ ಮಾಹಿತಿ ನೀಡುವಂತೆ ಅವರು ಸೂಚಿಸಿದರು.

    ಕೆರೆಗಳಿಗೆ ನೀರು ಪೂರೈಸುವ ರಾಜಕಾಲುವೆಗಳ ಒತ್ತುವರಿಯನ್ನೂ ಸಹ ಕೂಡಲೆ ತೆರವುಗೊಳಿಸಬೇಕು ಎಂದ ಜಿಲ್ಲಾಧಿಕಾರಿಗಳು, ನಾಳೆಯೊಳಗೆ ಈ ಸಂಪೂರ್ಣ ಕಾರ್ಯ ನಿರ್ವಹಿಸಲು ವೇಳಾಪಟ್ಟಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲೆಯಲ್ಲಿ ಒಟ್ಟು 836 ಕೆರೆಗಳಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ 204 ಕೆರೆಗಳು, ಸಣ್ಣ ನೀರಾವರಿ ಇಲಾಖೆಗೆ 46 ಕೆರೆಗಳು, ಜಿಲ್ಲಾ ಪಂಚಾಯ್ತಿಗೆ 421, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಐದು ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಗೆ ಒಂದು ಕೆರೆ ಸೇರುತ್ತದೆ. ಉಳಿದ ಕೆರೆಗಳು ಯಾವ ಇಲಾಖೆಗೆ ಸೇರುತ್ತದೆ ಎಂಬ ಬಗ್ಗೆ ನಿರ್ಧರಿಸಲು ಸಮೀಕ್ಷೆ ನಡೆಸಲು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಪ್ರವಾಸಿ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ಕೋವಿಡ್ ಪರಿಹಾರ – ಯೋಗೇಶ್ವರ್

    ಬೆಂಗಳೂರು ಕೇವಲ ಸಿಲಿಕಾನ್ ವ್ಯಾಲಿಯಾಗಿ ಜಾಗತಿಕವಾಗಿ ಬ್ರಾಂಡ್ ಆಗುವುದು ಮಾತ್ರವಲ್ಲ, ಆರೋಗ್ಯಕರ ಪರಿಸರವನ್ನು ನಿವಾಸಿಗಳಿಗೆ ಒದಗಿಸಿ ಜೀವನ ಗುಣಮಟ್ಟವನ್ನು ಉತ್ತಮಗೊಳಿಸುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಅವರು ಸೂಚಿಸಿದರು.

    ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಿದಲ್ಲಿ ಕೈಗಾರಿಕೆಗಳಿಗೆ ಅವುಗಳನ್ನು ಅಭಿವೃದ್ಧಿ ಪಡಿಸಲು ನೀಡಲಾಗುವುದು ಎಂದ ಅವರು, ಸರ್ಕಾರದ ಮಟ್ಟದಲ್ಲಿ ಪ್ರತಿ 15 ದಿನಗಳಿಗೊಮ್ಮೆ ಕೆರೆ ಅಭಿವೃದ್ಧಿ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಅನುಷ್ಠಾನ ಇಲಾಖೆಗಳು ಕ್ರಿಯಾಶೀಲರಾಗುವುದು ಅತ್ಯಗತ್ಯ ಎಂದು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ, ಅಪರ ಜಿಲ್ಲಾಧಿಕಾರಿ ಅನಿತಾ ಲಕ್ಷ್ಮೀ, ಉತ್ತರ ವಿಭಾಗಾಧಿಕಾರಿ ರಂಗನಾಥ್, ದಕ್ಷಿಣ ಉಪವಿಭಾಗಾಧಿಕಾರಿ ಡಾ. ಶಿವಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

  • ಸಾರಾ ಮಹೇಶ್ ಕಲ್ಯಾಣಮಂಟಪ ವಿವಾದ – ಸರ್ವೇ ಕಾರ್ಯ ಆರಂಭ

    ಸಾರಾ ಮಹೇಶ್ ಕಲ್ಯಾಣಮಂಟಪ ವಿವಾದ – ಸರ್ವೇ ಕಾರ್ಯ ಆರಂಭ

    ಮೈಸೂರು: ಶಾಸಕ ಸಾರಾ ಮಹೇಶ್ ಒಡೆತನದ ಸಾರಾ ಕಲ್ಯಾಣ ಮಂಟಪದ ಜಾಗದ ಸರ್ವೆ ಇಂದು ಆರಂಭವಾಗಿದೆ.

    ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಯವರು ಶಾಸಕ ಸಾರಾ ಮಹೇಶ್ ಒಡೆತನದ ಸಾರಾ ಕಲ್ಯಾಣ ಮಂಟಪ ರಾಜಕಾಲುವೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಆರೋಪದ ಬಗ್ಗೆ ತನಿಖೆಯಾಗಲಿ ಎಂದು ಸ್ವತಃ ಸಾರಾ ಮಹೇಶ್ ಹೋರಾಟ ಮಾಡಿದ್ದರು. ಹೀಗಾಗಿ, ಪ್ರಾದೇಶಿಕ ಆಯುಕ್ತರು ತನಿಖಾ ತಂಡ ರಚಿಸಿದ್ದರು. ಇದರಂತೆ ಕಂದಾಯ ಇಲಾಖೆಯಿಂದ ಸರ್ವೇ ಕಾರ್ಯ ಶುರುವಾಗಿದ್ದು ವೆಂಕಟರಾಜು ಹಾಗೂ ತಹಶಿಲ್ದಾರ್ ರಕ್ಷಿತ್ ನೇತೃತ್ವದ ತಂಡದಿಂದ ಸರ್ವೇ ಕಾರ್ಯ ನಡೆಯುತ್ತಿದೆ. ಕಲ್ಯಾಣಮಂಟಪದ ಸುತ್ತ ಮುತ್ತ ಅಳತೆ ಮಾಡಲಾಗಿದೆ.

    ಕೆಲವು ದಿನಗಳ ಹಿಂದೆ ಸಾರಾ ಮಹೇಶ್ ಹಾಗೂ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ನಡುವಿನ ಭೂ ಅವ್ಯವಹಾರದ ಆರೋಪಗಳ ಸುರಿಮಳೆ ಸುರಿದಿತ್ತು. ಈ ವೇಳೆ ಸಾರಾ ಮಹೇಶ್ ಒಡೆತನದ ಸಾರಾ ಕಲ್ಯಾಣ ಮಂಟಪ ರಾಜಕಾಲುವೆ ಮೇಲೆ ನಿರ್ಮಾಣವಾಗಿದೆ ಎಂದು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಆರೋಪಿಸಿದ್ದರು. ಹೀಗಾಗಿ ಸಾರಾ ಮಹೇಶ್ ಏಕಾಂಗಿಯಾಗಿ ಮೈಸೂರಿನ ಪ್ರಾದೇಶಿಕ ಕಚೇರಿ ಮುಂಭಾಗ ಪ್ರತಿಭಟನೆ ಆರಂಭಿಸಿದ್ದರು. ಇದನ್ನೂ ಓದಿ: ರಾಜಕಾಲುವೆ ಮೇಲೆ ಕಲ್ಯಾಣ ಮಂಟಪವಿದ್ದರೆ ರಾಜಕೀಯ ನಿವೃತ್ತಿ: ಸಾರಾ ಮಹೇಶ್

    ನನ್ನ ಒಡೆತನದಲ್ಲಿರುವ ಸಾ.ರಾ. ಕಲ್ಯಾಣ ಮಂಟಪ ರಾಜಕಾಲುವೆ ಮೇಲೆ ನಿರ್ಮಾಣ ಆಗಿಲ್ಲ. ಉನ್ನತ ಮಟ್ಟದ ಅಧಿಕಾರಿಗಳು ಜಾಗದ ಸರ್ವೇ ಮಾಡಲಿ. ರಾಜಕಾಲುವೆ ಮೇಲೆ ನಿರ್ಮಾಣ ಆಗಿದ್ದರೆ ಅದನ್ನು ಸಾರ್ವಜನಿಕರ ಬಳಕೆಗಾಗಿ ರಾಜ್ಯಪಾಲರಿಗೆ ಹಸ್ತಾಂತರ ಮಾಡುತ್ತೇನೆ. ಮಾತ್ರವಲ್ಲ ನಾನು ಸಾರ್ವಜನಿಕ ಜೀವನದಿಂದಲೇ ನಿವೃತ್ತಿ ಹೊಂದುತ್ತೇನೆ. ಒಂದು ವೇಳೆ ಅವರು ಮಾಡಿರುವ ಆರೋಪ ಸುಳ್ಳಾದರೆ ಐಎಎಸ್ ಹುದ್ದೆಯಿಂದ ಅಮಾನತು ಮಾಡಬೇಕು. ಮಕ್ಕಳನ್ನು ಆಡಿಸಿಕೊಂಡು, ಅಡುಗೆ ಮಾಡಿಕೊಂಡು ಇರಲು ಆಂಧ್ರಕ್ಕೆ ಕಳುಹಿಸಬೇಕು ಎಂದು ಕಿಡಿಕಾರಿದ್ದರು.

    ಈ ಬಗ್ಗೆ ಪ್ರಾದೇಶಿಕ ಆಯುಕ್ತ ಪ್ರಕಾಶ್ ತನಿಖೆ ನಡೆಸಿ ವರದಿ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ಶಾಸಕ ಸಾರಾ ಮಹೇಶ್ ಕಲ್ಯಾಣ ಮಂಟಪದ ಜಾಗದ ಸರ್ವೆ ಪ್ರಾರಂಭಗೊಳಿಸಲಾಗಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿಯನ್ನು ಮೈಸೂರಿನ ಭೂ ಅಕ್ರಮದ ವಿಶೇಷ ತನಿಖಾಧಿಕಾರಿಯಾಗಿ ನೇಮಿಸಿ: ವಿಶ್ವನಾಥ್ ಆಗ್ರಹ

  • ಇವರುಗಳಿಗೆ ಹೆದರಿಕೊಂಡು ನಾನು ನನ್ನ ಕೆಲಸ ಬಿಡಲ್ಲ: ಆಶಾಕಾರ್ಯಕರ್ತೆ

    ಇವರುಗಳಿಗೆ ಹೆದರಿಕೊಂಡು ನಾನು ನನ್ನ ಕೆಲಸ ಬಿಡಲ್ಲ: ಆಶಾಕಾರ್ಯಕರ್ತೆ

    – ಮನೆಯವರು ಕೆಲಸ ಬಿಡು ಅಂತಿದ್ದಾರೆ
    – ಸಮಾಜಕ್ಕೋಸ್ಕರ ಮಾಡೋ ಸೇವೆ ಬಿಡಲ್ಲ

    ಮೈಸೂರು: ನನ್ನ ಮನೆಯವರು ಘಟನೆ ನಡೆದ ಬಳಿಕ ಕೆಲಸ ಬಿಡುವಂತೆ ಹೇಳುತ್ತಿದ್ದಾರೆ. ಆದರೆ ಇವರುಗಳಿಗೆ ಹೆದರಿಕೊಂಡು ನಾನು ಸಮಾಜಕ್ಕೋಸ್ಕರ ಮಾಡುವ ಕೆಲಸವನ್ನು ಬಿಡಲ್ಲ ಎಂದು ಆಶಾ ಕಾರ್ಯಕರ್ತೆ ಸುಮಯಾ ಫಿರ್ದೋಶ್ ತಿಳಿಸಿದ್ದಾರೆ.

    ಘಟನೆಯ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾವು ಕೋವಿಡ್ 19 ಸರ್ವೆ ಮಾಡುತ್ತಿದ್ದೇವೆ. ಯಾರಿಗೆ ಕೊರೊನಾ ಲಕ್ಷಣಗಳಿವೆ ಎಂಬುದರ ಬಗ್ಗೆ ಸರ್ವೆ ಮಾಡುತ್ತಿದ್ದೇವೆ. ಸರ್ವೆಯಲ್ಲಿ ಮನೆಯ ಯಜಮಾನನ ಹೆಸರು, ಅವರ ಕುಟುಂಬದಲ್ಲಿರುವ ಸದಸ್ಯರ ಹೆಸರು, ಅವರ ಕಾಂಟ್ಯಾಕ್ಟ್ ನಂಬರ್ ತೆಗೆದುಕೊಳ್ಳುತ್ತೇವೆ. ಹಾಗೆಯೇ 60 ವರ್ಷ ದಾಟಿದವರು ಅವರ ಕುಟುಂಬದಲ್ಲಿದ್ದವರಿಗೆ ಯಾವುದಾದರೂ ಕಾಯಿಲೆ ಇದೆಯಾ?, ಇನ್ನು ಅದರಲ್ಲಿ ಬಿಪಿ, ಶುಗರ್ ಇದ್ದವರಿದ್ದರೆ ಅವರ ನಂಬರ್ ಕೂಡ ತೆಗೆದುಕೊಳ್ಳುತ್ತೇವೆ ಎಂದರು.

    ನಮ್ಮ ಏರಿಯಾದಲ್ಲಿ ಜನ ತುಂಬಾನೇ ಸಹಕಾರ ನೀಡುತ್ತಾರೆ. ನನಗೆ ಆರು ವರ್ಷದ ಸರ್ವಿಸ್ ಇದೆ. ಆದರೆ ಇಂತಹ ಘಟನೆ ಯಾವತ್ತೂ ಆಗಿರಲಿಲ್ಲ. ಇದೇ ಮೊದಲ ಬಾರಿ ನನ್ನ ಮೇಲೆ ದೌರ್ಜನ್ಯ ನಡೆದಿದೆ ಎಂದು ಸುಮಯಾ ತನ್ನ ಅಳಲು ತೋಡಿಕೊಂಡಿದ್ದಾರೆ.

    ಇಲ್ಲಿ ನನ್ನ ತಪ್ಪು ಏನಿಲ್ಲ. ನಾನು ಬರೀ ಮಾಸ್ಕ್ ಹಾಕಿಕೊಳ್ಳಿ ಹಾಗೆಯೇ ಅಂತರ ಕಾಯ್ದುಕೊಳ್ಳಿ ಅಂತ ಹೇಳಿದ ಅಷ್ಟೆ. ಅದನ್ನು ದೊಡ್ಡ ವಿಷಯವಾಗಿ ಮಾಡಿದ್ರು. ನನ್ನ ತಂದೆಯ ಬಳಿ ಹೋಗಿ ಗಲಾಟೆ ಮಾಡಿದ್ರು. ಈ ಹಿಂದೆಯೂ ಆರೋಪಿ ಖಲೀಲ್ ಎಂಬಾತ ನನ್ನ ಕೈಯಿಂದ ಫೋನ್ ಕಿತ್ಕೊಂಡು ಗಲಾಟೆ ಮಾಡಿದ್ದನು. ಆಗ ನಾನು ಯಾರಿಗೂ ಹೇಳಿರಲಿಲ್ಲ. ಇಂತಹ ಘಟನೆಗಳು ನಡೆಯುತ್ತಲೇ ಇವೆ ಎಂದು ಸುಮ್ಮನಾಗಿದ್ದೆ. ಆದರೆ ನಿನ್ನೆ ನಡೆದ ಘಟನೆಯಿಂದ ನನಗೆ ನಿದ್ದೆನೇ ಬಂದಿಲ್ಲ. ಇಷ್ಟೆಲ್ಲಾ ಆದರೂ ನಾನು ಕೆಲಸ ಬಿಟ್ಟಿಲ್ಲ. ಈಗಲೂ ನಾನು ಫೀಲ್ಡ್ ನಲ್ಲಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

    ಈ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಿದಕ್ಕೋದ್ರೆ ಕೆಟ್ಟದು ಆಗುತ್ತೆ. ಇವರ ಆರೋಗ್ಯಕ್ಕೋಸ್ಕರ ನಾವು ಉರಿ ಬಿಸಿಲಲ್ಲಿ ಮನೆ ಮನೆ ಸುತ್ತುತ್ತಿದ್ದೇವೆ. ಆಗ ಇಂತಹ ಘಟನೆಗಳು ನಡೆದರೆ ಬೇಜಾರಾಗುತ್ತೆ, ಮನಸ್ಸಿಗೆ ನೋವಾಗುತ್ತದೆ. ಯಾವಾಗ ಜಿಲ್ಲೆಯಲ್ಲಿ ಹಕ್ಕಿ ಜ್ವರ ಬಂದಿದೆಯೋ ಅವತ್ತಿನಿಂದ ನಿರಂತರವಾಗಿ ನಾವು ಸರ್ವೆ ಕಾರ್ಯ ಮಾಡುತ್ತಲೇ ಇದ್ದೇವೆ. ಇಲ್ಲಿಯವರೆಗೆ ಸುಮಾರು 600 ಮನೆ ಸರ್ವೆ ಮಾಡಿದ್ದೇವೆ ಎಂದರು.

    ಈ ಘಟನೆಯ ನಂತರ ಮನೆಯವರು ಕೆಲಸ ಬಿಟ್ಟು ಬಿಡು, ಜೀವ ಹೋದರೆ ಏನು ಮಾಡೋದು ಅಂತ ಹೇಳಿದ್ರು. ಪ್ರಾಣ ಹೋದರೂ ಪರವಾಗಿಲ್ಲ. ಆದರೆ ನಾನು ಕೆಲಸ ಬಿಡಲ್ಲ. ಇವರುಗಳಿಗೆ ಹೆದರಿಕೊಂಡು ನಾನು ಯಾಕೆ ಕೆಲಸ ಬಿಡಲಿ. ನಾವು ಜನರ ಸೇವೆ ಮಾಡುತ್ತಿದ್ದೇವೆ. ಇಲ್ಲಿ ತುಂಬಾ ಬಡವರು ಕೂಡ ಇದ್ದಾರೆ. ಈ ಕೋವಿಡ್ 19 ಸರ್ವೆಯಲ್ಲಿ ಯಾರ ಮನೆಯಲ್ಲಿ ಕಷ್ಟ ಇದೆ ಅಂತ ಗೊತ್ತಾಗುತ್ತಿದೆ. ಕೆಲವರು ಪರಿಸ್ಥಿತಿ ಹೇಗಿದೆ ಅಂತ ಕೇಳಿದ ತಕ್ಷಣ ಅಳುತ್ತಾರೆ ಎಂದು ತಿಳಿಸಿದರು.

  • ಎನ್‍ಡಿಎ ಮೈತ್ರಿಕೂಟಕ್ಕೆ ಬಹುಮತ ಕಷ್ಟ- ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಅತಂತ್ರ ಫಲಿತಾಂಶ

    ಎನ್‍ಡಿಎ ಮೈತ್ರಿಕೂಟಕ್ಕೆ ಬಹುಮತ ಕಷ್ಟ- ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಅತಂತ್ರ ಫಲಿತಾಂಶ

    – ಸರ್ಕಾರ ರಚನೆಯಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಆಟ

    ಬೆಂಗಳೂರು: ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಮಹಾಘಟಬಂಧನ್, ಎಸ್‍ಪಿ-ಬಿಎಸ್‍ಪಿ ಮೈತ್ರಿ ಲೆಕ್ಕಕ್ಕೆ ಇಲ್ಲ ಎನ್ನುವಂತೆ ಮಾತನಾಡುತ್ತಿರಬಹುದು. ಆದ್ರೆ ಸಮೀಕ್ಷೆಗಳು ಮಾತ್ರ ಬೇರೆಯದನ್ನೇ ಹೇಳುತ್ತಿವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾದಿ ಸುಲಭವಲ್ಲ. ಕೆಲವು ಚುನಾವಣಾ ಪೂರ್ವ ಸಮೀಕ್ಷೆಗಳು ಪ್ರಕಟವಾಗಿದ್ದು, ಅದ್ರಲ್ಲಿ ಮೋದಿ ಪಾಲಿಗೆ ಈ ಬಾರಿಯ ಚುನಾವಣೆ ಅಗ್ನಿ ಪರೀಕ್ಷೆಯಾಗಲಿದೆ ಎಂಬ ಸೂಚನೆ ಸಿಕ್ಕಿದೆ.

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವ ಮೈತ್ರಿಕೂಟಕ್ಕೂ ಬಹುಮತ ಸಿಗದೇ ಇದ್ದರೂ, ಚುನಾವಣೋತ್ತರ ಮೈತ್ರಿಯಿಂದ ಎನ್‍ಡಿಎ ಮತ್ತೊಂದು ಅವಧಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಎಬಿಪಿ ಹಾಗೂ ಸಿ-ವೋಟರ್ ಸಮೀಕ್ಷೆ ತಿಳಿಸಿದೆ. ಚುನಾವಣಾ ಪೂರ್ವ ಮೈತ್ರಿಯಿಂದ ಎನ್‍ಡಿಎ 233 ಹಾಗೂ ಯುಪಿಎ 167 ಸ್ಥಾನಗಳನ್ನು ಪಡೆಯಲಿದೆ. ತೃತೀಯ ರಂಗ 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಸರಳ ಬಹುಮತಕ್ಕೆ 272 ಸ್ಥಾನಗಳ ಅಗತ್ಯವಿದೆ. 203 ಸ್ಥಾನಗಳನ್ನು ಜಯಿಸುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಕಾಂಗ್ರೆಸ್ ಸದಸ್ಯರ ಬಲ ಬಹುತೇಕ ದುಪ್ಪಟ್ಟಾಗಲಿದ್ದು, 109 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಅಂದಾಜು ಮಾಡಿದೆ.

    ಇನ್ನು ಕರ್ನಾಟಕದ ಪರಿಸ್ಥಿತಿ ಯಾರಿಗೆ ಎಷ್ಟು ಸಿಗಬಹುದು? ಇಷ್ಟಕ್ಕೂ ಚುನಾವಣಾ ಪೂರ್ವ ಸಮೀಕ್ಷೆಗಳು ಏನು ಹೇಳುತ್ತವೆ ಅನ್ನೋದನ್ನು ನೋಡೋದಾದ್ರೆ.. ಲೋಕಸಭಾ ಒಟ್ಟು ಸ್ಥಾನ – 543, ಎನ್‍ಡಿಎ – 233, ಯುಪಿಎ-167, ಇತರರು 145 (ಯಾರಿಗೂ ಬಹುಮತ ಇಲ್ಲ- ಸಿಂಪಲ್ ಮೆಜಾರಿಟಿಗೆ ಬೇಕು 273)

    ಕರ್ನಾಟಕ – ಒಟ್ಟು ಸ್ಥಾನ – 28, ಬಿಜೆಪಿ-14, ಕಾಂಗ್ರೆಸ್-11, ಜೆಡಿಎಸ್- 03
    ಉತ್ತರ ಪ್ರದೇಶ – ಒಟ್ಟು ಸ್ಥಾನ – 80, ಎಸ್‍ಪಿ-ಬಿಎಸ್‍ಪಿ 51, ಬಿಜೆಪಿ 25, ಕಾಂಗ್ರೆಸ್ 04
    ಆಂಧ್ರ ಪ್ರದೇಶ – ಒಟ್ಟು ಸ್ಥಾನ 25, ವೈಎಸ್‍ಆರ್‍ಸಿಪಿ -19, ಟಿಡಿಪಿ-06
    ದೆಹಲಿ – ಒಟ್ಟು ಸ್ಥಾನ 07- ಬಿಜೆಪಿ-07, ಕಾಂಗ್ರೆಸ್ – 00
    ಪಶ್ಚಿಮ ಬಂಗಾಳ – ಒಟ್ಟು ಸ್ಥಾನ 42, ಟಿಎಂಸಿ-34, ಬಿಜೆಪಿ 07, ಕಾಂಗ್ರೆಸ್-01

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಕಷ್ಟ ಎದುರಾಗಲಿದೆ ಅನ್ನೋದು ಇಂಡಿಯಾ ಟುಡೇ-ಕಾರ್ವಿ ನಡೆಸಿದ ಮೂಡ್ ಆಫ್ ದಿ ನೇಶನ್ ಸಮೀಕ್ಷೆಯಲ್ಲಿ ಬಯಲಾಗಿದೆ. ಇದರ ಪ್ರಕಾರ ಯಾವ ಮೈತ್ರಿ ಕೂಟಕ್ಕೆ ಎಷ್ಟೆಷ್ಟು ಸ್ಥಾನ ಸಿಕ್ಕಿದೆ ಅನ್ನೋದನ್ನು ನೋಡೋದಾದ್ರೆ..  ಲೋಕಸಭೆ ಒಟ್ಟು ಸ್ಥಾನ -543, ಎನ್‍ಡಿಎ – 237 (-86), ಯುಪಿಎ-166 (+60), ಇತರರು 140 (-13)
    ಉತ್ತರ ಪ್ರದೇಶ – ಒಟ್ಟು ಸ್ಥಾನ-80, ಎಸ್‍ಪಿ-ಬಿಎಸ್‍ಪಿ -58, ಬಿಜೆಪಿ – 18, ಕಾಂಗ್ರೆಸ್ – 04

    ಒಟ್ಟಿನಲ್ಲಿ ಚುನಾವಣೆಗೆ ಇನ್ನೂ ನಾಲ್ಕು ತಿಂಗಳಿನಷ್ಟು ಕಾಲಾವಕಾಶವಿದೆ. ಚುನಾವಣಾ ಪೂರ್ವ ಸಮೀಕ್ಷೆಯಿಂದ ರಾಜಕೀಯ ಮುಖಂಡರು ಆಕ್ಟಿವ್ ಆಗಿದ್ದು ಎಲ್ಲರ ಭವಿಷ್ಯ ಮತದಾರರಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ವಚ್ಛ ಮೈಸೂರಿಗಾಗಿ ಅಭಿಯಾನ ಆರಂಭಿಸಿದ ಯದುವೀರ್ ಒಡೆಯರ್

    ಸ್ವಚ್ಛ ಮೈಸೂರಿಗಾಗಿ ಅಭಿಯಾನ ಆರಂಭಿಸಿದ ಯದುವೀರ್ ಒಡೆಯರ್

    ಮೈಸೂರು: ಸ್ವಚ್ಛ ಮೈಸೂರು ಪಟ್ಟಕ್ಕಾಗಿ ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಯಾನ ಆರಂಭಿಸಿದ್ದಾರೆ.

    ಸಾಮಾಜಿಕ ಜಾಲತಾಣದ ಮೂಲಕ ಯದುವೀರ್ ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಭಾಗಿಯಾಗುವಂತೆ ಮೈಸೂರಿಗರಲ್ಲಿ ಮನವಿ ಮಾಡುತ್ತಿದ್ದಾರೆ. ಫೇಸ್‍ಬುಕ್ ಹಾಗೂ ಇನ್ ಸ್ಟಾಗ್ರಾಂನಲ್ಲಿ ವಿಶೇಷ ವಿಡಿಯೋಗಳನ್ನು ತನ್ನದೇ ಅಕೌಂಟ್‍ನಿಂದ ಅಪ್‍ಲೋಡ್ ಮಾಡಿ, ಸ್ವಚ್ಛ ಅಭಿಯಾನದಲ್ಲಿ ಯಾವ ರೀತಿ ಭಾಗಿಯಾಗಬೇಕೆಂದು ತಿಳಿಸುತ್ತಿದ್ದಾರೆ.

    ಸ್ವಚ್ಛತಾ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಸರ್ವೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡುತ್ತಿದ್ದು ಈ ಮೂಲಕ ಈ ಬಾರಿ ನಂ.1 ಪಟ್ಟಕ್ಕಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಯದುವೀರ್ ಸ್ವಚ್ಛ ಮೈಸೂರು ರಾಯಭಾರಿಯಾಗಿದ್ದಾರೆ.

  • ಡಿಕೆ ರವಿ, ಗಣಪತಿ ಕೇಸನ್ನು ಪರಿಗಣಿಸಿದ್ದು ಯಾಕೆ: ಪಬ್ಲಿಕ್ ಟಿವಿ ಸಮೀಕ್ಷೆಗೆ ಜಾರ್ಜ್ ಪ್ರಶ್ನೆ

    ಡಿಕೆ ರವಿ, ಗಣಪತಿ ಕೇಸನ್ನು ಪರಿಗಣಿಸಿದ್ದು ಯಾಕೆ: ಪಬ್ಲಿಕ್ ಟಿವಿ ಸಮೀಕ್ಷೆಗೆ ಜಾರ್ಜ್ ಪ್ರಶ್ನೆ

    ಬೆಂಗಳೂರು: ಡಿಕೆ ರವಿ ಮತ್ತು ಗಣಪತಿ ಪ್ರಕರಣಗಳನ್ನು ಸಮೀಕ್ಷೆಗೆ ಪರಿಗಣಿಸಿದ್ದು ಯಾಕೆ ಎಂದು ಸಚಿವ ಕೆಜೆ ಜಾರ್ಜ್ ಪಬ್ಲಿಕ್ ಟಿವಿಯನ್ನು ಪ್ರಶ್ನೆ ಮಾಡಿದ್ದಾರೆ.

    ಪಬ್ಲಿಕ್ ಟಿವಿ ಸಮೀಕ್ಷೆಗೆ ಪ್ರತಿಕ್ರಿಯಿಸಿದ ಅವರು, ಸಮೀಕ್ಷೆಗಳ ಫಲಿತಾಂಶಗಳು ನಿಜವಾಗುವುದಿಲ್ಲ. ಇದು ಗುಜರಾತ್ ಚುನಾವಣೆಯಲ್ಲಿ ಸಾಬೀತಾಗಿದೆ. ನಿಮ್ಮ ಸರ್ವೆಯನ್ನ ನಾನು ನೋಡಿದ್ದೇವೆ. ಅದರಲ್ಲಿ ಡಿಕೆ ರವಿ ಕೇಸ್ ಹಾಗೂ ಗಣಪತಿ ಕೇಸ್ ಸರ್ಕಾರದ ಇಮೇಜ್‍ಗೆ ಧಕ್ಕೆ ಆಗುತ್ತೆ ಎಂದು ತೋರಿಸಲಾಗಿದೆ. ಇದನ್ನು ಯಾಕೆ ಸಮೀಕ್ಷೆಗೆ ಪರಿಗಣಿಸಿದ್ದು ಎನ್ನುವುದನ್ನು ನೀವು ಹೇಳಬೇಕು ಎಂದು ಪ್ರಶ್ನಿಸಿದರು.

    ಡಿಕೆ ರವಿ ಕೇಸ್ ನಲ್ಲಿ ಸಿಬಿಐ ಆತ್ಮಹತ್ಯೆ ಅಂತ ವರದಿ ಕೊಟ್ಟಿದೆ. ಗಣಪತಿ ಕೇಸ್‍ನಲ್ಲಿ ಸಿಐಡಿ ಬಿ ರಿಪೋರ್ಟ್ ನೀಡಿದೆ. ಹೀಗಾಗಿ ನೀವು ಸರ್ವೆಯಲ್ಲಿ ಈ ವಿಚಾರವನ್ನು ಸೇರ್ಪಡೆ ಮಾಡಿರೋದು ಸರಿಯಲ್ಲ. ರಾಜ್ಯದ ಜನ ಯಾವ ಸರ್ಕಾರ ಬೇಕು ಅಂತ ನಿರ್ಧಾರ ಮಾಡುತ್ತಾರೆ. ಅತಂತ್ರ ಸರ್ಕಾರ ನಿರ್ಮಾಣ ಆಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು. ಇದನ್ನು ಓದಿ: ಯಾರಿಗೂ ಬಹುಮತವಿಲ್ಲ, ಮತ್ತೊಮ್ಮೆ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ!

    2018ರಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಮೆಗಾ ಸಮೀಕ್ಷೆಯನ್ನು ನಡೆಸಿತ್ತು. ಜನವರಿ 1 ಮತ್ತು 2ನೇ ತಾರೀಕಿನಂದು ಮೆಗಾ ಸಮೀಕ್ಷೆಯ ಫಲಿತಾಂಶಗಳು ಪಬ್ಲಿಕ್ ಟಿವಿಯಲ್ಲಿ ಪ್ರಸಾರ ಆಗಿತ್ತು

    ಈ ಮೆಗಾ ಸರ್ವೆಯಲ್ಲಿ ಜನರಿಗೆ ಯಾವ ಹಗರಣಗಳು ಸಿದ್ದರಾಮಯ್ಯ ಇಮೇಜ್ ಮೇಲೆ ಹೆಚ್ಚು ಪರಿಣಾಮ ಬೀರಿವೆ ಎಂದು ಪ್ರಶ್ನೆಯನ್ನು ಕೇಳಲಾಗಿತ್ತು. ಈ ಪ್ರಶ್ನೆಗೆ ಹ್ಯೂಬ್ಲೋಟ್ ವಾಚ್ ಹಗರಣಕ್ಕೆ 7.69%, ಡಿಕೆ ರವಿ ಮತ್ತು ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ 31.84%, ಪರಮೇಶ್ವರ ನಾಯ್ಕ್ ಪ್ರಕರಣಕ್ಕೆ 2.96%, ಮೇಟಿ ಲೈಂಗಿಕ ಹಗರಣಕ್ಕೆ 6.71% ಮತ್ತು ಡಿಕೆ ಶಿವಕುಮಾರ್ ಐಟಿ ದಾಳಿ ಪ್ರಕರಣಕ್ಕೆ 6.91% ಫಲಿತಾಂಶ ಸಿಕ್ಕಿತ್ತು. ಒಟ್ಟು ಮೇಲಿನ ಎಲ್ಲ ವಿಚಾರಕ್ಕೆ ಸಂಬಂಧಿಸಿದಂತೆ 30.56%, ಏನೂ ಹೇಳಲ್ಲ 12.96% ಹಾಗೂ ಇತರೆಗೆ 0.37% ಫಲಿತಾಂಶ ಸಿಕ್ಕಿತ್ತು. ಇದನ್ನು ಓದಿ:ಹೊಸ ವರ್ಷಕ್ಕೆ ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸಮೀಕ್ಷೆ-ಕರ್ನಾಟಕ ಮತದಾರರ ಮನದಾಳದ ಉತ್ತರ ಇಲ್ಲಿದ