Tag: ಸರ್ವೇ

  • ಹೆಚ್‌ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ – ಎರಡನೇ ದಿನವೂ ಮುಂದುವರಿದ ಸರ್ವೇ ಕಾರ್ಯ

    ಹೆಚ್‌ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ – ಎರಡನೇ ದಿನವೂ ಮುಂದುವರಿದ ಸರ್ವೇ ಕಾರ್ಯ

    ರಾಮನಗರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಭೂ ಒತ್ತುವರಿ (Land Encroachment) ಆರೋಪ ಹಿನ್ನೆಲೆ ಎರಡನೇ ದಿನವೂ ಸರ್ವೇ (Survey) ಕಾರ್ಯ ಮುಂದುವರಿದಿದೆ.

    ಇಂದು ಬಿಡದಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ತೋಟವನ್ನು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಮಾಡಿದ್ದಾರೆ. ರೆವೆನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಸರ್ವೇ ಕಾರ್ಯ ನಡೆಯುತ್ತಿದ್ದು, ಕುಮಾರಸ್ವಾಮಿ ತೋಟ ಹಾಗೂ ಸುತ್ತಮುತ್ತಲಿನ ಜಮೀನುಗಳನ್ನೂ ಸರ್ವೇ ಮಾಡಲಾಗಿದೆ. ಆಧುನಿಕ ಸರ್ವೇ ಉಪಕರಣಗಳ ಮೂಲಕ ಸರ್ವೇ ಕಾರ್ಯ ನಡೆಸಿ ಜಮೀನಿನ ಮೂಲ ಮಾಲೀಕರನ್ನೂ ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಲಾಗಿದೆ. ಇದನ್ನೂ ಓದಿ: ಚಾಮರಾಜನಗರ: ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿ

    ಕಂದಾಯ ಇಲಾಖೆ ಅಧಿಕಾರಿಗಳ ಸರ್ವೆ ಕಾರ್ಯಕ್ಕೆ ಜಮೀನಿನ ಮೂಲ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಸರಿಯಾದ ರೀತಿಯಲ್ಲಿ ಸರ್ವೇ ಮಾಡುತ್ತಿಲ್ಲ. ಬೇಕಾಬಿಟ್ಟಿ ಸರ್ವೆ ಮಾಡುತ್ತಿದ್ದಾರೆ. ನೋಟಿಸ್ ಕೊಟ್ಟು ಮೂಲ ಮಾಲೀಕರನ್ನು ಸ್ಥಳಕ್ಕೆ ಕರೆಸಿದ್ದಾರೆ. ಆದರೆ ಕುಮಾರಸ್ವಾಮಿ ಅವರ ತೋಟದ ಒಳಗೆ ಸರ್ವೇ ಮಾಡುವಾಗ ನಮ್ಮನ್ನು ಒಳಗೆ ಬಿಟ್ಟಿಲ್ಲ ಎಂದು ಸರ್ವೇ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿಂಧೆ ನೇತೃತ್ವದ ಶಿವಸೇನೆಯ 20 ಶಾಸಕರ Y-ಭದ್ರತೆ ವಾಪಸ್ ಪಡೆದ ಫಡ್ನವಿಸ್

  • ಕೊಡಗು ಜಿಲ್ಲೆಯಲ್ಲಿ ಬರೋಬ್ಬರಿ 103 ಕೆರೆಗಳ ಒತ್ತುವರಿ ಜಿಲ್ಲಾಡಳಿತದ ಸರ್ವೇ ಕಾರ್ಯದಲ್ಲಿ ಬಯಲು

    ಕೊಡಗು ಜಿಲ್ಲೆಯಲ್ಲಿ ಬರೋಬ್ಬರಿ 103 ಕೆರೆಗಳ ಒತ್ತುವರಿ ಜಿಲ್ಲಾಡಳಿತದ ಸರ್ವೇ ಕಾರ್ಯದಲ್ಲಿ ಬಯಲು

    ಮಡಿಕೇರಿ: ಪ್ರಕೃತಿಯ ತವರು ಪ್ರವಾಸಿಗರ ಹಾಟ್‌ಸ್ಪಾಟ್ ಎಂದು ಕರೆಸಿಕೊಳ್ಳುವ ಕೊಡಗು ಜಿಲ್ಲೆಯಲ್ಲೇ ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದು ಇದೀಗ ಜಿಲ್ಲಾಡಳಿತ ಸರ್ವೇ ಕಾರ್ಯದಿಂದ ಬಯಲಾಗಿದೆ.

    ಕೊಡಗು ಜಿಲ್ಲೆಯ 3 ತಾಲೂಕುಗಳಲ್ಲಿ ಜಿಲ್ಲಾ ಸರ್ವೇ ಇಲಾಖೆ ನಡೆಸಿದ ಭೂಮಾಪನಾ ಸಂದರ್ಭ 547 ಕೆರೆಗಳ ಪೈಕಿ 509 ಕೆರೆಗಳ ಸರ್ವೇ ಮುಕ್ತಾಯಗೊಂಡಿದೆ. ಈ ಪೈಕಿ 103 ಕೆರೆಗಳನ್ನು ಒತ್ತುವರಿ ಮಾಡಲಾಗಿರುವುದು ಪತ್ತೆಯಾಗಿದೆ. ಈಗಾಗಲೇ 72 ಕೆರೆಗಳನ್ನು ಜಿಲ್ಲೆಯ ಕಂದಾಯ ಅಧಿಕಾರಿಗಳು ತೆರವುಗೊಳಿಸಿರುವುದು ಖಾತರಿಯಾಗಿದೆ.

    ಸೋಮವಾರಪೇಟೆ, ಮಡಿಕೇರಿ ಹಾಗೂ ವೀರಾಜಪೇಟೆ ತಾಲೂಕುಗಳಲ್ಲಿ ಸರ್ವೇ ಮಾಡಲಾಗಿದ್ದು, ಭೂಮಾಪನಾ ಇಲಾಖೆಯನ್ವಯ ಕುಶಾಲನಗರ ಮತ್ತು ಪೊನ್ನಂಪೇಟೆ ನೂತನ ತಾಲೂಕುಗಳ ಭೂಮಾಪನಾ ಹಳೆಯ ದಾಖಲೆಗಳು ಈ 3 ತಾಲೂಕುಗಳಲ್ಲಿಯೇ ಸೇರಿರುವುದರಿಂದ ಇಡೀ ಜಿಲ್ಲೆಯ ಸರ್ವೇ ಕಾರ್ಯ ಮುಕ್ತಾಯಗೊಂಡಿದೆ. ರಾಜ್ಯ ಕೆರೆಗಳ ಸಂರಕ್ಷಣಾ ಪ್ರಾಧಿಕಾರದ ನಿರ್ದೇಶನದಂತೆ ಈ ಸರ್ವೇ ಕಾರ್ಯ ನಡೆದಿದೆ. ಇದನ್ನೂ ಓದಿ: ಇವನಿಂದ ನಾನೇನು ಕಲಿಯಬೇಕಾಗಿಲ್ಲ, ನನ್ನ ಸುದ್ದಿಗೆ ಇವನು ಬರಬೇಕಾಗಿಲ್ಲ – ಡಿ.ಕೆ.ಸುರೇಶ್‍ಗೆ ಏಕವಚನದಲ್ಲೇ ಹೆಚ್‍ಡಿಕೆ ವಾರ್ನಿಂಗ್

    ಜಿಲ್ಲಾ ಮಾಪನಾ ಇಲಾಖೆಯ ಉಪನಿರ್ದೇಶಕ (ಡಿಡಿಎಲ್‌ಆರ್) ಪಿ ಶ್ರೀನಿವಾಸ್ ಪ್ರಕಾರ ಇನ್ನೂ 28 ಕೆರೆಗಳ ಸರ್ವೇ ಕಾರ್ಯ ನಡೆಸಬೇಕಾಗಿದೆ. ಇದರಲ್ಲಿ ಸೋಮವಾರಪೇಟೆಯ 10 ಹಾಗೂ ವೀರಾಜಪೇಟೆಯ 28 ಕೆರೆಗಳು ಸೇರಿವೆ. ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕಿನ ಕೆಲವೆಡೆ ಕೆರೆಗಳೇ ಮಾಯವಾಗಿರುವುದು ಕಂಡು ಬಂದಿದೆ.

    ಕೊಡಗು ಜಿಲ್ಲೆಯಲ್ಲಿ ಕೆರೆಗಳ ತೆರವು ಕಾರ್ಯಾ ಚರಣೆಯನ್ನು ಜಿಲ್ಲಾಧಿಕಾರಿ ಡಾ. ಸತೀಶ್ ಬಿಸಿ ಖಚಿತಪಡಿಸಿದ್ದಾರೆ. ಮಡಿಕೇರಿ ತಹಶೀಲ್ದಾರ್ ಮಹೇಶ್, ವೀರಾಜಪೇಟೆ ತಹಶೀಲ್ದಾರ್ ಯೋಗಾನಂದ್ ಹಾಗೂ ಸೋಮವಾರಪೇಟೆ ತಹಶೀಲ್ದಾರ್ ಗೋವಿಂದರಾಜ್ ಉಸ್ತುವಾರಿಯಲ್ಲಿ ತೆರವು ಕಾರ್ಯಾಚರಣೆ ನಡೆಯತ್ತಿರುವುದಾಗಿ ಜಿಲ್ಲಾಧಿಕಾರಿ ಸತೀಶ್ ತಿಳಿಸಿದ್ದಾರೆ. ಇನ್ನೂ ಕೊಡಗಿನಲ್ಲಿ ನಡೆದ ಕೆರೆಗಳ ಭೂಮಾಪನಾ ಕಾರ್ಯದ ಕುರಿತು ನೀಡಿದ ವಿವರಗಳನ್ನು ಪರಿಶೀಲಿಸಿದ್ದಾರೆ.

    ಜಿಲ್ಲೆಯಲ್ಲಿ 547 ಕೆರೆಗಳ ಪೈಕಿ ಮಡಿಕೇರಿ ತಾಲೂಕಿನಲ್ಲಿ 74, ಸೋಮವಾರಪೇಟೆ ತಾಲೂಕಿನಲ್ಲಿ 208 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 265 ಕೆರೆಗಳಿವೆ. ಇವುಗಳೆಲ್ಲಾ ಚಿಕ್ಕ ಕೆರೆಗಳಾಗಿವೆ. ಒಟ್ಟು ವಿಸ್ತೀರ್ಣ 426.61 ಎಕರೆ. ಇನ್ನುಳಿದಂತೆ ನೀರಾವರಿ ಇಲಾಖೆಯ ಅಧೀನದಲ್ಲಿ ಬೃಹತ್ ಕೆರೆಗಳಿದ್ದು, ಅವುಗಳ ಭೂಮಾಪನಾ ಕಾರ್ಯ ಕೈಗೊಂಡಿಲ್ಲ. ಇದನ್ನೂ ಓದಿ: ಮೇಕೆದಾಟು ಹೋರಾಟಕ್ಕೆ ಸರ್ಕಾರ ಸಹಕಾರ ಕೊಡಬೇಕಿತ್ತು: ಸಲೀಂ ಅಹ್ಮದ್

     

    ಪ್ರಸ್ತುತ ಜಿಲ್ಲೆಯ ಗ್ರಾಮಾಂತರ ವಿಭಾಗ ಹಾಗೂ ಪಟ್ಟಣ ವಿಭಾಗಗಳಲ್ಲಿ ಸರ್ವೇ ಕಾರ್ಯ ನಡೆಸಲಾಗಿದೆ. ಪಟ್ಟಣ ಪ್ರದೇಶಗಳಲ್ಲಿ 11 ಕೆರೆಗಳಿವೆ. ಮಡಿಕೇರಿ ನಗರದಲ್ಲಿ 4, ವೀರಾಜಪೇಟೆಯಲ್ಲಿ 4, ಕುಶಾಲನಗರದಲ್ಲಿ 2 ಹಾಗೂ ಸೋಮವಾರಪೇಟೆಯಲ್ಲಿ 1 ಕೆರೆಗಳಿವೆ. ಇದೀಗ 509 ಕೆರೆಗಳ ಭೂಮಾಪನಾ ಕಾರ್ಯ ಮುಕ್ತಾಯಗೊಂಡಿದೆ. ಆ ಪೈಕಿ ಮಡಿಕೇರಿ ತಾಲೂಕಿನಲ್ಲಿ 15, ಸೋಮವಾರಪೇಟೆ ತಾಲೂಕಿನಲ್ಲಿ 70 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 18 ಕೆರೆಗಳ ಜಾಗಗಳನ್ನು ಅತಿಕ್ರಮಣ ಮಾಡಿರುವುದು ಸ್ಪಷ್ಟಗೊಂಡಿದೆ.

    ಒಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ನೂರಾರು ಜನರು ಕೆರೆ ಒತ್ತುವರಿ ಮಾಡಿಕೊಂಡು ಕಟ್ಟಡ ವ್ಯವಸಾಯ ಮಾಡಿಕೊಂಡು ಬದುಕು ನಡೆಸುತ್ತಿದ್ದ ಜನರಿಗೆ ಇದೀಗ ಒತ್ತುವರಿ ಜಾಗ ತೆರವುಗೊಳ್ಳುವ ಅತಂಕ ಎದುರಾಗಿದೆ.

  • 45 ವರ್ಷ ಮೇಲ್ಪಟ್ಟ 6 ಲಕ್ಷಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸಿನೇಷನ್ – ಬೆಂಗಳೂರು ವರದಿ ಬಿಡುಗಡೆ

    45 ವರ್ಷ ಮೇಲ್ಪಟ್ಟ 6 ಲಕ್ಷಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸಿನೇಷನ್ – ಬೆಂಗಳೂರು ವರದಿ ಬಿಡುಗಡೆ

    ಬೆಂಗಳೂರು: ನಗರದಲ್ಲಿ ಮೂರನೇ ಕೋವಿಡ್ ಅಲೆಯ ಅಪಾಯದಿಂದ ಪಾರಾಗಲು ವ್ಯಾಕ್ಸಿನ್ ವಿತರಣೆಯನ್ನೇ ಪ್ರಮುಖ ಅಸ್ತ್ರವಾಗಿ ಬಿಬಿಎಂಪಿ ಪರಿಗಣಿಸಿದೆ. 45 ವರ್ಷ ಮೇಲ್ಪಟ್ಟವರಿಗೇ ಎಲ್ಲರಿಗೂ ಲಸಿಕೆ ವಿತರಣೆ ಮಾಡುವ ಉದ್ದೇಶವನ್ನು ಆರಂಭದಲ್ಲಿ ಹಾಕಿಕೊಂಡಿದೆ. ಈ ಹಿನ್ನಲೆಯಲ್ಲಿ ಪ್ರತೀ ಮನೆ-ಮನೆ (ಡೋರ್ ಟು ಡೋರ್ ಸರ್ವೇ) ಸರ್ವೇ ನಡೆಸಿರುವ ಬಿಬಿಎಂಪಿ ಶೇ.60 ರಷ್ಟು ಸರ್ವೇಕಾರ್ಯ ಮುಗಿಸಿದ್ದು, ಮಧ್ಯಂತರ ವರದಿ ನೀಡಿದೆ.

    ನಗರದಲ್ಲಿ 23,85,266 ಮನೆಗಳಿದ್ದು, 14,46,505 (ಶೇ.61) ಜನರ ಸರ್ವೇ ನಡೆಸಲಾಗಿದೆ. 45 ವರ್ಷ ಮೇಲ್ಪಟ್ಟ 18,58,719 ಜನರಲ್ಲಿ 12,96,282 ಜನರು ಒಂದು ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ. ಆದರೆ ಶೇ.33 ಮಂದಿ ಅಂದರೆ 6,14,175 ಮಂದಿ ಇನ್ನೂ ಕೂಡಾ ಒಂದ್ ಡೋಸ್ ವ್ಯಾಕ್ಸಿನ್ ಕೂಡಾ ಪಡೆದಿಲ್ಲ. ಇದನ್ನೂ ಓದಿ:  ಭಾರತದ ಕೊವಾಕ್ಸಿನ್ ತುರ್ತು ಬಳಕೆಗೆ ಫಿಲಿಪೈನ್ಸ್ ಅನುಮೋದನೆ

    ವ್ಯಾಕ್ಸಿನ್ ಪಡೆದವರ ವಲಯವಾರು ವಿವರ:
    ಮನೆಸರ್ವೇ ಪ್ರಮಾಣ ಪಶ್ಚಿಮ 2,05619 1,67,940 (ಶೇ.45) ಶೇ.65, ದಕ್ಷಿಣ 4,83,793 1,93,645(ಶೇ.29) ಶೇ.62, ಬೊಮ್ಮನಹಳ್ಳಿ 1,97,817 74,183(ಶೇ.27) ಶೇ.35, ದಾಸರಹಳ್ಳಿ 35,083 13,633(ಶೇ.28) ಶೇ.62, ಮಹದೇವಪುರ 1,29,103 41,678(ಶೇ.24) ಶೇ.52, ಯಲಹಂಕ 1,04,265 38,201(ಶೇ.31) ಶೇ.86, ಆರ್‍ಆರ್ ನಗರ 1,40,265 84,895(ಶೇ.42) ಶೇ.81, ಒಟ್ಟು 12,96,282 6,14,175(ಶೇ.33) ಶೇ.61 ಪೂರ್ವ ವಲಯದಲ್ಲಿ ಸ್ಲಂ ಮನೆಗಳಲ್ಲಿ ಮಾತ್ರಸರ್ವೇ ನಡೆಸಿಸದ್ದು, 45 ವರ್ಷ ಮೇಲ್ಪಟ್ಟ 51,910 ಜನರ ಪೈಕಿ, 16,745 ಒಂದು ಡೋಸ್ ವ್ಯಾಕ್ಸಿನ್ ಸಂಪೂರ್ಷಗೊಳಿಸಿದ್ದು, 34,817 ಜನ ಇನ್ನೂ ಒಂದು ಡೋಸ್ ಕೂಡಾ ವ್ಯಾಕ್ಸಿನ್ ಪಡೆದಿಲ್ಲ.

    ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ರಂದೀಪ್ ಡಿ, ನಗರದಲ್ಲಿ ಬೇರೆ ಬೇರೆ ವರ್ಗಗಳಿಗೆ ವ್ಯಾಕ್ಸಿನೇಷನ್ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಜನರಿಗೂ ವ್ಯಾಕ್ಸಿನ್ ಕೊಡಬೇಕೆಂದಾಗ ಎಷ್ಟು ಜನಕ್ಕೆ ವ್ಯಾಕ್ಸಿನ್ ಆಗಿದೆ ಎಷ್ಟು ಜನರಿಗೆ ಕೊಡಬೇಕಿದೆ ಎಂಬ ವಾರ್ಡ್ ವಾರು ಮೈಕ್ರೋಪ್ಲಾನ್ ಮಾಡಲು ಮಾಹಿತಿ ಸರ್ವೇಯಿಂದ ಗೊತ್ತಾಗಲಿದೆ. ವ್ಯಾಕ್ಸಿನೇಷನ್ ಸಂಪೂರ್ಣಗೊಂಡ ಶೇ.33 ರಷ್ಟು ಜನರ ಮಾಹಿತಿ ಕೋವಿಡ್ ಪೋರ್ಟಲ್‍ನಲ್ಲಿಯೂ ನಮೂದಾಗಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ಪಡೆದವರ ಕೆಲವು ಮಾಹಿತಿ ದಾಖಲಾಗಿಲ್ಲ, ಹೀಗಾಗಿ ಇದನ್ನು ಸಂಪೂರ್ಣ ಮಾಹಿತಿ ಪಡೆಯಲು ಡೋರ್ ಟು ಡೋರ್ ಸರ್ವೇ ನಡೆಸಲಾಗಿದೆ ಎಂದರು.

    ಮಾಹಿತಿ ಕೊಡಲು ನಿರ್ಲಕ್ಷ್ಯ:
    ಮನೆ ಮನೆ ಸರ್ವೆ ನಡೆಸಲು ಶಿಕ್ಷಕರು, ಬಿಎಲ್ ಒಗಳಿಗೆ ಜವಾಬ್ದಾರಿ ನೀಡಲಾಗಿದ್ದು, ಮನೆಮನೆಗೂ ಹೋದ ಸಂದರ್ಭದಲ್ಲಿ ಹೆಚ್ಚಿನ ಕಡೆ ನಿಖರವಾದ ಮಾಹಿತಿ ನೀಡುತ್ತಿಲ್ಲ. ಬದಲಾಗಿ ನಂತರ ಬನ್ನಿ, ನಾಳೆ ಬನ್ನಿ ಎಂದು ನಿರ್ಲಕ್ಷ್ಯ ತೋರುತ್ತಿದ್ದಾರೆ. ಜನರ ಆರೋಗ್ಯಕ್ಕಾಗಿ ಪಾಲಿಕೆ ಕೆಲಸ ಮಾಡುತ್ತಿರುವಾಗ ಜನರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ಇದರೊಂದಿಗೆ ಕೆಲವೆಡೆ ವ್ಯಾಕ್ಸಿನ್ ಪಡೆದುಕೊಳ್ಳಲು ಹಿಂಜರಿಕೆ ಇದೆ. ಆದರೆ ಸ್ಥಳೀಯ ಜನಪ್ರತಿನಿಧಿಗಳ ಮೂಲಕ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

    ಸ್ಲಂ ಜನರಿಗೆ ವ್ಯಾಕ್ಸಿನ್:
    ನಗರದ ಕೊಳಚೆ ಪ್ರದೇಶಗಳಲ್ಲಿರುವ ಬಡ ಜನರಿಗೆ ಆಕ್ಟ್ ಸಂಸ್ಥೆಯ ಮೂಲಕ ಉಚಿತವಾಗಿ ವ್ಯಾಕ್ಸಿನ್ ನೀಡಲು ಕ್ರಮಕೈಗೊಳ್ಳಲಾಗಿದೆ.ಒಟ್ಟಿನಲ್ಲಿ ಬೆಂಗಳೂರು ನಗರ ಲಕ್ಷ ಜನರಿಗೆ ವ್ಯಾಕ್ಸಿನ್ ನೀಡಿ ದಾಖಲೆ ನಿರ್ಮಿಸುತ್ತಿದ್ದರೂ ಬಹುತೇಕ ಜನರು ಒಂದು ಡೋಸ್ ವ್ಯಾಕ್ಸಿನ್ ಕೂಡಾ ಪಡೆಯದೆ ಹೊರಗುಳಿದಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ಸರ್ವೇ ಸಂಪೂರ್ಣಗೊಳ್ಳಲಿದ್ದು, ನಿಖರ ಮಾಹಿತಿ ಸಿಗಲಿದೆ.

  • ಹೈಕೋರ್ಟ್ ಆದೇಶದಂತೆ ಮಡಿಕೇರಿ ರಾಜರ ಗದ್ದುಗೆ ಜಾಗದ ಸರ್ವೆ

    ಹೈಕೋರ್ಟ್ ಆದೇಶದಂತೆ ಮಡಿಕೇರಿ ರಾಜರ ಗದ್ದುಗೆ ಜಾಗದ ಸರ್ವೆ

    ಮಡಿಕೇರಿ: ಒತ್ತುವರಿಯಾಗಿರುವ ಮಡಿಕೇರಿ ನಗರದ ರಾಜರ ಗದ್ದುಗೆ ಜಾಗದ ಸರ್ವೆ ನಡೆಸುವಂತೆ ಹೈಕೋರ್ಟ್ ಮಡಿಕೇರಿ ತಹಶೀಲ್ದಾರರಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ನಡೆಯಿತು.

    ಸರ್ವೆ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ನಗರಸಭಾ ಸದಸ್ಯ ಅಮೀನ್ ಮೊಯಿಸೀನ್, ಬಷೀರ್ ಹಾಗೂ ಮನ್ಸೂರ್ ಅವರು ಮೊದಲು ಗದ್ದುಗೆಯ ಗಡಿಯನ್ನು ಸರ್ವೆ ಮೂಲಕ ಗುರುತಿಸುವ ಕೆಲಸ ಮಾಡಬೇಕು. ಹೀಗಾದಾಗ ಮಾತ್ರ ಒತ್ತುವರಿ ವಿಚಾರ ಬೆಳಕಿಗೆ ಬರಲಿದೆ ಎಂದು ತಹಶೀಲ್ದಾರ್ ಮಹೇಶ್ ಅವರಿಗೆ ಮನವರಿಕೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಈಗ ಗಡಿ ಗುರುತಿನ ಸರ್ವೆ ನಡೆಸಲಾಗುತ್ತಿದೆ. ಬಳಿಕ ಕಂದಾಯ ಇಲಾಖೆಯ ನಕ್ಷೆಯಲ್ಲಿ ಸರ್ವೇ ಮಾಡಲಾದ ಪ್ರದೇಶವನ್ನು ಹೊಂದಿಸಲಾಗುತ್ತದೆ. ಈ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ:ಪೈಲೆಟ್ ಆಗುವ ಕನಸು ಹೊತ್ತಿದ್ದ ಕೊಡಗಿನ ಯುವಕ ಗುಜರಾತಿನಲ್ಲಿ ಆತ್ಮಹತ್ಯೆಗೆ ಶರಣು

    ಸುದ್ದಿಗಾರರೊಂದಿಗೆ ಮಾತನಾಡಿದ ತಹಶೀಲ್ದಾರ್ ಮಹೇಶ್, ಹೈಕೋರ್ಟ್ ನಿರ್ದೇಶನದಂತೆ 6 ವಾರಗಳ ಒಳಗೆ ಸರ್ವೆ ನಡೆಸಿ ವರದಿ ನೀಡಬೇಕಿತ್ತು. ಆದರೆ ನಗರ ಸಭೆ ಚುನಾವಣಾ ನೀತಿ ಸಂಹಿತೆ, ಕೊರೊನಾ ಮತ್ತಿತ್ತರ ಕಾರಣಗಳಿಂದ ಸರ್ವೇ ಕಾರ್ಯ ನಡೆದಿರಲಿಲ್ಲ. ರಾಜ್ಯ ಪ್ರಾಚ್ಯವಸ್ತು ಇಲಾಖೆಗೆ ಸೇರಿದ ಸರ್ವೆ ನಂಬರ್ 30/1ರ 19.88 ಎಕರೆ ಪ್ರದೇಶದ ಗಡಿ ಗುರುತಿಸಿ ವಾಸ್ತವಾಂಶದ ವರದಿಯನ್ನು ನ್ಯಾಯಾಲಯಕ್ಕೆ ನೀಡಲಾಗುತ್ತದೆ. ನ್ಯಾಯಾಲಯದ ಮುಂದಿನ ಆದೇಶದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ:ದುಬಾರೆ ಆನೆ ಶಿಬಿರದಿಂದ ‘ಕುಶ’ ಬಂಧ ಮುಕ್ತ- ಸಚಿವ ಅರವಿಂದ ಲಿಂಬಾವಳಿ

    ಸ್ಥಳದಲ್ಲಿದ್ದ ಕೊಡಗು ಜಿಲ್ಲಾ ವೀರಶೈವ ಮಹಾ ಸಭಾದ ಪ್ರಧಾನ ಕಾರ್ಯದರ್ಶಿ ಸಾಂಬಶಿವ ಮಾತನಾಡಿ, ಹೈಕೋರ್ಟ್ ನಿರ್ದೇಶನದಂತೆ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ದಾಖಲೆಗಳ ಪ್ರಕಾರ 19.88 ಎಕರೆ ಪ್ರದೇಶ ಗದ್ದುಗೆಗೆ ಸೇರಿದ್ದಾಗಿದೆ. ಆದರೆ ಇದರಲ್ಲಿ ಎಷ್ಟು ಒತ್ತುವರಿಯಾಗಿ ಅಲ್ಲಿ ಎಷ್ಟು ಜನರು ನೆಲೆಸಿದ್ದಾರೆ ಎಂಬುದು ಸರ್ವೆಯಿಂದ ಗೊತ್ತಾಗಲಿದೆ. ಹೈಕೋರ್ಟ್ ಆದೇಶದ ಪ್ರಕಾರ ಒತ್ತುವರಿದಾರರಿಗೆ ಪುನರ್ ವಸತಿ ಕಲ್ಪಿಸಬೇಕು, ಸ್ಮಾರಕಕ್ಕೆ ತೊಂದರೆ ಆಗದ ರೀತಿಯಲ್ಲಿ ಸಂರಕ್ಷಣೆಯೂ ಆಗಬೇಕು. ಇದು ಅರ್ಜಿದಾರರು ಮತ್ತು ವೀರಶೈವ ಮಹಾ ಸಭಾದ ಒತ್ತಾಸೆಯೂ ಅಗಿದೆ ಎಂದರು.

  • ಹಾಸನದಲ್ಲಿ ಡ್ರೋನ್ ಸರ್ವೇ- ಹದಿನೈದು ದಿನದ ಕೆಲಸ ಆರು ಗಂಟೆಯಲ್ಲಿ ಮುಕ್ತಾಯ

    ಹಾಸನದಲ್ಲಿ ಡ್ರೋನ್ ಸರ್ವೇ- ಹದಿನೈದು ದಿನದ ಕೆಲಸ ಆರು ಗಂಟೆಯಲ್ಲಿ ಮುಕ್ತಾಯ

    – ಅರ್ಧ ಗಂಟೆಯಲ್ಲಿ 2 ಸಾವಿರ ಎಕರೆ ಸರ್ವೇ

    ಹಾಸನ: ಹತ್ತು ಮನೆಗಿಂತ ಹೆಚ್ಚು ಜನವಸತಿ ಇರುವ ಜಾಗದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಡ್ರೋನ್ ಮೂಲಕ ಸರ್ವೇ ಮಾಡಲಾಗುತ್ತಿದ್ದು, ಇದರಿಂದ ಸಮಯ ಉಳಿತಾಯವಾಗುತ್ತಿದೆ. ಅಲ್ಲದೆ ಸಾರ್ವಜನಿಕರಿಗೆ ಅನುಕೂಲ ಆಗಲಿದೆ ಎಂದು ಭೂದಾಖಲೆಗಳ ಉಪನಿರ್ದೇಶಕಿ ಹೇಮಲತಾ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿದ ಅವರು, ಅತ್ಯಾಧುನಿಕ ಡ್ರೋನ್ ಮೂಲಕ ದಿನಕ್ಕೆ 5 ರಿಂದ ಎಂಟು ಹಳ್ಳಿ ಸರ್ವೇ ಮಾಡಿ ಮುಗಿಸಬಹುದು. 10 ರಿಂದ 15 ದಿನದಲ್ಲಿ ಮಾಡಬಹುದಾದ ಕೆಲಸವನ್ನು ಡ್ರೋನ್ ಮೂಲಕ ಕೇವಲ ಐದು ಗಂಟೆಯಲ್ಲಿ ಮಾಡಿ ಮುಗಿಸಬಹುದಾಗಿದೆ. ಅರ್ಧ ಗಂಟೆಯಲ್ಲಿ ಸುಮಾರು 2 ಸಾವಿರ ಎಕರೆ ಸರ್ವೇ ಮಾಡಬಹುದಾಗಿದೆ. ಇದರಿಂದ ಸಮಯ ಉಳಿತಾಯವಾಗಲಿದೆ. ಅಲ್ಲದೆ ಸಾರ್ವಜನಿಕರಿಗೂ ಒಂದೇ ಕಾರ್ಡ್ ನಲ್ಲಿ ತಮ್ಮ ಆಸ್ತಿಯ ಎಲ್ಲ ಮಾಹಿತಿ ಸಿಗಲಿದೆ ಎಂದು ತಿಳಿಸಿದರು.

    ಹವಾಮಾನ ವ್ಯತ್ಯಾಸ ಇದ್ದಾಗ ಡ್ರೋನ್ ಹಾರಿಸಿ ಸರ್ವೇ ಮಾಡಲು ಸಾಧ್ಯ ಆಗಲ್ಲ. ಡ್ರೋನ್ ಸರ್ವೇ ನಂತರ ಪಂಚಾಯಿತಿಯಲ್ಲಿರುವ ದಾಖಲೆ, ಆನ್‍ಗ್ರೌಂಡ್ ದಾಖಲೆ ಎಲ್ಲವನ್ನೂ ಪರಿಶೀಲನೆ ನಡೆಸಿ ನಂತರ ಆಸ್ತಿ ಕಾರ್ಡ್ ನೀಡಲಾಗುವುದು. ಹಾಸನದಲ್ಲಿ ಇನ್ನೂ ಐದಾರು ತಿಂಗಳು ಡ್ರೋನ್ ಸರ್ವೆ ಕಾರ್ಯ ನಡೆಯಲಿದೆ ಎಂದು ಭೂದಾಖಲೆಗಳ ಉಪನಿರ್ದೇಶಕಿ ಹೇಮಲತಾ ತಿಳಿಸಿದ್ದಾರೆ.

    ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಆರ್‍ಡಿಪಿಆರ್ ಇಲಾಖೆ, ಕಂದಾಯ ಇಲಾಖೆ, ಸರ್ವೇ ಆಫ್ ಇಂಡಿಯಾ ಮೂರು ಇಲಾಖೆಯ ಸಹಭಾಗಿತ್ವದೊಂದಿಗೆ ಹಾಸನದಲ್ಲಿ ಡ್ರೋನ್ ಮೂಲಕ ಸರ್ವೇ ಕಾರ್ಯ ನಡೆಸಲಾಗುತ್ತಿದೆ. ಡ್ರೋನ್ ಮೂಲಕ ಜನವಸತಿ ಪ್ರದೇಶದ ಫೋಟೊಗ್ರಫಿಕ್ ಇಮೇಜ್ ತೆಗೆದುಕೊಂಡು ನಕ್ಷೆ ತಯಾರಿಸಲಾಗುತ್ತೆ. ನಂತರ ಪ್ರಾಪರ್ಟಿ ಕಾರ್ಡ್ ಜನರೇಟ್ ಮಾಡುತ್ತಾರೆ. ಇದನ್ನು ಜನರಿಗೆ ನೀಡುತ್ತಾರೆ ಎಂದು ತಿಳಿಸಿದರು.

    ಆಸ್ತಿ ಕಾರ್ಡನ್ನು ಪರಿಶೀಲನೆ ಮಾಡಿ, ಸಮಸ್ಯೆ ಇದ್ದಲ್ಲಿ ಸರಿಪಡಿಸಲಾಗುತ್ತೆ. ಇದರಿಂದಾಗಿ ಸಾರ್ವಜನಿಕರಿಗೆ ಅವರ ಒಡೆತನದ ನಕ್ಷೆ ಮತ್ತು ದಾಖಲಾತಿ ಒಂದೇ ಕಾರ್ಡ್‍ನಲ್ಲಿ ಸಿಗಲಿದೆ.ವಿಭಾಗ ಮಾಡಿಕೊಳ್ಳುವಾಗ, ಬ್ಯಾಂಕ್‍ಗಳಲ್ಲಿ ಲೋನ್ ಪಡೆಯುವಾಗ ಒಂದೇ ಕಾರ್ಡ್‍ನಲ್ಲಿ ಎಲ್ಲ ಮಾಹಿತಿ ಸಿಗಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಭೂದಾಖಲೆಗಳ ಉಪನಿರ್ದೇಶಕಿ ಹೇಮಲತಾ ಮನವಿ ಮಾಡಿದ್ದಾರೆ.

  • ಸರ್ವೇ ವೇಳೆ ಬಂಗಾರಪೇಟೆ ತಹಶೀಲ್ದಾರ್‌ಗೆ ಚಾಕು ಇರಿತ – ಕೊಲೆಗೈದ ನಿವೃತ್ತ ಶಿಕ್ಷಕ ಅರೆಸ್ಟ್

    ಸರ್ವೇ ವೇಳೆ ಬಂಗಾರಪೇಟೆ ತಹಶೀಲ್ದಾರ್‌ಗೆ ಚಾಕು ಇರಿತ – ಕೊಲೆಗೈದ ನಿವೃತ್ತ ಶಿಕ್ಷಕ ಅರೆಸ್ಟ್

    ಕೋಲಾರ: ಸರ್ವೇ ಮಾಡುವ ವೇಳೆ ಗೊಂದಲವಾಗಿ ತಹಶೀಲ್ದಾರ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

    ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದೊಡ್ಡಕಳವಂಚಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಗ್ರಾಮದ ವೆಂಕಟಪತಿ ತಹಶೀಲ್ದಾರ್ ಚಂದ್ರಮೌಳೇಶ್ವರಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಕಳೆದ 3 ವರ್ಷಗಳಿಂದ ಬಂಗಾರಪೇಟೆ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತುಮಕೂರು ಮೂಲದ ಚಂದ್ರಮೌಳೇಶ್ವರ್ ಗೆ ಚಾಕುವಿನಿಂದ ಇರಿದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

    ಬಂಗಾರಪೇಟೆಯ ದೊಡ್ಡಕಳವಂಕಿ ಗ್ರಾಮದ ಅರೋಪಿ ನಿವೃತ್ತ ಶಿಕ್ಷಕ ವೆಂಕಟಪತಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದು, ಈ ಸಂಬಂಧ ಸರ್ವೇ ಮಾಡಲು ಹೋದ ವೇಳೆ ತಹಶೀಲ್ದಾರ್‌ಗೆ ಚಾಕುವಿನಿಂದ ಇರಿಯಲಾಗಿದೆ. ತಕ್ಷಣ ತಹಶೀಲ್ದಾರ್ ಕಾರಿನಲ್ಲಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಜಾಲಪ್ಪ ಅಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

     

    ಸ್ಥಳಕ್ಕೆ ಕೋಲಾರ ಜಿಲ್ಲಾಧಿಕಾರಿ ಸತ್ಯಭಾಮ, ಎಸ್ಪಿಗಳಾದ ಕಾರ್ತಿಕ್ ರೆಡ್ಡಿ, ಮೊಹಮದ್ ಸುಜಿತ ಅವರು ಭೇಟಿ ನೀಡಿದ್ದಾರೆ. ಮೃತ ತಹಶೀಲ್ದಾರ್ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನವರಾಗಿದ್ದಾರೆ. ಆರೋಪಿಯನ್ನ ಕಾಮಸಮುದ್ರ ಪೊಲೀಸರು ಬಂಧಿಸಿದ್ದಾರೆ.

  • ಕುಡಿದ ಮತ್ತಲ್ಲಿ ಕಿವಿಯಲ್ಲಿ ರಕ್ತ ಬರುವಂತೆ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ

    ಕುಡಿದ ಮತ್ತಲ್ಲಿ ಕಿವಿಯಲ್ಲಿ ರಕ್ತ ಬರುವಂತೆ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ

    ಕೋಲಾರ: ಕುಡಿದ ಮತ್ತಿನಲ್ಲಿ ಆಶಾ ಕಾರ್ಯಕರ್ತೆ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೊಮ್ಮಸಂದ್ರದಲ್ಲಿ ನಡೆದಿದೆ.

    ಮದ್ಯ ಸೇವಿಸಿದ್ದ ಗಂಗಾಧರ(25) ಆಶಾ ಕಾರ್ಯಕರ್ತೆ ಮುನಿರತ್ನಮ್ಮ ಮೇಲೆ ಹಲ್ಲೆ ಮಾಡಿದ್ದಾನೆ. ಆರೋಗ್ಯ ಇಲಾಖೆ ಸೂಚನೆಯಂತೆ ಗ್ರಾಮದಲ್ಲಿ ಕೊರೊನಾ ಸರ್ವೇ ನಡೆಸುತ್ತಿದ್ದ ಮುನಿರತ್ನಮ್ಮ, ಗ್ರಾಮಕ್ಕೆ ಹೊಸದಾಗಿ ಬಂದವರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದರು. ಈ ವೇಳೆ ಗ್ರಾಮದಲ್ಲಿ ಸಾಮಾಜಿಕ ಅಂತರ ಕಾಪಾಡಿ ಎಂದು ಬುದ್ಧಿ ಹೇಳಿದ್ದಾರೆ. ಈ ವೇಳೆ ಎಣ್ಣೆ ವಿಚಾರಕ್ಕೆ ಪರಸ್ವರ ಗಲಾಟೆಯಲ್ಲಿ ಸೇರಿದ್ದ ಯುವಕರು, ಮುನಿರತ್ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ.

    ಕಿವಿಯಲ್ಲಿ ರಕ್ತ ಬರುವಂತೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಲಾಗಿದ್ದು, ಗಾಯಾಳು ಮುನಿರತ್ನಮ್ಮ ಅವರನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಗೋವಾ ಮಾದರಿಯಲ್ಲಿ ಬೆಂಗ್ಳೂರಲ್ಲಿ ನಾಯಿ ಗಣತಿ – ಶ್ವಾನ್ ಆ್ಯಪ್ ಮೂಲಕ ಸರ್ವೇ

    ಗೋವಾ ಮಾದರಿಯಲ್ಲಿ ಬೆಂಗ್ಳೂರಲ್ಲಿ ನಾಯಿ ಗಣತಿ – ಶ್ವಾನ್ ಆ್ಯಪ್ ಮೂಲಕ ಸರ್ವೇ

    ಬೆಂಗಳೂರು: ಗೋವಾ ಮಾದರಿಯಲ್ಲಿ ಬೆಂಗಳೂರಿನಲ್ಲೂ ನಾಯಿ ಗಣತಿ ಮಾಡಲು ಬಿಬಿಎಂಪಿ ಮುಂದಾಗಿದೆ. ಏಳು ವರ್ಷಗಳ ಬಳಿಕ ಈ ಗಣತಿ ಮಾಡಲಾಗುತ್ತಿದ್ದು, ಇದಕ್ಕಾಗಿ ಶ್ವಾನ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ.

    ಬಿಬಿಎಂಪಿ ವ್ಯಾಪ್ತಿಯಲ್ಲಿರುವ ನಾಯಿಗಳ ಗಣತಿಯನ್ನು ವೈಜ್ಞಾನಿಕವಾಗಿ ಮಾಡುವ ಉದ್ದೇಶದಿಂದ ಬಿಬಿಎಂಪಿಯು ಪಶು ವೈದ್ಯಕೀಯ ಸೇವೆ ಇಲಾಖೆಯ ಆ್ಯಪ್ ಮೂಲಕ ನಾಯಿಗಣತಿ ಮಾಡಲು ಮುಂದಾಗಿದೆ. ಈ ಸಮೀಕ್ಷೆಗೆ ಗೋವಾದ ಪಶುವೈದ್ಯಕೀಯ ಸೇವೆ ಇಲಾಖೆಯು ನೆರವು ನೀಡುತ್ತಿದ್ದು, ಸೆಪ್ಟೆಂಬರ್ 12 ರಿಂದ 20 ದಿನಗಳ ಕಾಲ ಬಿಬಿಎಂಪಿಯೊಂದಿಗೆ ಸಮೀಕ್ಷೆ ನಡೆಸಲಿದೆ.

    ಈ ಸಮೀಕ್ಷೆ ನಡೆಸುವ ತಂಡದಲ್ಲಿ ಗೋವಾದ 28 ಜನ ಹಾಗೂ ಬಿಬಿಎಂಪಿಯ ಪಶು ಸಂಗೋಪನಾ ಇಲಾಖೆಯ ಸಿಬ್ಬಂದಿ ಇರಲಿದ್ದಾರೆ. ಗೋವಾ ಮತ್ತು ಬಿಬಿಎಂಪಿಯ ಸಿಬ್ಬಂದಿಗಳನ್ನು 13 ತಂಡಗಳಾಗಿ ವಿಂಗಡನೆ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 198 ವಾರ್ಡ್‌ಗಳಲ್ಲಿ ನಾಯಿ ಗಣತಿ ನಡೆಯಲಿದೆ.

    ಹಾಗೆಯೇ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಯ ಮಾಹಿತಿಯೂ ಇದರಲ್ಲಿ ಇರಲಿದೆ. ರೇಬಿಸ್‍ನಿಂದ ನಾಯಿಗಳ ಸಂತತಿಯಲ್ಲಿ ಉಂಟಾಗಿರುವ ಬದಲಾವಣೆಯ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ಸರ್ವೇ ನಡೆಸಲಾಗುತ್ತಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

    ನಾಯಿಗಳ ಗಣತಿ ತೆಗೆದುಕೊಳ್ಳುವುದರ ಜೊತೆಗೆ ಸರ್ವೇಯಿಂದ ನಾಯಿಗಳ ಸಂತಾನ ಶಕ್ತಿ, ನಾಯಿ ಮರಿಗಳು ಹಾಗೂ ನಾಯಿಗಳ ವಾಸ ಸ್ಥಾನ, ಹೆಣ್ಣು ನಾಯಿಗಳೆಷ್ಟು? ಗಂಡು ನಾಯಿಗಳು ಸಂಖ್ಯೆ ಎಷ್ಟು ಎನ್ನುವುದನ್ನು ಗುರುತಿಸಲಾಗುತ್ತದೆ ಎಂದು ವಿಶೇಷ ಆಯುಕ್ತರಾದ ರಂದೀಪ್ ಹೇಳಿದ್ದಾರೆ.