Tag: ಸಲಗ

  • ಯಶ್ ಫ್ಯಾನ್ಸ್ ದುರಂತ ಸಾವಿನ ಬಳಿಕ ದುನಿಯಾ ವಿಜಯ್ ವಿಶೇಷ ಮನವಿ

    ಯಶ್ ಫ್ಯಾನ್ಸ್ ದುರಂತ ಸಾವಿನ ಬಳಿಕ ದುನಿಯಾ ವಿಜಯ್ ವಿಶೇಷ ಮನವಿ

    ಸ್ಯಾಂಡಲ್‌ವುಡ್ ಸಲಗ ದುನಿಯಾ ವಿಜಯ್ (Duniya Vijay) ಅವರು ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಯಶ್ (Yash) ಫ್ಯಾನ್ಸ್ ದುರಂತ ಸಾವಿನ ಬಳಿಕ ವಿಜಯ್ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬದ (Birthday) ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ಶನಿ’ ಕಂಟಕ‌ ವರ್ತೂರು ಸಂತೋಷ್ ತಲೆಗೆ ಕಟ್ಟಿದ ಕಾರ್ತಿಕ್‌- ಚಳಿ ಬಿಡಿಸಿದ ಸುದೀಪ್

    ಇದೇ ಜನವರಿ 20ರಂದು ದುನಿಯಾ ವಿಜಯ್ (Duniya Vijay) ಹುಟ್ಟುಹಬ್ಬವಿದೆ. ಹೀಗಾಗಿ ಪ್ರತಿ ಬಾರಿಯಂತೆ ಈ ಬಾರಿಯೂ ವಿಜಯ್ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

    ಕುಂಬಾರನಹಳ್ಳಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಅಲ್ಲಿಯೇ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ನಟ ಯಶ್ ಬರ್ತಡೇ ದಿನ ನಡೆದ ದುರಂತಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಚಾರ ತಿಳಿಸಿದ್ದಾರೆ. ಇನ್ನೂ ಕಳೆದ ಬಾರಿ ಅಭಿಮಾನಿಯೊಬ್ಬರು ನಡೆದುಕೊಂಡೇ ವಿಜಯ್ ಹುಟ್ಟುಹಬ್ಬಕ್ಕೆ ಬಂದಿದ್ದರು. ಹಾಗಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾವ ಅಭಿಮಾನಿಗಳು ಸಹ ಈ ಬಾರಿ ನಡೆದುಕೊಂಡು ಬರಬೇಡಿ, ಯಾರು ಕೇಕ್ ಮತ್ತು ಹೂವಿನ ಹಾರ ತರಬೇಡಿ. ನನಗೆ ನಿಮ್ಮ ಜೊತೆಗೆ ಕುಳಿತು ಪ್ರೀತಿಯಿಂದ ಊಟ ಮಾಡುವ ಆಸೆಯಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಬೆಂಗಳೂರಿನ ಬೆಡಗಿಗೆ ಖುಲಾಯಿಸಿದ ಅದೃಷ್ಟ- ಮುಂದೇನು ಮಾಡ್ತಾರೆ ಶ್ರೀಲೀಲಾ?

    ಜನವರಿ 20ರಂದು ಬೆಳಿಗ್ಗೆ ಎಲ್ಲರೂ ಸೇಫಾಗಿ ಬನ್ನಿ. ಜನವರಿ 19ರವರೆಗೂ ನಮಗೆ ಸಿನಿಮಾ ಕೆಲಸ ಇದೆ. ಹೀಗಾಗಿ ಜ.20ರಂದು ಎಲ್ಲರೂ ಬನ್ನಿ ಜೊತೆಯಲ್ಲಿ ಕುಳಿತು ಊಟ ಮಾಡೋಣ. ಯಾರು ನನ್ನ ಹುಟ್ಟುಹಬ್ಬದ ದಿನ ಫ್ಲೆಕ್ಸ್ ಬ್ಯಾನರ್ ಹಾಕಬೇಡಿ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

    ಅಂದಹಾಗೆ ಯಶ್ ಹುಟ್ಟುಹಬ್ಬದಂದು (ಜ.8) ಮೂವರು ಯುವಕರು ಮೃತಪಟ್ಟಿದ್ದರು. ಗದಗದ ಸೊರಣಗಿಯಲ್ಲಿ ಈ ಘಟನೆ ಸಂಭವಿಸಿತ್ತು. ಬಳಿಕ ಯಶ್ ಸೊರಣಗಿ ಗ್ರಾಮಕ್ಕೆ ಭೇಟಿ ನೀಡಿ, ಮೃತರಾಗಿರೋ ಯುವಕರ ಕುಟುಂಬಸ್ಥರನ್ನು ಸಂತೈಸಿ ಧೈರ್ಯ ಹೇಳಿ ಬಂದಿದ್ದರು.

  • ಕಿರುತೆರೆ ನಟನಿಗೆ ವಂಚಿಸಿದ್ದ ಸ್ಯಾಂಡಲ್ ವುಡ್ ನಟಿ ಉಷಾ ಬಂಧನ

    ಕಿರುತೆರೆ ನಟನಿಗೆ ವಂಚಿಸಿದ್ದ ಸ್ಯಾಂಡಲ್ ವುಡ್ ನಟಿ ಉಷಾ ಬಂಧನ

    ದುನಿಯಾ ವಿಜಯ್ ನಟನೆಯ ಸಲಗ (Salaga) ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಮತ್ತು ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತೊಡಗಿಸಿಕೊಂಡಿದ್ದ ಬೆಂಗಳೂರಿನ ನಟಿ ಉಷಾ ಆರ್ (Usha Ravi Shankar) ಬಂಧನಕ್ಕೆ ಒಳಗಾಗಿದ್ದಾರೆ. ವಂಚನೆಯ (Cheating) ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಪೊಲೀಸರು ನಟಿಯನ್ನು ಬಂಧಿಸಿದ್ದು (Arrest), ವೈದ್ಯಕೀಯ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ಕರೆತಂದಿದ್ದಾರೆ.

    ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ನಟರೊಬ್ಬರನ್ನು ಮದುವೆಯಾಗುವುದಾಗಿ ಉಷಾ ನಂಬಿಸಿದ್ದರಂತೆ. ಪ್ರೀತಿ, ಮದುವೆಯ ನಂಬಿಕೆಯಲ್ಲೇ ಆ ನಟನಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ್ದಾರೆ. ನಂತರ ಮದುವೆ ಮಾಡಿಕೊಳ್ಳಲು ತಕರಾರು ತಗೆದಿದ್ದಾರೆ ಎಂದು ಹೇಳಲಾಗುತ್ತಿದೆ.

    ತಾನು ವಂಚನೆಗೆ ಒಳಗಾಗಿದ್ದೇನೆ ಎಂದು ನಟನಿಗೆ ಅರಿವಾಗುತ್ತಿದ್ದಂತೆಯೇ ವಂಚಿತನಾದ ನಟ ಕೋರ್ಟ್‌ ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆ ಉಷಾಗೆ ವಾರಂಟ್ ಕೂಡ ಜಾರಿಯಾಗಿತ್ತು.  ಈ ಹಿನ್ನೆಲೆ ಚಿತ್ರನಟಿಯನ್ನು (Actress) ಬಂಧಿಸಿ ಪೊಲೀಸರು ಶಿವಮೊಗ್ಗಕ್ಕೆ ಕರೆತಂದಿದ್ದರು. ಉಷಾ ‘ಒಂದಲ್ಲ ಎರಡು’, ‘ಸಲಗ’ ಚಿತ್ರಗಳಲ್ಲಿ ಸಹ ನಟಿಯಾಗಿ ನಟಿಸಿದ್ದಾರೆ.

  • Exclusive: ‘ಭೀಮ’ ಚಿತ್ರೀಕರಣದ ವೇಳೆ ದುನಿಯಾ ವಿಜಯ್ ಕಾಲಿಗೆ ಪೆಟ್ಟು

    Exclusive: ‘ಭೀಮ’ ಚಿತ್ರೀಕರಣದ ವೇಳೆ ದುನಿಯಾ ವಿಜಯ್ ಕಾಲಿಗೆ ಪೆಟ್ಟು

    ಟ ಕಮ್ ನಿರ್ದೇಶಕ ದುನಿಯಾ ವಿಜಯ್ ‘ಸಲಗ’ (Salaga) ಸೂಪರ್ ಸಕ್ಸಸ್ ನಂತರ ‘ಭೀಮ’ (Bheema) ಸಿನಿಮಾವನ್ನ ಕೈಗೆತ್ತಿಕೊಂಡಿದ್ದಾರೆ. ಚಿತ್ರೀಕರಣದ ವೇಳೆ ದುನಿಯಾವಿಜಯ್ ಕಾಲಿಗೆ ಪೆಟ್ಟು ಬಿದ್ದಿದೆ. ಗಾಯದ ನೋವಿನ ನಡುವೆಯೇ ವಿಜಯ್ ‘ಭೀಮ’ ಚಿತ್ರದ ಶೂಟಿಂಗ್ ಮುಂದುವರೆಸಿದ್ದಾರೆ. ಈ ಘಟನೆ ಬಗ್ಗೆ ನಿರ್ಮಾಪಕ ಕೃಷ್ಣ ಸಾರ್ಥಕ್ (Krishna Sarthak) ಪಬ್ಲಿಕ್ ಟಿವಿ ಡಿಜಿಟಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ನಡುವೆ ಕ್ರಿಕೆಟ್ ವೀಕ್ಷಿಸಿದ ಧನುಷ್, ಶಿವಣ್ಣ

    ಕನ್ನಡ ಸಿನಿಮಾ ರಂಗದ ಪ್ರತಿಭಾನ್ವಿತ ನಟ ದುನಿಯಾ ವಿಜಯ್ (Duniya Vijay) ಅವರು ನಿರ್ದೇಶಕನಾಗಿಯೂ ಸಕ್ಸಸ್ ಕಂಡವರು. ಮೊದಲ ಚಿತ್ರ ಸಲಗ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಡೈರೆಕ್ಟರ್ ಆಗಿಯೂ ಸಕ್ಸಸ್ ಕಂಡರು. ಈಗ ಭೀಮ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ. ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಅವರು ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡ್ತಿದ್ದಾರೆ.

     

    View this post on Instagram

     

    A post shared by Mohan Salaga (@mohan_salaga__)

    ‘ಭೀಮ’ (Bheema) ಚಿತ್ರದ ಚಿತ್ರೀಕರಣ (Shooting) ಬಹುಬಿರುಸಿನಿಂದ ಸಾಗುತ್ತಿತ್ತು. ಚೇತನ್ ಡಿಸೋಜ ಅವರ ನಿರ್ದೇಶನದಲ್ಲಿ ಆಕ್ಷನ್ ದೃಶ್ಯಗಳು ನಡೆಯುತ್ತಿದ್ದವು. ಆದರೆ ಇದೆ ಬುಧವಾರ (ಏಪ್ರಿಲ್ 12) ಆಕ್ಷನ್ ದೃಶ್ಯವೊಂದರಲ್ಲಿ ಅಭಿನಯಿಸುವಾಗ ವಿಜಿ ಅವರ ಬಲಗಾಲಿಗೆ ಏಟು ಬೀಳುತ್ತದೆ. ಕಾಲಿಗೆ ಬಲವಾದ ಪೆಟ್ಟು ಬಿದ್ದು, ನೋವು ಅನುಭವಿಸುತ್ತಿದ್ದರೂ ಕೂಡ, ನಿರ್ದೇಶಕನಾಗಿ ತಂಡವನ್ನ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದ ದುನಿಯಾ ವಿಜಿ ಅವರು, ಆ ನೋವಿನ ನಡುವೆಯೂ ಕೂಡ ಚಿತ್ರೀಕರಣ ಮುಂದುವರೆಸಿದ್ದಾರೆ. ಈ ಬಗ್ಗೆ ಭೀಮ ನಿರ್ಮಾಪಕ ಕೃಷ್ಣ ಸಾರ್ಥಕ್ ಮಾತನಾಡಿ, ಇನ್ನು 40 ದಿನಗಳ ಚಿತ್ರೀಕರಣ ಬಾಕಿಯಿದೆ. ನಾಲ್ಕು ಬಹುಮುಖ್ಯ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಕಳೆದ ವಾರ ನಟ ವಿಜಯ್ ಅವರ ಬಲಗಾಲಿಗೆ ಏಟು ಬಿದ್ದಿತ್ತು. ಸ್ಥಳದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆದು, ನೋವಿನ ನಡುವೆಯೇ ಚಿತ್ರೀಕರಣ ಮಾಡ್ತಿದ್ದಾರೆ. ನಟ ವಿಜಯ್ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

    ‘ಭೀಮ’ನ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಹೆಚ್ಚಿನ ನಿರೀಕ್ಷೆಗಳನ್ನು ಕೂಡ ಈ ಚಿತ್ರ ತನ್ನ ಮೇಲೆ ಹೊತ್ತಿದೆ. ‘ಸಲಗ’ಕ್ಕೆ ಸಂಗೀತ ನೀಡಿ, ಮೌಲ್ಯ ಹೆಚ್ಚಿಸಿದ್ದ ಚರಣ್ ರಾಜ್ ಅವರೇ ‘ಭೀಮ’ ಚಿತ್ರಕ್ಕೂ ಸಂಗೀತ ನೀಡುತ್ತಿದ್ದಾರೆ. ರಂಗಭೂಮಿಯಿದ ಬಂದಿರುವಂತಹ ಅಶ್ವಿನಿ ಅವರು ಚಿತ್ರದ ನಾಯಕಿಯಾಗಿದ್ದು, ಜೊತೆಗೆ ಗೋಪಾಲ ಕೃಷ್ಣ ದೇಶಪಾಂಡೆ, ಗಿಲಿಗಿಲಿ ಚಂದ್ರು, ಕಾಕ್ರೋಚ್ ಸುಧಿ, ಕಲ್ಯಾಣಿ ರಾಜು, ಡ್ರಾಗನ್ ಮಂಜು ಮುಂತಾದವರು ಕಥೆಯ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚುತ್ತಿದ್ದಾರೆ.‌

    ಶೃತಿ ರಿಪ್ಪನ್‌ಪೇಟೆ, ಪಬ್ಲಿಕ್‌ ಟಿವಿ ಡಿಜಿಟಲ್

  • ರವಿಚಂದ್ರನ್ ಪುತ್ರನ ಜೊತೆ ಸಂಜನಾ ಆನಂದ್ ರೊಮ್ಯಾನ್ಸ್

    ರವಿಚಂದ್ರನ್ ಪುತ್ರನ ಜೊತೆ ಸಂಜನಾ ಆನಂದ್ ರೊಮ್ಯಾನ್ಸ್

    ಸ್ಯಾಂಡಲ್‌ವುಡ್‌ನ (Sandalwood) ಸಲಗ (Salaga) ಸುಂದರಿ ಸಂಜನಾ ಆನಂದ್ (Sanjana Anand) ಅವರು ರವಿಚಂದ್ರನ್ (Ravichandran) ಪುತ್ರನ ಜೊತೆ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ. ಕನ್ನಡ ಮತ್ತು ತೆಲುಗು ಸಿನಿಮಾ ಅಂತಾ ಬ್ಯುಸಿಯಿರುವ ನಟಿ ಸಂಜನಾ ಇದೀಗ ವಿಕ್ರಮ್‌ಗೆ ಜೋಡಿಯಾಗಿ ಬರುತ್ತಿದ್ದಾರೆ.

    ದುನಿಯಾ ವಿಜಯ್‌ಗೆ (Duniya Vijay) `ಸಲಗ’ (Salaga) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಮೇಲೆ ಸಂಜನಾ ಆನಂದ್‌ಗೆ (Sanjana Anand) ಬಂಪರ್ ಅವಕಾಶಗಳು ಅರಸಿ ಬರುತ್ತಿದೆ. ಟಾಲಿವುಡ್‌ನಲ್ಲೂ (Tollywood) ಛಾಪು ಮೂಡಿಸಿ ಬಂದಿದ್ದಾರೆ. ತೆಲುಗಿನಲ್ಲೂ ಸಲಗ ಬ್ಯೂಟಿ ಸದ್ದು ಮಾಡ್ತಿದ್ದಾರೆ. ಇದನ್ನೂ ಓದಿ: ಮತ್ತೆ ಕಿರುತೆರೆಗೆ ಮರಳಿದ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

    ರವಿಚಂದ್ರನ್ ಅವರ ಪುತ್ರ ನಟ ವಿಕ್ರಮ್ ಅವರ 2ನೇ ಸಿನಿಮಾಗೆ ನಾಯಕಿಯಾಗಿ ಸಂಜನಾ ಆಯ್ಕೆಯಾಗಿದ್ದಾರೆ. ತ್ರಿವಿಕ್ರಮ್ ಚಿತ್ರದ ಮೂಲಕ ಗಮನ ಸೆಳೆದ ವಿಕ್ರಮ್‌ಗೆ ಸಂಜನಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಗ್ಯಾಂಗ್‌ಸ್ಟರ್ ಕಥಾಹಂದರವಿರುವ ಈ ಚಿತ್ರದ ಶೂಟಿಂಗ್ ಈಗಾಗಲೇ ಶುರುವಾಗಿದೆ.

    ಮೊದಲ ಬಾರಿಗೆ ರವಿಚಂದ್ರನ್ ಅವರ ಪುತ್ರ ವಿಕ್ರಮ್- ಸಂಜನಾ ಜೊತೆಯಾಗಿದ್ದು, ಅದೆಷ್ಟರ ಮಟ್ಟಿಗೆ ತೆರೆಯ ಮೇಲೆ ಈ ಜೋಡಿ ಕಮಾಲ್ ಮಾಡಲಿದೆ ಎಂಬುದನ್ನ ಕಾದುನೋಡಬೇಕಿದೆ.

  • ತಂದೆ-ತಾಯಿ ಸಮಾಧಿ ಬಳಿ ಬರ್ತ್‌ಡೇ ಆಚರಿಸಿಕೊಂಡ ದುನಿಯಾ ವಿಜಯ್‌

    ತಂದೆ-ತಾಯಿ ಸಮಾಧಿ ಬಳಿ ಬರ್ತ್‌ಡೇ ಆಚರಿಸಿಕೊಂಡ ದುನಿಯಾ ವಿಜಯ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಂದೆ- ತಾಯಿ ಸಮಾಧಿ ಬಳಿ ಬರ್ತ್‌ಡೇ ಆಚರಿಸಿಕೊಂಡ ದುನಿಯಾ ವಿಜಯ್

    ತಂದೆ- ತಾಯಿ ಸಮಾಧಿ ಬಳಿ ಬರ್ತ್‌ಡೇ ಆಚರಿಸಿಕೊಂಡ ದುನಿಯಾ ವಿಜಯ್

    `ವೀರ ಸಿಂಹ ರೆಡ್ಡಿ’ (Veera Simha Reddy) ಗೆಲುವಿನ ಖುಷಿಯಲ್ಲಿರುವ `ಸಲಗ’ ಖ್ಯಾತಿಯ ದುನಿಯಾ ವಿಜಯ್ (Duniya Vijay)  ಇಂದು ತಮ್ಮ 49 ವರ್ಷದ ಹುಟ್ಟುಹಬ್ಬವನ್ನು (Birthday) ಮೊದಲ ಬಾರಿಗೆ ಹುಟ್ಟೂರಿನಲ್ಲಿ, ತಮ್ಮ ತಂದೆ- ತಾಯಿ ಸಮಾಧಿ ಬಳಿ ಅಭಿಮಾನಿಗಳ ಜೊತೆ ಆಚರಿಸಿದ್ದಾರೆ.

    ನಟ ದುನಿಯಾ ಇಂದು ತಮ್ಮ ಹುಟ್ಟೂರು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕುಂಬಾರನಹಳ್ಳಿಯಲ್ಲಿ ತಮ್ಮ ಹೆತ್ತವರ ಸಮಾಧಿ ಬಳಿ ಭರ್ಜರಿಯಾಗಿ ಅಭಿಮಾನಿಗಳ ಜೊತೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹೊರ ರಾಜ್ಯ ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಆಗಮಿಸಿದ್ದ ಅಭಿಮಾನಿಗಳು ದುನಿಯಾ ವಿಜಿಗೆ ಜೈಕಾರ ಹಾಕಿ, ನೆಚ್ಚಿನ ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ. ತಂದೆ ತಾಯಿಯ ಸಮಾಧಿಗೆ ದುನಿಯಾ ವಿಜಿ ಪೂಜೆ ಸಲ್ಲಿಸಿ ಸಾಧು ಸಂತರು ಹಾಗೂ ಸ್ವಾಮೀಜಿಗಳಿಂದ ಆಶೀರ್ವಾದವನ್ನ ಪಡೆದರು. ಹೆತ್ತವರ ಸಮಾಧಿಯ ಬಳಿಯ ನಿರ್ಮಾಣ ಮಾಡಲಾಗಿದ್ದ ವೇದಿಕೆ ದುನಿಯಾ ವಿಜಿ ಎಂಟ್ರಿ ಕೊಡುತ್ತಿದ್ದಂತೆ ನೆಚ್ಚಿನ ನಟನನ್ನು ಕಂಡ ಅಭಿಮಾನಿಗಳ ಆನಂದಕ್ಕೆ ಪಾರವೇ ಇರಲಿಲ್ಲ. ಅಭಿಮಾನಿಗಳು ಭೀಮ ಚಿತ್ರದ ಪೋಸ್ಟರ್ ಇರುವ ಕೇಕ್ ತರಿಸಿದ್ದು ಚಿತ್ರದ ನಿರ್ಮಾಪಕರ ಹಾಗೂ ಅಭಿಮಾನಿಗಳ ಜೊತೆಗೂಡಿ ವಿಜಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದನ್ನೂ ಓದಿ:ಪತಿ ಜೊತೆಗಿನ ಲಿಪ್‌ಲಾಕ್ ಫೋಟೋ ಹಂಚಿಕೊಂಡ ʻಕಾಂಚನಾ 2ʼ ನಟಿ ಪೂಜಾ

    ಅಭಿಮಾನಿಗಳಿಗೆ ಭರ್ಜರಿ ಬಾಡೂಟದ ವ್ಯವಸ್ಥೆಯನ್ನ ಮಾಡಿದ್ದರು. ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಫ್ಯಾನ್ಸ್‌ಗೆ ಚಿಕಿನ್ ಬಿರಿಯಾನಿ, ಚಿಕನ್ ಫ್ರೈ ಮಾಡಿ ತಾವೇ ಕೈಯಾರೆ ಅಭಿಮಾನಿಗಳಿಗೆ ಬಡಿಸಿ ಕೈತುತ್ತು ತಿಂದರು. ಅಭಿಮಾನಿಗಳ ನಟ ದುನಿಯಾ ವಿಜಯ್‌ಗೆ ಕೈತುತ್ತು ತಿನ್ನಿಸಿ ನಟನ ಸಿಂಪ್ಲಿಸಿಟಿ ಕಂಡು ಮತ್ತಷ್ಟು ಖುಷಿಯಾದ್ರು. ವೇದಿಕೆ ನಿರ್ಮಾಣ ಮಾಡಿದ್ದ ಸುತ್ತಲೂ ಭೀಮ ಸಿನಿಮಾ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ದುನಿಯಾ ವಿಜಿ ಸಿನಿಮಾ ಹಾಡುಗಳಿಗೆ ಅಭಿಮಾನಿಗಳು ಹುಚ್ಚೆದ್ದು ಕುಣಿದಾಡಿದ್ರು. ಪ್ರತಿವರ್ಷವು ಸಹ ಹುಟ್ಟೂರಿನಲ್ಲಿಯೇ ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಂಡು ಅನ್ನಕೊಟ್ಟ ಅಭಿಮಾನಿಗಳು ಊಟವನ್ನ ಹಾಕುವ ಮೂಲಕ ಅವರ ಜೊತೆ ಹುಟ್ಟು ಹಬ್ಬವನ್ನ ಆಚರಿಸಿಕೊಳ್ಳಬೇಕು ಎಂದು ತಿರ್ಮಾನಿಸಿದ್ದೇನೆ. ಇದು ತಂದೆತಾಯಿ ಇರುವಂತ ಪುಣ್ಯ ಸ್ಥಳ ಹಾಗಾಗಿ ಮುಂದಿನ ದಿನಗಳಲ್ಲಿ ಬರ್ತಡೇ ಸೆಲೆಬ್ರೇಷನ್ ಹುಟ್ಟೂರು ಕುಂಬಾರನಹಳ್ಳಿಯಲ್ಲಿ ಆಗುತ್ತದೆ ಎಂದು ದುನಿಯಾ ವಿಜಿ ಸಂತಸ ಹಂಚಿಕೊಂಡರು.

    ಹನುಮ ವೇಷ ಧರಿಸಿ ಬಂದ ಅಭಿಮಾನಿಯನ್ನ ಕಂಡ ವಿಜಿ ಹತ್ತಿರಕ್ಕೆ ಕರೆದು ಬ್ಯಾರಿಕೇಡ್ ಮೇಲೆ ಕೂರಿಸಿಕೊಂಡು ಹಾರ ಹಾಕಿ ಸನ್ಮಾನ ಮಾಡಿದ್ರು. ಅದೇ ರೀತಿ ವಿಕಲಚೇತನ ಅಭಿಮಾನಿಯೋರ್ವ ಕೈನಲ್ಲಿ ಹಾರ ಹಿಡಿದುಕೊಂಡು ವಿಜಿಗೆ ಹಾಕಲು ಬಂದಾಗ ತಡೆದು ಅದೇ ಹಾರವನ್ನ ಹಾಕಿದ್ರು. ಇನ್ನೂ ಆನೇಕಲ್ ಪಟ್ಟಣದ ಮಣಿ ಎಂಬ ಅಭಿಮಾನಿ ಮೈತುಂಬ ದುನಿಯಾ ವಿಜಿ ಟ್ಯಾಟೂ ಹಾಕಿಸಿಕೊಂಡು ಬಂದು ನೆಚ್ಚಿನ ನಟನಿಗೆ ಬರ್ತಡೇ ವಿಶ್ ಮಾಡಿದ್ರು.

    ಎಕರೆಗಟ್ಟಲೇ ಪೆಂಡಲ್ ಹಾಕಿ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ ಚಿಲ್ಲಿ ಚಿಕನ್ ಸಿದ್ದಪಡಿಸಿದ್ದ ವಿಜಿ, ತಾನೇ ಅಭಿಮಾನಿಗಳಿಗೆ ಉಣಬಡಿಸುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಸಹ ನೆಚ್ಚಿನ ನಟನ ಕಣ್ತುಂಬಿಕೊಳ್ಳಲು ಸರದಿ ಸಾಲಿನಲ್ಲಿ ಮುಗಿ ಬಿದ್ದು ಶುಭಹಾರೈಸಿ ಖುಷಿಪಟ್ಟಿದ್ದಾರೆ. ಒಟ್ನಲ್ಲಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸುವ ಮೂಲಕ ದುನಿಯಾ ವಿಜಯ್ ಗಮನ ಸೆಳೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಗಳ ಹುಟ್ಟುಹಬ್ಬಕ್ಕೆ ದುಬಾರಿ ಗಿಫ್ಟ್ ನೀಡಿದ ದುನಿಯಾ ವಿಜಯ್

    ಮಗಳ ಹುಟ್ಟುಹಬ್ಬಕ್ಕೆ ದುಬಾರಿ ಗಿಫ್ಟ್ ನೀಡಿದ ದುನಿಯಾ ವಿಜಯ್

    ಚಂದನವನದ ಬ್ಲ್ಯಾಕ್ ಕೋಬ್ರಾ ಮತ್ತೆ ಸುದ್ದಿಯಲ್ಲಿದ್ದಾರೆ. ಸಲಗ ಚಿತ್ರದ ಸಕ್ಸಸ್ ನಂತರ ಮತ್ತೆ ಕೌಟುಂಬಿಕ ವಿಚಾರವಾಗಿ ಸದ್ದು ಮಾಡ್ತಿದ್ದಾರೆ. ತಮ್ಮ ಮುದ್ದು ಮಗಳು ಮೋನಿಕಾ ಅವರಿಗೆ ಭರ್ಜರಿ ಗಿಫ್ಟ್ ನೀಡಿ, ನೆಟ್ಟಿಗರ ಗಮನ ಸೆಳೆದಿದ್ದಾರೆ.‌

    ದುನಿಯಾ ವಿಜಯ್ `ಸಲಗ’ ಚಿತ್ರದ ಮೂಲಕ ನಟನಾಗಿ ಮಾತ್ರವಲ್ಲ, ನಿರ್ದೇಶಕನಾಗಿಯೂ ಕೂಡ ಸಕ್ಸಸ್ ಕಂಡವರು. ಇದೀಗ ಭೀಮ ಚಿತ್ರದ ಜತೆಗೆ ಟಾಲಿವುಡ್ ಅಖಾಡದಲ್ಲೂ ವಿಜಯ್ ಸೌಂಡ್ ಮಾಡ್ತಿದ್ದಾರೆ. ಈಗ ಮಗಳು ಮೋನಿಕಾ ಹುಟ್ಟುಹಬ್ಬಕ್ಕೆ ದುಬಾರಿ ಕಾರೋಂದನ್ನ ಗಿಫ್ಟ್ ನೀಡಿದ್ದಾರೆ. ಇದನ್ನೂ ಓದಿ:ರಾಜಮೌಳಿ ಶಿಷ್ಯನಿಂದ ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕೃತಿ ಆಧರಿಸಿದ ಸಿನಿಮಾ

    ಕುಟುಂಬದಲ್ಲಿ ಅದೇನೇ ಸಮಸ್ಯೆ ಇದ್ದರು ಮಕ್ಕಳ ಪಾಲಿಗೆ ಬೆಸ್ಟ್ ಅಪ್ಪನಾಗಿ, ಮಕ್ಕಳ ಖುಷಿಗೆ ವಿಜಯ್ ಶ್ರಮಿಸುತ್ತಿದ್ದಾರೆ. 3 ಮಕ್ಕಳ ತಂದೆಯಾಗಿರುವ ವಿಜಯ್ ಈಗ ವೈಯಕ್ತಿಕ ವಿಚಾರವಾಗಿ ನೆಟ್ಟಿಗರ ಗಮನ ಸೆಳೆದಿದ್ದಾರೆ. ಮಗಳು ಮೋನಿಕಾ ಹುಟ್ಟುಹಬ್ಬಕ್ಕೆ ದುಬಾರಿ ಕಾರು ಗಿಫ್ಟ್ ಮಾಡಿ, ಮುದ್ದು ಮಗಳ ಖುಷಿಗೆ ವಿಜಯ್ ಪಾತ್ರರಾಗಿದ್ದಾರೆ. ಅಪ್ಪ ಮತ್ತು ಕಾರಿನ ಜತೆಯಿರುವ ಫೋಟೋವನ್ನ ಮೋನಿಕಾ ಶೇರ್ ಮಾಡಿ, ಲವ್ ಯೂ ಅಪ್ಪ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ದುನಿಯಾ ವಿಜಯ್ ಮತ್ತು ಬಾಲಯ್ಯ ನಟನೆಯ ಚಿತ್ರಕ್ಕೆ ಟೈಟಲ್ ಫಿಕ್ಸ್

    ದುನಿಯಾ ವಿಜಯ್ ಮತ್ತು ಬಾಲಯ್ಯ ನಟನೆಯ ಚಿತ್ರಕ್ಕೆ ಟೈಟಲ್ ಫಿಕ್ಸ್

    `ಸಲಗ’ ಭರ್ಜರಿ ಸಕ್ಸಸ್ ನಂತರ ಭೀಮನ ಅವತಾರವೆತ್ತಿ ಟಾಲಿವುಡ್ ಲೆಜೆಂಡ್ ಬಾಲಯ್ಯ ಜತೆ ಅಖಾಡಕ್ಕೆ ಇಳಿದಿದ್ದಾರೆ. ಬಾಲಯ್ಯ ಮತ್ತು ದುನಿಯಾ ವಿಜಯ್ ಕಾಂಬಿನೇಷನ್‌ನ ಹೊಸ ಚಿತ್ರಕ್ಕೆ ಪವರ್‌ಫುಲ್ ಟೈಟಲ್ ಕೂಡ ಫಿಕ್ಸ್ ಆಗಿದೆ.

    ದುನಿಯಾ ವಿಜಯ್ ಅಭಿನಯದ `ಸಲಗ’ ಸೂಪರ್ ಸಕ್ಸಸ್ ನಂತರ ಇದೀಗ `ಭೀಮ’ ಚಿತ್ರದ ನಿರ್ದೇಶನದ ಜವಬ್ದಾರಿ ಕೂಡ ಕೈಗೆತ್ತಿಕೊಂಡಿದ್ದಾರೆ. ನಟನಾಗಿ ಕಮ್ ನಿರ್ದೇಶಕನಾಗಿ ಪಳಗಿರೋ ವಿಜಯ್‌ಗೆ ತೆಲುಗು ಚಿತ್ರರಂಗ ರೆಡ್ ಕಾರ್ಪೆಟ್ ಹಾಕಿ ಕರೆಯುತ್ತಿದ್ದಾರೆ. ನಂದಮೂರಿ ಬಾಲಕೃಷ್ಣ ನಟನೆಯ ಹೊಸ ಚಿತ್ರಕ್ಕೆ ದುನಿಯಾ ವಿಜಯ್ ಪ್ರಮುಖ ಪಾತ್ರಕ್ಕೆ ಜೀವ ತುಂಬ್ತಿದ್ದಾರೆ. ಬಾಲಯ್ಯ ನಟನೆಯ ಹೊಸ ಸಿನಿಮಾಗೆ `ಅಣ್ಣಗಾರು’ ಅನ್ನೋ ಪವರ್‌ಫುಲ್ ಟೈಟಲ್ ಇಡಲಾಗಿದೆ.

    `ಅಖಂಡ’ ಬ್ಲಾಕ್ ಬಸ್ಟರ್ ಸಕ್ಸಸ್ ನಂತರ ಎಂದೂ ಮಾಡಿರದ ಡಿಫರೆಂಟ್ ಪಾತ್ರದಲ್ಲಿ ಬರಲು ಬಾಲಯ್ಯ ಸಜ್ಜಾಗಿದ್ದಾರೆ. ಇನ್ನು ಗೋಪಿಚಂದ್ ಮಲಾನೇನಿ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಬಾಲಯ್ಯ ನಟನಯೆ 107ನೇ ಚಿತ್ರಕ್ಕೆ `ಅಣ್ಣಗಾರು’ ಟೈಟಲ್ ಕೂಡ ಫಿಕ್ಸ್ ಫೈನಲ್ ಆಗಿದೆ. ಬಾಲಯ್ಯಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸುತ್ತಿದ್ದಾರೆ. ಇದನ್ನೂ ಓದಿ: ಕಾಜಲ್ ಜೊತೆ ಶಾರುಖ್ ಖಾನ್ ಮತ್ತೆ ರೊಮ್ಯಾನ್ಸ್

    `ಅಣ್ಣಗಾರು’ ಪವರ್‌ಫುಲ್ ಟೈಟಲ್ ಮೂಲಕ ಬಾಲಯ್ಯ ಮತ್ತು ದುನಿಯಾ ವಿಜಯ್ ಬರುತ್ತಿದ್ದಾರೆ. ಸದ್ಯದಲ್ಲೇ ಚಿತ್ರತಂಡದಿಂದ ಟೈಟಲ್ ಕುರಿತು ಅಧಿಕೃತ ಮಾಹಿತಿ ಹೊರಬೀಳಲಿದೆ. ಲೆಜೆಂಡರಿ ಆಕ್ಟರ್ ಬಾಲಯ್ಯ ಮತ್ತು ದುನಿಯಾ ವಿಜಯ್ ನಟನೆಯನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

  • ಏ.18ಕ್ಕೆ ದುನಿಯಾ ವಿಜಯ್ ನಿರ್ದೇಶನದ ‘ಭೀಮ’ನಿಗೆ ಮುಹೂರ್ತ

    ಏ.18ಕ್ಕೆ ದುನಿಯಾ ವಿಜಯ್ ನಿರ್ದೇಶನದ ‘ಭೀಮ’ನಿಗೆ ಮುಹೂರ್ತ

    ದುನಿಯಾ ವಿಜಯ್ ನಿರ್ದೇಶನದ ಎರಡನೇ ಚಿತ್ರಕ್ಕೆ ಎಪ್ರಿಲ್ 18ರಂದು ಮುಹೂರ್ತ ಫಿಕ್ಸ್ ಆಗಿದೆ. ಈ ಸಿನಿಮಾಗೆ ಈಗಾಗಲೇ ‘ಭೀಮ’ ಎಂದು ಹೆಸರಿಡಲಾಗಿದ್ದು, ಭೀಮನ ಜತೆ ಯಾರೆಲ್ಲ ಸೇರಿಕೊಂಡಿದ್ದಾರೆ ಎನ್ನುವುದು ಮುಹೂರ್ತದ ದಿನದಂದು ಗೊತ್ತಾಗಲಿದೆ. ಚಿತ್ರದ ಪೋಸ್ಟರ್ ಮತ್ತು ಟೈಟಲ್ ಲಾಂಚ್ ಅನ್ನು ವಿಭಿನ್ನವಾಗಿ ಮಾಡಿರುವ ದುನಿಯಾ ವಿಜಯ್, ಇದೀಗ ಮುಹೂರ್ತವನ್ನು ಸರಳವಾಗಿ ಮತ್ತು ವಿಶೇಷವಾಗಿ ಪ್ಲ್ಯಾನ್ ಮಾಡಿದ್ದಾರೆ. ಬೆಂಗಳೂರಿನ ಬಂಡೆ ಮಾಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆಯಲಿದೆ. ಅವರ ಮೊದಲ ನಿರ್ದೇಶನದ ಚಿತ್ರ ಸಲಗದ ಮುಹೂರ್ತ ಕೂಡ ಇದೇ ದೇವಸ್ಥಾನದಲ್ಲೇ ನಡೆದಿತ್ತು. ಇದನ್ನೂ ಓದಿ : ‘ಸಲಾರ್’ ಸಿನಿಮಾದಲ್ಲಿ ‘ಉಗ್ರಂ’ ಛಾಯೆ ಇದೆ: ಪ್ರಶಾಂತ್ ನೀಲ್

    ಮೊದಲನೇ ನಿರ್ದೇಶನದಲ್ಲೇ ಯಶಸ್ಸು ಕಂಡಿರುವ ದುನಿಯಾ ವಿಜಯ್, ಎರಡನೇ ಸಿನಿಮಾದಲ್ಲೂ ಅಂಥದ್ದೊಂದು ಭರವಸೆ ಮೂಡಿಸಿದ್ದಾರೆ. ಈಗಾಗಲೇ ಸಿನಿಮಾದ ಆಡಿಯೋ ರೈಟ್ಸ್ ಸೇಲ್ ಆಗಿದ್ದು, ಸಿನಿಮಾ ಶುರುವಾಗುವ ಮುನ್ನವೇ ವಿಜಯ್ ಅವರಿಗೆ ಕೈ ತುಂಬಾ ಹಣ ನೀಡಿದೆ. ಇದನ್ನೂ ಓದಿ : EXCLUSIVE INTERVIEW: ಗೆಲ್ಲಲು ಹೊರಟವನಿಗೆ ಸೋಲು ದೊಡ್ಡದಾಗಬಾರದು: ಯಶ್

    ಸಲಗ ಸಿನಿಮಾದ ಬಹುತೇಕ ಹಾಡುಗಳು ಹಿಟ್ ಆಗಿದ್ದರೆ, ಭೀಮ ಸಿನಿಮಾದ ಹಾಡುಗಳ ಬಗ್ಗೆಯೂ ನಿರೀಕ್ಷೆ ಮೂಡಿದೆ. ಈ ಸಿನಿಮಾದಲ್ಲಿ ಮತ್ತೆ ವಿಜಯ್ ಮತ್ತು ಚರಣ್ ರಾಜ್ ಕಾಂಬಿನೇಷನ್ ಮುಂದುವರೆದಿದೆ. ಈ ಚಿತ್ರವನ್ನು ಕೃಷ್ಣ ಸಾರ್ಥಕ್ ಹಾಗೂ ವಿತರಕ ಜಗದೀಶ್ ಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಸದ್ಯದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆ.

  • ತೆಲುಗಿಗೆ ಎಂಟ್ರಿ ಕೊಟ್ಟ ಸಲಗನ ಸಂಗಾತಿ ಸಂಜನಾ ಆನಂದ್

    ತೆಲುಗಿಗೆ ಎಂಟ್ರಿ ಕೊಟ್ಟ ಸಲಗನ ಸಂಗಾತಿ ಸಂಜನಾ ಆನಂದ್

    ದುನಿಯಾ ವಿಜಿ ನಟಿಸಿ, ನಿರ್ದೇಶನ ಮಾಡಿದ್ದ ‘ಸಲಗ’ ಸಿನಿಮಾ ಮೂಲಕ ಸಿನಿಮಾ ದುನಿಯಾಗೆ ಮತ್ತಷ್ಟು ಹತ್ತಿರ ಆದವರು. ಸಂಜನಾ ಆನಂದ್. ಈ ಸಿನಿಮಾದಲ್ಲಿ ಬೋಲ್ಡ್ ಮಾತುಗಳ ಮೂಲಕವೇ ಪ್ರೇಕ್ಷಕರನ್ನು ಸೆಳೆದವರು. ಈ ಚಿತ್ರದ ನಟನೆಗೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಈ ಸಿನಿಮಾ ಇವರಿಗೆ ದೊಡ್ಡ ಬ್ರೇಕ್ ಕೊಟ್ಟಿದ್ದು, ತೆಲುಗು ಸಿನಿಮಾಗಳಲ್ಲಿಯೂ ಭರ್ಜರಿ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.

    ದುನಿಯಾ ವಿಜಯ್ ಕೂಡ ತೆಲುಗಿಗೆ ಹಾರಿದ ಬೆನ್ನಲ್ಲೇ ಸಂಜನಾ ಕೂಡ ಅದೇ ಹಾದಿ ಹಿಡಿದಿದ್ದು, ಚಿತ್ರ ಪ್ರೇಮಿಗಳಲ್ಲಿ ಡಬಲ್ ಸಂಭ್ರಮ ತಂದಿದೆ. ದುನಿಯಾ ವಿಜಯ್ ತೆಲುಗಿನ ಸೂಪರ್ ಸ್ಟಾರ್ ಬಾಲಯ್ಯ ಜತೆ ಸಿನಿಮಾ ಮಾಡುತ್ತಿದ್ದರೆ, ಸಂಜನಾ ‘ನೇನು ಮೀಕು ಬಾಗಾ ಕಾವಾಲ್ಸಿ ನಿವಾಡಿನಿ’ ಸಿನಿಮಾದ ಮೂಲಕ ಟಾಲಿವುಡ್ಗೆ ಎಂಟ್ರಿ ಕೊಡುತ್ತಿದ್ದಾರೆ. ಈ ಸಿನಿಮಾದಲ್ಲಿ ಇವರು ‘ತೇಜು’ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಪಾತ್ರದ ಫಸ್ಟ್ ಲುಕ್ ಇದೀಗ ರಿಲೀಸಾಗಿದೆ. ಇದನ್ನೂ ಓದಿ: ಕನ್ನಡದ ಎವರ್‌ಗ್ರೀನ್ ಸಾಂಗ್‍ಗೆ ದನಿಯಾದ ರಾಬರ್ಟ್ ರಾಣಿ!

    ಶೀತಲ್ ಶೆಟ್ಟಿ ನಿದೇಶನದ ‘ವಿಂಡೋಸೀಟ್’ ಸಿನಿಮಾದಲ್ಲಿಯೂ ಸಂಜನಾ ನಟಿಸಿದ್ದು, ಈ ಸಿನಿಮಾ ರಿಲೀಸ್ಗೆ ರೆಡಿ ಇದೆ. ಅಲ್ಲದೆ ಸಂಜನಾ, ಅಜಯ್ ರಾವ್ ಜೊತೆ ‘ಶೋಕಿವಾಲ’ ಚಿತ್ರದಲ್ಲೂ ನಟಿಸಿದ್ದು, ಈ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.

    Sanjana Anand Ultra HD Images

    ತಬಲಾ ನಾಣಿ ಜೊತೆಗೆ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾ ಮೂಲಕ ಸಿನಿರಂಗಕ್ಕೆ ಪ್ರವೇಶ ಮಾಡಿದವರು ಸಂಜನಾ, ನಂತರ ನಿವೇದಿತಾ ಶಿವರಾಜ್‍ಕುಮಾರ್ ನಿರ್ಮಾಣದ ‘ಹನಿಮೂನ್’ ವೆಬ್ ಸಿರೀಸ್‍ನಲ್ಲಿಯೂ ನಟಿಸಿದ್ದರು. ಈ ವೆಬ್ ವರ್ಷನ್ ತೆಲುಗಿನಲ್ಲೂ ತೆರೆಕಂಡಿರುವುದು ವಿಶೇಷ.