Tag: ಸಲಗ

  • ದುನಿಯಾ ವಿಜಯ್ ಹೊಸ  ಚಿತ್ರಕ್ಕೆ ಟೈಟಲ್ ಫಿಕ್ಸ್

    ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ಲಗ ಸಿನಿಮಾದ ನಂತರ ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡುತ್ತಿರುವ ಸಿನಿಮಾದ ಟೈಟಲ್ ಇಂದು ಲಾಂಚ್ ಆಗಿದೆ. ತಮ್ಮ ನಿರ್ದೇಶನದ ಎರಡನೇ ಚಿತ್ರಕ್ಕೆ ವಿಜಯ್ “ಭೀಮ” ಎಂದು ಹೆಸರಿಟ್ಟಿದ್ದಾರೆ. ಇದನ್ನೂ ಓದಿ : ಸಿಂಪಲ್ ಸುನಿ ನಿರ್ದೇಶನದ ಸಿನಿಮಾದಲ್ಲಿ ವಾಸ್ಕೋಡಿಗಾಮನ ಕಥೆ

    ಈ ಸಿನಿಮಾದಲ್ಲಿ ವಿಜಯ್, ಕೇವಲ ನಟನೆಯನ್ನು ಮಾಡುತ್ತಾರಾ ಅಥವಾ ನಿರ್ದೇಶನದ ಜೊತೆ ಜೊತೆಗೆ ನಟಿಸುತ್ತಾರೆ ಎನ್ನುವ ಪ್ರಶ್ನೆ ಇತ್ತು. ಅದಕ್ಕೂ ಇದೀಗ ಉತ್ತರ ಸಿಕ್ಕಿದೆ. ನಟನೆಯ ಜತೆಗೆ ನಿರ್ದೇಶನವನ್ನೂ ಅವರು ಮಾಡಲಿದ್ದಾರೆ. ಸದ್ಯಕ್ಕೆ ಶೀರ್ಷಿಕೆ ಮಾತ್ರ ಅನಾವರಣಗೊಂಡಿದೆ. ನಿರ್ಮಾಪಕರ ಹೊರತಾಗಿ ಉಳಿದಂತೆ ಯಾವುದೇ ಮಾಹಿತಿಯನ್ನೂ ಅವರು ಹೊರಹಾಕಿಲ್ಲ. ಇದನ್ನೂ ಓದಿ : ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿ

    ಸದ್ಯ ತೆಲುಗಿನ ಬಾಲಯ್ಯ ನಟನೆಯ ಹೊಸ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಈ ಮಧ್ಯೆಯೇ ಅವರು ಹೊಸ ಸಿನಿಮಾದ ಸ್ಕ್ರೀಪ್ಟ್ ಕೆಲಸದಲ್ಲೂ ತೊಡಗಿದ್ದಾರೆ. ತಾಂತ್ರಿಕ ತಂಡದಲ್ಲಿ ಬಹುತೇಕ ಸಲಗ ಟೀಮ್ ಇರಲಿದೆಯಂತೆ. ಇದನ್ನೂ ಓದಿ : ಮಹಾಶಿವರಾತ್ರಿಗೆ ಶಿವಾಜಿ ಸುರತ್ಕಲ್ ಪೋಸ್ಟರ್

    ದುನಿಯಾ ವಿಜಯ್ ಅಂದಾಕ್ಷಣ ಸಾಮಾನ್ಯವಾಗಿ ಸಾಹಸ ಪ್ರಧಾನ ಅಥವಾ ಭೂಗತ ಜಗತ್ತಿನ ಕಥೆಗಳ ಸಿನಿಮಾಗಳೇ ನೆನಪಿಗೆ ಬರುತ್ತವೆ. ಹೊಸ ಸಿನಿಮಾದಲ್ಲೂ ಅದೇ ಇದೆ. ಮೊನ್ನೆಯಷ್ಟೇ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ರಕ್ತ, ಲಾಂಗ್ ಮಚ್ಚುಗಳ ಆರ್ಭಟವೇ ಇದೆ. ಅಲ್ಲದೇ, 80ರ ದಶಕದ ಪಾಪ್ಯುಲರ್ ಬೈಕ್ ಇರುವುದರಿಂದ, ಆ ಕಾಲದ ಕಥೆಯನ್ನು ಅವರು ಹೇಳಲಿದ್ದಾರಾ ಎಂದು ಕಾದು ನೋಡಬೇಕಿದೆ.

  • ಶಿವರಾತ್ರಿ ಸಡಗರಕ್ಕೆ ಸಿದ್ಧಗೊಂಡ ಸ್ಯಾಂಡಲ್ ವುಡ್

    ಶಿವರಾತ್ರಿ ಸಡಗರಕ್ಕೆ ಸಿದ್ಧಗೊಂಡ ಸ್ಯಾಂಡಲ್ ವುಡ್

    ನಾಳೆ (ಫೆ.01) ಶಿವರಾತ್ರಿ. ಹಬ್ಬ ಹರಿದಿನಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ಸ್ಯಾಂಡಲ್ ವುಡ್ ಸದಾ ಸಿದ್ಧವಿರುತ್ತದೆ. ಪ್ರತಿ ಸಲದಂತೆಯೂ ಈ ಬಾರಿಯೂ ಶಿವರಾತ್ರಿಯನ್ನು ಸಡಗರದಿಂದ ಕನ್ನಡ ಚಿತ್ರರಂಗ ಬರಮಾಡಿಕೊಳ್ಳುತ್ತಿದೆ. ಒಂದು ಕಡೆ ಈ ವಾರ ಐದಕ್ಕೂ ಹೆಚ್ಚು ಚಿತ್ರಗಳು ರಿಲೀಸ್ ಆಗಿದ್ದರೆ, ನಾಳೆ ಮತ್ತಷ್ಟು ಕಾರ್ಯಕ್ರಮಗಳು ಪ್ಲ್ಯಾನ್ ಆಗಿವೆ. ಇದನ್ನೂ ಓದಿ : ಮಾರ್ಚ್ ನಲ್ಲಿ ರಿಲೀಸ್ ಆಗಲಿರುವ ಬಿಗ್ ಬಜೆಟ್ ಸಿನಿಮಾಗಳಿಗೆ ಮತ್ತೆ ಸಂಕಷ್ಟ

    ಸಲಗ ಸಿನಿಮಾದ ನಂತರ ದುನಿಯಾ ವಿಜಯ್ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿರುವ ವಿಜಯ್, ಈ ಸಿನಿಮಾದಲ್ಲಿ ಅವರು ಯಾವೆಲ್ಲ ಪಾತ್ರ ನಿರ್ವಹಿಸಲಿದ್ದಾರೆ ಎಂದು ಈವರೆಗೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಈಗಾಗಲೇ ರಿಲೀಸ್ ಆದ ಪೋಸ್ಟರ್ ಹೇಳುವ ಪ್ರಕಾರ, ದುನಿಯಾ ವಿಜಯ್ ಅವರು ನಟನೆಯೊಂದಿಗೆ ನಿರ್ದೇಶನ ಮಾಡಲಿದ್ದಾರೆ ಎನ್ನುತ್ತದೆ. ಶಿವರಾತ್ರಿ ದಿನದಂದು ಇದೆಲ್ಲದಕ್ಕೂ ಉತ್ತರ ಸಿಗಲಿದೆ. ಹಾಗೂ ಟೈಟಲ್ ಕೂಡ ಲಾಂಚ್ ಆಗಲಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ವಿಕ್ರಾಂತ್ ರೋಣ 2 ಮುನ್ಸೂಚನೆ ಕೊಟ್ಟರಾ ಸುದೀಪ್?

    ಪ್ರಜ್ವಲ್ ದೇವರಾಜ್ ಮತ್ತು ರಚಿತಾ ರಾಮ್ ಕಾಂಬಿನೇಷನ್ ನ ವೀರಂ ಸಿನಿಮಾದ ಹಾಡೊಂದು ಶಿವರಾತ್ರಿಗಾಗಿ ರಿಲೀಸ್ ಆಗುತ್ತಿದೆ. ಶಿವನ ಆರಾಧನೆಯ ಕುರಿತಾಗಿಯೇ ಈ ಹಾಡು ಮೂಡಿ ಬಂದಿದ್ದು, ಖ್ಯಾತ ಗಾಯಕಿ ಅನನ್ಯ ಭಟ್ ಈ ಗೀತೆಯನ್ನು ಹಾಡಿದ್ದಾರೆ. ಅನೂಪ್ ಸೀಳೀನ್ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿ ಬಂದಿದ್ದು, ನಾಗೇಂದ್ರ ಪ್ರಸಾದ್ ಈ ಗೀತೆಯನ್ನು ಬರೆದಿದ್ದಾರೆ. ಈ ಹಾಡು ಅಕ್ಕ ಮತ್ತು ತಂಗಿಯ ಭಾವನಾತ್ಮಕ ಸನ್ನಿವೇಶದಲ್ಲಿ ಸ್ಥಳ ಪಡೆದಿದೆ. ಇದನ್ನೂ ಓದಿ : ಏನಾಯ್ತು ಅಮಿತಾಭ್ ಬಚ್ಚನ್ ಗೆ? ಆತಂಕದಲ್ಲಿ ಅಭಿಮಾನಿಗಳು

    ಅಲ್ಲದೇ ಶಿವರಾತ್ರಿ ಮುನ್ನ ದಿನವೇ ಸುನಿ ನಿರ್ದೇಶನದ ಹೊಸ ಸಿನಿಮಾದ ಪೋಸ್ಟರ್ ಮತ್ತು ನಾಯಕನ ಪರಿಚಯದ ಟೀಸರ್ ವೊಂದು ಬಿಡುಗಡೆ ಆಗಿದೆ. ಹೊಸ ಹುಡುಗನಿಗಾಗಿ ಸುನಿ ವಿಶೇಷ ಟೀಸರ್ ವೊಂದನ್ನು ತಯಾರಿಸಿ, ಆ ಮೂಲಕ ತಮ್ಮ ಸಿನಿಮಾದ ನಾಯಕನನ್ನು ಪರಿಚಯಿಸಿದ್ದಾರೆ. ಶಿವರಾತ್ರಿ ಒಂದು ದಿನ ಮುನ್ನವೇ ಈ ಟೀಸರ್ ಅಭಿಮಾನಿಗಳಿಗೆ ಇಷ್ಟವಾಗಿದೆ.

  • ದುನಿಯಾ ವಿಜಯ್ ನಿರ್ದೇಶನದ ಎರಡನೇ ಸಿನಿಮಾ ಅನೌನ್ಸ್

    ದುನಿಯಾ ವಿಜಯ್ ನಿರ್ದೇಶನದ ಎರಡನೇ ಸಿನಿಮಾ ಅನೌನ್ಸ್

    ದುನಿಯಾ ವಿಜಯ್ ಮತ್ತೊಂದು ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ ಎಂದು ಎರಡು ದಿನಗಳ ಹಿಂದೆಯಷ್ಟೇ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಇದೀಗ ಸ್ವತಃ ವಿಜಯ್ ಅವರೇ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿ, ಅಧಿಕೃತಗೊಳಿಸಿದ್ದಾರೆ. ತಮ್ಮ ಎರಡನೇ ಸಿನಿಮಾ ಕುರಿತು ಅತೀ ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ : ರಾಮ್ ಗೋಪಾಲ್ ವರ್ಮಾ ಭೇಟಿ ಮಾಡಿ ಕುತೂಹಲ ಮೂಡಿಸಿದ ಉಪ್ಪಿ

    ಸದ್ಯಕ್ಕೆ ‘ವಿಕೆ 28’ ಹೆಸರಿನಲ್ಲಿ ಪೋಸ್ಟರ್ ಬಿಡುಗಡೆ ಮಾಡಿರುವ ದುನಿಯಾ ವಿಜಯ್, ಈ ಸಿನಿಮಾ ಕೂಡ ರಕ್ತಸಿಕ್ತ ಅಧ್ಯಾಯವೊಂದನ್ನು ತೆರೆದಿಡಲಿದೆ ಎನ್ನುವಂತೆ ಪೋಸ್ಟರ್. ಲವ್ ಸ್ಟೋರಿಗಳಿಗಿಂತಲೂ ಲಾಂಗು ಮಚ್ಚುಗಳ ಚಿತ್ರಗಳನ್ನೇ ಮಾಡುತ್ತಾ ಬಂದಿರುವ ದುನಿಯಾ ವಿಜಯ್, ಆ ಸರಣಿಯನ್ನು ಇಲ್ಲಿಯೂ ಮುಂದುವರೆಸಿದ್ದಾರೆ. ಇದನ್ನೂ ಓದಿ : ಉಕ್ರೇನ್ ನಲ್ಲಿ ಸಿಲುಕಿಕೊಂಡ ನಟಿ ಶ್ವೇತಾ ಚೆಂಗಪ್ಪ ಗೆಳತಿ

    ವಿಜಯ್ ಚೊಚ್ಚಲು ನಿರ್ದೇಶನದ ಸಲಗ ಸಿನಿಮಾ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಬಂದರೂ, ನಿರ್ಮಾಪಕರ ಜೇಬು ತುಂಬಿಸುವಲ್ಲಿ ಸೋಲಲ್ಲಿ. ಹಾಗಾಗಿ ಈ ವರ್ಷದ ಗೆಲುವಿನ ಸಿನಿಮಾಗಳ ಪಟ್ಟಿಯಲ್ಲಿ ಅದು ಸ್ಥಾನ ಪಡೆದುಕೊಂಡಿತು. ಸಲಗ ಸಕ್ಸಸ್ ಆಗುತ್ತಿದ್ದಂತೆಯೇ ವಿಜಯ್ ಮನೆಯ ಮುಂದೆ ನಿರ್ಮಾಪಕರು ಸಾಲುಗಟ್ಟಿದರು. ಈಗದು ಎರಡನೇ ಸಿನಿಮಾವಾಗಿ ಬದಲಾಗಿದೆ. ಇದನ್ನೂ ಓದಿ : ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್

    ಅಂದಹಾಗೆ ಸಲಗ ಸಿನಿಮಾ ಮಾಡಿದ್ದ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಬದಲು ಈ ಸಿನಿಮಾವನ್ನು ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಉಳಿದ ವಿವರವನ್ನು ಮುಂದಿನ ದಿನಗಳಲ್ಲಿ ನೀಡುತ್ತಾರಂತೆ ದುನಿಯಾ ವಿಜಯ್.

  • ಸಲಗದ ನಂತರ ಮತ್ತೆ ನಿರ್ದೇಶನಕ್ಕೆ ದುನಿಯಾ ವಿಜಯ್

    ಸಲಗದ ನಂತರ ಮತ್ತೆ ನಿರ್ದೇಶನಕ್ಕೆ ದುನಿಯಾ ವಿಜಯ್

    ದುನಿಯಾ ವಿಜಯ್ ನಿರ್ದೇಶನ ಮಾಡುತ್ತಾರಾ ಎನ್ನುವ ಪ್ರಶ್ನೆಯೊಂದಿಗೆ ಶುರುವಾದ ‘ಸಲಗ’ ಸಿನಿಮಾ, ಇದೀಗ ಯಶಸ್ಸಿನ ಕಿರೀಟ ತೊಟ್ಟುಕೊಂಡಿದೆ. ನಿರ್ದೇಶನದ ಮೊದಲ ಸಿನಿಮಾದಲ್ಲಿಯೇ ಗೆದ್ದು ಬೀಗುತ್ತಿರುವ ದುನಿಯಾ ವಿಜಯ್, ಸದ್ಯದಲ್ಲೇ ಮತ್ತೊಂದು ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ ಎನ್ನುವ ಸುದ್ದಿ ದುನಿಯಾ ಅಂಗಳದಿಂದ ಬಂದಿದೆ. ಇದನ್ನು ಓದಿ : ಈ ವಾರ 10 ಚಿತ್ರಗಳು ರಿಲೀಸ್ : ಯಾವುದು ನೋಡ್ಬೇಕು, ಯಾವುದು ಬಿಡ್ಬೇಕು?


    ಸಲಗ ಸೋತರೂ, ಗೆದ್ದರೂ ತಾವು ನಟನೆಯ ಜತೆಗೆ ನಿರ್ದೇಶನದಲ್ಲೂ ಮುಂದುವರೆಯುವುದಾಗಿ ದುನಿಯಾ ವಿಜಯ್ ಈ ಹಿಂದೆಯೇ ಹೇಳಿದ್ದರು. ಅಂದುಕೊಂಡ ಕನಸು ಅವರನ್ನು ಕೈ ಬಿಡಲಿಲ್ಲ. ಪ್ರೇಕ್ಷಕ ಸಲಗ ಗೆಲ್ಲಿಸಿಬಿಟ್ಟ. ಹಾಗಾಗಿ ನಿರ್ದೇಶಕನಾಗುವ ಹುರುಪು ಇಮ್ಮಡಿಯಾಗಿದೆ.  ಇದನ್ನೂ ಓದಿ : ರಮ್ಯಾಗಾಗಿ ಕಾದ ದಿಲ್ ಕಾ ರಾಜಾ


    ಸದ್ಯ ಹೊಸ ಸಿನಿಮಾದ ಕಥೆ ಬರೆಯುವುದರಲ್ಲಿ ವಿಜಯ್ ತೊಡಗಿಕೊಂಡಿದ್ದಾರೆ. ಈ ಬಾರಿಯೂ ಅವರು ರಾ ಆಗಿರುವಂತಹ ಕಥೆಯನ್ನೇ ಸಿನಿಮಾ ಮಾಡಲಿದ್ದಾರಂತೆ. ಪಕ್ಕಾ ಮಾಸ್ ಸಿನಿಮಾ ಅದಾಗಿದ್ದು, ನಿರ್ದೇಶನದ ಜತೆಗೆ ನಟನೆಯನ್ನೂ ಮಾಡುತ್ತಾರಾ ಅಥವಾ ಬೇರೆ ಕಲಾವಿದರಿಗೆ ಹೊಸ ಸಿನಿಮಾ ಮಾಡುತ್ತಾರೆ ಎನ್ನುವುದು ಸದ್ಯಕ್ಕೆ ಸಸ್ಪೆನ್ಸ್. ಇದನ್ನೂ ಓದಿ : ಭಟ್ಟರ ಸಿನಿಮಾದಿಂದ ರಚಿತಾ ರಾಮ್ ಹೊರ ನಡೆದ ಅಸಲಿ ಕಾರಣ?


    ಅಂದುಕೊಂಡಂತೆ ಆದರೆ, ಶಿವರಾತ್ರಿ ಹೊತ್ತಿಗೆ ಈ ಸಿನಿಮಾದ ಮುಹೂರ್ತ ನಡೆಯಲಿದೆ. ಅಲ್ಲಿಯವರೆಗೂ ಸಂಭಾಷಣೆಕಾರ ಮಾಸ್ತಿ ಮತ್ತು ದುನಿಯಾ ವಿಜಯ್ ಸ್ಕ್ರಿಪ್ಟ್ ಬರೆಯುವುದರಲ್ಲಿ ಮಗ್ನರಾಗಿರುತ್ತಾರೆ. ಜತೆ ಜತೆಗೆ ಕಲಾವಿದರ ಆಯ್ಕೆ ಕೂಡ ನಡೆಯಲಿದೆಯಂತೆ. ಎರಡನೇ ಸಿನಿಮಾಗೆ ನಿರ್ದೇಶನ ಮಾಡುವುದು ಪಕ್ಕಾ ಆಗಿದ್ದು, ಕಲಾವಿದರು ಮತ್ತು ತಂತ್ರಜ್ಞರ ಕುರಿತು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

  • ನಮ್ಮಲ್ಲೇ ಒಳ್ಳೊಳ್ಳೆಯ ನಟಿಯರಿದ್ದಾರೆ, ಕನ್ನಡ ಪ್ರತಿಭೆಗಳಿಗೆ ಅವಕಾಶ ಕೊಡಿ: ಶಿವಣ್ಣ

    ನಮ್ಮಲ್ಲೇ ಒಳ್ಳೊಳ್ಳೆಯ ನಟಿಯರಿದ್ದಾರೆ, ಕನ್ನಡ ಪ್ರತಿಭೆಗಳಿಗೆ ಅವಕಾಶ ಕೊಡಿ: ಶಿವಣ್ಣ

    – ವೇದಿಕೆಯಲ್ಲೇ ಕಣ್ಣೀರಿಟ್ಟ ದುನಿಯಾ ವಿಜಿ

    ಬೆಂಗಳೂರು: ನಮ್ಮಲ್ಲೇ ಒಳ್ಳೊಳ್ಳೆಯ ನಟಿಯರಿದ್ದಾರೆ. ಹೀಗಾಗಿ ಕನ್ನಡ ಪ್ರತಿಭೆಗಳಿಗೆ ಅವಕಾಶ ಕೊಡಿ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ.

    ಇಂದು ಖಾಸಗಿ ಹೊಟೇಲ್ ನಲ್ಲಿ ನಡೆದ ‘ಸಲಗ’ ಚಿತ್ರದ ಸಕ್ಸಸ್ ಮೀಟ್‍ನಲ್ಲಿ ಮಾತನಾಡಿದ ಅವರು, ನಾವು ಒಟ್ಟಿಗೆ ಇದ್ದಾಗೆಲ್ಲಾ ನಮಗೆ ವಯಸ್ಸಾಗಿದೆ ಅನ್ಕೋಳ್ಳೋದಿಲ್ಲ. ನಾವು ಪಾಸಿಟಿವ್ ಥಿಂಕ್ ಮಾಡಬೇಕು, ಅದೇ ಒಳ್ಳೆಯದು. ವಿಜಿ ಮೊದಲ ಸಿನಿಮಾ ದುನಿಯಾ ಮುಹೂರ್ತಕ್ಕೂ ಬಂದಿದ್ದೆ, ಈಗಲೂ ಜೊತೆ ಇರ್ತೀನಿ. ಕನ್ನಡದ ನಟಿ ಸಂಜನಾ ಅವರು ಚಿತ್ರದಲ್ಲಿ ಒಳ್ಳೆಯ ರೀತಿ ನಟಿಸಿದ್ದಾರೆ. ನಮ್ಮಲ್ಲೇ ಒಳ್ಳೊಳ್ಳೆ ನಟಿಯರಿದ್ದಾರೆ. ಎಲ್ಲರಿಗೂ ಹೇಳೋದೇನು ಅಂದ್ರೆ ಕನ್ನಡ ಪ್ರತಿಭೆಗಳಿಗೆ ಅವಕಾಶ ಕೊಡಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ದೀಪಿಕಾ ಪಡುಕೋಣೆಯನ್ನು ಸಮರ್ಥಿಸಲು ಬಂದಿಲ್ಲ: ಕಂಗನಾ ರಣಾವತ್

    ಇದೇ ವೇಳೆ ವೇದಿಕೆಯಲ್ಲಿ ಅಪ್ಪು ನೆನೆದು ಶಿವಣ್ಣ ಭಾವುಕರಾದರು. ‘ಸಲಗ’ ಪ್ರೀ-ರಿಲೀಸ್ ಇವೆಂಟ್ ಯಾವಾಗ್ಲೂ ನೆನಪಿರುತ್ತೆ. ಅಪ್ಪು ನಾನು ಇದ್ವಿ. ಹಲವು ನೆನಪುಗಳಿವೆ. ಈಗಿಲ್ಲ ಅಂತ ಅನ್ಕೊಂಡ್ರೆ ತುಂಬಾ ಕಷ್ಟ ಆಗುತ್ತೆ. ಆದರೆ ಅವರು ಇಲ್ಲೇ ಇದ್ದಾರೆ, ಅವರ ಬೆಸ್ಲಿಂಗ್ಸ್ ಇರುತ್ತೆ ಎಂದರು. ನೀವು ಬಂದಿದ್ದೀರಿ, ನಿಮ್ಮ ಮೂಲಕ ಅಪ್ಪು ಬ್ಲೆಸ್ಲಿಂಗ್ಸ್ ನೋಡಬಹುದಾ ಎಂಬ ಪ್ರಶ್ನೆಗೆ ಇಲ್ಲ ಖಂಡಿತಾ ಇಲ್ಲ. ಅವರು ಇಲ್ಲ ಅಂತ ಅನ್ಕೊಳ್ಳೋ ಹಾಗಿಲ್ಲ. ಇಲ್ಲೇ ಇದ್ದಾರೆ ಎಂದು ಶಿವಣ್ಣ ಗದ್ಗದಿತರಾದರು.

    ನಟ ದುನಿಯಾ ವಿಜಯ್ ಮಾತನಾಡಿ, ಸಲಗ ಚಿತ್ರ ಸಕ್ಸಸ್ ತಂದುಕೊಟ್ಟಿದೆ ಎಂದು ಹೇಳಿ ಕಣ್ಣೀರು ಹಾಕಿದರು. ಕೆಲ ಕ್ಷಣ ಮೌನ ತಾಳಿದ ಬಳಿಕ ದುನಿಯಾ ವಿಜಯ್ ದುಃಖದ ಕೋಡಿ ಒಡೆಯಿತು. ಈ ನಡುವೆ ತಾಯಿ – ತಂದೆ ಕಳೆದುಕೊಂಡರು. ಈ ಸಕ್ಸಸ್ ಅನ್ನು ಅಪ್ಪು, ಅಮ್ಮ-ಅಪ್ಪ ಅಭಿಮಾನಿಗಳಿಗೆ ಸಲ್ಲಿಸ್ತೀನಿ. ಶಿವಣ್ಣ ಯಾವಾಗಲೂ ಜೊತೆಯಲ್ಲಿದ್ದಾರೆ, ಖುಷಿಯಾಗುತ್ತೆ. ಸಿನಿಮಾ ಪ್ರೊಡ್ಯೂಸ್ ಮಾಡೋವಾಗ ಮುಂಚೆ 40 ರೂ. ನನ್ನ ಜೇಬಲ್ಲಿತ್ತು. ಈಗ 40 ಲಕ್ಷ ಆಗಿದೆ ಎಂದು ಭಾವುಕರಾದರು.

    ಸಲಗ ಸಂಭ್ರಮದಲ್ಲಿ ನೆನಪಿರಲಿ ಪ್ರೇಮ್, ಶ್ರೀನಗರ ಕಿಟ್ಟಿ, ಗಣೇಶ್, ಡಾಲಿ ಧನಂಜಯ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಅಲ್ಲದೆ ನಟ ಡಾಲಿ ಧನಂಜಯ್, ಸಂಜನಾ ಆನಂದ್ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿತ್ತು. ಸಲಗ ಚಿತ್ರಕ್ಕೆ ಅಪ್ಪು ಚಾಲನೆ ಕೊಟ್ಟಿದ್ರು. ಚಿತ್ರ ಬಿಡುಗಡೆಗೂ ಮುಂಚೆ ಪ್ರಿ-ರಿಲೀಸ್ ಇವೆಂಟ್ ನಲ್ಲೂ ಅಪ್ಪು ಇದ್ದರು. ಇದೀಗ ಸಲಗ ಸಕ್ಸಸ್ ನಲ್ಲಿ ಅಪ್ಪು ಇಲ್ಲ ಅನ್ನೋದು ಕೊರಗು ಚಿತ್ರತಂಡಕ್ಕಿದೆ.

  • ‘ಸಲಗ’ ಕ್ರೇಜ್ ಭಲೇ ಜೋರು- ಭಕ್ತಗಣಕ್ಕೆ ಶರಣೆಂದ ಬ್ಲ್ಯಾಕ್ ಕೋಬ್ರಾ

    ‘ಸಲಗ’ ಕ್ರೇಜ್ ಭಲೇ ಜೋರು- ಭಕ್ತಗಣಕ್ಕೆ ಶರಣೆಂದ ಬ್ಲ್ಯಾಕ್ ಕೋಬ್ರಾ

    ಬೆಂಗಳೂರು: ಗಾಂದೀನಗರದ ಗಲ್ಲಿ ಗಲ್ಲಿಗಳಲ್ಲಿ, ವಿಜಿ ಅಭಿಮಾನಿ ದೇವರುಗಳಲ್ಲೀಗ ಸಲಗ ಜಪ ಶುರುವಾಗಿದೆ. ಅದೆಷ್ಟರ ಮಟ್ಟಿಗೆ ಅಂದ್ರೆ ಕುಂತ್ರು, ನಿಂತ್ರು ಸಲಗ ಸಲಗ ಅಂತಿದ್ದಾರೆ. ಸೆಟ್ಟೇರಿದ ದಿನವೇ ಒಂದು ಬಝ್ ಕ್ರಿಯೇಟ್ ಮಾಡಿದ್ದ ಸಿನಿಮಾ ಈಗ ವಿಜಿ ಭಕ್ತಗಣದಲ್ಲಿ ಹೈವೋಲ್ಟೇಜ್ ಕ್ರೇಜ್ ಕ್ರಿಯೇಟ್ ಮಾಡಿದೆ. ಒಂಟಿ ಸಲಗದಂತೆ ಎಲ್ಲಾ ಅಡೆತಡೆಗಳನ್ನು ದಾಟಿ ಫೈನಲಿ ನಾಡ ಹಬ್ಬಕ್ಕೆ ಚಿತ್ರಮಂದಿರಕ್ಕೆ ಭರ್ಜರಿ ಎಂಟ್ರಿ ಕೊಡೋಕೆ ‘ಸಲಗ’ ಸಕಲ ಸಜ್ಜಾಗಿದೆ.

    ವಿಜಿ ನಿರ್ದೇಶನದ ಸಲಗ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇದೆ. ಅದಕ್ಕೆ ತಕ್ಕಂತೆ ಟೀಸರ್, ಹಾಡುಗಳು ಸೋಶಿಯಲ್ ಮೀಡಿಯಾಗಳಲ್ಲಿ ಧೂಳ್ ಎಬ್ಬಿಸಿ ಸಿನಿರಸಿಕರ ಕಿಕ್ಕೇರಿಸಿವೆ. ಒಂದು ಕಡೆ ವಿಜಿ ಚೊಚ್ಚಲ ನಿರ್ದೇಶನ, ಇನ್ನೊಂದು ಕಡೆ ಮಾಸ್ ಸಬ್ಜೆಕ್ಟ್, ಇದಕ್ಕೂ ಮೀರಿ ದುನಿಯಾ ವಿಜಿ ಡಾಲಿಯ ಹೈವೋಲ್ಟೇಜ್ ಕಾಂಬಿನೇಷನ್, ಇವೆಲ್ಲವೂ ಚಿತ್ರದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ದುಪ್ಟಟ್ಟು ಮಾಡಿದ್ದು, ಬ್ಲ್ಯಾಕ್ ಕೋಬ್ರಾ ಚಿತ್ರಮಂದಿರದಲ್ಲಿ ಗೆದ್ದು ಬೀಗೋದೊಂದೇ ಬಾಕಿ ಇದೆ.ಇದನ್ನೂ ಓದಿ: ನಟ ದುನಿಯಾ ವಿಜಯ್ ನೋಡಲು ಮುಗಿಬಿದ್ದ ಅಭಿಮಾನಿಗಳು!

    ‘ಸಲಗ’ ಮೇಲೆ ವಿಜಿ ಭಕ್ತಗಣ ತೋರುತ್ತಿರುವ ಪ್ರೀತಿ ಮತ್ತೊಂದು ದುನಿಯಾ ವಿಜಿ ಮುಂದೆ ಸೃಷ್ಟಿಯಾಗುವ ಮಟ್ಟಿಗಿದೆ. ಅಭಿಮಾನಿಗಳ ಪ್ರೀತಿ ಕಂಡು ಸ್ವತಃ ವಿಜಿಯೇ ಮೂಕವಿಸ್ಮಿತರಾಗಿದ್ದಾರೆ. ಸಾಮಾಜಿಕ ಜಾಲತಾಣದ ಅಂಗಳದಲ್ಲಂತೂ ಸಲಗ ಹವಾ ಜೋರಾಗಿದೆ. ಚಿತ್ರದ ಪ್ರತಿ ಅಪ್ಡೇಟ್‍ನ್ನೂ ಅಭಿಮಾನಿಗಳು ತೇರು ಹೊತ್ತು ಸಂಭ್ರಮಿಸುವ ರೀತಿ ಸಂಭ್ರಮಿಸುತ್ತಿದ್ದಾರೆ. ಇಷ್ಟಕ್ಕೆ ಈ ಅಭಿಮಾನ ಮುಗಿಯಲಿಲ್ಲ, ವಿಜಿ ಡೈ ಹಾರ್ಡ್ ಫ್ಯಾನ್ಸ್ ಅಂತೂ ಕೇಳೋದೇ ಬೇಡ, ಕೈ ಮೇಲೆ, ಎದೆ ಮೇಲೆ ಸಲಗ ಟ್ಯಾಟೂ ಹಾಕಿಸಿಕೊಂಡು ಆರಾಧಿಸುತ್ತಿದ್ದಾರೆ. ಕೆಲವರಂತೂ ಹೇರ್ ಸ್ಟೈಲ್ ನಲ್ಲೂ ಸಲಗ ಎಂದು ಡಿಸೈನ್ ಮಾಡಿಸಿಕೊಂಡಿದ್ದಾರೆ. ಈ ಪ್ರೀತಿ, ಅಭಿಮಾನ ಕಂಡು ಖುದ್ದು ವಿಜಿಯೇ ಶರಣು ಶರಣೆಂದಿದ್ದಾರೆ. ಈ ಕ್ರೇಜ್ ಕೇವಲ ಗಾಂದೀನಗರದ ಗಲ್ಲಿಗಳಲ್ಲಿ ಮಾತ್ರವಲ್ಲ, ಕರುನಾಡಿನ ಮನೆ ಮನದಲ್ಲೂ ಶುರುವಾಗಿದೆ ಅನ್ನೋದೇ ಬಲು ವಿಶೇಷ.

    ‘ಸಲಗ’ ಚಿತ್ರಮಂದಿರಕ್ಕೆ ಬರೋದನ್ನೇ ಕಾದು ಕುಳಿತಿರುವ ಭಕ್ತಗಣಕ್ಕೆ ಹೈವೋಲ್ಟೇಜ್ ಟ್ರೇಲರ್ ಸದ್ಯದಲ್ಲೇ ಉಡುಗೊರೆಯಾಗಿ ನೀಡಲಿದೆ ಚಿತ್ರತಂಡ. ರೌಡಿಸಂ ಕಥಾನಕ, ಚರಣ್ ರಾಜ್ ಸಂಗೀತ ನಿರ್ದೇಶನ, ಮಾಸ್ತಿ ಸಂಭಾಷಣೆ, ವಿಜಿ ಮಾಸ್ ಅವತಾರ, ಡಾಲಿಯ ಖಾಕಿ ಖದರ್ ಎಲ್ಲವೂ ಮೇಳೈಸಿರುವ ಸಲಗ ನಾಡಹಬ್ಬಕ್ಕೆ ಥಿಯೇಟರ್ ನಲ್ಲಿ ದರ್ಬಾರ್ ಶುರುಮಾಡಲಿದೆ. ಇದನ್ನೂ ಓದಿ: 10 ವರ್ಷದ ಹಿಂದಿನ ಫೋಟೋ ಹಂಚಿಕೊಂಡು ಪತಿಗೆ ಪ್ರೇರಣಾ ವಿಶ್

  • ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

    ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

    – ಸಲಗ, ಕೋಟಿಗೊಬ್ಬ3 ನಡುವೆ ಪೈಟ್

    ಬೆಂಗಳೂರು: ಚಂದನವನದಲ್ಲಿ ಈಗ ಸ್ಟಾರ್‌ವಾರ್‌ ಶುರುವಾಗಿದೆ. ಒಂದೇ ದಿನ ತೆರೆ ಮೇಲೆ ಬರಲು ಬಿಗ್ ಬಜೆಟ್ ಸಿನಿಮಾಗಳಾದ ಸಲಗ, ಕೋಟಿಗೊಬ್ಬ-3 ಬಿಡುಗಡೆ ಸಿದ್ಧವಾಗಿದೆ.

    ದಸಾರ ಹಬ್ಬದ ದಿನ ಸಲಗ ಸವಾರಿ ಆರಂಭವಾಗಲಿದೆ. ದುನಿಯ ವಿಜಿ ನಿರ್ದೇಶಿಸಿ ನಟಿಸಿರುವ ಸಲಗ ಆ.14ಕ್ಕೆ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಅದೇ ದಿನ ತೆರೆಗೆ ಬರೋದು ಪಕ್ಕಾ ಅಂತಿದೆ ಸುದೀಪ್ ನಟನೆಯ ಸೂರಪ್ಪ ಬಾಬು ನಿರ್ಮಾಣದ ಚಿತ್ರ ಕೋಟಿಗೊಬ್ಬ 3 ಸಿನಿಮಾ. ವಿಜಯ ದಶಮಿಯಂದು ವಿಜಯದ ಮಾಲೆ ಯಾರಿಗೆ ಹಾಕಲಿದ್ದಾರೆ ಸಿನಿ ಪ್ರೇಕ್ಷಕರು ಎಂಬುದನ್ನು ಕಾದುನೋಡಬೇಕಾಗಿದೆ.

    ಇದು  ಸ್ಟಾರ್‌ವಾರ್‌ ಅಲ್ಲ, ಇಬ್ಬರೂ ಒಟ್ಟಿಗೆ ಬರ್ತಿದ್ದೀವಿ ಅಷ್ಟೇ. ಎರಡೂ ಸಿನಿಮಾಗಳಿಗೂ ಕನ್ನಡಿಗರು ಆರ್ಶೀವಾದ ಮಾಡುತ್ತಾರೆ. ಎರಡೂ ಸಿನಿಮಾಗಳ ನಿರ್ಮಾಪಕರ ನಡುವೆ ಸಮಸ್ಯೆ ಇಲ್ಲ. ಒಟ್ಟಿಗೆ ರಿಲೀಸ್ ಆಗ್ತಿರುವುದರಿಂದ ಎಲ್ಲಾ ಕಡೆ ಕನ್ನಡ ಸಿನಿಮಾಗಳು ನೋಡಲು ಸಿಗುತ್ತದೆ. ಪರಭಾಷ ಸಿನಿಮಾಗಳ ಸಮಸ್ಯೆಗೆ ಅವಕಾಶ ಇರೋದಿಲ್ಲ ಎಂದು ಪಬ್ಲಿಕ್ ಟಿವಿಗೆ ಸಲಗ ನಿರ್ಮಾಪಕ ಕೆ ಪಿ ಶ್ರೀಕಾಂತ್ ಹೇಳಿದ್ದಾರೆ. ಇದನ್ನೂ ಓದಿ:  ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಉಪಾಧ್ಯಕ್ಷರಾದ ಕನ್ನಡತಿ

    ನಮಗೊಂದು ಒಳ್ಳೆಯ ದಿನ ಸಿಕ್ಕಿದೆ. ದಸರಾ ಹಬ್ಬ, ಚಾಮುಂಡೇಶ್ವರಿ ದಯೆ ಎಲ್ಲವೂ ಇದೆ ಎಂದು ಪಬ್ಲಿಕ್ ಟಿವಿಗೆ ನಟ ದುನಿಯಾ ವಿಜಯ್ ಹೇಳಿಕೆ ನೀಡಿದ್ದಾರೆ.

    ಅಕ್ಟೋಬರ್ 14ರಂದೇ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯಾಗಲಿದೆ. ಮಾತುಕತೆ ಆಡಿದ್ದು ನಿಜ, ಶ್ರೀಕಾಂತ್ ಅವರದ್ದು ತಪ್ಪಿಲ್ಲ. ಅಕ್ಟೋಬರ್ 1, 14, 29 ಅಂತ ಇತ್ತು. ಅಕ್ಟೋಬರ್ 14ರಂದು ಬಿಟ್ಟುಕೊಡಲು ರೆಡಿ ಇದ್ದೇನೆ ಎಂದು ಹೇಳಿದ್ದೇನೆ. ಅಕ್ಟೋಬರ್ 29ರಂದು ಡೇಟ್ ಸಿಗೋದಾದರೆ ಬಿಟ್ಟುಕೊಡಲು ಒಪ್ಪಿದೆ. ಆದರೆ ಅಕ್ಟೋಬರ್ 29ರಂದು ಜಯಣ್ಣ ಅವರು ಭಜರಂಗಿ-2 ಸಿನಿಮಾ ಬಿಡುಗಡೆ ಆಗುತ್ತಿದೆ ಎಂದು ಪಬ್ಲಿಕ್ ಟಿವಿಗೆ ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ.

  • ಸರ್ಕಾರದ ಕ್ರಮಕ್ಕೆ ‘ಸಲಗ’ ಚಿತ್ರತಂಡ ಅಸಮಾಧಾನ- ಚಿತ್ರ ಬಿಡುಗಡೆ ಮುಂದೂಡಿಕೆ

    ಸರ್ಕಾರದ ಕ್ರಮಕ್ಕೆ ‘ಸಲಗ’ ಚಿತ್ರತಂಡ ಅಸಮಾಧಾನ- ಚಿತ್ರ ಬಿಡುಗಡೆ ಮುಂದೂಡಿಕೆ

    – ಶೇ.100 ಆಸನದ ವ್ಯವಸ್ಥೆ ಜಾರಿಯಾದ ಮೇಲೆ ಸಲಗ ಬಿಡುಗಡೆ

    ಹುಬ್ಬಳ್ಳಿ: ಕೋವಿಡ್ 2ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿತ್ರ ಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಿತ್ತು. ಬಳಿಕ ಏ.6ರ ವರೆಗೆ ಮಾತ್ರ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಸಲಗ ಚಿತ್ರತಂಡ ಅಸಮಾಧಾನ ವ್ಯಕ್ತಪಡಿಸಿದ್ದು, ಶೇ.100ರಷ್ಟು ಭರ್ತಿಗೆ ಅವಕಾಶ ನೀಡಿದ ನಂತರ ನಂತರ ಸಲಗ ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ.

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಸಲಗ ಚಿತ್ರದ ನಾಯಕ ನಟ ದುನಿಯಾ ವಿಜಯ್, ಖಳನಟ ಡಾಲಿ ಧನಂಜಯ್, ನಿರ್ಮಾಪಕ ಕೆಪಿ ಶ್ರೀಕಾಂತ್ ಮಾತನಾಡಿದರು. ಸರ್ಕಾರದ ಈ ಆದೇಶ ಚಿತ್ರರಂಗಕ್ಕೆ ಮಾಡಿದ ಅನ್ಯಾಯವಾಗಿದೆ. ಸರ್ಕಾರದ ನಿರ್ಧಾರವನ್ನು ಒಪ್ಪಲಾಗದು, ಆದರೂ ಸ್ವಾಗತಿಸುತ್ತೇವೆ. ಚುನಾವಣೆಯ ಪ್ರಚಾರ, ರ್ಯಾಲಿಗೆ ಇಲ್ಲದ ನಿಯಮಗಳನ್ನು ಜಿಮ್ ಹಾಗೂ ಸಿನಿಮಾರಂಗದ ಮೇಲೆ ಹೇರುವುದು ಸರಿಯಲ್ಲ ಎಂದು ದುನಿಯಾ ವಿಜಯ್ ಆಕ್ರೋಶ ವ್ಯಕ್ತಪಡಿಸಿದರು.

    ಇತ್ತೀಚಿಗೆ ಬಿಡಿಗಡೆಯಾದ 2 ಸ್ಟಾರ್ ನಟರ ಚಿತ್ರಗಳು ಹಿಟ್ ಆಗಿವೆ. ಆ ವೇಳೆ ಚಿತ್ರ ವೀಕ್ಷಿಸಿದ ಯಾವ ಪೇಕ್ಷಕರಿಗೂ ಕೋವಿಡ್ ಬಂದ ಉದಾಹರಣೆಗಳಿಲ್ಲ. ಚಿತ್ರ ಮಂದಿರ ಹಾಗೂ ಜಿಮ್ ಗಳ ಮೇಲೆ ನಿರ್ಬಂಧ ಹೇರುವುದು ತರವಲ್ಲ ಎಂದು ನಟ ದುನಿಯಾ ವಿಜಯ ಕಿಡಿಕಾರಿದರು.

    ನಟ ಡಾಲಿ ಧನಂಜಯ ಸಹ ಸರ್ಕಾರ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಕೊರೊನಾಗೆ ವ್ಯಾಕ್ಸಿನ್ ಇದೆ, ಹಸಿವಿನಿಂದ ಸಾಯುವವರಿಗೆ ಔಷಧಿ ಇಲ್ಲ. ಸರ್ಕಾರ ಅವರಿಗೆ ಬೇಕಾದ ಹಾಗೆ ನಿಯಮಗಳ ಮಾಡುವುದನ್ನು ಬಿಡಬೇಕು, ಸಿನಿಮಾ ರಂಗಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಕಿಡಿಕಾರಿದರು.

    ಚಿತ್ರ ಮಂದಿರಗಳಲ್ಲಿ ಸಿನಿಮಾ ನೋಡಿ ಬಂದವರಿಗೆ ಕೊರೊನಾ ಬಂದ ಉದಾಹರಣೆಗಳಿಲ್ಲ. ಸರ್ಕಾರ ಚಿತ್ರಮಂದಿರಗಳ ಮೇಲೆ ನಿರ್ಬಂಧ ವಿಧಿಸುವುದರಿಂದ ಸಾವಿರಾರು ಬಡ ಕಾರ್ಮಿಕರು ಕಷ್ಟ ಅನುಭವಿಸಬೇಕಾಗುತ್ತದೆ. ಪ್ರೇಕ್ಷಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಚಿತ್ರ ವೀಕ್ಷಣೆ ಮಾಡಲಿದ್ದಾರೆ. ಸರ್ಕಾರ ನಿಯಮ ಹೇರಿ ಚಿತ್ರರಂಗವನ್ನು ಸಂಕಷ್ಟಕ್ಕೆ ತಳ್ಳಬಾರದೆಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

  • ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

    ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

    ಟ ದುನಿಯಾ ವಿಜಯ್ ‘ಸಲಗ’ ಚಿತ್ರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ನಟನೆ ಜೊತೆ ‘ಸಲಗ’ ಮೂಲಕ ಡೈರೆಕ್ಟರ್ ಕ್ಯಾಪ್ ಕೂಡ ತೊಟ್ಟಿದ್ದಾರೆ ಬ್ಲ್ಯಾಕ್ ಕೋಬ್ರಾ. ಸದ್ಯ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸ ಹಾಗೂ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇರುವ ದುನಿಯಾ ವಿಜಿ ತಮ್ಮ ಬ್ಯುಸಿ ಶೆಡ್ಯೂಲ್ ನಡುವೆಯೂ ಮಾಲೂರಿನ ತಮ್ಮ ಅಭಿಮಾನಿಗಳು ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಭಾಗಿಯಾಗಿದ್ದಾರೆ.

    ಮಾಲೂರಿನ ಹೋಂಡಾ ಕ್ರೀಡಾಂಗಣದಲ್ಲಿ ವಿಜಯ್ ಅಭಿಮಾನಿಗಳ ಸೇವಾ ಸಮಿತಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಸಲಗ’ ಚಿತ್ರತಂಡ ಕ್ರಿಕೆಟ್ ಪಂದ್ಯವನ್ನಾಡಿ ವಿಜಯ ಸಾಧಿಸಿದೆ. ದುನಿಯಾ ವಿಜಿ ಮಾಲೂರಿಗೆ ಬರುವ ವಿಚಾರ ತಿಳಿದ ವಿಜಯ್ ಅಭಿಮಾನಿಗಳು ಹೋಂಡಾ ಕ್ರೀಡಾಂಗಣಕ್ಕೆ ಜಮಾಯಿಸಿದ್ದರು. ಕೋಲಾರದ ಸುತ್ತಮುತ್ತಲಿನ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿ ನೆಚ್ಚಿನ ನಟ ದುನಿಯಾ ವಿಜಿಯನ್ನು ಕಣ್ತುಂಬಿಕೊಂಡಿದ್ದಾರೆ.

    ಅಭಿಮಾನಿಗಳ ಜೊತೆ ಸಮಯ ಕಳೆದ ದುನಿಯಾ ವಿಜಿ ನಂತರ ಮಾಲೂರಿನಲ್ಲಿರುವ ಡಾ.ರಾಜ್‍ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಪುತ್ಥಳಿಗೆ ಹೂವಿನ ಮಾಲೆ ಅರ್ಪಿಸಿ ಗೌರವ ಸಲ್ಲಿಸಿದ್ದಾರೆ. ದುನಿಯಾ ವಿಜಯ್ ಹಾಗೂ ಚಿತ್ರತಂಡದ ಜೊತೆ ಚಿತ್ರದ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಕೂಡ ಮಾಲೂರಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದರು.

    ದುನಿಯಾ ವಿಜಯ್ ನಿರ್ದೇಶನದ ‘ಸಲಗ’ ಸಿನಿಮಾ ಸ್ಯಾಂಡಲ್‍ವುಡ್ ಅಂಗಳದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಎಲ್ಲರೂ ಕಾತರದಿಂದ ಸಿನಿಮಾಗಾಗಿ ಎದುರು ನೋಡುತ್ತಿದ್ದಾರೆ. ಚಿತ್ರದಲ್ಲಿ ದುನಿಯಾ ವಿಜಿಗೆ ಜೋಡಿಯಾಗಿ ಸಂಜನಾ ಆನಂದ್ ಸ್ಕ್ರೀನ್ ಶೇರ್ ಮಾಡಿದ್ದಾರೆ. ಟಗರು ಖ್ಯಾತಿಯ ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೂಡಿಬಂದಿದ್ದು, ಚಿತ್ರದ ಟೈಟಲ್ ಟ್ರ್ಯಾಕ್ ಸೂಪರ್ ಹಿಟ್ ಆಗಿದೆ. ಶಿವಸೇನಾ ಛಾಯಾಗ್ರಹಣ ‘ಸಲಗ’ ಚಿತ್ರಕ್ಕಿದೆ. ಡಾಲಿ ಧನಂಜಯ್ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದು, ಅಚ್ಯುತ್ ಕುಮಾರ್, ರಂಗಾಯಣ ರಘು, ಯಶ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಸಲಗ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ದುನಿಯಾ ವಿಜಿ ಕರೆ

    ಸಲಗ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ದುನಿಯಾ ವಿಜಿ ಕರೆ

    – ನೆಚ್ಚಿನ ನಟನ ಕರೆಯಿಂದ ಅಭಿಮಾನಿಗೆ ಆನಂದಭಾಷ್ಪ

    ಬೆಂಗಳೂರು: ಸಲಗ ಟ್ಯಾಟೂ ಹಾಕಿಸಿಕೊಂಡ ತನ್ನ ಅಭಿಮಾನಿಯ ಜೊತೆ ನಟ ದುನಿಯಾ ವಿಜಯ್ ಅವರು ವೀಡಿಯೋ ಕಾಲ್ ಮಾಡಿ ಮಾತನಾಡಿಸಿದ್ದಾರೆ.

    ಉತ್ತರ ಕರ್ನಾಟಕ ಮೂಲದ ಹನುಮಂತ ಸದ್ಯ ಗೋವಾದ ಕಿರಾಣಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ ದುನಿಯಾ ವಿಜಿಯ ಅಪ್ಪಟ ಅಭಿಮಾನಿಯಾಗಿದ್ದಾನೆ. ವಿಜಯ್ ರಂತೆ ತಂದೆ-ತಾಯಿಯನ್ನ ಆರಾಧಿಸೋಧ್ಯೇಯವನ್ನ ಹೊಂದಿರೋ ಈ ಅಭಿಮಾನಿ, ನೆಚ್ಚಿನ ನಟನ ಸಿನಿಮಾ ಯಶಸ್ವಿಯಾಗಲೆಂದು ಸಲಗ ಟೈಟಲ್ ನ ತನ್ನ ಕೈ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ.

    ಈ ವಿಷಯ ತಿಳಿದು ಅಭಿಮಾನಿಗೆ ವಿಜಯ್ ವೀಡಿಯೋ ಕಾಲ್ ಮಾಡಿದ್ದಾರೆ. ತನ್ನ ಆರಾಧ್ಯ ದೈವನ ಕರೆಯಿಂದ ಖುಷಿಗೊಂಡ ಹನುಮಂತ ಆನಂದಭಾಷ್ಪ ಸುರಿಸಿದ್ದಾನೆ.

    ಇತ್ತ ಟ್ಯಾಟೂ ಕಂಡು ಭಾವುಕರಾದ ವಿಜಯ್, ಹನುಂತನಿಗೆ ವೀಡಿಯೋ ಕರೆ ಮಾಡಿ, ತಮ್ಮ ಅಭಿಮಾನಕ್ಕೆ ಮೂಕನಾಗಿದ್ದೇನೆ ಅಂತ ಕೃತಜ್ಞತೆ ಸಲ್ಲಿದ್ದಾರೆ. ಜೊತೆಗೆ ತಂದೆ-ತಾಯಿಯನ್ನ ಚೆನ್ನಾಗಿ ನೋಡಿಕೊಳ್ಳಿ, ನಿಮಗೆ ಒಳ್ಳೆಯದಾಗುತ್ತೆ ಅಂತ ಹನುಮಂತನಿಗೆ ಶುಭ ಹಾರೈಸಿದ್ದಾರೆ.