Tag: ಸಲೀಂ ಅಹಮದ್

  • ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ

    ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ

    ಬೆಂಗಳೂರು: ಕೇಂದ್ರ ಸರ್ಕಾರದಿಂದ (Central Government) ದುರುಪಯೋಗ ಆಗುವುದನ್ನು ತಡೆಯಲು ಸಿಬಿಐಗೆ (CBI) ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (Cheluvarayaswamy) ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಎಲ್ಲರ ಮೇಲೆ ಮುಗಿಬೀಳ್ತಿದೆ. ಕೇಂದ್ರ ಸರ್ಕಾರ ತನ್ನ ಕೆಲಸ ಮಾಡಬೇಕು. ಇದು ಒಕ್ಕೂಟ ವ್ಯವಸ್ಥೆ. ಸಿಬಿಐ ತರಹದ ಸಂಸ್ಥೆಗಳ ದುರುಪಯೋಗ ಆಗ್ತಿದೆ. ಹೀಗಾಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ

    ಕೋಳಿವಾಡ (K.B Koliwada) ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ (Congress) ಇದ್ದಾಗ ತನಿಖಾ ಸಂಸ್ಥೆಗಳ ದುರುಪಯೋಗ ಆಗಿರಲಿಲ್ಲ, ಈಗ ಆಗ್ತಿದೆ. ಕೋಳಿವಾಡ ಅವರು ಯಾಕೆ ಆ ರೀತಿ ಹೇಳಿದರು ಎನ್ನುವುದನ್ನು ಅವರೇ ಹೇಳಬೇಕು. ಎಲ್ಲರನ್ನೂ ಕಂಟ್ರೋಲ್ ಮಾಡಕ್ಕಾಗಲ್ಲ. ಸಿದ್ದರಾಮಯ್ಯ ಜತೆ ನಮ್ಮ ಸಚಿವರು, ಶಾಸಕರು, ಹೈಕಮಾಂಡ್‌ವರು ಇದ್ದಾರೆ. ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಲ್ಲ, ಅವರೇ ಮುಂದುವರೀತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಇದೇ ವೇಳೆ ಪರಿಷತ್ ಸದಸ್ಯ ಸಲೀಂ ಅಹಮದ್ (Saleem Ahmed) ಮಾತನಾಡಿ, ರಾಜ್ಯಪಾಲರಿಗೆ ಸಂಪುಟದಲ್ಲೇ ಚರ್ಚಿಸಿ ಉತ್ತರ ಕೊಡಬೇಕು. ಈ ತೀರ್ಮಾನ ಒಳ್ಳೆಯದು, ಸ್ವಾಗತಾರ್ಹ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ಕೊಡಲ್ಲ, ಕೊಡಲೂಬಾರದು. ಕೋಳಿವಾಡ ಹೇಳಿಕೆ ಅವರ ವೈಯಕ್ತಿಕವಾದ ಹೇಳಿಕೆಯಾಗಿದೆ. ಆದರೆ ನಮ್ಮ ನಾಯಕರು, ಕಾರ್ಯಕರ್ತರು ಸಿಎಂ ಪರ ಒಟ್ಟಾಗಿ ಇದ್ದೀವಿ ಎಂದರು.ಇದನ್ನೂ ಓದಿ: ಸ್ವಚ್ಛ ಭಾರತ್ ಮಿಷನ್ ಯೋಜನೆ – ಕೋಲಾರ ನಗರಸಭೆಯಲ್ಲಿ ಭಾರಿ ಗೋಲ್‌ಮಾಲ್!

  • ರಾಜಭವನ ಬಿಜೆಪಿ ಕಚೇರಿ ಆಗಿದೆ, ರಾಜ್ಯಪಾಲರಿಂದ ಪಕ್ಷಪಾತ: ಸಲೀಂ ಅಹಮದ್

    ರಾಜಭವನ ಬಿಜೆಪಿ ಕಚೇರಿ ಆಗಿದೆ, ರಾಜ್ಯಪಾಲರಿಂದ ಪಕ್ಷಪಾತ: ಸಲೀಂ ಅಹಮದ್

    ಬೆಂಗಳೂರು: ರಾಜಭವನ ಬಿಜೆಪಿ (BJP) ಕಚೇರಿಯಾಗಿದೆ. ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹಮದ್ (Saleem Ahmed) ಕಿಡಿಕಾರಿದ್ದಾರೆ.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೋರಿದ ಅರವಿಂದ್ ಬೆಲ್ಲದ್

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾರೋ ಒಬ್ಬ ಸಂಶಯಾಸ್ಪದ ಗುಣ ಇರುವ ವ್ಯಕ್ತಿ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ. ರಾಜ್ಯಪಾಲರು ಆ ಪತ್ರದ ಆಧಾರದಲ್ಲಿ 12 ಗಂಟೆಯೊಳಗೆ ಸಿಎಂ (CM) ವಿರುದ್ದ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ಕೊಡುತ್ತಾರೆ. ಇದು ರಾಜ್ಯಪಾಲರ ದುರಂತದ ನಡೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಜ್ಯಪಾಲರ ಬಳಿ ದೂರು ಬಂದ ಕೂಡಲೇ ಮುಖ್ಯ ಕಾರ್ಯದರ್ಶಿಗಳಿಗೆ ವಿವರಣೆ ಕೇಳಿ ಕಳಿಸಿಕೊಡುತ್ತಾರೆ. ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ. ರಾಜ್ಯಪಾಲರು (Governer) ಪಕ್ಷಪಾತ ಮಾಡಬಾರದು. ರಾಜಭವನ ಒಂದು ಪವಿತ್ರವಾದ ಜಾಗ. ಅಲ್ಲಿ ಯಾವುದೇ ರಾಜಕಾರಣ ಮಾಡಬಾರದು. ರಾಜಭವನ ರಾಜಕೀಯ ಮೀರಿ ಇರಬೇಕು. ಆದರೆ ರಾಜಭವನದಲ್ಲಿ ರಾಜಕೀಯ ನಡೆಯುತ್ತಿದೆ. ರಾಜಭವನ ಬಿಜೆಪಿ ಕಚೇರಿ ಆಗಿದೆ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಬಾಲಿವುಡ್ ಸಿನಿಮಾ ಶೂಟಿಂಗ್‌ಗಾಗಿ ಹಂಪಿಗೆ ಬರಲಿದ್ದಾರೆ ರಶ್ಮಿಕಾ ಮಂದಣ್ಣ

  • ಬಿಜೆಪಿ-ಜೆಡಿಎಸ್ ಪಾದಯಾತ್ರೆ ರಾಜಕೀಯ ನಾಟಕ: ಸಲೀಂ ಅಹಮದ್

    ಬಿಜೆಪಿ-ಜೆಡಿಎಸ್ ಪಾದಯಾತ್ರೆ ರಾಜಕೀಯ ನಾಟಕ: ಸಲೀಂ ಅಹಮದ್

    ಬೆಂಗಳೂರು: ಬಿಜೆಪಿ-ಜೆಡಿಎಸ್ (BJP-JDS) ನಾಯಕರು ಪಾದಯಾತ್ರೆ ಮೂಲಕ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ (Saleem Ahmed) ವಾಗ್ದಾಳಿ ನಡೆಸಿದ್ದಾರೆ.

    ವಿಧಾನಸೌಧದಲ್ಲಿ ‌ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಮಾಡ್ತಿದ್ದಾರೆ ಗೊತ್ತಿಲ್ಲ.ಇದು ರಾಜಕೀಯ ನಾಟಕ ಯಾತ್ರೆ. ಎರಡು ಹಗರಣಗಳ ಬಗ್ಗೆ ಬಿಜೆಪಿ-ಜೆಡಿಎಸ್ ಹೇಳ್ತಿದ್ದಾರೆ. ಸದನದಲ್ಲಿ ಸಿಎಂ ಉತ್ತರ ಕೊಡಲು ಮುಂದಾದಾಗ ಅವರಿಗೆ ಉತ್ತರ ನೀಡಲು ಅವಕಾಶ ಕೊಡಲಿಲ್ಲ. ಅಧಿವೇಶನದಲ್ಲಿ ಚರ್ಚೆ ಮಾಡದೇ ಬಿಜೆಪಿ-ಜೆಡಿಎಸ್ ಪಲಾಯನ ಮಾಡಿದೆ. ಸದನದ ಬಾವಿಗಳಿದು ಸಿಎಂ ಉತ್ತರ ಕೊಡದಂತೆ ಮಾಡಿ ಸದನದ ಸಮಯ ಹಾಳು ಮಾಡಿದ್ದಾರೆ ಅಂತ ಕಿಡಿಕಾರಿದರು. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ

     

    ಬಿಜೆಪಿ-ಜೆಡಿಎಸ್‌ನವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.4 ವರ್ಷ ಅಧಿಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ (Corruption) ‌ಮಾಡಿದ್ದಾರೆ. ಅದಕ್ಕೆ ಜನ ಕಾಂಗ್ರೆಸ್‌ಗೆ ಅವಕಾಶ ನೀಡಿದ್ದಾರೆ. ರಾಜ್ಯದಲ್ಲಿ 40% ಬಿಜೆಪಿ ಸರ್ಕಾರ ಇತ್ತು. ನಿರ್ದಿಷ್ಟ ದಾಖಲೆ ಇಲ್ಲದೇ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ. ಕುಮಾರಸ್ವಾಮಿ (HD Kumaraswamy) ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಬಿಜೆಪಿ ಶೂಟ್ ಮಾಡಿ ಓಡಿ ಹೋಗೋ ಕೆಲಸ ಮಾಡ್ತಿದ್ದಾರೆ ಅಂತ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Wayanad Landslides: ಕೊಚ್ಚಿ ಹೋಯ್ತು 200ಕ್ಕೂ ಹೆಚ್ಚು ಮನೆಗಳು, ಸಾವಿನ ಸಂಖ್ಯೆ 54ಕ್ಕೆ ಏರಿಕೆ

    40 ವರ್ಷ ರಾಜಕೀಯದಲ್ಲಿ ಯಾವುದೇ ಆರೋಪ ಇಲ್ಲದೆ ಸಿದ್ದರಾಮಯ್ಯ ಅವರು ಕೆಲಸ ಮಾಡ್ತಿದ್ದಾರೆ.ಸಿದ್ದರಾಮಯ್ಯ ಮೇಲಿನ ಆರೋಪ ನಿರಾಧಾರ. ಕೇಂದ್ರ ಸರ್ಕಾರ ಮೋದಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ದ ಷಡ್ಯಂತ್ರ ಮಾಡ್ತಿದ್ದಾರೆ.ನಮ್ಮ ಸರ್ಕಾರ ಉತ್ತಮವಾಗಿ ಕೆಲಸ ಮಾಡ್ತಿದೆ. ಇದನ್ನ ಸಹಿಸಲು ಸಾಧ್ಯವಾಗ್ತಿಲ್ಲ.ಕೇಂದ್ರ ಸರ್ಕಾರ ನಮ್ಮ ಮೇಲೆ ಷಡ್ಯಂತ್ರ ಮಾಡ್ತಿದ್ದಾರೆ. ಇದಕ್ಕೆ ನಾವು ಭಯ ಬೀಳೊಲ್ಲ.ಬಿಜೆಪಿ ಭ್ರಷ್ಟಾಚಾರವನ್ನು ಬಯಲಿಗೆಳೆಯೋ ಕೆಲಸ ಮಾಡ್ತೀವಿ.ಬಿಜೆಪಿಯವರ ಅಕ್ರಮ ಬೆತ್ತಲೆ ಮಾಡೋ ಕೆಲಸ ಮಾಡ್ತೀವಿ ಅಂತ ಸವಾಲ್ ಹಾಕಿದ್ರು.

     

    ವಾಲ್ಮೀಕಿ ಹಗರಣ ಗೊತ್ತಾಗದ ಕೂಡಲೇ ಸಿಎಂ SIT ತನಿಖೆ ಆದೇಶ ಮಾಡಿದ್ರು.‌ಮುಡಾ ಕೇಸ್ ನಲ್ಲಿ ಸ್ವತಃ ಸಿಎಂ ಅವರು ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಿದ್ದಾರೆ. ಸಿಎಂ ಈಗಾಗಲೇ ಹೇಳಿದ್ದಾರೆ. ಯಾರೇ ತಪ್ಪು ಮಾಡಿದ್ರು ಕ್ರಮ ತೆಗೆದುಕೊಳ್ತೀವಿ ಅಂತ ಹೇಳಿದ್ದಾರೆ.ಬಿಜೆಪಿ ಅವರು ರಾಜಕೀಯ ಮಾಡಲು ಹೊರಟಿದ್ದಾರೆ.ಬಿಜೆಪಿ-ಜೆಡಿಎಸ್ ಅಕ್ರಮ ಬಯಲಿಗೆ ಎಳೆಯುತ್ತೇವೆ. ಆಗ ಏನ್ ಮಾಡ್ತಾರೆ ನೋಡೋಣ ಅಂತ ಸವಾಲ್ ಹಾಕಿದ್ರು.

    ಬಿಜೆಪಿ ಅವಧಿಯಲ್ಲಿ 21 ಹಗರಣ ಆಗಿದೆ. ಇದರ ಬಗ್ಗೆ ನಾವು ತನಿಖೆ ‌ಮಾಡುತ್ತೇವೆ. ಬಿಜೆಪಿ-ಜೆಡಿಎಸ್ ಕರ್ಮಕಾಂಡ ಮುಚ್ಚಿ ಹಾಕಿಕೊಳ್ಳಲು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ.‌ ಬಿಜೆಪಿ-ಜೆಡಿಎಸ್ ಪಾದಯಾತ್ರೆಯನ್ನು ದೆಹಲಿಗೆ ಮಾಡಲಿ. ರಾಜ್ಯದಿಂದ 19 ಜನ ಸಂಸದರು ಇದ್ದರೂ ಬಜೆಟ್‌ನಲ್ಲಿ ಅನ್ಯಾಯವಾಗಿದೆ. ಹೀಗಾಗಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

     

    ಸುಪ್ರೀಂಕೋರ್ಟ್ ಸೂಚನೆಯ ನಂತರ ಬರ ಪರಿಹಾರ ನೀಡಿದರು. 5 ಜನ ಮಂತ್ರಿಗಳು ಏನ್ ಮಾಡಿದ್ದೀರಿ? ಮಹದಾಯಿ, ಮೇಕೆದಾಟು ಏನು ಆಯ್ತು? ನಿರ್ಮಲಾ ಸೀತಾರಾಮನ್ ತಾಯಿ ಹೃದಯ ಕರಗಲಿಲ್ಲವಾ?

    ಆಂಧ್ರ, ಬಿಹಾರಕ್ಕೆ ವಿಶೇಷ ಪ್ಯಾಕೇಜ್ ಸರ್ಕಾರ ಉಳಿಸಿದ್ದಕ್ಕೆ ನೀಡಿದ್ದಾ? ಮೋದಿ 400 ಸ್ಥಾನ ಸಿಗಲಿದೆ ಎಂದರು. ಆದರೆ ಜನ 200ಕ್ಕೆ ಇಳಿಸಿದರು. ಕೊನೆದಾಗಿ ಜೆಡಿಯು, ಟಿಡಿಪಿ ಬೆಂಬಲ ಪಡೆದು ಸರ್ಕಾರ ರಚನೆ ಮಾಡಿದರು. ಕೇಂದ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.

    2028ರವರೆಗೂ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ‌ಇರಲಿದೆ. ಬಿಜೆಪಿ-ಜೆಡಿಎಸ್ ಷಡ್ಯಂತ್ರಗಳಿಗೆ ನಾವು ಉತ್ತರ ನೀಡುತ್ತೇವೆ. ಬಿಜೆಪಿ-ಜೆಡಿಎಸ್ ಕಾಲದ ಹಗರಣಗಳನ್ನ ರಾಜ್ಯದ ಜನರಿಗೆ ಹೇಳುತ್ತೇವೆ ಎಂದರು.

  • ನರೇಂದ್ರ ಮೋದಿ ಸರ್ಕಾರ ಸ್ವರ್ಗ ತೋರಿಸ್ತೀನಿ ಅಂತ ಜನರಿಗೆ ನರಕ ತೋರಿಸಿದ್ದಾರೆ: ಸಲೀಂ ಅಹಮದ್

    ನರೇಂದ್ರ ಮೋದಿ ಸರ್ಕಾರ ಸ್ವರ್ಗ ತೋರಿಸ್ತೀನಿ ಅಂತ ಜನರಿಗೆ ನರಕ ತೋರಿಸಿದ್ದಾರೆ: ಸಲೀಂ ಅಹಮದ್

    ಬೆಂಗಳೂರು: ನರೇಂದ್ರ ಮೋದಿ (Narendra Modi) ಸರ್ಕಾರ ಜನರಿಗೆ ಸ್ವರ್ಗ ತೋರಿಸುತ್ತೇವೆ ಎಂದು ಹೇಳಿ ಬೆಲೆ ಏರಿಕೆ ಮಾಡಿ ನರಕ ತೋರಿಸಿದ್ದಾರೆ ಎಂದು ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಸಲೀಂ ಅಹಮದ್ (Saleem Ahmed) ಬಿಜೆಪಿ (BJP) ವಿರುದ್ಧ ಕಿಡಿಕಾರಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕನಿಷ್ಠ 20 ಸ್ಥಾನ ಗೆಲ್ಲಬೇಕು ಎಂದು ಗುರಿ ಇದೆ. ಈಗಾಗಲೇ ದೆಹಲಿಯಲ್ಲಿ (Delhi) ನಡೆದ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕು ಎಂದು ನಿರ್ಧಾರ ಆಗಿದೆ. 20 ಸ್ಥಾನ ಗೆಲ್ಲುವ ಗುರಿ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಿದ ರೀತಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕು. ಇದಕ್ಕೆ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ದೇಶಾದ್ಯಂತ 508 ರೈಲ್ವೆ ನಿಲ್ದಾಣ ಪುನರಾಭಿವೃದ್ಧಿಗೆ ಮೋದಿ ಚಾಲನೆ

    ಬಿಜೆಪಿ ಮತ್ತೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ಯಾವ ಮಹಾ ಘನಕಾರ್ಯ ಮಾಡಿದ್ದೀರಾ ಎಂದು ಜನ ನಿಮಗೆ ಮತ ಹಾಕುತ್ತಾರೆ? ನಾವು ಬಂದ ಎರಡು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದಿದ್ದೇವೆ. ನುಡಿದಂತೆ ನಾವು ನಡೆದಿದ್ದೇವೆ. ಮುಂದಿನ ಆರು ತಿಂಗಳು ಇದನ್ನು ಮನೆ ಮನೆಗೆ ತಲುಪಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: 7 ಎಕರೆಯಲ್ಲಿ ಟೊಮೆಟೋ ಬೆಳೆದು ಕೋಟಿ ರೂ. ಸಂಪಾದಿಸಿದ ರೈತ

    ಬಿಜೆಪಿ ಬರೀ ಸುಳ್ಳು ಹೇಳುತ್ತಿದೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಗೆ ಆಸ್ಕರ್ ಪ್ರಶಸ್ತಿ ಕೊಡಬಹುದು. 15 ಲಕ್ಷ ಹಣ ಪ್ರತಿಯೊಬ್ಬರ ಖಾತೆಗೆ ಕೊಡುತ್ತೇವೆ ಎಂದು ಕೊಡಲಿಲ್ಲ. ನಮ್ಮ ಸರ್ಕಾರ ಬಂದರೆ ರೈತರಿಗೆ ಡಬಲ್ ಹಣ ಮಾಡುತ್ತೇವೆ ಎಂದು ಏನೂ ಮಾಡಲಿಲ್ಲ. ಯುವಕರಿಗೆ ಉದ್ಯೋಗ ಕೊಡುತ್ತೇವೆ ಎಂದು ಮೋಸ ಮಾಡಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಚಿತ್ರದುರ್ಗ ಶಾಸಕನಿಂದ ಮತ್ತೊಂದು ಯಡವಟ್ಟು – ಬೆಂಕಿಯಿಡಲು ಪ್ರಚೋದಿಸಿದ ವಿಡಿಯೋ ವೈರಲ್

    ದೇಶದ ಜನ ಬದಲಾವಣೆ ಬಯಸಿದ್ದಾರೆ. ಈ ಬಾರಿ ದೇಶದಲ್ಲಿ ಇಂಡಿಯಾ ಅಧಿಕಾರಕ್ಕೆ ಬರುತ್ತೆ. ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 20 ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಮೃತ್ ಭಾರತ್; ರಾಜ್ಯದ 13 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ – ಮೋದಿಯಿಂದ ಇಂದು ಚಾಲನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

    ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

    ಬೆಂಗಳೂರು: ಹಿಜಬ್ ವಿವಾದದ ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ವಿಷಯ ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಕಾರಣವಾಯಿತು. ಬಜೆಟ್ ಚರ್ಚೆ ವೇಳೆ ಕಾಂಗ್ರೆಸ್‍ನ ಸದಸ್ಯ ಸಲೀಂ ಅಹಮದ್, ತೀರ್ಪು ಯಾಕೆ ಈ ರೀತಿ ಬಂದಿತು ಎನ್ನುವ ಕುರಿತು ಚರ್ಚೆ ನಡೆಯಬೇಕು ಎಂದರು. ಈ ವಿಚಾರಕ್ಕೆ ಸದನದಲ್ಲಿ ಗಲಾಟೆ ಪ್ರಾರಂಭ ಆಯಿತು.

    ಸಲೀಂ ಅಹಮದ್ ಮಾತನಾಡಿ, ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಏಕೆ ಬಂತು. ಹಿಜಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಯಾಕೆ ಹೀಗೆ ಬಂತು. ಸರ್ಕಾರದ ಆದೇಶವನ್ನೇ ಕೋರ್ಟ್ ಎತ್ತಿ ಹಿಡಿಯಿತು. ಹಿಜಬ್, ಬುರ್ಕಾ ನೂರಾರು ವರ್ಷದಿಂದ ಇದೆ. ಇದು ನಮ್ಮ ಧರ್ಮದ ಪದ್ಧತಿ. ಆದ್ರೆ ವಿವಾದ ಈಗ ಯಾಕಾಯಿತು ಎಂದು ಪ್ರಸ್ತಾಪಿಸಿದರು.

    ಈ ವೇಳೆ ಮಧ್ಯ ಪ್ರವೇಶ ಮಾಡಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಹೈಕೋರ್ಟ್ ತೀರ್ಪನ್ನು ಒಪ್ಪುತ್ತೀರಾ ಅಥವಾ ವಿರೋಧಿಸುತ್ತೀರಾ? ಎಂದು ಪ್ರಶ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಹರಿ ಪ್ರಸಾದ್, ನಮ್ಮ ನಿಲುವನ್ನು ಸುಪ್ರೀಂ ಕೋರ್ಟ್‍ಗೆ ಹೇಳುತ್ತೇವೆ. ನಾವು ಇಲ್ಲಿ ಅದನ್ನು ಹೇಳಬೇಕಿಲ್ಲ, ನಮ್ಮ ಸದಸ್ಯರು ಮಾತನಾಡುವುದನ್ನು ಕೇಳಿಸಿಕೊಳ್ಳಲು ಹೇಳಿ ಎಂದು ಆಗ್ರಹಿಸಿದರು.

    ಮತ್ತೆ ಮಾತು ಮುಂದುವರೆಸಿದ ಹರಿಪ್ರಸಾದ್, ಭಾಷಣದ ನಡುವೆ ನಮ್ಮ ಸದಸ್ಯರು ಸಮ್ಮತಿಸಲಿಲ್ಲ ಎಂದರೆ ಪ್ರತಿಪಕ್ಷ ನಾಯಕರಾಗಲಿ, ಸಭಾನಾಯಕರಿಗಾಗಲಿ ಮಧ್ಯದಲ್ಲಿ ಮಾತನಾಡಲು ಅವಕಾಶವಿಲ್ಲ. ಅವರಿಗೇನು ಕೊಂಬಿಲ್ಲ. ರೂಲ್ ಬುಕ್‍ನಲ್ಲಿಯೂ ಅವಕಾಶವಿಲ್ಲ ಎಂದರು.

    ಇದಕ್ಕೆ ಪ್ರತಿಕ್ರಿಯೆ ನೀಡಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಇದು ಕೊಂಬಿನ ವಿಷಯ ಅಲ್ಲ. ಯಾರಿಗೇನು ಕೊಂಬು ಇಲ್ಲ. ಸರ್ಕಾರದ ವಿರುದ್ಧ ಆರೋಪ ಬಂದಾಗ ನಾವು ಕೆಲವೊಂದು ಸ್ಪಷ್ಟೀಕರಣ ನೀಡಬೇಕು ಆಗ ಮಾತನಾಡಬೇಕಾಗಲಿದೆ. ಅದಕ್ಕೆ ಎದ್ದು ನಿಂತಾಗ ಸಭಾಪತಿಗಳ ಸಮ್ಮತಿ ಮೇರೆಗೆ ಪ್ರತಿಪಕ್ಷ ನಾಯಕ, ಸಭಾ ನಾಯಕರಿಗೆ ಮಾತನಾಡಲು ಅವಕಾಶ ಕೊಡುವ ಸಂಪ್ರದಾಯ ಇದೆ ಎಂದು ಪ್ರತಿಪಾದಿಸಿದರು.

    ಭಾಷಣ ಮುಂದುವರೆಸಿದ ಸಲೀಂ ಅಹಮದ್, ಕೋರ್ಟ್ ತೀರ್ಪನ್ನು ಪ್ರತಿಯೊಬ್ಬರೂ ಒಪ್ಪಬೇಕು. ನಾವು ಒಪ್ಪುತ್ತೇವೆ. ಆದರೆ ಈ ಘಟನೆ ಯಾಕಾಯಿತು? ಕೇಸರಿ ಶಾಲು ಪದ್ಧತಿ ಮೊದಲು ಇತ್ತಾ? ಅಣ್ಣ, ತಮ್ಮಂದಿರ ರೀತಿ ಇದ್ದ ವಿದ್ಯಾರ್ಥಿಗಳು ಈಗ ಮುಖ ಕೊಟ್ಟು ಮಾತನಾಡದ ಸ್ಥಿತಿ ಇದೆ. ಇದಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

    ಇದಕ್ಕೆ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ನೆಮ್ಮದಿಯಿಂದ ಇದ್ದ ಮಕ್ಕಳು ಇವರ ಚಿತಾವಣೆಯಿಂದ ಹಿಜಬ್ ಧರಿಸಿ ಹೋದರು ಎಂದು ಕಾಂಗ್ರೆಸ್ ವಿರುದ್ಧ ನೇರ ಆರೋಪ ಮಾಡಿದರು. ಈ ವೇಳೆ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಕಾಂಗ್ರೆಸ್, ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದನ್ನೂ ಓದಿ: ಎಸ್‍ಎಫ್‍ಐ ಉಗ್ರರ ಸಂಘಟನೆಯಾಗಿದ್ದು ಬ್ಯಾನ್ ಮಾಡಿ: ಕಾಂಗ್ರೆಸ್ ಸಂಸದ ಆಕ್ರೋಶ

    ಮತ್ತೆ ಮಾತನಾಡಿದ ಸಲೀಂ ಅಹಮದ್, ಇಂದು ಕೋಮು ಸಾಮರಸ್ಯಕ್ಕೆ ಧಕ್ಕೆ ಬಂದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮಕ್ಕಳಲ್ಲಿ ಬೇಧ ಭಾವ ತಂದಿದ್ದಾರೆ ಇದಕ್ಕೆ ಯಾರು ಕಾರಣ? ವಿದ್ಯಾರ್ಥಿಗಳಲ್ಲಿ ಕಂದಕ ತರುವ ಹಿಂದೂ, ಮುಸ್ಲಿಂ ಯಾವುದೇ ಸಂಘಟನೆ ಇರಲಿ ಬ್ಯಾನ್ ಮಾಡಲಿ ಎಂದಿದ್ದೇವೆ. ಈ ಸರ್ಕಾರಕ್ಕೆ ಧಮ್ ಇದೆಯಾ? ಅಂತ ಪ್ರಶ್ನೆ ಮಾಡಿದ್ರು. ಶಿವಮೊಗ್ಗ ಹರ್ಷ ಕೊಲೆಗೆ 25 ಲಕ್ಷ ರೂ. ಕೊಟ್ಟರು. ಗದಗದಲ್ಲಿ ಮುಸ್ಲಿಂ ವ್ಯಕ್ತಿ ಕೊಲೆಗೆ ಪರಿಹಾರ ಕೊಟ್ಟಿಲ್ಲ. ಯಾಕೆ ಈ ತಾರತಮ್ಯ ಎಂದು ಪ್ರಶ್ನಿಸಿದರು. ಮತ್ತೆ ಸದನದಲ್ಲಿ ಗದ್ದಲ ಗಲಾಟೆ ಆಗಿ ಸಭಾಪತಿಗಳು ಮಧ್ಯೆ ಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು. ಇದನ್ನೂ ಓದಿ: ಕಾಶ್ಮೀರ್ ಫೈಲ್ಸ್ ಡೌನ್ಲೋಡಿಂಗ್ ಲಿಂಕ್ ಕ್ಲಿಕ್ ಮಾಡಿದ್ರೆ ಬ್ಯಾಂಕ್ ಖಾತೆಗೆ ಕನ್ನ

  • ನವೀನ್ ಕುಟುಂಬಸ್ಥರಿಗೆ 1 ಲಕ್ಷ ರೂ. ಚೆಕ್ ವಿತರಿಸಿದ ಸಲೀಂ ಅಹಮದ್

    ನವೀನ್ ಕುಟುಂಬಸ್ಥರಿಗೆ 1 ಲಕ್ಷ ರೂ. ಚೆಕ್ ವಿತರಿಸಿದ ಸಲೀಂ ಅಹಮದ್

    ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಕನ್ನಡಿಗ ನವೀನ್ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭೇಟಿ ನೀಡಿದ್ದಾರೆ.

    ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರೋ ನಿವಾಸಕ್ಕೆ ಭೇಟಿ ನೀಡಿ, ನವೀನ್ ಭಾವಚಿತ್ರಕ್ಕೆ ಹೂಮಾಲೆ ಹಾಕಿ ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ಕುಟುಂಬಸ್ಥರಿಗೆ ಸಲೀಂ 1 ಲಕ್ಷ ರೂ. ಚೆಕ್ ವಿತರಿಸಿದರು. ಈ ವೇಳೆ ನವೀನ್ ಪಾರ್ಥೀವ ಶರೀರ ತರಬೇಕೆಂಬುದು ಕುಟುಂಬಸ್ಥರು ಸಲೀಂ ಮುಂದೆ ಆಗ್ರಹಿಸಿದರು. ಇದನ್ನೂ ಓದಿ: ಮೃತ ನವೀನ್ ಕುಟುಂಬಕ್ಕೆ ಸಾಂತ್ವನ ಹೇಳಿ 25 ಲಕ್ಷ ರೂ. ಚೆಕ್ ಕೊಟ್ಟ ಸಿಎಂ

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ, ಆದಷ್ಟು ಬೇಗ ಸರ್ಕಾರ ನವೀನ್ ಪಾರ್ಥಿವ ಶರೀರ ತರುವ ಕೆಲಸ ಮಾಡಬೇಕು. ಮೃತದೇಹ ತರುವುದರ ಜೊತೆಗೆ ಉಕ್ರೇನ್ ನಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಮಾಡಬೇಕು. ನವೀನ್ ಸಾವು ಸಾಕಷ್ಟು ದುಃಖ ತಂದಿದೆ. ನಮ್ಮಲ್ಲಿನ ಶಿಕ್ಷಣ ವ್ಯವಸ್ಥೆ ಬದಲಾಗಬೇಕು. ನವೀನ್ ಸಾವು ರಾಜ್ಯಕ್ಕೆ ಒಂದು ಸಂದೇಶ ಕೊಟ್ಟಿದೆ ಎಂದು ಹೇಳಿದರು.

  • ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 35 ಸ್ಥಾನ ಗೆಲ್ಲಲಿದೆ: ಸಲೀಂ ಅಹಮದ್ ವಿಶ್ವಾಸ

    ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 35 ಸ್ಥಾನ ಗೆಲ್ಲಲಿದೆ: ಸಲೀಂ ಅಹಮದ್ ವಿಶ್ವಾಸ

    ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಚುನಾಣೆಯ 55 ಸ್ಥಾನಗಳ ಪೈಕಿ ಕನಿಷ್ಠ 35 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    SALEEM AHMED

    ಕಲಬುರಗಿ ಮಹಾನಗರ ಚುನಾವಣೆ ಹಿನ್ನೆಲೆ ಡಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನರ ಹಿತ ಕಾಪಾಡಲು ವಿಫಲವಾಗಿವೆ. ಸುಮಾರು 2,000 ಕೋಟಿಯಷ್ಟು ರಾಜ್ಯ ಸರ್ಕಾರ ಭ್ರಷ್ಟಾಚಾರ ಎಸಗಿದೆ. ಕೋವಿಡ್ ಎರಡನೇ ಅಲೆಯನ್ನು ಎದುರಿಸಲು ಸರ್ಕಾರ ವಿಫಲವಾಗಿದ್ದು, ಸಾವಿನ ಸಂಖ್ಯೆ ಕಡಿಮೆ ತೋರಿಸುವ ಮೂಲಕ ಜನರಿಗೆ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಸಾವಿನ ಸಂಖ್ಯೆ ಕುರಿತು ಆಂತರಿಕ ತನಿಖೆ ನಡೆಸುತ್ತಿದೆ. ರಾಜ್ಯ ಸರ್ಕಾರ ಕೋವಿಡ್‍ನಿಂದ ನಿಧನರಾದ ವ್ಯಕ್ತಿಗಳ ಕುಟುಂಬದವರಿಗೆ ತಲಾ ರೂ. 5 ಲಕ್ಷ ಪರಿಹಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

    SALEEM AHMED

    ಮೊಟ್ಟೆ ಹಗರಣದಲ್ಲಿಭಾಗಿಯಾಗಿರುವ ಶಶಿಕಲಾ ಜೊಲ್ಲೆ ಪ್ರಮಾಣ ಸ್ವೀಕಾರಕ್ಕೆ ಬರಲು ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಬರಲು ಜೀರೋ ಟ್ರಾಫಿಕ್ ಮಾಡಿದ್ದು ನೋಡಿದರೆ ಸರ್ಕಾರದ ನೈತಿಕತೆ ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ. ಇತ್ತೀಚಿಗೆ ನಾಲ್ವರು ಕೇಂದ್ರ ಸಚಿವರು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ನಡೆಸಿದರು. ಯಾವ ಪುರುಷಾರ್ಥಕ್ಕೆ ಈ ಕಾರ್ಯಕ್ರಮ ನಡೆಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ ಅಪಾರ ಜನರು ಸಾವು ನೋವು ಅನುಭವಿಸಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಜನರಿಗೆ ಅಚ್ಚೇದಿನ್ ಭರವಸೆ ನೀಡಿ ಅತ್ಯಂತ ಕೆಟ್ಟ ದಿನಗಳಲ್ಲಿ ನರಳುವಂತೆ ಮಾಡಿದ್ದಕ್ಕೆ, ಸುಮಾರು 13,000 ಕೋಟಿ ಜಿಎಸ್‍ಟಿ ಅನುದಾನ ಬಿಡುಗಡೆ ಮಾಡಿಸಲು ಸಾಧ್ಯವಾಗದ್ದಕ್ಕೆ ಬಿಜೆಪಿ ಮಂತ್ರಿಗಳು ಕ್ಷಮೆ ಕೇಳುವ ಯಾತ್ರೆ ನಡೆಸಬೇಕಿತ್ತು ಎಂದಿದ್ದಾರೆ. ಇದನ್ನೂ ಓದಿ:ಚಾಮುಂಡಿ ದೇವಿಯ ತಪ್ಪಲಿನಲ್ಲಿ ಅತ್ಯಾಚಾರ ಆಗಿರುವುದು ಅಪಮಾನ: ಜಯ ಮೃತ್ಯುಂಜಯ ಸ್ವಾಮೀಜಿ

    ಯಾದಗಿರಿಯಲ್ಲಿ ಕೇಂದ್ರ ಸಚಿವರ ಸ್ವಾಗತ ಸಮಯದಲ್ಲಿ ಗಾಳಿಯಲ್ಲಿ ಗುಂಡುಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಲೀಂ ಅಹಮದ್ ಅವರು ಉತ್ತರ ಪ್ರದೇಶ ಹಾಗೂ ಬಿಹಾರದ ಸಂಸ್ಕೃತಿಯನ್ನು ಬಿಜೆಪಿ ರಾಜ್ಯದಲ್ಲಿ ಪರಿಚಯಿಸುತ್ತಿದೆ ಇದು ನಾಚಿಕೆಗೇಡು. ಮಾಜಿ ಸಚಿವರೊಬ್ಬರ ಅಣತಿಯಂತೆ ಆ ಘಟನೆ ನಡೆದಿದ್ದು, ಹೋಂ ಮಿನಿಸ್ಟರ್ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

    ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡುವಾಗ ಗೃಹ ಸಚಿವರು ಉಢಾಫೆಯಾಗಿ ಉತ್ತರಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಜ್ಯದ ಜನರು ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನವಿರೋಧಿ ನೀತಿಯಿಂದಾಗಿ ರೋಸಿ ಹೋಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಈ ಚುನಾವಣೆಯಲ್ಲಿ ಆರಿಸಿ ಕಳಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಒಂದು ಹೊಸತನಕ್ಕೆ ನಾಂದಿ ಹಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ:ನೋಬಾಲ್ ಎಸೆದು ಕೆಂಗಣ್ಣಿಗೆ ಗುರಿಯಾದ ಟೀಂ ಇಂಡಿಯಾ, ಇಂಗ್ಲೆಂಡ್ ಬೌಲರ್​ಗಳು

    ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆ ಟಿಕೆಟ್ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಾಗಿದೆ. ಅತೃಪ್ತರೆಲ್ಲ ಬೇರೆ, ಬೇರೆ ಪಕ್ಷ ಸೇರಿದ್ದಾರೆ. ಇದು ಪಕ್ಷಕ್ಕೆ ಹಿನ್ನೆಡೆಯಾಗಲಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಜೊತೆಗೆ ಯುವಕರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. 55 ಸೀಟುಗಳಲ್ಲಿ 36 ಜನ ಹೊಸಬರಿಗೆ ಅವಕಾಶ ನೀಡಲಾಗಿದೆ. ಟಿಕೆಟ್ ಹಂಚಿಕೆಯಲ್ಲಿ ಸಹಜವಾಗಿ ಎಲ್ಲ ಪಕ್ಷದಲ್ಲಿ ಅಸಮಾಧಾನ ಇದ್ದೇ ಇರುತ್ತದೆ. ಸಾಧ್ಯವಾದಷ್ಟು ಸಮಸ್ಯೆ ಬಗೆಹರಿಸಲಾಗಿದೆ. ಇಷ್ಟಾಗಿಯೂ ಕೆಲವರು ಎಂಐಎಂ ಹಾಗೂ ಜೆಡಿಎಸ್‍ಗೆ ಹೋಗಿದ್ದಾರೆ. ಆದರೂ ಕೂಡಾ ನಮ್ಮ ಪಕ್ಷಕ್ಕೆ ನಷ್ಟವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಇದೇ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಶಾಸಕ ಅಜಯ್ ಸಿಂಗ್ ಅವರು ನಮ್ಮ ಪಕ್ಷದಲ್ಲಿ ಟಿಕೆಟ್ ಹಂಚಿಕೆಯಾದ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಬಿಜೆಪಿಯಲ್ಲಿ ಅಭ್ಯರ್ಥಿಗಳು ಸಿಗದೆ ಕೆಲಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹಾಕಲು ವಿಫಲವಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಜನರ ಮರ್ಯಾದೆಯನ್ನೆ ಬಂಡವಾಳ ಮಾಡಿಕೊಂಡಿದ್ದ ಗ್ಯಾಂಗ್ ರೇಪ್ ಕಿರಾತಕರು

    ರಾಷ್ಟ್ರೀಯ ಪಕ್ಷ ಎಂದು ಹೇಳುವ ಬಿಜೆಪಿ ತನ್ನ ಬಿ ಟೀಮ್ ಆದ ಎಂಐಎಂಗೆ ಸ್ಥಾನ ಬಿಟ್ಟುಕೊಟ್ಟಿದೆ ಎಂದು ಕುಟುಕಿದ ಸಲೀಂ ಅಹಮದ್, ಇದು ಆ ಪಕ್ಷದ ಚುನಾವಣಾ ನೀತಿಯನ್ನು ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಮಾಜಿ ಎಂಎಲ್‍ಸಿ ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಮತ್ತಿತರಿದ್ದರು.

  • ಬಿಜೆಪಿ ಜನರಿಗೆ ನರಕ ದರ್ಶನ ಮಾಡಿಸುತ್ತಿದೆ: ಸಲೀಂ ಅಹಮದ್

    ಬಿಜೆಪಿ ಜನರಿಗೆ ನರಕ ದರ್ಶನ ಮಾಡಿಸುತ್ತಿದೆ: ಸಲೀಂ ಅಹಮದ್

    ಚಿತ್ರದುರ್ಗ: ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚುನಾವಣೆ ಪೂರ್ವದಲ್ಲಿ ಜನರಿಗೆ ಸ್ವರ್ಗ ತೋರಿಸುತ್ತೇವೆ ಎಂದು ಹೇಳಿದ್ದರು. ಇದೀಗ ನರಕ ತೋರಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆರೋಪಿಸಿದ್ದಾರೆ.

    ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಧಿಕಾರ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ರಾಜ್ಯ ಸರ್ಕಾರ ತುಘಲಕ್ ಆಡಳಿತ ನಡೆಸುತ್ತಿದೆ. ಹೀಗಂತ ಬಿಜೆಪಿ ಮುಖಂಡರೇ ಮುಖ್ಯಮಂತ್ರಿಗಳ ಮೇಲೆ ಆರೋಪಿಸುತ್ತಿದ್ದಾರೆ. ಇದು ಸರ್ಕಾರದ ಕಾರ್ಯವೈಖರಿಯನ್ನು ತೋರಿಸುತ್ತದೆ ಎಂದು ಲೇವಡಿ ಮಾಡಿದರು.

    ಕೊರೊನಾದಿಂದ ಸುಮಾರು 3 ಲಕ್ಷ ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆದರೆ ರಾಜ್ಯ ಸರ್ಕಾರ 30 ಸಾವಿರ ಜನ ಮಾತ್ರ ಸಾವನ್ನಪ್ಪಿದ್ದಾರೆ ಎಂದು ಸುಳ್ಳು ವರದಿ ನೀಡುತ್ತಿದೆ. ಅಲ್ಲದೆ ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದು, ಈ ಮರಣವನ್ನು ರಾಜ್ಯ ಸರ್ಕಾರ ನೆಡೆಸಿದ ಕೊಲೆ ಎಂದು ನಾವು ಪರಿಗಣಿಸುತ್ತೇವೆ ಎಂದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕು. ಬೆಲೆ ಏರಿಕೆ ಖಂಡಿಸಿ ಜು.7ರಂದು ರಾಜ್ಯದ್ಯಂತ ಸೈಕಲ್ ಜಾಥಾ ನಡೆಸಲಿದ್ದೇವೆ. ಪಾರ್ಲಿಮೆಂಟ್ ನಿಂದ ಗ್ರಾಮ ಪಂಚಾಯಿತಿವರಿಗೆ ಸಹಾಯ ಹಸ್ತ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷ ನಡೆಸುತ್ತಿದೆ. ಕೋವಿಡ್ ಬಾಧಿತ ಕುಟುಂಬಗಳನ್ನು ಭೇಟಿ ಮಾಡುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಜನರ ಕೊರೊನಾ ವಾರಿಯರ್ಸ್ ನೇಮಕ ಮಾಡುತ್ತೇವೆ ಎಂದು ಹೇಳಿದರು.

    ಅಧಿಕಾರ ಮತ್ತು ಹಣಕ್ಕಾಗಿ ನಮ್ಮ ಪಕ್ಷದ ಕೆಲವು ಶಾಸಕರು ಮಾತೃ ಪಕ್ಷಕ್ಕೆ ದ್ರೋಹ ಮಾಡಿ ಹೋಗಿದ್ದಾರೆ. ಆದರೂ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ. ಸದ್ಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ನಾವು ಹೆಚ್ಚಿನ ಒತ್ತುಕೊಟ್ಟು ಕೆಲಸ ಮಾಡಲಿದ್ದೇವೆ ಎಂದರು. ಈ ವೇಳೆ ಶಾಸಕ ರಘುಮೂರ್ತಿ, ಮಾಜಿ ಸಚಿವ ಆಂಜನೇಯ, ಮಾಜಿ ಶಾಸಕರಾದ ಎಸ್.ತಿಪ್ಪೇಸ್ವಾಮಿ, ಉಮಾಪತಿ, ಬಿಜಿ ಗೋವಿಂದಪ್ಪ, ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್ ಪೀರ್ ಹಾಜರಿದ್ದರು.

  • ಮುಸ್ಲಿಂ ನಾಯಕರ ಹೆಸರು ಹೇಳಿಲ್ಲವೆಂದು ಬಡಿದಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

    ಮುಸ್ಲಿಂ ನಾಯಕರ ಹೆಸರು ಹೇಳಿಲ್ಲವೆಂದು ಬಡಿದಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

    ಹಾಸನ: ಕೊರೊನಾ ಭಯವನ್ನೂ ಮರೆತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಎದುರಲ್ಲೇ ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ.

    ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಘಟನೆ ನಡೆದಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿರುವ ಹಿನ್ನೆಲೆ ಪದಗ್ರಹಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಈ ವೇಳೆ ಮುಸ್ಲಿಂ ನಾಯಕರ ಹೆಸರು ಹೇಳಲಿಲ್ಲವೆಂದು ಅಲ್ಪ ಸಂಖ್ಯಾತ ಘಟಕ ಮಾಜಿ ಅಧ್ಯಕ್ಷ ಅಬ್ದುಲ್ ಆದಿಲ್ ಗಲಾಟೆ ತೆಗೆದಿದ್ದಾರೆ.

    ಈ ವೇಳೆ ಎರಡು ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಇದನ್ನು ಕಂಡು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಕಿಡಿಕಾರಿದ್ದು, ಇದು ಕಾಂಗ್ರೆಸ್ ಕಟ್ಟುವ ರೀತೀನಾ, ಅದಕ್ಕೆ ಕಾಂಗ್ರೆಸ್ ಈ ರೀತಿ ಆಗಿರೋದು ಎಂದು ಆಕ್ರೋಶ ಹೊರ ಹಾಕಿದರು. ಜಿಲ್ಲಾಧ್ಯಕ್ಷರೇ ಗಲಾಟೆ ಮಾಡಿದವರ ಲಿಸ್ಟ್ ಬೇಕು. ಪಾರ್ಟಿಯಿಂದ ಅವರನ್ನು ಸಸ್ಪೆಂಡ್ ಮಾಡಬೇಕು, ಇಲ್ಲದಿದ್ದರೆ ಇದು ಸರಿ ಹೋಗಲ್ಲ ಎಂದು ಆಕ್ರೋಶ ಹೊರಹಾಕಿದರು.

    ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ರಾಜ್ಯ ಸರ್ಕಾರ ಕೊರೊನಾ ನಿಭಾಯಿಸುವಲ್ಲಿ ವಿಫಲವಾಗಿದೆ. ಈ ಸರ್ಕಾರಕ್ಕೆ ಸಾಮಾನ್ಯ ಜ್ಞಾನವೇ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಕಣ್ಣಿದ್ದೂ ಕುರುಡಾಗಿವೆ. ರಾಜ್ಯ ಸರ್ಕಾರ 2,500 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಶ್ವೇತಪತ್ರ ಹೊರಡಿಸಲಿ. ರಾಜ್ಯದ ಜನ ಕೊರೊನಾದಿಂದ ಪರಿತಪಿಸುತ್ತಿದ್ದರೂ, ಸಮಸ್ಯೆ ಬಗೆಹರಿಸಲು ಇವರಿಗೆ ಸಮಯವಿಲ್ಲ. ಅಧಿಕಾರಕ್ಕಾಗಿ ಡಿನ್ನರ್, ಟಿಫನ್ ಸಭೆ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

  • ಹೆಚ್‍ಡಿಕೆ, ಪರಂ ಸರ್ಕಾರದಲ್ಲಿ ಸಿದ್ದರಾಮಯ್ಯ ಆಪ್ತರೆಲ್ಲಾ ಔಟ್!

    ಹೆಚ್‍ಡಿಕೆ, ಪರಂ ಸರ್ಕಾರದಲ್ಲಿ ಸಿದ್ದರಾಮಯ್ಯ ಆಪ್ತರೆಲ್ಲಾ ಔಟ್!

    ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ನೇಮಕವಾದವರಿಗೆ ಕುಮಾರಸ್ವಾಮಿ, ಪರಮೇಶ್ವರ್ ನೇತೃತ್ವದ ಸಮ್ಮಿಶ್ರ ಸರ್ಕಾರ ಶಾಕ್ ನೀಡಿದೆ. ಕಾನೂನು ಸಲಹೆಗಾರ, ದೆಹಲಿ ವಿಶೇಷ ಪ್ರತಿನಿಧಿಗೆ ಸರ್ಕಾರ ಗೇಟ್‍ಪಾಸ್ ನೀಡಿದೆ.

    ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾಗಿ ವಿಕಾಸ್ ಬಾನ್ಸೋಡೆ, ದೆಹಲಿಯ ವಿಶೇಷ ಹೆಚ್ಚುವರಿ ಪ್ರತಿನಿಧಿಯಾಗಿ ಸಲೀಂ ಅಹಮದ್ ಅವರನ್ನು ಸಿದ್ದರಾಮಯ್ಯ 2017ರ ಫೆಬ್ರವರಿಯಲ್ಲಿ ನೇಮಿಸಿದ್ದರು. ಇಬ್ಬರಿಗೂ ಹುದ್ದೆ ನೀಡಿ ರಾಜ್ಯ ಸಚಿವ ಸ್ಥಾನಮಾನವನ್ನು ಸಿದ್ದರಾಮಯ್ಯ ನೀಡಿದ್ದರು. ಈಗ ಇಬ್ಬರನ್ನು ಹುದ್ದೆಯಿಂದ ಮುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ವಿಕಾಸ್ ಬಾನ್ಸೋಡೆ ಯಾರು?
    ಈ ಹಿಂದೆ ತಿರುಪತಿ ದೇವಸ್ಥಾನದ ಕಾನೂನು ಸಲಹೆಗಾರರಾಗಿ ವಿಕಾಸ್ ಬಾನ್ಸೋಡೆ ಕೆಲಸ ಮಾಡಿದ್ದರು. ಆಂಧ್ರಪ್ರದೇಶ ಹಾಗೂ ಉತ್ತರಾಂಚಲ ರಾಜ್ಯಗಳ ಬೇರೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ನಲ್ಲಿ ವಕೀಲರಾಗಿ ಕಾರ್ಯ ನಿರ್ವಹಿಸಿದ್ದ ಇವರು ಕರ್ನಾಟಕದ ರಾಜ್ಯಪಾಲರಾಗಿದ್ದ ಎಚ್.ಆರ್. ಭಾರದ್ವಾಜ್ ಅವರ ಕಾನೂನು ಸಲಹೆಗಾರರಾಗಿಯೂ ಕೆಲಸ ಮಾಡಿದ್ದರು. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸಲು ನಿಯೋಜನೆಯಾಗಿದ್ದ ಲೋಕಾಯುಕ್ತದ ಎಸ್‍ಐಟಿಯ ಕಾನೂನು ಸಲಹೆಗಾರರನ್ನಾಗಿ ಇವರನ್ನು ನೇಮಕ ಮಾಡಲಾಗಿತ್ತು. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೀವ ಬೆದರಿಕೆ ಇದೆ ಎಂಬ ಹಿನ್ನೆಲೆಯಲ್ಲಿ ಝುಡ್ ಪ್ಲಸ್ ಸೆಕ್ಯೂರಿಟಿ ಪಡೆದುಕೊಂಡು ಬನ್ಸೊಡೆ ಸುದ್ದಿಯಾಗಿದ್ದರು.

    ಸಲೀಂ ಅಹಮದ್ ಯಾರು?
    ಎನ್‍ಎಸ್‍ಯುಐ ಅಧ್ಯಕ್ಷರಾಗಿದ್ದ ಸಲೀಂ ಅಹಮದ್ ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಆಗಿದ್ದರು. ಪರಿಷತ್‍ನ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಿದ್ದ ಇವರು ದೆಹಲಿಯಲ್ಲಿರುವ ನೆಹರು ಯುವಕ ಕೇಂದ್ರದ ಮಹಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಅವರು ಮಾಡಿರುವ ಸೇವೆಯನ್ನು ಪರಿಗಣಿಸಿ ಸಿದ್ದರಾಮಯ್ಯ ಸರ್ಕಾರ ದೆಹಲಿಯ ವಿಶೇಷ ಹೆಚ್ಚುವರಿ ಪ್ರತಿನಿಧಿಯನ್ನಾಗಿ ನೇಮಕ ಮಾಡಿತ್ತು. ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ದೊರಕಿಸುವುದು ಸೇರಿದಂತೆ ಹಲವು ಮಹತ್ತರ ಕಾರ್ಯನಿರ್ವಹಣೆಗಳ ಜವಾಬ್ದಾರಿಗಳ ಕೆಲಸಗಳನ್ನು ಸಲೀಂ ಅಹಮದ್ ಮಾಡುತ್ತಿದ್ದರು.