Tag: ಸಲೀಂ

  • ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ

    ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ

    ಬೆಂಗಳೂರು: ಅಯ್ಯೋ ಇಲ್ಲ ಸರ್.. ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ. ಅದು ನಾನು ತಪ್ಪಾಗಿ ಹೇಳಿದ್ದೇನೆ ಎಂದು ಹೇಳುವ ಮೂಲಕ ಕೆಪಿಸಿಸಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ಸಮರ್ಥನೆ ಮಾಡಿಕೊಂಡಿದ್ದಾರೆ.

    ಡಿಕೆಶಿಯವರು ಒಳ್ಳೆಯ ನಾಯಕ. ವಿಜಯೇಂದ್ರ ಬಂದ ಬಳಿಕ ಕಲೆಕ್ಷನ್ ಜಾಸ್ತಿಯಾಗಿದೆ. ಇದನ್ನು ಇಲ್ಲಿಗೆ ಬಿಟ್ಟು ಬಿಡಿ ಎಂದು ಕಾಂಗ್ರೆಸ್ ನಾಯಕರು ಪಬ್ಲಿಕ್ ಟಿವಿ ಜೊತೆ ಎಕ್ಸ್ ಕ್ಲೂಸೀವ್ ಆಗಿ ಮಾತನಾಡಿದ್ದಾರೆ.

    ನಾವು ಹೇಳಿದ ವಿಚಾರವಷ್ಟೇ ವರದಿ ಮಾಡಬೇಕಿತ್ತು. ನಾವು ಮಾತಾಡಿದ್ದು ಇವತ್ತಿನ ಪರಿಸ್ಥಿತಿ ಅಷ್ಟೇ ಎಂದು ಹೇಳುವ ಮೂಲಕ ಉಗ್ರಪ್ಪ ಅವರು ಮಾಧ್ಯಮಗಳಿಗೆ ನೀತಿ ಪಾಠ ಮಾಡಿದ್ದಾರೆ.

    ಹೇಳಿದ್ದೇನು..?
    ರಾಜ್ಯ ರಾಜಕಾರಣದಲ್ಲಿ ಪರ್ಸಂಟೇಜ್ ಕೋಲಾಹಲ ಎಬ್ಬಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಪರ್ಸಂಟೇಜ್ ಆರೋಪವೊಂದು ಕೇಳಿಬಂದಿದ್ದು, ಕಾಂಗ್ರೆಸ್ ನಾಯಕರೇ ಈ ಕಹಾನಿಯನ್ನು ಬಿಚ್ಚಿಟ್ಟಿದ್ದಾರೆ. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ, ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದೆ. ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹೇಳಿರುವುದು ಇದೀಗ ಭಾರೀ ಚರ್ಚೆಯಾಗುತ್ತಿದೆ.

    ಜಲಸಂಪನ್ಮೂಲ ಇಲಾಖೆಯಲ್ಲಿ ಹೇಗೆ ಪರ್ಸಂಟೇಜ್ ಫಿಕ್ಸಾಗುತ್ತೆ ಎಂದು ಮಾತನಾಡಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಪರ್ಸಂಟೇಜ್ ಹೇಗೆ ಹಚ್ಚಾಯ್ತು..?, ಜಲಸಂಪನ್ಮೂಲ ಇಲಾಖೆಯಲ್ಲಿ ಮೊದಲೆಲ್ಲಾ 6 ರಿಂದ 8 ಪರ್ಸೆಂಟ್ ಇತ್ತು. ಡಿಕೆಶಿ ಬಂದ ಮೇಲೆ 12 ಪರ್ಸೆಂಟ್ ಮಾಡಿದರು ಎಂದು ಸಲೀಂ ಅವರು ಉಗ್ರಪ್ಪ ಬಳಿ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ಇದೇ ವೇಳೆ ಜಲ ಸಂಪನ್ಮೂಲ ಇಲಾಖೆಯ ಕಾಂಟ್ರಾಕ್ಟರ್ ಗಳಾಗಿರುವ ಉಪ್ಪಾರ್, ಜೀ.ಶಂಕರ್ ಹನುಮಂತಪ್ಪರ ಬಗ್ಗೆಯು ಪ್ರಸ್ತಾಪ ಮಾಡಿದ್ದಾರೆ. ವಾರದ ಹಿಂದೆ ಈ ಕಾಂಟ್ರಕ್ಟರ್ ಗಳ ಮೇಲೆ ಐಟಿ ದಾಳಿ ನಡೆದಿತ್ತು. ಪ್ರೆಸ್ ಮೀಟ್ ಗೂ ಮುನ್ನ ಈ ವಿಚಾರದ ಬಗ್ಗೆ ಸಲೀಂ ಹಾಗೂ ಉಗ್ರಪ್ಪ ಚರ್ಚೆ ನಡೆಸಿದ್ದರು. ಡಿ.ಕೆ.ಶಿವಕುಮಾರ್ ಜಲ ಸಂಪನ್ಮೂಲ ಸಚಿವರಾಗಿದ್ದಾಗಲೂ ಇದೆ ಕಾಂಟ್ರಾಕ್ಟರ್ ಗಳು ಇದ್ದರು. ಡಿಕೆಶಿ ಆಪ್ತ ಮುಳಗುಂದ ಸಾಕಷ್ಟು ದುಡ್ಡು ಮಾಡಿದ್ದಾರೆ. ಮುಳಗುಂದ 50-100 ಕೋಟಿ ಮಾಡಿದ್ದಾನೆ ಅಂದ್ರೆ ಡಿಕೆ ಹತ್ತಿರ ಎಷ್ಟಿರಬೇಕು ಲೆಕ್ಕ ಹಾಕಿ. ಡಿಕೆ ಬರೀ ಕಲೆಕ್ಷನ್ ಗಿರಾಕಿ ಎಂದಿದ್ದಾರೆ.

  • ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪರ್ಸಂಟೇಜ್ ಕೋಲಾಹಲ ಎಬ್ಬಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಪರ್ಸಂಟೇಜ್ ಆರೋಪವೊಂದು ಕೇಳಿಬಂದಿದ್ದು, ಕಾಂಗ್ರೆಸ್ ನಾಯಕರೇ ಈ ಕಹಾನಿಯನ್ನು ಬಿಚ್ಚಿಟ್ಟಿದ್ದಾರೆ.

    ಹೌದು. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ, ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದೆ. ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹೇಳಿರುವುದು ಇದೀಗ ಭಾರೀ ಚರ್ಚೆಯಾಗುತ್ತಿದೆ.

    ಶಿವಮೊಗ್ಗದ ಸಾಗರ ಮೂಲದ ಸಲೀಂ. ಕಳೆದ 15 ವರ್ಷಗಳಿಂದ ಡಿಕೆಶಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ತಮ್ಮ ಆಪ್ತನಿಂದಲೇ ಪರ್ಸಂಟೇಜ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಹೇಗೆ ಪರ್ಸಂಟೇಜ್ ಫಿಕ್ಸಾಗುತ್ತೆ ಎಂದು ಮಾತನಾಡಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಪರ್ಸಂಟೇಜ್ ಹೇಗೆ ಹೆಚ್ಚಾಯ್ತು..?, ಜಲಸಂಪನ್ಮೂಲ ಇಲಾಖೆಯಲ್ಲಿ ಮೊದಲೆಲ್ಲಾ 6 ರಿಂದ 8 ಪರ್ಸೆಂಟ್ ಇತ್ತು. ಡಿಕೆಶಿ ಬಂದ ಮೇಲೆ 12 ಪರ್ಸೆಂಟ್ ಮಾಡಿದರು ಎಂದು ಸಲೀಂ ಅವರು ಉಗ್ರಪ್ಪ ಬಳಿ ಹೇಳಿದ್ದಾರೆ.

    ಇದೇ ವೇಳೆ ಜಲ ಸಂಪನ್ಮೂಲ ಇಲಾಖೆಯ ಕಾಂಟ್ರಾಕ್ಟರ್ ಗಳಾಗಿರುವ ಉಪ್ಪಾರ್, ಜೀ.ಶಂಕರ್ ಹನುಮಂತಪ್ಪರ ಬಗ್ಗೆಯು ಪ್ರಸ್ತಾಪ ಮಾಡಿದ್ದಾರೆ. ವಾರದ ಹಿಂದೆ ಈ ಕಾಂಟ್ರಕ್ಟರ್ ಗಳ ಮೇಲೆ ಐಟಿ ದಾಳಿ ನಡೆದಿತ್ತು. ಪ್ರೆಸ್ ಮೀಟ್ ಗೂ ಮುನ್ನ ಈ ವಿಚಾರದ ಬಗ್ಗೆ ಸಲೀಂ ಹಾಗೂ ಉಗ್ರಪ್ಪ ಚರ್ಚೆ ನಡೆಸಿದ್ದರು. ಡಿ.ಕೆ.ಶಿವಕುಮಾರ್ ಜಲ ಸಂಪನ್ಮೂಲ ಸಚಿವರಾಗಿದ್ದಾಗಲೂ ಇದೆ ಕಾಂಟ್ರಾಕ್ಟರ್ ಗಳು ಇದ್ದರು. ಡಿಕೆಶಿ ಆಪ್ತ ಮುಳಗುಂದ ಸಾಕಷ್ಟು ದುಡ್ಡು ಮಾಡಿದ್ದಾರೆ. ಮುಳಗುಂದ 50-100 ಕೋಟಿ ಮಾಡಿದ್ದಾನೆ ಅಂದ್ರೆ ಡಿಕೆ ಹತ್ತಿರ ಎಷ್ಟಿರಬೇಕು ಲೆಕ್ಕ ಹಾಕಿ. ಡಿಕೆ ಬರೀ ಕಲೆಕ್ಷನ್ ಗಿರಾಕಿ ಎಂದಿದ್ದಾರೆ. ಇದನ್ನೂ ಓದಿ: ಸಮಂತಾರಿಂದ ದೂರವಾಗ್ತಿದ್ದಂತೆ ಹೊಸ ಮನೆ ಖರೀದಿಸಿದ ನಟ ನಾಗಚೈತನ್ಯ

    ಸಲೀಂ- ಉಗ್ರಪ್ಪ ನಡುವಿನ ಸಂಭಾಷಣೆ ಇಂತಿದೆ.
    ಸಲೀಂ: ಏನು ಗೊತ್ತಾ..? ಮೊದಲು 6 ರಿಂದ 8 ಪರ್ಸೆಂಟ್ ಇತ್ತು. ಡಿ.ಕೆ.ಬಂದು 12 ಪರ್ಸೆಂಟ್ ಮಾಡಿದ್ರು.ಡಿಕೆ ಮಾಡ್ಸಿರೋದು ಅದೆಷ್ಟು ಮಾಡ್ಸಿದ್ರೋ ಜಾಸ್ತಿ…ಹಾ ಹಾ
    ಉಗ್ರಪ್ಪ : ಹಾ ಹಾ

    ಸಲೀಂ : ಉಪ್ಪಾರ್ ಜೀ.ಶಂಕರ್ ಹನುಮಂತಪ್ಪ ಬಳ್ಳಾರಿಯವನು ಹನುಮಂತಪ್ಪ ಗೊತ್ತಾ ಸಾರ್ ಹೊಸಪೇಟೆ ಉಪ್ಪಾರ್ ಬೆಂಗಳೂರು ಜಿ.ಶಂಕರ್ ಉಡುಪಿ
    ಉಗ್ರಪ್ಪ :ಉಪ್ಪಾರ್ ಬಿಜಾಪುರ್
    ಸಲೀಂ : ಹೋ ಬಿಜಾಪುರ…?

    ಸಲೀಂ : ಅದರಲ್ಲಿ ಇವರ್ದಲ್ಲ ಸಾರ್ ಮುಳಗುಂದ 50-100 ಕೋಟಿ.ಮುಳಗುಂದ 50-100 ಕೋಟಿ ಮಾಡಿದಾನೆ ಅಂದ್ರೆ ಇವನ ಹತ್ತಿರ ಎಷ್ಟಿರಬೇಕು ಡಿಕೆ ಹತ್ತಿರ ಲೆಕ್ಕಾ ಹಾಕಿ ಬರಿ ಕಲೆಕ್ಷನ್ ಗಿರಾಕಿ.
    ಉಗ್ರಪ್ಪ: ಅದು ನಮಗೆ ಗೊತ್ತಿಲ್ಲ.

  • ಸಮಾಧಿಯಾಗಿದ್ದ ವ್ಯಕ್ತಿಯ ಕೇಸ್ ಇದೀಗ ಮತ್ತೆ ಓಪನ್: ಬೆಂಗ್ಳೂರು ಪೊಲೀಸರ ತನಿಖೆಯ ಮೇಲೆ ಅನುಮಾನ!

    ಸಮಾಧಿಯಾಗಿದ್ದ ವ್ಯಕ್ತಿಯ ಕೇಸ್ ಇದೀಗ ಮತ್ತೆ ಓಪನ್: ಬೆಂಗ್ಳೂರು ಪೊಲೀಸರ ತನಿಖೆಯ ಮೇಲೆ ಅನುಮಾನ!

    ಬೆಂಗಳೂರು: ಸಮಾಧಿಯಾಗಿದ್ದ ವ್ಯಕ್ತಿಯ ಕೇಸ್ ಇದೀಗ ಮತ್ತೆ ಓಪನ್ ಆಗಿದೆ. ವರ್ಷದ ನಂತರ ಪ್ರಕರಣದ ಮರು ವಿಚಾರಣೆ ಆಗುತ್ತಿದ್ದು, ತನಿಖೆ ನಡೆಸಿದ ಪೊಲೀಸರ ಮೇಲೆಯೇ ಅನುಮಾನ ಎದ್ದಿದೆ.

    ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎನ್ನಲಾದ ಸಲೀಂ ಎಂಬುವರ ಪತ್ನಿ ಅಪ್ಸಾನಾ ನೀಡಿದ ದೂರಿನಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿದೆ ಎಂದು ತಿಳಿದು ಪೊಲೀಸ್ ಆಯುಕ್ತರಾದ ಸುನೀಲ್ ಕುಮಾರ್ ಇದೀಗ ಪ್ರಕರಣದ ತನಿಖೆ ನಡೆಸುವಂತೆ ಚಂದ್ರಾಲೇಔಟ್ ಪೊಲೀಸರಿಗೆ ಸೂಚಿಸಿದ್ದಾರೆ.

    ಏನಿದು ಪ್ರಕರಣ?
    ಬೆಂಗಳೂರಿನ ಗಂಗೊಂಡನಹಳ್ಳಿ ನಿವಾಸಿಯಾದ ಸಲೀಂ ಎಂಬವರು 2016 ರ ಅಕ್ಟೋಬರ್ 18 ರಂದು ದೀಪಾಂಜಲಿ ನಗರದಲ್ಲಿ ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಮೊದಲು ಚಂದ್ರಾಲೇಔಟ್‍ನ ಗುರುಶ್ರೀ ಆಸ್ಪತ್ರೆ ಸೇರಿದ್ದ ಸಲೀಂ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಗೆ ದಾಖಲಿಸಲಾಗಿತ್ತು. ಆದರೆ ಮರು ದಿನವೇ ಸಲೀಂ ಅವರನ್ನ ನಿಮ್ಹಾನ್ಸ್ ನಿಂದ ಡಿಸ್ಚಾರ್ಜ್ ಮಾಡಿಸಿದ್ದ ಸೋದರರಾದ ನದೀಂ ಹಾಗೂ ಖಲೀಮ್, ಅಣ್ಣ ತೀರಿಹೋಗಿದ್ದಾನೆಂದು ಮನೆಯವರಿಗೆ ಹೇಳಿ ಮಣ್ಣು ಮಾಡಿದ್ದರು.

    ಅನುಮಾನ ಮೂಡಿದ್ದು ಹೇಗೆ?
    ಸಲೀಂ ಅಪಘಾತಕ್ಕೆ ಒಳಗಾಗುವ ಮುನ್ನ ಸೋದರರ ನಡುವೆ ಆಸ್ತಿ ಹಂಚಿಕೆ ವಿಚಾರವಾಗಿ ಗಲಾಟೆ ಆಗಿತ್ತು. ಅಷ್ಟೇ ಅಲ್ಲದೇ ಆಸ್ಪತ್ರೆಯಲ್ಲಿ ಸಲೀಂ ಮೃತಪಟ್ಟಿರಲಿಲ್ಲ. ಹಾಗೆಯೇ ಸಲೀಂ ಮೃತಪಡದೆ ಇದ್ದುದರಿಂದ ಮರಣೋತ್ತರ ಪರೀಕ್ಷೆ ಸಹ ನಡೆದಿರಲಿಲ್ಲ. ಹೀಗಾಗಿ ಅನುಮಾನದಿಂದ ಪತಿಯ ಸಾವಿನ ಬಗ್ಗೆ ಪತ್ನಿ ಅಪ್ಸಾನಾ ಚಂದ್ರಾಲೇಔಟ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

    ಮತ್ತೆ ತನಿಖೆ ಯಾಕೆ?
    ದೂರು ದಾಖಲಿಸಿಕೊಳ್ಳಲು ಕಾಲಹರಣ ಮಾಡಿದ್ದ ಪೊಲೀಸರು 2017ರ ಮಾರ್ಚ್ 27 ರಂದು ನಾನ್ ಕಾಗ್ನಿಸೆಬಲ್ ರಿಪೋರ್ಟ್(ಗಂಭೀರವಲ್ಲದ ಕೃತ್ಯ) ಬರೆದುಕೊಟ್ಟು ಕೈತೊಳೆದುಕೊಂಡಿದ್ದರು. ಚಂದ್ರಾಲೇಔಟ್ ಠಾಣೆ ಪೊಲೀಸರು ಅಪ್ಸಾನಾ ದೂರನ್ನು ಮೊದಲಿಗೆ ತಿರಸ್ಕಾರದಿಂದ ನೋಡಿ ಕೊನೆಯಲ್ಲಿ ಎನ್‍ಸಿಆರ್ ದಾಖಲಿಸಿದ್ದಾರಾದರೂ ಅದರ ಬಗ್ಗೆಯೂ ಹಲವು ಅನುಮಾನಗಳು ಎದ್ದಿವೆ. ದಿನಾಂಕ, ಹೆಸರುಗಳೆಲ್ಲವೂ ತಪ್ಪಾಗಿದ್ದು ಬೇರೆ ಯಾರದ್ದೋ ಎನ್‍ಸಿಆರ್ ತಿದ್ದಿ ಇವರಿಗೆ ಕೊಟ್ಟಿದ್ದಾರೆಂಬ ಮಾತೂ ಕೇಳಿಬಂದಿದೆ. ಹಾಗೆಯೇ ಅಪ್ಸಾನಾ ಪತಿ ಸಲೀಂಗೆ ಪಿತ್ರಾರ್ಜಿತವಾಗಿ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಯಿದ್ದು, ಅದನ್ನ ಕಬಳಿಸಲು ಸೋದರರೇ ಕೊಲೆ ಮಾಡಿದ್ದಾರೆಂಬ ಆರೋಪವೂ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಅಪಘಾತದಲ್ಲಿ ಸಲೀಂ ಮೃತಪಟ್ಟರೂ ಸಂಬಂಧಪಟ್ಟ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಿಸಿಲ್ಲ. ಅದರ ಜತೆಗೆ ನಿಮ್ಹಾನ್ಸ್ ನಲ್ಲಿ ಸಾಯುವ ಮುನ್ನವೇ ಸಲೀಂ ಅವರನ್ನ ಡಿಸ್ಚಾರ್ಜ್ ಮಾಡಿಸಿಕೊಂಡು ಬಂದಿರುವುದು ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿದೆ. ಹೀಗಾಗಿ ಆಸ್ತಿಗಾಗಿ ಸೋದರರೇ ಕೊಲೆ ಮಾಡಿದ್ರಾ ಎನ್ನುವ ಅನುಮಾನ ದಟ್ಟವಾಗಿದೆ.

    ತನಿಖೆಯ ಉಸ್ತುವಾರಿಯನ್ನ ಕೆಂಗೇರಿ ಗೇಟ್ ಎಸಿಪಿ ಪ್ರಕಾಶ್ ಅವರಿಗೆ ವಹಿಸಲಾಗಿದ್ದು ಚಂದ್ರಾ ಲೇಔಟ್ ಪೊಲೀಸರು ಮತ್ತೆ ತನಿಖೆ ಆರಂಭಿಸಿದ್ದಾರೆ. ಸದ್ಯ ಸಲೀಂ ಸೋದರರು ಹಾಗೂ ಕೃತ್ಯಕ್ಕೆ ಸಹಕರಿಸಿದ ಜಮೀರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಂಪೂರ್ಣ ತನಿಖೆಯ ನಂತರವೇ ಸಲೀಂ ಸಾವಿನ ರಹಸ್ಯ ಹೊರಬರಲಿದೆ.