Tag: ಸಹಚರ

  • ವಿಕಾಸ್ ದುಬೆ ಮತ್ತೊಬ್ಬ ಸಹಚರ ಅರೆಸ್ಟ್- ಪೊಲೀಸ್ ಹತ್ಯೆ ಪ್ರಕರಣದಲ್ಲಿದ್ದಾರೆ 21 ಆರೋಪಿಗಳು

    ವಿಕಾಸ್ ದುಬೆ ಮತ್ತೊಬ್ಬ ಸಹಚರ ಅರೆಸ್ಟ್- ಪೊಲೀಸ್ ಹತ್ಯೆ ಪ್ರಕರಣದಲ್ಲಿದ್ದಾರೆ 21 ಆರೋಪಿಗಳು

    – 21ರ ಪೈಕಿ, 6 ಜನರು ಮಟಾಷ್, ನಾಲ್ವರ ಬಂಧನ

    ಲಕ್ನೋ: ಎಂಟು ಮಂದಿ ಅಮಾಯಕ ಪೊಲೀಸರನ್ನು ಬಲಿಪಡೆದ ಮೃತ ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ಮತ್ತೊಬ್ಬ ಸಹಚರನನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ದುಬೆ ಸಹಚರ ಶಶಿಕಾಂತ್ ಎಂದು ಗುರುತಿಸಲಾಗಿದೆ. ಈ ವಿಚಾರದ ಬಗ್ಗೆ ಮಾತನಾಡಿರುವ ಎಡಿಜಿ ಪ್ರಶಾಂತ್ ಕುಮಾರ್, ಜುಲೈ 2ರಂದು ನಮ್ಮ ಎಂಟು ಜನ ಪೊಲೀಸರನ್ನು ಹತ್ಯೆ ಮಾಡಿ, ಅವರ ಬಳಿ ಇದ್ದ ಗನ್‍ಗಳನ್ನು ಕಿತ್ತುಕೊಂಡು ಹೋಗಿದ್ದರು. ಈ ಎಲ್ಲ ಬಂದೂಕುಗಳನ್ನು ನಾವು ವಶಕ್ಕೆ ಪಡೆದಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

    ಪೊಲೀಸರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಅವರಲ್ಲಿ 4 ಮಂದಿಯನ್ನು ಬಂಧಿಸಲಾಗಿದೆ. ಜೊತೆಗೆ ವಿವಿಧ ಎನ್‍ಕೌಂಟರ್ ಗಳಲ್ಲಿ ಮತ್ತು ಪೊಲೀಸ್ ವಿಚಾರಣೆಯ ವೇಳೆ ವಿಕಾಸ್ ದುಬೆ ಸೇರಿದಂತೆ 6 ಆರೋಪಿಗಳನ್ನು ಹತ್ಯೆ ಮಾಡಲಾಗಿದೆ. ಜೊತಗೆ ಈಗ ಅರೆಸ್ಟ್ ಮಾಡಿರುವ ಶಶಿಕಾಂತ್ ಸೇರಿ ನಾಲ್ಕು ಮಂದಿ ನಮ್ಮ ಕಸ್ಟಡಿಯಲ್ಲಿ ಇದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದ 11 ಆರೋಪಿಗಳನ್ನು ನಾವು ಹುಡುಕುತ್ತಿದ್ದೇವೆ ಎಂದು ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

    ಇದರ ಜೊತಗೆ ವಿಕಾಸ್ ದುಬೆ ಮತ್ತು ತಂಡ ನಮ್ಮ ಪೊಲೀಸರನ್ನು ಹತ್ಯೆ ಮಾಡಿ ಅವರ ಬಳಿ ಇದ್ದ, ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಿದ್ದರು. ಈ ಶಸ್ತ್ರಾಸ್ತ್ರಗಳನ್ನು ವಿಕಾಸ್ ದುಬೆ ತನ್ನ ಗ್ಯಾಂಗ್ ಸದಸ್ಯರಿಗೆ ಬಿಕ್ರು ಗ್ರಾಮದಲ್ಲಿರುವ ತನ್ನ ನಿವಾಸದಲ್ಲಿ ಮುಚ್ಚಿಡಲು ಹೇಳಿದ್ದ. ಆದರೆ ವಿಕಾಸ್ ದುಬೆಯ ನಿವಾಸದಲ್ಲಿ ಶೋಧ ಕಾರ್ಯ ಮಾಡಿದ ಸಮಯದಲ್ಲಿ ಪೊಲೀಸರಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಪ್ರಶಾತ್ ಕುಮಾರ್ ಹೇಳಿದ್ದಾರೆ.

    ದುಬೆ ಎನ್‍ಕೌಂಟರ್:
    ಎಂಟು ಪೊಲೀಸರನ್ನು ಹತ್ಯೆ ಮಾಡಿದ್ದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆಯನ್ನು ಕಳೆದ ಶುಕ್ರವಾರ ಮುಂಜಾನೆ ಉತ್ತರಪ್ರದೇಶದ ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ವಿಕಾಸ್ ದುಬೆಯನ್ನು ಬಂಧಿಸಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಮಧ್ಯ ಪ್ರದೇಶದಿಂದ ಕಾನ್ಪುರಕ್ಕೆ ವಾಪಸ್ ಕರೆತರಲಾಗುತ್ತಿತ್ತು. ಆದರೆ ಕಾನ್ಪುರದ ಬಾರ್ರಾ ಪೊಲೀಸ್ ವಲಯಕ್ಕೆ ತಲುಪುತ್ತಿದ್ದಂತೆ ವಿಕಾಸ್ ದುಬೆ ಕುಳಿತಿದ್ದ ವಾಹನವು ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ಪಲ್ಟಿಯಾಗಿದೆ.

    ಆಗ ಪೊಲೀಸರು ವಿಕಾಸ್‍ನನ್ನು ವಾಹನದಿಂದ ಹೊರಗೆ ಎಳೆದುಕೊಂಡಿದ್ದಾರೆ. ಈ ವೇಳೆ ಆರೋಪಿ ಗಾಯಗೊಂಡ ಪೊಲೀಸರೊಬ್ಬರಿಂದ ಬಂದೂಕನ್ನು ಕಿತ್ತುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಆಗ ಪೊಲೀಸರು ಕೂಡ ಗುಂಡಿನ ದಾಳಿ ಮಾಡಿದ್ದರು. ಈ ಶೂಟೌಟ್‍ನಲ್ಲಿ ಪೊಲೀಸರು ಆರೋಪಿ ವಿಕಾಸ್ ದುಬೆಯನ್ನ ಎನ್‍ಕೌಂಟರ್ ಮಾಡಿದ್ದರು. ಪರಿಣಾಮ ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‍ಕೌಂಟರ್‍ಗೆ ಬಲಿಯಾಗಿದ್ದ.

  • ಎನ್‍ಕೌಂಟರ್ ಆಗಿದ್ದ ದುಬೆ ಸಹಚರನಿಗೆ ಕೊರೊನಾ- ವಿಕಾಸ್ ಮೃತದೇಹ ಪರೀಕ್ಷೆಗೆ ರವಾನೆ

    ಎನ್‍ಕೌಂಟರ್ ಆಗಿದ್ದ ದುಬೆ ಸಹಚರನಿಗೆ ಕೊರೊನಾ- ವಿಕಾಸ್ ಮೃತದೇಹ ಪರೀಕ್ಷೆಗೆ ರವಾನೆ

    ಲಕ್ನೋ: ಮೃತ ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ಸಹಚರನಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಇಂದು ಎನ್‍ಕೌಂಟರ್ ಗೆ ಬಲಿಯಾದ ವಿಕಾಸ್ ದುಬೆ ಮೃತದೇಹವನ್ನು ಪೊಲೀಸರು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದಾರೆ.

    ಕಳೆದ ಎರಡು ದಿನದ ಹಿಂದೆ ವಿಕಾಸ್ ದುಬೆ ಬಲಗೈ ಬಂಟನಂತಿದ್ದ ಅಮರ್ ದುಬೆಯನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ಈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮುನ್ನ ಕೊರೊನಾ ಪರೀಕ್ಷೆ ಮಾಡಿಸಿದ್ದು, ಆತನಿಗೆ ಕೊರೊನಾ ಪಾಟಿಸಿವ್ ಬಂದಿತ್ತು. ಈ ಕಾರಣದಿಂದ ಇಂದು ಬೆಳಗ್ಗೆ ಎನ್‍ಕೌಂಟರ್ ಆದ ವಿಕಾಸ್ ದುಬೆ ಮೃತದೇಹವನ್ನು ಕೂಡ ಕೊರೊನಾ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸರು ಹೇಳಿದ್ದಾರೆ.

    ಎಂಟು ಮಂದಿ ಪೊಲೀಸರನ್ನು ಅಮಾನುಷವಾಗಿ ಕೊಂದು ಹಾಕಿದ್ದ ಪ್ರಕರಣದಲ್ಲಿ, ಬುಧವಾರ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಸಿಬ್ಬಂದಿ ಪ್ರಮುಖ ಆರೋಪಿ ವಿಕಾಸ್ ದುಬೆ ಸಹಚರ ಅಮರ್ ದುಬೆಯನ್ನು ಎನ್‍ಕೌಂಟರ್ ಮಾಡಿತ್ತು. ಎನ್‍ಕೌಂಟರ್ ಗೆ ಬಲಿಯಾದ ಅಮರ್ ದುಬೆ ವಿಕಾಸ್ ದುಬೆ ಅಪ್ತನಾಗಿದ್ದು, ಈತ ಕೂಡ ಪೊಲೀಸರ ಮೇಲೆ ಗುಂಡು ಹಾರಿಸಿದ್ದ. ಅಮರ್ ಹೆಸರು ಕೂಡ ಎಫ್‍ಐಆರ್ ಅಲ್ಲಿ ಉಲ್ಲೇಖವಾಗಿತ್ತು.

    ಗುರುವಾಗ ಮಧ್ಯಪ್ರದೇಶದಲ್ಲಿ ಸೆರೆಸಿಕ್ಕ ವಿಕಾಸ್ ದುಬೆಯನ್ನು ಇಂದು ಮುಂಜಾನೆ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಮಧ್ಯಪ್ರದೇಶದ ಪೊಲೀಸರಿಂದ ದುಬೆಯನ್ನು ವಶಕ್ಕೆ ಪಡೆದು ಕರೆತರುವ ಸಮಯದಲ್ಲಿ ನಮ್ಮ ವಾಹನ ಅಪಘಾತವಾಗಿ ಪಲ್ಟಿಯಾಗಿತ್ತು. ಈ ವೇಳೆ ದುಬೆ ತಮ್ಮ ಪೊಲೀಸರ ಬಂದೂಕನ್ನು ಕಿತ್ತುಕೊಂಡು ನಮ್ಮ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಆತನನ್ನು ಎನ್‍ಕೌಂಟರ್ ಮಾಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು. ಈ ವೇಳೆ ಗ್ಯಾಂಗ್ ಅವರ ಮೇಲೆ ಗುಂಡಿನ ದಾಳಿ ಮಾಡಿ ಎಂಟು ಮಂದಿ ಪೊಲೀಸರನ್ನು ಕೊಂದು ಹಾಕಿತ್ತು.

  • ಪೊಲೀಸರ ನರಮೇಧಕ್ಕೆ ಸಿಗ್ನಲ್ ಹೋಗಿದ್ದೆ ಠಾಣೆಯಿಂದ – ಸ್ಫೋಟಕ ಸತ್ಯ ಬಯಲು

    ಪೊಲೀಸರ ನರಮೇಧಕ್ಕೆ ಸಿಗ್ನಲ್ ಹೋಗಿದ್ದೆ ಠಾಣೆಯಿಂದ – ಸ್ಫೋಟಕ ಸತ್ಯ ಬಯಲು

    – ವಿಕಾಸ್ ದುಬೆ ಸಹಚರನ ಬಂಧನ

    ಲಕ್ನೋ: ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿಕೊಂದ ರೌಡಿ ಶೀಟರ್ ವಿಕಾಸ್ ದುಬೆ ಸಹಚರನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತನ್ನು ವಿಕಾಸ್ ದುಬೆ ಜೊತೆ ಬಹಳ ವರ್ಷದಿಂದ ಕೆಲಸ ಮಾಡಿದ್ದ ದಯಾ ಶಂಕರ್ ಅಗ್ನಿಹೋತ್ರಿ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸರು ಭಾನುವಾರ ಮುಂಜಾನೆ ಕಲ್ಯಾಣಪುರದಲ್ಲಿ ಅಡ್ಡಹಾಕಿದ್ದಾರೆ. ಆಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ದಯಾ ಶಂಕರ್ ಕಾಲಿಗೆ ಗುಂಡಿಕ್ಕಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಈ ಬಂಧಿತ ದಯಾ ಶಂಕರ್ ತನಿಖೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದು, ವಿಕಾಸ್ ದುಬೆಗೆ ಪೊಲೀಸರು ಅರೆಸ್ಟ್ ಮಾಡಲು ಬರುತ್ತಾರೆ ಎಂದು ಮೊದಲೇ ಗೊತ್ತಿತ್ತು. ದುಬೆಗೆ ಪೊಲೀಸ್ ಇಲಾಖೆಯಲ್ಲೇ ಮಾಹಿತಿ ನೀಡುವವರು ಇದ್ದು, ಘಟನೆ ನಡೆದ ದಿನ ಚೌಬೆಪುರ ಪೊಲೀಸ್ ಠಾಣೆಯಿಂದ ಓರ್ವ ಪೊಲೀಸ್ ಅಧಿಕಾರಿ ಕರೆ ಮಾಡಿ ನಿನ್ನನ್ನು ಅರೆಸ್ಟ್ ಮಾಡಲು ಪೊಲೀಸರು ನಿಮ್ಮ ಗ್ರಾಮಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ದರು ಎಂದು ಹೇಳಿದ್ದಾನೆ.

    ಪೊಲೀಸರು ನನ್ನನ್ನು ಅರೆಸ್ಟ್ ಮಾಡಿದರೆ ನಾನೂ ಜೈಲು ಪಾಲಾಗುತ್ತೇನೆ ಎಂದು ವಿಕಾಸ್ ದುಬೆಗೆ ಗೊತ್ತಿತ್ತು. ಆದ್ದರಿಂದ ಆತ ವಿಷಯ ತಿಳಿಯುತ್ತಿದ್ದಂತೆ ತನ್ನ ಗ್ಯಾಂಗಿನ ಹುಡುಗರನ್ನು ಕರೆಸಿಕೊಂಡು ತಮ್ಮ ಗ್ರಾಮದಲ್ಲಿ ಉಳಿಸಿಕೊಂಡಿದ್ದ. ಪೊಲೀಸರಿಂದ ಮೊದಲೇ ಮಾಹಿತಿ ಸಿಕ್ಕ ಕಾರಣ ಪೊಲೀಸರನ್ನು ಹತ್ಯೆ ಮಾಡಲು ಪ್ಲಾನ್ ಮಾಡಿದ್ದರು. ಅದರಂತೆ ಗ್ರಾಮಕ್ಕೆ ಬಂದ ಪೊಲಿಸರನ್ನು ರಸ್ತೆಯಲ್ಲೇ ಅಡ್ಡಗಟ್ಟಿ ಕೊಂದು ಹಾಕಿದ್ದಾರೆ ಎಂದು ದಯಾ ತಿಳಿಸಿದ್ದಾನೆ.

    ಈ ನಡುವೆ ಉತ್ತರ ಪ್ರದೇಶದಲ್ಲಿ ಇರುವ ವಿಕಾಸ್ ದುಬೆ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತಿದೆ. ಡಿಕ್ರು ಗ್ರಾಮದಲ್ಲಿ ಇದ್ದ ಆತನ ಮನೆಯನ್ನು ಶನಿವಾರ ಜಿಲ್ಲಾಡಳಿತ ಜೆಸಿಬಿ ತೆಗೆದುಕೊಂಡು ಹೋಗಿ ನೆಲಸಮ ಮಾಡಿ ಬಂದಿತ್ತು. ಜೊತೆಗೆ ಮನೆಯಲ್ಲಿ ಇದ್ದ ಐಷಾರಾಮಿ ಕಾರುಗಳನ್ನು ಕೂಡ ಜಖಂ ಮಾಡಲಾಗಿತ್ತು. ಈಗ ಆತನ ಹೆಸರನಲ್ಲಿದ್ದ ಕಾರ್ಖಾನೆಗಳನ್ನು ಕೂಡ ಜಿಲ್ಲಾಡಳಿತ ಕೆಡವಿ ಹಾಕುತ್ತಿದೆ.

    ಎಂಟು ಜನ ಪೊಲೀಸರನ್ನು ಕೊಂದ ವಿಕಾಸ್ ದುಬೆಯನ್ನು ಎನ್‍ಕೌಂಟರ್ ಮಾಡಬೇಕು ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿವೆ. ಈ ವಿಚಾರವಾಗಿ ಮಾತನಾಡಿದ್ದ ದುಬೆ ತಾಯಿ ಸರ್ಲಾ ದೇವಿ, ಆತ ಅಮಾಯಕ ಪೊಲೀಸರನ್ನು ಕೊಂದು ತಪ್ಪು ಮಾಡಿದ್ದಾನೆ. ಆತ ಪೊಲೀಸರಿಗೆ ಶರಣಾಗಬೇಕು. ಇಲ್ಲ ಆತನನ್ನು ಪೊಲೀಸರೇ ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದರು. ಆದರೆ ವಿಕಾಸ್ ದುಬೆ ತಪ್ಪಿಸಿಕೊಂಡಿದ್ದಾನೆ.

    ಕೊಲೆ ಪ್ರಕರಣದ ಆರೋಪದ ಮೇಲೆ ವಿಕಾಸ್ ದುಬೆಯನ್ನು ಅರೆಸ್ಟ್ ಮಾಡಲು ಹೋದ ಎಂಟು ಪೊಲೀಸರನ್ನು ಕಳೆದ ಗುರುವಾರ ಗುಂಡಿಕ್ಕಿ ಕೊಲ್ಲಲಾಗಿತ್ತು. ಓರ್ವ ಡಿವೈಎಸ್ಪಿ, ಮೂವರು ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್‍ಗಳು ಸೇರಿದಂತೆ ಒಟ್ಟು ಎಂಟು ಜನ ಪೊಲೀಸರನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಗುರುವಾರ ರಾತ್ರಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿತ್ತು.