Tag: ಸಹಾಯಕ

  • ಫ್ಯಾಷನ್ ಡಿಸೈನರ್, ಸಹಾಯಕನ ಕೊಲೆ- ಮೂವರು ಅರೆಸ್ಟ್

    ಫ್ಯಾಷನ್ ಡಿಸೈನರ್, ಸಹಾಯಕನ ಕೊಲೆ- ಮೂವರು ಅರೆಸ್ಟ್

    ನವದೆಹಲಿ: ಫ್ಯಾಷನ್ ಡಿಸೈನರ್ ಹಾಗೂ ಸಹಾಯಕನನ್ನು ಬರ್ಬರವಾಗಿ ಕೊಲೆಗೈದ ಘಟನೆ ದೆಹಲಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.

    ಫ್ಯಾಷನ್ ಡಿಸೈನರ್ ಮಾಲಾ ಲಖನಿ (53) ಹಾಗೂ ಆಕೆಯ ಸೇವಕ ಬಹದ್ದೂರ್ (50) ಹತ್ಯೆಯಾದವರು. ಫ್ಯಾಷನ್ ಡಿಸೈನರ್ ಟೈಲರ್ ರಾಹುಲ್ ಅನ್ವರ್ ಸೇರಿದಂತೆ ಮೂವರು ಹತ್ಯೆ ಮಾಡಿದ ಆರೋಪಿಗಳು.

    ವಸಂತ್ ಕುಂಜಾ ಪ್ರದೇಶದ ಮಾಲಾ ಅವರ ಹಳೆಯ ನಿವಾಸದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಚಾಕುನಿಂದ ಇರಿದು ಕೊಲೆ ಮಾಡಿದ್ದಾರೆ. ಪ್ರಕರಣದ ಕುರಿತು ಇಂದು ಬೆಳಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮಾಲಾ ಲಖನಿ ಹಾಗೂ ಬಹದ್ದೂರ್ ಮೃತದೇವು ರಕ್ತದ ಮಡವಿನಲ್ಲಿ ಬಿದ್ದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ರಾಹುಲ್ ಅನ್ವರ್ ಫ್ಯಾಷನ್ ಡಿಸೈನರ್ ವರ್ಕ್‍ಶಾಪ್ ನಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದು, ತನ್ನ ಇಬ್ಬರು ಸಂಬಂಧಿಕರ ಜೊತೆ ಸೇರಿ ಕೃತ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಅಜಯ್ ಚೌಧರಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹೈಸ್ಕೂಲ್ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡ ಶಾಲಾ ಸಹಾಯಕ

    ಹೈಸ್ಕೂಲ್ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡ ಶಾಲಾ ಸಹಾಯಕ

    ಬಾಗಲಕೋಟೆ: ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಶಾಲೆಯ ಸಹಾಯಕಯೊಬ್ಬ ಲೈಂಗಿಕವಾಗಿ ಬಳಸಿಕೊಂಡಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಅನ್ನದಾನೇಶ್ವರ ಪ್ರೌಢಶಾಲೆಯ ಪಿಯುನ್ ಖಾದ್ರಿ ಭಾಷಾ, ತಾನು ಕಾರ್ಯನಿರ್ವಹಿಸುತ್ತಿದ್ದ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದಕ್ಕೆ ಆತ ಮತ್ತು ವಿದ್ಯಾರ್ಥಿನಿ ಇಬ್ಬರು ನಡೆಸಿದ ಮೊಬೈಲ್ ಮಾತುಕತೆಯ ಸಂಭಾಷಣೆ ಆಡಿಯೋ ಸಾಕ್ಷಿಯಾಗಿದೆ.

    ಭಾಷಾ ಹಾಗೂ ವಿದ್ಯಾರ್ಥಿನಿ ನಡೆಸಿದ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಇನ್ನು ಈ ಸುದ್ದಿ ತಿಳಿಯುತ್ತಿದ್ದಂತೆ ಪಿಯುನ್ ಖಾದ್ರಿ ಭಾಷಾನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಅಲ್ಲದೇ ಶಾಲಾ ಆಡಳಿತ ಮಂಡಳಿ ಸಭೆ ಸೇರಿ ಆತನನ್ನು ಕೆಲಸದಿಂದ ವಜಾ ಮಾಡುವ ನಿರ್ಧಾರ ಮಾಡಿದ್ದಾರೆ. ಈ ನಡುವೆ ಖಾದ್ರಿ ಭಾಷಾ ತಪ್ಪೊಪ್ಪಿಗೆ ಪತ್ರ ಬರೆದಿದ್ದು, ನಾನು ತಪ್ಪು ಮಾಡಿದ್ದೇನೆ ಇನ್ನು ಮುಂದೆ ಹೀಗಾಗೋದಿಲ್ಲ ಎಂದು ತನ್ನ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪರಾರಿಯಾಗಿದ್ದಾನೆ.

    ಈ ಕುರಿತು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂದೆ ಸಭೆ ನಡೆಸಿ ಶಾಲೆ ಮತ್ತು ಗ್ರಾಮದ ಮರ್ಯಾದೆ ಹೋಗುತ್ತದೆ ಎಂದು ಪ್ರಕರಣವನ್ನು ಹೊರಬಾರದಂತೆ ತಡೆಯುವ ಪ್ರಯತ್ನ ಮಾಡಿದ್ದಾರೆ. ಆದರೂ ಈ ಆಡಿಯೋ ಫೋನ್‍ಗಳಲ್ಲಿ ಹರಿದಾಡುತ್ತಿದ್ದು ವೈರಲ್ ಆಗಿದೆ. ಮುಗ್ಧ ಮನಸ್ಸಿನ ಬಾಲಕಿಯನ್ನು ಸಹಾಯಕ ಪುಸಲಾಯಿಸಿ ಮಾತಿನಲ್ಲಿ ಮರಳು ಮಾಡಿ ಲೈಂಗಿಕವಾಗಿ ಬಳಸಿಕೊಂಡು ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದು ಬಹಿರಂಗವಾಗಿದೆ. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಬಾಲಕಿಯ ಭವಿಷ್ಯದ ದೃಷ್ಟಿಯಿಂದ ಈ ವಿಷಯವನ್ನು ಮುಕ್ತಾಯ ಮಾಡಲು ಗ್ರಾಮಸ್ಥರು ಮತ್ತು ಶಾಲಾ ಆಡಳಿತ ಮಂಡಳಿ ತೀರ್ಮಾನಿಸಿದೆ.