Tag: ಸಹೋದರಿಯರು

  • ಕಸಿನ್ ಸಹೋದರಿಯನ್ನೇ ಮದ್ವೆಯಾಗಿ ಫೇಸ್‍ಬುಕ್‍ನಲ್ಲಿ ಯುವತಿಯಿಂದ ಪೋಸ್ಟ್

    ಕಸಿನ್ ಸಹೋದರಿಯನ್ನೇ ಮದ್ವೆಯಾಗಿ ಫೇಸ್‍ಬುಕ್‍ನಲ್ಲಿ ಯುವತಿಯಿಂದ ಪೋಸ್ಟ್

    ಲಕ್ನೋ: ಕಸಿನ್ ಸಹೋದರಿಯನ್ನೇ ಮದುವೆಯಾಗಿ ಯುವತಿಯೊಬ್ಬಳು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಎಲ್ಲರಿಗೂ ಶಾಕ್ ನೀಡಿದ ಘಟನೆ ಉತ್ತರ ಪ್ರದೇಶದ ವಾರಾಣಾಸಿಯಲ್ಲಿ ನಡೆದಿದೆ.

    ವಾರಾಣಾಸಿಯ ರೋಹನಿಯಾ ನಿವಾಸಿಯಾದ ಕಸಿನ್ ಸಹೋದರಿಯರು ಪೋಷಕರ ವಿರುದ್ಧವಾಗಿ ಹೋಗಿ ಮದುವೆ ಆಗಿದ್ದಾರೆ. ಮದುವೆ ಆದ ಬಳಿಕ ಆ ಫೋಟೋಗಳನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಎಲ್ಲರಿಗೂ ಶಾಕ್ ನೀಡಿದ್ದಾರೆ.

    ಬುಧವಾರ ಸಹೋದರಿಯರು ಶಿವನ ದೇವಸ್ಥಾನಕ್ಕೆ ಹೋಗಿ ಅಲ್ಲಿದ್ದ ಅರ್ಚಕರಿಗೆ ಮದುವೆ ಮಾಡಿಸಿ ಎಂದು ಹೇಳಿದ್ದಾರೆ. ಆದರೆ ಅರ್ಚಕರು ಮದುವೆ ಮಾಡಿಸಲು ನಿರಾಕರಿಸುತ್ತಾರೆ. ಪಂಡಿತ ನಿರಾಕರಿಸಿದರೂ ಸಹ ಸಹೋದರಿಯರು ದೇವಸ್ಥಾನದ ಒಳಗೆ ಕುಳಿತ್ತಿದ್ದರು.

    ಸಹೋದರಿಯರು ಜೀನ್ಸ್, ಟೀ-ಶರ್ಟ್ ಧರಿಸಿ ಅದಕ್ಕೆ ಕೆಂಪು ಬಣ್ಣದ ಚುನ್ನಿ ಹಾಕಿ ಮದುವೆ ಮಾಡಿಕೊಂಡರು. ಸಹೋದರಿಯರು ಮದುವೆ ಆಗುವ ಹೊತ್ತಿಗೆ ದೇವಸ್ಥಾನದ ಬಳಿ ಹೆಚ್ಚು ಜನ ಸೇರಿದ್ದರು. ಅಹಿತಕರ ಘಟನೆ ನಡೆಯುವ ಮೊದಲೇ ಸಹೋದರಿಯರು ಅಲ್ಲಿಂದ ಹೊರಟು ಹೋದರು.

    ಸಹೋದರಿಯರನ್ನು ಮದುವೆ ಮಾಡಿಸಿದ್ದಕ್ಕೆ ಕೆಲವರು ಪಂಡಿತರನ್ನು ಟೀಕಿಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪಂಡಿತ, ಒಬ್ಬಳು ಯುವತಿ ಕಾನ್‍ಪುರದವಳಾಗಿದ್ದು, ಮತ್ತೊಬ್ಬಳು ವಿದ್ಯಾಭ್ಯಾಸಕ್ಕೆ ಎಂದು ಕಸಿನ್ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಹೇಳಿದ್ದಾರೆ.

  • ಸೋದರಿಯರನ್ನ ಕೂಡಿ ಹಾಕಿ 2 ದಿನ ಮೂವರಿಂದ ನಿರಂತರ ಗ್ಯಾಂಗ್‍ರೇಪ್

    ಸೋದರಿಯರನ್ನ ಕೂಡಿ ಹಾಕಿ 2 ದಿನ ಮೂವರಿಂದ ನಿರಂತರ ಗ್ಯಾಂಗ್‍ರೇಪ್

    ಅಗರ್ತಲಾ: 13 ವರ್ಷದ ಅಪ್ರಾಪ್ತೆ ಮತ್ತು ಆಕೆಯ ಸಹೋದರಿಯನ್ನು ಅಪಹರಿಸಿ ಎರಡು ದಿನಗಳ ಕಾಲ ಕೂಡಿ ಹಾಕಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ತ್ರಿಪುರಾದ ಉನಾಕೋಟಿ ಜಿಲ್ಲೆಯಲ್ಲಿ ನಡೆದಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷದ ಆಟೋರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ. ಆಟೋ ಚಾಲಕ ಸೇರಿ ಮೂವರು ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮೂವರಲ್ಲಿ ಈತನೇ ಮುಖ್ಯ ಆರೋಪಿ ಎಂದು ತಿಳಿದುಬಂದಿದೆ ಅಂತ ಪೊಲೀಸರು ತಿಳಿಸಿದ್ದಾರೆ.

    ಘಟನೆ ವಿವರ:
    ಸಂತ್ರಸ್ತ ಸಹೋದರಿಯರು ಮನೆಗೆ ಹೋಗಲು ಕೈಲಾಶಹಾರ್ ಪಟ್ಟಣದ ಸೇತುವೆ ಬಳಿ ವಾಹನಕ್ಕಾಗಿ ಕಾಯುತ್ತಿದ್ದರು. ಸ್ವಲ್ಪ ಸಮಯದ ಬಳಿಕ ಆಟೋರಿಕ್ಷಾ ಬಂದಿದೆ. ಇಬ್ಬರು ಸಹೋದರಿಯರು ಆ ಆಟೋ ರಿಕ್ಷಾವನ್ನು ಹತ್ತಿದ್ದಾರೆ. ಆದರೆ ದಾರಿ ಮಧ್ಯೆ ಆಟೋ ಚಾಲಕ ಇಬ್ಬರು ಪುರುಷ ಪ್ರಯಾಣಿಕರನ್ನು ಆಟೋಗೆ ಹತ್ತಿಸಿಕೊಂಡಿದ್ದಾನೆ. ಆಟೋ ಚಾಲಕನು ಅವರನ್ನು ಮನೆಗೆ ಬಿಡುವ ಬದಲು ಇಬ್ಬರ ಜೊತೆ ಸೇರಿ ಅವರಿಗೆ ಟವೆಲ್ ಹೊದಿಸಿ ಖೌವಾ ಜಿಲ್ಲೆಯ ತೆಲಿಯಮುರಾ ಪಟ್ಟಣಕ್ಕೆ ಕರೆದುಕೊಂಡು ಹೋಗಿದ್ದಾರೆ ಅಂತ ಸಂತ್ರಸ್ತೆಯರು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

    ಇಬ್ಬರನ್ನು ಒಂದು ರೂಮಿನಲ್ಲಿ ಕೂಡಿ ಹಾಕಿ ನಿರಂತರವಾಗಿ ಮೂವರು ಕಾಮುಕರು ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ನಂತರ ಸಂತ್ರಸ್ತೆಯರನ್ನು ಟೆಲಿಮೂರ ರೈಲು ನಿಲ್ದಾಣದಲ್ಲಿ ಬಳಿ ಬಿಟ್ಟಿದ್ದಾರೆ. ಅಲ್ಲಿ ಅವರು ಸರ್ಕಾರಿ ರೈಲ್ವೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮಹಿಳಾ ಪೊಲೀಸ್ ಅಧಿಕಾರಿ ಸಂಪಾ ದಾಸ್ ತಿಳಿಸಿದ್ದಾರೆ.

    ನಾವು ಸಂತ್ರಸ್ತೆಯರನ್ನು ನಮ್ಮ ವಶದಲ್ಲಿರಿಸಿಕೊಂಡು ಪೋಷಕರಿಗೆ ಮಾಹಿತಿ ತಿಳಿಸಿದ್ದೆವು. ಬಳಿಕ ಅವರು ಬಂದು ಕರೆದುಕೊಂಡು ಹೋಗಿದ್ದಾರೆ. ಸದ್ಯಕ್ಕೆ ಸಂತ್ರಸ್ತೆಯ ತಾಯಿ ಸಲ್ಲಿಸಿದ ದೂರಿನ ಆಧಾರದ ಮೇರೆಗೆ ಆಟೋರಿಕ್ಷಾ ಚಾಲಕನ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ. ಇತರ ಇಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ಸ್ವಪನ್ ದೇಬ್ಬರ್ಮಾ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೊಡಗಿನ ಭಾರೀ ಮಳೆ, ಭೂ ಕುಸಿತದಲ್ಲಿ ಸಾವನ್ನೇ ಗೆದ್ದ ವೃದ್ಧ ಸಹೋದರಿಯರು

    ಕೊಡಗಿನ ಭಾರೀ ಮಳೆ, ಭೂ ಕುಸಿತದಲ್ಲಿ ಸಾವನ್ನೇ ಗೆದ್ದ ವೃದ್ಧ ಸಹೋದರಿಯರು

    ಮಡಿಕೇರಿ: ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆ ಹಾಗೂ ಭೂ ಕುಸಿತಕ್ಕೆ ಕೊಡಗಿನ ಜನ ಬೆದರಿ ಪ್ರಾಣ ಉಳಿಸಿಕೊಳ್ಳೋಕೆ ಪರದಾಡಿದರು. ತಾವು ಸಂಪಾದಿಸಿದ್ದು ಏನೂ ಬೇಡ ಸದ್ಯ ಪ್ರಾಣ ಉಳಿದರೆ ಸಾಕು ಅಂತ ಎಲ್ಲವನ್ನೂ ಬಿಟ್ಟು ಊರನ್ನೇ ತೊರೆದು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಆಗಿದ್ದರು.

    ಆದರೆ ಮಡಿಕೇರಿ ಸಮೀಪದ ಕೊಯನಾಡಿನ ಈ ವೃದ್ಧ ಸಹೋದರಿಯರು ಮಾತ್ರ ಪ್ರಾಣಕ್ಕೆ ಸಂಕಟ ಬಂದರೂ ಮನೆ ಬಿಟ್ಟು ಸುರಕ್ಷಿತ ಸ್ಥಳಕ್ಕೆ ಹೋಗಲಿಲ್ಲ. ಅದಕ್ಕೆ ಕಾರಣ ಇವರು ಪ್ರೀತಿಯಿಂದ ಸಾಕಿದ್ದ ಜಾನುವಾರುಗಳು. ಆಗಸ್ಟ್ 15ರ ನಂತರ ಸುರಿದ ಭಾರೀ ಮಳೆಗೆ ಪಯಸ್ವಿನಿ ನದಿ ಉಕ್ಕಿ ಆಯಿಶಾ ಹಾಗೂ ಸೈನಬಾ ಇರುವ ಮನೆಯ ಮೆಟ್ಟಿಲಿನವರೆಗೆ ನೀರು ಹರಿದು ಆತಂಕ ಸೃಷ್ಟಿಸಿತ್ತು.

    ನದಿಯ ಅಬ್ಬರ ಸ್ವಲ್ಪ ಹೆಚ್ಚಾದರೂ ಇಡೀ ಮನೆಯೇ ಕೊಚ್ಚಿ ಹೋಗುವ ಭೀತಿ ಕಾಡಿತ್ತು. 80 ವರ್ಷ ಆಸುಪಾಸಿನ ಆಯಿಶಾ ತಂಗಿ ಸೈನಬಾ ಹುಟ್ಟುತ್ತಲೇ ಅಂಗವಿಕಲರು, ತಮ್ಮನ್ನೇ ನಂಬಿರುವ ಜಾನುವಾರುಗಳು ಜೊತೆಗಿದೆ. ಹೇಗೆ ಮನೆ ಬಿಟ್ಟು ಅವರನ್ನೆಲ್ಲಾ ಕರೆದುಕೊಂಡು ಬರೋದು ಎಂದು ನಿರಾಶ್ರಿತ ಕೇಂದ್ರಕ್ಕೆ ಬನ್ನಿ ಅಂತ ಕರೆದರೂ ಈ ಇಬ್ಬರು ಮಾತ್ರ ಮನೆ ಬಿಟ್ಟು ಕದಲಲಿಲ್ಲ.

    ನಾವು ಸಾಕಿದ ಜಾನುವಾರುಗಳನ್ನು ಬಿಟ್ಟು ಬರುವುದಿಲ್ಲ, ಜಾನುವಾರುಗಳ ಜೊತೆಗೆ ಇರುತ್ತೀವಿ. ಸತ್ತರೆ ಇಲ್ಲೇ ಸಾಯುತ್ತೇವೆ ಎಂದು ಹಠ ಹಿಡಿದು ಮನೆಯ ಸುತ್ತಲೂ ಆವರಿಸಿದ್ದ ನೀರು ಹಾಗೂ ಭೋರ್ಗರೆಯುತ್ತಿದ್ದ ಪಯಸ್ವಿನಿ ನದಿಯ ತಟದಲ್ಲೇ ಇದ್ದರು. ಇದೀಗ ಮಳೆಯ ಅಬ್ಬರ ಕಡಿಮೆಯಾಗಿ ಸಹೋದರಿಯರು ಸಾವನ್ನೇ ಗೆದ್ದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚೂಡಿದಾರಕ್ಕಾಗಿ ಜಗಳವಾಡಿ ಪ್ರಾಣಬಿಟ್ಟ ಅಕ್ಕ- ತಂಗಿ!

    ಚೂಡಿದಾರಕ್ಕಾಗಿ ಜಗಳವಾಡಿ ಪ್ರಾಣಬಿಟ್ಟ ಅಕ್ಕ- ತಂಗಿ!

    ಮೈಸೂರು: ಬಟ್ಟೆಯ ವಿಚಾರಕ್ಕಾಗಿ ಜಗಳವಾಡಿ, ಮನಸ್ತಾಪದಿಂದ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕಾಳಬಸವಹುಂಡಿ ಗ್ರಾಮದಲ್ಲಿ ನಡೆದಿದೆ.

    ಕಾಳಬಸವಹುಂಡಿ ಗ್ರಾಮದ ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾದ ಅನು(16) ಹಾಗೂ ಕವಿತಾ (30) ಮೃತ ಸಹೋದರಿಯರು. ಚೂಡಿದಾರಕ್ಕಾಗಿ ಎಸ್‍ಎಸ್‍ಎಲ್‍ಸಿ ಓದುತ್ತಿದ್ದ ಅನು ಹಾಗೂ ಮೂಗಿಯಾಗಿದ್ದ ಅಕ್ಕ ಕವಿತಾ ಜಗಳವಾಡಿದ್ದರು. ಇದರಿಂದ ಮನನೊಂದ ಅನು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

    ಅನು ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರು ಮೃತದೇಹದ ಮುಂದೆ ರೋಧಿಸುತ್ತಿದ್ದರು. ಈ ವೇಳೆ ಹಿತ್ತಲಿಗೆ ಹೋದ ಕವಿತಾ ಕೇಬಲ್ ವೈರ್ ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎರಡೂ ಮೃತ ದೇಹವನ್ನು ತಲಕಾಡು ಸಮುದಾಯ ಆಸ್ಪತ್ರೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಕುರಿತು ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಹೋದರಿಯರ ಮನಸೆಳೆವ ಜಲ ಯೋಗ!

    ಸಹೋದರಿಯರ ಮನಸೆಳೆವ ಜಲ ಯೋಗ!

    ಬೆಂಗಳೂರು: ಇಂದು ನಾಲ್ಕನೇ ವಿಶ್ವ ಯೋಗದಿನದ ನಿಮಿತ್ತ ಸಹೋದರಿಯರಿಬ್ಬರು ನೀರಿನಲ್ಲಿ ಯೋಗ ಪ್ರದರ್ಶಿಸುವ ಮೂಲಕ ಗಮನ ಸೆಳೆದಿದ್ದಾರೆ.

    ಆನೇಕಲ್ ಪಟ್ಟಣದ ನಿತ್ಯಾಶ್ರೀ ಹಾಗೂ ತನುಶ್ರೀ ಎಂಬ ಇಬ್ಬರು ಸಹೋದರಿಯರು ನೀರಿನ ಮೇಲೆ ತೇಲುತ್ತ ಕೈಯಲ್ಲಿ ದೀಪ ಹಿಡಿದು ವಿವಿಧ ಯೋಗದ ಆಸನಗಳನ್ನು ಪ್ರದರ್ಶನ ಮಾಡಿದ್ದಾರೆ. ಇವರಿಬ್ಬರೂ ನೀರಲ್ಲಿ ದೀಪ ನಂದದಂತೆ ಯೋಗಾಸನ ಮಾಡುವುದರಲ್ಲಿ ಪರಿಣಿತರಾಗಿದ್ದಾರೆ.

    ನಿತ್ಯಾಶ್ರೀ ಹಾಗೂ ತನುಶ್ರೀಯವರಿಗೆ ತಂದೆ ಸುಬ್ರಹ್ಮಣ್ಯ ಅವರೇ ಗುರುಗಳು. ಸುಬ್ರಹ್ಮಣ್ಯ ಅವರು ಕೂಡಾ ಯಾವುದೇ ಗುರುಗಳಿಂದ ಜಲ ಯೋಗವನ್ನು ಕಲಿತಿಲ್ಲವಂತೆ. ಋಷಿಮುನಿಗಳ ಜಲ ಯೋಗದ ಕುರಿತು ಓದಿ, ತಿಳಿದು ತಾವೇ ಸ್ವಯಂ ಕಲಿತಿದ್ದಾರೆ. ಹಾಗೇ ತಮ್ಮ ಮಕ್ಕಳಿಗೂ ಜಲ ಯೋಗವನ್ನು ಕಲಿಸಿದ್ದಾರೆ.

    ಎಲೆ ಮರೆಕಾಯಿಯಂತಿದ್ದ ನಿತ್ಯಾಶ್ರೀ ಹಾಗೂ ತನುಶ್ರೀ ಸಹೋದರಿಯರ ಪ್ರತಿಭೆ ವಿಶ್ವ ಯೋಗ ದಿನದಿಂದಾಗಿ ಬೆಳಕಿಗೆ ಬಂದಿದ್ದು, ಸದ್ಯ ಈ ಸಹೋದರಿಯರು ಅನೇಕರ ಮನೆ ಮಾತಾಗಿದ್ದಾರೆ.

  • ಕೆರೆಯಲ್ಲಿ ಬಿದ್ದು ಅಕ್ಕ-ತಂಗಿ ಸಾವು- ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು!

    ಕೆರೆಯಲ್ಲಿ ಬಿದ್ದು ಅಕ್ಕ-ತಂಗಿ ಸಾವು- ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು!

    ಕೋಲಾರ/ಚಿತ್ರದುರ್ಗ: ಕೆರೆಯಲ್ಲಿ ಬಿದ್ದು ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದಲ್ಲಿ ನಡೆದಿದೆ.

    ಭವ್ಯ (10) ಮತ್ತು ಶಿಲ್ಪಾ(7) ಮೃತ ಸಹೋದರಿಯರು. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಗುರುವಾರ ಆಟವಾಡಲು ಹೋದಾಗ ಇಬ್ಬರು ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಶಿಲ್ಪಾಳ ಶವ ದೊರಕಿದ್ದು, ಭವ್ಯ ಶವ ಪತ್ತೆಗೆ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾದ ಘಟನೆ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳುಬಾಳು ಗುರುಪೀಠ ಶಾಂತಿ ವನದಲ್ಲಿರುವ ರೋಚೆಕ್ ಚೆಕ್ ಡ್ಯಾಂನಲ್ಲಿ ನಡೆದಿದೆ.

    ದರ್ಶನ್(12), ಶಿವರಾಜ್(15) ಮತ್ತು ಆಕಾಶ್(15) ಮೃತ ದುರ್ದೈವಿಗಳು. ಬಾಲಕರು ಬೇಸಿಗೆ ಶಿಬಿರಕ್ಕೆ ಬಂದಿದ್ದು, ಚೆಕ್ ಡ್ಯಾಂನಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಭರಮಸಾಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • ರಾತ್ರಿ ಮದ್ವೆಗೆ ಹೋದ ಸಹೋದರಿಯರು ಮುಂಜಾನೆ ಶವವಾಗಿ ಪತ್ತೆ!

    ರಾತ್ರಿ ಮದ್ವೆಗೆ ಹೋದ ಸಹೋದರಿಯರು ಮುಂಜಾನೆ ಶವವಾಗಿ ಪತ್ತೆ!

    ಲಕ್ನೋ: ಇಬ್ಬರು ಅಪ್ರಾಪ್ತ ಸಹೋದರಿಯರನ್ನ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ.

    ಮೃತರನ್ನ 17 ವರ್ಷದ ಸಂಧ್ಯಾ ಹಾಗೂ 13 ವರ್ಷದ ಶಾಲು ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಇಬ್ಬರು ಸಹೋದರಿಯರ ಮೃತದೇಹ ಕೆಲಾಮು ಗ್ರಾಮದಿಂದ ಸುಮಾರು 500 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಮೃತ ದೇಹಗಳನ್ನು ನೋಡಿದ ತಕ್ಷಣ ಸ್ಥಳೀಯರು ಅವರ ಪೋಷಕರಿಗೆ ಮತ್ತು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

    ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಆಗ ಮೃತ ದೇಹಗಳ ಸ್ಥಳದಲ್ಲಿ ಗುಂಡುಗಳು ಮತ್ತು ಚಪ್ಪಲಿಗಳು ಕಂಡು ಬಂದಿದೆ.

    ಸಹೋದರಿಯರಿಬ್ಬರು ಸೋಮವಾರ ಸಂಜೆ ಶೌಚಾಯಲಕ್ಕೆಂದು ತೆರಳಿದ್ದರು. ಆದರೆ ತುಂಬಾ ಸಮಯವಾದರೂ ಮನೆಗೆ ಹಿಂದಿರುಗಿರಲಿಲ್ಲ. ಬಳಿಕ ಕುಟುಂಬದವರು ಗ್ರಾಮದಲ್ಲಿ ನಡೆಯುತ್ತಿರುವ ಮದುವೆಗೆ ಹೋಗಿದ್ದಾರೆ ಎಂದು ತಿಳಿದುಕೊಂಡಿದ್ದಾರೆ. ಆದರೆ ಮುಂಜಾನೆ ಮಕ್ಕಳ ಶವವನ್ನು ಕಂಡು ಆಘಾತಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಾವು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದೇವೆ. ಈ ಬಗ್ಗೆ ತನಿಖೆಯನ್ನು ಆರಂಭಿಸಿದ್ದೇವೆ. ಆದರೆ ಗ್ರಾಮಸ್ಥರು ಇಬ್ಬರು ಹುಡುಗಿಯರ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಅಂತ ಶಂಕಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ ಅಶೋಕ್ ತ್ರಿಪಾಠಿ ತಿಳಿಸಿದ್ದಾರೆ.

    ಬೆಳಿಗ್ಗೆ ಕರೆ ನಮ್ಮ ಮಕ್ಕಳ ಹತ್ಯೆಯ ಬಗ್ಗೆ ತಿಳಿಸಿದಾಗ ನಮಗೆ ಆಘಾತವಾಯಿತು. ನಾವು ಯಾರೊಂದಿಗೂ ಯಾವುದೇ ದ್ವೇಷವನ್ನು ಇಟ್ಟುಕೊಂಡಿಲ್ಲ. ಆದರೆ ಯಾಕೆ ನಮ್ಮ ಹೆಣ್ಣು ಮಕ್ಕಳನ್ನು ಕೊಲೆ ಮಾಡಿದ್ದಾರೆ ಅಂತ ತಿಳಿದಿಲ್ಲ ಎಂದು ಹುಡುಗಿಯರ ತಂದೆ ನೋವಿನಲ್ಲಿ ಹೇಳಿದ್ದಾರೆ.

    ಪೊಲೀಸರು ಅಪರಿಚಿತರ ವಿರುದ್ಧ ದೂರು ದಾಖಲು ಮಾಡಿ ತನಿಖೆ ಆರಂಭಿಸಿದ್ದು ಈಗ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಸ್ಥಳದಲ್ಲಿ ಬಿದ್ದಿದ್ದ ಬುಲೆಟ್ ಹಾಗೂ ಚಪ್ಪಲಿಯನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಶೋಕ್ ತ್ರಿಪಾಠಿ ತಿಳಿಸಿದ್ದಾರೆ.

    ಇಟವಾ ಕ್ಷೇತ್ರದ ಶಾಸಕರಾಗಿರುವ ಸರಿತಾ ಭದೌರಿಯಾ ಪ್ರತಿಕ್ರಿಯಿಸಿ, ನಿಷ್ಪಕ್ಷಪಾತ ತನಿಖೆಯನ್ನು ಮಾಡಲಾಗುತ್ತದೆ. ಆರೋಪಿಗಳನ್ನ ಶೀಘ್ರವಾಗಿ ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

  • ತಂಗಿಗೆ ಮದ್ವೆ ನಿಶ್ಚಯಿಸಿದ್ರು – ಸಹೋದರಿಯರಿಬ್ಬರು ಮನೆ ಬಿಟ್ಟು ಹೋಗಿ ಆತ್ಮಹತ್ಯೆಗೆ ಶರಣಾದ್ರು!

    ತಂಗಿಗೆ ಮದ್ವೆ ನಿಶ್ಚಯಿಸಿದ್ರು – ಸಹೋದರಿಯರಿಬ್ಬರು ಮನೆ ಬಿಟ್ಟು ಹೋಗಿ ಆತ್ಮಹತ್ಯೆಗೆ ಶರಣಾದ್ರು!

    ಹೈದರಾಬಾದ್: ಮದುವೆ ನಿಶ್ಚಯ ಮಾಡಿದ್ದಕ್ಕೆ ಸಹೋದರಿಯರಿಬ್ಬರು ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಅದಿಲಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ಅದಿಲಾಬಾದ್ ಜಿಲ್ಲೆಯ ನಾರಡಿಗಂಡ ಮಂಡಲಮ್ ನ ಬಂಡಿಡಿ ಗ್ರಾಮದ ಕಮಲ್ ಸಿಂಗ್ ಮಕ್ಕಳಾದ ಅಂಜುಲಾ (18) ಮತ್ತು ಅರ್ಚನಾ (19) ಆತ್ಮಹತ್ಯೆಗೆ ಶರಣಾದ ಸಹೋದರಿಯರು ಎಂದು ಗುರುತಿಸಲಾಗಿದೆ.

    ಕಿರಿಯ ಸಹೋದರಿ ಅಂಜುಲಾ 7ನೇ ತರಗತಿವರೆಗೆ ಓದಿದ್ದರೆ, ಅರ್ಚನಾ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಇವರ ಪೋಷಕರು ಅಂಜುಲಾಗೆ ವರನನ್ನು ನೋಡಿ ವಿವಾಹ ನಿಶ್ಚಯ ಮಾಡಿದ್ದರು. ಆದರೆ ಅಂಜುಲಾ, ನನಗೆ ಹುಡುಗ ಇಷ್ಟ ಇಲ್ಲ. ನಾನು ಆತನನ್ನು ಮದುವೆ ಆಗುವುದಿಲ್ಲ ಎಂದು ತಂದೆ ಬಳಿ ಹೇಳಿದ್ದಾಳೆ. ಆದರೆ ಪೋಷಕರು ಆಕೆಯ ಮಾತಿಗೆ ಕಿವಿಗೊಡಲಿಲ್ಲ. ಅಷ್ಟೇ ಅಲ್ಲದೇ ನಾನು ನೋಡಿದ ವರನನ್ನು ನೀನು ಮದುವೆಯಾಗಬೇಕೆಂದು ಒತ್ತಾಯಿಸಿದ್ದಾರೆ.

    ಅಂಜುಲಾ ಮದುವೆ ವಿಚಾರದಿಂದ ಖಿನ್ನತೆಗೆ ಒಳಗಾಗಿದ್ದು, ಅರ್ಚನಾ ನನ್ನು ಜೊತೆಗೆ ಕರೆದುಕೊಂಡು ಪೋಷಕರಿಗೆ ಹೊರಗೆ ಹೋಗುತ್ತಿದ್ದೇವೆ ಎಂದು ಹೇಳಿ ಮನೆಯಿಂದ ಹೊರ ಹೋಗಿದ್ದಾರೆ. ಆದರೆ ತುಂಬಾ ಸಮಯವಾದರೂ ಇಬ್ಬರು ಮನೆಗೆ ಹಿಂದಿರುಗಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಮಕ್ಕಳು ಕಾಣೆಯಾಗಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಮಾಹಿತಿ ತಿಳಿಸಿದ್ದಾರೆ ಎಂದು ಎಸ್.ಐ ವೆಂಕಣ್ಣ ತಿಳಿಸಿದ್ದಾರೆ.

    ಪೊಲೀಸರು ಇಬ್ಬರು ಸಹೋದರಿಯರಿಗಾಗಿ ಹುಡುಕಾಟ ಪ್ರಾರಂಭಿಸಿದ್ದು, ಇಬ್ಬರೂ ಸಹೋದರಿಯರು ಹೈದರಾಬಾದ್ ಗೆ ಬಂದು ಅಲ್ಲಿಂದ ಇಕೋಡಾ ಮತ್ತು ಸಿರ್ಕೊಂಡಾಗೆ ಹೋಗಿದ್ದಾರೆ. ಸಿರ್ಕೊಂಡಾದಲ್ಲಿ ಇಬ್ಬರು ಕೀಟನಾಶಕವನ್ನು ಸೇವಿಸಿದ್ದಾರೆ. ಇದನ್ನು ಗ್ರಾಮಸ್ಥರು ನೋಡಿದ್ದು, ತಕ್ಷಣ ಪೋಷಕರು ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

    ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಇಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಅವರನ್ನು ಸಮೀಪದ ಆರ್‍ಐಎಂಎಕ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    ಈ ಘಟನೆ ಕುರಿತು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮಾಡುತ್ತಿದ್ದಾರೆ.

  • ಕಿಕ್ ಬಾಕ್ಸರ್ ಆಗ್ಬೇಕೆಂಬ ಆಸೆ ಹೊತ್ತ ತಂಗಿಯರ ಶಿಕ್ಷಣಕ್ಕಾಗಿ ಸಹಾಯ ಹಸ್ತ ಚಾಚಿದ ಅಣ್ಣ

    ಕಿಕ್ ಬಾಕ್ಸರ್ ಆಗ್ಬೇಕೆಂಬ ಆಸೆ ಹೊತ್ತ ತಂಗಿಯರ ಶಿಕ್ಷಣಕ್ಕಾಗಿ ಸಹಾಯ ಹಸ್ತ ಚಾಚಿದ ಅಣ್ಣ

    ಬಾಗಲಕೋಟೆ: ಅವರಿಬ್ಬರೂ ಪ್ರತಿಭಾವಂತ ಯುವತಿಯರು, ಅವರಿಗೆ ಇರಲಿಕ್ಕೆ ಒಂದು ಸ್ವಂತ ಮನೆಯೂ ಇಲ್ಲ. ಸದ್ಯ ಅಜ್ಜಿಯ ಮನೆಯಲ್ಲೇ ವಾಸಿಸ್ತಿರೋ ಆ ಯುವತಿಯರು, ಫೇಮಸ್ ಕಿಕ್ ಬಾಕ್ಸರ್ ಆಗಬೇಕು, ನಂತ್ರ ಒಳ್ಳೆಯ ಕೆಲಸ ಹಿಡಿದು ತಮ್ಮ ಬದುಕಿಗಾಗಿ ಜೀವನ ಸವೆಸುತ್ತಿರೋ ಅಣ್ಣ, ಅಜ್ಜಿಯನ್ನ ಚೆನ್ನಾಗಿ ನೋಡಿಕೊಳ್ಳಬೇಕೆಂಬ ಕನಸು ಹೊಂದಿದ್ದಾರೆ. ಆದ್ರೆ ಸದ್ಯ ಆ ಯುವತಿಯರ ಸಾಧನೆಗೆ ಬಡತನ ಮುಳುವಾಗಿದೆ. ತಂಗಿಯರ ಓದಿಗಾಗಿ ಕಲಿಕೆ ಬಿಟ್ಟ ಅಣ್ಣ, ಕೂಲಿ ಮಾಡ್ತಾ ಇಬ್ಬರು ತಂಗಿಯರಿಗೆ ಶಿಕ್ಷಣ ಕೊಡಿಸುತ್ತಾ ಸ್ವಾಭಿಮಾನದ ಜೀವನ ಸಾಗಿಸ್ತಿದ್ದಾರೆ. ತಂಗಿಯರ ಮುಂದಿನ ಶಿಕ್ಷಣಕ್ಕೆ ಕೊಡುವಷ್ಟು ಅಣ್ಣನ ಬಳಿ ದುಡ್ಡಿಲ್ಲ. ತಂಗಿಯರಿಬ್ಬರ ಶಿಕ್ಷಣಕ್ಕಾಗಿ ಅಣ್ಣ ಸಹಾಯ ಬೇಡ್ತಿದ್ದಾರೆ.

    ಸಾಧನೆಯ ಕನಸ್ಸುಗಳನ್ನೇ ಹೊತ್ತ ಸೋದರಿಯರಿಬ್ಬರ ಶಿಕ್ಷಣಕ್ಕಾಗಿ ಅಣ್ಣ ಕಲಿಕೆ ಬಿಟ್ಟು ಕೂಲಿ ಮಾಡಲು ಮುಂದಾಗಿದ್ದಾರೆ. ಎಳೆಯ ವಯಸ್ಸಿನಲ್ಲೇ ತಂದೆ-ತಾಯಿ ಕಳೆದುಕೊಂಡು ಅಣ್ಣ-ತಂಗಿಯರು ಅಜ್ಜಿಯ ಮನೆಯಲ್ಲೇ ವಾಸಿಸುತ್ತಿದ್ದಾರೆ. ಅಂದಹಾಗೆ ಸಾಧನೆಯ ಮೆಡಲ್ ಹಾಗೂ ಸರ್ಟಿಫೀಕೆಟ್ ಹಿಡಿದ ಈ ಸೋದರಿಯರ ಹೆಸರು ಶಿಲ್ಪಾ ಹಾಗೂ ಲಕ್ಷ್ಮಿ. ಇವರ ಸಾಧನೆಯ ಹಿಂದಿರುವ ಶಕ್ತಿಯೇ ಅಣ್ಣ ವಿಠ್ಠಲ್ ಹಣಮರ್. ಈ ಮೂವರು ಒಡಹುಟ್ಟಿದ್ದ ಅಣ್ಣ, ತಂಗಿಯರು. ಸದ್ಯ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ತುಮ್ಮರಮಟ್ಟಿ ಗ್ರಾಮದ ಅಜ್ಜಿ ಮಲ್ಲಮ್ಮ ಮನೆಯಲ್ಲಿ ವಾಸಿಸುತ್ತಿದ್ದಾರೆ.

    ಹತ್ತು ವರ್ಷದ ಹಿಂದೆ ವಿಠ್ಠಲ್ ಹನಮರ್ ತಂದೆ ತಾಯಿ ತೀರಿ ಹೋದ್ರು. ಆಗ ಸಂಸಾರದ ನೊಗ ಹೊತ್ತ ವಿಠ್ಠಲ್, ಸೆಕೆಂಡ್ ಪಿಯುಸಿಯಲ್ಲಿ ತನ್ನ ವ್ಯಾಸಂಗವನ್ನು ಅರ್ಧಕ್ಕೆ ಬಿಟ್ಟು, ತಮ್ಮ ತಂಗಿಯರಾದ ಶಿಲ್ಪಾ ಹಾಗೂ ಲಕ್ಷ್ಮಿಗೆ ಶಿಕ್ಷಣ ಕೊಡಿಸಲು, ಕೂಲಿ ಕೆಲ್ಸಕ್ಕೆ ಇಳಿದ್ರು. ಸ್ವಂತ ಮನೆಯೂ ಇಲ್ಲದ ಈ ಬಡಪಾಯಿಗಳಿಗೆ ಅಜ್ಜಿಯ ಮನೆಯೇ ಜೀವನಾಧಾರ. ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡ್ತಿರೋ ಶಿಲ್ಪಾ ಹಾಗೂ ಲಕ್ಷ್ಮಿ, ಕಿಕ್ ಬಾಕ್ಸಿಂಗ್‍ನಲ್ಲಿ ರಾಜ್ಯ ಮಟ್ಟದಲ್ಲಿ ಸಾಕಷ್ಟು ಮೆಡಲ್ ಗಳಿಸಿ, ರಾಷ್ಟ್ರಮಟ್ಟದ ಸ್ಪರ್ಧೆಯಲ್ಲೂ ಭಾಗವಹಿಸಿ ಸಾಧನೆ ಮಾಡಿದ್ದಾರೆ. ಆದ್ರೆ ಇದೀಗ ತಂಗಿಯರ ಮುಂದಿನ ಶಿಕ್ಷಣಕ್ಕೆ ಅಣ್ಣನ ಬಳಿ ದುಡ್ಡಿಲ್ಲ.

    ಹೌದು. ಒಂದು ಕಡೆ ಬೆಂಬಿಡದೇ ಕಾಡ್ತಿರೋ ಬಡತನ, ಮತ್ತೊಂದೆಡೆ ಫೇಮಸ್ ಕಿಕ್ ಬಾಕ್ಸರ್ ಆಗಬೇಕು ನಂತ್ರ ಒಳ್ಳೆಯ ಕೆಲಸ ಹಿಡಿಯಬೇಕೆಂಬ ಕನಸು ಹೊಂದಿರುವ ತಂಗಿಯರ ಸಾಧನೆಗೆ ಹೆಗಲಾಗಬೇಕೆಂಬ ಮಹಾದಾಸೆ ಹೊಂದಿರುವ ವಿಠ್ಠಲ್, ಮದುವೆಯಾಗದೇ ಕೂಲಿ ಮಾಡಿ ಜೀವ ಸಾಗಿಸ್ತಿದ್ದಾರೆ. ಕಲಾ ವಿಭಾದ ಮೂರನೇಯ ವರ್ಷದಲ್ಲಿ ವ್ಯಾಸಂಗ ಮಾಡ್ತಿರೋ ಶಿಲ್ಪಾ ಹಾಗೂ ಲಕ್ಷ್ಮಿ ಮುಂದೆ ಬಿಪಿಎಡ್ಡ್ ಮಾಡಿ, ದೈಹಿಕ ಶಿಕ್ಷಕಿಯರಾಗಬೇಕು ಅಥವಾ ಯಾವುದಾದರೂ ಒಳ್ಳೆಯ ಕೆಲಸ ಹಿಡಿದು, ಅಣ್ಣ ಹಾಗೂ ಅಜ್ಜಿಯನ್ನ ಚೆನ್ನಾಗಿ ನೋಡಿಕೊಳ್ಬೇಕೆಂಬ ಬೆಟ್ಟದಷ್ಟು ಆಸೆ ಹೊಂದಿದ್ದಾರೆ.

    ಆದ್ರೆ ಅಣ್ಣ ವಿಠ್ಠಲ್ ಹನಮರ್ ಬಳಿ ದುಡ್ಡಿಲ್ಲ. ಹಾಗಾಗಿ ತಂಗಿಯರಿಬ್ಬರ ಮುಂದಿನ ವಿದ್ಯಾಭ್ಯಾಕ್ಕಾಗಿ ಸಹಾಯ ಮಾಡಿ ಎಂದು ಗೋಗರೆಯುತ್ತಿದ್ದಾರೆ. ಇತ್ತ ಅಜ್ಜಿ ಇರೋವರೆಗೂ ಅವರ ಮನೆಯಲ್ಲಿದ್ದೇವೆ. ಒಂದು ವೇಳೆ ಅಜ್ಜಿ ತೀರಿ ಹೋದ್ರೆ ನಾವು ಅನಾಥರಾಗುತ್ತೇವೆ. ಹಾಗಾಗಿ ಸರ್ಕಾರ ಅಥವಾ ಸಂಘ ಸಂಸ್ಥೆಯವರು ಸಹಾಯದಿಂದ ನಮಗೆ ಒಂದು ಆಶ್ರಯ ಮನೆಯನ್ನು ಒದಗಿಸಿ ಎಂದು ಮನವಿ ಮಾಡಿಕೊಳ್ತಿದ್ದಾರೆ. ಇನ್ನು ಇದೇ ತಿಂಗಳು 20ರಂದು ಶಿವಮೊಗ್ಗಾದಲ್ಲಿ ನಡೆಯೋ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಲು ಶಿಲ್ಪಾ ಹಾಗೂ ಲಕ್ಷ್ಮಿಗೆ ಆರ್ಥಿಕ ಸಹಾಯ ಮಾಡಿ ಅಂತ ಊರಿನ ಜನ ಹೇಳುತ್ತಿದ್ದಾರೆ.

    ಒಟ್ಟಿನಲ್ಲಿ ಸಾಧನೆಯ ಕನಸುಗಳನ್ನೇ ಹೊತ್ತ ಸೋದರಿಯರು, ಈ ಸೋದರಿಯರಿಬ್ಬರ ಸಾಧನೆಗೆ ಹೆಗಲಾಬೇಕೆಂಬ ಅಣ್ಣ. ಒಟ್ಟಿನಲ್ಲಿ ಈ ಮಾದರಿ ಅಣ್ಣ ತಂಗಿಯರ ಸ್ಥಿತಿಗೆ ಯಾರಾದ್ರೂ ತಕ್ಕಮಟ್ಟಿನ ಸಹಾಯಹಸ್ತ ಚಾಚಲಿ ಅನ್ನೋದು ನಮ್ಮ ಮನವಿ.

    https://www.youtube.com/watch?v=IrNmFWFRj5M