Tag: ಸಾಂಸ್ಕೃತಿಕ ಕಾರ್ಯಕ್ರಮ

  • ಪುರಾಣಗಳ ಕಥೆ ಹೇಳುವ ದಶಮಂಟಪಗಳೇ ಮಡಿಕೇರಿ ದಸರಾದ ಆಕರ್ಷಣೆ

    ಪುರಾಣಗಳ ಕಥೆ ಹೇಳುವ ದಶಮಂಟಪಗಳೇ ಮಡಿಕೇರಿ ದಸರಾದ ಆಕರ್ಷಣೆ

    ತಿಹಾಸಿಕ ಮಡಿಕೇರಿ ದಸರಾಕ್ಕೆ ಮೈನವಿರೇಳಿಸೋ ದಶಮಂಟಪಗಳ ಶೋಭಾಯಾತ್ರೆಯೇ ಆಕರ್ಷಣೆ. ದಶಮಂಟಪಗಳ ಯಾತ್ರೆ ಜನರ ಮನಸೂರೆಗೊಳ್ಳುತ್ತದೆ. ಧ್ವನಿ ಬೆಳಕಿನ ಸಂಯೋಜನೆಯೊಂದಿಗೆ ನಡೆಯುವ ಚಿತ್ರ ಪ್ರದರ್ಶನ ಜನರನ್ನ ದೈವಲೋಕಕ್ಕೇ ಕರೆದೊಯ್ಯುವಂತೆ ಭಾಸವಾಗುತ್ತದೆ. ದುಷ್ಟ ಸಂಹಾರದ ಸಂಕೇತ ನವರಾತ್ರಿಯ ಅಂಗವಾಗಿ ನಡೆಯುವ ದಶಮಂಟಪ ಪ್ರದರ್ಶನ ದೇವಾನು ದೇವತೆಗಳ ಪವಾಡಕ್ಕೆ ಸಾಕ್ಷಿಯಾದರೆ ಸಹಸ್ರಾರು ಭಕ್ತರು ಭಾವಪರವಶತೆಯಲ್ಲಿ ಮಿಂದೆಳುತ್ತಾರೆ.

    ಆ ದಿನ ರಾತ್ರಿ ಮಡಿಕೇರಿ ನಗರದ ಯಾವುದೇ ರಸ್ತೆಗಳಲ್ಲಿ ನೋಡಿದ್ರೂ ಜನಸಾಗರವೇ ಇರುತ್ತದೆ. ಕಣ್ಣು ಕೋರೈಸೋ ವಿದ್ಯುತ್ ದೀಪಾಲಂಕಾರ, ಹುಚ್ಚೆದ್ದು ಕುಣಿಯುವ ಜನರು, ಅಬ್ಬರದಿಂದ ಪ್ರದರ್ಶನಗೊಳ್ಳುವ ಸ್ಥಬ್ಧ ಚಿತ್ರಗಳು, ಇದು ಮಡಿಕೇರಿ ದಸರಾದ ಕೊನೆಯದಿನದ ಶೋಭಾಯಾತ್ರೆಯ ಸಂಭ್ರಮಕ್ಕೆ ಸಾಕ್ಷಿಯಾಗುತ್ತದೆ.

    ಇನ್ನೇನು ದಸರಾ ಮುಗಿಯುವ ಹಂತಕ್ಕೆ ಬಂದಿದ್ದು, ದಶಮಂಟಪಗಳ ದರ್ಶನ ಮೈನವಿರೇಳಿಸುವಂತಿರುತ್ತದೆ‌. ದೇವಾನು ದೇವತೆಗಳ ಲೀಲೆಗಳನ್ನ ಬಿಂಬಿಸೋ ಕಥಾ ಪ್ರಸಂಗಗಳ ಸಂಯೋಜನೆ ಎಲ್ಲರ ಗಮನಸೆಳೆಯುತ್ತಿದೆ. ಎದೆ ನಡುಗಿಸೋ ಶಬ್ದ, ಅದಕ್ಕೆ ತಕ್ಕಂತೆ ಬೆಳಕು, ಇವೆಲ್ಲವುಗಳಿಗೆ ಪೂರಕವಾಗಿ ನರ್ತಿಸೋ ದೇವರ ಮೂರ್ತಿಗಳು ನೆರೆದಿದ್ದ ಜನರನ್ನ ಒಮ್ಮೆ ದೇವಲೋಕವೇ ಧರೆಗಿಳಿದಂತಿದೆ.

    ಸಹಸ್ರಾರು ಸಂಖ್ಯೆಯ ಭಕ್ತರು ಹಲವೆಡೆ ಮಂಟಪ ದರ್ಶನ ಮಾಡಿ ಭಾವಪರವಶರಾಗುತ್ತಿದ್ದಾರೆ. ಒಂದೊಂದು ಮಂಟಪಗಳೂ ಒಂದು ಪುರಾಣಕಥೆಗಳನ್ನ ಸಾರುತ್ತಿವೆ.

    ‘ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು’ ಎಂಬ ಮಾತಿನಂತೆ ಮಡಿಕೇರಿ ದಸರಾ, ರಾತ್ರಿ 12 ಗಂಟೆಗೆ ಶುರುವಾದ್ರೆ ದಶಮಂಟಪಗಳ ಉತ್ಸವ ಬೆಳಿಗ್ಗೆ 5 ಗಂಟೆವರೆಗೂ ನಡೆಯುತ್ತದೆ. ರಾಜ್ಯದ ವಿವಿಧೆಡೆಗಳಿಗೆ ಆಗಮಿಸಿದ್ದ ಸಹಸ್ರಾರು ಪ್ರವಾಸಿಗರು ಮೆರವಣಿಗೆ ನೋಡಲು ಮುಗಿಬೀಳುತ್ತಾರೆ‌‌. ರಾತ್ರಿಯಿಡೀ ಮಂಜಿನ ನಗರಿಯ ರಸ್ತೆಗಳಲ್ಲಿ ಜನಪ್ರವಾಹವೇ ಹರಿಯುತ್ತದೆ. ದೇವಾನು ದೇವತೆಗಳ ಶಕ್ತಿ ಲೀಲೆಗಳನ್ನು ಕಣ್ತುಂಬಿ ಕೊಂಡ ಜನತೆ ಖುಷಿಯ ಅಲೆಯಲ್ಲಿ ತೇಲುತ್ತಾರೆ.

    ಪುರಾಣ ಹಾಗು ಪೌರಾಣಿಕ ಕಥಾವಸ್ತುಗಳನ್ನು ನಿರೂಪಿಸಿ ನೀಡಿದ ಪ್ರದರ್ಶನ ಕಣ್ಣಿಗೆಕಟ್ಟುವಂತೆ ದೇವಾನು ದೇವತೆಗಳ ಶಕ್ತಿ, ಚಮತ್ಕಾರ, ಪವಾಡಗಳನ್ನು ವಿವರಿಸುತ್ತದೆ. ಒಂದೆಡೆ ದಶಮಂಟಪಗಳ ಮೆರವಣಿಗೆ ನಿಧಾನಗತಿಯಲ್ಲಿ ಸಾಗುತ್ತಿದ್ದರೆ, ಜನರು ಅಲ್ಲಲ್ಲಿ ನಿಂತು ಕುಣಿದು ಕುಪ್ಪಳಿಸುತ್ತಾ ಎಂಜಾಯ್ ಮಾಡುತ್ತಾರೆ. ವರ್ಷಕ್ಕೊಮ್ಮೆ ಆಗಮಿಸೋ ನವರಾತ್ರಿ ಉತ್ಸವವನ್ನು ರಾತ್ರಿಯಿಡೀ ಕಣ್ತುಂಬಿಕೊಂಡು ಸಂತಸದ ಅಲೆಯಲ್ಲಿ ತೇಲುತ್ತಾರೆ.

    ಒಟ್ನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ತೆರೆಬೀಳುತ್ತಿದ್ದಂತೆ ಶುರುವಾಗೋ ಮಂಜಿನ ನಗರಿ ದಸರಾ ಅಬ್ಬರ ಸಹಸ್ರಾರು ಜನರ ಸಂಭಮ ಉಲ್ಲಾಸಕ್ಕೆ ಕಾರಣವಾಗುತ್ತೆ, ವಿವಿಧ ಜಿಲ್ಲೆಗಳಿಂದ ಬರೋ ಸಹಸ್ರಾರು ಪ್ರವಾಸಿಗರು, ಸಾಗರೋಪಾದಿಯಲ್ಲಿ ನೆರೆದು ವೈಭವದ ದಶಮಂಟಪಗಳನ್ನು ವೀಕ್ಷಿಸುತ್ತಾರೆ. ಲಕ್ಷಾಂತರ ರೂಪಾಯಿ ಖರ್ಚುಮಾಡಿ, ಎರಡೆರಡು ಟ್ರ್ಯಾಕ್ಟರ್ ಗಳನ್ನು ಬಳಸಿ ಸಿದ್ಧಪಡಿಸಿದ ಟ್ಯಾಬ್ಲೋಗಳ ಪ್ರದರ್ಶನ ಮಾತ್ರ ಇಲ್ಲಿಗೆ ಆಗಮಿಸೋ ಪ್ರವಾಸಿಗರನ್ನ ಒಮ್ಮೆ ದೇವಲೋಕ ಸಂಚಾರಮಾಡಿಸೋದ್ರಲ್ಲಿ ಅಚ್ಚರಿಯಿಲ್ಲ.

    ಬನ್ನಿ ಮಡಿಕೇರಿ ದಸರಾ ಕಣ್ತುಂಬಿಕೊಳ್ಳಿ….

  • ಹುತ್ತರಿ ಸಂಭ್ರಮ – ಕೊಡಗಿನಲ್ಲಿ ಜಾನಪದ ಲೋಕ ಅನಾವರಣ

    ಹುತ್ತರಿ ಸಂಭ್ರಮ – ಕೊಡಗಿನಲ್ಲಿ ಜಾನಪದ ಲೋಕ ಅನಾವರಣ

    ಮಡಿಕೇರಿ: ಕೊಡಗಿನಾದ್ಯಂತ ಹುತ್ತರಿಯ ಸಂಭ್ರಮ ಮನೆ ಮಾಡಿದೆ. ಧಾನ್ಯ ಲಕ್ಷ್ಮಿಯನ್ನು ಮನೆಗೆ ತುಂಬಿಸಿಕೊಳ್ಳುವ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಕೊಡವ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡಿವೆ.

    ಕೊಡವರ ವಿಶೇಷ ವಾಲಗದೊಂದಿಗೆ ಸಂಸ್ಕೃತಿ ಆಚಾರ ವಿಚಾರಗಳ ಆಟ್ ಪಾಟ್ ಕಾರ್ಯಕ್ರಮಗಳಿಗೆ ಮಡಿಕೇರಿ ಕೋಟೆಯ ಆವರಣ ಸಾಕ್ಷಿಯಾಯಿತು. ಕೊಡವರ ಸಾಂಪ್ರದಾಯಿಕ ಮತ್ತು ಶ್ರೇಷ್ಠ ಹಬ್ಬವೆಂದು ಗುರುತಿಸಿಕೊಂಡಿರುವ ಹುತ್ತರಿಯ ಆಚರಣೆ ಮಡಿಕೇರಿಯ ಕೋಟೆಯ ಆವರಣದಲ್ಲಿ ಮನೆ ಮಾಡಿತ್ತು.

    ಇತಿಹಾಸದ ಗತವೈಭವಕ್ಕೆ ಕೋಟೆ ಆವರಣ ಸಾಕ್ಷಿಯಾಯಿತು. ಹಿಂದಿನಿಂದಲೂ ಆಚರಿಸಿಕೊಂಡು ಬಂದ ಕಲೆ ಸಂಸ್ಕೃತಿಗಳು ಅನಾವರಣಗೊಂಡವು. ಕೊಡಗಿನ ಸುಗ್ಗಿ ಹಬ್ಬ ಹುತ್ತರಿ ಪ್ರಯುಕ್ತ ನಡೆದ ಸಾಂಪ್ರದಾಯಿಕ ಕೋಲಾಟ ನೋಡುಗರ ಮನಸೂರೆಗೊಂಡಿತು.

    ಹಿಂದೆ ಕೊಡಗನ್ನಾಳುತ್ತಿದ್ದ ರಾಜರು ಕೋಟೆಯ ಆವರಣದಲ್ಲಿ ಕೋಲಾಟ ನಡೆಸಲು ಅನುವು ಮಾಡಿಕೊಟ್ಟಿದ್ದರು. ಆ ನಂತರದಲ್ಲಿ ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೋಲಾಟಗೆ ಕೋಟೆಯ ಹೊರತಾಗಿ ಗದ್ದುಗೆಯ ಬಳಿ ಅವಕಾಶ ಕಲ್ಪಿಸಿಕೊಟ್ಟರು. ತದನಂತರದಲ್ಲಿ ಕೆಲವು ವರ್ಷಗಳ ಇತ್ತೀಚೆಗೆ ಮತ್ತೆ ಕೋಟೆ ಆವರಣದಲ್ಲಿ ಹುತ್ತರಿ ಕೋಲಾಟ ನಡೆಸುವ ಮೂಲಕ ತಮ್ಮ ಐತಿಹಾಸಿಕ ಕಲೆ ಸಂಸ್ಕೃತಿಯನ್ನು ಬಿಂಬಿಸಲಾಯಿತು.

  • ಕೊಡಗಿನ ಜನತೆಗೆ ನೆರವಾಗಲು ರಂಗಸಪ್ತಾಹ- ಭಾಗವಹಿಸಿ, ಸಹಾಯ ಮಾಡಿ

    ಕೊಡಗಿನ ಜನತೆಗೆ ನೆರವಾಗಲು ರಂಗಸಪ್ತಾಹ- ಭಾಗವಹಿಸಿ, ಸಹಾಯ ಮಾಡಿ

    ಬೆಂಗಳೂರು: ಕೊಡಗಿನ ಅನಾಹುತಕ್ಕೆ ನೆರವಾಗಲು ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹಾಗೂ ಸಮಾನ ಮನಸ್ಕರ ನೇತೃತ್ವದಲ್ಲಿ ಆರಂಭವಾದ ಪೀಪಲ್ ಫಾರ್ ಕೊಡಗು ತಂಡವು ರಂಗಸಪ್ತಾಹ ಹೆಸರಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದೆ.

    ಬೆಂಗಳೂರಿನ ಕಲಾಗ್ರಾಮದಲ್ಲಿ ನವೆಂಬರ್ 11 ರಿಂದ ನವೆಂಬರ್ 16ರ ತನಕ ಪ್ರತಿದಿನ ಸಂಜೆ 5.30ಕ್ಕೆ ಗಾಯನ ಹಾಗೂ 7ಕ್ಕೆ ನಾಟಕ ಪ್ರದರ್ಶನವಿರುತ್ತದೆ. ಟಿಕೆಟ್ ಬೆಲೆ 100 ರೂ. ಹಾಗೂ 600 ರೂ. ಸೀಸನ್ ಪಾಸ್ ದರ ನಿಗದಿ ಮಾಡಲಾಗಿದೆ.

    ಪೀಪಲ್ ಫಾರ್ ಪೀಪಲ್ ಮನವಿ ಏನು?
    ಮಳೆ ನಿಂತಿತು, ಕೊಡಗು ಕೂಡ ಜನರ ನೆನಪಿನಿಂದ ಮರೆಯಾಗತೊಡಗಿತು. ನಮ್ಮ ದೇಶದಲ್ಲಿ ಸಮಸ್ಯೆಗಳೇ ಹಾಗೆ. ತಕ್ಷಣದ ಅನುಭೂತಿ ಮುಗಿದ ಮೇಲೆ ನಾವೆಲ್ಲರೂ ಮರೆಯುತ್ತೇವೆ. ಆದರೆ ಕೊಡಗು ನಮ್ಮೆಲ್ಲರ ಹೆಮ್ಮೆ. ಈ ಕೊಡಗು ಸರಿ ಹೋಗಿಲ್ಲ ಸಮಸ್ಯೆಗಳ ಸಾಗರವೇ ಇದೆ. ಕೊಡಗನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಬೆಟ್ಟದಷ್ಟು ಕೆಲಸಗಳು ಬಾಕಿ ಇವೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತಿದ್ದರೂ ಮರುನಿರ್ಮಾಣಕ್ಕೆ ವರ್ಷಾನುಗಟ್ಟಲೆಯ ಬದ್ಧತೆ ಬೇಕಿದೆ, ಶ್ರಮ ಹಾಕಬೇಕಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ನಮ್ಮ “ಪೀಪಲ್ ಫಾರ್ ಪೀಪಲ್” ತಂಡ 25ಕ್ಕೂ ಹೆಚ್ಚು ದಿನಗಳ ಕಾಲ ಕೊಡಗಿನ ನೆರೆ ಪೀಡಿತ ಪ್ರದೇಶಗಳಲ್ಲಿ ನಿಂತು ಕೆಲಸ ಮಾಡಿದ್ದಲ್ಲದೆ ಸರಕಾರಕ್ಕೆ ಆಗಲೇಬೇಕಾದ 19 ಅವಶ್ಯ ಕೆಲಸಗಳ ಪಟ್ಟಿಯನ್ನು ಮನವಿ ಪತ್ರದ ಮೂಲಕ ಕೊಟ್ಟು, ಆ ನಿಟ್ಟಿನಲ್ಲಿ ಕಾರ್ಯೋನ್ಮುಕರಾಗಲು ಸಮಾಜದ ಎಲ್ಲ ಕ್ಷೇತ್ರಗಳ ಗಣ್ಯರನ್ನು ಕೈಜೋಡಿಸುವಂತೆ ಕೇಳಿಕೊಂಡಿದೆ. ಖುಷಿಯ ವಿಚಾರವೆಂದರೆ ಮಠ ಮಾನ್ಯಗಳಿಂದ ಹಿಡಿದು ರೈತ ಸಂಘದ ವರೆಗೆ ಎಲ್ಲರೂ ಕೈಜೋಡಿಸುತ್ತಿದ್ದಾರೆ.

    ಈಗ ಆಗಬೇಕಾಗಿದ್ದು ಏನು?
    ಜಾಗೃತಿ, 719 ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ, 6095 ಮನೆಗಳ ಮರುನಿರ್ಮಾಣ, 2000 ಜಾನುವಾರು ಮತ್ತು ಹೈನುಗಾರಿಕೆಗೆ ವ್ಯವಸ್ಥೆ, 183 ಶಾಲೆಗಳ ನಿರ್ಮಾಣ, ಹಾಳಾದ 13 ಸಾವಿರ ಹೆಕ್ಟೇರ್ ಭೂ ಪ್ರದೇಶವನ್ನು ವಾಸಯೋಗ್ಯವಾಗಿ ನಿರ್ಮಿಸುವುದು, ಕ್ಯಾಂಪ್ ಗಳ ನಿರ್ವಹಣೆ, ಮುಖ್ಯವಾಗಿ ಐದು ನದಿಗಳ ಪುನರುಜ್ಜೀವನ ಇದಕ್ಕೆ ಸಾಕಷ್ಟು ಶ್ರಮ ಬೇಕು ಜೊತೆಗೆ ಹಣವೂ ಬೇಕು. ಸಿಎಂ ಫಂಡ್ ಕೂಡ ಸಾಲುವುದಿಲ್ಲ. ಹತ್ತು ವರುಷದ ಶ್ರಮ ಬೇಡುವ ಸಮಸ್ಯೆ. ಈ ನಿಟ್ಟಿನಲ್ಲಿ ಪರಿಹಾರ ಕೆಲಸವಾಗಬೇಕಿದೆ. ತಾತ್ಕಾಲಿಕ ಉದ್ಯೋಗ ಮೇಳ, ಆರೋಗ್ಯ ಮೇಳ ಮೆಡಿಕಲ್ ಟರ್ಮ್ ಕೆಲಸ ಆಗಬೇಕು. ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ: Kodagigagi Rangasapthaha

    ಈ ಎಲ್ಲ ಸದುದ್ದೇಶಗಳಿಗಾಗಿ ಈ ರಂಗ ಸಪ್ತಾಹದ ಕಾರ್ಯಕ್ರಮ ನಾಡಿನ ಅತ್ಯುತ್ತಮ ರಂಗತಂಡಗಳು ನವೆಂಬರ್ 11 ರಿಂದ ನವೆಂಬರ್ 17 ರ ವರೆಗೆ ರಂಗ ಪ್ರದರ್ಶನ ನೀಡುವುದರ ಮೂಲಕ ಈ ಮಹಾತ್ಕಾರ್ಯಕ್ಕೆ ನೆರವಾಗುತ್ತಿದ್ದಾರೆ. ಈ ಮೂಲಕ ಏನು ಸಿಗುತ್ತದೊ ಅದನ್ನ ಕೊಡಗಿಗೆ ಬಳಸುವುದು ನಮ್ಮ ಉದ್ದೇಶ.

    ಇದೆಲ್ಲದರ ಜೊತೆ ಕೊಡಗಿನ ಸಮಸ್ಯೆಗಳನ್ನು ಒಳಗೊಂಡ ವೈಜ್ಞಾನಿಕ ವಿಶ್ಲೇಷಣೆಯ ಯಾವುದೇ ಪಕ್ಷ, ಸಂಘಟನೆ ಪರವಾಗಿರದ ತಜ್ಞರ ರಿಸರ್ಚ್ ಆಧಾರದಲ್ಲಿ ಸಹ್ಯಾದ್ರಿ ಬದುಕಿಗೆ ಪರ್ಯಾಯ ಆಂದೋಲನ ರೂಪಿಸುವ ಶಕ್ತಿಗಾಗಿ ಸವಿವರವಾದ ‘ಜಮ್ಮಾ ಭೂಮಿರ ಕಥೆ’ ಸಾಕ್ಷ್ಯಚಿತ್ರ ನಿರ್ಮಾಣದ ಕಾರ್ಯವನ್ನೂ ಹಮ್ಮಿಕೊಂಡಿದ್ದೇವೆ. ನಿಮ್ಮೆಲ್ಲರ ಕಿಂಚಿತ್ತು ಸಹಾಯ, ಉದಾರ ಸಹಾಯಹಸ್ತ ಮುಳುಗಿ ಹೋಗಿರುವ ನಮ್ಮದೇ ನಾಡಿನ ಜನರ ಬದುಕು ಕಟ್ಟುವಲ್ಲಿ ಸಹಕಾರಿಯಾಗುತ್ತದೆ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಕಾಂಗ್ರೆಸ್ ನಾಯಕರು ಗೈರು!

    ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಕಾಂಗ್ರೆಸ್ ನಾಯಕರು ಗೈರು!

    ಮೈಸೂರು: ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ದೋಸ್ತಿ ಪಕ್ಷದಲ್ಲಿನ ಮುನಿಸು ಮತ್ತೊಮ್ಮೆ ಎದ್ದು ಕಾಣಿಸಿದ್ದು, ಮೈಸೂರು-ಚಾಮರಾಜನಗರದ ಯಾವೊಬ್ಬ ಕಾಂಗ್ರೆಸ್ ಜನಪ್ರತಿನಿಧಿಯೂ ಸಮಾರಂಭಕ್ಕೆ ಬಂದಿರಲಿಲ್ಲ. ಇದೀಗ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಕಾಂಗ್ರೆಸ್ ಸಚಿವರು ಗೈರುಹಾಜರಾಗಿದ್ದಾರೆ.

    ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಗಳು ದಸರಾದ ಪ್ರಮುಖ ಆಕರ್ಷಣೆಯಾಗಿವೆ. ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಗೈರಾಗಿದ್ದಾರೆ. ಅರಮನೆಯ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಜೆಡಿಎಸ್ ಸಚಿವರುಗಳು ಹಾಗೂ ಬಿಜೆಪಿ ಶಾಸಕರಷ್ಟೇ ಭಾಗಿಯಾಗಿದ್ದಾರೆ. ದಸರಾ ಉದ್ಘಾನೆಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ವರೆಗೂ ಕಾಂಗ್ರೆಸ್ ಸಚಿವರು ಗೈರಾಗಿದ್ದಾರೆ. ಇದನ್ನು ಓದಿ: ದಸರಾ ಉದ್ಘಾಟನಾ ಸಮಾರಂಭದಲ್ಲೂ ದೋಸ್ತಿ ಪಕ್ಷದ ಮುನಿಸು ಬಹಿರಂಗ!

    ಸಚಿವೆ ಜಯಮಾಲ ಹೊರತು ಪಡಿಸಿ ಇನ್ನುಳಿದ ಕಾಂಗ್ರೆಸ್ ಸಚಿವರು ದಸರಾದಿಂದ ದೂರ ಉಳಿದಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಹಾಗೂ ದಸರಾ ಉದ್ಘಾಟಕಿ ಸುಧಾಮೂರ್ತಿ ಉಪಸ್ಥಿತರು ಹಾಜರಾಗಿದ್ದರು. ಸಿಎಂ ಜೊತೆಗೆ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಎನ್.ಮಹೇಶ್, ಜಯಮಾಲ, ಶಾಸಕರಾದ ಅಶ್ವಿನ್, ರಾಮದಾಸ್, ಹರ್ಷವರ್ಧನ್, ಮಹದೇವ್, ಕೆ.ಟಿ.ಶ್ರೀಕಂಠೇಗೌಡ ಸಾಥ್ ನೀಡಿದರು.

    ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲೂ ಜೆಡಿಎಸ್ ಸಚಿವರು, ಶಾಸಕರ ಓಡಾಟ ಜೋರಾಗಿತ್ತು. ಆದರೆ ಕಾಂಗ್ರೆಸ್ಸಿನ ಕೆಲ ನಾಯಕರು ಮುನಿಸಿಕೊಂಡಿದ್ದು, ಯಾರೊಬ್ಬರೂ ದಸರಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಯಮಾಲ ಅವರನ್ನು ಹೊರತು ಪಡಿಸಿ ಯಾವೊಬ್ಬ ಕೈ ನಾಯಕ ವೇದಿಕೆಯಲ್ಲಿ ಕಾಣಿಸಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಿಕ್ಕಬಳ್ಳಾಪುರದ ನಂದಿ ಹಬ್ಬಕ್ಕೆ 40 ಲಕ್ಷ ರೂ. ಖರ್ಚು- ಜಿಲ್ಲಾಡಳಿತದ ಅಂದ ದರ್ಬಾರ್ ಗೆ ಸಾರ್ವಜನಿಕರು ಅಸಮಾಧಾನ

    ಚಿಕ್ಕಬಳ್ಳಾಪುರದ ನಂದಿ ಹಬ್ಬಕ್ಕೆ 40 ಲಕ್ಷ ರೂ. ಖರ್ಚು- ಜಿಲ್ಲಾಡಳಿತದ ಅಂದ ದರ್ಬಾರ್ ಗೆ ಸಾರ್ವಜನಿಕರು ಅಸಮಾಧಾನ

    ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮದ ಬಳಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ನಂದಿ ಹಬ್ಬ ಆಯೋಜನೆ ಮಾಡಲಾಗಿದೆ.

    ನಂದಿಹಬ್ಬದ ಅಂಗವಾಗಿ ಇಂದು ಮ್ಯಾರಾಥಾನ್, ಸೈಕ್ಲಿಂಗ್, ಯೋಗ, ಪಾರಂಪರಿಕ ಪರಿಸರ ನಡಿಗೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ವಿಶ್ವವಿಖ್ಯಾತ ನಂದಿಗಿರಿಧಾಮದ ತಪ್ಪಲಿನ ಹಿರೇನಹಳ್ಳಿ ಬಳಿಯ ಖಾಸಗಿ ಬಡಾವಣೆಯಲ್ಲಿ ಆಯೋಜನೆ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಮ್ಯಾರಾಥಾನ್ ಗೆ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಚಾಲನೆ ನೀಡಿದ್ದರು.

    ನಂದಿಗಿರಿಧಾಮದ ತಪ್ಪಲಿನ ಹಿರೇನಹಳ್ಳಿ ಬಳಿಯಿಂದ ಮ್ಯಾರಾಥಾನ್ ಆರಂಭವಾಗಿದ್ದು, ನಂದಿಗಿರಿಧಾಮದ ಸುತ್ತಳತೆಯ 16 ಕಿಲೋಮೀಟರ್ ನ ಮ್ಯಾರಾಥಾನ್ ಆಯೋಜನೆ ಮಾಡಲಾಗಿದೆ. ಮ್ಯಾರಾಥಾನ್ ಅಂಗವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂದಿಗಿರಿಧಾಮದ ಸುತ್ತ ಸಾರ್ವಜನಿಕರ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

    ಒಂದಲ್ಲ ಎರಡಲ್ಲ ಬರೋಬ್ಬರಿ 40 ಲಕ್ಷ ರೂಪಾಯಿ ಖರ್ಚು ಮಾಡಿ ಮಾಡುತ್ತಿರೋ ಚಿಕ್ಕಬಳ್ಳಾಪುರದ ನಂದಿ ಹಬ್ಬದಲ್ಲಿ ಸಂಭ್ರಮವೇ ಇಲ್ಲದಂತಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ಪ್ರವಾಸೋದ್ಯಮ ಇಲಾಖೆ ನೇತೃತ್ವದಲ್ಲಿ 40 ಲಕ್ಷ ರೂಪಾಯಿ ಹಣ ಖರ್ಚು ಮಾಡಿ ನಂದಿಹಬ್ಬ ಆಚರಣೆ ಮಾಡಲಾಗುತ್ತಿದೆ.

    ಸಾರ್ವಜನಿಕರಲ್ಲಿ ಅಸಮಾಧಾನ: ಈ ಎಲ್ಲಾ ಕಾರ್ಯಕ್ರಮಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಜನರಿಗೆ ಮಣೆ ಹಾಕದ ಜಿಲ್ಲಾಡಳಿತ ಬೆಂಗಳೂರಿನ ಐಷಾರಾಮಿ ಮಂದಿಗೆ ಮಣೆ ಹಾಕಿದೆ. ಜಿಲ್ಲೆಯ ಜನತೆಗೆ ಕನಿಷ್ಠ ಕಾರ್ಯಕ್ರಮಗಳಲ್ಲೊ ಭಾಗವಹಿಸುವಂತೆ ಆಹ್ವಾನವೂ ನೀಡಿಲ್ಲ. ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬಂತೆ ಜಿಲ್ಲಾಡಳಿತ ಶಾಸಕ ಸುಧಾಕರ್ ಅಣತಿಯಂತೆ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಎಂದು ದರ್ಬಾರ್ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಅಸಮಾಧಾನ ತೋಡಿಕೊಂಡಿದ್ದಾರೆ.

  • ಗದಗ್ ನಲ್ಲಿ ಸಾಮೂಹಿಕ ವಿವಾಹ: ಸರಿಗಮಪ ಸಿಂಗರ್ಸ್ ನಿಂದ ಅದ್ಭುತ ಕಾರ್ಯಕ್ರಮ

    ಗದಗ್ ನಲ್ಲಿ ಸಾಮೂಹಿಕ ವಿವಾಹ: ಸರಿಗಮಪ ಸಿಂಗರ್ಸ್ ನಿಂದ ಅದ್ಭುತ ಕಾರ್ಯಕ್ರಮ

    ಗದಗ: ಬಿಜೆಪಿ ಸಂಸದ ಶ್ರೀರಾಮುಲು ಅಭಿಮಾನಿ ಬಳಗದಿಂದ ನಗರದಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಇಂದು ನಡೆಯುತ್ತಿದ್ದು, ಇದರ ಪೂರ್ವಭಾವಿಯಾಗಿ ನಗರದ ವಿದ್ಯಾದಾನ ಮೈದಾನದಲ್ಲಿ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

    ಹಾಸ್ಯ ಬ್ರಹ್ಮ ಎಂದೇ ಖ್ಯಾತಿಯಾದ ಗಂಗಾವತಿ ಪ್ರಾಣೇಶ್, ನರಸಿಂಹ ಜ್ಯೋಷಿ, ಮಹಾಮನಿ ಅವರಿಂದ ಹಾಸ್ಯದ ಹೊನಲನ್ನೇ ಹರಿಸಿದರು. ನಂತರ ಸರಿಗಮಪ ಹಾಡುಗಾರರಾದ ಸುಹಾನಾ, ಶ್ರೀರಾಮ ಕಾಸರ್, ಮೆಹಬೂಬ್, ಪರಶುರಾಮ್, ಭಾವನಾ ಬೇಂದ್ರೆ, ಪ್ರಣತಿ ಎ.ಎಸ್, ಲಹರಿ ಅವರ ಅದ್ಭುತವಾದ ಹಾಡುಗಳು ಎಲ್ಲರನ್ನ ಮೈ ಮರೆಯುವಂತೆ ಮಾಡಿತು.

    ಸರಿಗಮಪ ಹಾಡುಗಾರರ ಹಾಡಿಗೆ ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆಯೇ ಸುರಿಸಿದರು. ಮಂಗಳೂರು ಹೆಜ್ಜೆನಾದ ತಂಡದ ಡ್ಯಾರ್ನ್ಸ್ ಗೆ ಕೆಕೆ, ಸಿಳ್ಳೆ, ಚಪ್ಪಾಳೆ ಮೂಲಕ ಎಲ್ಲರನ್ನು ಮೈನಮಿರೆಳಿಸುವಂತೆ ಮಾಡುವ ಮೂಲಕ ಅದ್ಭುತ ನೃತ್ಯ ಪ್ರದರ್ಶನ ಮಾಡಿ ತೋರಿಸಿದರು. ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ಬಿ.ಶ್ರೀರಾಮುಲು, ಜನಾರ್ದನ ರೆಡ್ಡಿ ಹಾಗೂ ಅಭಿಮಾನಿ ಬಳಗದವರು ಪಾಲ್ಗೊಂಡು ಸನ್ಮಾನಿಸಿದರು.

  • ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೂಲೆಗುಂಪಾಗುತ್ತಿದೆ ಭರಚುಕ್ಕಿ ಜಲಪಾತೋತ್ಸವ!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೂಲೆಗುಂಪಾಗುತ್ತಿದೆ ಭರಚುಕ್ಕಿ ಜಲಪಾತೋತ್ಸವ!

    ಚಾಮರಾಜನಗರ: ದಟ್ಟ ಕಾನನದ ಮಧ್ಯೆ ಬೋರ್ಗರೆಯುತ್ತಿರುವ ಜಲಪಾತ. ಆ ಜಲಪಾತಕ್ಕೆ ವಿವಿಧ ಬಣ್ಣಬಣ್ಣದ ದೀಪಾಲಂಕಾರ. ಕಣ್ಣು ಹಾಯಿಸಿದೆಲ್ಲೆಲ್ಲಾ ರಂಗೋ ರಂಗು ಚಿತ್ತಾರ. ಇದೆಲ್ಲ ಒಂದು ಕಡೆಯಾದರೆ ಜನರನ್ನು ಹುಚ್ಚೆದ್ದು ಕುಣಿಸುವಂತ ನಾನಾ ಪ್ರದರ್ಶನ ಮತ್ತೊಂದು ಕಡೆ. ಇಂತಹದ್ದೊಂದು ಸುಂದರ ಸಂಜೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕು ಭರಚುಕ್ಕಿ ಜಲಪಾತದ ಆವರಣದಲ್ಲಿ ಕಳೆದ ಮೂರು ವರ್ಷಗಳಿಂದ ಸೃಷ್ಟಿಯಾಗುತಿತ್ತು. ಆದ್ರೆ ಈಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ದಿಂದ ಅದ್ಧೂರಿ ಕಾರ್ಯಕ್ರಮ ಮೂಲೆಗುಂಪಾಗುವ ಹಂತದಲ್ಲಿದೆ. ಈ ತಾಣಕ್ಕೆ ಬಂದ ಪ್ರವಾಸಿಗರು ಬಂದ ದಾರಿಗೆ ಸುಂಕ ಇಲ್ಲ ಅಂತ ಹಿಂತಿರುಗಿ ಹೋಗುತ್ತಿದ್ದಾರೆ.

     

    ಹೌದು. ಸ್ವರ್ಗವನ್ನೇ ಧರೆಗಿಳಿಸಿದ್ದ ಜಲಪಾತೋತ್ಸವದಲ್ಲಿ ಸಾವಿರಾರು ಪ್ರವಾಸಿಗರು ಬಂದು ತಮ್ಮ ತನು ಮನಗಳನ್ನು ತಂಪು ಮಾಡಿಕೊಳ್ಳುತ್ತಿದ್ದರು. ಸಹಕಾರ ಸಚಿವರಾಗಿದ್ದ ಎಚ್.ಎಸ್. ಮಹದೇವ ಪ್ರಸಾದ್ ಅವರು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಯಶಸ್ವಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದರು.

    ಈ ಜಲಪಾತೋತ್ಸವದಿಂದ ಪ್ರವಾಸೋದ್ಯಮ ಇಲಾಖೆಗೆ ಆದಾಯ ಹರಿದು ಬರುತ್ತಿತ್ತು. ಆದರೆ ಈಗ ಜಲಪಾತದಲ್ಲಿ ನೀರು ಹರಿಯುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜಲಪಾತೋತ್ಸವ ಕಾರ್ಯಕ್ರಮವನ್ನು ಮಾಡಲು ಕಿಂಚಿತ್ತು ಆಸಕ್ತಿ ತೋರಿಸುತ್ತಿಲ್ಲ.

    ಜಲಾಪಾತೋತ್ಸವದ ವೇಳೆ ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ಬಾಯಲ್ಲಿ ನೀರೂರಿಸುವ ಖಾದ್ಯಗಳು ಸ್ಥಳದಲ್ಲೇ ತಯಾರಾಗುತ್ತಿದ್ದವು. ಪ್ರವಾಸಿಗರು ಅದನ್ನು ಚಪ್ಪರಿಸಿಕೊಂಡು ತಿನ್ನುತ್ತಿದ್ದರು. ಇನ್ನೂ ಸ್ಟಾರ್ ನಟರು ಹಾಗೂ ಕಲಾವಿದರನ್ನು ಆಹ್ವಾನಿಸಿ ಪ್ರತಿ ನಿತ್ಯ ರಾತ್ರಿ ಅದ್ಧೂರಿ ಕಾರ್ಯಕ್ರಮಗಳು ನಡೆಯುತಿತ್ತು.

     

    ಪ್ರವಾಸಿಗರು ಸಂಗೀತಕ್ಕೆ ಹುಚ್ಚೆದ್ದು ಕುಣಿಯುತ್ತಿದ್ದರು. ಭರಚುಕ್ಕಿ ಜಲಪಾತೋತ್ಸವ ಪ್ರವಾಸಿಗರಿಗೆ ಅಕ್ಷರಶಃ ಸ್ವರ್ಗವೇ ಆಗಿತ್ತು. ಸತತ ಮೂರು ವರ್ಷಗಳ ಕಾಲ ಯಶಸ್ವಿಯಾಗಿ ನಡೆದ ಕಾರ್ಯಕ್ರಮವನ್ನು ಈ ವರ್ಷವೂ ಆಯೋಜಿಸಿ ಎಂದು ಪ್ರವಾಸಿಗರು ಹಾಗೂ ಜನ ಬೇಡಿಕೆ ಇಟ್ಟಿದ್ದಾರೆ.

    ಒಟ್ಟಾರೆ ಹೇಳುವುದಾದರೆ ಮೂರು ವರ್ಷಗಳ ಕಾಲ ಯಶಸ್ವಿಯಾಗಿ ನಡೆದುಕೊಂಡು ಬಂದ ಜಲಪಾತೋತ್ಸವ ಕಾರ್ಯಕ್ರಮಕ್ಕೆ ಪ್ರವಾಸಿಗರಿಂದ ಬೇಡಿಕೆ ಹೆಚ್ಚಾಗಿದ್ದು, ಈ ವಿಷಯದಲ್ಲಿ ಸದ್ಯ ತಟಸ್ಥವಾಗಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜಲಪಾತೋತ್ಸವ ಕಾರ್ಯಕ್ರಮ ನಡೆಸಲು ಮುಂದಾಗಬೇಕಿದೆ.

  • ಒಂದೇ ಸೂರಿನಡಿ ದಸರಾ, ಕೃಷ್ಣಜನ್ಮಾಷ್ಟಮಿ, ಕೋಲ, ಹುತ್ತರಿ- ಇದು ಕಾಫಿನಾಡಿನ ವಿದ್ಯಾರ್ಥಿನಿಯರ ಕಾಲೇಜ್ ಡೇ

    ಒಂದೇ ಸೂರಿನಡಿ ದಸರಾ, ಕೃಷ್ಣಜನ್ಮಾಷ್ಟಮಿ, ಕೋಲ, ಹುತ್ತರಿ- ಇದು ಕಾಫಿನಾಡಿನ ವಿದ್ಯಾರ್ಥಿನಿಯರ ಕಾಲೇಜ್ ಡೇ

    ಚಿಕ್ಕಮಗಳೂರು: ನಗರದ ಎಸ್‍ಟಿಜೆ ಮಹಿಳಾ ಪದವಿ ಕಾಲೇಜು ಆವರಣದಲ್ಲಿ ಸೋಮವಾರ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯರು ದಸರಾ ಹಬ್ಬದ ಆಚರಣೆಯಲ್ಲಿ ತೊಡಗಿದ್ದರೆ, ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಕೃಷ್ಣ ಜನ್ಮಾಷ್ಟಮಿ, ಹುತ್ತರಿ ಹಬ್ಬಗಳ ಸಂಭ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

    ವೀರಗಾಸೆ, ಜನಪದ ಕಲಾ ತಂಡಗಳ ನೇತೃತ್ವದಲ್ಲಿ ನವದುರ್ಗಿಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಚೂಢ, ಕುಷ್ಮಾಂದ, ಸ್ಕಂದಮಾತ, ಕಾತ್ಯಾಯಿನಿ, ಸರಸ್ವತಿ, ದುರ್ಗಾಮಾತೆ, ಸಿದ್ಧಿಧತ್ರಿ ದೇವಿಗಳ ಮೆರವಣಿಗೆ ಮಾಡಿದ ವಿದ್ಯಾರ್ಥಿನಿಯರು ಖುಷಿಯ ಅಲೆಯಲ್ಲಿ ತೇಲಿದರು. ನಂತರ ದೇವಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿ ದಸರಾ ಹಬ್ಬಕ್ಕೆ ಮುನ್ನುಡಿ ಬರೆದ ಕಲಾ ವಿಭಾಗದ ವಿದ್ಯಾರ್ಥಿನಿಯರು ದಸರಾ ಗೊಂಬೆಗಳ ಪ್ರದರ್ಶನ ಏರ್ಪಡಿಸಿ ಗಮನ ಸೆಳೆದರು. ಆವರಣದಲ್ಲಿ ವಿಶೇಷವಾಗಿ ರಚಿಸಿದ್ದ ಹೂವಿನ ಅಲಂಕಾರವುಳ್ಳ ರಂಗೋಲಿ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.

    ಪ್ರಥಮ ಬಿಕಾಂ ವಿದ್ಯಾರ್ಥಿನಿಯರು ಶ್ರೀಕೃಷ್ಣನ ಹತ್ತು ಅವತಾರ ಬಿಂಬಿಸುವ ವೇಷದೊಂದಿಗೆ ನರ್ತಿಸಿ ಕೃಷ್ಣಾಷ್ಟಮಿ ನೆನಪಿಸಿದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿಯರು ಕೊಡಗಿನ ಹುತ್ತರಿ ಹಬ್ಬ, ಕಾವೇರಮ್ಮ ಮತ್ತು ಈಶ್ವರನ ಪೂಜೆ, ಭತ್ತದ ಗದ್ದೆಯಲ್ಲಿ ಸುಗ್ಗಿಯೊಂದಿಗೆ ಕೊಡವರ ಸಾಂಪ್ರದಾಯಿಕ ಕುಣಿತವನ್ನ ಪ್ರದರ್ಶಿಸಿದ್ರು. ಅಂತಿಮ ಬಿ.ಕಾಂ ತಂಡ ಕುಡ್ಲದ ಪರ್ಬಕೋಲ ಪೂಜೆಯೊಂದಿಗೆ ಕೋಲ ಕಟ್ಟಿ ಕುಣಿದರು.

    ಗಾಯಕಿ ರೇಖಾ ಪ್ರೇಮ್‍ಕುಮಾರ್ ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿದರು. ಪ್ರಾಚಾರ್ಯೆ ಪ್ರೊ.ಜೆ.ಕೆ.ಭಾರತಿ, ಕಾಲೇಜು ಸಾಂಸ್ಕೃತಿಕ ಕಾರ್ಯದರ್ಶಿ ಚಂದ್ರಶೇಖರ್, ವಿದ್ಯಾರ್ಥಿನಿ ಪ್ರತಿನಿಧಿಗಳಾದ ಗೀತಾ, ಸುಷ್ಮಾ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

     

  • ಗದಗ್‍ನ ಜಾನಪದ ಜಾತ್ರೆಲಿ ಅನಾವರಣಗೊಂಡ ಗ್ರಾಮೀಣ ಸೊಗಡು

    ಗದಗ್‍ನ ಜಾನಪದ ಜಾತ್ರೆಲಿ ಅನಾವರಣಗೊಂಡ ಗ್ರಾಮೀಣ ಸೊಗಡು

    – ಜನಮನ ಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು

    ಗದಗ: ನಗರದಲ್ಲಿ ನಡೆದ ಜಾನಪದ ಜಾತ್ರೆಯಲ್ಲಿ ಗ್ರಾಮೀಣ ಸೊಗಡು ಅನಾವರಣಗೊಂಡಿದೆ. ಗ್ರಾಮೀಣ ಸೊಗಡಿನ ಕಲಾಲೋಕ ನಗರದ ಜನರನ್ನು ವೇದಿಕೆಯತ್ತ ಬರಮಾಡಿಕೊಂಡಿತ್ತು. ನಾಡಿನ ವಿವಿಧ ಮೂಲೆಗಳಿಂದ 400 ಕ್ಕೂ ಹೆಚ್ಚು ಕಲಾವಿದ್ರು, 45 ಕ್ಕೂ ಹೆಚ್ಚು ಕಲಾತಂಡಗಳು ಪಾಲ್ಗೊಳ್ಳುವ ಮೂಲಕ ಜಾತ್ರೆಯ ಮೆರಗು ಹೆಚ್ಚಿಸಿದವು.

    ಗುರ್ಜಿ ನೃತ್ಯ, ಕೋಲಾಟ, ಬುಡಕಟ್ಟು ಜನಾಂಗದ ನೃತ್ಯ, ಡೊಳ್ಳುಪದ, ಲಂಬಾಣಿ ನೃತ್ಯ, ಡಮಾಮಿ ಹೀಗೆ ಹತ್ತು ಹಲವು ಜನಪದ ಕಲೆ ರಸದೌತಣವನ್ನು ಕಲಾರಸಿಕರು ಸವಿದರು. ಜಾನಪದ ಕಲೆಯನ್ನು ಜೀವಂತವಾಗಿರಿಸಲು ಸರ್ಕಾರ ಹಾಗೂ ಕನ್ನಡ ಮತ್ತು ಇಲಾಖೆಯ ಪ್ರಯತ್ನಕ್ಕೆ ನಗರದ ಭೀಷ್ಮಕೆರೆಯ ಒಡಲು ಸಾಕ್ಷಿಯಾಯಿತು. ನಾಡಿನ ಜಾನಪದ ವಿದ್ವಾಂಸರು ಒಂದೆಡೆ ಸೇರಿ ಯೋಜನಾಬದ್ಧವಾಗಿ ಜಾನಪದ ಜಾತ್ರೆಯನ್ನು ಆಯೋಜಿಸಿದ್ದು ವಿಶೇಷವಾಗಿತ್ತು.

    ನಾವುಗಳೆಲ್ಲ ಇಂದು ಮೋಜು, ಮಸ್ತಿಗಾಗಿ ಜಾತ್ರೆಗಳನ್ನು ಮಾಡ್ತಿದ್ದೇವೆ. ಆದ್ರೆ ಇಲ್ಲಿ ನಡೆದ ಜಾತ್ರೆ ಸಮಾಜಕ್ಕೊಂದು ವಿಶೇಷ ಸಂದೇಶ ನೀಡುವುದರ ಮೂಲಕ ನಮ್ಮ ತನದ ಸಂಸ್ಕೃತಿಗೆ ನೀರೆರೆದು ಪೋಷಿಸಲು ಅನುಕೂಲ ಕಲ್ಪಿಸಿತು. ನಗರ ಪ್ರದೇಶ ಜನರಿಗೆ ಗ್ರಾಮೀಣ ಮಹತ್ವ ತಿಳಿಸಲು ಈ ಜಾತ್ರೆ ಮಾಡಲಾಗುತ್ತಿದೆ ಎಂದು ಜಾನಪದ ಜಾತ್ರೆಯ ನಿರ್ದೇಶಕ ಡಾ.ಬಾನಂದೂರು ಕೆಂಪಯ್ಯ ಹೇಳಿದರು.

    ತಾಯಿ ಮೂಲ ಸಂಸ್ಕೃತಿಯಿಂದ ಬೆಳೆದು ಬಂದು ನಮ್ಮ ಅಪರೂಪದ ಕಲೆಗಳು ಇಂದು ಆಧುನಿಕತೆ ಭರಾಟೆಗೆ ಸಿಕ್ಕು ನರಳುತ್ತಿವೆ. ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಳಿವಿನಂಚಿನಲ್ಲಿರೋ ಕಲೆಗಳಿಗೆ ಜೀವ ತುಂಬುವ ಮೂಲಕ ಮತ್ತೆ ನೆಲಮೂಲ ಸಂಸ್ಕೃತಿ ಪರಿಚಯವನ್ನು ಯುವಪೀಳಿಗೆಗೆ ತಲುಪಿಸೋ ಕೆಲಸವನ್ನು ಜಾನಪದ ಜಾತ್ರೆ ಮೂಲಕ ಮಾಡ್ತಿರೋದು ವಿಶೇಷವಾಗಿದೆ.

    ರಾಜ್ಯ ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಜಾನಪದ ಜಾತ್ರೆ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಜಲಸಂಪನ್ಮೂಲ ಇಲಾಖೆ ಸಂಸದೀಯ ಕಾರ್ಯದರ್ಶಿ ಹಾಗೂ ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿ.ಪಂ. ಅಧ್ಯಕ್ಷ ವಾಸಣ್ಣ ಕುರಡಗಿ ಉಪಾಧ್ಯಕ್ಷೆ ಶ್ರೀಮತಿ ರೂಪಾ ಅಂಗಡಿ, ಗದಗ ತಾ.ಪಂ.ಅಧ್ಯಕ್ಷ ರವಿ ಮನೋಹರ ಇನಾಮತಿ, ಕನ್ನಡ ಮತ್ತಿ ಸಂಸ್ಕೃತಿ ಇಲಾಖೆ ಜಂಟಿ ನಿರ್ಧೇಶಕ ಅಶೋಕ ಚಲವಾದಿ, ಜಾನಪದ ತಜ್ಞ ಹಾಗೂ ಜಾನಪದ ಜಾತ್ರೆ ನಿರ್ದೇಶಕ ಬಾನಂದೂರ ಕೆಂಪಯ್ಯ ಕನ್ನಡ ಮತ್ತು ಸಂಸ್ಕೃತ ಪ್ರಭಾರಿ ಅಧಿಕಾರಿ ಶರಣು ಗೊಗೇರಿ ಹಾಗೂ ಅನೇಕ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಕಲಾವಿದರು, ಕಲಾ ಪ್ರೇಮಿಗಳು ಉಪಸ್ಥಿತರಿದ್ದರು.