Tag: ಸಾಕ್ಷರತಾ ಪರೀಕ್ಷೆ

  • ಪರೀಕ್ಷೆಯಲ್ಲಿ 100ಕ್ಕೆ 89 ಅಂಕ ಪಡೆದ 104ರ ವೃದ್ಧೆಯ ಸ್ಫೂರ್ತಿದಾಯಕ ಕಥೆ

    ಪರೀಕ್ಷೆಯಲ್ಲಿ 100ಕ್ಕೆ 89 ಅಂಕ ಪಡೆದ 104ರ ವೃದ್ಧೆಯ ಸ್ಫೂರ್ತಿದಾಯಕ ಕಥೆ

    ತಿರುವನಂತಪುರ: ಕೇರಳದ ವೃದ್ಧೆಯೊಬ್ಬರು ಪರೀಕ್ಷೆ ಬರೆದು 100ಕ್ಕೆ 89 ಅಂಕಗಳನ್ನು ಪಡೆದು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

    ವಯಸ್ಸು ಕೇವಲ ಸಂಖ್ಯೆಯಷ್ಟೇ. ಮನಸ್ಸಿದ್ದರೆ ಏನು ಬೇಕಾದರೂ ಮಾಡಬಹುದು ಎಂಬುವುದಕ್ಕೆ ಈ ಕಥೆ ಒಂದು ಸಾಕ್ಷಿಯಾಗಿದೆ. ಕೊಟ್ಟಾಯಂನ ಅಯರ್ಕುನ್ನಂ ಪಂಚಾಯತ್‍ನಲ್ಲಿ ‘ಸಾಕ್ಷರತಾ’ ಪರೀಕ್ಷೆಯನ್ನು ನಡೆಸಲಾಯಿತು. ಈ ಪರೀಕ್ಷೆಗೆ 104 ವರ್ಷದ ಕುಟ್ಟಿಯಮ್ಮ ಅವರು ಹಾಜರಾಗಿ ಪರೀಕ್ಷೆ ಬರೆದು 100 ಅಂಕಗಳಿಗೆ 89 ಅಂಕಗಳನ್ನು ಗಳಿಸಿದ್ದಾರೆ. ಇದನ್ನೂ ಓದಿ:   ಚಿಕ್ಕವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ರಶ್ಮಿಕಾ ಉತ್ತರ ಏನು ಗೊತ್ತಾ?

    ಈ ಕುರಿತಂತೆ ಕೇರಳದ ಶಿಕ್ಷಣ ಸಚಿವ ವಾಸುದೇವನ್ ಶಿವನ್‍ಕುಟ್ಟಿ ಅವರು ತಮ್ಮ ಟ್ವಿಟ್ಟರ್‍ನಲ್ಲಿ ಕುಟ್ಟಿಯಮ್ಮನ ಫೋಟೋವನ್ನು ಪೆÇೀಸ್ಟ್ ಮಾಡಿದ್ದಾದ್ದು, 104 ವರ್ಷದ ಕೊಟ್ಟಾಯಂನ ಕುಟ್ಟಿಯಮ್ಮ ಕೇರಳ ರಾಜ್ಯ ಸಾಕ್ಷರತಾ ಮಿಷನ್‍ನ ಪರೀಕ್ಷೆಯಲ್ಲಿ 89/100 ಅಂಕಗಳನ್ನು ಗಳಿಸಿದ್ದಾರೆ. ಜ್ಞಾನದ ಜಗತ್ತನ್ನು ಪ್ರವೇಶಿಸಲು ವಯಸ್ಸು ಅಡ್ಡಿಯಾಗುವುದಿಲ್ಲ. ಅತ್ಯಂತ ಗೌರವ ಮತ್ತು ಪ್ರೀತಿಯಿಂದ, ಕುಟ್ಟಿಯಮ್ಮ ಮತ್ತು ಹೊಸದಾಗಿ ಕಲಿಯುವವರಿಗೆ ನಾನು ಶುಭ ಹಾರೈಸುತ್ತೇನೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಪ್ರಿಯತಮನನ್ನು ಪರಿಚಯಿಸಿದ ನಟಿ ಕಾವ್ಯ ಗೌಡ

    ಕುಟ್ಟಿಯಮ್ಮ ಅವರು ತಮ್ಮ ಜೀವನದಲ್ಲಿ ಶಾಲೆಗೆ ಹೋಗದೇ ಇರುವುದರಿಂದ ಶಿಕ್ಷಣ ಪಡೆಯಲು ಸಾಧ್ಯವಾಗಲಿಲ್ಲ. ಆದರೆ, ಸಾಕ್ಷರತಾ ಪ್ರೇರಕ ರೆಹನಾ ಕಾರ್ಯಕ್ರಮದ ಮೂಲಕ ಬರೆಯುವುದನ್ನು ಕಲಿತರು. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ತಮ್ಮ ಮನೆಯಲ್ಲಿಯೇ ತರಗತಿಗೆ ಹಾಜರಾಗುತ್ತಿದ್ದರು. ತರಗತಿಗಳಿಗೆ ಹಾಜರಾದ ನಂತರ ಕುಟ್ಟಿಯಮ್ಮ ನಾಲ್ಕನೇ ತರಗತಿಗೆ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾದರು. 104 ವರ್ಷ ವಯಸ್ಸಿನ ಕುಟ್ಟಿಯಮ್ಮ ಅವರಿಗೆ ಕಿವಿ ಕೇಳಿಸುವುದಿಲ್ಲ, ಆದ್ದರಿಂದ ಅವರು ಪರೀಕ್ಷೆ ವೇಳೆ ಗಟ್ಟಿಯಾಗಿ ಮಾತನಾಡುವಂತೆ ಇನ್ವಿಜಿಲೇಟರ್‍ಗಳಿಗೆ ಮನವಿ ಮಾಡಿದ್ದರು. ಸದ್ಯ ಕುಟ್ಟಿಯಮ್ಮ ಅವರ ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆ ಮತ್ತು ಪ್ರೀತಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಬ್ಯಾಕ್ ಬ್ಯೂಟಿಗೆ 13 ಕೋಟಿ ಇನ್ಶೂರೆನ್ಸ್ ಮಾಡಿಸಿದ Miss Bumbum 2021

  • ಪರೀಕ್ಷೆಯಲ್ಲಿ 98 ಅಂಕಗಳಿಸಿದ್ದ ಅಜ್ಜಿಗೆ ಲ್ಯಾಪ್‍ಟಾಪ್ ಗಿಫ್ಟ್

    ಪರೀಕ್ಷೆಯಲ್ಲಿ 98 ಅಂಕಗಳಿಸಿದ್ದ ಅಜ್ಜಿಗೆ ಲ್ಯಾಪ್‍ಟಾಪ್ ಗಿಫ್ಟ್

    ತಿರುವನಂತಪುರಂ: ಸಾಕ್ಷರತಾ ಪರೀಕ್ಷೆಯಲ್ಲಿ 98 ಅಂಕಪಡೆದಿದ್ದ 96 ವರ್ಷದ ಕಾರ್ತಿಯಾಣಿ ಅಮ್ಮ ಅವರಿಗೆ ಕೇರಳ ಸರ್ಕಾರ ಲ್ಯಾಪ್‍ಟಾಪ್ ಗಿಫ್ಟ್ ನೀಡಿದೆ.

    ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಕಾರ್ತಿಯಾಣಿ ಅವರು ಕಂಪ್ಯೂಟರ್ ಕಲಿಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಕೇರಳ ರಾಜ್ಯ ಶಿಕ್ಷಣ ಸಚಿವ ಸಿ.ರವೀಂದ್ರನಾಥ್ ಕಾರ್ತಿಯಾಣಿ ಅವರ ಮನೆಗೆ ಭೇಟಿ ನೀಡಿ, ಲ್ಯಾಪ್‍ಟಾಪ್ ವಿತರಿಸಿದ್ದಾರೆ.

    ಕಾರ್ತಿಯಾಣಿ ಅವರ ಜೊತೆಗೆ ಕುಳಿತು ಕೆಲಹೊತ್ತು ಖುದ್ದಾಗಿ ಸಚಿವರೇ ಲ್ಯಾಪ್‍ಟಾಪ್ ಬಳಕೆ ಮಾಡುವ ಕುರಿತು ವಿವರಿಸಿದ್ದಾರೆ. ಈ ಮೂಲಕ ಕಾರ್ತಿಯಾಣಿ ಅವರ ಕಲಿಕೆಯ ತುಡಿತಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಏನಿದು ಸಾಕ್ಷರತಾ ಪರೀಕ್ಷೆ?:
    ಅನಕ್ಷರತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಮತ್ತು ಕೇರಳ ರಾಜ್ಯದಲ್ಲಿ 100% ರಷ್ಟು ಸಾಕ್ಷರತೆಯನ್ನು ಸಾಧಿಸುವ ‘ಸಾಕ್ಷರತಾ ಮಿಷನ್’ ಗುರಿಯಾಗಿದೆ. ಇದರಿಂದಾಗಿ ವೃದ್ಧರಿಗೆ, ಕಲಿಕೆ ವಂಚಿತರಿಗೆ ಓದುವಿಕೆ, ಬರಹ ಮತ್ತು ಗಣಿತ ಕೌಶಲ್ಯಗಳನ್ನು ಕಲಿಸಿಕೊಡಲಾಗುತ್ತದೆ. ಬಳಿ 100 ಅಂಕದ `ಅಕ್ಷರಲಕ್ಷಂ’ ಸಾಕ್ಷರತಾ ಪರೀಕ್ಷೆ ನಡೆಸಿ, ಪ್ರಮಾಣಪತ್ರ ನೀಡಲಾಗುತ್ತದೆ.
    ಬುಡಕಟ್ಟು ಜನಾಂಗ, ಮೀನುಗಾರರು ಮತ್ತು ಸ್ಲಂ-ನಿವಾಸಿಗಳಂತಹ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಅನಕ್ಷರತೆಯನ್ನು ನಿರ್ಮೂಲನೆ ಮಾಡುವ ಗುರಿಯನ್ನು ಈ ಕಾರ್ಯಕ್ರಮದ ಅಡಿ ಹಾಕಲಾಗಿದೆ.

    ಈ ವರ್ಷ ಸುಮಾರು 42,933 ಜನರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಕಾರ್ಯಕ್ರಮ ಮೂಲಕ ರಾಜ್ಯ 100% ರಷ್ಟು ಸಾಕ್ಷರತೆ ಸಾಧಿಸುವ ಹಾದಿಯಲ್ಲಿದೆ. 1991 ರ ಎಪ್ರಿಲ್ 18 ರಂದು, ರಾಜ್ಯವನ್ನು ಸಂಪೂರ್ಣ ಸಾಕ್ಷರತಾ ರಾಜ್ಯ ಎಂದು ಘೋಷಿಸಲಾಗಿದೆ. ಆದರೆ ರಾಜ್ಯದಲ್ಲಿ 2011ರ ಜನಗಣತಿ ಪ್ರಕಾರ, ಸುಮಾರು 18 ಲಕ್ಷ ಜನರು ಅನಕ್ಷರಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ಆದ್ದರಿಂದ ಈ ವರ್ಷ ಜನವರಿ 26 ರಂದು ರಾಜ್ಯ ಸರ್ಕಾರವು `ಅಕ್ಷರಲಕ್ಷಂ’ ಹೆಸರಿನಲ್ಲಿ ಸಾಕ್ಷರತಾ ಕಾರ್ಯಕ್ರಮವನ್ನು ಪ್ರಾರಂಭಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv