Tag: ಸಾಗಾಣಿಕೆ

  • ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನು ಜೀವದ ಹಂಗು ತೊರೆದು ಜಪ್ತಿ ಮಾಡಿದ ಪೊಲೀಸರು

    ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನು ಜೀವದ ಹಂಗು ತೊರೆದು ಜಪ್ತಿ ಮಾಡಿದ ಪೊಲೀಸರು

    ಹಾವೆರಿ: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಪೊಲೀಸರು ಜೀವದ ಹಂಗು ತೊರೆದು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದಿದೆ.

    ಅಕ್ರಮವಾಗಿ ಹಣವನ್ನು ಸಾಗಾಣಿಕೆ ಮಾಡುತ್ತಿದ್ದ ಖದೀಮರು ಪೊಲೀಸರನ್ನು ಕಂಡು ಕಾರನ್ನು ಸ್ಪೀಡ್ ಆಗಿ ಓಡಿಸಿದ್ದಾರೆ. ಬಳಿಕ ಕಾರ್ ಹಿಂದೆ ಓಡಿ ಹೋಗಿ ಕೆಳಕ್ಕೆ ಬಿದ್ದರೂ ಅವರನ್ನು ಬಿಡದೇ ಪೊಲೀಸರು ಚೇಜ್ ಮಾಡಿ, ಕಾರನ್ನು ನಿಲ್ಲಿಸಿದ್ದಾರೆ.

    ಆರೋಪಿಗಳಾದ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ನಿಜ್ಜೂರು ಗ್ರಾಮದ ಫಯಾಜಖಾನ್(31), ಇಮ್ರಾನ್ ಖಾನ್(27) ಶಿವಮೊಗ್ಗ ಜಿಲ್ಲೆ ಸಾಗರದ ಸದ್ಧಾಂಖಾನ್(23) ಮತ್ತು ಸಯ್ಯದ ಅಮೀನ್(29)ನನ್ನು ಪೊಲೀರು ಬಂಧಿಸಿದ್ದಾರೆ. ಇವರು ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದ ಕಡೆಗೆ ಅಕ್ರಮವಾಗಿ ಹಣ ಸಾಗಾಣಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ

    ಪೊಲೀಸರು ಕಾರಿನ ಬ್ಯಾಗಿನಲ್ಲಿ ತುಂಬಿಟ್ಟ 500, 200, 100 ಹಾಗೂ 50 ರೂ. ಮುಖಬೆಲೆಯ ಒಟ್ಟು 85 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

    ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪಿಗಳನ್ನು ಹಿಡಿಯಲು ಹಾನಗಲ್ ಸಿಪಿಐ ಶಿವಶಂಕರ್ ಗಣಾಚಾರಿ ಹಾಗೂ ಪಿಎಸ್‌ಐ ಶ್ರೀಶೈಲ ಪಟ್ಟಣ ಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಎಸ್‌ಪಿ ಹನುಮಂತರಾಯ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಜಡ್ಜ್ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆಯರು- ಶ್ರೀಗಳಿಗೆ ನೋಟಿಸ್ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

  • ಹಾವಿನ ವಿಷ ಮಾರಾಟ- 1 ಕೋಟಿ ಬೆಲೆಯ ವಿಷದೊಂದಿಗೆ 6 ಮಂದಿ ಅರೆಸ್ಟ್

    ಹಾವಿನ ವಿಷ ಮಾರಾಟ- 1 ಕೋಟಿ ಬೆಲೆಯ ವಿಷದೊಂದಿಗೆ 6 ಮಂದಿ ಅರೆಸ್ಟ್

    ಭುವನೇಶ್ವರ: ಹಾವಿನ ವಿಷವನ್ನು ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಗುಂಪನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

    ಹಾವಿನ ವಿಷವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಗುಂಪನ್ನು ಪತ್ತೆ ಹಚ್ಚಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒರ್ವ ಮಹಿಳೆ ಸೇರಿದಂತೆ 6 ಮಂದಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

    1 ಲೀಟರ್ ಹಾವಿನ ವಿಷ ವಶಪಡಿಸಿಕೊಳ್ಳಲಾಗಿದೆ. ಈ ವಿಷವನ್ನು 10 ಲಕ್ಷ ರೂಪಾಯಿಗೆ ಮಾರಾಟ ಮಾಡಲು ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಹಾವಿನ ವಿಷಕ್ಕೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 1 ಕೋಟಿ ರೂಪಾಯಿ ಬೆಲೆ ಬಾಳುತ್ತದೆ ಎಂದು ಅರಣ್ಯ ಇಲಾಖೆ ಡಿಎಫ್‍ಒ ಅಶೋಕ್ ಮಿಶ್ರಾ ಹೇಳಿದ್ದಾರೆ.

    ಬಂಧಿತ ಆರೋಪಿಗಳು 1 ಲೀಟರ್ ಹಾವಿನ ವಿಷವನ್ನು ತೆಗೆಲು 200 ನಾಗರಹಾವುಗಳನ್ನು ಬಳಕೆ ಮಾಡಿದ್ದಾರೆ. 1972ರ ವನ್ಯಜೀನಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲಿಸಲಾಗಿದ್ದು, ನಾಳೆ ಕೋರ್ಟಿಗೆ ಆರೋಪಿಗಳನ್ನು ಹಾಜರು ಪಡಿಸುತ್ತೇವೆ ಎಂದು ಅಶೋಕ್ ಮಿಶ್ರಾ ಹೇಳಿದ್ದಾರೆ.

  • ಮೋದಿ ಸರ್ಕಾರಕ್ಕೆ ಶಾಕ್ ಕೊಟ್ಟ ಖದೀಮರು- 12 ಲಕ್ಷ ರೂ. ಹಳೇ ನೋಟು ಪತ್ತೆ

    ಮೋದಿ ಸರ್ಕಾರಕ್ಕೆ ಶಾಕ್ ಕೊಟ್ಟ ಖದೀಮರು- 12 ಲಕ್ಷ ರೂ. ಹಳೇ ನೋಟು ಪತ್ತೆ

    ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಳೇ 500 ರೂ. ಹಾಗೂ 1 ಸಾವಿರ ರೂ. ಮುಖಬೆಲೆಯ ನೋಟ್ ಬ್ಯಾನ್ ಮಾಡಿ ಒಂದು ವರ್ಷವೇ ಕಳೆದರೂ ಹಳೆ ನೋಟ್‍ಗಳ ಬದಲಾವಣೆ ಮಾಡುವ ಮಾಫಿಯಾ ಇನ್ನೂ ಕಾರ್ಯಾಚರಣೆ ನಡೆಸುತ್ತಲೇ ಇದೆ. ಇದಕ್ಕೆ ತಾಜಾ ಉದಾರಣೆ ಎಂಬಂತೆ ಗದಗ ನಗರದಲ್ಲಿ ಹಳೇ ನೋಟ್ ಗಳನ್ನು ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

    ಬಂಧಿತರಲ್ಲಿ ಇಬ್ಬರು ಗದಗ ನಗರ ನಿವಾಸಿಗಳಾಗಿದ್ದು ಮತ್ತಿಬ್ಬರು ಗದಗ ತಾಲೂಕಿನ ನಾಗಾವಿ ಮತ್ತು ಮಲ್ಲಸಮುದ್ರ ಗ್ರಾಮದ ನಿವಾಸಿಗಳಾಗಿದ್ದಾರೆ. ಗದಗ ರಾಧಾಕೃಷ್ಣ ನಗರದ ಮಾಬುಸುಬಾನಿ ಸವಡಿ(40), ನಗರದ ಗಂಗಿಮಡಿ ಕಾಲೋನಿ ನಿವಾಸಿ ಮಹಮದ್ ಯುಷುಫ್ ಗುಳಗುಂದಿ (26) ಹಾಗೂ ತಾಲೂಕಿನ ಮಲ್ಲಸಮುದ್ರ ಗ್ರಾಮದ ಸುರೇಶ್ ಹಳ್ಳಿಕೇರಿ(45), ನಾಗಾವಿ ಗ್ರಾಮದ ಮುತ್ತಪ್ಪ ಮಲ್ಲಮ್ಮ ನವರ್ (36) ಬಂಧಿತ ಆರೋಪಿಗಳು.

    ಹಳೇ ನೋಟುಗಳನ್ನು ಸಾಗಣೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಗದಗ ಬೆಟಗೇರಿ ಬಡಾವಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ನಗರದ ರೈಲ್ವೇ ಕ್ವಾಟ್ರಸ್ ಬಳಿ ಬೈಕ್ ಮೇಲೆ ಹಣ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಸುಮಾರು 12 ಲಕ್ಷ ರೂ. ಮೌಲ್ಯದ ಹಳೇ ನೋಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.

    ಆರೋಪಿಗಳನ್ನು ಪೋಲಿಸರು ಬಂಧಿಸಿದ ನಂತರ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿದೆ. ಈ ಹಣ ಯಾರದ್ದು? ಹಳೇ ನೋಟುಗಳನ್ನ ಇನ್ನೂ ಎಕ್ಸ್‍ಚೆಂಜ್ ಮಾಡುವ ಕುಳಗಳು ಯಾರು? ಬ್ಲಾಕ್ ಮನಿ ವೈಟ್ ಮನಿ ಮಾಡೊಕೆ ಸಜ್ಜಾಗಿದ್ದಾರಾ ಕಪ್ಪು ಕುಳಗಳು? ಆ ಹಳೇನೋಟನ್ನು ಈಗಲೂ ಸ್ವೀಕರಿಸ್ತಾರೆ ಅಂದರೆ ಅದರ ಹಿಂದಿರುವ ಕೈವಾಡವಾದರು ಎಂತಹದ್ದು? ಈ ಎಲ್ಲಾ ಪ್ರಶ್ನೆಗಳಿಗೆ ಪೊಲೀಸ್ ವಿಚಾರಣೆ ನಂತರವಷ್ಟೇ ಉತ್ತರ ಸಿಗಲಿದೆ.