Tag: ಸಾಧುಗಳು

  • ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳಿಗೆ ಹಿಗ್ಗಾಮುಗ್ಗ ಥಳಿತ

    ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳಿಗೆ ಹಿಗ್ಗಾಮುಗ್ಗ ಥಳಿತ

    ಮುಂಬೈ: ಮಕ್ಕಳ ಕಳ್ಳರೆಂದು ಶಂಕಿಸಿ ಸಾಧುಗಳನ್ನೇ ಹಿಡಿದು ಥಳಿಸಿರುವ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.

    ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಾಲ್ವರು ಸಾಧುಗಳ ಮೇಲೆ ಗುಂಪೊಂದು ಮಕ್ಕಳ ಕಳ್ಳರೆಂದು ಶಂಕಿಸಿ ಹಲ್ಲೆ ನಡೆಸಿರುವ ದೃಶ್ಯದ ವೀಡಿಯೋ ವೈರಲ್ ಆಗಿದೆ. ಜಿಲ್ಲೆಯ ಲವಣ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: UP ಬಿಜೆಪಿ ಶಾಸಕನ ತಾಯಿಯ ಕಿವಿ ಕತ್ತರಿಸಿ ಓಲೆ ಕದ್ದ ಕಳ್ಳರು

    ಸಾಧುಗಳು ಕಿರಾಣಿ ಅಂಗಡಿಯೊಂದರಲ್ಲಿ ಕುಳಿತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕೋಲುಗಳನ್ನು ಹಿಡಿದು ಬಂದ ಗುಂಪೊಂದು ಅಂಗಡಿಯ ಹೊರಗೆ ಸಾಧುಗಳನ್ನು ಥಳಿಸಿದ್ದಾರೆ.

    ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ಘಟನೆಯನ್ನು ಖಂಡಿಸಿದ್ದಾರೆ. ಸಾಧುಗಳ ಮೇಲಿನ ಇಂತಹ ದುಷ್ಕೃತ್ಯವನ್ನು ಸಹಿಸಲಾಗುವುದಿಲ್ಲ ಎಂದು ಸರ್ಕಾರ ಕೂಡ ಬೇಸರ ವ್ಯಕ್ತಪಡಿಸಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೀಡಿಯೋ ಸಂದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Rantac ಸೇರಿದಂತೆ 26 ಔಷಧಿಗಳನ್ನು ನಿಷೇಧಿಸಿದ ಕೇಂದ್ರ

    ಪಾಲ್ಘರ್‌ನಲ್ಲಿ ನಡೆದ ಸಾಧುಗಳ ಹತ್ಯೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ಅವರ ಸರ್ಕಾರವು ಅವರಿಗೆ ಅನ್ಯಾಯವನ್ನು ಮಾಡಿದೆ. ಆದರೆ ಪ್ರಸ್ತುತ ಮಹಾರಾಷ್ಟ್ರ ಸರ್ಕಾರವು ಯಾವುದೇ ಸಾಧುವಿನ ಮೇಲಿನ ದಾಳಿಯನ್ನು ಸಹಿಸುವುದಿಲ್ಲ ಎಂದು 2020ರ ಘಟನೆಯನ್ನು ಉಲ್ಲೇಖಿಸಿ ಸರ್ಕಾರ ಸ್ಪಷ್ಟನೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಪೊಲೀಸರ ಮುಂದೆಯೇ ಎಳೆದಾಡಿ ಸಾಧುಗಳ ಹತ್ಯೆ – ವರದಿ ಕೇಳಿದ ಕೇಂದ್ರ

    ಪೊಲೀಸರ ಮುಂದೆಯೇ ಎಳೆದಾಡಿ ಸಾಧುಗಳ ಹತ್ಯೆ – ವರದಿ ಕೇಳಿದ ಕೇಂದ್ರ

    – ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
    – ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯಲ್ಲಿ ಘಟನೆ

    ನವದೆಹಲಿ: ಪೊಲೀಸರ ಎದುರೇ ಇಬ್ಬರು ಸಾಧು ಸೇರಿದಂತೆ ಮೂವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಮಹಾರಾಷ್ಟ್ರ ಸರ್ಕಾರದಿಂದ ವರದಿ ಕೇಳಿದೆ.

    ಪಾಲ್ಗಾರ್ ಜಿಲ್ಲೆಯ ಗಡ್ಚಿಂಚಾಲೆ ಗ್ರಾಮದಲ್ಲಿ ಗುರುವಾರ ರಾತ್ರಿ ಮಕ್ಕಳ ಕಳ್ಳರೆಂದು ಭಾವಿಸಿ ಇಬ್ಬರು ಸಾಧು ಸೇರಿದಂತೆ ಕಾರು ಚಾಲಕನನ್ನು ಗ್ರಾಮಸ್ಥರು ದೊಣ್ಣೆಗಳಿಂದ ಬಡಿದು ಹತ್ಯೆ ಮಾಡಿದ್ದರು. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ದೇಶಾದ್ಯಂತ ಭಾರೀ ಚರ್ಚೆಯಾಗುತ್ತಿದ್ದು, ಈ ಸಂಬಂಧ ಮಹಾರಾಷ್ಟ್ರ ಪೊಲೀಸರು ಇಲ್ಲಿಯವರೆಗೆ 110 ಮಂದಿಯನ್ನು ಬಂಧಿಸಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ಸಾಧುಗಳನ್ನು ಎಳೆದಾಡಿ ದೊಣ್ಣೆ, ಕಲ್ಲುಗಳಿಂದ ಹೊಡೆದಿದ್ದಾರೆ. ಈ ವೇಳೆ ಪೊಲೀಸರು ತಮ್ಮನ್ನು ರಕ್ಷಿಸಿ ಎಂದು ಪೊಲೀಸರ ಬಳಿ ಬೇಡಿಕೊಂಡಿದ್ದಾರೆ. ಪೊಲೀಸರು ಇದ್ದರೂ ಗ್ರಾಮಸ್ಥರು ಸಾಧುಗಳು ಪ್ರಯಾಣಿಸುತ್ತಿದ್ದ ಕಾರು ಮತ್ತು ಪೊಲೀಸರ ಗಸ್ತು ವಾಹನವನ್ನು ಧ್ವಂಸಗೊಳಿಸಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿದ್ದಾರೆ. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

    ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದು, ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾದವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಎಲ್ಲರಿಗೂ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಹೇಳಿದ್ದಾರೆ.

    ಈ ಕೃತ್ಯ ಎಸಗಿದ 110 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ 9 ಮಂದಿ ಬಾಲಾರೋಪಿಗಳಾಗಿದ್ದು, 101 ಮಂದಿಯನ್ನು ಏ.30ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪಾಲ್ಗಾರ್ ಪೊಲೀಸರು ಟ್ವೀಟ್ ಮಾಡಿ ತಿಳಿಸಿದ್ದಾರೆ.