Tag: ಸಾಧ್ವಿ ಪ್ರಜ್ಞಾಸಿಂಗ್

  • ಪ್ರಜ್ಞಾಸಿಂಗ್ ವಿರುದ್ಧ 12 ವರ್ಷದ ಹಿಂದಿನ ಕೇಸ್ ತೆರೆಯಲು ಮುಂದಾದ ಮಧ್ಯಪ್ರದೇಶ ಸರ್ಕಾರ

    ಪ್ರಜ್ಞಾಸಿಂಗ್ ವಿರುದ್ಧ 12 ವರ್ಷದ ಹಿಂದಿನ ಕೇಸ್ ತೆರೆಯಲು ಮುಂದಾದ ಮಧ್ಯಪ್ರದೇಶ ಸರ್ಕಾರ

    ಭೋಪಾಲ್: ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಭೋಪಾಲ್ ಕ್ಷೇತ್ರದಿಂದ ಗೆಲ್ಲಲ್ಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದ ಬೆನ್ನಲ್ಲೇ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರವು ಪ್ರಜ್ಞಾಸಿಂಗ್ ವಿರುದ್ಧ ದಾಖಲಾಗಿರುವ 12 ವರ್ಷದ ಹಿಂದಿನ ಪ್ರಕರಣ ತೆರೆಯಲು ಮುಂದಾಗಿದೆ.

    ಆರ್‌ಎಸ್‌ಎಸ್‌ನ ಮಾಜಿ ಪ್ರಚಾರಕ ಸುನಿಲ್ ಜೋಶಿ ಕೊಲೆ ಪ್ರಕರಣವನ್ನು ಪುನಃ ತೆರೆದು, ತನಿಖೆ ನಡೆಸಲು ಮಧ್ಯಪ್ರದೇಶ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಹೈಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ ಎಂದು ರಾಜ್ಯ ಕಾನೂನು ಸಚಿವ ಪಿ.ಸಿ.ಶರ್ಮಾ ತಿಳಿಸಿದ್ದಾರೆ.

    ಸುನಿಲ್ ಜೋಶಿ ಅವರ ಕೊಲೆಗೆ ಸಂಬಂಧಿಸಿದ ವರದಿಯನ್ನು ಸಲ್ಲಿಸುವಂತೆ ದೇವಾಸ್ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಕಾನೂನು ಅಭಿಪ್ರಾಯ ಪಡೆದು ಹೈಕೋರ್ಟ್ ಮೆಟ್ಟಿಲು ಏರಲಾಗುತ್ತದೆ ಎಂದು ಪಿ.ಸಿ.ಶರ್ಮಾ ಹೇಳಿದ್ದಾರೆ.

    ಏನಿದು ಪ್ರಕರಣ?:
    ಆರ್‍ಎಸ್‍ಎಸ್‍ನ ಮಾಜಿ ಪ್ರಚಾರಕ ಸುನಿಲ್ ಜೋಶಿ ಅವರು 2007ರ ಅಜ್ಮೇರ್ ದರ್ಗಾ ಸ್ಫೋಟ ಪ್ರಕರಣದ ಆರೋಪಿಯಾಗಿದ್ದರು. ಆದರೆ ಅವರನ್ನು 2007 ಡಿಸೆಂಬರ್ 29ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಸಾಧ್ವಿ ಪ್ರಜ್ಞಾಸಿಂಗ್ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೂಕ್ತ ಸಾಕ್ಷಾಧಾರಗಳಿಲ್ಲದ ಕಾರಣ ಕೋರ್ಟ್ ಸ್ವಾಧ್ವಿ ಅವರನ್ನು 2017ರಲ್ಲಿ ಖುಲಾಸೆಗೊಳಿಸಿತ್ತು.

    ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಸಾಧ್ವಿ ಪ್ರಜ್ಞಾಸಿಂಗ್ ಗೆಲುವು ಸಾಧಿಸುತ್ತಾರೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ತಿಳಿವೆ. ಹೀಗಾಗಿ ಅವರ ವಿರುದ್ಧ ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

  • ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ

    ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ

    ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ  ಕೈಲಾಶ್ ಸತ್ಯಾರ್ಥಿ ಅವರು ಕೂಡ ಅಸಮಾಧಾನ ಹೊರ ಹಾಕಿದ್ದಾರೆ.

    ಟ್ವೀಟ್ ಮೂಲಕ ಕಿಡಿಕಾರಿರುವ ಕೈಲಾಶ್ ಸತ್ಯಾರ್ಥಿ ಅವರು, ನಾಥೂರಾಮ್ ಗೋಡ್ಸೆ ಮಹಾತ್ಮ ಗಾಂಧಿಯವರ ದೇಹವನ್ನು ಹತ್ಯೆ ಮಾಡಿದ. ಆದರೆ ಸಾಧ್ವಿ ಪ್ರಜ್ಞಾಸಿಂಗ್ ಅವರಂತಹ ವ್ಯಕ್ತಿಗಳು ಗಾಂಧೀಜಿಯ ಆತ್ಮವಾದ ಅಹಿಂಸೆ, ಶಾಂತಿ ಹಾಗೂ ಸಹಿಷ್ಣುತೆಯನ್ನು ಕೊಲೆ ಮಾಡುತ್ತಿದ್ದಾರೆ. ಅವರಿಂದ ಸಿಗುವ ಸಣ್ಣ ಪ್ರಯೋಜನವನ್ನು ಬಿಜೆಪಿ ನಾಯಕರು ಪಕ್ಕಕ್ಕೆ ಸರಿಸಬೇಕು. ಈ ಮೂಲಕ ಅಂತಹ ನಾಯಕರನ್ನು ಪಕ್ಷದಿಂದ ವಜಾಗೊಳಿಸಿ ರಾಜಧರ್ಮವನ್ನು ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು.

    ಮಧು ಪೂರ್ಣಿಮಾ ಕಿಶ್ವರ್ ಎಂಬವರು, ಗೋಡ್ಸೆ ಗಾಂಧೀಜಿಯನ್ನು ಹತ್ಯೆ ಮಾಡಿದ್ದರೂ ಓಡಿ ಹೋಗಿರಲಿಲ್ಲ. ಶರಣಾಗಿ ವಿಚಾರಣೆ ಹಾಜರಾಗಿ ಧೈರ್ಯದಿಂದ ನಾನು ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಯಾಕೆ ಎಂದು ಸಮರ್ಥಿಸಿಕೊಂಡಿದ್ದ. ಕೊಲೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ. ಆದರೆ ಗೋಡ್ಸೆ ದೇಶಭಕ್ತಿಯನ್ನು ನಾನು ಮೆಚ್ಚುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

    ಈ ಟ್ವೀಟ್‍ಗೆ ಅನಂತ್ ಕುಮಾರ್ ಹೆಗ್ಡೆ, ಬದಲಾದ ಸನ್ನಿವೇಶದಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರುಗಳು ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಮ್ ಗೋಡ್ಸೆ ಈ ಚರ್ಚೆಯನ್ನು ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೆಗ್ಡೆ, ನನ್ನ ಟ್ವಿಟ್ಟರ್ ಖಾತೆ ನಿನ್ನೆಯಿಂದ ಹ್ಯಾಕ್ ಆಗಿದೆ. ಗಾಂಧೀಜಿಯನ್ನು ಹತ್ಯೆಗೈದ ವಿಚಾರವನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ದೇಶಕ್ಕೆ ಗಾಂಧೀಜಿಯವರು ನೀಡಿದ ಕೊಡುಗೆಯ ಬಗ್ಗೆ ನನಗೆ ಗೌರವವಿದೆ ಎಂದು ಸ್ಪಷ್ಟನೆ ನೀಡಿದ್ದರು.

    ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಮಧ್ಯಪ್ರದೇಶದ ಬಿಜೆಪಿ ಮುಖಂಡ ಅನಿಲ್ ಸೌಮಿತ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಬಿಜೆಪಿ ಹೈಕಮಾಂಡ್ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ವಜಾಗೊಳಿಸಿದೆ. ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗುರುವಾರದಿಂದ 10 ದಿನಗಳ ಒಳಗೆ ಗೋಡ್ಸೆ ಪರವಾಗಿ ಮಾತನಾಡಿದ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

  • ಸಾಧ್ವಿ ಪ್ರಜ್ಞಾಸಿಂಗ್ ಉಗ್ರಗಾಮಿ ಇದ್ದಂತೆ: ಸಿದ್ದರಾಮಯ್ಯ

    ಸಾಧ್ವಿ ಪ್ರಜ್ಞಾಸಿಂಗ್ ಉಗ್ರಗಾಮಿ ಇದ್ದಂತೆ: ಸಿದ್ದರಾಮಯ್ಯ

    ಧಾರವಾಡ: ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಆರ್‍ಎಸ್‍ಎಸ್‍ನಿಂದ ಬಂದವರು. ಅವರು ಒಂದು ರೀತಿ ಉಗ್ರಗಾಮಿ ಇದ್ದಂತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಅವರನ್ನು ಕೊಲೆ ಮಾಡಿದ ನಾಥೂರಾಮ್ ಗೋಡ್ಸೆ ದೇಶಭಕ್ತರಾದರೆ ಈ ದೇಶದ ಎಲ್ಲಾ ಉಗ್ರರು ದೇಶಭಕ್ತರಾಗುತ್ತಾರೆ. ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ಖಂಡನೀಯ. ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

    ಸಂಸದರಾದ ನಳಿನ್ ಕುಮಾರ ಕಟೀಲ್ ಹಾಗೂ ಅನಂತ್‍ಕುಮಾರ್ ಹೆಗ್ಡೆ ಅವರಿಗೆ ದೇಶ ಹಾಗೂ ಇತಿಹಾಸದ ಬಗ್ಗೆ ಗೌರವವಿಲ್ಲ. ಅಂತವರನ್ನು ಹೇಗೆ ದೇಶಭಕ್ತರು ಎಂದು ಕರೆಯಲು ಸಾಧ್ಯ? ಈ ಇಬ್ಬರು ಸಂಸದರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪಕ್ಷದಿಂದ ಹೊರಗೆ ಹಾಕಲಿ ನೋಡೋಣ ಎಂದು ಸವಾಲು ಹಾಕಿದರು.

    ವೀರಶೈವ ಹಾಗೂ ಲಿಂಗಾಯತರು ಕಾಂಗ್ರೆಸ್‍ಗೆ ಮತ ಹಾಕುವುದಿಲ್ಲ ಎಂಬ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ಕಾಂಗ್ರೆಸ್ ಎಲ್ಲ ಜಾತಿಗೆ ಸೇರಿದ್ದು. ನಾವು ಜಾತಿಯನ್ನು ನೋಡಿ ಯೋಜನೆಗಳನ್ನು ಕೊಟ್ಟಿಲ್ಲ. ಆದರೆ ಬಿ.ಎಸ್.ಯಡಿಯೂರಪ್ಪ ಅವರು ಜಾತಿ ರಾಜಕಾರಣ ಮಾಡುತ್ತಾರೆ. ನಮಗೆ ಎಲ್ಲ ಧರ್ಮದವರೂ ಮತ ಹಾಕಿದ್ದಾರೆ ಎಂದು ತಿರುಗೇಟು ಕೊಟ್ಟರು.

    ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು.

    ಮಧು ಪೂರ್ಣಿಮಾ ಕಿಶ್ವರ್ ಎಂಬವರು, ಗೋಡ್ಸೆ ಗಾಂಧೀಜಿಯನ್ನು ಹತ್ಯೆ ಮಾಡಿದ್ದರೂ ಓಡಿ ಹೋಗಿರಲಿಲ್ಲ. ಶರಣಾಗಿ ವಿಚಾರಣೆ ಹಾಜರಾಗಿ ಧೈರ್ಯದಿಂದ ನಾನು ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಯಾಕೆ ಎಂದು ಸಮರ್ಥಿಸಿಕೊಂಡಿದ್ದ. ಕೊಲೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ. ಆದರೆ ಗೋಡ್ಸೆ ದೇಶಭಕ್ತಿಯನ್ನು ನಾನು ಮೆಚ್ಚುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

    ಈ ಟ್ವೀಟ್‍ಗೆ ಅನಂತ್ ಕುಮಾರ್ ಹೆಗ್ಡೆ, ಬದಲಾದ ಸನ್ನಿವೇಶದಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರುಗಳು ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಮ್ ಗೋಡ್ಸೆ ಈ ಚರ್ಚೆಯನ್ನು ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೆಗ್ಡೆ, ನನ್ನ ಟ್ವಿಟ್ಟರ್ ಖಾತೆ ನಿನ್ನೆಯಿಂದ ಹ್ಯಾಕ್ ಆಗಿದೆ. ಗಾಂಧೀಜಿಯನ್ನು ಹತ್ಯೆಗೈದ ವಿಚಾರವನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ದೇಶಕ್ಕೆ ಗಾಂಧೀಜಿಯವರು ನೀಡಿದ ಕೊಡುಗೆಯ ಬಗ್ಗೆ ನನಗೆ ಗೌರವವಿದೆ ಎಂದು ಸ್ಪಷ್ಟನೆ ನೀಡಿದ್ದರು.

    ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಮಧ್ಯಪ್ರದೇಶದ ಬಿಜೆಪಿ ಮುಖಂಡ ಅನಿಲ್ ಸೌಮಿತ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಬಿಜೆಪಿ ಹೈಕಮಾಂಡ್ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ವಜಾಗೊಳಿಸಿದೆ. ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, 10 ದಿನಗಳ ಒಳಗೆ ಗೋಡ್ಸೆ ಪರವಾಗಿ ಮಾತನಾಡಿದ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

  • ಪ್ರಜ್ಞಾಸಿಂಗ್ ಹೇಳಿಕೆಗೆ ಬಿಜೆಪಿಯಿಂದ ಖಂಡನೆ – ಕ್ಷಮೆಗೆ ಆಗ್ರಹ

    ಪ್ರಜ್ಞಾಸಿಂಗ್ ಹೇಳಿಕೆಗೆ ಬಿಜೆಪಿಯಿಂದ ಖಂಡನೆ – ಕ್ಷಮೆಗೆ ಆಗ್ರಹ

    ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ಬಿಜೆಪಿಯಿಂದಲೇ ಖಂಡನೆ ವ್ಯಕ್ತವಾಗಿದೆ.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಅವರು, ಈ ಹೇಳಿಕೆಯನ್ನು ಬಿಜೆಪಿ ಒಪ್ಪಿಕೊಳ್ಳುವುದಿಲ್ಲ ಹಾಗೂ ಇದು ಖಂಡನೀಯವಾಗಿದೆ. ಈ ಸಂಬಂಧ ಸ್ಪಷ್ಟನೆ ನೀಡುವಂತೆ ಪ್ರಜ್ಞಾಸಿಂಗ್ ಹೇಳುತ್ತೇವೆ. ಅಷ್ಟೇ ಅಲ್ಲದೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಹೇಳಿದರು.

    ಭೋಪಾಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರು ಕೂಡ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ನಾಥೂರಾಮ್ ಗೋಡ್ಸೆ ಒಬ್ಬ ಹಂತಕ. ಗೋಡ್ಸೆಯನ್ನು ವೈಭವಿಕರಿಸುವುದು ದೇಶಭಕ್ತಿಯಲ್ಲ, ಅದು ದುಷ್ಕøತ್ಯ ಎಂದು ಕಿಡಿಕಾರಿದ್ದಾರೆ.

    ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಚುನಾವಣೆಯ ಸಮಯದಲ್ಲಿ ಸಾಧ್ವಿ ಸಿಂಗ್ ಈ ರೀತಿಯ ಹೇಳಿಕೆ ನೀಡುವುದು ಹೊಸದೆನಲ್ಲ. ಭೋಪಾಲ್‍ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, 26/11 ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಸಾವನ್ನಪಿದ್ದು ನನ್ನ ಶಾಪದಿಂದಲೇ. ನೀನು ಸರ್ವನಾಶ ಆಗುತ್ತೀಯಾ ಎಂದು ಕರ್ಕರೆ ಅವರಿಗೆ ಶಾಪ ಹಾಕಿದ್ದೆ. ಆ ಶಾಪ ಅವರಿಗೆ ತಟ್ಟಿತು ಎಂದು ಹೇಳಿದ್ದರು.

    ಹೇಮಂತ್ ಕರ್ಕರೆ ಅವರು ಪದೇ ಪದೇ ನನ್ನನ್ನು ವಿಚಾರಣೆಗೆ ಒಳಪಡಿಸಿ, ಕಿರುಕುಳ ನೀಡುತ್ತಿದ್ದರು. ನಿರಪರಾಧಿಯಾಗಿದ್ದರಿಂದ ಅವರ ಪ್ರಶ್ನೆಗೆ ನನ್ನ ಬಳಿ ಉತ್ತರವೇ ಇರಲಿಲ್ಲ. ಹೀಗಾಗಿ ನಾನು ಅವರಿಗೆ ಶಪಿಸಿದ್ದೆ. ನನ್ನನ್ನು ಬಂಧಿಸಿದ 45 ದಿನಗಳ ನಂತರ ಕರ್ಕರೆ ಉಗ್ರರಿಂದ ಪ್ರಾಣ ಬಿಟ್ಟರು ಎಂದು ತಿಳಿಸಿದ್ದರು. ಈ ಹೇಳಿಕೆ ವಿವಾದವಾಗುತ್ತಿದ್ದಂತೆ ಕ್ಷಮೆ ಕೇಳಿದ್ದರು.

    ಕಮಲ್ ಹಾಸನ್ ಹೇಳಿದ್ದೇನು?:
    ಅಲ್ಪಸಂಖ್ಯಾತರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ಭಾರತದ ಮೊದಲ ಭಯೋತ್ಪಾದಕ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ದೇಶದಾದ್ಯಂತ ಪರ ವಿರೋಧ ಚರ್ಚೆ ಆರಂಭವಾಗಿದೆ.

    ವಿವಾದಿತ ಹೇಳಿಕೆ ಸಂಬಂಧ ಕಮಲ್‍ಹಾಸನ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಆದರೆ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ನಾನು ಹೇಳಿದ್ದು ‘ಐತಿಹಾಸಿಕ ಸತ್ಯ’. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ಈ ಕಹಿಯೇ ಔಷಧವಾಗಿ ಬದಲಾಗಿ ಜನರ ರೋಗವನ್ನು ಗುಣಪಡಿಸಬಹುದು ಎಂದು ಹೇಳಿದ್ದರು.

    ಬಿಜೆಪಿ ನಾಯಕ ಹಾಗೂ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು, ಕಮಲ್ ಹಾಸನ್ ಹೇಳಿಕೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ. ಧರ್ಮವನ್ನು ಚುನಾವಣಾ ಕಣದಲ್ಲಿ ಲಾಭಕ್ಕಾಗಿ ಬಳಸುವುದನ್ನು ತಡೆಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ದೆಹಲಿ ಹೈಕೋರ್ಟ್ ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಿದೆ. ಕಮಲ್ ಹೇಳಿಕೆ ಕೋರ್ಟ್‍ನ ವ್ಯಾಪ್ತಿಗೆ ಬರುವುದಿಲ್ಲ. ಬೇಕಾದರೆ ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳಲಿ ಎಂದು ನ್ಯಾ. ಜಿ.ಎಸ್. ಸಿಸ್ತಾನಿ ಮತ್ತು ನ್ಯಾ. ಜ್ಯೋತಿ ಸಿಂಗ್ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

  • ಗೋಡ್ಸೆ ದೇಶಭಕ್ತ, ದೇಶಭಕ್ತರಾಗಿಯೇ ಇರುತ್ತಾರೆ: ಪ್ರಜ್ಞಾಸಿಂಗ್

    ಗೋಡ್ಸೆ ದೇಶಭಕ್ತ, ದೇಶಭಕ್ತರಾಗಿಯೇ ಇರುತ್ತಾರೆ: ಪ್ರಜ್ಞಾಸಿಂಗ್

    ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಭೋಪಾಲ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿ ಅವರು, ನಾಥೂರಾಮ್ ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ ಅವರು ಏಪ್ರಿಲ್‍ನಲ್ಲಿ ನಾಥೂರಾಮ್ ಗೋಡ್ಸೆ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಗೋಡ್ಸೆ ಬದುಕಿದ್ದರೆ ಅವರಿಗೂ ಬಿಜೆಪಿ ಟಿಕೆಟ್ ನೀಡುತಿತ್ತು ಎಂದು ಹೇಳಿದ್ದರು. ಈ ವಿಚಾರವಾಗಿ ಅನೇಕರು ಅಸಮಾಧಾನ ಹೊರ ಹಾಕಿದ್ದರು.

    ಕಮಲ್ ಹಾಸನ್ ಹೇಳಿದ್ದೇನು?:
    ಅಲ್ಪಸಂಖ್ಯಾತರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ಭಾರತದ ಮೊದಲ ಭಯೋತ್ಪಾದಕ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ದೇಶದಾದ್ಯಂತ ಪರ ವಿರೋಧ ಚರ್ಚೆ ಆರಂಭವಾಗಿದೆ.

    ತಮಿಳುನಾಡಿನ ತಿರುಪ್ಪರಂಕುಂಡ್ರಂ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಕಮಲ್ ಹಾಸನ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಚಪ್ಪಲಿ ತೂರಿದ್ದಾರೆ. ಅದೃಷ್ಟವಶಾತ್ ಕಮಲ್ ಹಾಸನ್ ಇದ್ದ ವೇದಿಕೆಯವರೆಗೂ ಚಪ್ಪಲಿ ತೂರಿ ಬರದೇ ಅಲ್ಲೇ ಜನರ ಮೇಲೆ ಬಿದ್ದಿದೆ ಎಂದು ವರದಿಯಾಗಿತ್ತು.

    ವಿವಾದಿತ ಹೇಳಿಕೆ ಸಂಬಂಧ ಕಮಲ್‍ಹಾಸನ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಆದರೆ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ನಾನು ಹೇಳಿದ್ದು ‘ಐತಿಹಾಸಿಕ ಸತ್ಯ’. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ಈ ಕಹಿಯೇ ಔಷಧವಾಗಿ ಬದಲಾಗಿ ಜನರ ರೋಗವನ್ನು ಗುಣಪಡಿಸಬಹುದು ಎಂದು ಹೇಳಿದ್ದರು.

    ಬಿಜೆಪಿ ನಾಯಕ ಹಾಗೂ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು, ಕಮಲ್ ಹಾಸನ್ ಹೇಳಿಕೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಧರ್ಮವನ್ನು ಚುನಾವಣಾ ಕಣದಲ್ಲಿ ಲಾಭಕ್ಕಾಗಿ ಬಳಸುವುದನ್ನು ತಡೆಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ದೆಹಲಿ ಹೈಕೋರ್ಟ್ ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಿದೆ. ಕಮಲ್ ಹೇಳಿಕೆ ಕೋರ್ಟ್‍ನ ವ್ಯಾಪ್ತಿಗೆ ಬರುವುದಿಲ್ಲ. ಬೇಕಾದರೆ ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳಲಿ ಎಂದು ನ್ಯಾ. ಜಿ.ಎಸ್. ಸಿಸ್ತಾನಿ ಮತ್ತು ನ್ಯಾ. ಜ್ಯೋತಿ ಸಿಂಗ್ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

  • ಉಮಾಭಾರತಿಯನ್ನು ಅಪ್ಪಿ ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾ ಸಿಂಗ್ – ವಿಡಿಯೋ

    ಉಮಾಭಾರತಿಯನ್ನು ಅಪ್ಪಿ ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾ ಸಿಂಗ್ – ವಿಡಿಯೋ

    ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಿಂದ ಸ್ಪರ್ಧೆ ಮಾಡಿರುವ ಸಾಧ್ವಿ ಪ್ರಜ್ಞಾಸಿಂಗ್ ಇಂದು ಮಾಜಿ ಸಿಎಂ ಉಮಾಭಾರತಿ ಅವರನ್ನು ಭೇಟಿ ಮಾಡಿ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದರು. ಈ ವೇಳೆ ಪ್ರಜ್ಞಾಸಿಂಗ್ ಉಮಾ ಭಾರತಿ ಅವರನ್ನು ಅಪ್ಪಿ ಕಣ್ಣೀರಿಟ್ಟಿದ್ದಾರೆ.

    ಭೋಪಾಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಕಣಕ್ಕೆ ಇಳಿದಿರುವ ಪ್ರಜ್ಞಾಸಿಂಗ್, ಉಮಾ ಭಾರತಿ ಅವರನ್ನು ಪ್ರಚಾರಕ್ಕೆ ಆಗಮಿಸುವಂತೆ ಮನವಿ ಮಾಡಲು ಅವರ ನಿವಾಸದ ಬಳಿ ತೆರಳಿದ್ದರು. ಈ ಭೇಟಿ ಬಳಿಕ ಉಮಾ ಭಾರತಿ ಅವರು ಪ್ರಜ್ಞಾ ಅವರನ್ನು ಕಾರಿನವರೆಗೂ ಬಂದು ಕಳುಹಿಸಿಕೊಟ್ಟರು. ಈ ವೇಳೆ ಭಾವೋದ್ವೇಗಕ್ಕೆ ಒಳಗಾದ ಪ್ರಜ್ಞಾಸಿಂಗ್ ಕಣ್ಣೀರಿಟ್ಟಿದ್ದಾರೆ.

    ಇತ್ತೀಚಿನ ಸಂದರ್ಭದಲ್ಲಿ ಉಮಾ ಭಾರತಿ ಹಾಗೂ ಪ್ರಜ್ಞಾ ಮಧ್ಯೆ ವೈಮನಸ್ಸು ಮೂಡಿತ್ತು ಎಂದು ಸುದ್ದಿಯಾಗಿತ್ತು. ಅಲ್ಲದೇ ಈ ಬಗ್ಗೆ ಮಾಧ್ಯಮಗಳು ಉಮಾ ಭಾರತಿ ಅವರನ್ನು ಪ್ರಶ್ನೆ ಮಾಡಿದ ವೇಳೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದ ಅವರು, ಪ್ರಜ್ಞಾ ಅವರಿಗೂ ನನಗೂ ಹೋಲಿಕೆ ಮಾಡಬೇಡಿ. ಅವರು ಮಹಾನ್ ಸ್ವಾಧಿ, ನಾನು ಸಾಮಾನ್ಯ ವ್ಯಕ್ತಿ. ಮೂರ್ಖ ಜೀವಿ ಎಂದು ಪ್ರತಿಕ್ರಿಯೆ ನೀಡಿದ್ದರು.

    ಘಟನೆ ಬಳಿಕ ಮಾತನಾಡಿದ ಉಮಾ ಭಾರತಿ ಅವರು, ಇದು ಒಂದು ಭಾವನಾತ್ಮಕ ಸನ್ನಿವೇಶ ಅಷ್ಟೇ ಎಂದು ತಿಳಿಸಿದರು. ಮಧ್ಯಪ್ರದೇಶದಲ್ಲಿ ಸಾಧ್ವಿ ಪ್ರಜ್ಞಾಸಿಂಗ್ ಉಮಾ ಭಾರತಿ ಅವರ ಸ್ಥಾನವನ್ನು ತುಂಬಲಿದ್ದಾರೆ ಎಂಬ ಮಾತು ಚುನಾವಣೆಗೂ ಮುನ್ನವೇ ಕೇಳಿ ಬಂದಿತ್ತು.

  • ಮಸೂದ್ ಅಜರ್‌ಗೆ ಸಾಧ್ವಿ ಶಾಪ ಹಾಕಿದ್ರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವೇ ಬೀಳಲ್ಲ: ದಿಗ್ವಿಜಯ್ ಸಿಂಗ್

    ಮಸೂದ್ ಅಜರ್‌ಗೆ ಸಾಧ್ವಿ ಶಾಪ ಹಾಕಿದ್ರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವೇ ಬೀಳಲ್ಲ: ದಿಗ್ವಿಜಯ್ ಸಿಂಗ್

    ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಅವರು ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ಗೆ ಶಾಪ ಹಾಕಿದರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವೇ ಬೀಳಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯವಾಡಿದ್ದಾರೆ.

    ಮಧ್ಯ ಪ್ರದೇಶದ ಭೋಪಾಲ್‍ನ ಅಶೋಕ್ ಗಾರ್ಡನ್ ಬಳಿ ಪ್ರಚಾರ ನಡೆಸಿ ಮಾತನಾಡಿದ ಅವರು, ತಾವು ಶಾಪ ಹಾಕಿದ್ದರಿಂದಲೇ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಸಾವನ್ನಪ್ಪಿದ್ದರು ಎಂದು ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಹೇಳಿದ್ದಾರೆ. ದೇಶದ ಭದ್ರತೆಗಾಗಿ ಉಗ್ರರ ಜೊತೆ ಹೋರಾಡಿ ಹುತಾತ್ಮರಾದ ಕರ್ಕರೆ ಅವರ ಬಗ್ಗೆ ಸಾಧ್ವಿ ಸಿಂಗ್ ಹಗುರವಾಗಿ ಮಾತನಾಡಿದ್ದಾರೆ ಎಂದು ಗುಡುಗಿದರು. ಇದನ್ನೂ ಓದಿ: ಹೇಮಂತ್ ಕರ್ಕರೆ ಸಾವಿನ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ವೈಯಕ್ತಿಕ: ಬಿಜೆಪಿ 

    ಉಗ್ರರು ಬೆಟ್ಟದಲ್ಲಿ ಅಡಗಿ ಕುಳಿತಿದ್ದರೂ ನಾವು ಹೊಡೆದು ಹಾಕುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಪುಲ್ವಾಮಾ, ಪಠಾನ್‍ಕೋಟ್ ಹಾಗೂ ಉರಿ ದಾಳಿ ನಡೆದಾಗ ಪ್ರಧಾನಿ ಮೋದಿ ಎಲ್ಲಿದ್ದರು? ಇಂತಹ ದಾಳಿಯನ್ನು ಯಾಕೆ ಮೋದಿ ತಡೆಯಲಿಲ್ಲ ಎಂದು ದಿಗ್ವಿಜಯ್ ಅವರು ಪ್ರಶ್ನಿಸಿ ವಾಗ್ದಾಳಿ ನಡೆಸಿದರು.

    ದೇಶದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಸಹೋದರರಂತೆ ಬದುಕುತ್ತಿದ್ದಾರೆ. ಹಿಂದೂಗಳು ಒಗ್ಗಾಟ್ಟಾಗಿ ಇರಬೇಕು ಎಂದು ಅವರು ಹೇಳುತ್ತಿದ್ದಾರೆ. ದೇಶವನ್ನು ಸುಮಾರು 500 ವರ್ಷಗಳ ಕಾಲ ಮುಸ್ಲಿಂ ರಾಜಮನೆತಗಳು ಆಳಿವೆ. ಆದರೆ ಇದು ಯಾವುದೇ ಧರ್ಮದ ಮೇಲೆ ಪರಿಣಾಮ ಬೀರಿಲ್ಲ. ಹೀಗಾಗಿ ರಾಜಕೀಯ ಲಾಭಕ್ಕೆ ಧರ್ಮ ಬಳಸಿಕೊಳ್ಳುವವರ ಬಗ್ಗೆ ಎಚ್ಚರ ವಹಿಸಿ ಎಂದು ಬಿಜೆಪಿ ನಾಯಕ ವಿರುದ್ಧ ಗುಡುಗಿದರು.

    ಹಿಂದೂ ಧರ್ಮದಲ್ಲಿ “ಹರ ಹರ ಮಹದೇವ್” ಎಂದು ಹೇಳಲಾಗುತ್ತದೆ. ಆದರೆ ಬಿಜೆಪಿಯವರು ”ಹರ ಹರ ಮೋದಿ” ಎಂದು ಹೇಳುವ ಮೂಲಕ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ ಎಂದು ದೂರಿದರು.

    ಭೋಪಾಲ್ ಲೋಕಸಭಾ ಕ್ಷೇತ್ರದ ಮತದಾನವು ಮೇ 12ರಂದು ನಡೆಯಲಿದೆ. ಫಲಿತಾಂಶವು ಮೇ 23ರಂದು ಹೊರ ಬೀಳಲಿದೆ. ಈ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಹಿರಿಯ ಮುಖಂಡ ದಿಗ್ವಜಯ್ ಸಿಂಗ್ ಸ್ಪರ್ಧೆ ಮಾಡಿದರೆ, ಬಿಜೆಪಿಯಿಂದ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಕಣಕ್ಕೆ ಇಳಿದಿದ್ದಾರೆ.

  • 2019 ಲೋಕಸಮಯ: ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾಸಿಂಗ್ ಸ್ಪರ್ಧೆ?

    2019 ಲೋಕಸಮಯ: ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾಸಿಂಗ್ ಸ್ಪರ್ಧೆ?

    ಭೋಪಾಲ್: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಭೋಪಾಲ್ ನಿಂದ ಚುನಾವಣಾ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.

    ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪ್ರಜ್ಞಾ ಸಿಂಗ್, ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಪಡೆಯುವುದು ನಿಶ್ಚಿತ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮಹಾರಾಷ್ಟ್ರದ ಬಿಜೆಪಿ ನಾಯಕರಾದ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ರಾಮ್ ಲಾಲ್ ಅವರನ್ನು ಪ್ರಜ್ಞಾಸಿಂಗ್ ಭೇಟಿ ಮಾಡಿದ್ದಾರೆ ಎನ್ನಲಾಗಿದ್ದು, ಸದ್ಯ ಭೋಪಾಲ್ ಬಿಜೆಪಿ ಅಭ್ಯರ್ಥಿಯಾಗಿರುವ ಅಲೋಕ್ ಸಂಜರ್ ಕೂಡ ಪ್ರಜ್ಞಾರ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶದ ವಿರುದ್ಧ ಮಾತನಾಡುವ ದ್ರೋಹಿಗಳ ವಿರುದ್ಧ ಸ್ಪರ್ಧೆ ಮಾಡುವ ಇಚ್ಛೆ ಇದ್ದು, ಪಕ್ಷ ನನಗೆ ಟಿಕೆಟ್ ನೀಡುವ ವಿಶ್ವಾಸ ಇದೆ ಎಂದು ಪ್ರಜ್ಞಾ ಸಿಂಗ್ ತಿಳಿಸಿದ್ದಾರೆ.

    1989 ರ ನಂತರ ಕಾಂಗ್ರೆಸ್ ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಪಡೆದಿಲ್ಲ. ಕಳೆದ ಚುನಾವಣೆಯಲ್ಲೂ ಬಿಜೆಪಿಯ ಅಲೋಕ್ ಸಂಜರ್ 3.7 ಲಕ್ಷ ಮತಗಳಿಂದ ಗೆಲುವು ಪಡೆದಿದ್ದರು. 2008ರ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರಿಂದ ಬಂಧನಕ್ಕೆ ಒಳಗಾದ ಸ್ವಾಧ್ವಿ ಕಳೆದ ವರ್ಷ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ತಾನು ಕೃತ್ಯದಲ್ಲಿ ಭಾಗಿಯಾಗದೇ ಇದ್ದರೂ ನನ್ನ ಮೇಲೆ ಯುಪಿಎ ಸರ್ಕಾರ ಸುಳ್ಳು ಆರೋಪವನ್ನು ಹೊರಿಸಿತ್ತು ಎಂದು ಸಾಧ್ವಿ ಮಾಧ್ಯಮವೊಂದರ ಸಂದರ್ಶನದಲ್ಲಿ ತಿಳಿಸಿದ್ದರು.

    ದಿಗ್ವಿಜಯ್ ಸಿಂಗ್ ಅವರನ್ನು ಬಿಜೆಪಿ ನಾಯಕರು ಹಿಂದೂ ವಿರೋಧಿ ನಾಯಕ ಎಂದೇ ಬಿಂಬಿಸುತ್ತಿದ್ದಾರೆ. ದಿಗ್ವಿಜಯ್ ಅವರು ಮಾಲೆಗಾಂವ್ ಸ್ಫೋಟದ ಬಳಿಕ ‘ಹಿಂದು ಉಗ್ರಗಾಮಿಗಳು’ ಎಂದು ಕರೆದು ಬಿಜೆಪಿ ಆರೋಪಿಗಳನ್ನು ಬೆಂಬಲಿಸುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದರು. ಈಗ ದಿಗ್ವಿಜಯ್ ಅವರಿಗೆ ಕೌಂಟರ್ ಕೊಡಲೆಂದು ಬಿಜೆಪಿ ಭೋಪಾಲ್ ನಿಂದ ಸಾಧ್ವಿ ಅವರಿಗೆ ಟಿಕೆಟ್ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ.