Tag: ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್

  • ಹಿಂದೂ ಸಮಾಜೋತ್ಸವ ಮುಂದೂಡಿಕೆ- ಸಾಧ್ವಿ ಪ್ರಜ್ಞಾಸಿಂಗ್ ವಾಪಸ್

    ಹಿಂದೂ ಸಮಾಜೋತ್ಸವ ಮುಂದೂಡಿಕೆ- ಸಾಧ್ವಿ ಪ್ರಜ್ಞಾಸಿಂಗ್ ವಾಪಸ್

    ಮಂಗಳೂರು: ವಿಶ್ವ ಹಿಂದೂ ಪರಿಷತ್, ಭಜರಂಗ ದಳದ ವತಿಯಿಂದ ನಡೆಯಬೇಕಿದ್ದ ವಿರಾಟ್ ಹಿಂದೂ ಸಮಾಜೋತ್ಸವ ಮುಂದೂಡಲಾಗಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಬಂದಿದ್ದ ಮಧ್ಯಪ್ರದೇಶದ ಭೋಪಾಲ್ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ವಾಪಸ್ ಆಗಿದ್ದಾರೆ.

    ಕೊರೊನಾ ವೈರಸ್ ತೀವ್ರಗತಿಯಲ್ಲಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಇಂದಿನಿಂದ ಸಾರ್ವಜನಿಕವಾಗಿ ಯಾವುದೇ ಸಭೆ, ಸಮಾರಂಭಗಳನ್ನು ನಡೆಸದಂತೆ ಆದೇಶ ನೀಡಿತ್ತು. ಹೀಗಾಗಿ ಭಾನುವಾರ ದಕ್ಷಿಣ ಕನ್ನಡದ ವಿಟ್ಲದ ಪಂಚಲಿಂಗೇಶ್ವರ ದೇವರ ರಥದ ಗದ್ದೆಯಲ್ಲಿ ನಡೆಯಬೇಕಿದ್ದ ವಿರಾಟ್ ಹಿಂದೂ ಸಮಾಜೋತ್ಸವ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಇಟಲಿ, ಡೆನ್ಮಾರ್ಕ್ ಬಳಿಕ ಕುವೈತ್ ಸಂಪೂರ್ಣ ಬಂದ್

    ಈ ಮಧ್ಯೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಲು ಆಗಮಿಸಿದ್ದರು. ಆದರೆ ಕಾರ್ಯಕ್ರಮ ಮುಂದೂಡಿಕೆಯ ಹಿನ್ನೆಲೆಯಲ್ಲಿ ನೆಲಪ್ಪಾಲ್ ಆಂಜನೇಯ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಜೊತೆಗೆ ಹನುಮಗಿರಿ ಆಂಜನೇಯ ಕ್ಷೇತ್ರಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

  • ಪ್ರಜ್ಞಾಸಿಂಗ್ ಬಿಜೆಪಿಯ ರತ್ನ : ಮಾಯಾವತಿ

    ಪ್ರಜ್ಞಾಸಿಂಗ್ ಬಿಜೆಪಿಯ ರತ್ನ : ಮಾಯಾವತಿ

    – ಚುನಾವಣಾ ಆಯೋಗದ ವಿರುದ್ಧ ಕಿಡಿ

    ಲಕ್ನೋ: ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರನ್ನು ಬಿಜೆಪಿಯ ರತ್ನ ಎಂದು ಕರೆದು ವ್ಯಂಗ್ಯವಾಡಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ ವಿರುದ್ಧ ಯಾಕೆ ಕ್ರಮಕೈಗೊಳ್ಳಲಿಲ್ಲ ಎಂದು ಮಾಯಾವತಿ ಅವರು ಟ್ವೀಟ್ ಮೂಲಕ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ವಿವಾದಾತ್ಮಕ ಹೇಳಿಕೆಯಿಂದಾಗಿ ಸಾಧ್ವಿ ಪ್ರಜ್ಞಾಸಿಂಗ್ ಅವರಿಗೆ ಚುನಾವಣಾ ಆಯೋಗವು ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದೆ.

    ಟ್ವೀಟ್‍ನಲ್ಲಿ ಏನಿದೆ?:
    ಮಹಾರಾಷ್ಟ್ರದ ಮಾಲೆಗಾಂವ್ ಸ್ಫೋಟ ಪ್ರಕರಣ ಆರೋಪಿ ಹಾಗೂ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಅವರು, ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಈಗ ಧರ್ಮಯುದ್ಧ ನಡೆಯುತ್ತಿದೆ ಎಂದು ಹೇಳಿದ್ದಾರೆ. ನಿರಂತರವಾಗಿ ಬಹಿರಂಗವಾಗುತ್ತಿರುವ ಆರ್‍ಎಸ್‍ಎಸ್ ಹಾಗೂ ಬಿಜೆಪಿಯ ಮುಖಗಳಿವು. ಬಿಜೆಪಿಯ ರತ್ನ ಸಾಧ್ವಿ ಪ್ರಜ್ಞಾಸಿಂಗ್ ಅವರಿಗೆ ಚುನಾವಣಾ ಆಯೋಗವು ಕೇವಲ ನೋಟಿಸ್ ನೀಡುತ್ತಿದೆ. ನಾಮಪತ್ರವನ್ನು ಯಾಕೆ ರದ್ದು ಮಾಡುತ್ತಿಲ್ಲ ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ 49 ವರ್ಷದವರಾಗಿದ್ದು, ಇತ್ತೀಚೆಗೆ ಬಿಜೆಪಿ ಸೇರಿಕೊಂಡಿದ್ದಾರೆ. ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

    ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಸಾವನ್ನಪಿದ್ದು ನನ್ನ ಶಾಪದಿಂದಲೇ. ನೀನು ಸರ್ವನಾಶ ಆಗುತ್ತೀಯಾ ಎಂದು ಕರ್ಕರೆ ಅವರಿಗೆ ಶಾಪ ಹಾಕಿದ್ದೆ. ಆ ಶಾಪ ಅವರಿಗೆ ತಟ್ಟಿತು ಎಂದು ಹೇಳಿದ್ದರು. ಈ ಹೇಳಿಕೆಯ ನಂತರ ಚುನಾವಣಾ ಆಯೋಗವು ಪ್ರಜ್ಞಾಸಿಂಗ್ ಅವರಿಗೆ ನೋಟಿಸ್ ನೀಡಿತ್ತು. ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆ ಕೋರುವುದಾಗಿ ತಿಳಿಸಿದ್ದರು.

    ಹೇಮಂತ್ ಕರ್ಕರೆ ಅವರ ಸಾವಿನ ಕುರಿತಾದ ಹೇಳಿಕೆ ಬೆನ್ನಲ್ಲೇ ಬಾಬರಿ ಮಸೀದಿ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಾಬರಿ ಮಸೀದಿ ಧ್ವಂಸಗೊಳಿಸಿದ್ದಕ್ಕೆ ನಾವು ಯಾಕೆ ವಿಷಾದ ವ್ಯಕ್ತಪಡಿಸಬೇಕು? ನಮಗೆ ಆ ಬಗ್ಗೆ ಹೆಮ್ಮೆ ಇದೆ. ಈ ಸುವರ್ಣ ಅವಕಾಶ ನೀಡಿದ್ದಕ್ಕೆ ದೇವರಿಗೆ ನಾನು ವಂದನೆ ಸಲ್ಲಿಸುತ್ತೇನೆ. ಆ ಘಟನೆ ದೇಶದ ಸ್ವಾಭಿಮಾನವನ್ನು ಜಾಗೃತಗೊಳಿಸಿದೆ. ಬಾಬ್ರಿ ಮಸೀದಿಯ ತುದಿಗೆ ಏರಿ ಮಸೀದಿ ಕೆಡವಲು ನಾನೂ ನೆರವಾಗಿದ್ದೆ ಎಂದಿದ್ದರು. ಈ ವಿಚಾರವಾಗಿ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ಈ ಮೂಲಕ ಚುನಾವಣಾ ಆಯೋಗವು ಒಟ್ಟು ಎರಡು ಬಾರಿ ಸಾಧ್ವಿ ಪ್ರಜ್ಞಾಸಿಂಗ್ ಅವರಿಗೆ ನೋಟಿಸ್ ನೀಡಿದೆ.

  • ಬಾಬರಿ ಮಸೀದಿ ಧ್ವಂಸಗೊಳಿಸಿದ ಬಗ್ಗೆ ಹೆಮ್ಮೆಯಿದೆ: ಸಾಧ್ವಿ ಪ್ರಜ್ಞಾಸಿಂಗ್

    ಬಾಬರಿ ಮಸೀದಿ ಧ್ವಂಸಗೊಳಿಸಿದ ಬಗ್ಗೆ ಹೆಮ್ಮೆಯಿದೆ: ಸಾಧ್ವಿ ಪ್ರಜ್ಞಾಸಿಂಗ್

    – ಚುನಾವಣಾ ಆಯೋಗದಿಂದ ನೋಟಿಸ್

    ನವದೆಹಲಿ: ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗುತ್ತಿರುವ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಅವರು, ಮತ್ತೆ ಚುನಾವಣಾ ಆಯೋಗದ ನೋಟಿಸ್‍ಗೆ ಗುರಿಯಾಗಿದ್ದಾರೆ.

    ಖಾಸಗಿ ಸುದ್ದಿ ವಾಹಿನಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಸಾಧ್ವಿ ಪ್ರಜ್ಞಾಸಿಂಗ್ ಅವರು, ಬಾಬ್ರಿ ಮಸೀದಿ ಕೆಡವಲು ನಾನು ಕೂಡ ಸಹಕರಿಸಿದ್ದೆ. ಆ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಬಾಬರಿ ಮಸೀದಿ ಧ್ವಂಸಗೊಳಿಸಿದ್ದಕ್ಕೆ ನಾವು ಯಾಕೆ ವಿಷಾದ ವ್ಯಕ್ತಪಡಿಸಬೇಕು? ನಮಗೆ ಆ ಬಗ್ಗೆ ಹೆಮ್ಮೆ ಇದೆ. ಈ ಸುವರ್ಣ ಅವಕಾಶ ನೀಡಿದ್ದಕ್ಕೆ ದೇವರಿಗೆ ನಾನು ವಂದನೆ ಸಲ್ಲಿಸುತ್ತೇನೆ. ಆ ಘಟನೆ ದೇಶದ ಸ್ವಾಭಿಮಾನವನ್ನು ಜಾಗೃತಗೊಳಿಸಿದೆ. ಬಾಬ್ರಿ ಮಸೀದಿಯ ತುದಿಗೆ ಏರಿ ಮಸೀದಿ ಕೆಡವಲು ನಾನೂ ನೆರವಾಗಿದ್ದೆ ಎಂದು ಹೇಳಿದ್ದಾರೆ.

    ನಾವು ಭವ್ಯವಾದ ರಾಮ ಮಂದಿರವನ್ನು ನಿರ್ಮಾಣ ಮಾಡುತ್ತೇವೆ. ರಾಮ ಮಂದಿರ ನಿರ್ಮಾಣ ಮಾಡುವುದು ಬಿಜೆಪಿಗೆ ರಾಜಕೀಯ ವಿಚಾರವಲ್ಲ ಎಂದು ಸಾಧ್ವಿ ಪ್ರಜ್ಞಾಸಿಂಗ್ ಹೇಳಿದರು. ಈ ವೇಳೆ ರಾಮಮಂದಿರ ನಿರ್ಮಾಣಕ್ಕೆ ಕಾಲಮಿತಿ ಇದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವರು, ಈಗಾಗಲೇ ನಾವು ಮಸೀದಿ ಕೆಡವಿದ್ದೇವೆ. ಅಲ್ಲಿ ನಾವು ಮಂದಿರ ನಿರ್ಮಿಸುತ್ತೇವೆ ಎಂದರು.

    ಈ ಹೇಳಿಕೆ ವಿಚಾರವಾಗಿ ಚುನಾವಣಾ ಆಯೋಗವು ಸಾಧ್ವಿ ಪ್ರಜ್ಞಾಸಿಂಗ್ ಅವರಿಗೆ ನೋಟಿಸ್ ನೀಡಿದೆ. ಅಷ್ಟೇ ಅಲ್ಲದೆ 24 ಗಂಟೆಗಳ ಒಳಗಾಗಿ ಉತ್ತರ ನೀಡಬೇಕು ಎಂದು ಸೂಚನೆ ನೀಡಿದೆ.

    ಈ ಹಿಂದೆ ಭೋಪಾಲ್‍ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, 26/11 ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಸಾವನ್ನಪಿದ್ದು ನನ್ನ ಶಾಪದಿಂದಲೇ. ನೀನು ಸರ್ವನಾಶ ಆಗುತ್ತೀಯಾ ಎಂದು ಕರ್ಕರೆ ಅವರಿಗೆ ಶಾಪ ಹಾಕಿದ್ದೆ. ಆ ಶಾಪ ಅವರಿಗೆ ತಟ್ಟಿತು ಎಂದು ಹೇಳಿದ್ದರು. ಈ ಹೇಳಿಕೆಯ ನಂತರ ಚುನಾವಣಾ ಆಯೋಗವು ಪ್ರಜ್ಞಾಸಿಂಗ್ ಅವರಿಗೆ ನೋಟಿಸ್ ನೀಡಿತ್ತು. ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆ ಕೋರುವುದಾಗಿ ತಿಳಿಸಿದ್ದರು.

    ಮಹಾರಾಷ್ಟ್ರದ ಮಾಲೇಗಾಂವ್‍ನಲ್ಲಿ 2008ರ ಸೆಪ್ಟೆಂಬರ್ ನಲ್ಲಿ ಸ್ಫೋಟದಲ್ಲಿ 7 ಜನರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಂಬಂಧ ಉಗ್ರ ನಿಗ್ರಹ ದಳವು ಸಾಧ್ವಿ ಪ್ರಜ್ಞಾಸಿಂಗ್ ಅವರನ್ನು ಬಂಧಿಸಿತ್ತು. ಈ ಪ್ರಕರಣದ ಕುರಿತು 2011ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತನಿಖೆ ಆರಂಭಿಸಿತ್ತು. ಪ್ರಜ್ಞಾ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲದೇ ಇರುವುದರಿಂದ ಅವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಕ್ಲೀನ್ ಚಿಟ್ ನೀಡಿತ್ತು.

    ಸಾಧ್ವಿ ಪ್ರಜ್ಞಾಸಿಂಗ್ ಇತ್ತೀಚೆಗೆ ಬಿಜೆಪಿ ಸೇರಿದ್ದು, ಭೋಪಾಲ್‍ನಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

  • ಪ್ರಧಾನಿ ಮೋದಿ ಮಾಜಿಯಾಗಲು ಒಂದೇ ತಿಂಗಳು ಬಾಕಿ: ಓವೈಸಿ

    ಪ್ರಧಾನಿ ಮೋದಿ ಮಾಜಿಯಾಗಲು ಒಂದೇ ತಿಂಗಳು ಬಾಕಿ: ಓವೈಸಿ

    ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿಯಾಗಲು ಒಂದೇ ತಿಂಗಳು ಬಾಕಿ ಉಳಿದಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

    ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಭಯೋತ್ಪಾದನೆ ನಿಗ್ರಹ, ದೇಶದ ಭದ್ರತೆ ವಿಚಾರವಾಗಿ ಹೇಳಿದ್ದನ್ನೆ ಪುನರುಚ್ಚರಿಸುತ್ತಿದ್ದಾರೆ ಎಂದರು. ಇದನ್ನು ಓದಿ: ಹೇಮಂತ್ ಕರ್ಕರೆ ಸಾವಿನ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ವೈಯಕ್ತಿಕ: ಬಿಜೆಪಿ

    ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರಿಗೆ ಭೋಪಾಲ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದ್ದು ಯಾಕೆ ಎಂದು ಬಿಜೆಪಿ, ಎನ್‍ಡಿಎ ನೇತೃತ್ವದ ಸರ್ಕಾರ ಹಾಗೂ ಶಿವಸೇನೆ ಉತ್ತರಿಸಲಿ. ಈ ಸ್ಫೋಟ ಪ್ರಕರಣದಲ್ಲಿ 6 ಜನ ಅಮಾಯಕರು ಪ್ರಾಣ ಕಳೆದುಕೊಂಡರೆ, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು ಎಂದು ತಿಳಿಸಿದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದನ್ನು ಖಂಡಿಸಿದ ಓವೈಸಿ ಅವರು, ಭಯೋತ್ಪಾದನೆ ವಿರುದ್ಧ ಹೋರಾಡುವ ಪುರಾವೆ ಇದೇನಾ? ಭಯೋತ್ಪಾದನೆ ಆರೋಪ ಎದುರಿಸುತ್ತಿರುವ ಮಹಿಳೆ ಪಕ್ಷದ ಟಿಕೆಟ್ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ತನ್ನ ಶಾಪದಿಂದಲೇ ಮೃತಪಟ್ಟರು ಎಂದು ಸಾಧ್ವಿ ಪ್ರಜ್ಞಾಸಿಂಗ್ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದಾಗಿ ಮಹಾರಾಷ್ಟ್ರದಲ್ಲಿ ಯಾವ ಮುಖ ಇಟ್ಟುಕೊಂಡು ಮತಯಾಚನೆ ಮಾಡುತ್ತಾರೆ? ಹೇಮಂತ್ ಕರ್ಕರೆ ಒಬ್ಬ ಹಿಂದೂ, ಮುಸ್ಲಿಂ ಎನ್ನುವುದು ಮುಖ್ಯವಲ್ಲ. ಅವರು ಭಾರತದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು ಎಂದು ನೆನೆದರು.

    ಸಾಧ್ವಿ ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಾಧ್ವಿ ಪ್ರಜ್ಞಾಸಿಂಗ್ ಅವರು, 26/11 ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಸಾವನ್ನಪಿದ್ದು ತನ್ನ ಶಾಪದಿಂದಲೇ. ನೀನು ಸರ್ವನಾಶ ಆಗುತ್ತೀಯಾ ಎಂದು ಕರ್ಕರೆ ಅವರಿಗೆ ಶಾಪ ಹಾಕಿದ್ದೆ. ಆ ಶಾಪ ಅವರಿಗೆ ತಟ್ಟಿತು ಎಂದು ಹೇಳಿದ್ದರು. ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೇಳಿಕೆಯನ್ನು ಹಿಂಪಡೆಯುತ್ತೇನೆ ಮತ್ತು ಕ್ಷಮೆ ಕೋರುತ್ತೇನೆ ಎಂದು ಸಾಧ್ವಿ ಪ್ರತಿಕ್ರಿಯೆ ನೀಡಿದ್ದರು.

  • ಹೇಮಂತ್ ಕರ್ಕರೆ ಸಾವಿನ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ವೈಯಕ್ತಿಕ: ಬಿಜೆಪಿ

    ಹೇಮಂತ್ ಕರ್ಕರೆ ಸಾವಿನ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ವೈಯಕ್ತಿಕ: ಬಿಜೆಪಿ

    – ದೈಹಿಕ, ಮಾನಸಿಕ ಹಿಂಸೆಗೆ ಹೇಳಿಕೆ ಕಾರಣವಾಗಿರಬಹುದು

    ನವದೆಹಲಿ: ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆಯವರ ಸಾವಿನ ಕುರಿತಾಗಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರ ಹೇಳಿಕೆ ವೈಯಕ್ತಿಕವಾಗಿದೆ ಎಂದು ಬಿಜೆಪಿ ಸ್ಪಷ್ಟನೆ ನೀಡಿದೆ.

    ಸಾಧ್ವಿ ಪ್ರಜ್ಞಾಸಿಂಗ್ ಅವರು ಜೈಲಿನಲ್ಲಿ ಅನುಭವಿಸಿದ ಮಾನಸಿಕ ಹಾಗೂ ದೈಹಿಕ ಹಿಂಸೆಗೆ ಈ ಹೇಳಿಕೆ ಕಾರಣವಾಗಿರಬಹುದು ಎಂದು ಬಿಜೆಪಿ ಅಭಿಪ್ರಾಯ ವ್ಯಕ್ತಪಡಿಸಿದೆ.

    ಸಾಧ್ವಿ ಪ್ರಜ್ಞಾಸಿಂಗ್ ಇತ್ತೀಚೆಗೆ ಬಿಜೆಪಿ ಸೇರಿದ್ದು, ಅವರಿಗೆ ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಹೇಮಂತ್ ಕರ್ಕರೆ ಸಾವಿನ ಕುರಿತು ಸಾಧ್ವಿ ಪ್ರಜ್ಞಾಸಿಂಗ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ವಿಪಕ್ಷ ನಾಯಕರು ಅಸಮಾಧಾನ ಹೊರಹಾಕಿದರು. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು. ಇದರಿಂದಾಗಿ ಬಿಜೆಪಿಯು, ಈ ಹೇಳಿಕೆ ಅವರ ವೈಯಕ್ತಿಕ ವಿಚಾರವಾಗಿ ಎಂದು ಪ್ರತಿಕ್ರಿಯೆ ನೀಡಿದೆ.

    ಐಪಿಎಸ್ ಅಧಿಕಾರಿಗಳ ಸಂಘ ಕೂಡ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಯನ್ನು ಖಂಡಿಸಿದೆ. ಅಶೋಕ್ ಚಕ್ರ ಪುರಸ್ಕೃತ ಹೇಮಂತ್ ಕರ್ಕರೆ ಅವರು ಉಗ್ರರೊಂದಿಗೆ ಹೋರಾಡಿ ಹುತಾತ್ಮರಾಗಿದ್ದಾರೆ. ಅವರ ಬಲಿದಾನವನ್ನು ಅವಮಾನಿಸಿದ ಅಭ್ಯರ್ಥಿಯ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಾಧ್ವಿ ಪ್ರಜ್ಞಾಸಿಂಗ್ ಅವರು, 26/11 ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಸಾವನ್ನಪಿದ್ದು ನನ್ನ ಶಾಪದಿಂದಲೇ. ನೀನು ಸರ್ವನಾಶ ಆಗುತ್ತೀಯಾ ಎಂದು ಕರ್ಕರೆ ಅವರಿಗೆ ಶಾಪ ಹಾಕಿದ್ದೆ. ಆ ಶಾಪ ಅವರಿಗೆ ತಟ್ಟಿತು ಎಂದು ಹೇಳಿದ್ದರು.

    ಹೇಮಂತ್ ಕರ್ಕರೆ ಅವರು ಪದೇ ಪದೇ ನನ್ನನ್ನು ವಿಚಾರಣೆಗೆ ಒಳಪಡಿಸಿ, ಕಿರುಕುಳ ನೀಡುತ್ತಿದ್ದರು. ನಿರಪರಾಧಿಯಾಗಿದ್ದರಿಂದ ಅವರ ಪ್ರಶ್ನೆಗೆ ನನ್ನ ಬಳಿ ಉತ್ತರವೇ ಇರಲಿಲ್ಲ. ಹೀಗಾಗಿ ನಾನು ಅವರಿಗೆ ಶಪಿಸಿದ್ದೆ. ನನ್ನನ್ನು ಬಂಧಿಸಿದ 45 ದಿನಗಳ ನಂತರ ಕರ್ಕರೆ ಉಗ್ರರಿಂದ ಪ್ರಾಣ ಬಿಟ್ಟರು ಎಂದು ತಿಳಿಸಿದ್ದರು.

    ಇದಕ್ಕೂ ಮುನ್ನ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರು ಮಾಲೇಗಾಂವ್ ಸ್ಫೋಟ ಪ್ರಕರಣ ನೆನೆದು ಕಣ್ಣೀರಿಟ್ಟಿದ್ದರು. ಮಾಲೇಗಾಂವ್ ಪ್ರಕರಣದಲ್ಲಿ ಮುಸ್ಲಿಮರನ್ನು ಹತ್ಯೆ ಮಾಡುವುದಕ್ಕಾಗಿಯೇ ಸ್ಫೋಟ ನಡೆಸಿದೆ ಅಂತ ತಪ್ಪೊಪ್ಪಿಕೊಳ್ಳಬೇಕು ಎಂದು ಜೈಲು ಅಧಿಕಾರಿಗಳು ಒತ್ತಾಯಿಸಿ ಕಿರುಕುಳ ನೀಡಿದ್ದರು. ವಿಚಾರಣೆ ಸಂಬಂಧ ಅಕ್ರಮವಾಗಿ ಬಂಧಿಸಿದ ಪೊಲೀಸರು, ನನಗೆ ಮುಳ್ಳಿನ ಬೆಲ್ಟ್‍ನಿಂದ ಹೊಡೆದರು. ಅಸಭ್ಯ ಭಾಷೆಯಲ್ಲಿ ಬೈದರು. ಅಷ್ಟೇ ಅಲ್ಲದೆ ಬಟ್ಟೆ ಕಳಚಿ ನಗ್ನಗೊಳಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ದೂರಿದ್ದರು.

    ನನ್ನನ್ನು 13 ದಿನಗಳ ಕಾಲ ಅಕ್ರಮವಾಗಿ ಬಂಧಿಸಿ ಇಡಲಾಗಿತ್ತು. ಬಂಧಿಸಿದ ಮೊದಲ ದಿನವೇ ನನ್ನ ಮೇಲೆ ಹಲ್ಲೆ ಮಾಡಲು ಆರಂಭಿಸಿದರು. ಬಳಿಕ ಹಗಲು ರಾತ್ರಿ ಎನ್ನದೇ ನನ್ನನ್ನು ಹೊಡೆಯುತ್ತಿದ್ದರು. ನನ್ನ ಕೈಯಲ್ಲಿ ರಕ್ತ ಬಂದರೂ ಎಂದು ಅವರು ಹೊಡೆಯುವುದನ್ನು ನಿಲ್ಲಿಸಿದರು. ಬಳಿಕ ಬಿಸಿ ನೀರು ತಂದು ಅದರಲ್ಲಿ ಉಪ್ಪು ಬೆರೆಸಿ ಕೈಗಳನ್ನು ಇರಿಸಿದರು. ಸ್ವಲ್ಪ ಗುಣಮುಖವಾಗುತ್ತಿದ್ದಂತೆ ಮತ್ತೆ ಹೊಡೆಯಲು ಆರಂಭಿಸಿದರು ಎಂದು ಜೈಲಿನಲ್ಲಿ ಕೊಟ್ಟ ಶಿಕ್ಷೆಯನ್ನು ನೆನೆದ್ದರು.

    ಏನಿದು ಪ್ರಕರಣ?:
    ಮಹಾರಾಷ್ಟ್ರದ ಮಾಲೇಗಾಂವ್‍ನಲ್ಲಿ 2008ರ ಸೆಪ್ಟೆಂಬರ್ ನಲ್ಲಿ ಸ್ಫೋಟ ನಡೆದಿತ್ತು. ಈ ವೇಳೆ 7 ಜನರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಂಬಂಧ ಉಗ್ರ ನಿಗ್ರಹ ದಳವು ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾಸಿಂಗ್ ಅವರನ್ನು ಬಂಧಿಸಿತ್ತು. ಈ ಪ್ರಕರಣದ ಕುರಿತು 2011ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತನಿಖೆ ಆರಂಭಿಸಿತ್ತು. ಪ್ರಜ್ಞಾ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲದೇ ಇರುವುದರಿಂದ ಅವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಕ್ಲೀನ್ ಚಿಟ್ ನೀಡಿತ್ತು.

  • ಮಾಲೇಗಾಂವ್ ಪ್ರಕರಣ: ಜೈಲಿನಲ್ಲಿ ಕೊಟ್ಟ ಕಿರುಕುಳ ಬಿಚ್ಚಿಟ್ಟು ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾಸಿಂಗ್

    ಮಾಲೇಗಾಂವ್ ಪ್ರಕರಣ: ಜೈಲಿನಲ್ಲಿ ಕೊಟ್ಟ ಕಿರುಕುಳ ಬಿಚ್ಚಿಟ್ಟು ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾಸಿಂಗ್

    ಭೋಪಾಲ್: ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರು ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿದ್ದಾರೆ. ಹಿಂದೂ ಭಯೋತ್ಪಾದಕರಿಗೆ ಟಿಕೆಟ್ ನೀಡಿದ್ದು ಸರಿಯಲ್ಲ ಎಂದು ವಿಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದವು. ಈ ಬೆನ್ನಲ್ಲೆ ಸಾಧ್ವಿ ಪ್ರಜ್ಞಾಸಿಂಗ್ ಅವರು ಮಾಲೇಗಾಂವ್ ಸ್ಫೋಟ ಪ್ರಕರಣ ನೆನೆದು ಕಣ್ಣೀರಿಟ್ಟಿದ್ದಾರೆ.

    ಮಾಲೇಗಾಂವ್ ಪ್ರಕರಣದಲ್ಲಿ ಮುಸ್ಲಿಮರನ್ನು ಹತ್ಯೆ ಮಾಡುವುದಕ್ಕಾಗಿಯೇ ಸ್ಫೋಟ ನಡೆಸಿದೆ ಅಂತ ತಪ್ಪೊಪ್ಪಿಕೊಳ್ಳಬೇಕು ಎಂದು ಜೈಲು ಅಧಿಕಾರಿಗಳು ಒತ್ತಾಯಿಸಿ ಕಿರುಕುಳ ನೀಡಿದ್ದರು. ವಿಚಾರಣೆ ಸಂಬಂಧ ಅಕ್ರಮವಾಗಿ ಬಂಧಿಸಿದ ಪೊಲೀಸರು, ನನಗೆ ಮುಳ್ಳಿನ ಬೆಲ್ಟ್‍ನಿಂದ ಹೊಡೆದರು. ಅಸಭ್ಯ ಭಾಷೆಯಲ್ಲಿ ಬೈದರು. ಅಷ್ಟೇ ಅಲ್ಲದೆ ಬಟ್ಟೆ ಕಳಚಿ ನಗ್ನಗೊಳಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ಸಾಧ್ವಿ ಪ್ರಜ್ಞಾಸಿಂಗ್ ದೂರಿದರು.

    ನನ್ನನ್ನು 13 ದಿನಗಳ ಕಾಲ ಅಕ್ರಮವಾಗಿ ಬಂಧಿಸಿ ಇಡಲಾಗಿತ್ತು. ಬಂಧಿಸಿದ ಮೊದಲ ದಿನವೇ ನನ್ನ ಮೇಲೆ ಹಲ್ಲೆ ಮಾಡಲು ಆರಂಭಿಸಿದರು. ಬಳಿಕ ಹಗಲು ರಾತ್ರಿ ಎನ್ನದೇ ನನ್ನನ್ನು ಹೊಡೆಯುತ್ತಿದ್ದರು. ನನ್ನ ಕೈಯಲ್ಲಿ ರಕ್ತ ಬಂದರೂ ಎಂದು ಅವರು ಹೊಡೆಯುವುದನ್ನು ನಿಲ್ಲಿಸಿದರು. ಬಳಿಕ ಬಿಸಿ ನೀರು ತಂದು ಅದರಲ್ಲಿ ಉಪ್ಪು ಬೆರೆಸಿ ಕೈಗಳನ್ನು ಇರಿಸಿದರು. ಸ್ವಲ್ಪ ಗುಣಮುಖವಾಗುತ್ತಿದ್ದಂತೆ ಮತ್ತೆ ಹೊಡೆಯಲು ಆರಂಭಿಸಿದರು ಎಂದು ಜೈಲಿನಲ್ಲಿ ಕೊಟ್ಟ ಶಿಕ್ಷೆಯನ್ನು ನೆನೆದರು.

    ಏನಿದು ಪ್ರಕರಣ?:
    ಮಹಾರಾಷ್ಟ್ರದ ಮಾಲೇಗಾಂವ್‍ನಲ್ಲಿ 20008ರ ಸೆಪ್ಟೆಂಬರ್ ನಲ್ಲಿ ಸ್ಫೋಟ ನಡೆದಿತ್ತು. ಈ ವೇಳೆ 7 ಜನರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಂಬಂಧ ಉಗ್ರ ನಿಗ್ರಹ ದಳವು ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾಸಿಂಗ್ ಅವರನ್ನು ಬಂಧಿಸಿತ್ತು. ಈ ಪ್ರಕರಣದ ಕುರಿತು 2011ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತನಿಖೆ ಆರಂಭಿಸಿತ್ತು. ಪ್ರಜ್ಞಾ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲದೇ ಇರುವುದರಿಂದ ಅವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಕ್ಲೀನ್ ಚಿಟ್ ನೀಡಿತ್ತು.