Tag: ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್

  • ಬಿಜೆಪಿಯ ಸಾಧ್ವಿ ಪ್ರಜ್ಞಾ ಸಿಂಗ್‌ ಭಯೋತ್ಪಾದಕಿ – ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

    ಬಿಜೆಪಿಯ ಸಾಧ್ವಿ ಪ್ರಜ್ಞಾ ಸಿಂಗ್‌ ಭಯೋತ್ಪಾದಕಿ – ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

    ಉಡುಪಿ: ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್‌ (Sadhvi Pragya Singh Thakur) ಓರ್ವ ಭಯೋತ್ಪಾದಕಿ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ (B.K.Hariprasad) ವಾಗ್ದಾಳಿ ನಡೆಸಿದ್ದಾರೆ.

    ಉಡುಪಿಯಲ್ಲಿ (Udupi) ಮಾತನಾಡಿದ ಅವರು, ಶಿವಮೊಗ್ಗಕ್ಕೆ ಆಕೆ ಭೇಟಿಕೊಟ್ಟು ಮಕ್ಕಳ ದಾರಿ ತಪ್ಪಿಸಿದ್ದಾಳೆ. ತಲ್ವಾರ್, ಚಾಕು, ಚೂರಿ, ಆಯುಧ, ಶಾರ್ಪ್ ಮಾಡಿಟ್ಟುಕೊಳ್ಳಲು ಹೇಳ್ತಾಳೆ. ನಾನು ಆಕೆಯನ್ನು ಭಯೋತ್ಪಾದಕಿ ಎಂದು ಕರೆಯುತ್ತೇನೆ. ನಮ್ಮ ಮಕ್ಕಳನ್ನು ಭಯೋತ್ಪಾಧಕರನ್ನಾಗಿ ಸಿದ್ಧತೆ ಮಾಡುತ್ತೀರಾ? ಪ್ರಧಾನಿ ಮೋದಿಯವರು ಇದಕ್ಕೆ ಉತ್ತರ ಕೊಡಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಒಬ್ಬರಿಗೆ ಒಂದೇ ಟಿಕೆಟ್ ಎನ್ನುತ್ತಿರುವ ಡಿಕೆಶಿ ಎರಡು ಕ್ಷೇತ್ರದ ಕಡೆ ಕಣ್ಣು ಹಾಕಿದ್ರಾ?

    ಸಿಎಂ ಬೊಮ್ಮಾಯಿ, ಆರ್‌ಎಸ್‌ಎಸ್‌ (RSS) ಕೈಗೊಂಬೆಯಾಗಿದ್ದಾರೆ. ಪ್ರಧಾನಿ ಮೋದಿ ಪೊಲಿಟಿಕಲ್ ಟೂರಿಸಂ ಶುರು ಮಾಡಿದ್ದಾರೆ. ಮೋದಿ, ರಾಜ್ಯದಲ್ಲಿ ಪೊಲಿಟಿಕಲ್ ಟೂರ್ ಮಾಡ್ತಿದ್ದಾರೆ. ಕೊರೊನಾ, ನೆರೆ ಬಂದಾಗ ಮೋದಿ ಬರಲಿಲ್ಲ ಎಂದು ಕುಟುಕಿದ್ದಾರೆ.

    ರಾಜ್ಯದಲ್ಲಿ ಅನೈತಿಕ ಸರ್ಕಾರ ಅಧಿಕಾರದಲ್ಲಿದೆ. ಮುಂದಿನ ಅಗ್ನಿಪರೀಕ್ಷೆಯಲ್ಲಿ ಕಾಂಗ್ರೆಸ್ (Congress) ಗೆಲ್ಲುತ್ತದೆ. ಕರಾವಳಿ ರಾಜಕಾರಣಿಗಳ ಮೇಲೆ ಅವಲಂಬನೆ ಆಗಿಲ್ಲ. ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಧೂಷಕನ ಕೆಲಸ ಮಾಡುತ್ತಿದ್ದಾರೆ ಎಂದು ಕಟೀಲ್‌ ವಿರುದ್ಧ ಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: BJP, ಕಾಂಗ್ರೆಸ್‌ನವರು ಸಿಎಂ ಅಭ್ಯರ್ಥಿ ಘೋಷಣೆ ಮಾಡಲಿ – ಸಿ.ಎಂ ಇಬ್ರಾಹಿಂ ಸವಾಲ್

    ಕಾಂಗ್ರೆಸ್‌ನಿಂದ ಬಿಜೆಪಿ ಪಕ್ಷಾಂತರವಾದ ಪ್ರತಿನಿಧಿಗಳನ್ನು ವೇಶ್ಯೆಗೆ ಹೋಲಿಕೆ ಮಾಡಿ ಬಿ.ಕೆ.ಹರಿಪ್ರಸಾದ್‌ ವ್ಯಾಪಕ ಟೀಕೆಗೆ ಗುರುಗಿದ್ದರು. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಮಗೆ ಜೀವ ನೀಡುವುದೂ ಗೊತ್ತು.. ಜೀವ ತೆಗೆಯುವುದೂ ಗೊತ್ತು – ಪ್ರಜ್ಞಾ ಸಿಂಗ್‌ ಪ್ರಚೋದನಕಾರಿ ಭಾಷಣ

    ನಮಗೆ ಜೀವ ನೀಡುವುದೂ ಗೊತ್ತು.. ಜೀವ ತೆಗೆಯುವುದೂ ಗೊತ್ತು – ಪ್ರಜ್ಞಾ ಸಿಂಗ್‌ ಪ್ರಚೋದನಕಾರಿ ಭಾಷಣ

    ಶಿವಮೊಗ್ಗ: ನಮಗೆ ಜೀವ ನೀಡುವುದೂ ಗೊತ್ತು, ಜೀವ ತೆಗೆಯುವುದೂ ಗೊತ್ತು ಎಂದು ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ (Sadhvi Pragya Singh Thakur) ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

    ಶಿವಮೊಗ್ಗದಲ್ಲಿ (Shivamogga) ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತ ತ್ರೈವಾರ್ಷಿಕ ಸಮ್ಮೇಳನ ಆಯೋಜಿಸಿದ್ದು, ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ದಿಕ್ಸೂಚಿ ಭಾಷಣದಲ್ಲಿ, ಹಿಂದೂಗಳು ಎಲ್ಲೇ ಇದ್ದರೂ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕು. ಇದಕ್ಕೂ ಮೊದಲು ಉಡುಪಿಗೆ ದುರ್ಗಾ ಪೂಜೆಗೆ ಬರಬೇಕಿತ್ತು. ಆದರೆ ಕಾಂಗ್ರೆಸ್‌ ಅವಧಿಯಲ್ಲಿ ನನ್ನ ಮೇಲೆ ಆದ ಹಲ್ಲೆಯಿಂದಾಗಿ ನೋವು ಹೆಚ್ಚಾಗಿ ಬರಲಾಗಲಿಲ್ಲ. ಆದರೆ ಶಿವಮೊಗ್ಗದ ಕಾರ್ಯಕ್ರಮಕ್ಕೆ ಬರಲೇಬೇಕು ಎಂದು ಬಂದಿದ್ದೇನೆ. ಜನನಿ ಜನ್ಮಭೂಮಿ ಎಂದು ನಾವು ನಂಬಿದ್ದೇನೆ. ಸ್ವರ್ಗಕ್ಕಿಂತ ಹೆಚ್ಚು ಎಂದು ಭಾವಿಸಿದ್ದೇವೆ. ಹಾಗಾಗಿ ಈ ಭೂಮಿಯ ಋಣ ತೀರಿಸಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಪುರಸಭೆ ಸದಸ್ಯೆ ಮೇಲೆ ಬೀದಿನಾಯಿಗಳ ದಾಳಿ – ಈಗ್ಲಾದ್ರೂ ಸಮಸ್ಯೆಗೆ ಪರಿಹಾರ ನೀಡಿ ಎಂದ ಜನ

    ನಮ್ಮನ್ನು ಹತ್ತಿಕ್ಕುವ ಕೆಲಸ ಮೊದಲಿನಿಂದಲೂ ನಡೆಯುತ್ತಿದೆ. ಅದನ್ನು ಮೀರಿ ನಾವು ಬೆಳೆಯಬೇಕಿದೆ. ಕಿಡಿಗೇಡಿಗಳ ಕೃತ್ಯಕ್ಕೆ ನಮ್ಮವರು ಬಲಿದಾನಗೈದಿದ್ದಾರೆ. ಹಿಂದೂ ಸಂಘಟನೆಯ ಗೋವಿಂದರಾಜ್, ಶಿವಮೂರ್ತಿ, ಗೋಕುಲ್, ಹರ್ಷ, ಪ್ರವೀಣ್ ನೆಟ್ಟಾರ್, ಪ್ರಶಾಂತ್ ಪೂಜಾರಿ, ರುದ್ರೇಶ್, ಕುಟ್ಟಪ್ಪ, ಸೌಮ್ಯ ಭಟ್ ಸೇರಿದಂತೆ ಅನೇಕರ ಬಲಿದಾನವಾಗಿದೆ. ಆದರೆ ಈಗ ಸಾಯುವ ಸಮಯವಲ್ಲ, ಸಾಯಿಸುವ ಸಮಯ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

    ನಾನು ಬಿಜೆಪಿಯ ಸಂಸದೆ. ನಾನು ಜನರಿಗಾಗಿ ಸಂಸತ್ತಿನ ಒಳಗೆ, ಹೊರಗೆ ಹೋರಾಡುತ್ತಿದ್ದೇನೆ. ದೇಶದಲ್ಲಿ ಸಾಧು-ಸಂತರ ಮೇಲೆ ಹಲ್ಲೆ, ಹತ್ಯೆ ಆದಾಗ ಯಾರೂ ಮಾತನಾಡುವುದಿಲ್ಲ. ಆದರೆ ನಾವು ಸುಮ್ಮನೆ ಕೂರುವವರಲ್ಲ. ನನಗೂ ಸಾಕಷ್ಟು ಜೀವ ಬೆದರಿಕೆ ಬರುತ್ತದೆ. ಆದರೆ ನಾನು ಅಂತಹವರಿಗೆ ಎದುರು ಬಂದು ಮಾತನಾಡುವಂತೆ ಹೇಳುತ್ತೇನೆ. ನಾನು ಇಂದು ನಾರಿಶಕ್ತಿಯಾಗಿ ಮಾತನಾಡುತ್ತಿದ್ದೇನೆ. ಸರ್ಕಾರಗಳ ಮೇಲೆ ನಂಬಿಕೆ ಇಡಬೇಡಿ. ಪ್ರತಿ 5 ವರ್ಷಕ್ಕೊಮ್ಮೆ ಸರ್ಕಾರ ಬರುತ್ತದೆ ಹೋಗುತ್ತದೆ. ಆದರೆ ಸಾಧು-ಸಂತರು ಬದಲಾಗುವುದಿಲ್ಲ. ಅವರನ್ನು ಕೊಲೆ ಮಾಡಲಾಗುವುದಿಲ್ಲ. ಏಕೆಂದರೆ ಅವರು ಸತ್ತ ಮೇಲೆ ಸಾಧುಗಳಾಗುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹೊಸ ಪಕ್ಷದಿಂದ ಯಾವುದೇ ಪರಿಣಾಮ ಬೀರಲ್ಲ: ರೆಡ್ಡಿಗೆ ಶ್ರೀರಾಮುಲು ಟಾಂಗ್‌

    ಕಾಂಗ್ರೆಸ್‌ನ ಇಲ್ಲಿನ ನಾಯಕರೊಬ್ಬರು ಇತ್ತೀಚೆಗೆ ಹಿಂದೂಗಳ ಬಗ್ಗೆ ಮಾತನಾಡಲಾರಂಭಿಸಿದ್ದಾರೆ. ಪೇಟ, ಧೋತಿ ಧರಿಸಲಾರಂಭಿಸಿದ್ದಾರೆ. ಆದರೆ ಅವರ ಪೇಟ ಬೀಳುತ್ತದೆ. ಹಿಂದೂಗಳಾಗಿ ಯಾರನ್ನು ತಯಾರಿಸಲಾಗುವುದಿಲ್ಲ. ಬದಲಿಗೆ ಜನ್ಮತಹಃ ಹಿಂದೂಗಳಾಗಿರಬೇಕು. ಅಂತಹವರಿಗೆ ಸರಿಯಾದ ಪಾಠ ಕಲಿಸಬೇಕು. ಮೋದಿ ಸುಮ್ಮನೆ ಪ್ರಧಾನಿಯಾಗಿಲ್ಲ. ಅವರ ಮನದಲ್ಲಿ, ದೇಹದ ಕಣದಲ್ಲಿ ಹಿಂದುತ್ವ ಇದೆ. ಗೋಧ್ರಾ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಮೋದಿಗೆ ಅಮೆರಿಕ ಪ್ರವೇಶ ನಿರಾಕರಿಸಿತು. ಆದರೆ ಇಂದು ಅದೇ ಅಮೆರಿಕ ಮೋದಿಯ ಕೈ ಹಿಡಿದಿದ್ದು, ಮಾತು ಕೇಳುತ್ತಿದೆ ಎಂದು ಹೇಳಿದ್ದಾರೆ.

    ಈ ಮೊದಲು ದೇಶದ ಮೇಲೆ ಅತಿಕ್ರಮಣವಾದಾಗ ನಮ್ಮ ಜನ ಸಾಯುತ್ತಿದ್ದರು. 2007ರಲ್ಲಿ ಮುಂಬೈ ಮೇಲೆ ದಾಳಿಯಾದಾಗ ಕಾಂಗ್ರೆಸ್‌ ಸರ್ಕಾರ ಪಾಕಿಸ್ತಾನದ ವಿರುದ್ಧ ಮಾತನಾಡುವ ಧೈರ್ಯ ಮಾಡಲಿಲ್ಲ. ಆದರೆ ಈಗ ಹಾಗಲ್ಲ. ಮೋದಿ ಆಡಳಿತದಲ್ಲಿ ನಮ್ಮ ದೇಶದ ಮೇಲೆ ದಾಳಿ ಮಾಡಿದವರಿಗೆ ಸರಿಯಾದ ಪಾಠ ಕಲಿಸಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮೃತ್ಯುಕೂಪವಾಗುತ್ತಿದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ – ಅತಿ ವೇಗಕ್ಕಿಲ್ಲ ಕಡಿವಾಣ!

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ನಾಯಕಿ ಪ್ರಜ್ಞಾ ಠಾಕೂರ್‌ಗೆ ಕೊರೊನಾ ಪಾಸಿಟಿವ್

    ಬಿಜೆಪಿ ನಾಯಕಿ ಪ್ರಜ್ಞಾ ಠಾಕೂರ್‌ಗೆ ಕೊರೊನಾ ಪಾಸಿಟಿವ್

    ಭೋಪಾಲ್: ಬಿಜೆಪಿ ನಾಯಕಿ ಮತ್ತು ಭೋಪಾಲ್ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    ಈ ಕುರಿತಂತೆ ಪ್ರಜ್ಞಾ ಸಿಂಗ್ ಠಾಕೂರ್ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಇಂದು ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಾನು ವೈದ್ಯರು ಸಲಹೆ ನೀಡಿದಂತೆ ಐಸೋಲೇಶನ್‍ನಲ್ಲಿದ್ದೇನೆ. ಕಳೆದ 2 ದಿನಗಳಿಂದ ನನ್ನೊಂದಿಗೆ ಸಂಪರ್ಕ ಬಂದಿದ್ದವರು ಮುನ್ನೆಚ್ಚರಿಕೆಯಿಂದ ಅಗತ್ಯವಿದ್ದರೆ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ಕೋರಿಕೊಳ್ಳುತ್ತೇನೆ. ನೀವು ಆರೋಗ್ಯವಾಗಿರಲು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರುಂಡ, ಮುಂಡ ಕತ್ತರಿಸಿ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ – 7 ಮಂದಿ ಅರೆಸ್ಟ್

    ಕಳೆದ ವರ್ಷ ಪ್ರಜ್ಞಾ ಸಿಂಗ್ ಠಾಕೂರ್ ಅವರು ಗೋಮೂತ್ರದ ಸಾರವು ಶ್ವಾಸಕೋಶದ ಸೋಂಕುಗಳು ಮತ್ತು ಕೊರೊನಾವೈರಸ್ ವಿರುದ್ಧ ರಕ್ಷಣೆ ನೀಡುತ್ತದೆ ಎಂದು ಹೇಳಿದ್ದರು. ದೇಶಿ ಹಸುವಿನ ಗೋಮೂತ್ರದ ಸಾರ (ಗೋಮೂತ್ರದ ಸಾರ) ಶ್ವಾಸಕೋಶದ ಸೋಂಕಿನಿಂದ ನಮ್ಮನ್ನು ದೂರವಿಡುತ್ತದೆ. ನನಗೆ ಬಹಳ ಆರೋಗ್ಯ ಸಮಸ್ಯೆಗಳಿದೆ. ಆದರೆ ನಾನು ಪ್ರತಿದಿನ ಗೌಮೂತ್ರ ಆರ್ಕ್ ತೆಗೆದುಕೊಳ್ಳುತ್ತೇನೆ. ಕೊರೊನಾ ವೈರಸ್‍ಗೆ ನಾನು ಯಾವುದೇ ಬೇರೆ ಔಷಧಿಯನ್ನು ತೆಗೆದುಕೊಳ್ಳಬೇಕಾಗಿಲ್ಲ ಎಂದಿದ್ದರು. ಇದನ್ನೂ ಓದಿ: ಯೂಟ್ಯೂಬ್ ಸ್ಟಾರ್ ಮಾಡುವ ಆಮಿಷವೊಡ್ಡಿ ಹುಡುಗಿ ಮೇಲೆ ಅತ್ಯಾಚಾರ

  • ಸಾಧ್ವಿ ಪ್ರಜ್ಞಾ ಸಿಂಗ್ ಕ್ಷಮೆಯಾಚಿಸುವ ಅಗತ್ಯವಿರಲಿಲ್ಲ- ಹಿಂದೂ ಮಹಾಸಭಾ

    ಸಾಧ್ವಿ ಪ್ರಜ್ಞಾ ಸಿಂಗ್ ಕ್ಷಮೆಯಾಚಿಸುವ ಅಗತ್ಯವಿರಲಿಲ್ಲ- ಹಿಂದೂ ಮಹಾಸಭಾ

    ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಬೆಂಬಲಕ್ಕೆ ಹಿಂದೂ ಮಹಾಸಭಾ ನಿಂತಿದೆ.

    ಹಿಂದೂ ಮಹಾಸಭಾ ವಕ್ತಾರ ಅಶೋಕ್ ಪಾಂಡೆ ಈ ಕುರಿತು ಹೇಳಿಕೆ ನೀಡಿದ್ದು, ಸಂಸದೆ ಸಾಧ್ವಿ ಪಜ್ಞಾ ಸಿಂಗ್ ಠಾಕೂರ್ ಅವರು ಕ್ಷಮೆಯಾಚಿಸುವ ಅಗತ್ಯವಿರಲಿಲ್ಲ. ರಾಜಕೀಯದ ಒತ್ತಡಕ್ಕೆ ಮಣಿದು ಅವರು ಕ್ಷಮೆಯಾಚಿಸಬೇಕಾಯಿತು ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಸಾಧ್ವಿ ಅವರು ಹೇಳಿದಂತೆ ನಾಥೂರಾಮ್ ಗೋಡ್ಸೆ ನಿಜವಾದ ದೇಶ ಭಕ್ತ. ಏಕೆಂದರೆ ಭಾರತ ಮತ್ತೆ ವಿಭಜನೆಯಾಗುವುದನ್ನು ತಪ್ಪಿಸಿದರು ಎಂದು ಸಮರ್ಥಿಸಿಕೊಂಡರು.

    ಲೋಕಸಭೆಯಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಗೋಡ್ಸೆ ದೇಶಭಕ್ತ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ವಿರೋಧ ಪಕ್ಷಗಳ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಸದನದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಗದ್ದಲ ಎಬ್ಬಿಸಿದ್ದರು. ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರತಾಪ್‍ಚಂದ್ರ ಸಾರಂಗಿ, ಜಗದಂಬಿಕಾ ಪಾಲ್ ಹಾಗೂ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಬಿಜೆಪಿ ನಾಯಕರು ಸಹ ಸಾಧ್ವಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿ, ಸಾಧ್ವಿ ಪ್ರಜ್ಞಾ ಟೆರರಿಸ್ಟ್. ಪ್ರಜ್ಞಾ ಅವರು ಟೆರರಿಸ್ಟ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದಾರೆ ಎಂದು ಕಿಡಿಕಾರಿದ್ದರು.

    ಈ ಹೇಳಿಕೆ ವಿಚಾರವಾಗಿ ಸ್ವಪಕ್ಷ ಬಿಜೆಪಿ ಕೂಡ ಸಾಧ್ವಿ ಪ್ರಜ್ಞಾಗೆ ತಪರಾಕಿ ಹಾಕಿ ಕ್ಷಮೆ ಕೋರುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಸತ್ತಿನಲ್ಲಿ ಮಾತನಾಡಿದ್ದ ಸಾಧ್ವಿ ಪ್ರಜ್ಞಾ, ನನ್ನ ಹೇಳಿಕೆಯಿಂದ ಯಾರಿಗಾದರು ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆದರೆ ನಾನು ಸಂಸತ್ತಿನಲ್ಲಿ ಹೇಳಿದ ಹೇಳಿಕೆಯನ್ನು ತಿರುಚಿ ಅದಕ್ಕೆ ಬೇರೆ ರೂಪ ನೀಡಿದ್ದಾರೆ. ನಾನು ಗಾಂಧೀಜಿ ಅವರು ದೇಶಕ್ಕಾಗಿ ಮಾಡಿರುವ ತ್ಯಾಗವನ್ನು ಗೌರವಿಸುತ್ತೇನೆ ಎಂದಿದ್ದರು.

    ಈ ಸಂಸತ್ತಿನ ಒಬ್ಬ ಸದಸ್ಯರು ನನ್ನನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ. ಅದು ನನ್ನ ಘನತೆಗೆ ಮತ್ತು ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ. ನನ್ನ ವಿರುದ್ಧ ನ್ಯಾಯಾಲಯದಲ್ಲಿ ಯಾವುದೇ ಆರೋಪಗಳು ಸಾಬೀತಾಗದೆ ಇದ್ದರೂ ಅವರು ಹೀಗೆ ಹೇಳಿರುವುದು ಒಬ್ಬ ಮಹಿಳಾ ಸಂಸದೆ ಮತ್ತು ಸನ್ಯಾಸಿಗೆ ಮಾಡಿರುವ ಅವಮಾನ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ಮಾಡಿದ್ದರು.

    ಏನಿದು ವಿವಾದ?
    ಬುಧವಾರ ಸಂಸತಿನಲ್ಲಿ ಡಿಎಂಕೆ ಸಂಸದ ಎ.ರಾಜಾ ಅವರು ವಿಶೇಷ ಭದ್ರತಾ ಪಡೆ (ಎಸ್‍ಪಿಜಿ) ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಏಕೆ ಕೊಲೆ ಮಾಡಿದರು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಮಧ್ಯೆ ಪ್ರವೇಶಿಸಿ, ದೇಶಭಕ್ತನ ಉದಾಹರಣೆಯನ್ನು ನೀವು ಈ ಸಂದರ್ಭದಲ್ಲಿ ಕೊಡಬೇಡಿ ಎಂದು ಕಿಡಿಕಾರಿದ್ದರು.

    ಇದನ್ನು ಸ್ವತಃ ಗೋಡ್ಸೆ ಒಪ್ಪಿಕೊಂಡಿದ್ದಾರೆ. 32 ವರ್ಷಗಳಿಂದ ಗಾಂಧಿ ಮೇಲೆ ದ್ವೇಷ ಇತ್ತು ಹೀಗಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಾತ್ಮಾ ಗಾಂಧಿಯವರ ವಿಚಾರಧಾರೆಗಳು ಪ್ರತ್ಯೇಕವಾಗಿದ್ದರಿಂದ ಗೋಡ್ಸೆ ಅವರನ್ನು ಹತ್ಯೆ ಮಾಡಿದ ಎಂದು ರಾಜಾ ಅವರು ಲೋಕಸಭೆಯ ಕಲಾಪದಲ್ಲಿ ತಿಳಿಸಿದ್ದರು. ರಾಜಾ ಅವರು ಮಾತನಾಡುತ್ತಿದ್ದ ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಮಧ್ಯ ಪ್ರವೇಶಿಸಿದ್ದಕ್ಕೆ ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದರು. ಆಗ ಬಿಜೆಪಿ ಸಂಸದರು ಸಾಧ್ವಿಯವರಿಗೆ ಕುಳಿತುಕೊಳ್ಳುವಂತೆ ಸೂಚಿಸಿದ್ದರು.

  • ರಕ್ಷಣಾ ಸಚಿವಾಲಯದ ಸಮಿತಿಯಿಂದ ಪ್ರಜ್ಞಾ ಸಿಂಗ್ ಔಟ್

    ರಕ್ಷಣಾ ಸಚಿವಾಲಯದ ಸಮಿತಿಯಿಂದ ಪ್ರಜ್ಞಾ ಸಿಂಗ್ ಔಟ್

    ನವದೆಹಲಿ: ನಾಥೂರಾಮ್ ಗೋಡ್ಸೆ ದೇಶ ಭಕ್ತ ಎಂದು ಹೇಳಿದ ಬೆನ್ನಲ್ಲೇ ಭೋಪಾಲ್ ಸಂಸದೆ ಸಾಧ್ವಿಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯಿಂದ ಕೈ ಬಿಡಲಾಗಿದೆ.

    ಬುಧವಾರವಷ್ಟೇ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಗೋಡ್ಸೆ ದೇಶ ಭಕ್ತ ಎಂಬ ಹೇಳಿಕೆಯನ್ನು ಲೋಕಸಭೆಯಲ್ಲಿ ನೀಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷಗಳ ಸಂಸದರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದ ಸಾಧ್ವಿ ಪ್ರಜ್ಞಾಸಿಂಗ್

    ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಲೇಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯಿಂದ ತೆಗೆದು ಹಾಕಲಾಗಿದೆ.

    ಬುಧವಾರ ಲೋಕಸಭೆಯಲ್ಲಿ ಅವರು ಹೇಳಿಕೆ ನೀಡಿರುವುದು ಖಂಡನಾರ್ಹ. ಇಂತಹ ಹೇಳಿಕೆಗಳು ಹಾಗೂ ಸಿದ್ಧಾಂತಗಳಿಗೆ ಬಿಜೆಪಿ ಎಂದೂ ಬೆಂಬಲ ನೀಡುವುದಿಲ್ಲ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ ನಡ್ಡಾ ಸಹ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಕ್ಷದಿಂದ ಅಮಾನತುಗೊಳಿಸುವ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಪಕ್ಷ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಸಾಧ್ವಿ ಪ್ರಜ್ಞಾ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ರಾಹುಲ್ ಗಾಂಧಿ ಅವರು ಈ ಕುರಿತು ಟ್ವೀಟ್ ಮಾಡಿ, ಟೆರರಿಸ್ಟ್ ಪ್ರಜ್ಞಾ ಅವರು ಟೆರರಿಸ್ಟ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದಾರೆ. ಭಾರತದ ಲೋಕಸಭೆಯ ಇತಿಹಾಸದಲ್ಲಿ ಇದೊಂದು ಕರಾಳ ದಿನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ನಾಮನಿರ್ದೇಶನ ಮಾಡಲಾಗಿತ್ತು.

    21 ಸದಸ್ಯರ ಸಂಸದೀಯ ಸಮಾಲೋಚನಾ ಸಮಿತಿಯ ನೇತೃತ್ವವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಿದ್ದಾರೆ. ಈ ಸಮಿತಿಯಲ್ಲಿ ಪ್ರತಿ ಪಕ್ಷದ ಸದಸ್ಯರಾದ ಫಾರೂಕ್ ಅಬ್ದುಲ್ಲಾ ಮತ್ತು ಎನ್‍ಸಿಪಿ ನಾಯಕ ಶರದ್ ಪವಾರ್ ಸೇರಿದಂತೆ ವಿವಿಧ ಪ್ರಮುಖ ನಾಯಕರು ಇರಲಿದ್ದಾರೆ. ಈ ಸಮಿತಿಗೆ ಸಾಧ್ವಿ ಪ್ರಜ್ಞಾ ಅವರನ್ನು ಆಯ್ಕೆ ಮಾಡಿದ್ದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

    ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್, 21 ಸಂಸತ್ತಿನ ಹಿರಿಯ ಸದಸ್ಯರು ಇರುವ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸದಾ ವಿವಾದಾತ್ಮಕ ಹೇಳಿಕೆ ನೀಡಿ ಸಮಾಜದ ಶಾಂತಿಯನ್ನು ಕದಡುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಕೇಂದ್ರ ಸರ್ಕಾರ ಸ್ಥಾನ ನೀಡಿರುವುದು ನಿಜಕ್ಕೂ ವಿಪರ್ಯಾಸ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

  • ರಕ್ಷಣಾ ಸಚಿವಾಲಯದ ಸಮಿತಿಯಲ್ಲಿ ಸಾಧ್ವಿ ಪ್ರಜ್ಞಾಗೆ ಸ್ಥಾನ

    ರಕ್ಷಣಾ ಸಚಿವಾಲಯದ ಸಮಿತಿಯಲ್ಲಿ ಸಾಧ್ವಿ ಪ್ರಜ್ಞಾಗೆ ಸ್ಥಾನ

    ನವದೆಹಲಿ: ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರಾಗಿರುವ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ.

    21 ಸದಸ್ಯರ ಸಂಸದೀಯ ಸಮಾಲೋಚನಾ ಸಮಿತಿಯ ನೇತೃತ್ವವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಿದ್ದಾರೆ. ಈ ಸಮಿತಿಯಲ್ಲಿ ಪ್ರತಿ ಪಕ್ಷದ ಸದಸ್ಯರಾದ ಫಾರೂಕ್ ಅಬ್ದುಲ್ಲಾ ಮತ್ತು ಎನ್‍ಸಿಪಿ ನಾಯಕ ಶರದ್ ಪವಾರ್ ಅವರು ಇರಲಿದ್ದಾರೆ. ಈ ಸಮಿತಿಗೆ ಸಾಧ್ವಿ ಪ್ರಜ್ಞಾ ಅವರನ್ನು ಆಯ್ಕೆ ಮಾಡಿದ್ದಕ್ಕೆ ಕಾಂಗ್ರೆಸ್ ವಿರೋಧವನ್ನು ವ್ಯಕ್ತಪಡಿಸಿದೆ.

    ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ಮಾಡಿರುವ ಕಾಂಗ್ರೆಸ್, 21 ಸಂಸತ್ತಿನ ಹಿರಿಯ ಸದಸ್ಯರು ಇರುವ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸದಾ ವಿವಾದಾತ್ಮಕ ಹೇಳಿಕೆ ನೀಡಿ ಸಮಾಜ ಶಾಂತಿಯನ್ನು ಕದಡುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಕೇಂದ್ರ ಸರ್ಕಾರ ಸ್ಥಾನ ನೀಡಿರುವುದು ನಿಜಕ್ಕೂ ವಿಪರ್ಯಾಸ. ಇದನ್ನು ನಾವು ಒಪ್ಪುವುದಿಲ್ಲ ಎಂದು ಮೋದಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದೆ.

    ವಿವಾದಾತ್ಮಕ ವ್ಯಕ್ತಿಗಳಿಗೆ ಇತರೆ ಪಕ್ಷಗಳು ಸ್ಥಾನ ನೀಡಲು ಯೋಚಿಸುವಾಗ ಬಿಜೆಪಿ ಇವರಿಗೆ ಟೆಕೆಟ್ ನೀಡಿ ಸಂಸದರನ್ನಾಗಿ ಮಾಡಿದೆ. ನ್ಯಾಯಾಲಯದಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸೇರಿಸುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಎಲ್ಲವೂ ಸಂವಿಧಾನದಿಂದ ಮಾರ್ಗದರ್ಶಿಸಲ್ಪಟ್ಟಿಲ್ಲ. ನೈತಿಕ ಆಧಾರದ ಮೇಲೆ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಸಂಸತ್ತಿನಲ್ಲಿ ಬಹಳ ಉತ್ತಮ ವ್ಯಕ್ತಿಗಳಿದ್ದಾರೆ. ಅವರನ್ನು ಆಯ್ಕೆ ಮಾಡಿ ಎಂದು ಕಾಂಗ್ರೆಸ್ ಕಾರ್ಯದರ್ಶಿ ಪ್ರಣವ್ ಜಾ ಒತ್ತಾಯಿಸಿದ್ದಾರೆ.

    ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿರುವ ಮಧ್ಯಪ್ರದೇಶದ ಕಾನೂನು ಸಚಿವ ಪಿಪಿ ಶರ್ಮಾ, ಬಿಜೆಪಿ ಹೇಳುವುದು ಒಂದು ಮಾಡುವುದು ಇನ್ನೊಂದು. ಆಕೆ ವಿವಾದಾತ್ಮಕ ಹೇಳಿಕೆ ನೀಡಿದಾಗ ಮೋದಿ ಅವರು ಆಕೆ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಾರೆ. ಆದರೆ ಆನೇಕ ಆರೋಪಗಳಿರುವ ಆಕೆಯನ್ನು ಒಂದು ಮಹತ್ವದ ಸಮಿತಿಗೆ ಆಯ್ಕೆ ಮಾಡಿರುವುದು ದುರದೃಷ್ಟಕರ ಎಂದಿದ್ದಾರೆ.

    ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸಿದ್ದರು. ಇದರ ಜೊತೆಗೆ ರಾಷ್ಟ್ರಪಿತ ಗಾಂಧೀಜಿಯವರನ್ನು ಕೊಂದ ನಾಥುರಾಮ್ ಗೋಡ್ಸೆ ಅವರನ್ನು ಒಬ್ಬ ದೇಶಭಕ್ತ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು. ಇದನ್ನು ಓದಿ: ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

  • ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ

    ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ

    ಭೋಪಾಲ್: ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಪರಿಣಾಮ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಚುನಾವಣಾ ಆಯೋಗ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ಹೇರಿದೆ.

    ಸಾಧ್ವಿ ಪ್ರಜ್ಞಾ ಸಿಂಗ್ ಅವರು ಮಾಜಿ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ ವಿರುದ್ಧ ಮತ್ತು ಬಾಬ್ರಿ ಮಸೀದಿ ಧ್ವಂಸ ವಿಚಾರದ ಬಗ್ಗೆ ವಿವಾದತ್ಮಾಕ ಹೇಳಿಕೆ ನೀಡಿದರು. ಇದರಂತೆ ಪ್ರಜ್ಞಾರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಆಯೋಗ ಗುರುವಾರ ಬೆಳಗ್ಗೆ 6 ರಿಂದ ಮುಂದಿನ 72 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ವಿಧಿಸಿದೆ.

    ಈ ನಿಷೇದ ಹೇರಿರುವ ಬಗ್ಗ ಪ್ರತಿಕ್ರಿಯೆ ನೀಡಿರುವ ಸಾಧ್ವಿ ಪ್ರಜ್ಞಾ ಸಿಂಗ್, ಇದರಿಂದ ಯಾವುದೇ ಸಮಸ್ಯೆ ಇಲ್ಲ ನಾನು ಚುನಾವಣಾ ಆಯೋಗಕ್ಕೆ ಗೌರವ ನೀಡುತ್ತೇನೆ ಎಂದು ಹೇಳಿದ್ದಾರೆ.

    2008 ರಲ್ಲಿ ನಡೆದ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸಾಧ್ವಿ ಠಾಕೂರ್ ಅವರು, 2011 ರಲ್ಲಿ ಮುಂಬೈ ಭಯೋತ್ಪಾದಕರ ದಾಳಿಯಲ್ಲಿ ನಿಧನರಾದ ಮಾಜಿ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್)ದ ಮುಖ್ಯಸ್ಥರಾದ ಹೇಮಂತ್ ಕರ್ಕರೆ ಅವರು ಮಾಡಿದ ಕರ್ಮಕ್ಕೆ ಅವರಿಗೆ ಆ ರೀತಿಯ ಸಾವು ಬಂತು ಎಂದು ಹೇಳಿಕೆ ನೀಡಿದ್ದರು. 1992 ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಮಾಡಿದವರಲ್ಲಿ ನಾನು ಒಬ್ಬಳು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಆಗುತ್ತದೆ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್‍ರನ್ನ ಭಯೋತ್ಪಾದಕ ಎಂದು ಕರೆದಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಆಯೋಗ ಸಾಧ್ವಿ ಅವರಿಗೆ ಮೂರನೇ ನೋಟಿಸ್ ಜಾರಿ ಮಾಡಿದೆ.

    48 ವರ್ಷದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಭೋಪಾಲ್‍ನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.