Tag: ಸಾನ್ವಿ

  • ತೆಲುಗಿನ ಸಂಗೀತ ನಿರ್ದೇಶಕ ತಮನ್‌ರನ್ನು ಭೇಟಿಯಾದ ಸುದೀಪ್ ಪುತ್ರಿ

    ತೆಲುಗಿನ ಸಂಗೀತ ನಿರ್ದೇಶಕ ತಮನ್‌ರನ್ನು ಭೇಟಿಯಾದ ಸುದೀಪ್ ಪುತ್ರಿ

    ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ (Kiccha Sudeep) ಅವರ ಪುತ್ರಿ ಸಾನ್ವಿ ಸುದ್ದಿಯಲ್ಲಿದ್ದಾರೆ. ತೆಲುಗಿನ ಮ್ಯೂಸಿಕ್ ಡೈರೆಕ್ಟರ್ ತಮನ್‌ರನ್ನು (Music Director Thaman) ಸಾನ್ವಿ ಭೇಟಿಯಾಗಿದ್ದಾರೆ. ನೆಚ್ಚಿನ ಸಂಗೀತ ನಿರ್ದೇಶಕನನ್ನು ಭೇಟಿಯಾದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

    ತಮನ್ ಎಸ್. ಅವರ ಸಂಗೀತ ನನಗಿಷ್ಟ. ಇವರ ಹಾಡುಗಳನ್ನು ತುಂಬಾನೇ ಕೇಳಿದ್ದೇನೆ. ಅವುಗಳಲ್ಲಿ ಎಲ್ಲವೂ ಇಷ್ಟ. ಆದರೆ ಇಲ್ಲಿಯವರೆಗೂ ಅವರನ್ನು ಭೇಟಿಯಾಗಿರಲಿಲ್ಲ. ಈಗ ಆ ಅವಕಾಶ ಸಿಕ್ಕಿದೆ. ಒಂದಲ್ಲ ಒಂದು ದಿನ ನಿಮ್ಮ ಜೊತೆ ಕೆಲಸ ಮಾಡುವ ಕನಸಿದೆ. ನಿಮ್ಮನ್ನು ಭೇಟಿಯಾಗಿರೋದು ಕನಸು ನನಸಾದಂತೆ ಆಗಿದೆ. ನಿಮ್ಮ ಬೆಂಬಲದ ಮಾತುಗಳು ಖುಷಿ ಕೊಟ್ಟಿದೆ ಎಂದು ಸಾನ್ವಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಅಣ್ಣಾವ್ರ ಹುಟ್ಟುಹಬ್ಬದಂದು ಹೊಸ ಉದ್ಯಮದತ್ತ ಅಶ್ವಿನಿ

    ಸುದೀಪ್ ನಟನಾಗಿ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಿದ್ರೆ, ಮಗಳು ಗಾಯಕಿಯಾಗಿ ಗುರುತಿಸಿಕೊಳ್ಳುವ ಹಂತದಲ್ಲಿದ್ದಾರೆ. ಅದ್ಭುತವಾಗಿ ಹಾಡುವ ಸಾನ್ವಿ ಇದೀಗ ‘ಜಿಮ್ಮಿ’ ಸಿನಿಮಾದ ಮೂಲಕ ಗಾಯಕಿಯಾಗಿ ಪರಿಚಿತರಾಗುತ್ತಿದ್ದಾರೆ.

  • ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ

    ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ

    ಸ್ಯಾಂಡಲ್‌ವುಡ್ (Sandalwood) ನಟ ಸುದೀಪ್ ಪುತ್ರಿ ಸಾನ್ವಿ (Sanvi Sudeep) ಇದೀಗ ಸುದ್ದಿಯಲ್ಲಿದ್ದಾರೆ. ತನ್ನ ಕ್ರಶ್ ಮದುವೆ ಮಾಡಿಕೊಂಡಿದ್ದಕ್ಕೆ ಸಾನ್ವಿ ಬೇಜಾರು ಮಾಡಿಕೊಂಡಿದ್ದಾರೆ. ಕಿಚ್ಚ ಸುದೀಪ್ ಮೇಲೆ ಹುಡುಗಿಯರಿಗೆ ಕ್ರಶ್ ಆಗಿದ್ದರೆ, ಸುದೀಪ್ ಮಗಳಿಗೆ ಈ ಸ್ಟಾರ್ ನಟನ ಮೇಲೆ ಕ್ರಶ್ ಆಗಿದೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

     

    View this post on Instagram

     

    A post shared by Sanvi Sudeep (@sanvisudeepofficial)

    ಕನ್ನಡ ಮತ್ತು ಸೌತ್ ಸಿನಿಮಾಗಳ ಮೂಲಕ ಮೋಡಿ ಮಾಡಿರುವ ಕಿಚ್ಚ ಸುದೀಪ್‌ಗೆ (Kiccha Sudeep) ಅಪಾರ ಅಭಿಮಾನಿಗಳ ಬಳಗವಿದೆ. ಅದರಲ್ಲೂ ಹುಡುಗಿರ ಫ್ಯಾನ್ ಬೇಸ್ ಜಾಸ್ತಿಯೇ ಇದೆ. ಹುಡುಗಿಯರ ಕ್ರಶ್ ಆಗಿರುವ ಕಿಚ್ಚನ ಮೇಲೆ ಎಲ್ಲರೂ ಕಣ್ಣೀಟ್ಟರೇ, ಇಲ್ಲಿ ಸುದೀಪ್ ಪುತ್ರಿಗೆ ಬಾಲಿವುಡ್ (Bollywood) ನಟನ (Actor) ಮೇಲೆ ಕ್ರಶ್ ಆಗಿದೆ.

    ಎಲ್ಲರಿಗೂ ಒಬ್ಬರು ಕ್ರಶ್ ಇದ್ದೇ ಇರುತ್ತಾರೆ. ಇದೇ ನಟ, ಇದೇ ನಟಿ ಅಂದ್ರೆ ಭಾರೀ ಇಷ್ಟ ಅನ್ನೋ ಕ್ರೇಜ್ ಎಲ್ಲರಲ್ಲೂ ಇರುತ್ತದೆ. ಸ್ಯಾಂಡಲ್‌ವುಡ್ ಕಿಚ್ಚ ಸುದೀಪ್ ಅವರ ಮಗಳಿಗೂ ಈ ಥರ ಒಬ್ಬ ಕ್ರಶ್ ಇದ್ದರು. ಬಾಲಿವುಡ್ ನಟ ಸಿದ್ಧಾರ್ಥ್‌ ಮೇಲೆ ಸಾನ್ವಿ ಕ್ರಶ್ ಆಗಿದ್ದು, ಅವರು ಕಿಯಾರಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರೋದ್ದಕ್ಕೆ ಸಾನ್ವಿ ಬೇಜಾರು ಮಾಡಿಕೊಂಡಿದ್ದಾರೆ. ಇತ್ತೀಚಿಗೆ ಸಿದ್-ಕಿಯಾರಾ ಮದುವೆ ಫೋಟೋ ಶೇರ್ ಮಾಡಿ ಅಳುವ ಇಮೋಜಿಯನ್ನ ಸಾನ್ವಿ ಹಾಕಿದ್ದರು. ಈ ಮೂಲಕ ಸುದೀಪ್ ಪುತ್ರಿ ಸಾನ್ವಿ ತಮ್ಮ ಕ್ರಶ್ ಯಾರು ಎಂಬುದನ್ನ ರಿವೀಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪುನೀತ್ ಬಗ್ಗೆ ಅಶ್ಲೀಲವಾಗಿ ಪೋಸ್ಟ್ – ವ್ಯಕ್ತಿ ಅರೆಸ್ಟ್

    ಪುನೀತ್ ಬಗ್ಗೆ ಅಶ್ಲೀಲವಾಗಿ ಪೋಸ್ಟ್ – ವ್ಯಕ್ತಿ ಅರೆಸ್ಟ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್‌ಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ನಟ ಪುನೀತ್ ರಾಜ್‍ಕುಮಾರ್ ನಿಧನರಾದ ಹಿನ್ನೆಲೆ ಕಳೆದ ಶುಕ್ರವಾರ ಮದ್ಯ ಮಾರಾಟವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಇರಲಿ ಎಂಬುದು ಈ ಆದೇಶದ ಹಿಂದಿನ ಉದ್ದೇಶ ಆಗಿತ್ತು. ಕುಡಿದ ಅಮಲಿನಲ್ಲಿ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಹುದು. ಅದನ್ನು ತಪ್ಪಿಸಲು ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿತ್ತು.

    ಹೀಗಿದ್ದರೂ ಪುನೀತ್ ರಾಜ್ ಕುಮಾರ್ ಸಾವನ್ನಪ್ಪಿದ ದಿನ ಆದ್ಯಾಗೋ ಮದ್ಯಕೊಂಡ ಕೀಳು ಮನಸ್ಸಿನ ವ್ಯಕ್ತಿಯೊಬ್ಬ ಮದ್ಯ ಬಾಟಲಿಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವುದರ ಜೊತೆಗೆ, ರಾಜ್ ಕುಮಾರ್ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೆನಪಿಟ್ಟುಕೊಳ್ಳಿ. ಮರೆಯಬೇಡಿ. ಯಾಕೆಂದರೆ, ಇದನ್ನು ಕುಡಿದ ಬಳಿಕ ಅವನ ಸಮಾಧಿ ಮೇಲೆ ನಾವು ಮೂ** ಮಾಡುತ್ತೇವೆ ಎಂದು ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಮಾಡಿದ್ದ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

     

    ಈ ಪೋಸ್ಟ್ ವಿರುದ್ಧ ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪುತ್ರಿ ಸಾನ್ವಿ, ಕೇವಲ ಆಲ್ಕೋಹಾಲ್‍ಗಾಗಿ ಪುನೀತ್ ಬಗ್ಗೆ ಇಂಥ ವರ್ತನೆಯೇ? ಜನರಲ್ಲಿ ಮನುಷ್ಯತ್ವ ಉಳಿದಿಲ್ಲವೇ? ಎಂದು ಸಾನ್ವಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಇಂಥ ನೋವು ಯಾರಿಗೂ ಬರಬಾರದು: ಶಿವರಾಜ್‌ ಕುಮಾರ್

    ಈ ಹಿನ್ನಲೆ ನಗರ ಸೈಬರ್ ಪೊಲೀಸರು ಪೋಸ್ಟ್ ಹಿಂದೆ ಬಿದ್ದಿದ್ದರು. ಇದೀಗ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಆರೋಪಿ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ವ್ಯಕ್ತಿಯ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

  • ಗೀತಾ ಮಾತಿನ ಚಿತ್ರೀಕರಣ ಮುಗೀತು!

    ಗೀತಾ ಮಾತಿನ ಚಿತ್ರೀಕರಣ ಮುಗೀತು!

    ಬೆಂಗಳೂರು: ನಿರ್ಮಾಪಕರಾದ ಸೈಯದ್ ಸಲಾಂ ಮತ್ತು ಶಿಲ್ಪಾ ಗಣೇಶ್ ಅವರ ಬ್ಯಾನರ್ ಗಳಾದ ಎಸ್ ಎಸ್ ಫಿಲ್ಮ್ ಮತ್ತು ಗೋಲ್ಡನ್ ಮೂವೀಸ್ ಅಡಿಯಲ್ಲಿ ಜಂಟಿಯಾಗಿ ನಿರ್ಮಿಸುತ್ತಿರುವ ಗೀತಾ ಚಿತ್ರದ ಮಾತಿನ ಚಿತ್ರೀಕರಣ ಮುಗಿದಿದೆ. ಇನ್ನು ಎರಡು ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆ.

    ಮನಾಲಿ, ಕೊಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ಶೂಟಿಂಗ್ ನಡೆಸಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

    ಮಿಸ್ಟರ್ & ಮಿಸೆಸ್ ರಾಮಾಚಾರಿ ಮತ್ತು ರಾಜಕುಮಾರ ಚಿತ್ರದ ಸಹ ನಿರ್ದೇಶಕರು ಮತ್ತು ಸಂಭಾಷಣೆಕಾರರಾಗಿ ಕೆಲಸ ಮಾಡಿದ್ದ ವಿಜಯ್  ನಾಗೇಂದ್ರ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅನುಪ್ ರೂಬೆನ್ಸ್ ಈ ಚಿತ್ರಕ್ಕೆ ಸಂಗೀತವನ್ನು ನೀಡುತ್ತಿದ್ದಾರೆ. ಚಿತ್ರಕ್ಕೆ ಶ್ರೀಶ ಕುಂದ್ರಳ್ಳಿ ಅವರ ಛಾಯಾಗ್ರಹಣವಿದೆ.