Tag: ಸಾಫ್ಟ್ ವೇರ್ ಎಂಜಿನಿಯರ್

  • ಚೀನಾದಿಂದ ಬಂದ ಹುಬ್ಬಳ್ಳಿ ಟೆಕ್ಕಿಗೆ ಕೊರೋನಾ ವೈರಸ್ ಶಂಕೆ – ವರದಿಗಾಗಿ ಕಾಯ್ತಿರೋ ವೈದ್ಯರು

    ಚೀನಾದಿಂದ ಬಂದ ಹುಬ್ಬಳ್ಳಿ ಟೆಕ್ಕಿಗೆ ಕೊರೋನಾ ವೈರಸ್ ಶಂಕೆ – ವರದಿಗಾಗಿ ಕಾಯ್ತಿರೋ ವೈದ್ಯರು

    ಹುಬ್ಬಳ್ಳಿ: ಮಾರಕ ಕೊರೋನಾ ವೈರಸ್ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದು, ಟೆಕ್ಕಿಗೆ ಕೊರೋನಾ ಸೊಂಕು ಶಂಕೆ ಹಿನ್ನೆಲೆಯಲ್ಲಿ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಾಫ್ಟ್‌ವೇರ್ ಎಂಜಿನಿಯರ್ ಸಂದೀಪ್‍ಗೆ ಕೊರೋನಾ ಸೊಂಕು ಶಂಕೆ ಹಿನ್ನೆಲೆಯಲ್ಲಿ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಲ್ಯಾಬ್ ವರದಿಗಾಗಿ ವೈದ್ಯರು ಕಾಯುತ್ತಿದ್ದಾರೆ. ಚೀನಾದ ವುಹಾನ್‍ನಿಂದ ಮರಳಿದ ನಂತರ ಸಂದೀಪ್ ಕಿಮ್ಸ್‌ಗೆ ದಾಖಲಾಗಿದ್ದು, ಬೆಂಗಳೂರಿನ ನ್ಯಾಷನಲ್ ಇನ್ಸಿಟ್ಯೂಟ್ ಆಪ್ ವೈರಾಲಜಿಯಿಂದ ವರದಿಗಾಗಿ ಕಾಯುತ್ತಿದ್ದಾರೆ. ಇದನ್ನೂ ಓದಿ: ಕೊರೊನಾ ವೈರಸ್ ಎಂದರೇನು? ಹೇಗೆ ಹರಡುತ್ತೆ? ರೋಗ ಲಕ್ಷಣವೇನು?

    ಸಾಫ್ಟ್‌ವೇರ್ ಎಂಜಿನಿಯರ್ ಕಿಮ್ಸ್‌ನ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಶ್ವಾಪುರದ ಸಂದೀಪ್ ಚೀನಾದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಜನವರಿ 19ರಂದು ಬೆಂಗಳೂರಿಗೆ ಆಗಮಿಸಿದ್ದು, ಕಳೆದ 15 ದಿನಗಳ ಹಿಂದೆ ಹುಬ್ಬಳ್ಳಿಗೆ ಬಂದಿದ್ದಾರೆ.

    ಸೋಮವಾರ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಚೀನಾದಿಂದ ಆಗಮಿಸಿದ ಹಿನ್ನೆಲೆಯಲ್ಲಿ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ನಂತರ ಅದನ್ನು ಬ್ಲಡ್ ಮತ್ತು ಸ್ಟ್ರಾಬ್ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಪ್ ವೈರಾಜಲಿ ಬೆಂಗಳೂರಿಗೆ ರವಾನಿಸಲಾಗಿತ್ತು. ಸದ್ಯಕ್ಕೆ ವೈದ್ಯರು ವರದಿಗಾಗಿ ಕಾಯುತ್ತಿದ್ದಾರೆ.

  • ಅವನಿಗೆ ಅವಳ್ಮೇಲೆ, ಅವಳಿಗೆ ಇನ್ನೊಬ್ಬನ್ಮೇಲೆ ಲವ್: ನೀನಿಲ್ಲದ ಬದುಕು ಯಾಕೆಂದು ಸತ್ತೇ ಹೋದ!

    ಅವನಿಗೆ ಅವಳ್ಮೇಲೆ, ಅವಳಿಗೆ ಇನ್ನೊಬ್ಬನ್ಮೇಲೆ ಲವ್: ನೀನಿಲ್ಲದ ಬದುಕು ಯಾಕೆಂದು ಸತ್ತೇ ಹೋದ!

    ಹೈದರಾಬಾದ್: ಪ್ರೀತಿ ಮಾಯೆ ಹುಷಾರು ಎಂದು ನೀವೆಲ್ಲರೂ ಕೇಳಿರುತ್ತೀರಿ. ಅದೇ ಸ್ಟೋರಿ ಇದು. ಪ್ರೀತಿಯ ಹುಚ್ಚುತನಕ್ಕೆ ಸಿಲುಕಿ, ತಾನು ಇಷ್ಟಪಟ್ಟ ಹುಡುಗಿ ತನಗೆ ದಕ್ಕಲಿಲ್ಲ ಎಂದು ಸಾಫ್ಟ್ ವೇರ್ ಎಂಜಿನಿಯರ್ ಒಬ್ಬ ಅಪಾರ್ಟ್ ಮೆಂಟ್ ನಿಂದ ಹಾರಿ ಪ್ರಾಣ ಬಿಟ್ಟಿದ್ದಾನೆ.

    ಮೆಹಬೂಬಾಬಾದ್ ಜಿಲ್ಲೆಯ ದೋರ್ಣಕಲ್ ಮಂಡಲ್‍ನ ಗೊಲ್ಲಚೆಲ್ಲ ಗ್ರಾಮದ ಜಗದೀಶ್ ಮೃತ ಸಾಫ್ಟ್ ವೇರ್ ಎಂಜಿನಿಯರ್. ಈತ ಮಿಯಾಪುರ್ ಎಂಬಲ್ಲಿನ ಜನಪ್ರಿಯ ಅಪಾರ್ಟ್‍ಮೆಂಟ್ ನಲ್ಲಿ ವಾಸವಾಗಿದ್ದ. ಇದೇ ವೇಳೆ ನೆರೆಹೊರೆಯ ಹುಡುಗಿಯೊಬ್ಬಳಿಗೆ ಲವ್ ಪ್ರಪೋಸ್ ಮಾಡಿದ್ದಾನೆ. ಆದರೆ ಇದಕ್ಕೂ ಮೊದಲೇ ಇನ್ನೊಬ್ಬನ ಜೊತೆ ಲವ್ ಆಗಿದ್ದ ಹುಡುಗಿ ಈತನ ಪ್ರೇಮ ನಿವೇದನೆಯನ್ನು ತಿರಸ್ಕರಿಸುತ್ತಾನೆ. ಆದರೂ ಆತ ಮತ್ತೆ ಮತ್ತೆ ಆಕೆಯನ್ನು ಕಾಡುತ್ತಿದ್ದಿದ್ದರಿಂದ ಬೇಸತ್ತ ಆಕೆ ಬೇರೆ ಕಡೆ ವಾಸ ಬದಲಾಯಿಸುತ್ತಾಳೆ.

    ಇದನ್ನೂ ಓದಿ: 2 ವರ್ಷ ಪ್ರೀತಿಸಿದವಳನ್ನ ನದಿಗೆ ತಳ್ಳಿದ ಪ್ರಿಯತಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರ!

    ಆದರೆ ಆಕೆಯ ಗೆಳೆಯರ ಮೂಲಕ ಆತ ಆಕೆಯ ಫೋನ್ ನಂಬರ್ ಪಡೆದುಕೊಂಡು ಆಕೆಗೆ ಮತ್ತೆ ಕಾಲ್ ಮಾಡುತ್ತಾನೆ. ಫೋನಲ್ಲಿ ಮಾತಾಡ್ತಾ ನೀನಿಲ್ಲದೆ ಈ ಬದುಕೇ ವ್ಯರ್ಥ ಎಂದೆಲ್ಲಾ ಅಂಗಾಲಾಚಿದ್ದಾನೆ. ಈ ವೇಳೆ ಆತ ಏನಾದರೂ ಅನಾಹುತ ಮಾಡಿಕೊಳ್ಳಬಹುದು ಎಂದು ಎಚ್ಚೆತ್ತ ಆಕೆ ಆತನಿಗೆ ವಿಷಯದ ಮನವರಿಕೆ ಮಾಡಲು ಪ್ರಯತ್ನಿಸುತ್ತಾಳೆ. ಆದರೆ ಆತ ನಾನು ಅಪಾರ್ಟ್ ಮೆಂಟ್ ನ 5ನೇ ಅಂತಸ್ತಿನಿಂದ ಹಾರಿ ಸಾಯುತ್ತೇನೆ ಎಂದು ಬೆದರಿಕೆ ಹಾಕಿ ಕಟ್ಟಡದಿಂದ ಹಾರುತ್ತಾನೆ. ತಕ್ಷಣ ಆಕೆ ಸ್ಥಳಕ್ಕೆ ಬಂದರೂ ಆತ ರಕ್ತದ ಮಡುವಿನಲ್ಲಿ ಬಿದ್ದು ನಿಶ್ಚಲವಾಗಿದ್ದ. ಇಲ್ಲಿಗೆ ಹುಚ್ಚು ಪ್ರೇಮಕ್ಕೆ ಆತ ತನ್ನ ಪ್ರಾಣವನ್ನೇ ತ್ಯಜಿಸಿದ್ದಾನೆ.

    ಇದನ್ನೂ ಓದಿ: ಬಾಯ್ ಫ್ರೆಂಡ್ ಮೀಟ್ ಆಗದ್ದಕ್ಕೆ 4ನೇ ಫ್ಲೋರ್‍ನಿಂದ ಹಾರಿ ಟೆಕ್ಕಿ ಆತ್ಮಹತ್ಯೆ

    ಇದೇ ವೇಳೆ ವಿಷಯ ತಿಳಿದ ಜಗದೀಶ್ ಸಂಬಂಧಿಕರು, ಇದು ಆತ್ಮಹತ್ಯೆಯಲ್ಲ ಕೊಲೆ. ಈ ಬಗ್ಗೆ ಸೂಕ್ತ ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

    ಇದನ್ನೂ ಓದಿ: ಲವ್ವರ್ ಬಿಟ್ಟು ಆತನ ಸ್ನೇಹಿತನ ಜೊತೆ ಲವ್: ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ

    ಇದನ್ನೂ ಓದಿಪ್ರೀತ್ಸೋ ಎಂದು ಬೆನ್ನು ಬಿದ್ದ ಯುವತಿಯ ಕಾಟಕ್ಕೆ ಸುಸ್ತಾದ ಟೆಕ್ಕಿ!- ಪೊಲೀಸ್ ಠಾಣೆಯಲ್ಲಿ ದೂರು