Tag: ಸಾಮಾಗ್ರಿ

  • ಶಾಸಕರ ಜನಸಂಪರ್ಕ ಕಚೇರಿಗೆ ಓಡೋಡಿ ಬಂದ ರೇಣುಕಾಚಾರ್ಯ

    ಶಾಸಕರ ಜನಸಂಪರ್ಕ ಕಚೇರಿಗೆ ಓಡೋಡಿ ಬಂದ ರೇಣುಕಾಚಾರ್ಯ

    ದಾವಣಗೆರೆ: ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೀಡಬೇಕಾಗಿದ್ದ ಪರಿಹಾರ ಸಾಮಗ್ರಿಗಳನ್ನು ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಇಟ್ಟುಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಪಬ್ಲಿಕ್ ಟಿವಿ ವರದಿ ಮಾಡುತ್ತಿದಂತೆ ಶಾಸಕ ರೇಣುಕಾಚಾರ್ಯ ಅವರು ಓಡೋಡಿ ಬಂದು ಸ್ಪಷ್ಟನೆ ನೀಡಿದ್ದಾರೆ.

    ಜಿಲ್ಲೆಯ ಹೊನ್ನಾಳಿ ತಾಲೂಕಿನ ಸುತ್ತಾಮುತ್ತ ಕಳೆದ ನಾಲ್ಕೈದು ತಿಂಗಳ ಹಿಂದೆ ತುಂಗಾಭದ್ರ ನದಿಯ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರವಾಹ ಉಂಟಾಗಿತ್ತು. ಇದರಿಂದ ತಾಲ್ಲೂಕಿನ ಸುತ್ತ ಮುತ್ತಲಿನ ಗ್ರಾಮದ ಜನರು ನಿರಾಶ್ರಿತರಿಗೆ ನೆರವಾಗಲು ಅಗತ್ಯ ಸಾಮಗ್ರಿಗಳನ್ನು ಹಾಗೂ ದವಸ ಧಾನ್ಯಗಳನ್ನು ನೀಡಿದ್ದರು. ಆದರೆ ಶಾಸಕ ರೇಣುಕಾಚಾರ್ಯ ಅವರಿಗೆ ಒಪ್ಪಿಸಿದ ಸಾಮಗ್ರಿಗಳನ್ನು ನಿರಾಶ್ರಿತರಿಗೆ ನೀಡದೆ ಶಾಸಕರ ಜನ ಸಂಪರ್ಕ ಕೇಂದ್ರದಲ್ಲಿ ಸಂಗ್ರಹಿಸಿಡಲಾಗಿತ್ತು. ಕಿಂಟ್ವಾಲ್ ಗಟ್ಟಲೆ ಸಾಮಗ್ರಿಗಳನ್ನು ಹೆಚ್ಚು ದಿನಗಳ ಕಾಲ ಸಂಗ್ರಹಿಸಿಟ್ಟ ಕಾರಣ ಹಾಳಾಗುವ ಹಂತಕ್ಕೆ ತಲುಪಿದ್ದವು, ಈ ಕುರಿತ ವರದಿಯನ್ನು ಪಬ್ಲಿಕ್ ಟಿವಿ ಪ್ರಸಾರ ಮಾಡಿತ್ತು.

    ವರದಿ ಪ್ರಸಾರವಾಗುತ್ತಿದಂತೆ ಎಚ್ಚೆತ್ತ ಶಾಸಕ ರೇಣುಚಾರ್ಯ ಅವರು, ಕೂಡಲೇ ಸ್ಥಳಕ್ಕೆ ಓಡೋಡಿ ಬಂದು, ಸಾಮಗ್ರಿಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಹೊನ್ನಾಳಿಯಲ್ಲಿರುವ ನನ್ನ ಕಚೇರಿಗೆ ಇದೂವರೆಗೂ ನಾನು ಆಗಮಿಸಿಲ್ಲ. ಸಂಗ್ರಹಿಸಿದ್ದ 46 ಲಕ್ಷ ರೂ. ಹಣವನ್ನು ಸಿಎಂ ಪರಿಹಾರ ನಿಧಿ ನೀಡಿದ್ದೇವೆ. ರೈತರಿಗೆ ಪರಿಹಾರವಾಗಿ ನೀಡಿದ್ದ ಹಣ ಅವರ ಬ್ಯಾಂಕ್ ಖಾತೆ ಜಮೆ ಮಾಡಿದ್ದೇವೆ. 7000 ಬಟ್ಟೆ, 35 ಸಾವಿರ ಕ್ವಿಂಟಾಲ್ ಅಕ್ಕಿಯನ್ನು ತಾಲೂಕು ಅಧಿಕಾರಿಗಳಿಗೆ ನೀಡಲಾಗಿದೆ ಎಂದರು.

    ಜಿಲ್ಲಾಧಿಕಾರಿಗಳು ತಾಲೂಕು ಅಧಿಕಾರಿಗಳಿಗೆ ಸಂಗ್ರಹಿಸಿರುವ ವಸ್ತುಗಳನ್ನು ಜನರಿಗೆ ತಲುಪಿಸಲು ಹೇಳಿದ್ದರು. ಆದರೆ ಸದ್ಯ ಸಾಮಾಗ್ರಿಗಳನ್ನು ತಲುಪಿಸುವ ಕಾರ್ಯ ವಿಳಂಬವಾಗಿದೆ. ನಾನು ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಕಾರಣದಿಂದ ವಿತರಣೆ ಮಾಡಲು ತಡವಾಗಿದೆ. ಇಲ್ಲಿರುವ ಯಾವುದೇ ಸಾಮಗ್ರಿಗಳು ದುರ್ಬಳಕೆ ಆಗಿಲ್ಲ, ಇನ್ನೊಂದು ವಾರದಲ್ಲಿ ಸಾಮಾಗ್ರಿಗಳನ್ನು ಸಂತ್ರಸ್ತರಿಗೆ ವಿತರಣೆ ಮಾಡುತ್ತೇನೆ. ಯಾವುದೇ ವಸ್ತುಗಳು ಹಾಳಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

  • ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸಿಲಿಂಡರ್ ಸ್ಫೋಟ – ಸುಟ್ಟು ಕರಕಲಾಯ್ತು ಸಾಮಾಗ್ರಿಗಳು

    ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸಿಲಿಂಡರ್ ಸ್ಫೋಟ – ಸುಟ್ಟು ಕರಕಲಾಯ್ತು ಸಾಮಾಗ್ರಿಗಳು

    ದಾವಣಗೆರೆ: ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಪರಿಣಾಮ ಸಾಮಾಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆಮಾಚಿಕೆರೆ ಗ್ರಾಮದಲ್ಲಿ ನಡೆದಿದೆ.

    ಷಡಕ್ಷರಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅಡುಗೆ ಮಾಡಲು ಒಲೆ ಹೊತ್ತಿಸುವಾಗ ಈ ಘಟನೆ ಸಂಭವಿಸಿದ್ದು ಲಕ್ಷಾಂತರ ರೂ. ಮೌಲ್ಯದ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿದೆ. ಸಿಲಿಂಡರ್ ಸ್ಫೋಟದಿಂದ ಯಾವುದೇ ಪ್ರಾಣಹಾನಿ ಆಗಿಲ್ಲ.

    ಇನ್ನೆರಡು ದಿನಗಳಲ್ಲಿ ಷಡಕ್ಷರಪ್ಪ ಅವರ ಮನೆಯಲ್ಲಿ ಮದುವೆ ಸಮಾರಂಭವಿತ್ತು. ಆದ್ದರಿಂದ ಮನೆಯಲ್ಲಿ ಮದುವೆ ಬೇಕಾದ ಸಾಮಾಗ್ರಿಗಳನ್ನು ತಂದಿಡಲಾಗಿತ್ತು. ದುರದೃಷ್ಟವೆನ್ನುವಂತೆ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮದುವೆ ಸಾಮಾಗ್ರಿಗಳೆಲ್ಲ ಬೆಂಕಿಗಾಹುತಿಯಾಗಿದೆ.

    ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಿಯಂತ್ರಣ ಮಾಡಿದ್ದಾರೆ. ಅಲ್ಲದೆ ಘಟನೆ ಕುರಿತು ಜಗಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗದಿದ್ದರೂ ಮದುವೆ ಸಂಭ್ರಮದಲ್ಲಿದ್ದ ಮನೆಮಂದಿ ಮುಂದೇನು ಮಾಡುವುದು ಎನ್ನುವ ಚಿಂತೆಯಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಿಲ್ಲಾಧಿಕಾರಿಯಿಂದ 30 ಕೋಟಿ ರೂ. ಭ್ರಷ್ಟಾಚಾರ?

    ಜಿಲ್ಲಾಧಿಕಾರಿಯಿಂದ 30 ಕೋಟಿ ರೂ. ಭ್ರಷ್ಟಾಚಾರ?

    -ಲೋಕಾಯುಕ್ತರಿಗೆ ದೂರು ಸಲ್ಲಿಸಲು ಮುಂದಾಗಿರುವ ವಕೀಲ

    ಹುಬ್ಬಳ್ಳಿ: ಪ್ರಸ್ತುತ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ್ ಬಾಗಲಕೋಟೆಯ ಜಿಲ್ಲಾಧಿಕಾರಿಯಾಗಿದ್ದಾಗ ಸುಮಾರು 30 ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ.

    ಪಿ.ಎ. ಮೇಘಣ್ಣವರ್ ತಮ್ಮ ಅಧಿಕಾರಾವಧಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಆಹಾರ ಸಾಮಗ್ರಿಗಳ ಖರೀದಿಯಲ್ಲಿ ಸುಮಾರು 30 ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ವಕೀಲ ವೈ.ಎನ್.ಹೆಗಡೆ ಆರೋಪಿಸಿದ್ದಾರೆ. ಹಾಗೆಯೆ ಮೇಘಣ್ಣವರ್ ವಿರುದ್ದ ಡಿ.10ಕ್ಕೆ ಲೋಕಾಯುಕ್ತರಿಗೆ ದೂರು ನೀಡುವದರ ಜೊತೆಗೆ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

    ಯುವಶಕ್ತಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಹಾಗೂ ವಕೀಲರಾಗಿ ವೈ.ಎನ್.ಹೆಗಡೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. 17/11/2015 ರಿಂದ 26/03/2018 ರವರಗೆ ಪಿ.ಎ ಮೆಘಣ್ಣವರ್ ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದರು. ಆಗ ಅಂಗನವಾಡಿ ಅಹಾರ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಿರುವ ದಾಖಲೆಗಳನ್ನು ಬಿಡುಗಡೆ ಮಾಡಿದರು. ಈ ಭಷ್ಟಾಚಾರದಲ್ಲಿ ಮೇಘಣ್ಣವರ್ ಸೇರಿದಂತೆ ಹಲವಾರು ಆಧಿಕಾರಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

    ಜಿಲ್ಲೆಯಲ್ಲಿದ್ದ ಅಂಗನವಾಡಿಗಳಿಗೆಂದು ಮಾರುಕಟ್ಟೆ ಬೆಲೆಗಿಂತ ಮೂರುಪಟ್ಟು ಅಧಿಕ ಬೆಲೆ ನೀಡಿ ತೊಗರೆ ಬೇಳೆ, ಹೆಸರು ಕಾಳು ಸೇರಿದಂತೆ ಹಲವು ಸಾಮಾಗ್ರಿಗಳನ್ನು ಖರೀದಿ ಮಾಡಿ ಸರ್ಕಾರಕ್ಕೆ ಮೇಘಣ್ಣವರ್ ಮೋಸ ಮಾಡಿದ್ದಾರೆ. ತೊಗರಿ ಬೇಳೆ ಕ್ವಿಂಟಾಲಿಗೆ 5,250 ಇದ್ದಾಗ 17,000, ಶೇಂಗಾ 4,220 ಕ್ವಿಂಟಾಲಿಗೆ ಇದ್ದಾಗ 12,000, ಹೆಸರುಕಾಳು 5,220 ಕ್ವಿಂಟಾಲಿಗೆ ಇದ್ದಾಗ 10,500 ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ. ಸತತ ಮೂರು ವರ್ಷಗಳು ಇದೆ ದರದಲ್ಲಿ ಖರೀದಿ ಮಾಡಿದ್ದು, 6 ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡುವ ನಿಯಮವನ್ನು ಪಾಲನೆ ಮಾಡಿಲ್ಲ. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 2,116 ಅಂಗನವಾಡಿಗಳಿಗೆ. ಎಲ್ಲಾ ಅಂಗನವಾಡಿಗಳಿಗೂ ಇದೇ ಬೆಲೆಯಲ್ಲಿ ಸಾಮಾಗ್ರಿ ಖರೀದಿ ಮಾಡಿ ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಅಂತಾ ಹೇಳಿದರು.

    ಅಷ್ಟೆ ಅಲ್ಲದೆ ಮೊದಲೇ ಅಪೌಷ್ಟಿಕತೆಯಿಂದ ಬಳುತ್ತಿರುವ ಬಾಗಲಕೋಟೆಯ ಮಕ್ಕಳು ಮತ್ತು ಗರ್ಭಿಣಿಯರಿಗೆ ಮೋಸ ಮಾಡಿದ್ದಾರೆ. ಮೂರು ವರ್ಷದ ಅವಧಿಯಲ್ಲಿ ಮೂವತ್ತು ಕೋಟಿ ಹಣ ನುಂಗಿ ನೀರು ಕುಡಿದಿದ್ದಾರೆ. ಆಯುಕ್ತರ ಮೇಲೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಮೇಘಣ್ಣವರ್ ವಿರುದ್ಧ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv