Tag: ಸಾಮಾಜಿಕ ಹೋರಾಟಗಾರ

  • ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆ- ಅಣ್ಣಾ ಹಜಾರೆ

    ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆ- ಅಣ್ಣಾ ಹಜಾರೆ

    ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು, ಇನ್ನಾದರೂ ಮೋದಿ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕೆಂದು ಹಿರಿಯ ಸಾಮಾಜಿಕ ಹೋರಾಟಗಾರ ಹಾಗೂ ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ.

    ಪಂಚರಾಜ್ಯಗಳ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಚುನವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಪ್ರಧಾನಿ ಮೋದಿಯೂ ಸೇರಿದಂತೆ ಬಿಜೆಪಿ ನಾಯಕರು ಮರೆತಿದ್ದಾರೆ. ಹೀಗಾಗಿ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ತನ್ನ ಹಿಡಿತದಲ್ಲಿದ್ದ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಗಡ ರಾಜ್ಯಗಳಲ್ಲಿ ಬಿಜೆಪಿ ಸೋತಿದೆ. ಈ ಮೂಲಕ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

    ಮೋದಿ ಸರ್ಕಾರ ಚುನಾವಣೆಗೂ ಮುನ್ನ ಕಪ್ಪುಹಣವನ್ನು ದೇಶಕ್ಕೆ ವಾಪಾಸ್ ತರುವ ವಿಚಾರ, ರೈತರ ಬೆಳೆಗೆ ಬೆಂಬಲ ಬೆಲೆ, ಕೃಷಿ ಉತ್ಪಾದನೆಗಳಿಗೆ ಪ್ರೋತ್ಸಾಹ, ಅಧಿಕಾರದಲ್ಲಿ ಜನರ ಭಾಗವಹಿಸುವಿಕೆ ಸೇರಿದಂತೆ ಇನ್ನೂ ಮುಂತಾದ ಆಶ್ವಾಸನೆಗಳನ್ನು ನೀಡಿದ್ದರು. ಆದರೆ ಇದೂವರೆಗೂ ಯಾವುದೇ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಕೊಟ್ಟ ಮಾತನ್ನು ಅವರು ಮರೆತಿರಬಹುದು. ಆದರೆ ಮೋದಿಯವರ ಮೇಲೆ ಭರವಸೆ ಇಟ್ಟು ಮತ ಹಾಕಿದ್ದ ಜನ ಎಂದಿಗೂ ಅದನ್ನು ಮರೆಯುವುದಿಲ್ಲ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮೋದಿ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಮುಂಬರುವ ಲೋಕಸಭಾ ಚುನಾವಣಾ ವೇಳೆಗೆ ತಾನು ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸದಿದ್ದರೇ, ಇದೇ ರೀತಿಯ ಫಲಿತಾಂಶ ಮತ್ತೆ ಮರುಕಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಪ್ರಧಾನಿ ಮೋದಿಯವರ ನೋಟು ನಿಷೇಧ ನಿರ್ಧಾರದ ಕುರಿತು ಮಾತನಾಡಿ, ನೋಟು ನಿಷೇಧ ಮೋದಿ ಸರ್ಕಾರದ ತಪ್ಪು ನಡೆಯಾಗಿದೆ. ಅದನ್ನು ಯಾವ ಉದ್ದೇಶದಿಂದ ಜಾರಿಗೆ ತಂದರೋ, ಅದು ಇದೂವರೆಗೂ ಈಡೇರಿಲ್ಲ. ಕಪ್ಪುಹಣವನ್ನು ಬಯಲಿಗೆಳೆಯುವ ಅವರ ಉದ್ದೇಶ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದೆ? ಆರ್‍ಬಿಐ ಮಾಹಿತಿಗಳ ಪ್ರಕಾರ ನೋಟು ಅಮಾನ್ಯೀಕರಣದ ಬಳಿಕ ಶೇ.99ರಷ್ಟು ನಿಷೇಧಿತ ನೋಟುಗಳು ಬ್ಯಾಂಕುಗಳಲ್ಲಿ ಸಂಗ್ರಹವಾಗಿದೆ. ಹಾಗಾದರೆ ಕಪ್ಪುಹಣ ಎಲ್ಲಿಗೆ ಹೋಯಿತು? ಪ್ರಜಾಪ್ರಭುತ್ವದಲ್ಲಿ ಇಂತಹ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನುರಿತ ತಜ್ಞರೊಂದಿಗೆ ಪ್ರಧಾನಿ ಚರ್ಚೆ ನಡೆಸಬೇಕಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಇದೇ ವೇಳೆ ರಾಮಮಂದಿರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೇಶದಲ್ಲಿ ರಾಮಮಂದಿರ ವಿಚಾರವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಏಕೆಂದರೆ ರಾಮಮಂದಿರಕ್ಕಿಂತಲೂ ಗಂಭೀರ ಸಮಸ್ಯೆಗಳು ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿವೆ. ಶ್ರೀರಾಮ ಮಂದಿರದಲ್ಲಿ ಇಲ್ಲ. ಬಡವರ ಮನಸ್ಸಿನಲ್ಲಿದ್ದಾನೆ. ಬಡವರನ್ನು ಉದ್ಧಾರ ಮಾಡಿದಾಗ ಮಾತ್ರ, ರಾಮನಿಗೆ ತೃಪ್ತಿ ಸಿಗುತ್ತದೆ. ನಾವು ಮಾಡುವ ಒಳ್ಳೆಯ ಕೆಲಸದಲ್ಲೇ, ಶ್ರೀರಾಮನನ್ನು ಕಾಣಬೇಕು. ಇದನ್ನೇ ಶ್ರೀರಾಮ ಕೂಡ ಹೇಳಿದ್ದಾನೆಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • `ಜೆಸಿಬಿ’ ಎಂಬ ಭ್ರಷ್ಟ ಪಕ್ಷಗಳು ರಾಜ್ಯವನ್ನು ಲೂಟಿ ಹೊಡೆದಿದ್ದಾರೆ- ಎಸ್‍ಆರ್ ಹಿರೇಮಠ ಕಿಡಿ

    `ಜೆಸಿಬಿ’ ಎಂಬ ಭ್ರಷ್ಟ ಪಕ್ಷಗಳು ರಾಜ್ಯವನ್ನು ಲೂಟಿ ಹೊಡೆದಿದ್ದಾರೆ- ಎಸ್‍ಆರ್ ಹಿರೇಮಠ ಕಿಡಿ

    ಹಾವೇರಿ: ರಾಜ್ಯದಲ್ಲಿ ಮೂರು ಪಕ್ಷಗಳು ಲೂಟಿಕೋರರ ಪಕ್ಷಗಳಾಗಿವೆ. ಕಳೆದ ಹಲವಾರು ವರ್ಷಗಳಿಂದ `ಜೆಸಿಬಿ’ ಎಂಬ ಭ್ರಷ್ಟ ಪಕ್ಷಗಳು ರಾಜ್ಯವನ್ನು ಲೂಟಿ ಹೊಡೆದಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಎಸ್‍ಆರ್ ಹಿರೇಮಠ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದರು. ರೆಡ್ಡಿಯಂತಹ ಕಳ್ಳರ ತಾಳಕ್ಕೆ ಕುಣಿದು ಜೈಲು ಸೇರಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ರಾಜ್ಯಕ್ಕೆ ದೊಡ್ಡ ಕಳಂಕವಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ ಮೈತುಂಬಾ ಭ್ರಷ್ಟಾಚಾರ ಮೈಗೂಡಿಸಿಕೊಂಡಿದೆ. ಒಟ್ಟಿನಲ್ಲಿ ಇವರು ಸ್ವತಂತ್ರ ಭಾರತದ ಕನಸನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದರು.

    ಜೆಡಿಎಸ್ ಪಕ್ಷ ರಾಜ್ಯಸಭೆ ಸ್ಥಾನಗಳನ್ನು ಹರಾಜು ಇಟ್ಟು ಮಾರಿಕೊಂಡಿದೆ. ಇವರ ನಾಟಕದಿಂದ ರಾಜ್ಯ ಹಾಳಾಗಿ ಹೋಗಿದೆ. ಪ್ರಧಾನ ಮಂತ್ರಿ ದೇಶದ ಬ್ಯಾಂಕುಗಳು ದಿವಾಳಿಯಾದ್ರೂ ಮೌನ ವಹಿಸಿದ್ದಾರೆ. ಬ್ಯಾಂಕ್ ಕೊಳ್ಳೆ ಹೊಡೆದ್ರೂ ಸುಮ್ಮನಿರುವ ಪ್ರಧಾನಿಗೆ ನಾಚಿಕೆಯಾಗಬೇಕು. ಅಲ್ಲದೇ ಪ್ರಧಾನಿ, ಜೇಟ್ಲಿ, ಅಮಿತ್ ಶಾ ರಿಂದ ದೇಶವಿನಾಶದತ್ತ ಸಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಮಲಿಂಗಾರೆಡ್ಡಿ ಸೋತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

  • ಸತ್ಯಾರ್ಥಿ ಮನೆಯಿಂದ ನೊಬೆಲ್ ಪ್ರಶಸ್ತಿ ಕಳ್ಳತನ

    ನವದೆಹಲಿ: ಸಾಮಾಜಿಕ ಹೋರಾಟಗಾರ, ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ದಕ್ಷಿಣ ದೆಹಲಿಯ ಸತ್ಯಾರ್ಥಿ ಅವರ ಮನೆಯಲ್ಲಿದ್ದ ನೊಬೆಲ್ ಪ್ರಶಸ್ತಿಪಠಣವನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ.

    ಕಳೆದ ರಾತ್ರಿ ಕಳ್ಳನ ನಡೆದಿದ್ದು ಮನೆಯ ಕೆಲಸಗಾರರು ಪ್ರಶಸ್ತಿ ಕಳುವಾಗಿರುವುದನ್ನು ಬಹಿರಂಗಪಡಿಸಿದ್ದಾರೆ. ಸದ್ಯಕ್ಕೆ ಸತ್ಯಾರ್ಥಿ ಅವರು ಮನೆಯಲ್ಲಿಲ್ಲ ಎಂದು ಹೇಳಲಾಗಿದೆ. ನೊಬೆಲ್ ಪ್ರಶಸ್ತಿ ಪುರಸ್ಕೃತರ ಸಮ್ಮೇಳನದಲ್ಲಿ ಭಾಗವಹಿಸಲು ಅವರು ಲ್ಯಾಟಿನ್ ಅಮೆರಿಕಗೆ ಹೋಗಿದ್ದಾರೆ.

    ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ಹೋರಾಡಲು ಬಚ್ಪನ್ ಬಚಾವೋ ಆಂದೋಲನ್ ಎಂಬ ಸಂಸ್ಥೆಯನ್ನು ಸ್ಥಾಪಿಸಿದ 63 ವರ್ಷದ ಸತ್ಯಾರ್ಥಿ ಅವರಿಗೆ 2014ರಲ್ಲಿ ನೊಬೆಲ್ ಗೌರವ ಸಿಕ್ಕಿತ್ತು. ಪಾಕಿಸ್ತಾನದ ಮಲಾಲಾ ಯುಸಾಫ್‍ಝಾಯಿ ಜೊತೆ ಸತ್ಯಾರ್ಥಿ ಅವರು ನೊಬೆಲ್ ಶಾಂತಿ ಪುರಸ್ಕಾರವನ್ನು ಹಂಚಿಕೊಂಡಿದ್ದರು.