Tag: ಸಾಮ್ನಾ

  • ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ – ಸಂಜಯ್‌ ರಾವತ್‌ ವಿರುದ್ಧ ದೇಶದ್ರೋಹದ ಕೇಸ್‌

    ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ – ಸಂಜಯ್‌ ರಾವತ್‌ ವಿರುದ್ಧ ದೇಶದ್ರೋಹದ ಕೇಸ್‌

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಆಕ್ಷೇಪಾರ್ಹ ಲೇಖನ ಪ್ರಕಟಿಸಿದ್ದಕ್ಕೆ ಶಿವಸೇನೆ (Shiv Sena) ಉದ್ದವ್‌ ಠಾಕ್ರೆ (Uddhav Thackeray) ಬಣದ ನಾಯಕ ಸಂಜಯ್‌ ರಾವತ್‌ (Sanjay Raut) ವಿರುದ್ಧ ದೇಶದ್ರೋಹದ (Sedition) ಪ್ರಕರಣ ದಾಖಲಾಗಿದೆ.

    ಪಕ್ಷದ ಮುಖವಾಣಿ ಸಾಮ್ನಾದಲ್ಲಿ (Saamana) ಡಿ.11 ರಂದು ಪ್ರಕಟವಾದ ಲೇಖನ ದೂರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿ ಬಿಜೆಪಿ ಯವತ್ಮಾಲ್ ಸಂಚಾಲಕ ನಿತಿನ್ ಭೂತಾಡ್ ದೂರು ನೀಡಿದ್ದರು.

     

    ಉಮರಖೇಡ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ದೂರಿನ ಪ್ರಕಾರ ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ಅದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ಇದನ್ನೂ ಓದಿ: ಹೊಸ ಟ್ರಕ್‌ಗಳಲ್ಲಿ ಚಾಲಕರಿಗೆ ಎಸಿ ಕ್ಯಾಬಿನ್‌ ಕಡ್ಡಾಯ – ಅಧಿಸೂಚನೆ ಪ್ರಕಟ

    ರಾವತ್‌ ಅವರು ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಗಾಗ ಸಾಮ್ನಾದಲ್ಲಿ ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಡಿ.11 ರಂದು ಮಧ್ಯಪ್ರದೇಶ ಫಲಿತಾಂಶಕ್ಕೆ ಸಂಬಂಧಿಸಿದಂತೆ ಲೇಖನ ಪ್ರಕಟವಾಗಿತ್ತು.

    ತಮ್ಮ ‘ರೋಖ್‌ಥೋಕ್’ ಅಂಕಣದಲ್ಲಿ ತವರು ರಾಜ್ಯವಾದ ಮಧ್ಯಪ್ರದೇಶದಲ್ಲಿ ಶಿವರಾಜ್‌ ಸಿಂಗ್‌ ಅವರನ್ನು ಬಿಜೆಪಿ ಹೈಕಮಾಂಡ್‌ ಅವಮಾನಿಸಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಗುರಿ ಕಾಂಗ್ರೆಸ್ ಅನ್ನು ಸೋಲಿಸುವುದು ಅಲ್ಲ ಬದಲಾಗಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಸಂಪೂರ್ಣವಾಗಿ ತೊಡೆದು ಹಾಕುವುದು ಎಂದು ಬರೆದಿದ್ದರು.

     

  • ಯೋಗಿ ಆದಿತ್ಯನಾಥ್ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ- ಶಿವಸೇನೆಯ ಸಾಮ್ನಾದಲ್ಲಿ ಆಕ್ರೋಶ

    ಯೋಗಿ ಆದಿತ್ಯನಾಥ್ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ- ಶಿವಸೇನೆಯ ಸಾಮ್ನಾದಲ್ಲಿ ಆಕ್ರೋಶ

    ಮುಂಬೈ: ಕೊರೊನಾ ವೈರಸ್ ನಡುವೆ ಯಾರೊಬ್ಬರೂ ರಾಜಕೀಯದಲ್ಲಿ ತೊಡಗಿಲ್ಲ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಬೆನ್ನಲ್ಲೇ ಬಿಜೆಪಿ ವಿರುದ್ಧ ಶಿವಸೇನೆಯ ಅಸಮಾಧಾನ ಮುಂದುವರಿದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹಿಟ್ಲರ್ ಗೆ ಹೋಲಿಸಲಾಗಿದೆ.

    ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯ ಪುಟದಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ವಲಸೆ ಕಾರ್ಮಿಕರ ವಿಚಾರದಲ್ಲಿ ಯೋಗಿ ಆದಿತ್ಯನಾಥ್ ಹಿಟ್ಲರ್‍ನಂತೆ ವರ್ತಿಸಿದ್ದಾರೆ. ಯಹೂದಿಗಳ ವಿರುದ್ಧ ನಡೆದ ದೌರ್ಜನ್ಯದ ರೀತಿಯಲ್ಲೇ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ದೇಶದ ವಿವಿಧ ಮೂಲೆಗಳಿಂದ ತಮ್ಮೂರಿಗೆ ತೆರಳಲು ಆಗಮಿಸಿದ ಕಾರ್ಮಿಕರನ್ನು ಅವರ ಊರಿಗೆ ಹೋಗಲು ಅನುಮತಿ ನೀಡಿಲ್ಲ ಎಂದು ಸಂಜಯ್ ತಮ್ಮ ಬರಹದಲ್ಲಿ ಆರೋಪಿಸಿದ್ದಾರೆ.

    ವಲಸೆ ಕಾರ್ಮಿಕರ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಕಾರ್ಮಿಕರು ಹಾಗೂ ಅವರ ಕುಟುಂಬದವರು ಕಾಲ್ನಡಿಗೆ, ಸೈಕಲ್ ಹಾಗೂ ಟ್ರಕ್‍ಗಳಲ್ಲಿ ಬರುವುದನ್ನು ಜಿಲ್ಲಾಧಿಕಾರಿಗಳು ತಡೆಯಬೇಕು. ಅಲ್ಲದೆ ಅವರಿಗೆ ಆಹಾರ, ಶೆಲ್ಟರ್ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಬೇಕು. ನಂತರ ಊರಿಗೆ ತಲುಪಿಸಬೇಕು ಎಂದು ತಿಳಿಸಿದ್ದಾರೆ.

    ಸುಮಾರು 4 ಕೋಟಿ ಜನ ವಲಸೆ ಕಾರ್ಮಿಕರು ದೇಶದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಲಾಕ್‍ಡೌನ್ ನಂತರ ರೈಲು ಹಾಗೂ ಬಸ್‍ಗಳ ಮೂಲಕ 75 ಲಕ್ಷ ಜನ ಅವರ ಮನೆಗಳನ್ನು ತಲುಪಿದ್ದಾರೆ. ವಲಸೆ ಕಾರ್ಮಿಕರಿಗಾಗಿಯೇ ಕೇಂದ್ರ ಸರ್ಕಾರ ಮೇ 1ರಿಂದ 2,600 ಶ್ರಮಿಕ್ ವಿಶೇಷ ರೈಲುಗಳನ್ನು ಆರಂಭಿಸಲಾಗಿದೆ.

    ಇತ್ತೀಚೆಗೆ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿರುದ್ಧ ಬರೆಯಲಾಗಿತ್ತು. ಫಡ್ನವಿಸ್ ಅವರು ಆರಂಭಿಸಿದ ಮಹಾರಾಷ್ಟ್ರ ಬಚಾವೋ ಆಂದೋಲನ ಪ್ರಾರಂಭಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಅಲ್ಲದೆ ಉದ್ಧವ್ ಠಾಕ್ರೆ ಆಡಳಿತಾವಧಿಯಲ್ಲಿ ರಾಜ್ಯ ಸುರಕ್ಷಿತವಾಗಿದೆ ಎಂದು ವಾದಿಸಲಾಗಿತ್ತು.

    ಇತ್ತೀಚೆಗೆ ಮಹಾರಾಷ್ಟ್ರ ಬಿಜೆಪಿ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು. ಕೊರೊನಾ ನಿಯಂತ್ರಿಸುವಲ್ಲಿ ಉದ್ಧವ್ ಠಾಕ್ರೆ ವಿಫಲರಾಗಿದ್ದಾರೆ. ಅಧಿಕಾರಿಗಳ ಮೇಲೆ ಅವಲಂಬಿತರಾಗಿದ್ದಾರೆ ಎಂದು ಆರೋಪಿಸಿತ್ತು.

  • ದೇವರ ನಿರ್ಧಾರದಂತೆ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ – ಪ್ರಧಾನಿಯನ್ನು ಹೊಗಳಿದ ಶಿವಸೇನೆ

    ದೇವರ ನಿರ್ಧಾರದಂತೆ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ – ಪ್ರಧಾನಿಯನ್ನು ಹೊಗಳಿದ ಶಿವಸೇನೆ

    ಮುಂಬೈ: ದೇವರ ನಿರ್ಧಾರದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸತತ ಎರಡನೇ ಬಾರಿಗೆ ಭಾರತದ ನೇತೃತ್ವ ವಹಿಸಿದ್ದಾರೆ ಎಂದು ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಪಕ್ಷವಾದ ಶಿವಸೇನೆ ಮೆಚ್ಚುಗೆ ವ್ಯಕ್ತಪಡಿಸಿದೆ.

    ಇಂದು ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದ ಸಂಪಾದಕೀಯದಲ್ಲಿ, ಸತತ ಎರಡನೇ ಬಾರಿಗೆ ಮೋದಿ ಅವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವುದು ದೇಶದ ಬಲವನ್ನು ಹೆಚ್ಚಿಸಲಿದೆ ಮತ್ತು ಇದು ದೇವರ ನಿರ್ಧಾರ ಎಂದು ಬರೆದುಕೊಂಡಿದೆ.

    ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದರೆ ಭಾರತದ ಪ್ರಜಾಪ್ರಭುತ್ವಕ್ಕೆ ತೊಂದರೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿ ಅವರನ್ನು ಶಿವಸೇನೆ ಕಾಲೆಳೆದಿದೆ. ಪಶ್ವಿಮ ಬಂಗಾಳದ ಚುನಾವಣೆಯ ಸಂದರ್ಭದಲ್ಲಿ ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತರ ಕುಟುಂಬಗಳು ಕಾರ್ಯಕ್ರಮಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಪಾಲ್ಗೊಳ್ಳುತ್ತಿಲ್ಲ ಎಂದು ಹೇಳಿದೆ.

    ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ನಂತರ ಮೋದಿ ಅವರು ವಿರೋಧ ಪಕ್ಷದವರ ವಿರುದ್ಧ ಯಾವುದೇ ಹೇಳಿಕೆಯನ್ನು ನೀಡಿಲ್ಲ. ನಮ್ಮ ಆಡಳಿತ ಸಂಯಮ ಮತ್ತು ಮಾನವೀಯತೆಯೊಂದಿಗೆ ಕೆಲಸ ಮಾಡುತ್ತೇವೆ ಎಂದು ಮೋದಿ ತಮ್ಮ ಕೆಲಸದ ಸಂಸ್ಕೃತಿ ಮೂಲಕ ತೋರಿಸಿದ್ದಾರೆ. ಅದಕ್ಕಾಗಿಯೇ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಮೋದಿ ಅವರ ಸಮಾರಂಭ ನೋಡಲು ಜಗತ್ತು ಉತ್ಸಾಹದಿಂದ ಕಾಯುತ್ತಿದೆ ಎಂದು ಹೊಗಳಿ ಬರೆಯಲಾಗಿದೆ.

    ಜನರ ಭಾವನೆಗಳ ವಿರುದ್ಧ ಕೆಲಸ ಮಾಡಬಾರದು ಎಂದು ನಿರ್ಧಿರಿಸಿರುವ ಮೋದಿ ಅವರು ಈ ಕಾರ್ಯಕ್ರಮಕ್ಕೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಹ್ವಾನ ಮಾಡಿಲ್ಲ ಎಂದು ಶಿವಸೇನೆ ಹೇಳಿದೆ.

  • ಚಂದ್ರಬಾಬು ನಾಯ್ಡು ಮಾಧ್ಯಮಗಳಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ – ಶಿವಸೇನೆ ವ್ಯಂಗ್ಯ

    ಚಂದ್ರಬಾಬು ನಾಯ್ಡು ಮಾಧ್ಯಮಗಳಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ – ಶಿವಸೇನೆ ವ್ಯಂಗ್ಯ

    ಮುಂಬೈ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಹಾಗು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಮಾಧ್ಯಮದವರಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ ಎಂದು ಶಿವಾಸೇನಾ ವ್ಯಂಗ್ಯವಾಡಿದೆ.

    ಮುಖವಾಣಿ ‘ಸಾಮ್ನಾ’ದಲ್ಲಿನ ಸಂಪಾದಕೀಯದಲ್ಲಿ ಚಂದ್ರಬಾಬು ನಾಯ್ಡು ಅವರು ಎಲ್ಲಾ ಪಕ್ಷದವರನ್ನು ಕೇಂದ್ರದಲ್ಲಿ ಒಗ್ಗೂಡಿಸಲು ಹೋಗಿ ಮಾಧ್ಯಮದವರಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ ಎಂದು ಬರೆಯಲಾಗಿದೆ.

    ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಚಂದ್ರಬಾಬು ನಾಯ್ಡು ದೇಶದಲ್ಲಿನ ಉಳಿದ ಎಲ್ಲಾ ಸ್ಥಳೀಯ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದ್ದಂತೆ ಚಂದ್ರಬಾಬು ನಾಯ್ಡು ಅವರು ಬಿಜೆಪಿ ಬಿಟ್ಟು ದೇಶದ ಎಲ್ಲಾ ಪಕ್ಷಗಳ ಮುಖ್ಯಸ್ಥರನ್ನು ಭೇಟಿಮಾಡುತ್ತಿದ್ದಾರೆ. ಈ ಪ್ರಯತ್ನ ಮಾಧ್ಯಮದವರಿಗೆ ಮನರಂಜನೆ ನೀಡುತ್ತಿದೆ ಎಂದು ಶಿವಾಸೇನಾ ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದೆ.

    ಇದೇ ವೇಳೆ ಪ್ರಧಾನಿ ಮೋದಿ ಅವರು ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಿರುವುದನ್ನು ಸಮರ್ಥಿಸಿಕೊಂಡಿರುವ ಶಿವಾಸೇನಾ, ಮೋದಿ ಅವರ ಧಾರ್ಮಿಕ ನಿಲುವುಗಳನ್ನು ನೋಡಿ ವಿರೋಧ ಪಕ್ಷದವರು ಹೆದರುತ್ತಿದ್ದಾರೆ. ಇದು ಪ್ರಧಾನಿ ಅವರ ಹಿಂದುತ್ವ ಮತ್ತು ವಿರೋಧ ಪಕ್ಷದವರ ನಕಲಿ ಜಾತ್ಯಾತೀತತೆಯ ನಡುವೆ ನಡೆಯುತ್ತಿರುವ ಹೋರಾಟ ಎಂದು ವ್ಯಾಖ್ಯಾನಿಸಿದೆ.

    ಶಿವಾಸೇನಾದ ಪ್ರಕಾರ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ವಿರೋಧ ಪಕ್ಷದವರು ಕೇವಲ ಮೋದಿ ಅವರನ್ನು ಅಧಿಕಾರದಿಂದ ದೂರ ಮಾಡುವ ಯೋಚನೆ ಮಾಡಬಹುದು ಅದನ್ನು ಬಿಟ್ಟರೆ ಮೋದಿ ಅವರನ್ನು ಸೋಲಿಸಲು ಆಗುವುದಿಲ್ಲ ಎಂದು ಹೇಳಿದೆ.

  • ಜನಪ್ರಿಯತೆ ಹೆಚ್ಚಿಸಿಕೊಳ್ಳಲು ನೋಟ್ ಬ್ಯಾನ್ ಮಾಡಲಾಗಿತ್ತು: ಶಿವಸೇನೆ

    ಜನಪ್ರಿಯತೆ ಹೆಚ್ಚಿಸಿಕೊಳ್ಳಲು ನೋಟ್ ಬ್ಯಾನ್ ಮಾಡಲಾಗಿತ್ತು: ಶಿವಸೇನೆ

    ಮುಂಬೈ: ನೋಟು ಅಮಾನ್ಯೀಕರಣ ವಿಫಲವಾಗಿದ್ದಕ್ಕೆ ಪ್ರಧಾನಿ ಮೋದಿ ಹೇಗೆ ಪ್ರಾಯಶ್ಚಿತ ಮಾಡಿಕೊಳ್ಳುತ್ತಾರೆ. ಮೋದಿ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳಲು ನೋಟ್‍ಬ್ಯಾನ್ ಮಾಡಿದ್ದರು ಎಂದು ಬಿಜೆಪಿ ವಿರುದ್ಧ ಮಿತ್ರಪಕ್ಷ ಶಿವಸೇನೆ ಕಿಡಿಕಾರಿದೆ.

    ನೋಟ್ ಬ್ಯಾನ್ ಬಳಿಕ ಶೇ.99.3ರಷ್ಟು ಹಳೆಯ ನೋಟುಗಳು ವಾಪಾಸ್ಸಾಗಿವೆ ಎಂದು ಆರ್‍ಬಿಐ ಸ್ಪಷ್ಟಪಡಿಸಿದೆ. ನೋಟು ಅಮಾನ್ಯೀಕರಣದಿಂದ ದೇಶದ ಆರ್ಥಿಕ ಸ್ಥಿತಿ ದಾರಿ ತಪ್ಪಲು ಕಾರಣವಾಗಿದೆ. ನೋಟು ಅಮಾನ್ಯೀಕರಣದ ಪರಿಣಾಮದಿಂದಾಗಿ ಇಂದು ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯಲ್ಲಿ ಕುಸಿಯುತ್ತಿದೆ. ಅಂದು ನೋಟ್ ಬ್ಯಾನ್ ನಿಂದಾಗಿ ಸುಮಾರು 100 ಜನರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ ಎಂದು ಶಿವಸೇನೆ ಹೇಳಿದೆ.

    ಇಂದಿನ ದೇಶದ ಆರ್ಥಿಕ ಪರಿಸ್ಥಿತಿಗೆ ಪ್ರಧಾನಿ ಮೋದಿ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ. ನೋಟು ಅಮಾನ್ಯೀಕರಣದ ವಿಫಲ ಯತ್ನಕ್ಕೆ ಯಾವ ರೀತಿಯಲ್ಲಿ ಪ್ರಾಯಶ್ಚಿತ ಮಾಡಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದೆ. ಕೇವಲ ಪ್ರಚಾರಕ್ಕಾಗಿ ನೋಟ್ ಬ್ಯಾನ್ ಮಾಡಲಾಗಿತ್ತು ಎಂದು ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಟೀಕಿಸಿದೆ.

     

    500 ಮತ್ತು 1 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯೀಕರಣದ ಬಳಿಕ ಮಾತನಾಡಿದ್ದ ಪ್ರಧಾನಿ ಮೋದಿ, ನನಗೆ 50 (ಡಿಸೆಂಬರ್ 30, 2018ವರೆಗೆ) ದಿನಗಳ ಅವಕಾಶ ನೀಡಿ. ಒಂದು ವೇಳೆ ನಾನು ತೆಗೆದುಕೊಂಡಿರುವ ಈ ನಿರ್ಧಾರ ತಪ್ಪಾಗಿದ್ದರೆ, ನೀವು ನೀಡುವ ಶಿಕ್ಷೆಯನ್ನು ಅನುಭವಿಸಲು ನಾನು ಸಿದ್ಧನಾಗಿರುತ್ತೇನೆ ಎಂದು ಹೇಳಿದ್ದರು. ಈ ಹೇಳಿಕೆಯನ್ನಾಧರಿಸಿ ಶಿವಸೇನೆ ನಿಮ್ಮ ತಪ್ಪಿಗೆ ಪ್ರಾಯಶ್ಚಿತವೇನು ಎಂದು ವ್ಯಂಗ್ಯ ಮಾಡಿದೆ.

    ಅರುಣ್ ಜೇಟ್ಲಿ ತಿರುಗೇಟು:
    ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಗೊಳಿಸಿರುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ ಸರ್ಕಾರದ ಈ ಕ್ರಮದಿಂದ ಇಂದು ದೇಶದ ಆರ್ಥಿಕತೆ ಸುಗಮವಾಗಿ ನಡೆಯಲು ಸಹಾಯಕವಾಗಿದೆ. ಅಲ್ಲದೇ ದಾಖಲೆಯ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ. ನೋಟು ಅಮಾನ್ಯೀಕರಣದ ಮೊದಲು 2 ವರ್ಷಗಳಲ್ಲಿ ತೆರಿಗೆ ಸಂಗ್ರಹ ಕೇವಲ ಶೇ.6.6 ರಿಂದ ಶೇ.9 ರಷ್ಟಿತ್ತು. ನೋಟು ನಿಷೇಧದ ಬಳಿಕ ಇದರ ಪ್ರಮಾಣ ಶೇ.15 ರಿಂದ ಶೇ.18ಕ್ಕೆ ಗಣನೀಯವಾಗಿ ಏರಿಕೆಯಾಗಿದೆ. 2014 ರಲ್ಲಿ ಆದಾಯ ತೆರಿಗೆ ಪಾವತಿಸುತ್ತಿದ್ದವರ ಸಂಖ್ಯೆ ಕೇವಲ 3.8 ಕೋಟಿಯಷ್ಟಿತ್ತು, ಸದ್ಯ 2017-18ನೇ ಸಾಲಿನಲ್ಲಿ 6.86 ಕೋಟಿ ಗ್ರಾಹಕರು ಆದಾಯ ತೆರಿಗೆಯನ್ನು ಪಾವತಿ ಮಾಡುತ್ತಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಟೀಕಾಕಾರಿಗೆ ಉತ್ತರಿಸಿದ್ದಾರೆ.

    ನೋಟು ಅಮಾನ್ಯೀಕರಣದಿಂದಾಗಿ 2016ರ ನವೆಂಬರ್ 8 ರವರೆಗು ಚಲಾವಣೆಯಲ್ಲಿದ್ದ 500 ಹಾಗೂ 1,000 ಮುಖಬೆಲೆಯ 15.41 ಲಕ್ಷ ಕೋಟಿ ರೂಪಾಯಿಗಳ ಪೈಕಿ 15.31 ಲಕ್ಷ ಕೋಟಿ ರೂಪಾಯಿಗಳು ಭಾರತೀಯ ರಿಸರ್ವ್ ಬ್ಯಾಂಕಿಗೆ ಜಮೆಯಾಗಿದೆ.

    ಹೊಸ ನೋಟುಗಳ ಮುದ್ರಣದ ವೆಚ್ಚ:
    ನೋಟು ನಿಷೇಧದ ಬಳಿಕ 2016-17 ರ ಅವಧಿಯಲ್ಲಿ ಆರ್‍ಬಿಐ 7,965 ಕೋಟಿ ರೂ. ಗಳನ್ನು ಹೊಸ 500 ಹಾಗೂ 2 ಸಾವಿರ ರೂ. ಮುಖಬೆಲೆಯ ನೋಟು ಮುದ್ರಣಕ್ಕಾಗಿ ವೆಚ್ಚ ಮಾಡಿದೆ. ಈ ಅವಧಿಯಲ್ಲಿ ನೋಟು ಮುದ್ರಣದ ವೆಚ್ಚ ಕಳೆದ ವರ್ಷದಲ್ಲಿ ಮಾಡಿದ್ದ ವೆಚ್ಚಕ್ಕಿಂತಲೂ ಎರಡರಷ್ಟು ಹೆಚ್ಚಾಗಿದೆ. ಇನ್ನು 2017-18 (ಜುಲೈ 2017 ರಿಂದ ಜೂನ್ 2018) ಅವಧಿಯಲ್ಲಿ 4,912 ಕೋಟಿ ರೂ. ಗಳನ್ನು ನೋಟು ಮುದ್ರಣಕ್ಕಾಗಿ ಆರ್‍ಬಿಐ ವೆಚ್ಚಮಾಡಿದೆ.

    ನೋಟು ನಿಷೇಧ ವೇಳೆ ಈ ಕ್ರಮ ಕಪ್ಪು ಹಣದ ಪತ್ತೆ, ಭ್ರಷ್ಟಚಾರ ನಿಯಂತ್ರಣ ಮತ್ತು ಖೋಟಾ ನೋಟು ಪರಿಶೀಲನೆಗೆ ಸಹಾಯವಾಗುತ್ತದೆ ಎಂಬ ವಾದ ಕೇಳಿ ಬಂದಿತ್ತು. ಆದರೆ ಈ ವೇಳೆ 500 ರೂ. ಹಾಗೂ 1 ಸಾವಿರ ರೂ ಮುಖಬೆಲೆ ನಕಲಿ ನೋಟುಗಳ ಪತ್ತೆ ಪ್ರಮಾಣ ಕ್ರಮವಾಗಿ 59.7% ಮತ್ತು 59.6% ಕಡಿಮೆ ಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ 100 ರೂ. ಹಾಗೂ 50 ರೂ ಮುಖಬೆಲೆಯ ನಕಲಿ ನೋಟುಗಳ ಪತ್ತೆ ಪ್ರಮಾಣ ಕ್ರಮವಾಗಿ 35%, 154.3% ರಷ್ಟು ಪತ್ತೆಯಾಗಿದೆ. ನೋಟು ನಿಷೇಧ ಕ್ರಮದಿಂದಾಗಿ 2017-18 ಆರ್ಥಿಕ ವರ್ಷದ ಮೇಲೆ ಪ್ರಭಾವ ಬೀರಿತ್ತು ಎಂದು ಆರ್ ಬಿಐ ಹೇಳಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೋಷನ್ ಬೇಗ್ ಎದೆಯ ಮೇಲೆ `ಜೈ ಮಹಾರಾಷ್ಟ್ರ’ ಅಂತಾ ಬರೀತಿವಿ: ಶಿವಸೇನೆ

    ರೋಷನ್ ಬೇಗ್ ಎದೆಯ ಮೇಲೆ `ಜೈ ಮಹಾರಾಷ್ಟ್ರ’ ಅಂತಾ ಬರೀತಿವಿ: ಶಿವಸೇನೆ

    ಬೆಳಗಾವಿ: ಸಚಿವ ರೋಷನ್ ಬೇಗ್ ಎದೆ ಮೇಲೆ ಕುಳಿತು `ಜೈ ಮಹಾರಾಷ್ಟ್ರ’ ಎಂದು ಬರೆಯುತ್ತೇವೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಬರೆದು ಮತ್ತೆ ತಮ್ಮ ಪುಂಡಾಟಿಕೆಯನ್ನು ಮೆರೆದಿದೆ.

    ರೋಷನ್ ಬೇಗ್ ಡಿಎನ್‍ಎ ಪರೀಕ್ಷೆ ಅವಶ್ಯಕತೆ ಇದೆ. ಬೇಗ್ ಮೈಯಲ್ಲಿ ದೇಶಿಯ ರಕ್ತ ಹರಿಯುತ್ತಿಲ್ಲ ಇದು ದೇಶಕ್ಕೆ ಅಪಾಯಕಾರಿಯಾಗಿದೆ. ತಕ್ಷಣ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವಿಸ್ ಬೆಳಗಾವಿಗೆ ತೆರಳಿ ಅಲ್ಲಿನ ಜನರ ಸಮಸ್ಯೆ ಆಲಿಸಬೇಕು. ಗಡಿ ಭಾಗದ ಮರಾಠಿಗರ ಮೇಲೆ ನಿರಂತರ ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಿದೆ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.

    ಇತ್ತ ಬೆಳಗಾವಿಯಲ್ಲಿ ಎಂಇಎಸ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದ್ದು, ಯಾವುದೇ ಕಾರಣಕ್ಕೂ ಘೋಷಣೆಗಳನ್ನು ಕೂಗುವ ಹಾಗಿಲ್ಲ. ಶಾಂತಿ ಮತ್ತು ಸುವ್ಯವಸ್ಥಿತ ರೀತಿಯಲ್ಲಿ ಪ್ರತಿಭಟನೆ ನಡೆಸಲು ಬೆಳಗಾವಿ ಕ್ರೈಂ ಡಿಸಿಪಿ ಅಮರನಾಥ್ ರೆಡ್ಡಿ ಎಂಇಎಸ್‍ಗೆ ಸೂಚಿಸಿದ್ದಾರೆ.

    ಇದನ್ನೂ ಓದಿ: ಕರ್ನಾಟಕ ಸರ್ಕಾರವನ್ನು ತಲೆ ಕೆಳಗೆ ಕಾಲು ಮೇಲೆ ಮಾಡ್ತೀವಿ: ಕೊಲ್ಲಾಪುರದಲ್ಲಿ ಶಿವಸೇನೆಯಿಂದ ಧಮ್ಕಿ

    ಪ್ರತಿಭಟನೆಯಲ್ಲಿ ಭಿತ್ತಿ ಪತ್ರಗಳನ್ನು ಪ್ರದರ್ಶಿಸುವಂತಿಲ್ಲ. ಶಾಂತ ರೀತಿಯಲ್ಲಿ ಮನವಿ ಪತ್ರ ಸಲ್ಲಿಸಲು ಎಂಇಎಸ್‍ಗೆ ಅವಕಾಶ ನೀಡಲಾಗಿದೆ. ನಗರದ ಸಂಬಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ನಡೆಯಲಿದೆ. ಮುಂಜಾಗೃತ ಕ್ರಮವಾಗಿ ಮಹಾರಾಷ್ಟ್ರ ಗಡಿಯವರೆಗೂ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.

    ಬೇಗ್ ವಿರುದ್ಧ ಆಕ್ರೋಶ ಯಾಕೆ?
    ಕೆಲವು ದಿನಗಳ ಹಿಂದೆ ಸಚಿವ ರೋಷನ್ ಬೇಗ್, ಎಂಇಎಸ್ ಸಂಘಟನೆಯ ಜಿಲ್ಲಾಪಂಚಾಯತ್ ಸದಸ್ಯರು ನಾಡವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ್ರೆ ಅವರ ಸದಸ್ಯತ್ವವನ್ನು ರದ್ದು ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಈ ಎಚ್ಚರಿಕೆಗೆ ಶಿವಸೇನೆ ಮತ್ತು ಎಂಇಎಸ್ ರೋಷನ್ ಬೇಗ್ ವಿರುದ್ಧ ತಿರುಗಿ ಬಿದ್ದಿವೆ.

    https://www.youtube.com/watch?v=fCXaf8bO3Os