Tag: ಸಾಯಿ ಪಲ್ಲವಿ

  • ಯಶ್ ನಟನೆಯ ರಾಮಾಯಣ-2 ಚಿತ್ರಕ್ಕೆ VFX ಗಾಗಿ ಗಾಡ್ಜಿಲ್ಲ ತಂತ್ರಜ್ಞರು ಎಂಟ್ರಿ

    ಯಶ್ ನಟನೆಯ ರಾಮಾಯಣ-2 ಚಿತ್ರಕ್ಕೆ VFX ಗಾಗಿ ಗಾಡ್ಜಿಲ್ಲ ತಂತ್ರಜ್ಞರು ಎಂಟ್ರಿ

    ಣಬೀರ್ ಕಪೂರ್, ಯಶ್ (Yash) ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ, ನಿತೇಶ್ ತಿವಾರಿ ಅವರ ನಿರ್ದೇಶನದ ರಾಮಾಯಣ 2 (Ramayana 2) ಚಿತ್ರವು ಪ್ರೀ-ಪ್ರೊಡಕ್ಷನ್ ನಿರ್ಮಾಣ ಹಂತದಲ್ಲಿದೆ. ರಾಮಾಯಣ-2 ಸಿನಿಮಾದ ವಿಎಫ್‌ಎಕ್ಸ್ ಕುರಿತು ಹೊಸ ಸುದ್ದಿಯೊಂದು ಸಖತ್ ಸುದ್ದಿ ಮಾಡ್ತಿದೆ. ರಾಮಾಯಣ ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್ ಆದ ಬಳಿಕ ಸಿನಿಮಾ ಮೇಲೆ ಮತ್ತಷ್ಟು ಕ್ಯೂರಿಯಾಸಿಟಿ ಬಿಲ್ಡ್ ಆಗಿದೆ. ಇದೀಗ ಈ ಸಿನಿಮಾದ ಪಾರ್ಟ್-2 ಬಗ್ಗೆ ಬಿಗ್ ಅಪ್ ಡೇಟ್ ಸಿಕ್ಕಿದೆ.

    ರಾಮಾಯಣ-2 ಸಿನಿಮಾದ ವಿಎಫ್‌ಎಕ್ಸ್‌ (VFX) ಸುಪ್ರವೈಸ್ ಮಾಡಲಿದೆ ಹಾಲಿವುಡ್ ಟೀಂ. ಗಾಡ್ಜಿಲ್ಲಾ ಎಕ್ಸ್ ಕಾಂಗ್ ಹಾಗೂ ವೆನಮ್ ಸಿನಿಮಾದಲ್ಲಿ ವಿಡಿಯೋ ಗ್ರಾಫಿಕ್ಸ್ ನಲ್ಲಿ ಕೆಲಸ ಮಾಡಿದ ತಂಡ ರಾಮಾಯಣ-2 ಚಿತ್ರದ VFX ತಂಡದ ಮೇಲ್ವಿಚಾರಣೆಯನ್ನ ವಹಿಸಿಕೊಂಡಿದೆ. ಈ ಬೆಳವಣಿಗೆ ರಾಮಾಯಣ ತಂಡಕ್ಕೆ ಮತ್ತಷ್ಟು ಬಲ ನೀಡಿದೆ. ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಆಗಾಗ ಚಿತ್ರದ ಬಜೆಟ್ ಹಾಗೂ ತಂಡದ ಬಗ್ಗೆ ಹೊಸ ಹೊಸ ಅಪ್ಡೇಟ್ ಕೊಡುತ್ತಿರುವುದು ಫ್ಯಾನ್ಸ್ ಕೌತುಕತೆ ಇಮ್ಮಡಿಗೊಳ್ಳೋಕೆ ಕಾರಣವಾಗ್ತಿದೆ. ಇದನ್ನೂ ಓದಿ: ಮದ್ವೆಯಲ್ಲಿ ಅನುಶ್ರೀ ಉಟ್ಟ ಸೀರೆಯ ಬೆಲೆ 2.5 ಲಕ್ಷ ಅಲ್ಲ ಕೇವಲ 2,700 ರೂ.

    ರಾಮಾಯಣ ಪಾರ್ಟ್-2 ಸಿನಿಮಾದ ವಿಎಫ್ ಎಕ್ಸ್ ಮೇಲ್ವಿಚಾರಣೆಯನ್ನ ಹಾಲಿವುಡ್ ತಂತ್ರಜ್ಞ ಕ್ಸೇವಿಯರ್ ಬರ್ನಾಸ್ಕೋನಿ ನಿರ್ವಹಿಸಲಿದ್ದಾರೆ. ಫಸ್ಟ್ ಲುಕ್ ನಿಂದಲೇ ಅಟ್ರ್ಯಾಕ್ಟ್ ಮಾಡಿರುವ ರಾಮಾಯಣ ಸಿನಿಮಾದ ಪಾರ್ಟ್-1 2026ರ ದೀಪಾವಳಿಗೆ ವಿಶ್ವದಾದ್ಯಂತ ತೆರೆಗೆ ಬರಲಿದೆ. ಇನ್ನು ಪಾರ್ಟ್-2 ಸಿನಿಮಾ 2027ರ ದೀಪಾವಳಿ ಹಬ್ಬದ ವಿಶೇಷವಾಗಿ ರಿಲೀಸ್ ಆಗಲಿದೆ. ಈಗ ಸಿಕ್ಕಿರುವ ಹೊಸ ಅಪ್ಡೇಟ್ ಕೇಳಿ ರಾಕಿಭಾಯ್ ಫ್ಯಾನ್ಸ್ ಸಂಭ್ರಮ ಪಡುತ್ತಿದ್ದಾರೆ.

     

  • ರಾಮಾಯಣ ಫಸ್ಟ್ ಟೈಟಲ್ ಟೀಸರ್ ರಿಲೀಸ್: ರಾಮ-ರಾವಣನ ಆರ್ಭಟ ಶುರು

    ರಾಮಾಯಣ ಫಸ್ಟ್ ಟೈಟಲ್ ಟೀಸರ್ ರಿಲೀಸ್: ರಾಮ-ರಾವಣನ ಆರ್ಭಟ ಶುರು

    ಶ್ (Yash) ನಟಿಸಿ ನಿರ್ಮಿಸುತ್ತಿರುವ ಮಹಾತ್ವಾಕಾಂಕ್ಷೆಯ ಪ್ರಾಜೆಕ್ಟ್ ರಾಮಾಯಣ (Ramayana) ಚಿತ್ರದ ಅಫಿಷಿಯಲ್ ಫಸ್ಟ್‌ ಟೈಟಲ್‌ ಟೀಸರ್‌ ರಿಲೀಸ್‌ ಆಗಿದೆ. ರಾಮಾಯಣ ಫಸ್ಟ್‌ ಟೈಟಲ್‌ ಟೀಸರ್‌ ಕೊನೆಗೂ ರಿಲೀಸ್‌ ಆಗಿದೆ. ಟೀಸರ್‌ನಲ್ಲಿ ರಾಮ-ರಾವಣ ಆರ್ಭಟ ಶುರುವಾಗಿದೆ.

    ರಾಮಾಯಣ ಫಸ್ಟ್‌ ಟೈಟಲ್‌ ಟೀಸರ್‌ ಅನ್ನು ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹತ್ತು ವರ್ಷಗಳ ಆಕಾಂಕ್ಷೆ. ಸಾರ್ವಕಾಲಿಕ ಶ್ರೇಷ್ಠ ಮಹಾಕಾವ್ಯವನ್ನು ಜಗತ್ತಿಗೆ ತರುವ ನಿರಂತರ ದೃಢನಿಶ್ಚಯ. ರಾಮಾಯಣವನ್ನು ಅತ್ಯಂತ ಗೌರವದಿಂದ ಪ್ರಸ್ತುತಪಡಿಸಲು ವಿಶ್ವದ ಕೆಲವು ಅತ್ಯುತ್ತಮ ವ್ಯಕ್ತಿಗಳು ಒಟ್ಟಾಗಿ ಶ್ರಮಿಸಿದ್ದಾರೆ. ಅದರ ಫಲಿತಾಂಶ ಇದು ಎಂದು ಯಶ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: 5 ದಿನಕ್ಕೆ 10 ಕೋಟಿ – ಇದು ಅಕ್ಷಯ್‌ ಕುಮಾರ್‌ ಕಾಲ್‌ ಶೀಟ್!

    ಆರಂಭಕ್ಕೆ ಸ್ವಾಗತ. ರಾಮ v/s ರಾವಣನ ಅಮರ ಕಥೆಯನ್ನು ಆಚರಿಸೋಣ. ನಮ್ಮ ಸತ್ಯ. ನಮ್ಮ ಇತಿಹಾಸ ಎಂದು ಯಶ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

    ಟಾಕ್ಸಿಕ್ ಹಾಗೂ ರಾಮಾಯಣ, ಎರಡೂ ಚಿತ್ರಗಳ ನಿರ್ಮಾಣ ಹಾಗೂ ನಟನೆಯಲ್ಲಿ ಯಶ್ ಬ್ಯುಸಿ ಇದ್ದಾರೆ. ಹೀಗಾಗಿ ಟೈಟ್ ಶೆಡ್ಯೂಲ್ ಶೂಟಿಂಗ್ ಮುಗಿಸಿ ಇದೀಗ ಅಲ್ಪ ಸಮಯದಲ್ಲಿ ಪ್ರವಾಸಕ್ಕೆಂದು ಯಶ್‌ ಹೋಗಿದ್ದಾರೆ. ಇದನ್ನೂ ಓದಿ: ರಾಮಾಯಣ ಫಸ್ಟ್ ಗ್ಲಿಮ್ಸ್ ನೋಡಲು ತಯಾರಾಗಿ ಎಂದ ಯಶ್

    ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್‌ ಕಪೂರ್‌, ಸೀತೆ ಪಾತ್ರದಲ್ಲಿ ಸಾಯಿಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಕೆಜಿಎಫ್‌ ಸ್ಟಾರ್‌ ಯಶ್‌ ಕಾಣಿಸಿಕೊಂಡಿದ್ದಾರೆ.

  • ಯಶ್‌ ನಟನೆಯ ರಾಮಾಯಣ ಚಿತ್ರದ ಫಸ್ಟ್‌ ಗ್ಲಿಂಪ್ಸ್ WAVES ಶೃಂಗಸಭೆಯಲ್ಲಿ ರಿಲೀಸ್‌

    ಯಶ್‌ ನಟನೆಯ ರಾಮಾಯಣ ಚಿತ್ರದ ಫಸ್ಟ್‌ ಗ್ಲಿಂಪ್ಸ್ WAVES ಶೃಂಗಸಭೆಯಲ್ಲಿ ರಿಲೀಸ್‌

    – ರಾವಣನ ಅವತಾರದಲ್ಲಿ ರಾಕಿಂಗ್‌ ಸ್ಟಾರ್‌ನ ಲುಕ್‌

    ‘ರಾಕಿಂಗ್ ಸ್ಟಾರ್’ ಯಶ್ ಅಭಿಮಾನಿಗಳು (Yash Fans) ಕಳೆದ 3 ವರ್ಷಗಳಿಂದ ಕಾಯುತ್ತಿದ್ದು, ಮುಂದಿನ ವರ್ಷ ʻಟಾಕ್ಸಿಕ್ʼ ಮತ್ತು ʻರಾಮಾಯಣʼ ಸಿನಿಮಾಗಳ ಮೂಲಕ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ʻಟಾಕ್ಸಿಕ್ʼ 2026ರ ಮಾರ್ಚ್ 19ಕ್ಕೆ ಬಿಡುಗಡೆಯಾಗಲಿದ್ದು, ʻರಾಮಾಯಣʼ ಪಾರ್ಟ್‌-1 ದೀಪಾವಳಿಯ ಹೊತ್ತಿಗೆ ತೆರೆಯ ಮೇಲೆ ಬರಲಿದೆ. ಯಶ್‌ ನಟನೆಯ ಈ ಎರಡೂ ದಿನಿಮಾಗಳು ಭರ್ಜರಿ ಹಿಟ್‌ ಆಗಲಿದೆ, ಜೊತೆಗೆ ಯಶ್ ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಲಿವೆ ಎಂದು ನಿರೀಕ್ಷಿಸಲಾಗಿದೆ.

    ಈ ನಡುವೆ ಚಿತ್ರತಂಡದಿಂದ ರಾಮಾಯಣ ಪಾರ್ಟ್‌-1 (Ramayana Part-1) ಚಿತ್ರದ ಫಸ್ಟ್‌ ಗ್ಲಿಂಪ್ಸ್‌ ಮುಂದಿನ ಮೇ 1 ರಿಂದ 4ರ ವರೆಗೆ ನಡೆಯಲಿರುವ ವಿಶ್ವ ಆಡಿಯೋ ವಿಷುಯಲ್ & ಎಂಟರ್ಟೈನ್ಮೆಂಟ್ ಶೃಂಗಸಭೆ (ಅಕಾ WAVES ಶೃಂಗಸಭೆ)ಯಲ್ಲಿ ರಿಲೀಸ್‌ ಆಗಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ತಮನ್ನಾಗೆ ಬಿಗ್ ಚಾನ್ಸ್- ಬಾಲಿವುಡ್‌ನ ಹೊಸ ಚಿತ್ರಕ್ಕೆ ಮಿಲ್ಕಿ ಬ್ಯೂಟಿ ನಾಯಕಿ

    ಬಾಲಿವುಡ್‌ ಸ್ಟಾರ್ ರಣಬೀರ್ ಕಪೂರ್‌ ರಾಮನ ಪಾತ್ರದಲ್ಲಿ ನಟಿಸಿದ್ದು, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ, ಸ್ಯಾಂಡಲ್‌ವುಡ್‌ನ ರಾಕಿಂಗ್‌ಸ್ಟಾರ್‌ ಯಶ್‌ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಲಾರಾ ದತ್ತ, ಸನ್ನಿ ಡಿಯೋಲ್ ಮತ್ತು ಇಂದಿರಾ ಕೃಷ್ಣ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಾಗಿ ರಣಬೀರ್‌ ಕಪೂರ್‌ ಅಭಿಮಾನಿಗಳೂ ಸಹ ಕಾತುರದಿಂದ ಕಾಯ್ತಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಯಕ್ಷಗಾನ ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು

    ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾವು 2026ರ ಮಾರ್ಚ್ 19ರಂದು ತೆರೆಗೆ ಬರಲಿದೆ. ಇದು ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾವಾಗಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ತಯಾರಾಗುತ್ತಿದೆ. ಕೆವಿಎನ್ ಸಂಸ್ಥೆ ಮತ್ತು ಯಶ್ ಜಂಟಿಯಾಗಿ ಈ ಸಿನಿಮಾಕ್ಕೆ ಹಣ ಹಾಕಿದ್ದಾರೆ. ಇದರ ಜೊತೆಗೆ ನಿತೇಶ್ ತಿವಾರಿ ಅವರ ‘ರಾಮಾಯಣ: ಪಾರ್ಟ್ 1’ ಸಿನಿಮಾದಲ್ಲೂ ಯಶ್ ನಟಿಸಲಿದ್ದು, ಅದರಲ್ಲಿನ ರಾವಣನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರ ಕೂಡ 2026ರ ದೀಪಾವಳಿ ಹಬ್ಬದ ಸಮಯದಲ್ಲಿ ತೆರೆಗೆ ಬರಲಿದೆ. ಇದನ್ನೂ ಓದಿ: ಉಗ್ರರ ದಾಳಿ ಸ್ಥಳದಲ್ಲೇ ಮಾರ್ಟಿನ್ ಸಿನಿಮಾ ಶೂಟಿಂಗ್ ನಡೆದಿತ್ತು, ಆಗ ಸೆಕ್ಯೂರಿಟಿ ಚೆನ್ನಾಗಿತ್ತು: ಧ್ರುವ ಸರ್ಜಾ

  • ‘ಅಮರನ್’ ಸಕ್ಸಸ್ ಬಳಿಕ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡ ಸಾಯಿ ಪಲ್ಲವಿ

    ‘ಅಮರನ್’ ಸಕ್ಸಸ್ ಬಳಿಕ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡ ಸಾಯಿ ಪಲ್ಲವಿ

    ‘ಫಿದಾ’ ಬೆಡಗಿ ಸಾಯಿ ಪಲ್ಲವಿ (Sai Pallavi) ಸೌತ್ ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಶಿವಕಾರ್ತಿಕೇಯನ್ ಜೊತೆಗಿನ ‘ಅಮರನ್’ (Amaran) ಸಿನಿಮಾ ಸಕ್ಸಸ್ ಕಂಡ್ಮೇಲೆ ತೆಲುಗಿನಲ್ಲಿ ಮಹಿಳಾ ಪ್ರಧಾನ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್ ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ:ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಅರೆಸ್ಟ್

    ಆಮೀರ್ ಖಾನ್ ಪುತ್ರನ ಜೊತೆ ಮತ್ತು ‘ರಾಮಾಯಣ’ ಸಿನಿಮಾ ಕೆಲಸಗಳ ನಡುವೆ ವಿಭಿನ್ನ ಎನಿಸೋ ಮಹಿಳಾ ಪ್ರಧಾನ ಚಿತ್ರ ಒಪ್ಪಿಕೊಂಡಿದ್ದಾರೆ. ಈಗಾಗಲೇ ಹಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಕಾರ್ತಿಕ್ ತೀಡಾ ಜೊತೆ ನಟಿ ಕೈಜೋಡಿಸಿದ್ದಾರೆ.

    ಈ ಹಿಂದೆ ‘ಗಾರ್ಗಿ’ ಚಿತ್ರದಲ್ಲಿ ಸಾಯಿ ಪಲ್ಲವಿ ಮಹಿಳಾ ಪ್ರಧಾನ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದರು. ಈಗ ಹೊಸ ಸಿನಿಮಾದಲ್ಲೂ ಡಿಫರೆಂಟ್ ಆಗಿರುವ ಪಾತ್ರದಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಅಧಿಕೃತ ಅನೌನ್ಸ್ಮೆಂಟ್‌ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

    ಇನ್ನೂ ನಾಗಚೈತನ್ಯ ಜೊತೆಗಿನ 2ನೇ ಸಿನಿಮಾ ತಾಂಡೇಲ್ ಇದೇ ಫೆ.7ರಂದು ರಿಲೀಸ್ ಆಗಲಿದೆ. ಈಗಾಗಲೇ ಸಿನಿಮಾದ ಸಾಂಗ್ಸ್ ಪ್ರೇಕ್ಷಕರ ಮನ ಗೆದ್ದಿದೆ.

  • 3 ತಿಂಗಳ ಬಳಿಕ ತಂಗಿ ಮದುವೆಯ ಫೋಟೋ ಹಂಚಿಕೊಂಡ ಸಾಯಿ ಪಲ್ಲವಿ

    3 ತಿಂಗಳ ಬಳಿಕ ತಂಗಿ ಮದುವೆಯ ಫೋಟೋ ಹಂಚಿಕೊಂಡ ಸಾಯಿ ಪಲ್ಲವಿ

    ಸೌತ್ ಬ್ಯೂಟಿ ಸಾಯಿ ಪಲ್ಲವಿ (Sai Pallavi) ಅವರ ತಂಗಿ ಮದುವೆಯಾಗಿ 3 ತಿಂಗಳ ಬಳಿಕ ಮದುವೆ ಫೋಟೋವನ್ನು ಹಂಚಿಕೊಂಡಿದ್ದಾರೆ. ತಂಗಿ ಮದುವೆ ಬಗ್ಗೆ ಎಮೋಷನಲ್ ಪೋಸ್ಟ್ ಶೇರ್ ಮಾಡಿದ್ದಾರೆ. ಸಹೋದರಿ ಮದುವೆ ಫೋಟೋಸ್ ಶೇರ್ ಮಾಡಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ:ತ್ರಿವಿಕ್ರಮ್‌ ವಿಚಾರಕ್ಕೆ ಕಾಲೆಳೆದ ಕಿಚ್ಚ- ನಾಚಿ ನೀರಾದ ಭವ್ಯಾ

     

    View this post on Instagram

     

    A post shared by Sai Pallavi (@saipallavi.senthamarai)

    ಎಲ್ಲ ವಿಷಯದಲ್ಲಿಯೂ ನಾನು ತಂಗಿ ಪೂಜಾಗೆ ಸಲಹೆ ನೀಡುತ್ತಿದ್ದೆ. ಆದರೆ ಮದುವೆ ವಿಷಯದಲ್ಲಿ ನಾನು ಯಾವುದೇ ಸಲಹೆ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ನಾನು ಹೆದರಿದ್ದೆ, ಆದರೆ ಆ ಹೆದರಿಕೆ ಈಗ ಹೊರಟು ಹೋಗಿದೆ ಎಂದಿದ್ದಾರೆ. ತಂಗಿಯ ಮದುವೆ ಆಗಿ ಮೂರು ತಿಂಗಳಾಗಿದ್ದು, ಒಂದು ಬಾರಿಯೂ ಸಹ ನನ್ನ ತಂಗಿ ತಪ್ಪು ಮಾಡಿದಳು, ಅಥವಾ ನಾನು ಆಕೆಗೆ ಮಾರ್ಗದರ್ಶನ ಮಾಡಲಿಲ್ಲ ಎಂಬ ಅಳುಕೇ ನನಗೆ ಮೂಡಿಲ್ಲ ಎಂದಿದ್ದಾರೆ ಸಾಯಿ ಪಲ್ಲವಿ.

     

    View this post on Instagram

     

    A post shared by Sai Pallavi (@saipallavi.senthamarai)

    ಅಂದಹಾಗೆ, ಬಹುಕಾಲದ ಗೆಳೆಯ ವಿನೀತ್ ಶಿವಕುಮಾರ್ ಜೊತೆ ಸೆಪ್ಟೆಂಬರ್‌ನಲ್ಲಿ ಪೂಜಾ ಮದುವೆಯಾದರು. ಅವರು ಒಂದೆರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಸಾಯಿ ಪಲ್ಲವಿಯಂತೆ ಪೂಜಾಗೆ ಸಕ್ಸಸ್ ಸಿಗಲಿಲ್ಲ.

    ಇನ್ನೂ ರಣ್‌ಬೀರ್ ಕಪೂರ್ (Ranbir Kapoor) ಜೊತೆ ‘ರಾಮಾಯಣ’, ನಾಗ ಚೈತನ್ಯ ಜೊತೆ ‘ತಾಂಡೇಲ್’, ಆಮೀರ್ ಖಾನ್ ಪುತ್ರನ ಜೊತೆ ಬಾಲಿವುಡ್ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ಸಾಯಿ ಪಲ್ಲವಿ ಕೈಯಲ್ಲಿವೆ.

  • ವಾರಣಾಸಿ ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ಸಾಯಿ ಪಲ್ಲವಿ

    ವಾರಣಾಸಿ ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ಸಾಯಿ ಪಲ್ಲವಿ

    ಸೌತ್ ಬ್ಯೂಟಿ ಸಾಯಿ ಪಲ್ಲವಿ (Sai Pallavi) ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ವಾರಣಾಸಿಗೆ ಭೇಟಿ ನೀಡಿದ್ದಾರೆ. ಕಾಶಿ ವಿಶ್ವನಾಥ ದೇವಸ್ಥಾನಕ್ಕೆ (Kashi Vishwanath Temple) ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಪತ್ನಿ ಅವಿವ ಜೊತೆ ಅಭಿಷೇಕ್ ಅಂಬರೀಶ್ ಮಸ್ತ್ ಫೋಟೋಶೂಟ್

    ತೆಲುಗು ಮತ್ತು ಬಾಲಿವುಡ್ (Bollywood) ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸಾಯಿ ಪಲ್ಲವಿ ಇಂದು (ಡಿ.23) ವಾರಣಾಸಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ (Kashi Vishwanath Temple) ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದೇವರ ಸನ್ನಿಧಿಯಲ್ಲಿ ಕೆಲ ಕಾಲ ಸಮಯ ಕಳೆದಿದ್ದಾರೆ. ನಟಿ ವಾರಣಾಸಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

    ಅಂದಹಾಗೆ, ನಾಗಚೈತನ್ಯ ಜೊತೆಗಿನ ‘ತಾಂಡೇಲ್’ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ರಿಲೀಸ್ ಆಗಲಿದೆ. ರಣ್‌ಬೀರ್ ಕಪೂರ್‌ಗೆ ಸೀತೆಯಾಗಿ ‘ರಾಮಾಯಣ’ ಸಿನಿಮಾದಲ್ಲಿ ಸಾಯಿ ಪಲ್ಲಿವಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಯಶ್ ಅಬ್ಬರಿಸಲಿದ್ದಾರೆ.

  • ‘ಅಮರನ್‌’ ಚಿತ್ರದ ಅಬ್ಬರ- ಶಿವಕಾರ್ತಿಕೇಯನ್‌, ಸಾಯಿ ಪಲ್ಲವಿ ಸಿನಿಮಾಗೆ ಪ್ರೇಕ್ಷಕ ಜೈಕಾರ

    ‘ಅಮರನ್‌’ ಚಿತ್ರದ ಅಬ್ಬರ- ಶಿವಕಾರ್ತಿಕೇಯನ್‌, ಸಾಯಿ ಪಲ್ಲವಿ ಸಿನಿಮಾಗೆ ಪ್ರೇಕ್ಷಕ ಜೈಕಾರ

    ಮಿಳು ನಟ ಶಿವ ಕಾರ್ತಿಕೇಯನ್ (Sivakarthikeyan) ಹಾಗೂ ನಟಿ ಸಾಯಿ ಪಲ್ಲವಿ (Sai Pallavi) ನಟನೆಯ ‘ಅಮರನ್’ (Amaran) ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸಾಫೀಸ್ ನಲ್ಲೂ ಗಳಿಕೆಯಲ್ಲಿ ಸಖತ್ ಸದ್ದು ಮಾಡ್ತಿದೆ. ಹುತಾತ್ಮರಾದ ಭಾರತೀಯ ಸೇನಾ ಅಧಿಕಾರಿ ಮೇಜರ್ ಮುಕುಂದ್ ವರದರಾಜನ್ ಅವರ ಸ್ಪೂರ್ತಿದಾಯಕ ಕಥೆ ಹೇಳುವ ಬಹುನಿರೀಕ್ಷಿತ ಬಯೋಪಿಕ್‌ಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಅಕ್ಟೋಬರ್ 31ರಂದು ತೆರೆಕಂಡ ‘ಅಮರನ್ ಸಿನಿಮಾ’ ಎಲ್ಲಾ ಕಡೆಗಳಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.

    ಸೋನಿ ಪಿಕ್ಚರ್ಸ್ ಸಹಯೋಗದಲ್ಲಿ ನಟ ಕಮಲ್ ಹಾಸನ್ ಅವರ ರಾಜಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಈ ಚಿತ್ರವನ್ನು ನಿರ್ಮಿಸಿದೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಸಾಯಿ ಪಲ್ಲವಿ ಅದ್ಭುತವಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಮ್ಯೂಸಿಕ್ ಡೈರೆಕ್ಟರ್ ಜಿವಿ ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದಾರೆ.

    ಈ ಚಿತ್ರವು ದಿವಂಗತ ಸೇನಾ ಮೇಜರ್ ಮುಕುಂದ್ ವರದರಾಜನ್ ಅವರ ಜೀವನವನ್ನು ಆಧರಿಸಿದೆ. ಶಿವಕಾರ್ತಿಕೇಯನ್ ಅವರು ಮೇಜರ್ ಮುಕುಂದ್ ಪಾತ್ರದಲ್ಲಿ ಕಾಣಿಸಿಕೊಂಡ್ರೆ. ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಈ ಚಿತ್ರವನ್ನು ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನ ಮಾಡಿದ್ದಾರೆ. ದೀಪಾವಳಿ ಹಬ್ಬದ ದಿನದಂದು ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ‘ಅಮರನ್’ ಎಲ್ಲೆಡೆ ಅಬ್ಬರಿಸುತ್ತಿದ್ದು, ಇದೀಗ ಪ್ರೇಕ್ಷಕರು ಸಿನಿಮಾವನ್ನು ಮೆಚ್ಚಿಕೊಂಡಿದ್ದಕ್ಕೆ ಚಿತ್ರತಂಡದ ಖುಷಿಗೆ ಕಾರಣವಾಗಿದೆ.

  • Thandel: ಸಾಯಿ ಪಲ್ಲವಿ, ನಾಗಚೈತನ್ಯ ರೊಮ್ಯಾಂಟಿಕ್ ಪೋಸ್ಟರ್ ರಿಲೀಸ್

    Thandel: ಸಾಯಿ ಪಲ್ಲವಿ, ನಾಗಚೈತನ್ಯ ರೊಮ್ಯಾಂಟಿಕ್ ಪೋಸ್ಟರ್ ರಿಲೀಸ್

    ‘ಲವ್ ಸ್ಟೋರಿ’ (Love Story) ಸಿನಿಮಾದ ಸಕ್ಸಸ್ ನಂತರ ನಾಗಚೈತನ್ಯ (Naga Chaitanya) ಮತ್ತು ಸಾಯಿ ಪಲ್ಲವಿ ಮತ್ತೆ ಜೊತೆಯಾಗಿದ್ದಾರೆ. ‘ತಾಂಡೆಲ್’ (Thandel) ಚಿತ್ರಕ್ಕಾಗಿ ಕೈಜೋಡಿಸಿದ್ದು, ಇದರಲ್ಲೂ ರೊಮ್ಯಾಂಟಿಕ್ ಕಥೆ ಹೇಳಲು ಹೊರಟಿದ್ದಾರೆ. ಅದಷ್ಟೇ ಅಲ್ಲ, ತಾಂಡೆಲ್ ರಿಲೀಸ್‌ಗೆ ಮುಹೂರ್ತ ಕೂಡ ಫಿಕ್ಸ್ ಆಗಿದೆ. ಇದನ್ನೂ ಓದಿ:ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಕೊಡಿ: ಸಲ್ಮಾನ್‌ ಖಾನ್‌ಗೆ ಮತ್ತೊಂದು ಬೆದರಿಕೆ

    ‘ತಾಂಡೆಲ್’ (Thandel) ಸಿನಿಮಾದಲ್ಲಿನ ಸಾಯಿ ಪಲ್ಲವಿ ಜೊತೆಗಿನ ನಾಗಚೈತನ್ಯ ರೊಮ್ಯಾಂಟಿಕ್ ಪೋಸ್ಟರ್ ಅನ್ನು ಚಿತ್ರತಂಡ ರಿವೀಲ್ ಮಾಡಿದೆ. ಸಾಯಿ ಪಲ್ಲವಿ ಅವರನ್ನು ನಟ ತಬ್ಬಿಕೊಂಡಿರುವ ಫೋಟೋ ಅಭಿಮಾನಿಗಳ ಗಮನ ಸೆಳೆದಿದೆ. ಫೆ.14 ಪ್ರೇಮಿಗಳ ದಿನಾಚರಣೆಗೂ ಮುನ್ನ ಫೆ.7ರಂದು ‘ತಾಂಡೆಲ್’ ಸಿನಿಮಾ ರಿಲೀಸ್ ಆಗುತ್ತಿದೆ.

     

    View this post on Instagram

     

    A post shared by Geetha Arts (@geethaarts)

    ಈ ಹಿಂದಿನ ‘ಲವ್ ಸ್ಟೋರಿ’ ಚಿತ್ರಕ್ಕಿಂತ ವಿಭಿನ್ನ ಕಥೆಯನ್ನೇ ತೋರಿಸಲು ಚಿತ್ರತಂಡ ಸಜ್ಜಾಗಿದೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನೋಡಿ ಅಭಿಮಾನಿಗಳಿಗೆ ಸಿನಿಮಾ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ. ಇನ್ನೂ ಈ ಚಿತ್ರವನ್ನು ಗೀತಾ ಆರ್ಟ್ಸ್ ಮೂಲಕ ಅಲ್ಲು ಅರವಿಂದ್ ನಿರ್ಮಾಣ ಮಾಡಿದ್ದಾರೆ.

  • ‘ಅಮರನ್‌’ ಟ್ರೈಲರ್ ರಿಲೀಸ್- ಮೇಜರ್ ಮುಕುಂದ್ ವರದರಾಜನ್ ಜೀವನಗಾಥೆಯಲ್ಲಿ ಶಿವಕಾರ್ತಿಕೇಯನ್

    ‘ಅಮರನ್‌’ ಟ್ರೈಲರ್ ರಿಲೀಸ್- ಮೇಜರ್ ಮುಕುಂದ್ ವರದರಾಜನ್ ಜೀವನಗಾಥೆಯಲ್ಲಿ ಶಿವಕಾರ್ತಿಕೇಯನ್

    ಕಾಲಿವುಡ್ ನಟ ಶಿವಕಾರ್ತಿಕೇಯನ್ (Sivakarthikeyan) ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ‘ಅಮರನ್’ (Amaran) ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಅಮರನ್, ಭಯೋತ್ಪಾದಕ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮೇಜರ್ ಮುಕುಂದ್ ವರದರಾಜನ್ ಜೀವನ ಚರಿತ್ರೆಯಾಗಿದೆ. ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಎಮೋಷನ್ ಜೊತೆಗೆ ಆ್ಯಕ್ಷನ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೈಲರ್ ಕಟ್ ಮಾಡಲಾಗಿದೆ. ಇದನ್ನೂ ಓದಿ:ಜೈಲು ನಿಯಮ ಉಲ್ಲಂಘನೆ – ದರ್ಶನ್ ಒಳಿತಿಗೆ ಪತ್ನಿ ಕಟ್ಟಿದ್ದ ದಾರ ತೆಗೆಸುವ ಸಾಧ್ಯತೆ

     

    View this post on Instagram

     

    A post shared by Kamal Haasan (@ikamalhaasan)

    ಸೇನಾ ರಜೆಯಲ್ಲಿ ಮನೆಗೆ ಬಂದಿರುವ ಯೋಧ ತನ್ನ ಮಗಳೊಂದಿಗೆ ಇರುವ ಕ್ಷಣ, ಮಗಳಿಗೆ ಒಂದು ಪ್ರೀತಿಯ ಅಪ್ಪುಗೆ ಕೊಟ್ಟು ಮತ್ತೆ ದೇಶ ಸೇವೆಗೆ ಹೋಗುವ ದೃಶ್ಯ, ನಮ್ಮನ್ನು ಬಿಟ್ಟು ನೀನು ದೂರ ಆಗಿದ್ರೂ ಪರವಾಗಿಲ್ಲ, ಸೇಫ್ ಆಗಿರು ಎನ್ನುವ ಪತ್ನಿ ಡೈಲಾಗ್ ನೋಡುಗರಿಗೆ ಕಾಡುತ್ತದೆ. ಶಿವಕಾರ್ತಿಕೇಯನ್ ಮೇಜರ್ ಮುಕುಂದ್ ವರದರಾಜನ್ ಪಾತ್ರದಲ್ಲಿ ಜೀವಿಸಿದ್ದಾರೆ. ಸಾಯಿ ಪಲ್ಲವಿ (Sai Pallavi) ಅವರ ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಪ್ರೀತಿಸಿ ಮದುವೆಯಾಗೋಕೆ ನನಗೆ ಸಮಯವಿಲ್ಲ: ಸುನೈನಾ

    ಚಿತ್ರವನ್ನು ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶಿಸಿದ್ದಾರೆ. ಭುವನ್ ಅರೋರಾ, ರಾಹುಲ್ ಬೋಸ್ ಮುಂತಾದವರು ನಟಿಸಿದ್ದಾರೆ. ಇಂಡಿಯಾಸ್ ಮೋಸ್ಟ್ ಫಿಯರ್‌ಲೆಸ್ ಪುಸ್ತಕದಲ್ಲಿ ಶಿವ್ ಅರೂರ್ ಮತ್ತು ರಾಹುಲ್ ಸಿಂಗ್ ಅವರು ಮೇಜರ್ ವರದರಾಜನ್ ಬಗ್ಗೆ ಸಾಕಷ್ಟು ಬರೆದಿದ್ದಾರೆ. ಅದರಲ್ಲಿನ ಅಂಶಗಳನ್ನು ತೆಗೆದುಕೊಂಡು ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಕಥೆ ಬರೆದು, ನಿರ್ದೇಶಿಸಿದ್ದಾರೆ.

    ಜಿ.ವಿ.ಪ್ರಕಾಶ್ ಕುಮಾರ್ ಅವರ ಸಂಗೀತ ಸಂಯೋಜನೆ, ಸಿ.ಎಚ್.ಸಾಯಿ ಅವರ ಛಾಯಾಗ್ರಹಣ ಮತ್ತು ಆರ್. ಕಲೈವನನ್ ಅವರ ಸಂಕಲನವಿರುವ ಸಿನಿಮಾವನ್ನು ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ ಜಂಟಿಯಾಗಿ ನಿರ್ಮಾಣ ಮಾಡಿದೆ.

  • 2 ವರ್ಷಗಳ ನಂತರ ಬೆಳ್ಳಿಪರದೆಗೆ ಮರಳಿದ ಸಾಯಿ ಪಲ್ಲವಿ

    2 ವರ್ಷಗಳ ನಂತರ ಬೆಳ್ಳಿಪರದೆಗೆ ಮರಳಿದ ಸಾಯಿ ಪಲ್ಲವಿ

    ಟನೆ, ಡ್ಯಾನ್ಸಿಂಗ್‌ ಅಪಾರ ಅಭಿಮಾನಿಗಳ ಮನಗೆದ್ದಿರುವ ಸಾಯಿ ಪಲ್ಲವಿ (Sai Pallavi) ಇದೀಗ ಎರಡು ವರ್ಷಗಳ ನಂತರ ಬೆಳ್ಳಿಪರದೆಗೆ ಮರಳಿದ್ದಾರೆ. ‘ಅಮರನ್’ (Amaran) ಚಿತ್ರದ ಮೂಲಕ ಮತ್ತೆ ನಟಿ ಸದ್ದು ಮಾಡುತ್ತಿದ್ದಾರೆ. ನಟಿಯ ಕ್ಯಾರೆಕ್ಟರ್ ಟೀಸರ್ ರಿವೀಲ್ ಚಿತ್ರತಂಡ ಸರ್ಪ್ರೈಸ್ ನೀಡಿದೆ. ಇದನ್ನೂ ಓದಿ:10 ವರ್ಷ ಕಾಲ ಮ್ಯೂಸಿಕ್‌ ವಾಹಿನಿ ನಡೆದಿದ್ದೇ ಸಂತೋಷ, ಆಶ್ಚರ್ಯ: ಹೆಚ್‌ ಆರ್‌ ರಂಗನಾಥ್‌

    ಶಿವಕಾರ್ತಿಕೇಯನ್ ನಟನೆಯ ‘ಅಮರನ್’ ಚಿತ್ರದಲ್ಲಿ ಸಾಯಿ ಪಲ್ಲವಿ ಹೀರೋಯಿನ್ ಆಗಿ ನಟಿಸಿದ್ದಾರೆ. ವೀರಯೋಧ ಮೇಜರ್ ಮುಕುಂದ ವರದರಾಜನ್ ಬಯೋಪಿಕ್ ಆಗಿದೆ. ಇದರಲ್ಲಿ ವೀರಯೋಧನಾಗಿ ಶಿವಕಾರ್ತಿಕೇಯನ್ ನಟಿಸಿದ್ರೆ, ಅವರ ಪತ್ನಿ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ಜೀವ ತುಂಬಿದ್ದಾರೆ.

     

    View this post on Instagram

     

    A post shared by Sai Pallavi (@saipallavi.senthamarai)

    ಇನ್ನೂ ಚಿತ್ರದಲ್ಲಿ ನಟಿಯ ಕ್ಯಾರೆಕ್ಟರ್ ಟೀಸರ್ 1:22 ನಿಮಿಷವಿದ್ದು, ಸಾಯಿ ಪಲ್ಲವಿ ಗುಂಗುರು ಕೂದಲು ಬಿಟ್ಟು ನಯಾ ಲುಕ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

    ಇನ್ನೂ ‘ಅಮರನ್’ ಚಿತ್ರವನ್ನು ರಾಜಕುಮಾರ ಪೆರಿಯಸ್ವಾಮಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇದೇ ಅಕ್ಟೋಬರ್ 11ಕ್ಕೆ ರಿಲೀಸ್ ಆಗಲಿದೆ.