Tag: ಸಾಯಿ ಪಲ್ಲವಿ

  • ರಾವಣನಾಗಿ ರಾಕಿಭಾಯ್: 15 ದಿನ ಕಾಲ್‍ ಶೀಟ್ ಕೊಟ್ಟ ಯಶ್?

    ರಾವಣನಾಗಿ ರಾಕಿಭಾಯ್: 15 ದಿನ ಕಾಲ್‍ ಶೀಟ್ ಕೊಟ್ಟ ಯಶ್?

    ಬಾಲಿವುಡ್ ನಲ್ಲಿ ರಾಮಾಯಣ (Ramayana) ಸಿನಿಮಾ ಆಗುತ್ತಿರುವ ವಿಚಾರ ಹಲವಾರು ತಿಂಗಳಿಂದ ಹರಿದಾಡುತ್ತಲೇ ಇದೆ. ಅದರಲ್ಲೂ ಈ ಸಿನಿಮಾದಲ್ಲಿ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.

    ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.

    ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್  (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.

     

    ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಅಲ್ಲದೇ ದೇಶ ವಿದೇಶ ಸುತ್ತುತ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ರಾಮಾಯಣ ಸಿನಿಮಾ ಶುರುವಾಗುವ ಹೊತ್ತಿಗೆ ಹೊಸ ಸಿನಿಮಾದ ಬಹುತೇಕ ಕೆಲಸ ಮುಗಿಯುವ ಸಾಧ್ಯತೆ ಇದ್ದು, ಅದಕ್ಕಾಗಿ ಈ ಸಿನಿಮಾವನ್ನು ಯಶ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಗಚೈತನ್ಯನ ಮದುವೆ ಆಗೋದೇ ಜೀವನದ ಟಾರ್ಗೆಟ್- ನಟಿ ರೀತು ಚೌಧರಿ

    ನಾಗಚೈತನ್ಯನ ಮದುವೆ ಆಗೋದೇ ಜೀವನದ ಟಾರ್ಗೆಟ್- ನಟಿ ರೀತು ಚೌಧರಿ

    ಟಾಲಿವುಡ್ ನಟ ನಾಗಚೈತನ್ಯ (Nagachaitanya) ಅವರು ಸಮಂತಾ (Samantha) ಜೊತೆಗಿನ ಡಿವೋರ್ಸ್ ಬಳಿಕ ಹೆಚ್ಚೆಚ್ಚು ಸುದ್ದಿಯಲ್ಲಿದ್ದಾರೆ. ನಾಗಚೈತನ್ಯ ರಿಲೇಶನ್‌ಶಿಪ್ ಸ್ಟೇಟಸ್, 2ನೇ ಮದುವೆ ಬಗ್ಗೆ ಆಗಾಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ ನಾಗ ಚೈತನ್ಯ ಅವರನ್ನು ಮದುವೆ ಆಗೋದೇ ನನ್ನ ಟಾರ್ಗೆಟ್ ಎಂದು ಹೇಳಿಕೆ ನೀಡುವ ಮೂಲಕ ನಟಿ ರೀತು ಚೌಧರಿ (Rithu Chowdary) ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ.

    ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ, ನನಗೆ ನಾಗಚೈತನ್ಯ ಎಂದರೆ ತುಂಬಾ ಇಷ್ಟ. ಅವರನ್ನು ಮದುವೆಯಾಗೋದೇ ನನ್ನ ಜೀವನದ ಟಾರ್ಗೆಟ್ ಆಗಿದೆ. ಡಿವೋರ್ಸ್ ಆಗಿರುವ ವ್ಯಕ್ತಿಯನ್ನು ಮತ್ತೆ ಮದುವೆ ಆಗೋದಕ್ಕೆ ನನಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಸದ್ಯ ರೀತು ಚೌಧರಿ ನೀಡಿರುವ ಹೇಳಿಕೆ ಸಖತ್ ವೈರಲ್ ಆಗಿದೆ. ನಟಿಯ ಮಾತಿಗೆ ನಾಗಚೈತನ್ಯ ಕಡೆಯಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಂದಹಾಗೆ, ರೀತು ಚೌಧರಿ ‘ಗೋರಿಂಟಕು’ ಸೀರಿಯಲ್‌ನಲ್ಲಿ ಗಾಯತ್ರಿ ಎಂಬ ಪಾತ್ರದಲ್ಲಿ ನಟಿಸಿದ್ದಾರೆ.

    2021ರಲ್ಲಿ ಸಮಂತಾಗೆ ನಾಗಚೈತನ್ಯ ಡಿವೋರ್ಸ್ ಕೊಟ್ಟ ಮೇಲೆ ಶೋಭಿತಾ (Shobita) ಜೊತೆ ನಟನ ಹೆಸರು ಸದ್ದು ಮಾಡಿತ್ತು. ಇದಾದ ಬಳಿಕ ಇತ್ತೀಚೆಗೆ ಖ್ಯಾತ ಉದ್ಯಮಿ ಪುತ್ರಿ ಜೊತೆ ಸಮಂತಾ ಮಾಜಿ ಪತಿಯ ಮದುವೆ ಎಂದು ಹೇಳಲಾಗಿತ್ತು. ಈ ಬಗ್ಗೆ ನಾಗಾರ್ಜುನ ಅಕ್ಕಿನೇನಿ ಕುಟುಂಬ ಯಾವುದೇ ಸ್ಪಷ್ಟನೆ ನೀಡಲಿಲ್ಲ. ಇದನ್ನೂ ಓದಿ:ಸಾವಿರ ಕೋಟಿ ಕ್ಲಬ್ ಸೇರಿದ ಶಾರುಖ್ ನಟನೆಯ ‘ಜವಾನ್’ ಸಿನಿಮಾ

    ಸಿನಿಮಾ ಕೆರಿಯರ್‌ಗೆ ಬಿಗ್ ಬ್ರೇಕ್‌ಗಾಗಿ ನಾಗಚೈತನ್ಯ ಕಾಯ್ತಿದ್ದಾರೆ. ಈಗ ಸಾಯಿ ಪಲ್ಲವಿ (Sai Pallavi) ಜೊತೆ ಮತ್ತೆ ರೊಮ್ಯಾನ್ಸ್ ಮಾಡಲು ನಟ ಸಜ್ಜಾಗಿದ್ದಾರೆ. ಅಲ್ಲು ಅರವಿಂದ್ ನಿರ್ಮಾಣದಲ್ಲಿ ಸಾಯಿಪಲ್ಲವಿ- ನಾಗಚೈತನ್ಯ ಹೊಸ ಸಿನಿಮಾ ಮೂಡಿ ಬರಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದುವೆ ಆಗಿರೋದಾಗಿ ಸುದ್ದಿ ವೈರಲ್‌ ಮಾಡಿದವರಿಗೆ ತಿರುಗೇಟು ನೀಡಿದ ಸಾಯಿ ಪಲ್ಲವಿ

    ಮದುವೆ ಆಗಿರೋದಾಗಿ ಸುದ್ದಿ ವೈರಲ್‌ ಮಾಡಿದವರಿಗೆ ತಿರುಗೇಟು ನೀಡಿದ ಸಾಯಿ ಪಲ್ಲವಿ

    ಸೌತ್ ಬ್ಯೂಟಿ ಸಾಯಿ ಪಲ್ಲವಿ, ಬಹುಬೇಡಿಕೆಯ ನಟಿಯರಲ್ಲಿ ಇವರು ಒಬ್ಬರು. ಕಳೆದ 2 ದಿನಗಳಿಂದ ಸಾಯಿ ಪಲ್ಲವಿಗೆ (Sai Pallavi)  ಮದುವೆಯಾಗಿದೆ ಎಂದು ಸಿಕ್ಕಾಪಟ್ಟೆ ಸುದ್ದಿಯಾಗಿದೆ. ಫೋಟೋ ಸಮೇತ ವೈರಲ್ ಆಗಿದೆ. ಈ ಕುರಿತು ನಟಿ ಈಗ ಪ್ರತಿಕ್ರಿಯೆ ನೀಡಿದ್ದಾರೆ. ಮದುವೆ ಬಗ್ಗೆ ಟ್ವಿಟ್ಟರ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

    ಮದುವೆ (Wedding) ಕುರಿತು ಟ್ವೀಟ್ಟರ್‌ನಲ್ಲಿ ಸಿಟ್ಟಿನಿಂದಲೇ ಪ್ರತಿಕ್ರಿಯೆ ನೀಡಿರುವ ನಟಿ, ಸಾಮಾನ್ಯವಾಗಿ, ನಾನು ವದಂತಿಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆ ಬಗ್ಗೆ ನನಗೆ ಭಯವೂ ಇಲ್ಲ. ಆದರೆ ಆ ಸುದ್ದಿಗಳು ನನ್ನ ಕುಟುಂಬವೇ ಆಗಿರುವ ಸ್ನೇಹಿತರನ್ನು ಒಳಗೊಂಡು ಅವರ ಮೇಲೆ ಪರಿಣಾಮ ಬೀರುತ್ತಿದೆ ಎಂದಾಗ ನಾನು ಮಾತನಾಡಲೇ ಬೇಕಾಗಿದೆ.

    ನನ್ನ ಸಿನಿಮಾದ ಪೂಜಾ ಸಮಾರಂಭದ ಫೋಟೋವನ್ನು ಉದ್ದೇಶಪೂರ್ವಕವಾಗಿ ಕ್ರಾಪ್ ಮಾಡಿ ವೈರಲ್ ಮಾಡಲಾಗುತ್ತಿದೆ. ಹಣ ಬಲದ ಮೂಲಕ ಅನಾಮಿಕ ಖಾತೆಗಳನ್ನು ಬಳಸಿ ಕೆಟ್ಟ ಉದ್ದೇಶದಿಂದ ಆ ಫೋಟೋವನ್ನು ವೈರಲ್ ಮಾಡಲಾಗಿದೆ. ನನ್ನ ಕೆಲಸದ ಬಗ್ಗೆ ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳಬೇಕಾದ ಸಮಯದಲ್ಲಿ, ಈ ರೀತಿಯ ಅನವಶ್ಯಕ ವಿಷಯಗಳ ಬಗ್ಗೆ ವಿವರಿಸುವ ಸನ್ನಿವೇಶ ಸೃಷ್ಟಿಯಾಗಿರುವ ಬಗ್ಗೆ ಬೇಸರವಿದೆ. ಈ ರೀತಿಯ ಅಸ್ವಸ್ಥತೆಯನ್ನು ಉಂಟುಮಾಡುವುದು ಬಹಳ ಹೀನಾಯ ಎಂದು ಸಾಯಿ ಪಲ್ಲವಿ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ:ಕಾವೇರಿ ಹೋರಾಟಕ್ಕೆ ನೇರವಾಗಿ ಇಳಿದ ನಟ ಅಭಿಷೇಕ್ ಅಂಬರೀಶ್

    ವೈರಲ್ ಆಗಿರುವ ಚಿತ್ರದಲ್ಲಿ ಸಾಯಿ ಪಲ್ಲವಿ ಜೊತೆಗೆ ಇರುವ ವ್ಯಕ್ತಿಯ ಹೆಸರು ರಾಜಕುಮಾರ ಪೆರಿಯಸ್ವಾಮಿ. ಸಾಯಿ ಪಲ್ಲವಿ- ಶಿವಕಾರ್ತಿಕೇಯನ್ ನಟಿಸುತ್ತಿರುವ ಹೊಸ ಸಿನಿಮಾವನ್ನು ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಆ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ತೆಗೆದ ಚಿತ್ರವನ್ನು ಬೇರೆ ಅರ್ಥ ಬರುವ ರೀತಿ ಕ್ರಾಪ್ ಮಾಡಿ ವೈರಲ್ ಮಾಡಲಾಗಿದೆ.

    ‘ಲವ್ ಸ್ಟೋರಿ’ (Love Story) ಸಕ್ಸಸ್ ನಂತರ ಮತ್ತೆ ನಾಗಚೈತನ್ಯ (Nagachaitanya) ಜೊತೆ ಸಾಯಿ ಪಲ್ಲವಿ ಕೈಜೋಡಿಸಿದ್ದಾರೆ. ಅಲ್ಲು ಅರವಿಂದ್ ಸಿನಿಮಾವನ್ನು ನಿರ್ಮಾಣ ಮಾಡ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಗಚೈತನ್ಯ ಮತ್ತು ಸಾಯಿಪಲ್ಲವಿ ಜೋಡಿಯ ಹೊಸ ಸಿನಿಮಾದ ಕಥೆ ಬಹಿರಂಗ

    ನಾಗಚೈತನ್ಯ ಮತ್ತು ಸಾಯಿಪಲ್ಲವಿ ಜೋಡಿಯ ಹೊಸ ಸಿನಿಮಾದ ಕಥೆ ಬಹಿರಂಗ

    ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ (Naga Chaitanya) 23ನೇ ಸಿನಿಮಾಗೆ ನಾಯಕಿಯಾಗಿ ಸಾಯಿಪಲ್ಲವಿ (Sai Pallavi) ಆಯ್ಕೆಯಾಗಿದ್ದಾರೆ. ಲವ್ ಸ್ಟೋರಿ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮತ್ತೆ ಒಂದಾಗುತ್ತಿರುವುದು ನಿರೀಕ್ಷೆ ಹೆಚ್ಚಿಸಿದೆ. ಕಾರ್ತಿಕೇಯ-2 ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ (Chandu Mondeti) ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಸದ್ಯ  NC23 ಎಂಬ ತಾತ್ಕಾಲಿಕ ಟೈಟಲ್ ಇಡಲಾಗಿದೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ (Allu Arvind) ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ.

    ಮೀನುಗಾರರ ಸಮುದಾಯದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಇದಾಗಿದೆ. ಇತ್ತೀಚೆಗೆ ನಾಯಕ ಚೈತನ್ಯ ಹಾಗೂ ನಿರ್ದೇಶಕ ಚಂದು ಮೊಂಡೇಟಿ ಆಂಧ್ರಪ್ರದೇಶದ ಶ್ರೀಕಾಕುಳಂಗೆ ಭೇಟಿ ನೀಡಿ, ಮೀನುಗಾರರ ಕುಟುಂಬಗಳ ಜೊತೆ ಕಾಲಕಳೆದಿದ್ದರು. ಮೀನುಗಾರರ ಸಂಸ್ಕೃತಿ, ನೆಲ, ಭಾಷೆ, ಜೀವನಶೈಲಿಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು. ಸದ್ಯ NC23 ಸಿನಿಮಾ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ.

    ಲವ್ ಸ್ಟೋರಿ ಸಿನಿಮಾದಲ್ಲಿ ಸಾಯಿಪಲ್ಲವಿ ಹಾಗೂ ನಾಗಚೈತನ್ಯ ಜೋಡಿಯ ಕೆಮಿಸ್ಟ್ರೀ ಸಖತ್ ವರ್ಕೌಟ್ ಆಗಿತ್ತು. ತೆರೆಮೇಲೆ ಮ್ಯಾಜಿಕ್ ಮಾಡಿದ್ದ ಚೈ ಮತ್ತು ಮಲರ್ ಬ್ಯೂಟಿ ಮತ್ತೊಮ್ಮೆ ಕೈ ಜೋಡಿಸಿರುವುದು ಅಭಿಮಾನಿಗಳಿಗೆ ಖುಷಿಕೊಟ್ಟಿದೆ. ಬಹಳ ಅದ್ಧೂರಿಯಾಗಿ ನಿರ್ಮಾಣವಾಗ್ತಿರುವ ಈ ಸಿನಿಮಾದ ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಶೀಘ್ರದಲ್ಲಿಯೇ ಅಪ್ ಡೇಟ್ ನೀಡಲಿದೆ ಚಿತ್ರತಂಡ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಗಚೈತನ್ಯ ಹೊಸ ಚಿತ್ರಕ್ಕೆ ಸಾಯಿ ಪಲ್ಲವಿ ಹೀರೋಯಿನ್

    ನಾಗಚೈತನ್ಯ ಹೊಸ ಚಿತ್ರಕ್ಕೆ ಸಾಯಿ ಪಲ್ಲವಿ ಹೀರೋಯಿನ್

    ಟಾಲಿವುಡ್ (Tollywood) ಯಂಗ್ ಹೀರೋ ನಾಗಚೈತನ್ಯ (Nagachaitanya) ಇತ್ತೀಚೆಗೆ 2ನೇ ಮದುವೆ ವಿಚಾರದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿರೋ ಬೆನ್ನಲ್ಲೇ  ನಟಿ ಸಾಯಿ ಪಲ್ಲವಿ (Sai Pallavi) ಜೊತೆ ಹೊಸ ಸಿನಿಮಾವೊಂದನ್ನ ಒಪ್ಪಿಕೊಂಡಿದ್ದಾರೆ. ಸತತ ಸೋಲಿನಿಂದ ಬೇಸತ್ತ ನಾಗಚೈತನ್ಯ ಈಗ ಮತ್ತೆ ‘ಲವಸ್ಟೋರಿ’ (Love Story) ಸಹನಟಿ, ಸಾಯಿ ಪಲ್ಲವಿ ಜೊತೆ ಕೈಜೋಡಿಸಿದ್ದಾರೆ.

    ನಾಗಚೈತನ್ಯ- ಸಾಯಿ ಪಲ್ಲವಿ ಹೊಸ ಸಿನಿಮಾಗೆ ಅಲ್ಲು ಅರವಿಂದ್ (Allu Aravind) ನಿರ್ಮಾಣ ಮಾಡ್ತಿದ್ದಾರೆ. ಈ ಚಿತ್ರಕ್ಕೆ ಚಂದು ಮೊಂಡೇಟಿ ನಿರ್ದೇಶನ ಮಾಡಲಿದ್ದಾರೆ. ಸದ್ಯ ಅವರು ಕಾರ್ತಿಕೇಯ 3 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಿದ್ದಾರೆ. ಬಳಿಕ ನಾಗಚೈತನ್ಯ ಜೊತೆಗಿನ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ. ಇದನ್ನೂ ಓದಿ:ಕಣ್ಮುಂದೆಯೇ ರಶ್ಮಿಕಾ ಇದ್ದರೂ ಮುಖ ತಿರುಗಿಸಿಕೊಂಡು ಹೋದ ಶ್ರದ್ಧಾ ಕಪೂರ್

    ಈ ಸಿನಿಮಾದ ಕುರಿತು ಸಾಯಿ ಪಲ್ಲವಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡ್ತಿದ್ದಾರೆ. ಇಷ್ಟು ಪ್ರೀತಿಸುವ ತಂಡವನ್ನು ಸೇರಿಕೊಳ್ಳುತ್ತಿರುವುದು ಬಹಳ ಖುಷಿಯ ವಿಷಯ. ಬೆಚ್ಚನೆಯ ಸ್ವಾಗತಕ್ಕೆ ಗೀತಾ ಆರ್ಟ್ಸ್, ಬನ್ನಿ ವಾಸು, ಚಂದು ಮೊಂಡೇಟಿಗೆ ಧನ್ಯವಾದ. ನಾಗ ಚೈತನ್ಯ ಅವರೇ ನಿಮ್ಮೊಂದಿಗೆ ಮತ್ತೊಂದು ಸಿನಿಮಾ ಮಾಡುತ್ತಿರುವುದು ಖುಷಿಯ ಸಂಗತಿ. ನನ್ನ ಪ್ರಿಯವಾದ ತೆಲುಗು ಪ್ರೇಕ್ಷಕರೇ, ನಿಮ್ಮನ್ನು ನಾನು ಬಹಳ ಮಿಸ್ ಮಾಡಿಕೊಂಡಿದ್ದೆ. ಈಗ NC 23 ಸಿನಿಮಾ ಮೂಲಕ ನಿಮ್ಮನ್ನು ಭೇಟಿ ಆಗುತ್ತಿರುವುದು ಬಹಳ ಖುಷಿ ನೀಡಿದೆ ಎಂದು ಬರೆದುಕೊಂಡಿದ್ದಾರೆ. ‘ಲವ್‌ಸ್ಟೋರಿ’ ಸಕ್ಸಸ್‌ ನಂತರ ಮತ್ತೆ ಒಂದಾಗ್ತಿರೋ ಈ ಜೋಡಿ ಮಗದೊಮ್ಮೆ ಗೆದ್ದು ಬೀಗುತ್ತಾರಾ ಕಾಯಬೇಕಿದೆ.

    ಕಮಲ್ ಹಾಸನ್ (Kamal Haasan) ನಿರ್ಮಾಣದ ಸಿನಿಮಾದಲ್ಲಿ ಶಿವ ಕಾರ್ತಿಕೇಯನ್‌ಗೆ ನಾಯಕಿಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ನಟನೆಯ ಹೊಸ ಚಿತ್ರಕ್ಕೆ ರೌಡಿ ಬೇಬಿ ಫೈನಲ್ ಆಗಿದ್ದಾರೆ ಎನ್ನಲಾಗುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಲಿವುಡ್‌ಗೆ ಸಾಯಿ ಪಲ್ಲವಿ- ಸ್ಟಾರ್‌ ನಟನ ಪುತ್ರನಿಗೆ ‘ಫಿದಾ’ ಬ್ಯೂಟಿ ನಾಯಕಿ

    ಬಾಲಿವುಡ್‌ಗೆ ಸಾಯಿ ಪಲ್ಲವಿ- ಸ್ಟಾರ್‌ ನಟನ ಪುತ್ರನಿಗೆ ‘ಫಿದಾ’ ಬ್ಯೂಟಿ ನಾಯಕಿ

    ಬಾಲಿವುಡ್ (Bollywood) ಸ್ಟಾರ್ ನಟ ಆಮೀರ್ ಖಾನ್, ‘ಲಾಲ್ ಸಿಂಗ್ ಚಡ್ಡಾ’ (Lal Singh Chadha) ಸಿನಿಮಾದ ಸೋಲಿನ ಬಳಿಕ ನಟನೆಯಿಂದ ಬ್ರೇಕ್ ತೆಗೆದುಕೊಂಡಿರೋ ಬೆನ್ನಲ್ಲೇ ಆಮೀರ್ ಮಗನ ಚೊಚ್ಚಲ ಸಿನಿಮಾ ಬಗ್ಗೆ ಸಖತ್ ಚರ್ಚೆಯಾಗುತ್ತಿದೆ. ಜುನೈದ್ ಖಾನ್ ಮೊದಲ ಸಿನಿಮಾಗೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಜುನೈದ್ ಮೊದಲ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿಯಾಗಿ ಫೈನಲ್ ಆಗಿದ್ದಾರೆ.

    ಕಳೆದ 2-3 ವರ್ಷಗಳಿಂದ ಜುನೈದ್ ಖಾನ್ (Junaid Khan) ಲಾಂಚ್ ಬಗ್ಗೆ ಕೇಳಿ ಬರುತ್ತಿದೆ. ಅದರಲ್ಲೂ ಆಮೀರ್ ಖಾನ್ (Aamir Khan) ನಟನೆಯಿಂದ ಬ್ರೇಕ್ ತೆಗೆದುಕೊಂಡ ಬಳಿಕ ಜುನೈದ್ ಸಿನಿಮಾ ಬಗ್ಗೆ ಹೆಚ್ಚೆಚ್ಚು ಟಾಕ್ ಆಗುತ್ತಿದೆ. ಆಮೀರ್ ಪುತ್ರನ ಮೊದಲ ಚಿತ್ರಕ್ಕೆ ಯಶ್ ರಾಜ್ ಫಿಲ್ಮ್ಸ್‌ (Yash Raj Films) ನಿರ್ಮಾಣ ಮಾಡುತ್ತಿದೆ.

    ಈ ಹಿಂದೆ ಜುನೈದ್ ಖಾನ್ ನಾಯಕಿಯಾಗಿ ಶ್ರೀದೇವಿ- ಭೋನಿ ಕಪೂರ್ ಪುತ್ರಿ ಖುಷಿ ಎನ್ನಲಾಗಿತ್ತು. ಆದರೆ ಈ ಬೇರೆಯದ್ದೇ ಸುದ್ದಿ ಹರಿದಾಡುತ್ತಿದೆ. ಸಾಯಿ ಪಲ್ಲವಿ ಲಿಡಿಂಗ್ ಲೇಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ವಿಭಿನ್ನ ಲವ್ ಸ್ಟೋರಿಗೆ ಜುನೈದ್- ಸಾಯಿ ಪಲ್ಲವಿ ಜೋಡಿಯಾಗಿ ಬರುತ್ತಿದ್ದು, ಸುನೀಲ್ ಪಾಂಡೆ ನಿರ್ದೇಶನ ಮಾಡುತ್ತಿದ್ದಾರೆ. ಆದರೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇದನ್ನೂ ಓದಿ:‘ಬ್ಯಾಡ್ ಮ್ಯಾನರ್ಸ್’ ಚಿತ್ರಕ್ಕೆ ಮಾಸ್ ಹಾಡು ಬರೆದ ಜಯಂತ್ ಕಾಯ್ಕಿಣಿ

    ಜುನೈದ್ ಖಾನ್‌ಗೆ ರಂಗಭೂಮಿಯಲ್ಲಿ ನಟಿಸಿದ ಅನುಭವಿದೆ. ಸಾಕಷ್ಟು ನಾಟಕ ಪ್ರದರ್ಶನಗಳನ್ನ ಅವರು ನೀಡಿದ್ದಾರೆ. ‘ಪಿಕೆ’ (Pk) ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಅನುಭವವಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್‌ ಹಾಸನ್‌ ಆಪ್ತ, ನಟ ಆರ್‌.ಎಸ್ ಶಿವಾಜಿ ನಿಧನ

    ಕಮಲ್‌ ಹಾಸನ್‌ ಆಪ್ತ, ನಟ ಆರ್‌.ಎಸ್ ಶಿವಾಜಿ ನಿಧನ

    ಸೌತ್ ನಟ ಆರ್.ಎಸ್ ಶಿವಾಜಿ (R.s Shivaji) ಅವರು ಇಹಲೋಕ ತ್ಯಜಿಸಿದ್ದಾರೆ. ಸಾಕಷ್ಟು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ 66ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ. ಹಿರಿಯ ನಟನ ನಿಧನಕ್ಕೆ ಚಿತ್ರರಂಗದ ನಟ-ನಟಿಯರು, ಆಪ್ತರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ:ಹುಚ್ಚರಂತೆ ಯಾಕೆ ಕೂಗುತ್ತಿದ್ದೀರಾ? ಪಾಪರಾಜಿಗಳಿಗೆ ಶಾಹಿದ್ ಕಪೂರ್ ಕ್ಲಾಸ್

    ಸಾಕಷ್ಟು ಕಾಲದಿಂದ ಶಿವಾಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈಗ ಚಿಕಿತ್ಸೆ ಫಲಿಸದೇ ಸೆಪ್ಟೆಂಬರ್‌ 2ರಂದು ನಿಧನರಾಗಿದ್ದಾರೆ. ತೆಲುಗು- ತಮಿಳಿನಲ್ಲಿ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಆರ್.ಎಸ್ ಶಿವಾಜಿ ಅವರು ಕಮಲ್ ಹಾಸನ್ (Kamal Haasan) ಜೊತೆ ಸಾಕಷ್ಟು ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು. ಕಮಲ್‌ ಹಾಸನ್‌ಗೆ ಶಿವಾಜಿ ಅವರು ಆಪ್ತರಾಗಿದ್ದರು.

    ನಟ ಶಿವಾಜಿ ಕಡೆಯದಾಗಿ ಸಾಯಿ ಪಲ್ಲವಿ (Sai Pallavi) ನಟನೆಯ ‘ಗಾರ್ಗಿ’ ಸಿನಿಮಾದಲ್ಲಿ ನಟಿಸಿದ್ದರು. ಚಿತ್ರದಲ್ಲಿನ ಶಿವಾಜಿ ನಟನೆಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿತ್ತು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ದೇವರ’ ಸಿನಿಮಾದಲ್ಲಿಲ್ಲ ಸಾಯಿ ಪಲ್ಲವಿ : ಚಿತ್ರತಂಡ ಸ್ಪಷ್ಟನೆ

    ‘ದೇವರ’ ಸಿನಿಮಾದಲ್ಲಿಲ್ಲ ಸಾಯಿ ಪಲ್ಲವಿ : ಚಿತ್ರತಂಡ ಸ್ಪಷ್ಟನೆ

    ಜ್ಯೂನಿಯರ್ ಎನ್.ಟಿ.ಆರ್ ನಟನೆಯ ‘ದೇವರ’ ಸಿನಿಮಾದಲ್ಲಿ ಪ್ರತಿಭಾವಂತ ನಟಿ ಸಾಯಿ ಪಲ್ಲವಿ (Sai Pallavi) ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಸಾಯಿ ಪಲ್ಲವಿ ಮತ್ತು ಜ್ಯೂ.ಎನ್.ಟಿ.ಆರ್ ಅಭಿಮಾನಿಗಳು ಈ ವಿಷಯವನ್ನು ಸಂಭ್ರಮಿಸಿದ್ದರು. ಈ ಜೋಡಿ ತೆರೆಯ ಮೇಲೆ ಮೋಡಿ ಮಾಡಲಿದೆ ಎಂದು ಖುಷಿ ಪಟ್ಟಿದ್ದರು. ಆದರೆ, ಆ ಖುಷಿಯು ಠುಸ್ ಪಟಾಕಿಯಾಗಿದೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿಲ್ಲ ಎಂದು ಸ್ವತಃ ಚಿತ್ರತಂಡವೇ ಸ್ಪಷ್ಟನೆ ನೀಡಿದೆ.

    ರ್ ಆರ್ ಆರ್ ಚಿತ್ರದ ನಂತರ ಜ್ಯೂನಿಯರ್ ಎನ್ಟಿಆರ್ (Jr NTR) ಕೊರಟಾಲ ಶಿವ (Koratala Shiva) ನಿರ್ದೇಶನದ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜ್ಯೂನಿಯರ್ ಎನ್ಟಿಆರ್ ಅವರ ಹುಟ್ಟುಹಬ್ಬದಂದು ಚಿತ್ರದ ಹೆಸರನ್ನು ಘೋಷಿಸಲಾಗಿತ್ತು. ಚಿತ್ರಕ್ಕೆ ‘ದೇವರ’ (Devara) ಎಂಬ ಶೀರ್ಷಿಕೆ ಇಡಲಾಗಿದ್ದು, ಚಿತ್ರದ ಫಸ್ಟ್ಲುಕ್ ಪೋಸ್ಟರ್ ಸಹ ಅದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ:ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?

    ಈ ಪೋಸ್ಟರ್ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು,  ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿರುವ ಪೋಸ್ಟರ್ ಅದಾಗಿತ್ತು. ಕೆಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದಾಗಿದೆ. ಜ್ಯೂನಿಯರ್ ಎನ್.ಟಿ.ಆರ್ ಅವರ ಅಭಿಮಾನಿಗಳು ಅವರ ಮಾಸ್ ಲುಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

    ಈ ಸಿನಿಮಾದ ನಾಯಕಿ ಕುರಿತು ಹೊಸ ಅಪ್ ಡೇಟ್ ಸಿಕ್ಕಿದ್ದು, ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ (Jahnavi Kapoor) ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್ನ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ನಡಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಟ ನಂದಮೂರಿ ಕಲ್ಯಾಣರಾಮ್ ನಿರ್ಮಿಸುತ್ತಿದ್ದಾರೆ.

    2024ರ ಏಪ್ರಿಲ್ 06ಕ್ಕೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ, ರತ್ನವೇಲು ಛಾಯಾಗ್ರಹಣ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್ ಹಾಸನ್ ನಿರ್ಮಾಣದ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿ

    ಕಮಲ್ ಹಾಸನ್ ನಿರ್ಮಾಣದ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿ

    ಸೂಪರ್ ಸ್ಟಾರ್ ಕಮಲ್ ಹಾಸನ್ (Kamal Haasan) ಸಾರಥ್ಯದ ರಾಜ್ ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ (RKFI) ನಡಿ ಮೂಡಿ ಬಂದಿದ್ದ ‘ವಿಕ್ರಮ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಇದು ರಾಜ್ ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್ ನ 50 ಚಿತ್ರ. ಲೋಕೇಶ್ ಕನಗರಾಜ್ ನಿರ್ದೇಶನದ ಹಾಗೂ ಕಮಲ್ ನಟನೆಯ ವಿಕ್ರಮ್ ಅದ್ಧೂರಿ ಸಕ್ಸಸ್ ಕಂಡಿದೆ. ಈ ಸಕ್ಸಸ್ ಬಳಿಕ ಈ ನಿರ್ಮಾಣ ಸಂಸ್ಥೆಯಡಿ 51 ಚಿತ್ರ ಸೆಟ್ಟೇರಿದೆ. ಮೇಜರ್ ಚಿತ್ರ ನಿರ್ಮಿಸಿದ್ದ ರಾಜ್ ಕಮಲ್ ಫಿಲ್ಮ್ಸ್ ಹಾಗೂ ಸೋನಿ ಪಿಕ್ಚರ್ಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ಸ್ (SPIP) ಮತ್ತೊಂದು ಜೊತೆಗೂಡಿ ಹೊಸ ಸಿನಿಮಾಗೆ ಮುನ್ನುಡಿ ಬರೆದಿದ್ದಾರೆ.

    ತಮಿಳು ಚಿತ್ರರಂಗದ ಖ್ಯಾತ ನಟ ಶಿವ ಕಾರ್ತಿಕೇಯನ್ (Siva Karthikeyan) ನಟಿಸುತ್ತಿರುವ #SK21 ಚಿತ್ರದ ಸಮಾರಂಭ ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕಮಲ್ ಹಾಸನ್ ಈ ಸಿನಿಮಾಗೆ ಕ್ಲಾಪ್ ಮಾಡಿ ಶುಭ ಹಾರೈಸಿದ್ದಾರೆ. ಆರ್. ಮಹೇಂದ್ರನ್, ಶಿವಕಾರ್ತಿಕೇಯನ್, ಎಂಎಸ್ ಸಾಯಿ ಪಲ್ಲವಿ, ರಾಜ್ ಕುಮಾರ್ ಪೆರಿಯಸಾಮಿ, ಜಿ.ವಿ ಪ್ರಕಾಶ್, ಸಹ ನಿರ್ಮಾಪಕ ವಕೀಲ್ ಖಾನ್, ಲಾಡಾ ಗುರುಡೆನ್ ಸಿಂಗ್  ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು,

    ರಾಜ್ ಕುಮಾರ್ ಪೆರಿಯಸಾಮಿ (Rajkumar Periasamy) ಕಥೆ ಬರೆದು ನಿರ್ದೇಶಿಸಿದ್ದು, ಶಿವಕಾರ್ತಿಕೇಯನ್ ಅವರನ್ನು ಅವರ ಅಭಿಮಾನಿಗಳು ಹಿಂದೆಂದೂ ನೋಡಿರದ ರೀತಿಯಲ್ಲಿ ದೊಡ್ಡ ಪರದೆಯ ಮೇಲೆ ತರುವ ಪ್ರಯತ್ನದಲ್ಲಿದ್ದಾರೆ. #SK21 ಚಿತ್ರಕ್ಕೆ ಸಾಯಿ ಪಲ್ಲವಿ (Sai Pallavi) ನಾಯಕಿಯಾಗಿ ನಟಿಸ್ತಿದ್ದು, ಕಾಶ್ಮೀರದಲ್ಲಿ ಎರಡು ತಿಂಗಳುಗಳ ಕಾಲ ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಇದನ್ನೂ ಓದಿ:ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗ್ಬೇಕು – ದುನಿಯಾ ವಿಜಯ್

    ಜಿ ವಿ ಪ್ರಕಾಶ್ ಸಂಗೀತ ನಿರ್ದೇಶನ, , ಸಿಎಚ್ ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನಕಾರ ಮತ್ತು ಸ್ಟೀಫನ್ ರಿಕ್ಟರ್ ಸಾಹಸ ನಿರ್ದೇಶಕ ಚಿತ್ರಕ್ಕಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ನ ಸಹ-ನಿರ್ಮಾಣದಲ್ಲಿದೆ ಕೈ ಜೋಡಿಸಿದೆ.

  • `ಪುಷ್ಪ 2′ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆ ಸಾಯಿ ಪಲ್ಲವಿ

    `ಪುಷ್ಪ 2′ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆ ಸಾಯಿ ಪಲ್ಲವಿ

    ಟಾಲಿವುಡ್ (Tollywood) ಬ್ಯೂಟಿ ಸಾಯಿ ಪಲ್ಲವಿ (Sai Pallavi) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಹೊಸ ಸಿನಿಮಾದ ಅಪ್‌ಡೇಟ್ ಮೂಲಕ ಸುದ್ದಿಯಲ್ಲಿದ್ದಾರೆ. ಅಲ್ಲು ಅರ್ಜುನ್ (Allu Arjun) ಜೊತೆಗೆ ತೆರೆಹಂಚಿಕೊಳ್ಳಲು ಸಾಯಿ ಪಲ್ಲವಿ ಸಜ್ಜಾಗಿದ್ದಾರೆ. ಇದನ್ನೂ ಓದಿ: ಖುಷಿ ದಾಂಪತ್ಯದ ಬಗ್ಗೆ ಸೀಕ್ರೆಟ್ ಬಿಚ್ಚಿಟ್ಟ ನಟಿ ರಾಧಿಕಾ ಪಂಡಿತ್

    ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ `ಪುಷ್ಪ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿತ್ತು. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. `Pushpa 2′ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರತಂಡಕ್ಕೆ ಸಾಯಿ ಪಲ್ಲವಿ ಸಾಥ್ ನೀಡ್ತಿದ್ದಾರೆ.

    ಶೀಘ್ರದಲ್ಲಿಯೇ ಸಾಯಿ ಪಲ್ಲವಿ ಸೆಟ್‌ಗೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರದ ಬಹುಮುಖ್ಯ ಪಾತ್ರವನ್ನೇ ನಟಿ ನಿರ್ವಹಿಸಲಿದ್ದಾರೆ. ಚಿತ್ರದಲ್ಲಿ ಫಹಾದ್ ಫಾಸಿಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪತ್ನಿಯ ಪಾತ್ರಕ್ಕೆ ಸಾಯಿ ಪಲ್ಲವಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಾಯಿ ಪಲ್ಲವಿ `ಪುಷ್ಪ 2′ ಟೀಂ ಜೊತೆ ಸಾಥ್ ನೀಡಿರೋದು ಅದೆಷ್ಟರ ಮಟ್ಟಿಗೆ ನಿಜಾನಾ ಎಂಬುದನ್ನ ತಿಳಿಯಲು ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ.