Tag: ಸಾಯಿ ಪಲ್ಲವಿ

  • ‘ಜೈ ಶ್ರೀರಾಮ್’ ಎಂದು ಕೊಲ್ಲುವ ಮಾತಿನ ವಿವಾದ: ನಟಿ ಸಾಯಿ ಪಲ್ಲವಿ ಬಂಧನಕ್ಕೆ ಹೆಚ್ಚಿದ ಒತ್ತಡ

    ‘ಜೈ ಶ್ರೀರಾಮ್’ ಎಂದು ಕೊಲ್ಲುವ ಮಾತಿನ ವಿವಾದ: ನಟಿ ಸಾಯಿ ಪಲ್ಲವಿ ಬಂಧನಕ್ಕೆ ಹೆಚ್ಚಿದ ಒತ್ತಡ

    ರಡ್ಮೂರು ದಿನಗಳಿಂದ ನಟಿ ಸಾಯಿ ಪಲ್ಲವಿ ಆಡಿದ ಮಾತಿನ ಹಿನ್ನೆಲೆಯಲ್ಲಿ ಹೈದರಾಬಾದ್ ಸೇರಿದಂತೆ ಹಲವು ಕಡೆ ದೂರು ದಾಖಲಾಗಿವೆ. ಅವರು ಕೋಮು ಗಲಭೆ ಹೆಚ್ಚುವಂತಹ ಮಾತುಗಳನ್ನು ಆಡಿದ್ದರಿಂದ ಮತ್ತು ಗೋವು ಕಳ್ಳರಿಗೆ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಹೋಲಿಸಿ ಮಾತನಾಡಿದ್ದಕ್ಕಾಗಿ ಕೂಡಲೇ ಬಂಧಿಸಬೇಕು ಎಂದು ಹೈದರಾಬಾದ್ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ. ಈಗಾಗಲೇ ಹೈದರಾಬಾದ್ ನಲ್ಲಿ ದೂರು ಕೂಡ ದಾಖಲಾಗಿದೆ.

    ಕರ್ನಾಟಕದಲ್ಲೂ ಈ ಕಾವು ಮುಂದುವರಿದಿದೆ. ಯಾರೂ ದೂರು ದಾಖಲಿಸದೇ ಇದ್ದರೂ, ಸೋಷಿಯಲ್ ಮೀಡಿಯಾಗಳಲ್ಲಿ ಮಾತ್ರ ಅಬ್ಬರ ಜೋರಾಗಿದೆ. ಕೆಲ ಸಿನಿಮಾ ನಟ, ನಟಿಯರು ಮತ್ತು ನಿರ್ದೇಶಕರು ಸಾಯಿ ಪಲ್ಲವಿ ಪರ ನಿಂತಿದ್ದರೆ, ಹಿಂದೂಪರ ಸಂಘಟನೆಯ ಸದಸ್ಯರು ಸಾಯಿ ಪಲ್ಲವಿ ವಿರೋಧಿಸಿ ಕಾಮೆಂಟ್‌ಗಳನ್ನು ಹಾಕುತ್ತಿದ್ದಾರೆ. ಸಾಯಿ ಪಲ್ಲವಿ ಮಾತನಾಡಿದ್ದು ಸರಿಯೇ ಇರಬಹುದು. ಆದರೆ ಅವರು ಹೋಲಿಕೆ ಮಾಡಿದ್ದು ಸರಿಯಿಲ್ಲ ಎನ್ನುವ ಮತ್ತೊಂದು ವರ್ಗ ಕೂಡ ಹುಟ್ಟಿಕೊಂಡಿದೆ. ಇದನ್ನೂ ಓದಿ:ಬುದ್ದಿಜೀವಿ ವಲಯಕ್ಕೆ ನಟ ಚೇತನ್ ‘ಚಮಚ’ ಅಂದಿದ್ದು ಯಾಕೆ ಮತ್ತು ಯಾರಿಗೆ?

    ಮಾಧ್ಯಮವೊಂದರ ಸಂದರ್ಶನದಲ್ಲಿ ‘ಕಾಶ್ಮೀರ ಪಂಡಿತರ ಹತ್ಯೆ ಮತ್ತು ಜೈ ಶ್ರೀರಾಮ್ ಎಂದು ಹೇಳುತ್ತಾ ಗೋ ಸಾಗಾಣಿ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿ ಮೇಲಿನ ಹಲ್ಲೆ ಎರಡೂ ಒಂದೇ ಅನಿಸುತ್ತಿದೆ. ಧರ್ಮದ ಹೆಸರಿನಲ್ಲಿ ನಡೆಯುವ ಹತ್ಯೆಗಳನ್ನು ಖಂಡಿಸಬೇಕು’ ಎಂದು ಸಾಯಿ ಪಲ್ಲವಿ ಮಾತನಾಡಿದ್ದರು. ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ.

    Live Tv

  • ಜೈ ಶ್ರೀರಾಮ್ ಎಂದು ಮುಸ್ಲಿಂ ಹತ್ಯೆ ವಿವಾದ : ಸಾಯಿ ಪಲ್ಲವಿ ವಿರುದ್ಧ ದೂರು

    ಜೈ ಶ್ರೀರಾಮ್ ಎಂದು ಮುಸ್ಲಿಂ ಹತ್ಯೆ ವಿವಾದ : ಸಾಯಿ ಪಲ್ಲವಿ ವಿರುದ್ಧ ದೂರು

    ಮಾಧ್ಯಮವೊಂದರ ಸಂದರ್ಶನದಲ್ಲಿ ‘ಕಾಶ್ಮೀರ ಪಂಡಿತರ ಹತ್ಯೆ ಮತ್ತು ಜೈ ಶ್ರೀರಾಮ್ ಎಂದು ಹೇಳುತ್ತಾ ಗೋ ಸಾಗಾಣಿ ಮಾಡುತ್ತಿದ್ದು ಮುಸ್ಲಿಂ ಹತ್ಯೆ ಎರಡೂ ಒಂದೇ ಅನಿಸುತ್ತಿದೆ. ಧರ್ಮದ ಹೆಸರಿನಲ್ಲಿ ನಡೆಯುವ ಹತ್ಯೆಗಳನ್ನು ಖಂಡಿಸಬೇಕು’ ಎಂದು ಹೇಳಿಕೆ ನೀಡಿದ್ದ ದಕ್ಷಿಣದ ತಾರೆ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆಗೆ ಗೋವು ಕಳ್ಳಸಾಗಾಣಿಕೆಯನ್ನು ಹೋಲಿಸಿರುವುದು ಸರಿಯಲ್ಲ ಎಂದು ವಾದ ನಡೆದಿದೆ.

    ಮೊನ್ನೆ ಇಂಥದ್ದೊಂದು ಹೇಳಿಕೆಯನ್ನು ಸಾಯಿ ಪಲ್ಲವಿ ಕೊಡುತ್ತಿದ್ದಂತೆಯೇ ಎಲ್ಲಡೆ ಆಕ್ರೋಶ ವ್ಯಕ್ತವಾಯಿತು. ಸಾಯಿ ಮಾತಿಗೆ ಪರ ವಿರೋಧ ವ್ಯಕ್ತವಾಯಿತು. ಕಳ್ಳಸಾಗಾಣಿಕೆದಾರನಿಗೆ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಹೋಲಿಸಿದ್ದಕ್ಕಾಗಿ ಭಜರಂಗ ದಳದ ನಾಯಕರು, ಹೈದರಾಬಾದ್ ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಶಿವಣ್ಣ – ತಲೈವಾ ಸಿನಿಮಾಗೆ `ಜೈಲರ್’ ಟೈಟಲ್ ಫಿಕ್ಸ್

    ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ. ಇವರ ಮಾತಿಗೆ ಕೆಲವರು ಮೆಚ್ಚಿಕೊಂಡರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

    Live Tv

  • ಬೈಕಾಟ್ ಸಾಯಿ ಪಲ್ಲವಿ ಫಿಲ್ಮ್ : ಇಂದು ವಿರಾಟ ಪರ್ವಂ ರಿಲೀಸ್

    ಬೈಕಾಟ್ ಸಾಯಿ ಪಲ್ಲವಿ ಫಿಲ್ಮ್ : ಇಂದು ವಿರಾಟ ಪರ್ವಂ ರಿಲೀಸ್

    ಕ್ಷಿಣದ ಖ್ಯಾತತಾರೆ ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ ಕಾಂಬಿನೇಷನ್ ನ ತೆಲುಗು ಸಿನಿಮಾ ‘ವಿರಾಟ ಪರ್ವಂ’ ಇಂದು ಬಿಡುಗಡೆ ಆಗಿದೆ. ಇದೊಂದು ನಕ್ಸಲ್ ಹಿನ್ನೆಲೆಯಾಗಿಟ್ಟುಕೊಂಡು ಮಾಡಿರುವ ಸಿನಿಮಾ. ನಕ್ಸಲ್ ಹೋರಾಟದಲ್ಲಿ ಭಾಗಿಯಾದ ಇಬ್ಬರು ಪ್ರೇಮಿಗಳ ಕಥನ ಮತ್ತು ಶೋಷಿತ ಸಮಾಜಕ್ಕಾಗಿ ಅವರು ಮಾಡುವ ತ್ಯಾಗವನ್ನು ತೋರಿಸುವ ಚಿತ್ರ ಇದಾಗಿದ್ದು, ಈ ಸಿನಿಮಾವನ್ನು ಬೈಕಾಟ್ ಮಾಡುವುದಾಗಿ ಹಿಂದೂಪರ ಸಂಘಟನೆಗಳು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿವೆ.

    ಈ ಸಿನಿಮಾ ಬೈಕಾಟ್ ಮಾಡುವುದಕ್ಕೆ ಕಾರಣ, ಸಿನಿಮಾದ ಕಂಟೆಂಟ್ ಅಲ್ಲ. ಬದಲಿಗೆ ಈ ಚಿತ್ರದಲ್ಲಿ ನಟಿಸಿದ ನಾಯಕಿ ಸಾಯಿ ಪಲ್ಲವಿ ಅವರ ಹೇಳಿಕೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಅವರು ಮಾತನಾಡುತ್ತಾ, ‘ಕಾಶ್ಮೀರದಲ್ಲಿ ನಡೆದ ಪಂಡಿತರ ನರಮೇಧ ಮತ್ತು ಲಾಕ್‌ಡೌನ್‌ ವೇಳೆಯಲ್ಲಿ ಗೋವನ್ನು ತಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬನ ಮೇಲೆ ಜೈ ಶ್ರೀರಾಮ್ ಎಂದು ಕೂಗುತ್ತಾ ಮಾಡಿದ ಹತ್ಯೆ ಎರಡೂ ಒಂದೇ. ಧರ್ಮದ ಹೆಸರಿನಲ್ಲಿ ಮಾಡುವ ಹತ್ಯೆಯನ್ನು ಸಹಿಸಿಕೊಳ್ಳಬಾರದು’ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯೇ ಸಿನಿಮಾ ಬೈಕಾಟ್‌ಗೆ ಕಾರಣವಾಗಿದೆ. ಇದನ್ನೂ ಓದಿ : ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್

    ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ. ಇವರ ಮಾತಿಗೆ ಕೆಲವರು ಮೆಚ್ಚಿಕೊಂಡರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

    Live Tv

  • ‘ಜೈ ಶ್ರೀರಾಮ್’ ಎನ್ನುತ್ತಾ ಮುಸ್ಲಿಂ ಹತ್ಯೆ ವಿಚಾರ: ಸಾಯಿ ಪಲ್ಲವಿ ಬೆಂಬಲಕ್ಕೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ‘ಜೈ ಶ್ರೀರಾಮ್’ ಎನ್ನುತ್ತಾ ಮುಸ್ಲಿಂ ಹತ್ಯೆ ವಿಚಾರ: ಸಾಯಿ ಪಲ್ಲವಿ ಬೆಂಬಲಕ್ಕೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ನಾನು ನ್ಯೂಟ್ರಲ್ ಕುಟುಂಬದಲ್ಲಿ ಜನಿಸಿದವಳು. ಮಾನವತಾವಾದವನ್ನ ಕಲಿತಿದ್ದೇನೆ. ಯಾರು ದಮನಿತರೋ ಅವರನ್ನ ರಕ್ಷಿಸಬೇಕೆಂದು ಕಲಿತಿದ್ದೇನೆ. ನಾನು ಬಲ ಪಂಕ್ತಿ ಎಡ ಪಂಕ್ತಿ ಬಗ್ಗೆ ಕೇಳಿದ್ದೇನೆ. ಆದರೆ ಯಾರದು ಸರಿ, ಯಾರದು ತಪ್ಪು ಅಂತ ನನಗೆ ಇನ್ನೂ ಸರಿಯಾಗಿ ಗೊತ್ತಿಲ್ಲ. ಕಾಶ್ಮೀರಿ ಫೈಲ್ಸ್ ನೋಡಿದಾಗ  ಅದರಲ್ಲಿ ಕಾಶ್ಮೀರಿ ಪಂಡಿತರನ್ನು ಅಮಾನುಶವಾಗಿ ಸಾಯಿಸಲಾಯಿತು ಎಂದಿದೆ. ಆದರೆ ಇತ್ತೀಚೆಗೆ ಒಂದು ಘಟನೆ ನೋಡಿದಾಗ ಓರ್ವ ಮುಸ್ಲಿಂ ಡ್ರೈವರ್ ಹಸುಗಳನ್ನ ಸಾಗಿಸುತ್ತಿದ್ದಾಗ ಆತನ ಮೇಲೆ ಗುಂಪೊಂದು ಎಗರಿಬಿದ್ದು ಹೊಡೆದು ಬಡಿದು ಜೈ ಶ್ರೀರಾಮ್ ಎಂದು ಹೇಳಿಸಲಾಯಿತು. ಈ ಎರಡು ಘಟನೆ ನೋಡಿದಾಗ ಯಾವ ನಿರ್ಧಾರಕ್ಕೆ ಬರಲಾಗುತ್ತದೆ ಹೇಳಿ? ಎಂದು ಹೇಳುವ ಮೂಲಕ ಭಾರೀ ವಿವಾದ ಸೃಷ್ಟಿಸಿಕೊಂಡಿದ್ದಾರೆ ದಕ್ಷಿಣದ ಖ್ಯಾತ ನಟಿ ಸಾಯಿ ಪಲ್ಲವಿ.

    ವಿರಾಟ ಪರ್ವಂ ಸಿನಿಮಾದ ಪ್ರಚಾರದ ವೇಳೆ ನಡೆದಿದೆ ಎನ್ನಲಾದ ಸಂದರ್ಶನದಲ್ಲಿ ಅವರು ಈ ರೀತಿಯ ಮಾತುಗಳನ್ನು ಆಡಿದ್ದಾರೆ. ಆ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. ಸದಾ ತುಳಿತಕ್ಕೊಳಗಾದವರನ್ನ ರಕ್ಷಿಸಬೇಕು. ಸತ್ಯ ಯಾವುದರ ಕಡೆ ಇದೆ ? ಬಲದ ಕಡೆಯಾ ಎಡದ ಕಡೆಗಾ ? ನಾನು ಈ ವಿಚಾರದಲ್ಲಿ ತುಂಬಾ ನ್ಯೂಟ್ರಲ್ ಎಂದೂ ವೀಡಿಯೋದಲ್ಲಿ ಹೇಳಿದ್ದಾರೆ. ಸಾಯಿ ಪಲ್ಲವಿ ಅವರ ಈ ವಿಚಾರವನ್ನು ನಟಿ, ಮಾಜಿ ಸಂಸದೆ ರಮ್ಯಾ ಬೆಂಬಲಿಸಿದ್ದಾರೆ. ಸಾಯಿ ಪಲ್ಲವಿಗೆ ಸತ್ಯವನ್ನ ಮಾತನಾಡುವ ಶಕ್ತಿ ಇದೆ ಎಂದು ಬರೆದು, ಚಪ್ಪಾಳೆ ಚಿನ್ಹೆ ಮೂಲಕ ಬೆಂಬಲಕ್ಕೆ ನಿಂತಿದ್ದಾರೆ. ಇದನ್ನೂ ಓದಿ : ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್

    ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ. ಇವರ ಮಾತಿಗೆ ಕೆಲವರು ಮೆಚ್ಚಿಕೊಂಡರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

    Live Tv

  • ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ:  ಸಾಯಿ ಪಲ್ಲವಿ ವೀಡಿಯೋ ವೈರಲ್

    ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್

    ಕ್ಷಿಣದ ಖ್ಯಾತ ತಾರೆ ಸಾಯಿ ಪಲ್ಲವಿ ನಟನೆಯ ವಿರಾಟ ಪರ್ವಂ ಸಿನಿಮಾ ದೇಶದಾದ್ಯಂತ ರಿಲೀಸ್ ಆಗುತ್ತಿದೆ. ಈ ಸಮಯದಲ್ಲಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಸಾಯಿ ಪಲ್ಲವಿ, ಸಮಾಜದಲ್ಲಿ ನಡೆಯುತ್ತಿರುವ ಕೋಮು ದಳ್ಳುರಿಯ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ‘ದಿ ಕಾಶ್ಮೀರ್‌ ಫೈಲ್ಸ್’ ಸಿನಿಮಾದ ಕಥಾವಸ್ತುವಾಗಿರುವ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಮುಸ್ಲಿಂ ಡ್ರೈವರ್ ಒಬ್ಬರ ಹತ್ಯೆಗೆ ಹೋಲಿಸಿ ಪರ ಮತ್ತು ವಿರೋಧಕ್ಕೆ ಕಾರಣವಾಗಿದ್ದಾರೆ.

    ಸಂದರ್ಶನವೊಂದರಲ್ಲಿ ಅವರು ಮಾತನಾಡುತ್ತಾ, ‘ನಾನು ಎಡ ಮತ್ತು ಬಲ ಅಂತ ಕೇಳಿದ್ದೇನೆ. ಆದರೆ ಎರಡರ ಬಗ್ಗೆಯೂ ನನಗೆ ಆಳವಾದ ಜ್ಞಾನವಿಲ್ಲ. ಆದರೆ ನಾನು ಮನುಷ್ಯತ್ವದ ಪರ ಮಾತನಾಡುತ್ತೇನೆ. ನನ್ನ ಮನೆಯಲ್ಲಿ ಕಲಿಸಿದ್ದು ನ್ಯೂಟ್ರಲ್ ನಿಯಮ. ಹಾಗಾಗಿ ಕಾಶ್ಮೀರದಲ್ಲಿ ಪಂಡಿತರ ಹತ್ಯೆಯನ್ನು ಹೇಗೆ ಧಾರ್ಮಿಕ ದೃಷ್ಟಿಕೋನದಿಂದ ನೋಡಲಾಯಿತೋ, ಹಾಗೆಯೇ ಲಾಕ್‌ಡೌನ್‌ ಸಮಯದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಟೆಂಪೋ ಟ್ರೈವರ್‌ ಮೇಲೆ ಜೈ ಶ್ರೀರಾಮ್ ಎಂದು ಹೇಳುತ್ತಾ ಕೊಚ್ಚಿಕೊಂದ ಘಟನೆಯನ್ನೂ ನಾನು ಹಾಗೆಯೇ ನೋಡಬೇಕಾಗುತ್ತದೆ. ಎರಡು ಹತ್ಯೆಯೂ ಒಂದೇ’ ಎಂದು ಹೇಳಿದ್ದಾರೆ. ಈ ಮಾತು ಇದೀಗ ವೈರಲ್ ಆಗುತ್ತಿದೆ. ಇದನ್ನೂ ಓದಿ: ಅಮ್ಮ ಅಂತಾ ಎಷ್ಟೇ ಹೇಳಿಕೊಟ್ಟರೂ ಕೊನೆಗೆ ಅಪ್ಪ ಎಂದು ಕರೆದ ರಾಯನ್

    ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ. ಇವರ ಮಾತಿಗೆ ಕೆಲವರು ಮೆಚ್ಚಿಕೊಂಡರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

    Live Tv

  • ರಶ್ಮಿಕಾ ಮಂದಣ್ಣಗೆ ಟಾಂಗ್: ಸಾಯಿ‌ ಪಲ್ಲವಿಗೆ ನ್ಯಾಶನಲ್ ಕ್ರಶ್ ಎಂದ ಫ್ಯಾನ್ಸ್

    ರಶ್ಮಿಕಾ ಮಂದಣ್ಣಗೆ ಟಾಂಗ್: ಸಾಯಿ‌ ಪಲ್ಲವಿಗೆ ನ್ಯಾಶನಲ್ ಕ್ರಶ್ ಎಂದ ಫ್ಯಾನ್ಸ್

    ಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಮತ್ತೆ ಸುದ್ದಿಯಲ್ಲಿದ್ದಾರೆ. ವಿರಾಟ ಪರ್ವಂ ಪಾತ್ರಕ್ಕೆ ಎರಡು ದಿನ ಉಪವಾಸವಿದ್ದು, ಕ್ಯಾಮೆರಾ ಮುಂದೆ ನಟಿಸಿದ್ದರು, ಇದೀಗ ಈ ಸುದ್ದಿ ತಿಳಿದ ಫ್ಯಾನ್ಸ್ ಸಾಯಿ ಪಲ್ಲವಿ ಕೆಲಸದ ಪರಿಗೆ ಭೇಷ್ ಎಂದಿದ್ದಾರೆ. ನೀವೇ ನಿಜವಾದ ನ್ಯಾಶನಲ್ ಕ್ರಶ್ ಎಂದು ಫ್ಯಾನ್ಸ್ ಹಾಡಿ ಹೊಗಳಿದ್ದಾರೆ.

    ಸಾಯಿ ಪಲ್ಲವಿ ದಕ್ಷಿಣ ಭಾರತದ ಪ್ರತಿಭಾವಂತ ನಟಿ, ಆ ಪಾತ್ರವೇ ತಾವಾಗಿ ನಟಿಸೋ ಮಹಾನ್ ಕಲಾವಿದೆ. ಈಕೆಯ ಅಮೋಘ ನಟನೆ, ಡ್ಯಾನ್ಸ್ ನೋಡಿನೇ ಅಪಾರ ಅಭಿಮಾನಿಗಳು ಸಾಯಿ ಪಲ್ಲವಿಯನ್ನ ಇಷ್ಟಪಡುತ್ತಾರೆ. ಅವರ ಸಿನಿಮಾಗಾಗಿ ಕಾಯುತ್ತಾರೆ. ಸದ್ಯ `ವಿರಾಟ್ ಪರ್ವಂ’ ಚಿತ್ರದಲ್ಲಿ ನಕ್ಸಲ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರಕ್ಕಾಗಿ ಹಗಲು ರಾತ್ರಿ ಊಟ ಮಾಡದೇ 2 ದಿನಗಳ ಕಾಲ ಉಪವಾಸವಿದ್ದು ನಟಿಸಿರೋದು ಇದೀಗ ಮೆಚ್ಚುಗೆಗೆ ಪಾತ್ರವಾಗಿದೆ.

     

    View this post on Instagram

     

    A post shared by Sai Pallavi (@saipallavi.senthamarai)

    `ವಿರಾಟ್ ಪರ್ವಂ’ ಚಿತ್ರದಲ್ಲಿ ರಾಣಾಗೆ ನಾಯಕಿಯಾಗಿ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್ 17ಕ್ಕೆ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಈ ಬೆನ್ನಲ್ಲೇ ಸಾಯಿ ಪಲ್ಲವಿ ಕುರಿತು ಅಚ್ಚರಿಯ ವಿಚಾರವೊಂದು ಹೊರಬಿದ್ದಿದೆ. ಈ ಚಿತ್ರದ ದೃಶ್ಯವೊಂದಕ್ಕಾಗಿ ಎರಡು ದಿನಗಳ ಕಾಲ ಉಪವಾಸವಿದ್ದು, ಕ್ಯಾಮೆರಾ ಮುಂದೆ ಖಡಕ್ ಆಗಿ ಸಾಯಿ ಪಲ್ಲವಿ ನಟಿಸಿದ್ರಂತೆ.

    ಚಿತ್ರದ ದೃಶ್ಯವೊಂದಕ್ಕೆ ನೈಜವಾಗಿ ಮೂಡಿ ಬರಬೇಕು ಎಂಬ ಕಾರಣಕ್ಕೆ ಎರಡು ದಿನಗಳ ಕಾಲ ಊಟ ಬಿಟ್ಟು ಸಾಯಿ ಪಲ್ಲವಿ ಕ್ಯಾಮೆರಾ ಮುಂದೆ ರಗಡ್ ಆಗಿ ನಟಿಸಿದ್ದಾರೆ. ಇದೀಗ ಈ ಸುದ್ದಿ ತಿಳಿದ ಅಭಿಮಾನಿಗಳು ಸಾಯಿ ಪಲ್ಲವಿ ಕಾರ್ಯ ವೈಖರಿಗೆ ಫಿದಾ ಆಗಿದ್ದಾರೆ. ಇದೀಗ ರಶ್ಮಿಕಾ ಜತೆ ಹೋಲಿಸಿ ನಿಜವಾದ ನ್ಯಾಶನಲ್ ಕ್ರಶ್ ನೀವೇ ಅಂತಾ ಸಾಯಿ ಪಲ್ಲವಿಯನ್ನು ಫ್ಯಾನ್ಸ್ ಹೊಗಳಿದ್ದಾರೆ. ಒಟ್ನಲ್ಲಿ ಜೂನ್ 17ಕ್ಕೆ ತೆರೆ ಕಾಣಲಿರುವ ವಿರಾಟ ಪರ್ವಂ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.

  • ನಕ್ಸಲ್ ಪಾತ್ರದಲ್ಲಿ ಸಾಯಿ ಪಲ್ಲವಿ : ಇಂತಹ ಪಾತ್ರದಲ್ಲಿ ನಾವು ನೋಡಲಾರೆವು ಎಂದ ಫ್ಯಾನ್ಸ್

    ನಕ್ಸಲ್ ಪಾತ್ರದಲ್ಲಿ ಸಾಯಿ ಪಲ್ಲವಿ : ಇಂತಹ ಪಾತ್ರದಲ್ಲಿ ನಾವು ನೋಡಲಾರೆವು ಎಂದ ಫ್ಯಾನ್ಸ್

    ರಾಣಾ ದಗ್ಗುಬಾಟಿ ನಾಯಕನಾಗಿ ನಟಿಸಿರುವ ‘ವಿರಾಟ ಪರ್ವಂ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಿರುವ ಸಾಯಿ ಪಲ್ಲವಿ, ನಕ್ಸಲೈಟ್ ಹುಡುಗಿಯ ಪಾತ್ರವನ್ನು ಮಾಡಿದ್ದಾರೆ. ಟ್ರೇಲರ್ ನಲ್ಲಿ ಈ ಪಾತ್ರವನ್ನು ಹೈಲೆಟ್ ಮಾಡಿ ತೋರಿಸಿದ್ದು, ಪಲ್ಲವಿ ಫ್ಯಾನ್ಸ್ ಕಸಿವಿಸಿಗೊಂಡಿದ್ದಾರೆ. ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

    ರಾಣಾ ದಗ್ಗುಬಾಟಿ ಈ ಸಿನಿಮಾದ ಹೀರೋ ಆಗಿದ್ದರೂ, ಪಲ್ಲವಿ ಪಾತ್ರಕ್ಕೂ ಅಷ್ಟೇ ಮಹತ್ವ ನೀಡಲಾಗಿದೆಯಂತೆ. ಹಾಗಾಗಿ ಟ್ರೇಲರ್ ತುಂಬಾ ಸಾಯಿ ಪಲ್ಲವಿಯದ್ದೇ ಅಬ್ಬರ. ನಕ್ಸಲ್ ನಾಯಕನ ಪ್ರೀತಿಗೆ ಬಿದ್ದ ಹುಡುಗಿಯೊಬ್ಬಳು, ತಾನೂ ನಕ್ಸಲ್ ಆಗುವ ಕಥೆಯನ್ನು ಈ ಸಿನಿಮಾ ಹೊಂದಿದೆಯಂತೆ. ಹಾಗಾಗಿ ಇಂತಹ ಪಾತ್ರವನ್ನು ನೀವು ಮಾಡಬಾರದು ಎಂದು ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ. ಇನ್ನೂ ಓದಿ : ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

    ವಿಭಿನ್ನ ಪಾತ್ರಗಳ ಮೂಲಕವೇ ಈವರೆಗೂ ಗುರುತಿಸಿಕೊಂಡಿರುವ ಸಾಯಿ ಪಲ್ಲವಿ, ಅಭಿಮಾನಿಗಳ ಮಾತಿಗೆ ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ಕೊಟ್ಟಿಲ್ಲ. ಆದರೆ, ಟ್ರೇಲರ್ ಬಗ್ಗೆ ಮಾತನಾಡಿ, ಇದೊಂದು ಭರವಸೆ ತುಂಬುವಂತಹ ಚಿತ್ರ ಎಂದಿದ್ದಾರೆ. 1990ರಲ್ಲಿ ನಡೆದ ಕೆಲ ಸತ್ಯ ಘಟನೆಗಳನ್ನು ಈ ಸಿನಿಮಾಗಾಗಿ ಅಳವಡಿಸಿಕೊಂಡಿದ್ದಾರಂತೆ ನಿರ್ದೇಶಕರು. ಹಾಗಾಗಿ ವಿರಾಟ ಪರ್ವಂ ಸಿನಿಮಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ ಎನ್ನುವ ನಂಬಿಕೆ ಅವರದ್ದು.

  • `ಫಿದಾ’ ಬ್ಯೂಟಿ ಸಾಯಿ ಪಲ್ಲವಿಗೆ ಕನ್ನಡ ಹೇಳಿಕೊಟ್ಟ ಶೀತಲ್ ಶೆಟ್ಟಿ

    `ಫಿದಾ’ ಬ್ಯೂಟಿ ಸಾಯಿ ಪಲ್ಲವಿಗೆ ಕನ್ನಡ ಹೇಳಿಕೊಟ್ಟ ಶೀತಲ್ ಶೆಟ್ಟಿ

    ಹುಭಾಷಾ ನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರೋ ಸಾಯಿ ಪಲ್ಲವಿ `ಗಾರ್ಗಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. `ಗಾರ್ಗಿ’ ಚಿತ್ರಕ್ಕೆ ಕನ್ನಡದಲ್ಲಿ ಸಾಯಿ ಪಲ್ಲವಿ ಧ್ವನಿ ನೀಡಿದ್ದಾರೆ. ಇನ್ನು ಸಾಯಿ ಪಲ್ಲವಿ ಕನ್ನಡ ಕಲಿಯಲು ನಟಿ ಶೀತಲ್ ಶೆಟ್ಟಿ ಸಾಥ್ ನೀಡಿದ್ದಾರೆ.

    ಸಾಯಿ ಪಲ್ಲವಿ ನಟನೆಯ ಬಹುನಿರೀಕ್ಷಿತ `ಗಾರ್ಗಿ’ ಸಿನಿಮಾಗೆ ಗೌತಮ್ ರಾಮಚಂದ್ರನ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೂಲಕ ಸಾಯಿಪಲ್ಲವಿ ಕನ್ನಡ ಸಿನಿಮಾರಂಗಕ್ಕೂ ಪಾದಾರ್ಪಣೆ ಮಾಡ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿ, ಸಾಮಾಜಿಕ ಜಾಲತಾಣದಲ್ಲಿ ಕಮಾಲ್ ಮಾಡುತ್ತಿದೆ. `ಗಾರ್ಗಿ’ ಚಿತ್ರಕ್ಕಾಗಿ ತಮ್ಮ ಪಾತ್ರಕ್ಕೆ ಸಾಯಿ ಪಲ್ಲವಿ ಅವರೇ 5 ದಿನಗಳಲ್ಲಿ ಕನ್ನಡ ಕಲಿತು ಡಬ್ ಮಾಡಿದ್ದಾರೆ. ನಟಿಯ ಕನ್ನಡ ಕಲಿಕೆಗೆ ಶೀತಲ್ ಶೆಟ್ಟಿ ಕೈ ಜೋಡಿಸಿದ್ದಾರೆ.

    `ಗಾರ್ಗಿ’ ಚಿತ್ರ ತೆಲುಗು, ತಮಿಳು, ಮಲಯಾಳಂ ಜತೆ ಕನ್ನಡದಲ್ಲೂ ತೆರೆ ಕಾಣುತ್ತಿದೆ. ಈ ಚಿತ್ರದ ಕನ್ನಡ ಡಬ್ಬಿಂಗ್‌ಗಾಗಿ ನಟಿ ಸಾಯಿ ಪಲ್ಲವಿ ಬೆಂಗಳೂರಿಗೆ ಬಂದಿದ್ರು. ನಿಷ್ಠೆಯಿಂದ ಕನ್ನಡ ಕಲಿತು `ಗಾರ್ಗಿ’ಗೆ ಸ್ವತಃ ಫಿದಾ ನಟಿ ಡಬ್ಬಿಂಗ್ ಮಾಡಿದ್ದಾರೆ. ಕನ್ನಡ ಹಿರಿಯ ನಿರ್ದೇಶಕ ಎಆರ್ ಬಾಬು ಅವರ ಪುತ್ರ ಎಆರ್ ಶಾನ್ ತಮಿಳು ಅವತರಣಿಕೆಯನ್ನ ಕನ್ನಡಕ್ಕೆ ಭಾಷಾಂತರ ಮಾಡಿದ್ರು. ಶೀತಲ್ ಶೆಟ್ಟಿ ಅವರ `ಶೀ ಟೈಲ್ಸ್’ ಡಬ್ಬಿಂಗ್ ಸ್ಟುಡಿಯೋದಲ್ಲಿ ಸಾಯಿ ಪಲ್ಲವಿ ಕನ್ನಡ ಅವತರಣಿಕೆಯಲ್ಲಿ ಡಬ್ಬಿಂಗ್ ಮಾಡಿದ್ದಾರೆ. ಮೊದಲ ಪ್ರಾಜೆಕ್ಟ್ ಸಾಯಿ ಪಲ್ಲವಿ ಜತೆ ಕೆಲಸ ಮಾಡಿದ ಕುರಿತು ಶೀತಲ್ ಶೆಟ್ಟಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಖುಷಿಯಿಂದ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಟಗರು-2ನಲ್ಲಿ ಶಿವಣ್ಣನ ಜತೆ ನಟಿಸಬೇಕಿತ್ತು ಅಪ್ಪು!

     

    View this post on Instagram

     

    A post shared by Sheetal Shetty (@isheetalshetty)

    `ಗಾರ್ಗಿ’ ಎನ್ನುವ ತಮಿಳು ಸಿನಿಮಾ ಶೀಟೈಲ್ಸ್ ಸ್ಟುಡಿಯೋಗೆ ಭಾಷಾನುವಾದ ಹಾಗೂ ಧ್ವನಿ ಮರುಲೇಪನಕ್ಕೆ ಬಂದಾಗ, ನಮಗೆ ಹೆಮ್ಮೆ ಜೊತೆಗೆ ಭಯ, ದುಗುಡ, ಸಾಯಿ ಪಲ್ಲವಿ ಎನ್ನುವ ಬೃಹತ್ ಕಲಾವಿದೆಯ ಅಭಿಮಾನ ಎಲ್ಲವೂ ಜೊತೆಗೆ ಸೇರಿ ಬಂದಿತ್ತು. ಆದರೆ ಸಾಯಿ ಪಲ್ಲವಿ ಅವ್ರಿಗೆ ಕನ್ನಡ ಹೇಳಿಕೊಟ್ಟಿದ್ದು ಒಂದು ಪುಟ್ಟ ಮಗುವಿಗೆ ತುತ್ತನ್ನಿಟ್ಟು ಕನ್ನಡ ಕಲಿಸಿದಂತೆ ಆಯ್ತು. ನಮ್ಮ ಸ್ಟೂಡಿಯೋಗೆ ಬಂದು, ನಮ್ಮ ಕನ್ನಡ ಭಾಷೆಯನ್ನು ಸಂಕೋಚವಿಲ್ಲದೆ ಕಲಿತು, ಸುಲಲಿತವಾಗಿ ತಮ್ಮ ಸಿನಿಮಾಗೆ, ಭಾಷೆಗೆ ತಕ್ಕ ಭಾವ ತುಂಬಿಸಿ ಈಗ ನಮ್ಮವರು ಹೆಮ್ಮೆ ಪಡುವಂತಹ ಕನ್ನಡತಿಯಾಗಿದ್ದೀರಿ. ನಿಮಗೆ ತುಂಬು ಹೃದಯದ ಧನ್ಯವಾದಗಳು. ಈ ಅವಕಾಶಕ್ಕೆ ಮುಖ್ಯ ಕಾರಣರಾದ `ಗಾರ್ಗಿ’ ಸಿನಿಮಾದ ನಿರ್ದೇಶಕ ಗೌತಮ್ ರಾಮಚಂದ್ರನ್ ಮತ್ತು ನಟ ರಕ್ಷಿತ್ ಶೆಟ್ಟಿಗೆ ಶೀತಲ್ ಧನ್ಯವಾದ ತಿಳಿಸಿದ್ದಾರೆ.

     

    View this post on Instagram

     

    A post shared by Sheetal Shetty (@isheetalshetty)

    ಸಾಯಿ ಪಲ್ಲವಿ ಬೆಂಗಳೂರಿಗೆ ಬಂದು ಶೀತಲ್ ಶೆಟ್ಟಿ ಮತ್ತು ಟೀಮ್‌ನೊಂದಿಗೆ 5 ದಿನಗಳಲ್ಲಿ ಕನ್ನಡ ಕಲಿತು ನಿಷ್ಠೆಯಿಂದ ತಮ್ಮ ಪಾತ್ರಕ್ಕೆ ಡಬ್ ಮಾಡಿದ್ದಾರೆ. ದಕ್ಷಿಣ ಭಾರತದ ಸ್ಟಾರ್ ನಟಿಯಾಗಿದ್ದರೂ ಕಲಿಕೆ, ಸಿನಿಮಾ ಅಂತಾ ಬಂದಾಗ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಇನ್ನು ವೈರಲ್ ಆಗ್ತಿರೋ `ಗಾರ್ಗಿ’ ಕನ್ನಡ ವಿಡಿಯೋ ನೋಡಿ ಫಿದಾ ಆಗಿರೋ ಫ್ಯಾನ್ಸ್, ಸಿನಿಮಾಗಾಗಿ ಕಾಯ್ತಿದ್ದಾರೆ.

  • ಸೂಪರ್ ಸ್ಟಾರ್ ಕಮಲ್ ಹಾಸನ್ ಚಿತ್ರದಲ್ಲಿ ಸಾಯಿ ಪಲ್ಲವಿ

    ಸೂಪರ್ ಸ್ಟಾರ್ ಕಮಲ್ ಹಾಸನ್ ಚಿತ್ರದಲ್ಲಿ ಸಾಯಿ ಪಲ್ಲವಿ

    ಕ್ಷಿಣ ಭಾರತದ ಸ್ಟಾರ್ ನಟಿಯರಲ್ಲಿ ಒಬ್ಬರಾದ ಸಾಯಿ ಪಲ್ಲವಿ ಮತ್ತೆ ಸುದ್ದಿಯಲ್ಲಿದ್ದಾರೆ. ನಟನೆಯಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿಗೆ ಸಿನಿಮಾಗಳ ಮೂಲಕ ಸಾಯಿಪಲ್ಲವಿ ಉತ್ತರ ಕೊಟ್ಟಿದ್ದಾರೆ. `ಗಾರ್ಗಿ’ ಚಿತ್ರದ ಬೆನ್ನೆಲ್ಲೆ ಮತ್ತೊಂದು ಪ್ರಾಜೆಕ್ಟ್‌ನಲ್ಲಿ `ಪ್ರೇಮಂ’ ನಟಿ ಕಾಣಿಸಿಕೊಳ್ತಿದ್ದಾರೆ. ಸೂಪರ್ ಸ್ಟಾರ್ ಕಮಲ್ ಹಾಸನ್ ಚಿತ್ರದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ.

    ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಬದಲು ಬೋಲ್ಡ್ ಆಗಿ ನಟಿಸಿ, ಆ ಪಾತ್ರವೇ ತಾವಾಗಿ ನಟಿಸೋ ಪ್ರತಿಭಾವಂತ ನಟಿ ಸಾಯಿ ಪಲ್ಲವಿ. ಗಾರ್ಗಿ ಫಸ್ಟ್ ಲುಕ್‌ನಲ್ಲಿ ಮಿಂಚಿದ ನಂತರ ತಮ್ಮ ಫ್ಯಾನ್ಸ್‌ಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಭಾರತ ಚಿತ್ರರಂಗದ ಸ್ಟಾರ್ ಕಮಲ್ ಹಾಸನ್ ಚಿತ್ರದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಪವರ್‌ಫುಲ್ ಪಾತ್ರದ ಮೂಲಕ ಕಮಾಲ್ ಮಾಡಲು ಸಾಯಿ ಪಲ್ಲವಿ ರೆಡಿಯಾಗಿದ್ದಾರೆ.

    ಕಮಲ್ ಹಾಸನ್ ಮತ್ತು ಶಿವಕಾರ್ತಿಕೇಯನ್ ಅವರ ಹೊಸ ಪ್ರಾಜೆಕ್ಟ್ನಲ್ಲಿ ಸಾಯಿ ಪಲ್ಲವಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಶಿವಕಾರ್ತಿಕೇಯನ್‌ಗೆ ಜೋಡಿಯಾಗಿ ನಟಿಸಲಿದ್ದಾರೆ. ಈ ಚಿತ್ರಕ್ಕೆ ಕಮಲ್ ಹಾಸನ್ ಬಂಡವಾಳ ಹೂಡಲಿದ್ದಾರೆ. ರಾಜ್ ಕಮಲ್ ಬ್ಯಾನರ್‌ನ 51ನೇ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿ ಅಂತಾ ಟ್ವಿಟರ್ ಮೂಲಕ ಅಧಿಕೃತವಾಗಿ ಹಂಚಿಕೊಂಡಿದ್ದಾರೆ.

    ಶಿವಕಾರ್ತಿಕೇಯನ್ ಮತ್ತು ಸಾಯಿಪಲ್ಲವಿ ಕಮಲ್ ಹಾಸನ್ ಕೂಡ ನಟಿಸಲಿದ್ದಾರೆ. ಚಿತ್ರ ನಿರ್ಮಾಣದ ಜತೆ ಪವರ್‌ಫುಲ್ ಪಾತ್ರದಲ್ಲಿ ಕಮಲ್ ಹಾಸನ್ ನಟಿಸಲಿದ್ದಾರೆ. ವಿಶೇಷ ಅಂದ್ರೆ ಈ ಹೊಸ ಚಿತ್ರಕ್ಕೆ ಕಥೆ ಬರೆದಿರುವುದು ಕೂಡ ಕಮಲ್ ಹಾಸನ್ ಅವರೇ, ಇನ್ನು ಈ ಚಿತ್ರಕ್ಕೆ ರಾಜ್‌ಕುಮಾರ್ ಪೆರಿಯಸ್ವಾಮಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದನ್ನೂ ಓದಿ: ಜ್ಯೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿ ನಾರಾಯಣ್ ನಿಧನ

    `ಗಾರ್ಗಿ’ ಹೆಸರಿನ ಮಹಿಳಾ ಪ್ರಧಾನ ಚಿತ್ರದಲ್ಲಿ ಸಾಯಿ ಪಲ್ಲವಿ ಕಾಣಿಸಿಕೊಂಡಿದ್ದು, ಫಸ್ಟ್ ಲುಕ್ ಮೂಲಕ ಈಗಾಗಲೇ ಅಭಿಮಾನಿಗಳ ಮನಗೆದ್ದಿದ್ದಾರೆ. ಈಗ ಕಮಲ್ ಹಾಸನ್ ಅವರ ಪ್ರಾಜೆಕ್ಟ್‌ನಲ್ಲಿ ನಟಿಸಲು ಸಜ್ಜಾಗಿದ್ದಾರೆ. ಒಟ್ನಲ್ಲಿ ಈ ಸುದ್ದಿ ಕೇಳಿ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ.

  • ‘ಗಾರ್ಗಿ’ ಸಿನಿಮಾದ ಮೂಲಕ ಕನ್ನಡಕ್ಕೆ ಬಂದ ಸಾಯಿ ಪಲ್ಲವಿ

    ‘ಗಾರ್ಗಿ’ ಸಿನಿಮಾದ ಮೂಲಕ ಕನ್ನಡಕ್ಕೆ ಬಂದ ಸಾಯಿ ಪಲ್ಲವಿ

    ರಾಷ್ಟ್ರ ಪ್ರಶಸ್ತಿ ವಿಜೇತ ಮಂಸೋರೆ ನಿರ್ದೇಶನದ ಸಿನಿಮಾದ ಮೂಲಕ ಸಾಯಿ ಪಲ್ಲವಿ ಕನ್ನಡಕ್ಕೆ ಬರಲಿದ್ದಾರೆ ಎಂದು ಸುದ್ದಿಯಾಗಿತ್ತು. ಮಂಸೋರೆ ಕೂಡ ಸಾಯಿ ಪಲ್ಲವಿಯನ್ನು ಭೇಟಿ ಮಾಡಿ ಕಥೆ ಹೇಳಿದ್ದಾರೆ ಎನ್ನುವ ಸುದ್ದಿಯೂ ಇತ್ತು. ಆದರೆ, ಅದಕ್ಕೂ ಮುನ್ನ ಸಾಯಿ ಪಲ್ಲವಿ ಹೊಸ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಲಿದ್ದಾರೆ. ಈ ಸಿನಿಮಾ ಕನ್ನಡದಲ್ಲಿ ಮಾತ್ರವಲ್ಲ, ನಾಲ್ಕು ಭಾಷೆಗಳಲ್ಲಿ ತಯಾರಾಗಲಿದೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

    ಇಂದು ಸಾಯಿ ಪಲ್ಲವಿ ಅವರ ಹುಟ್ಟು ಹಬ್ಬ. ಈ ಬರ್ತಡೇಗಾಗಿ ಅವರ ನಟನೆಯ ಹೊಸ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು, ಈ ಚಿತ್ರಕ್ಕೆ ಗಾರ್ಗಿ ಎಂದು ಹೆಸರಿಡಲಾಗಿದೆ. ಈ ಸಿನಿಮಾ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ ನಿರ್ಮಾಣವಾಗಲಿದೆಯಂತೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ನ್ಯಾಯಕ್ಕಾಗಿ ಹೋರಾಟ ಮಾಡುವ ಮಹಿಳೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ.  ಇದನ್ನೂ ಓದಿ : ಮಿಸೆಸ್ ಇಂಡಿಯಾ ಆಗಲು ನಿವೇದಿತಾ ಗೌಡ ತಯಾರಿ : ಕ್ಯಾಟ್ ವಾಕ್ ವಿಡಿಯೋದಲ್ಲಿ ಚಂದನ್ ಶೆಟ್ಟಿ ಬೊಂಬೆ

    ಗಾರ್ಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಸ್ವತಃ ಸಾಯಿ ಪಲ್ಲವಿ ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಿದ್ದು, ಹೊಸ ಚಿತ್ರಕ್ಕೆ ಹಾರೈಸಿ ಎಂದು ಕೇಳಿಕೊಂಡಿದ್ದಾರೆ. ಈ ಫಸ್ಟ್ ಲುಕ್ ವಿಶೇಷ ಅರ್ಥ ನೀಡುತ್ತಿದ್ದು, ನ್ಯಾಯ ದೇವತೆಯ ಮುಂದೆ ಬ್ಯಾಗ್ ಹಾಕಿಕೊಂಡು ಅಸಹಾಯಕ ಮಹಿಳೆಯಂತೆ ಸಾಯಿ ಪಲ್ಲವಿ ಪೋಸ್ ಕೊಟ್ಟಿದ್ದಾರೆ. ಇದನ್ನೂ ಓದಿ : ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಜತೆ ಇರೋ ಹುಡುಗ ಯಾರು?

    ಸಾಯಿ ಪಲ್ಲವಿ ಸಿನಿಮಾ ರಂಗದಿಂದಲೇ ದೂರವಾಗುತ್ತಾರೆ ಎನ್ನುವ ಮಾತಿತ್ತು. ಕೆಲವೇ ದಿನಗಳಲ್ಲೇ ಅವರು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿಯೂ ಹರಡಿತ್ತು. ಅದಕ್ಕೆ ಅವರು ಬೇರೆ ರೀತಿಯಲ್ಲೇ ಉತ್ತರ ಕೊಟ್ಟಿದ್ದರು. ಇದೀಗ ಮದುವೆ ಮತ್ತು ಸಿನಿಮಾ ರಂಗದಿಂದ ದೂರವಾಗುವ ಪ್ರಶ್ನೆಗಳಿಗೆ ‘ಗಾರ್ಗಿ’ ಮೂಲಕ ಉತ್ತರಿಸಿದ್ದಾರೆ ಸಾಯಿ ಪಲ್ಲವಿ.