Tag: ಸಾಯಿ ಪ್ರಕಾಶ್

  • ದರ್ಶನ್ ಕೆಟ್ಟವನಲ್ಲ, ತಪ್ಪು ತಿದ್ದಿಕೊಳ್ಳುತ್ತಿದ್ದಾರೆ: ನಿರ್ದೇಶಕ ಸಾಯಿ ಪ್ರಕಾಶ್

    ದರ್ಶನ್ ಕೆಟ್ಟವನಲ್ಲ, ತಪ್ಪು ತಿದ್ದಿಕೊಳ್ಳುತ್ತಿದ್ದಾರೆ: ನಿರ್ದೇಶಕ ಸಾಯಿ ಪ್ರಕಾಶ್

    ಸ್ಯಾಂಡಲ್‌ವುಡ್ ನಿರ್ದೇಶಕ ಕಮ್ ನಿರ್ಮಾಪಕ ಸಾಯಿ ಪ್ರಕಾಶ್ (Sai Prakash) ಅವರು ದರ್ಶನ್ (Darshan) ಪ್ರಕರಣದ ಕುರಿತು ಮಾತನಾಡಿದ್ದಾರೆ. ದರ್ಶನ್ ಕೋಪ ಬಿಡಬೇಕು. ದರ್ಶನ್ ಕೆಟ್ಟವನಲ್ಲ, ತಪ್ಪು ತಿದ್ದಿಕೊಳ್ಳುತ್ತಿದ್ದಾರೆ ಎಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸಾಯಿ ಪ್ರಕಾಶ್ ಮಾತನಾಡಿದ್ದಾರೆ.‌ ಇದನ್ನೂ ಓದಿ:ಮರು ಮದುವೆಯಾದ ಬಾಲಿವುಡ್ ನಟಿ ಸನ್ನಿ ಲಿಯೋನ್

    ಬೇಕಂತ ಅವರು ತಪ್ಪು ಮಾಡಿಲ್ಲ. ಕೋಪ ಇರುವಾಗ ಏನು ಮಾಡ್ತೀವಿ ಅಂತ ಗೊತ್ತಾಗಲ್ಲ. ಮಾಡಿದ ಮೇಲೆ ಗೊತ್ತಾಗುತ್ತದೆ ತಪ್ಪು ಅಂತ. ದರ್ಶನ್‌ಗೆ ಕೋಪ, ಎಮೋಷನ್ ಜಾಸ್ತಿ. ಅದೊಂದು ಕಂಟ್ರೋಲ್ ಮಾಡಿಕೊಂಡರೆ ಸಾಕು ತುಂಬಾ ಒಳ್ಳೆಯ ನಟ. ತುಂಬಾ ಸಮಾಜ ಸೇವೆ ಮಾಡಿದ್ದಾರೆ. ಜನಸೇವೆ ಮಾಡೋದ್ದಕ್ಕೆ ಇನ್ನೂ ಅವಕಾಶವಿದೆ. ಭಗವಂತ ಅವನಿಗೆ ನಿರೀಕ್ಷೆ ಮಾಡಿದಷ್ಟು ಕೊಟ್ಟಿದ್ದಾನೆ. ದರ್ಶನ್‌ಗೆ ತುಂಬಾ ಒಳ್ಳೆತನವಿದೆ. ಇದು ಗೊತ್ತಿಲ್ಲದೇ ಮಾಡಿದ ತಪ್ಪು ಅಂದುಕೊಂಡಿದ್ದೇನೆ ಎಂದಿದ್ದಾರೆ.

    ಆ ತಪ್ಪಿಗೆ ಎಷ್ಟು ನೋವು ಅನುಭವಿಸುತ್ತಿದ್ದಾರೆ. ಆ ಬೆನ್ನು ನೋವು ಬಂತು, ಜೀವನದಲ್ಲಿ ಸಂತೋಷ ಇಲ್ಲ. ಒಬ್ಬರೇ ಒಂದು ಕಡೆ ಕೂರಬೇಕು. ಅವರಿಗೂ ಈಗೆಲ್ಲಾ ಅರ್ಥವಾಗಿರುತ್ತದೆ. ದರ್ಶನ್ ನೋಡಿ ನಾವೆಲ್ಲಾ ಕಲಿಯಬೇಕು ಎನಿಸುತ್ತಿದೆ. ಅವರು ಮಾಡಿದ ಸಣ್ಣ ತಪ್ಪಿನಿಂದ ಏನು ಅನುಭವಿಸುತ್ತಿದ್ದಾರೋ, ಅದನ್ನು ಯಾರು ಮಾಡಬಾರದು ಅನ್ನೋದು ತೋರಿಸಿ ಕೊಟ್ಟಿದೆ. ಅವರಿಗೆ ಒಳ್ಳೆಯದಾಗಲಿ ಅಂತ ಬಾಬಾಗೆ ಪ್ರಾರ್ಥನೆ ಮಾಡುತ್ತೇನೆ. ಇನ್ಮುಂದೆ ದೇವರು ಅವರಿಗೆ ಯಾವುದೇ ಕಷ್ಟ ಕೊಡದೇ ಇರಲಿ. ಈಗ ಅವರಿಗೆ ಮಧ್ಯಂತರ ಬೇಲ್ ಸಿಕ್ಕಿದೆ. ಅವರ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಲಿ. ಅವರ ಸಿನಿಮಾ ಮೇಲೆ ಕೆಲ ನಿರ್ಮಾಪಕರು ಹಣ ಹೂಡಿದ್ದಾರೆ. ಕೋಟ್ಯಾಂತರ ಜನ ಅಭಿಮಾನಿಗಳಿದ್ದಾರೆ ಅವರಿಗೆ ಒಳ್ಳೆಯದಾಗಬೇಕು ಎಂದಿದ್ದಾರೆ.

    ದರ್ಶನ್ ಕೆಟ್ಟವನಲ್ಲ, ಒಳ್ಳೆಯವರೇ ತಪ್ಪು ಮಾಡಿದ್ದಾರೆ. ಈಗ ಅವರು ತಿದ್ದಿಕೊಳ್ಳುತ್ತಿದ್ದಾರೆ. ಅವರಿಗೆ ಮಧ್ಯಂತರ ಬೇಲ್ ಸಿಕ್ಕಿದೆ, ಮುಂದೆ ರೆಗ್ಯೂಲರ್ ಬೇಲ್ ಆಗುತ್ತದೆ ಅಂದುಕೊಂಡಿದ್ದೇನೆ. ಬೇಕಂತ ತಪ್ಪು ಮಾಡಿದ್ರೆ ಕ್ರೈಮ್ ಆಗುತ್ತದೆ. ಬೈ ಮಿಸ್ಟೇಕ್ ಆಗಿ ಮಾಡಿದ್ದು, ಅದಕ್ಕೆ ಕ್ಷಮೆ ಇದೆ ಅಂದುಕೊಂಡಿದ್ದೇನೆ. ದರ್ಶನ್ ಮೇಲೆ ತೂಗುದೀಪ ಅವರ ಹಾರೈಕೆಯಿದೆ. ತೂಗುದೀಪ ಅವರು ರಾಜ್‌ಕುಮಾರ್ ಜೊತೆ ಅದೆಷ್ಟೋ ಸಿನಿಮಾಗಳನ್ನು ಮಾಡಿದ್ದಾರೆ. ಅವರು ತುಂಬಾ ಒಳ್ಳೆಯವರು ದರ್ಶನ್‌ಗೂ ಒಳ್ಳೆಯದಾಗುತ್ತದೆ ಎಂದಿದ್ದಾರೆ.

  • ‘ಭಗೀರಥ’ ಚಿತ್ರಕ್ಕೆ ಚಾಲನೆ: ಮಠಾಧಿಪತಿ ಪಾತ್ರದಲ್ಲಿ ನಿರ್ದೇಶಕ ಸಾಯಿ ಪ್ರಕಾಶ್

    ‘ಭಗೀರಥ’ ಚಿತ್ರಕ್ಕೆ ಚಾಲನೆ: ಮಠಾಧಿಪತಿ ಪಾತ್ರದಲ್ಲಿ ನಿರ್ದೇಶಕ ಸಾಯಿ ಪ್ರಕಾಶ್

    ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ‘ಭಗೀರಥ’ (Bhagirath) ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ‌ಮೊದಲ ಸನ್ನಿವೇಶಕ್ಕೆ ಹೆಸರಾಂತ ನಿರ್ದೇಶಕ ಸಾಯಿಪ್ರಕಾಶ್ (Sai Prakash) ಆರಂಭ ಫಲಕ ತೋರಿದರು. ರಾಜೇಶ್ ರಾಜಘಟ್ಟ ಕ್ಯಾಮೆರಾ ಚಾಲನೆ ಮಾಡಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ‘ನಾನು 2005 ರಲ್ಲಿ ಬಾಯ್ ಫ್ರೆಂಡ್ ಮೂಲಕ ನನ್ನ ಚಿತ್ರರಂಗದ ಜರ್ನಿ ಆರಂಭವಾಯಿತು. ನಂತರ ಕೆಲವು ಚಿತ್ರಗಳಲ್ಲಿ ನಟಿಸಿದ್ದೇನೆ ಹಾಗೂ ನಿರ್ದೇಶಿಸಿದ್ದೇನೆ. ಈಗ ಭಗೀರಥ ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಯಾವುದಾದರೂ ಒಂದು ಕೆಲಸವನ್ನು ಬಿಡದೇ ಸಾಧಿಸುವುದನ್ನು ಭಗೀರಥ ಪ್ರಯತ್ನ ಎನ್ನುತ್ತಾರೆ. ಈ ಪದಕ್ಕೂ ನಮ್ಮ ಚಿತ್ರಕ್ಕೂ ಸಂಬಂಧವಿದೆ‌. ಇಂದು ಮುಹೂರ್ತ ಸಮಾರಂಭ ನೆರವೇರಿದೆ. ಹತ್ತನೇ ತಾರೀಖಿನಿಂದ ಮೈಸೂರಿನಲ್ಲಿ ಚಿತ್ರೀಕರಣ ಒಂದೇ ಹಂತದಲ್ಲಿ ನಡೆಯಲಿದೆ.  ಜಯಪ್ರಕಾಶ್(Jaya Prakash) , ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿ ಕಾಳೆ, ಬಾಲ ರಾಜವಾಡಿ, ಸುರಭಿ ರವಿ, ನಯನ, ನಿಖಿತ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಅವರು ಮಠಾಧಿಪತಿಗಳ ಪಾತ್ರ ನಿರ್ವಹಿಸುತ್ತಿದ್ದಾರೆ. ಕಥೆ ಮೆಚ್ಚಿ, ರಮೇಶ್ ಹಾಗೂ ಭೈರಪ್ಪ ಮೈಸೂರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ ಎಂದು ನಿರ್ದೇಶಕ ರಾಮ್ ಜನಾರ್ದನ್ (Ram Janardhan) ತಿಳಿಸಿದರು‌.

    ಜಮಾನ ಚಿತ್ರದಲ್ಲಿ ನಟಿಸಿದ್ದೆ ಎಂದು ಮಾತು ಆರಂಭಿಸಿದ ಜಯಪ್ರಕಾಶ್, ಈಗ ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದೇನೆ. ನಿರ್ದೇಶಕರು ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು. ಈ ಚಿತ್ರದಲ್ಲಿ ಪತ್ರಕರ್ತೆಯಾಗಿ ಕಾಣಿಸಿಕೊಳ್ಳುತ್ತಿರುವುದಾಗಿ ನಾಯಕಿ ಚಂದನ ರಾಘವೇಂದ್ರ ತಿಳಿಸಿದರು‌. ನಾನು ನಿರ್ದೇಶನ ಮಾಡಿರುವುದು ಹೆಚ್ಚು. ಅಭಿನಯಿಸಿರುವುದು ಕಡಿಮೆ. ನಿರ್ದೇಶಕರು ಮಠಾಧಿಪತಿ ಪಾತ್ರವನ್ನು ನೀವೇ ಮಾಡಬೇಕೆಂದರು ಮಾಡುತ್ತಿದ್ದೇನೆ ಎಂದು ಸಾಯಿಪ್ರಕಾಶ್ ಹೇಳಿದರು.

    ನಿರ್ಮಾಪಕರಾದ ರಮೇಶ್ ಹಾಗೂ ಭೈರಪ್ಪ ಮೈಸೂರು ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು.‌ ಚಿತ್ರದಲ್ಲಿ ನಟಿಸುತ್ತಿರುವ ನಯನ ಹಾಗೂ ಚೇತನ್ ತಮ್ಮ ಪಾತ್ರದ ಕುರಿತು ಮಾತನಾಡಿದರು. ನಾನು ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. ಜನಾರ್ದನ್ ಅವರ ಜೊತೆ ಇದು ಮೊದಲ ಚಿತ್ರ. ಮಾಧ್ಯಮ ಹಾಗೂ ಉದ್ಯಮದ ನಡುವೆ ಭಗೀರಥ ಚಿತ್ರದ ಕಥೆ ಸಾಗುತ್ತದೆ ಎನ್ನುತ್ತಾರೆ  ಸಂಭಾಷಣೆಕಾರ ಜೆ.ಎಂ.ಪ್ರಹ್ಲಾದ್.

    ಪ್ರದೀಪ್ ವರ್ಮ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಸೂರಿ ಚಿತ್ತೂರು ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಭಗೀರಥ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಪ್ರಿಯಾಂಕಾ ಉಪೇಂದ್ರ ಈಗ ವಿಶ್ವರೂಪಿಣಿ ಹುಲಿಗೆಮ್ಮ

    ನಟಿ ಪ್ರಿಯಾಂಕಾ ಉಪೇಂದ್ರ ಈಗ ವಿಶ್ವರೂಪಿಣಿ ಹುಲಿಗೆಮ್ಮ

    ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಭಕ್ತಿಪ್ರದಾನ ಚಿತ್ರಗಳಿಗೆ ಹೆಸರಾದವರು. ಈಗಾಗಲೇ ಹಲವಾರು ಭಕ್ತಿರಸ ಸಾರುವ ಚಿತ್ರಗಳನ್ನು ನಿರ್ದೇಶಿಸಿರುವ ಅವರೀಗ ಭಕ್ತರನ್ನು ಸದಾ ಕಾಯುವ ತಾಯಿ ಶ್ರೀಹುಲಿಗೆಮ್ಮ ದೇವಿಯ ಕಥೆಯನ್ನು ಹೇಳಹೊರಟಿದ್ದಾರೆ. ‘ವಿಶ್ವರೂಪಿಣಿ ಹುಲಿಗೆಮ್ಮ’ ಹೆಸರಿನ ಈ ಚಿತ್ರದ ಮುಹೂರ್ತ ಸಮಾರಂಭ ಕೊಪ್ಪಳ ತಾಲ್ಲೂಕಿನ ಶ್ರೀಹುಲಿಗೆಮ್ಮ ದೇವಸ್ಥಾನದಲ್ಲಿ ನೆರವೇರಿತು.

    ಚಿತ್ರದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಅವರು ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದು, ಈ ಕುರಿತಂತೆ ಮಾತನಾಡಿದ ಅವರು, ಹುಲಿಗೆಮ್ಮ ದೇವಿಯ ಮಹಿಮೆ ಬಹಳ ದೊಡ್ಡದು, ಭಕ್ತರು  ಬೇಡಿದ್ದನ್ನು ಕರುಣಿಸುವ ಆ ತಾಯಿಯ ಚಿತ್ರಕ್ಕೆ ನನ್ನನ್ನು ಆಯ್ಕೆಮಾಡಿದ್ದು ತುಂಬಾ ಸಂತೋಷವಾಗಿದೆ, ಮೊದಲಬಾರಿಗೆ ನಾನು ಭಕ್ತಿಪ್ರದಾನ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅದೂ ಸಾಯಿಪ್ರಕಾಶ್ ಅವರು ಚಿತ್ರವನ್ನು ನಿರ್ದೇಶಿಸುತ್ತಿರುವುದು ಇನ್ನೂ ಖುಷಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಈಗೀಗ ಚೈತ್ರಾ ಹಳ್ಳಿಕೇರಿ ಮುಖವಾಡ ಕಳಚ್ತಾ ಇದ್ದಾರೆ : ಸ್ಪೂರ್ತಿ ಗೌಡ

    ನಂತರ ನಿರ್ದೇಶಕ ಸಾಯಿಪ್ರಕಾಶ್ ಮಾತನಾಡುತ್ತ ಇದು ನನ್ನ ನಿರ್ದೇಶನದ ೧೦೫ನೇ ಚಿತ್ರ. ಕಲ್ಯಾಣ ಕರ್ನಾಟಕದ ಜನರ ಮಾತೆ ಶ್ರೀಹುಲಿಗೆಮ್ಮ ದೇವಿಯ ಚರಿತ್ರೆಯನ್ನು ಈ ಚಿತ್ರದ ಮೂಲಕ ಹೇಳಲು ಹೊರಟಿದ್ದೇನೆ. ಸಂಜಯಕುಮಾರ್ ಅವರು ಚಿತ್ರಕಥೆ, ಸಂಭಾಷಣೆ ರಚಿಸಿದ್ದಾರೆ. ಭಾವನಾ ಪ್ರೊಡಕ್ಷನ್ಸ್ ಮೂಲಕ ಗೌರಮ್ಮ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹುಲಿಗೆಮ್ಮ ದೇವಿಯ ಚರಿತ್ರೆಯನ್ನು  ಇಡೀ ವಿಶ್ವಕ್ಕೆ ತೋರಿಸುವಂತಹ ಕಾರ್ಯವನ್ನು ಈ ತಂಡ ಮಾಡುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಿರ್ಮಾಪಕರಾದ ಗೌರಮ್ಮ, ನಟಿ ಭಾವನಾ, ಹಾಸ್ಯನಟ ಸಂಜು ಬಸಯ್ಯ, ನಟಿ ಕವಿತಾ ಅಪೂರ್ವ ಸೇರಿದಂತೆ ಚಿತ್ರತಂಡದ ಎಲ್ಲರೂ ಉಪಸ್ಥಿತರಿದ್ದರು. ಅಣಜಿ ನಾಗರಾಜ್ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

    ‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

    ನ್ನಡ ಚಿತ್ರರಂಗದಲ್ಲಿ ಓಂ ಸಾಯಿಪ್ರಕಾಶ್ ತಾಯಿ ಸೆಂಟಿಮೆಂಟ್, ಅಣ್ಣ ತಂಗಿ ಸೆಂಟಿಮೆಂಟ್ ಚಿತ್ರಗಳ ನಿರ್ದೇಶಕ ಎಂದೇ ಹೆಸರಾದವರು. ಅವರೀಗ ತಮ್ಮ ನೂರನೇ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ದೇವಮಾನವ  ಪುಟ್ಟಪರ್ತಿ ಸಾಯಿಬಾಬಾ ಅವರ ಮಹಿಮೆಗಳನ್ನು ಹೇಳುವ  ಕಥಾಹಂದರ ಇಟ್ಟುಕೊಂಡು ಶ್ರೀ ಸತ್ಯಸಾಯಿ ಅವತಾರ ಎಂಬ ಹೆಸರಿನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.   ಸಾಯಿವೇದಿಕ್ ಫಿಲಂಸ್ ಮೂಲಕ ಡಾ.ದಾಮೋದರ್ ಅವರು‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದನ್ನೂ ಓದಿ:ಡಾ.ಪುನೀತ್ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ : ಅಪ್ಪು ಕುಟುಂಬಕ್ಕೆ ಆಹ್ವಾನ

    ಕಳೆದ ಸೋಮವಾರ ಸಂಜೆ ಕಲಾವಿದರ ಸಂಘದ ಆವರಣದಲ್ಲಿ  ಈ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನೆರವೇರಿತು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ , ಮಹರ್ಷಿ ಆನಂದ ಗುರೂಜಿ ಚಿತ್ರದ ಶೀರ್ಷಿಕೆ  ಅನಾವರಣಗೊಳಿಸಿದರು. ಸಾಯಿಗೋಲ್ಡ್ ಸರವಣ , ನಿರ್ಮಾಪಕ  ಡಾ.ದಾಮೋದರ್, ಹಿರಿಯ ಸಾಹಿತಿ ದೊಡ್ಡರಂಗೇಗೌಡರು, ಡಿಂಗ್ರಿ ನಾಗರಾಜ್, ಗಣೇಶರಾವ್ ಕೇಸರಕರ್ ಮುಂತಾದವರು ಸಮಾರಂಭದ ಮುಖ್ಯ ಆತಿಥಿಗಳಾಗಿ ಪಾಲ್ಗೊಂಡಿದ್ದರು.       ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಂ. ಕೃಷ್ಣ, ಈಗಾಗಲೇ  ಸಾಯಿಪ್ರಕಾಶ್ ಅವರು ಶಿರಡಿ ಸಾಯಿಬಾಬಾರ ಮೇಲೆ ಸಿನಿಮಾ ಮಾಡಿದ್ದಾರೆ. ಜೊತೆಗೆ ಅವರೇ ಬಾಬಾನಾಗಿಯೂ ಕಾಣಿಸಿಕೊಂಡಿದ್ದಾರೆ. ಈಗ ಪುಟ್ಟಪರ್ತಿ ಸಾಯಿಬಾಬಾ ಅವರ ಬಗ್ಗೆ ಚಿತ್ರ ಮಾಡಲು ಸಿದ್ದರಾಗಿದ್ದಾರೆ. ಅವರಿಗೆ ಸಾಯಿಬಾಬಾರ ಆಶೀರ್ವಾದ ವಿದೆ. ನಾನು ಕೂಡ ಹತ್ತಾರುಬಾರಿ ಪುಟ್ಟಪರ್ತಿ ಗೆ ಹೋಗಿ ಸತ್ಯಸಾಯಿಬಾಬಾರ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೇನೆ. ಎಂಥವರನ್ನಾದರೂ ಮಂತ್ರಮುಗ್ಧಗೊಳಿಸುವ ಶಕ್ತಿ ಅವರಲ್ಲಿತ್ತು. ಯಾವ ಸಿಎಂ ಎದುರಿಸದಂಥ ಕಷ್ಟಕಾರ್ಪಣ್ಯಗಳು ನನ್ನ ಕಾಲದಲ್ಲಿ  ಎದುರಾಗಿದ್ದವು. ರಾಜ್ ಕುಮಾರ್ ಅಪಹರಣ, ವೀರಪ್ಪನ್ ಪ್ರಕರಣ, ಕಾವೇರಿ ವಿವಾದ ಹೀಗೆ ಎಲ್ಲವೂ ನನಗೇ ಎದುರಾಗಿತ್ತು. ಅಂಥಾ ಸಂದರ್ಭದಲ್ಲಿ ನೀನು ಹೆದರಬೇಡ ಧೈರ್ಯದಿಂದ ಮುನ್ನಡೆ ಎಂದು ಅಭಯ ನೀಡಿದವರು ಈ ಸತ್ಯ ಸಾಯಿಬಾಬಾ. ಅವರಲ್ಲಿದ್ದ ಮ್ಯಾಗ್ನಟಿಕ್ ಪರ್ಸನಾಲಿಟಿ ಯಾರಿಗೂ ಬರುವುದಿಲ್ಕ. ಕೆಲವೇ ದೈವಾಂಶ ಸಂಭೂತರಿಗೆ ಮಾತ್ರ ಆ ಪವರ್ ಇರುತ್ತದೆ. ಅವರೊಬ್ಬ ಪ್ರವಾದಿಗಳು, ಅವರನ್ನು ನೋಡಿದ ಕೂಡಲೇ ನಮಗೊಂದು ಎನರ್ಜಿ ಬರುತ್ತದೆ. ಅಂಥಾ ಮಹಾತ್ಮರ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲು ಹೊರಟಿದ್ದಾರೆ. ಅವರಿಗೆ ಯಶಸ್ಸಾಗಲಿದೆ ಎಂದರು.

    ನಂತರ ಮಾತನಾಡಿದ ಮಹರ್ಷಿ ಆನಂದ ಗುರೂಜಿ ಸತ್ಯ ಸಾಯಿಬಾಬಾ ಅವರು  ದೈವಾಂಶ ಸಂಭೂತರು. ಒಬ್ಬ  ಸಿಎಂ ಮಾಡುವುದಕ್ಕಿಂತಲೂ ಹೆಚ್ಚಿನ  ಜನಸೇವಾ ಕಾರ್ಯಗಳನ್ನು ಅವರು  ಮಾಡಿದ್ದಾರೆ. ಜನರಿಗಾಗಿ ಅವರು ಕಟ್ಟಿಸಿರುವ ಆಸ್ಪತ್ರೆ, ವೈದ್ಯಕೀಯ ಸೇವೆ, ಹಸಿದು ಬಂದಂಥವರಿಗೆ ಅನ್ನ ನೀಡುವ ಕಾಯಕ ತುಂಬಾ ದೊಡ್ಡದು. ಬಾಬಾರವರು ಬೆಳೆದುಬಂದಂಥ ಹಾದಿಯನ್ನು ಬೆಳ್ಳಿ ತೆರೆಯ ಮೇಲೆ ತರಲು ಹೊರಟಿರುವ ಈ ನಿರ್ಮಾಪಕರಿಗೆ ಬಾಬಾನ ಆಶೀರ್ವಾದವಿದೆ. ನಾನು ೨೧ ವರ್ಷದವನಿದ್ದಾಗ ಅವರನ್ನು ನೋಡಲು ಹೋಗಿದ್ದೆ, ನನ್ನನ್ನು ನೋಡಿದಾಗ ನಮ್ಮಜೊತೆ ಬಂದುಬಿಡು ಎಂದು ಆಗಲೇ  ಹೇಳಿದ್ದರು. ಅವರ ಮಾತಿನ ಮಹಿಮೆ ಎಂಥಾದ್ದೆಂದು ನನಗೀಗ ಅರ್ಥವಾಗಿದೆ ಎಂದು ಹೇಳಿದರು. ಸಾಯಿಪ್ರಕಾಶ್ ನನಗೆ ಬಹಳ ಆತ್ಮೀಯರು, ಅವರಲ್ಲಿ ಒಳ್ಳೆಯ ಕವಿಯೂ ಇದ್ದಾರೆ. ಭಕ್ತಿ ಪ್ರದಾನ ಚಿತ್ರಗಳನ್ನು ತುಂಬಾ ಚೆನ್ನಾಗಿ ತೆಗೆಯುವ ಕಲೆ ಅವರಲಗಲಿದೆ ಎಂದು ಹಿರಿಯ ಸಾಹಿತಿ ದೊಡ್ಡರಂಗೇಗೌಡರು ಹೇಳಿದರು. ಜೆಜಿ ಕೃಷ್ಣ ಈ ಚಿತ್ರಕ್ಕೆ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಗಣೇಶ್ ನಾರಾಯಣ್ ಸಂಗೀತ ಸಂಗೀತ ನಿರ್ದೇಶನ‌ ಮಾಡುತ್ತಿದ್ದಾರೆ. ದೀಪು ಎಸ್. ಕುಮಾರ್ ಸಂಕಲನ ಚಿತ್ರಕ್ಕಿದ್ದು,  ಕಲಾವಿದರ ಆಯ್ಕೆಪ್ರಕ್ರಿಯೆ ಮುಗಿದ ನಂತರ ಚಿತ್ರೀಕರಣ ಪ್ರಾರಂಭಿಸುವ ಯೋಜನೆ ಚಿತ್ರ ತಂಡಕ್ಕಿದೆ.

    Live Tv
    [brid partner=56869869 player=32851 video=960834 autoplay=true]