Tag: ಸಾರಾ ಮಹೇಶ್

  • ಮೈತ್ರಿ ಸರ್ಕಾರಕ್ಕೆ ಮೊದಲು ಆಹ್ವಾನ ಇಟ್ಟಿದ್ದು ಡಿಕೆಶಿ: ಸಾ.ರಾ. ಮಹೇಶ್

    ಮೈತ್ರಿ ಸರ್ಕಾರಕ್ಕೆ ಮೊದಲು ಆಹ್ವಾನ ಇಟ್ಟಿದ್ದು ಡಿಕೆಶಿ: ಸಾ.ರಾ. ಮಹೇಶ್

    – ಮೈಸೂರು ಮೇಯರ್ ರಾಜಕೀಯ ಜಿದ್ದಾಜಿದ್ದಿಗೆ ಸ್ಫೋಟಕ ಟ್ವಿಸ್ಟ್

    ಮೈಸೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರ ಬಳಿ ಮಾತನಾಡಿ ಮೈತ್ರಿ ಸರ್ಕಾರಕ್ಕೆ ಮನವಿ ಮಾಡಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿನೂ ಬೇಡ, ಕಾಂಗ್ರೆಸ್ ಕೂಡ ಬೇಡ ಅಂತಾ ಅಂತಿಮವಾಗಿ ನಿರ್ಧಾರ ಮಾಡಿ ಅದನ್ನು ತನ್ವೀರ್ ಸೇಠ್‍ಗೆ ತಿಳಿಸಿದ್ದೇವು. ಮಧ್ಯರಾತ್ರಿ 12 ಗಂಟೆ 41 ನಿಮಿಷಕ್ಕೆ ತನ್ವೀರ್ ಸೇಠ್ ಕರೆ ಮಾಡಿದ್ದರು. ನಾನು ರೀಸೀವ್ ಮಾಡಿರಲಿಲ್ಲ. ಆಗ ಮೇಸೇಜ್ ಹಾಕಿದ್ದರು ಜಿ.ಟಿ.ದೇವೇಗೌಡ, ಸಂದೇಶ್ ನಾಗರಾಜ್ ಚುನಾವಣೆ ಗೆ ಗೈರು ಆಗುತ್ತಾರೆ ಎಂದು ಮೆಸೇಜ್ ಹಾಕಿದ್ದರು. ಚುನಾವಣೆ ದಿನ ಬೆಳಗ್ಗೆ 11 ಗಂಟೆಗೆ ತನ್ವೀರ್ ಸೇಠ್ ಕರೆ ಮಾಡಿ ಮೇಯರ್ ಸ್ಥಾನ ನೀವೇ ಇಟ್ಕೊಳ್ಳಿ, ಉಪ ಮೇಯರ್ ನಮಗೆ ಕೊಡಿ ಅಂತಾ ತನ್ವೀರ್ ಸೇಠ್ ಹೇಳಿದ್ದರು ನಾವು ಒಪ್ಪಿರಲಿಲ್ಲ ಎಂದರು.

    ಅದೇ ದಿನ 11.30 ಕ್ಕೆ ಡಿ.ಕೆ.ಶಿವಕುಮಾರ್ ಕರೆ ಮಾಡಿ ಮೈತ್ರಿಗೆ ಬನ್ನಿ ಅಂತಾ ಕೇಳಿದ್ದರು. 11.45 ಕ್ಕೆ ನಮ್ಮ ಇಬ್ಬರು ಶಾಸಕರು ಚುನಾವಣೆಗೆ ಗೈರು ಆಗೋದು ಖಚಿತವಾಯಿತು ಆಗ, ತನ್ವೀರ್ ಸೇಠ್ ಮತ್ತೆ ಕರೆ ಮಾಡಿ ಕೇಳಿದ್ದರು. ಆಗ ನಾವು ನಮ್ಮ ಸದಸ್ಯರ ತೀರ್ಮಾನಕ್ಕೆ ಬಿಟ್ಟೆವು. ಸ್ವತಂತ್ರವಾಗಿ ನಮ್ಮ ಶಕ್ತಿ ತೋರಿಸಲು ನಿರ್ಧಾರ ಮಾಡಿದ್ದೇವು.ಡಿ.ಕೆ. ಶಿವಕುಮಾರ್ ಫೋನ್ ಮಾಡುತ್ತಿದ್ದಾರೆ ಕಾಲ್ ಪಿಕ್ ಮಾಡಿ ಅಂತಾ ತನ್ವೀರ್ ಸೇಠ್ ನನಗೆ ಮೆಸೇಜ್ ಮಾಡಿದ್ದರು ಎಂದಿದ್ದಾರೆ.

    ನನ್ನ ಫೋನ್ ಅಲ್ಲೆ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಜೊತೆ ಮಾತಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖುದ್ದಾಗಿ ನನ್ನ ಜೊತೆ ಮಾತಾಡಿದ್ದರು. ಮೇಯರ್ ಸ್ಥಾನ ಕಾಂಗ್ರೆಸ್ ಗೆ ಬಿಟ್ಟು ಕೊಡಿ ಅಂತಾ ಕೇಳಿದ್ದರು. ಆದರೂ ನಾವು ಆ ಕ್ಷಣಕ್ಕೂ ಮೈತ್ರಿ ಬೇಡ ಅಂತಾ ನಿರ್ಧರಿಸಿದ್ದೇವು ಎಂದಿದ್ದಾರೆ.

  • ಜೆಡಿಎಸ್ ಎಲ್ಲಿದೆ ಅಂದಿದ್ರಿ, ಗೊತ್ತಾಯಿತಾ ಸಿದ್ದರಾಮಯ್ಯನವರೇ ಪ್ರಾದೇಶಿಕ ಪಕ್ಷದ ಶಕ್ತಿ-ಸಾರಾ ಮಹೇಶ್ ಲೇವಡಿ

    ಜೆಡಿಎಸ್ ಎಲ್ಲಿದೆ ಅಂದಿದ್ರಿ, ಗೊತ್ತಾಯಿತಾ ಸಿದ್ದರಾಮಯ್ಯನವರೇ ಪ್ರಾದೇಶಿಕ ಪಕ್ಷದ ಶಕ್ತಿ-ಸಾರಾ ಮಹೇಶ್ ಲೇವಡಿ

    ಮಂಡ್ಯ: ಮೊನ್ನೆ ತನಕ ಜೆಡಿಎಸ್ ಎಲ್ಲಿದೆ, ಜೆಡಿಎಸ್ ಜೊತೆ ಹೋಗಲೇ ಬಾರದು ಎಂದು ಹೇಳುತ್ತಿದ್ದರು. ಈಗ ಗೊತ್ತಾಯಿತಾ ಸಿದ್ದರಾಮಯ್ಯನವರೇ ಜೆಡಿಎಸ್ ಶಕ್ತಿ ಎಂದು ಮಾಜಿ ಸಚಿವ ಸಾರಾ ಮಹೇಶ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಪಾಂಡವಪುರದ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಅಪಹಾಸ್ಯ ಮಾಡಿದ್ದಾರೆ. ಜೆಡಿಎಸ್ ಎಲ್ಲಿದೆ ಎಂದು ಮೊನ್ನೆ ತನಕ ಹೇಳುತ್ತಿದ್ದರು. ಜೆಡಿಎಸ್ ಜೊತೆ ಹೋಗಲೇ ಬಾರದು ಎನ್ನುತ್ತಿದ್ದರು. ಈಗ ನಾವು ಬೇಡ ಎಂದರೂ ಮೈಸೂರು ಪಾಲಿಕೆಯಲ್ಲಿ ಓಟ್ ಹಾಕಿದರು. ಈಗ ಗೊತ್ತಾಯಿತಾ ಸಿದ್ದರಾಮಯ್ಯನವರೇ ಜೆಡಿಎಸ್ ಶಕ್ತಿ ಏನು ಅಂತ. ಇದು ಪ್ರಾದೇಶಿಕ ಪಕ್ಷದ ಶಕ್ತಿ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದರು.

    ನೀವು ಇಲ್ಲಿಯವರೆಗೆ ಯಾವುದೇ ಅಧಿಕಾರ ಪಡೆದಿದ್ದರೂ ಜೆಡಿಎಸ್ ನಾಯಕರ ಮತ್ತು ಕಾರ್ಯಕರ್ತರ ಆಶೀರ್ವಾದದಿಂದ ಎನ್ನುವುದನ್ನು ಮರೆಯಬೇಡಿ. ಇವತ್ತಿನ ಮೈಸೂರು ನಗರ ಪಾಲಿಕೆಯ ಸಂದೇಶ 2023ರ ರಾಜ್ಯದ ಸಂದೇಶ. ಈ ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಎಷ್ಟೇ ಬಲಿಷ್ಠವಾಗಿ ಇದ್ದರೂ, ಇಂದಿನ ಮೈಸೂರು ನಗರ ಪಾಲಿಕೆಯ ಸಂದೇಶವೇ 2023ರ ಸಂದೇಶ. ಅಂದು ನಮ್ಮೆಲ್ಲರ ನಾಯಕ ಕುಮಾರಸ್ವಾಮಿಯವರೇ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಗೆಲ್ತಿವಿ ಅಂತಾ ನಾಮಪತ್ರ ಸಲ್ಲಿಸಿರಲಿಲ್ಲ, ಸುಮ್ನೆ ಸಲ್ಲಿಸಿದ್ವಿ, ನೋಡಿದ್ರೆ ಗೆದ್ದೆ ಬಿಟ್ವಿ – ಸಾರಾ ಮಹೇಶ್

    ಗೆಲ್ತಿವಿ ಅಂತಾ ನಾಮಪತ್ರ ಸಲ್ಲಿಸಿರಲಿಲ್ಲ, ಸುಮ್ನೆ ಸಲ್ಲಿಸಿದ್ವಿ, ನೋಡಿದ್ರೆ ಗೆದ್ದೆ ಬಿಟ್ವಿ – ಸಾರಾ ಮಹೇಶ್

    ಮೈಸೂರು: ಮಹಾನಗರ ಪಾಲಿಕೆಯ ಮೇಯರ್ ಸ್ಥಾನ ಜೆಡಿಎಸ್ ಗೆ ಸಿಕ್ಕಿದ್ದು ಬಯಸದೇ ಬಂದ ಭಾಗ್ಯ ಎಂದು ಖುದ್ದು ಮಾಜಿ ಸಚಿವ ಸಾರಾ ಮಹೇಶ್ ಒಪ್ಪಿಕೊಂಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಾರಾ ಮಹೇಶ್, ಸುಮ್ನೆ ನಾಮಪತ್ರ ಸಲ್ಲಿಸಿ. ನೀವೇನೂ ಗೆಲ್ಲೋಕೆ ಆಗಲ್ಲ ಅಂತಾ ನಮ್ಮ ಮೇಯರ್ ಅಭ್ಯರ್ಥಿಗೆ ಹೇಳಿದ್ದೆವು. ನೋಡಿದ್ರೆ ಕಾಂಗ್ರೆಸ್‌ನವರು ಕ್ಷಣಾರ್ಧದಲ್ಲಿ ನಮ್ಮ ಅಭ್ಯರ್ಥಿ ಬೆಂಬಲಿಸಿ ಬಿಟ್ಟರು ಎಂದು ಪ್ರತಿಕ್ರಿಯಿಸಿದರು.

    ನಮಗೆ ಮೇಯರ್ ಸ್ಥಾನ ಸಿಗುತ್ತೆ ಅಂತಾ ನಾವು ಮಧ್ಯಾಹ್ನ 12 ಗಂಟೆಯವರೆಗೂ ಅಂದುಕೊಂಡಿರಲಿಲ್ಲ. ಬಿಜೆಪಿಗೆ ಮೇಯರ್ ಸ್ಥಾನ ಸಿಗಬಹುದು ಎಂದು ಊಹಿಸಿದ್ದೆವು. ನಮಗೆ 22 ಮತ ಬರಬಹುದು ಅಂದುಕೊಂಡಿದ್ದೆವು. ಅದರಲ್ಲೂ ಇಬ್ಬರು ನಮ್ಮ ಶಾಸಕರು ಗೈರಾದ ಮೇಲೆ ಆ ಮತ ಇನ್ನೂ ಕಡಿಮೆ ಆಗಲಿದೆ ಅಂದುಕೊಂಡಿದ್ದೆವು. ಆದರೆ ಕಾಂಗ್ರೆಸ್‌ನವರು ದಿಢೀರ್‌ ನಮ್ಮ ಬೆಂಬಲಿಸಿ ಬಿಟ್ಟರು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿರಬಹುದು ಎಂದು ಅಭಿಪ್ರಾಯಪಟ್ಟರು.

  • ಅಧಿದೇವತೆ ಶಾಪ, ನ್ಯಾಯ ದೇವತೆ ತೀರ್ಪಿನಿಂದ ವಿಶ್ವನಾಥ್‍ಗೆ ಸಚಿವ ಸ್ಥಾನ ಸಿಕ್ಕಿಲ್ಲ: ಸಾರಾ ಮಹೇಶ್

    ಅಧಿದೇವತೆ ಶಾಪ, ನ್ಯಾಯ ದೇವತೆ ತೀರ್ಪಿನಿಂದ ವಿಶ್ವನಾಥ್‍ಗೆ ಸಚಿವ ಸ್ಥಾನ ಸಿಕ್ಕಿಲ್ಲ: ಸಾರಾ ಮಹೇಶ್

    – ಬಿಎಸ್‍ವೈ ಟೀಕಿಸುವ ಸಣ್ಣ ನೈತಿಕತೆಯೂ ಅವರಿಗಿಲ್ಲ

    ಚಾಮರಾಜನಗರ: ಅಧಿದೇವತೆ ಶಾಪ, ನ್ಯಾಯ ದೇವತೆ ತೀರ್ಪಿನಿಂದ ವಿಶ್ವನಾಥ್ ಗೆ ಸಚಿವ ಸ್ಥಾನ ಸಿಕ್ಕಿಲ್ಲ. ಸಿಎಂ ಯಡಿಯೂರಪ್ಪ ಟೀಕಿಸುವ ಸಣ್ಣ ನೈತಿಕತೆಯೂ ಇವರಿಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೆಸರು ಹೇಳದೆ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂವಿಧಾನಿಕ ಸ್ಥಾನ ಹೊಂದಬಾರದು ಎಂಬ ಹೈಕೋರ್ಟ್ ತೀರ್ಪಿದ್ದರೂ ನೀವು ಪರಿಷತ್ ಸದಸ್ಯರಾಗಿರೋದು ತಪ್ಪು. ವಿಶ್ವನಾಥ್ ಅವರನ್ನು ನಲವತ್ತು ವರ್ಷ ಕಾಂಗ್ರೆಸ್ ಮದ್ವೆಯಾಗಿತ್ತು. ನಾವು ಕೂಡುವಳಿ ಮಾಡ್ಕೊಂಡಿದ್ವಿ, ನೀವು ದಿನದ ವ್ಯಾಪಾರಕ್ಕೆ ತೆಗೆದುಕೊಂಡಿದ್ದೀರಿ, ನಿಮ್ಮ ಕತೆ ಏನಾಗುತ್ತೋ ಎಂದು ಆಗಲೇ ಬಿಜೆಪಿಗೆ ಎಚ್ಚರಿಸಿದ್ದೆ ಎಂದು ಪರೋಕ್ಷವಾಗಿ ವಿಶ್ವನಾಥ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಈಗ ವಿಶ್ವನಾಥ್ ಕೋಗಿಲೆ ಅಲ್ಲ ಕಾಗೆ ಅನ್ನೋದು ರಾಜ್ಯದ ಜನತೆಗೆ ಗೊತ್ತಾಗಿದೆ. ರಾಜಕೀಯವಾಗಿ ಮೂಲೆಗುಂಪಾಗಿದ್ದ ವ್ಯಕ್ತಿಯನ್ನು ತನು, ಮನ, ಧನ ನೀಡಿ ಆಶ್ರಯ ಕೊಟ್ಟ ಜೆಡಿಎಸ್ ಗೆ ದ್ರೋಹ ಮಾಡಿದ್ದೀರಿ. ಜೆಡಿಎಸ್ ಕಾರ್ಯಕರ್ತರ ನಿಟ್ಟುಸಿರು ನಿಮ್ಮನ್ನ ಸುಮ್ಮನೆ ಬಿಡುತ್ತಾ ಎಂದು ಪ್ರಶ್ನಿಸಿದರು.

    ಯಡಿಯೂರಪ್ಪ ಮಾತಿಗೆ ತಪ್ಪಿದವರೆಂದು ಹೇಳಲು ಇವರಿಗೆ ನೈತಿಕತೆ ಇಲ್ಲ. ಬಿಜೆಪಿಗೆ ಹೋಗಿದ್ದ ಹದಿನೇಳು ಜನರಲ್ಲಿ ಹದಿನಾರು ಜನರಿಗೆ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಹೈಕೋರ್ಟ್ ತೀರ್ಪಿಗಿಂತ ಯಡಿಯೂರಪ್ಪ ದೊಡ್ಡವರಲ್ಲ. ಅಧಿಕಾರ ಇಲ್ಲದೇ ನಾನೂ ಬಿಜೆಪಿಯಲ್ಲಿ ಬಿಎಸ್‍ವೈ ಅವರೊಂದಿಗೆ ಬಾವುಟ ಕಟ್ಟಿದ್ದೇನೆ. ಅಲ್ಲೇನು ನಡೆಯುತ್ತೆ ನನಗೂ ಗೊತ್ತು ಎಂದು ಹೇಳಿದರು.

    ನನ್ನ ಉಸಿರು ಇರೋ ತನಕ ಅವರ ಹೆಸರು ಹೇಳಲ್ಲ, ಅದಕ್ಕೇ ಪರೋಕ್ಷವಾಗಿ ಟೀಕೆ ಮಾಡಿದ್ದೇನೆ. ದೇವೇಗೌಡರು ದೇವರಾದರೆ, ಕುಮಾರಸ್ವಾಮಿ ರಾಕ್ಷಸರಾಗಿ ಬಿಟ್ಟರೆ ಎಂದು ಪ್ರಶ್ನಿಸಿದ ಅವರು, ಹುಣಸೂರು ಉಪ ಚುನಾವಣೆಯಲ್ಲಿ ಬಿಜೆಪಿ ದುಡ್ಡು ಕೊಟ್ಟಿರಲಿಲ್ಲವಾ, ವಿಶ್ವನಾಥ್ ಒಬ್ಬ ದುರಂತ ನಾಯಕ ಎಂದು ಕುಟುಕಿದರು.

  • ಶಿಷ್ಟಾಚಾರ ಪಾಲಿಸದ ಅಧಿಕಾರಿಗಳ ವಿರುದ್ಧ ಸ್ಪೀಕರ್‌ಗೆ ದೂರು ನೀಡುತ್ತೇನೆ : ಸಾರಾ ಮಹೇಶ್

    ಶಿಷ್ಟಾಚಾರ ಪಾಲಿಸದ ಅಧಿಕಾರಿಗಳ ವಿರುದ್ಧ ಸ್ಪೀಕರ್‌ಗೆ ದೂರು ನೀಡುತ್ತೇನೆ : ಸಾರಾ ಮಹೇಶ್

    ಮೈಸೂರು: ಯಾವುದೇ ಸಮಿತಿ ಸಭೆಗಳಲ್ಲಿ ಶಿಷ್ಟಾಚಾರ ಪಾಲಿಸದ ಕೆಲವು ಅಧಿಕಾರಿಗಳ ವರ್ತನೆ ಕುರಿತಂತೆ ಸ್ಪೀಕರ್‌ಗೆ ದೂರು ನೀಡುತ್ತೇನೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

    ನಿನ್ನೆ ಮೈಸೂರಿನಲ್ಲಿ ನಡೆಸಿದ ಸಭೆಯಲ್ಲಿ ಭಾಗವಹಿಸಿದ್ದ ಮೈಸೂರು ಡಿಸಿ ರೋಹಿಣಿ ಸಿಂಧೂರಿ ನಡೆ ವಿಚಾರವಾಗಿ ಇಂದು ಚಾಮರಾಜನಗರದಲ್ಲಿ ಮಾತನಾಡಿದ ಅವರು, ವಿಧಾನಮಂಡಲ ಸಭೆಯ ಮುಂದಿಡಲಾದ ಸಮಿತಿ ಸಂವಿಧಾನ ಬದ್ಧವಾಗಿ ರಚನೆಯಾಗಿದೆ. ಸಮಿತಿ ಸಭೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅದರದ್ದೇ ಆದ ಶಿಷ್ಟಾಚಾರ ಇರುತ್ತದೆ. ಹಾಗಾಗಿ ಶಿಷ್ಟಾಚಾರ ಪಾಲನೆ ಬಗ್ಗೆ ಕೆಲವು ಅಧಿಕಾರಿಗಳ ವರ್ತನೆ ಕುರಿತಂತೆ ಸ್ಪೀಕರ್ ಹಾಗೂ ಮುಖ್ಯಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸುತ್ತೇವೆ. ಯಾವುದೇ ಸಮಿತಿ ಸಭೆ ಬಂದಾಗ ಡಿಸಿ ಮತ್ತು ಎಸ್ಪಿ ಅವರು ಬರಬೇಕು. ಅವರ ಅವಶ್ಯಕತೆ ಇದ್ದರೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಹೇಳುತ್ತೇವೆ. ಆದರೆ ನಿನ್ನೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವಶ್ಯಕತೆ ಇರಲಿಲ್ಲ. ಹಾಗಾಗಿ ಅವರನ್ನು ಬೇಡ ಎಂದು ಕಳುಹಿಸಿದ್ದೇವೆ ಎಂದು ಹೇಳಿದರು.

    ಮೈಸೂರು ಜಿಲ್ಲಾ ಪಂಚಾಯತ್ ಯಲ್ಲಿ ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆಯಲ್ಲಿ ಮೊದಲ ಬಾರಿಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮುಖಾಮುಖಿಯಾಗಿದ್ದರು. ಸಭೆಯಲ್ಲಿ ಮಾಸ್ಕ್ ಹಾಕಿಕೊಂಡು ಮಾತು ಆರಂಭಿಸಿದ ಡಿಸಿ ರೋಹಿಣಿ ಸಿಂದೂರಿಯವರಿಗೆ ನಿಮ್ಮ ಮಾತು ಕೇಳುತ್ತಿಲ್ಲ. ಮಾಸ್ಕ್ ತೆಗೆದು ಮಾತನಾಡಿ ಎಂದು ಸಾರಾ ಮಹೇಶ್ ಹೇಳಿದರು. ನಾನು ಮಾಸ್ಕ್ ತೆಗೆಯವುದಿಲ್ಲ. ಮಾಸ್ಕ್ ತೆಗೆದು ಮಾತನಾಡಬಾರದು ಅದಕ್ಕಾಗಿ ಮಾಸ್ಕ್ ತೆಗೆಯುವುದಿಲ್ಲ ಎಂದು ಸಾರಾ ಮಹೇಶ್‍ಗೆ ಉತ್ತರ ನೀಡುವುದರ ಮೂಲಕ ಬಹಿರಂಗವಾಗಿ ಇಬ್ಬರು ಮುಸುಕಿನ ಗುದ್ದಾಟ ನಡೆಸಿದರು.

    ಈ ಸಭೆಯಲ್ಲಿ ನನಗೆ ಸಂಬಂಧಿಸಿದ ವಿಷಯಗಳ ಚರ್ಚೆ ಇಲ್ಲ, ಹಾಗಾಗಿ ನೀವು ಸಮ್ಮತಿಸಿದರೆ ನಾನು ಸಭೆಯಿಂದ ಹೋಗುತ್ತೇನೆ ಎಂದ ಸಿಂಧೂರಿ ತಿಳಿಸಿದರು. ಅದಕ್ಕೆ ನಿಮ್ಮನ್ನು ನಾವು ಸಭೆಗೆ ಕರೆದಿರಲಿಲ್ಲ. ಆದರೂ ತಾವು ಸಭೆಗೆ ಬಂದಿದ್ದಿರಿ. ಜಿಲ್ಲೆಯ ಯಾವುದೇ ಸಭೆಯ ಮಾಹಿತಿ ಕೊಡುವುದು ಕರ್ತವ್ಯ. ಅದಕ್ಕೆ ಮಾಹಿತಿ ಕೊಟ್ಟಿದ್ದೇವೆ ಅಷ್ಟೇ. ಆದರೂ ಪರವಾಗಿಲ್ಲ. ಸಮಯ ಇದ್ದರೆ ಇರಿ, ಬೇರೆ ಕೆಲಸ ಇದ್ದರೆ ಹೋಗಿ ಎಂದು ನೇರವಾಗಿ ಸಾರಾ ಮಹೇಶ್ ಉತ್ತರಿಸಿದ್ದರು.

  • ಮುಸುಕಿನ ಗುದ್ದಾಟ ಬಹಿರಂಗ – ಸಾರಾ ಹೇಳುತ್ತಿದ್ದಂತೆ ಸಭೆಯಿಂದ ತೆರಳಿದ ರೋಹಿಣಿ ಸಿಂಧೂರಿ

    ಮುಸುಕಿನ ಗುದ್ದಾಟ ಬಹಿರಂಗ – ಸಾರಾ ಹೇಳುತ್ತಿದ್ದಂತೆ ಸಭೆಯಿಂದ ತೆರಳಿದ ರೋಹಿಣಿ ಸಿಂಧೂರಿ

    ಮೈಸೂರು: ಮೊದಲ ಬಾರಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮುಖಾಮುಖಿಯಾಗಿದ್ದಾರೆ. ಆದರೆ ಮುಖಾಮುಖಿಯಾದ ಮೊದಲ ಸಭೆಯಲ್ಲೇ ಇಬ್ಬರ ಮುಸುಕಿನ ಗುದ್ದಾಟ ಬಹಿರಂಗವಾಗಿದೆ.

    ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆ ನಡೆಸಲಾಗಿತ್ತು. ಕಾಗದ ಪತ್ರಗಳ ಸಮಿತಿಯ ಅಧ್ಯಕ್ಷ ಸಾರಾ ಮಹೇಶ್ ಹಾಜರಿದ್ದರು. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿಗೆ ಆಸನದ ವ್ಯವಸ್ಥೆ ಇರಲಿಲ್ಲ. ಆಸನದ ವ್ಯವಸ್ಥೆ ಇರದ ಕಾರಣ ಜಿಲ್ಲಾಧಿಕಾರಿ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತರು.

    ಸಭೆಯಲ್ಲಿ ಡಿಸಿ ಮಾಸ್ಕ್ ಹಾಕಿಕೊಂಡು ಮಾತು ಆರಂಭಿಸಿದರು. ಆಗ ಸಾರಾ ಮಹೇಶ್ ಅವರು, ನಿಮ್ಮ ಮಾತು ಕೇಳುತ್ತಿಲ್ಲ. ಮಾಸ್ಕ್ ತೆಗೆದು ಮಾತನಾಡಿ ಎಂದರು. ನಾನು ಮಾಸ್ಕ್ ತೆಗೆಯವುದಿಲ್ಲ, ಮಾಸ್ಕ್ ತೆಗೆದು ಮಾತನಾಡಬಾರದು. ಅದಕ್ಕಾಗಿ ಮಾಸ್ಕ್ ತೆಗೆಯುವುದಿಲ್ಲ ಎಂದು ಡಿಸಿ, ಸಾರಾ ಮಹೇಶ್ ಗೆ ಉತ್ತರ ಕೊಟ್ಟರು. ಈ ಸಭೆಯಲ್ಲಿ ನನಗೆ ಸಂಬಂಧಿಸಿದ ವಿಷಯಗಳ ಚರ್ಚೆ ಇಲ್ಲ. ಹಾಗಾಗಿ ನೀವು ಸಮ್ಮತಿಸಿದರೆ ನಾನು ಸಭೆಯಿಂದ ಹೋಗುತ್ತೇನೆ ಎಂದು ಡಿಸಿ ಹೇಳಿದರು.

    ಈ ವೇಳೆ ಡಿಸಿ ಮಾತಿಗೆ ಉತ್ತರಿಸಿದ ಸಾರಾ ನಿಮ್ಮನ್ನು ನಾವು ಸಭೆಗೆ ಕರೆದಿರಲಿಲ್ಲ. ಆದರೂ ತಾವು ಸಭೆಗೆ ಬಂದಿದ್ದಿರಿ ಸಂತೋಷ. ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಯಾವುದೇ ಸಭೆಯ ಮಾಹಿತಿ ಕೊಡುವುದು ಕರ್ತವ್ಯ. ಅದಕ್ಕೆ ಮಾಹಿತಿ ಕೊಟ್ಟಿದ್ದೇವೆ ಅಷ್ಟೇ. ಮೈಸೂರಿಗೆ ಬಂದ ಕಾಗದ ಪತ್ರಗಳ ಸಮಿತಿಯನ್ನು ನೀವು ಸ್ವಾಗತಿಸಿಲ್ಲ. ಆದರೂ ಪರವಾಗಿಲ್ಲ. ಸಮಯ ಇದ್ರೆ ಇರಿ, ಬೇರೆ ಕೆಲಸ ಇದ್ರೆ ಹೋಗಿ ಎಂದು ಸಾರಾ ಮಹೇಶ್ ಹೇಳಿದರು. ಸಾರಾ ಈ ರೀತಿ ಹೇಳುತ್ತಿದ್ದಂತೆಯೇ ಸಭೆಯಿಂದ ತಕ್ಷಣವೇ ಡಿಸಿ ಕಾರು ಹತ್ತಿ ಬೇಸರದಿಂದ ತೆರಳಿದರು.

  • ಸಾರಾ ಮಹೇಶ್ ಕೊಚ್ಚೆ ಗುಂಡಿ, ಕಲ್ಲೆಸೆದು ಹೊಲಸು ಮಾಡಿಕೊಳ್ಳಲ್ಲ- ಎಚ್.ವಿಶ್ವನಾಥ್

    ಸಾರಾ ಮಹೇಶ್ ಕೊಚ್ಚೆ ಗುಂಡಿ, ಕಲ್ಲೆಸೆದು ಹೊಲಸು ಮಾಡಿಕೊಳ್ಳಲ್ಲ- ಎಚ್.ವಿಶ್ವನಾಥ್

    ಬೆಂಗಳೂರು: ಮಾಜಿ ಸಚಿವ ಸಾ.ರಾ.ಮಹೇಶ್ ಕೊಚ್ಚೆ ಗುಂಡಿ, ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

    ಹೈ ಕೋರ್ಟ್ ತೀರ್ಪಿನ ಕುರಿತು ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಎಚ್.ವಿಶ್ವನಾಥ್ ವಿರುದ್ಧ ಕಿಡಿಕಾರಿ, ನ್ಯಾಯದೇವತೆ ಶಿಕ್ಷೆ ನೀಡಿದ್ದಾಳೆ ಎಂದು ಹೇಳಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಾರಾ ಮಹೇಶ್ ಕೊಚ್ಚೆ ಗುಂಡಿ, ಅವರ ಬಗ್ಗೆ ನಾನು ಮಾತಾಡಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ. ಪದೇ ಪದೇ ಕಲ್ಲೆಸೆದು ಶುಭ್ರ ಬಟ್ಟೆ ಕೊಳೆ ಮಾಡಿಕೊಳ್ಳುವುದಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಆಣೆ ಪ್ರಮಾಣವಾದ 1 ವರ್ಷಕ್ಕೆ ನ್ಯಾಯದೇವತೆಯಿಂದ ವಿಶ್ವನಾಥ್‌ಗೆ ಶಿಕ್ಷೆ – ಸಾರಾ ಮಹೇಶ್‌

    ಸಾರಾ ಮಹೇಶನ ಕೊಚ್ಚೆ ಗುಂಡಿಗೆ ಕಲ್ಲು ಎಸೆದು ಪದೇ ಪದೇ ಕೊಳೆ ಮಾಡಿಕೊಳ್ಳಲು ನಾನು ಇಷ್ಟಪಡುವುದಿಲ್ಲ. ಇದರಿಂದ ನನ್ನ ಶುಭ್ರ ವಸ್ತ್ರವನ್ನು ಕೊಳೆ ಮಾಡಿಕೊಳ್ಳಲು ನಾನು ತಯಾರಿಲ್ಲ. ಯಾರ ಬಗ್ಗೆ ಏನು ಮಾತನಾಡಬೇಕು ಎಂಬ ಅರಿವಿಲ್ಲದೆ, ಬಾಯಿಗೆ ಬಂದಂತೆ ಮಾತನಾಡುವವರಿಗೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

    ಇದೇ ವೇಳೆ ಹೈ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ತೀರ್ಪಿನ ಪ್ರತಿ ಕೈ ಸೇರಿದ ಮೇಲೆ ವಕೀಲರೊಂದಿಗೆ ಚರ್ಚಿ ಮುಂದಿನ ಕ್ರಮ ಕೂಗೊಳ್ಳುತ್ತೇವೆ. ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವ ಕುರಿತು ಸಹ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

  • ಆಣೆ ಪ್ರಮಾಣವಾದ 1 ವರ್ಷಕ್ಕೆ ನ್ಯಾಯದೇವತೆಯಿಂದ ವಿಶ್ವನಾಥ್‌ಗೆ ಶಿಕ್ಷೆ – ಸಾರಾ ಮಹೇಶ್‌

    ಆಣೆ ಪ್ರಮಾಣವಾದ 1 ವರ್ಷಕ್ಕೆ ನ್ಯಾಯದೇವತೆಯಿಂದ ವಿಶ್ವನಾಥ್‌ಗೆ ಶಿಕ್ಷೆ – ಸಾರಾ ಮಹೇಶ್‌

    – ಸತ್ಯ ಯಾವುದು ಎಂದು ತೀರ್ಮಾನವಾಗಿದೆ
    – ನಮ್ಮಂತ ರಾಜಕಾರಣಿಗಳಿಗೆ ಇದು ಪಾಠ

    ಮೈಸೂರು: ಮಾಜಿ ಸಚಿವ, ವಿಧಾನಪರಿಷತ್‌ ಬಿಜೆಪಿ ಸದಸ್ಯ ಎಚ್‌.ವಿಶ್ವನಾಥ್‌ ಅವರಿಗೆ ನ್ಯಾಯ ದೇವತೆ ಶಿಕ್ಷೆ ನೀಡಿದ್ದಾಳೆ ಎಂದು ಜೆಡಿಎಸ್‌ ಶಾಸಕ ಸಾರಾ ಮಹೇಶ್‌ ಹೇಳಿದ್ದಾರೆ.

    ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಸಾರಾ ಮಹೇಶ್‌ ಆಗಮಿಸಿ ದೇವಿಯ ದರ್ಶನ ಪಡೆದರು. ಬಳಿಕ ಕ್ಷೇತ್ರವನ್ನು ಸಾಕ್ಷಿಯಾಗಿಸಿದ್ದಕ್ಕೆ 1,001 ರೂ. ತಪ್ಪು ಕಾಣಿಕೆ ಹಾಕಿದರು. ಬಳಿಕ ಮಾತನಾಡಿದ ಅವರು, ಪ್ರಸಂಗ ನಡೆದ ಸರಿಯಾಗಿ ಒಂದು ವರ್ಷಕ್ಕೆ ನ್ಯಾಯ ದೇವತೆ ತೀರ್ಪು ಕೊಟ್ಟಿದ್ದಾಳೆ ಎಂದು ತಿಳಿಸಿದರು.

    ಆಣೆ ಪ್ರಮಾಣ ನಡೆದು ಸರಿಯಾಗಿ ಒಂದೆ ವರ್ಷಕ್ಕೆ ಸತ್ಯ ಯಾವುದು ಎಂಬುದು ತೀರ್ಮಾನವಾಗಿದೆ. ಈ ಮೂಲಕ ಚಾಮುಂಡಿ ತಾಯಿ ನ್ಯಾಯ ದೇವತೆ ಮೂಲಕ ತಪ್ಪು ಮಾಡಿದವರಿಗೆ ಶಿಕ್ಷೆ ಕೊಟ್ಟಿದ್ದಾಳೆ ಎಂದರು.  ಇದನ್ನೂ ಓದಿ: ವಿಶ್ವನಾಥ್‌ಗೆ ಹೈಕೋರ್ಟ್‌ ಶಾಕ್‌ – ಎಂಟಿಬಿ, ಶಂಕರ್‌ಗೆ ಬಿಗ್‌ ರಿಲೀಫ್‌

    ನಾನು ದೇವಾಲಯದಲ್ಲಿ ಕಣ್ಣೀರಿಟ್ಟು ತಪ್ಪು ಯಾರದ್ದು ಸರಿಯಾರದ್ದು ಎಂದು ನೀನೇ ತೋರಿಸು ತಾಯಿ ಎಂದು‌ ಕೇಳಿದ್ದೆ. ಪ್ರಸಂಗ ನಡೆದ ಸರಿಯಾಗಿ ಒಂದು ವರ್ಷಕ್ಕೆ ನ್ಯಾಯ ದೇವತೆ ತೀರ್ಪು ಕೊಟ್ಟಿದ್ದಾಳೆ. ತಪ್ಪು ಮಾಡಿದ್ದರೂ ಭಂಡತನದಿಂದ ಶಕ್ತಿ ದೇವತೆ ಮುಂದೆ ಕೂತರೆ ಏನಾಗುತ್ತದೆ ಎಂಬುದಕ್ಕೆ ಇದು ಉದಾಹರಣೆಯಾಗಿದ್ದು ನಮ್ಮಂತ ರಾಜಕಾರಣಿಗಳಿಗೆ ಪಾಠ ಎಂದು ಪ್ರತಿಕ್ರಿಯಿಸಿದರು.

    ಅಂದು ಏನಾಗಿತ್ತು?
    ಕಳೆದ ವರ್ಷ ವಿಶ್ವಾಸ ಮತ ನಿರ್ಣಯ ಚರ್ಚೆಯ ವೇಳೆ ವಿಧಾನಸಭೆಯಲ್ಲಿ ಮಾತನಾಡಿದ್ದ ಸಾರಾ ಮಹೇಶ್‌, ವಿಶ್ವನಾಥ್‌ ಎಷ್ಟು ಕೋಟಿಗೆ ಸೇಲಾಗಿದ್ದಾರೆ ಎಂಬುದನ್ನು ತಿಳಿಸಬೇಕು. ಪತ್ರಕರ್ತರ ಮಧ್ಯಸ್ಥಿಕೆ ಮೂಲಕ 28 ಕೋಟಿ ರೂ. ವ್ಯವಹಾರ ಕುದುರಿಸಿದ್ದಾರೆ ಎಂಬ ಮಾಹಿತಿ ಇದೆ ಎಂದು ಬಾಂಬ್‌ ಸಿಡಿಸಿದ್ದರು.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ನಾಯಕರ ನಡುವೆ ಆರೋಪ ಪ್ರತ್ಯಾರೋಪ ನಡೆದು ಕೊನೆಗೆ ಆಣೆ ಪ್ರಮಾಣದ ಹಂತವರೆಗೆ ಬಂತು. ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ಬರಬೇಕೆಂದು ವಿಶ್ವನಾಥ್ ಸಾ.ರಾ. ಮಹೇಶ್‌ಗೆ ಸವಾಲು ಹಾಕಿದ್ದರು. ಈ ಕಾರಣಕ್ಕಾಗಿ ಅಕ್ಟೋಬರ್‌ 17 ರಂದು ಇಬ್ಬರು ಚಾಮುಂಡಿ ಬೆಟ್ಟಕ್ಕೆ ಬಂದಿದ್ದರು.

    ಆರಂಭದಲ್ಲಿ ಬೆಳಗ್ಗೆ ವಿಶ್ವನಾಥ್‌ ದೇವಾಲಯಕ್ಕೆ ಬಂದಿದ್ದರು. ವಿಶ್ವನಾಥ್‌ ಹೊರ ಬಂದ ಬಳಿಕ ಸಾರಾ ಮಹೇಶ್‌ ಒಳ ಪ್ರವೇಶಿಸಿದ್ದರು. ಈ ವೇಳೆ ಸಾರಾ ಮಹೇಶ್‌ ತೆರಳಿದ ವಿಚಾರ ಕೇಳಿ ವಿಶ್ವನಾಥ್‌ ಒಂದು ಗಂಟೆಗಳ ಕಾಲ ಕಾದು ಕುಳಿತರು. ಮಹೇಶ್ ಅವರು ಬಾರದ ಕಾರಣ ವಿಶ್ವನಾಥ್ ಮಾಜಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿ ತೆರಳಿದ್ದರು. ವಿಶ್ವನಾಥ್ ಹೋದ ನಂತರ ಸಾರಾ ಮಹೇಶ್ ದೇವಾಲಯದಿಂದ ಹೊರ ಬಂದರು.

    ಈ ವೇಳೆ ಪ್ರತಿಕ್ರಿಯಿಸಿದ್ದ ವಿಶ್ವನಾಥ್‌ ನನ್ನ ಮಾತನ್ನು ತಿರುಚಬೇಡಿ. ನಾನು ಆಣೆ ಪ್ರಮಾಣ ಮಾಡಲು ದೇವಸ್ಥಾನಕ್ಕೆ ಬಂದಿಲ್ಲ. ನನಗೆ ಹಣ ಕೊಟ್ಟವರನ್ನು ನೋಡಲು ಹಾಗೂ ಆರೋಪ ಮಾಡಿದವರಿಗಾಗಿ ಕಾಯುತ್ತಿದ್ದೇನೆ ಎಂದು ಪ್ರತಿಕ್ರಿಯಿಸಿದ್ದರು.

    ಕಣ್ಣೀರು ಹಾಕಿ ಆಣೆ ಮಾಡಿದ್ದ ಸಾರಾ ಮಹೇಶ್‌, ನನ್ನ ಮೇಲೆ ವಿಶ್ವನಾಥ್‌ ವೈಯಕ್ತಿಕ ಆರೋಪ ಮಾಡಿದ್ದಾರೆ. ಈ ಆರೋಪವನ್ನು ಸಾಬೀತುಪಡಿಸಿದ್ರೆ ನಾನು ಕ್ಷಮೆಯಾಚಿಸುವೆ ಎಂದಿದ್ದರು.

  • ಆಂಧ್ರದ ಹೆಣ್ಣುಮಗಳಿಗಾಗಿ ಕನ್ನಡದ ಜಿಲ್ಲಾಧಿಕಾರಿ ವರ್ಗಾವಣೆ: ಸಾರಾ ಮಹೇಶ್ ಕಿಡಿ

    ಆಂಧ್ರದ ಹೆಣ್ಣುಮಗಳಿಗಾಗಿ ಕನ್ನಡದ ಜಿಲ್ಲಾಧಿಕಾರಿ ವರ್ಗಾವಣೆ: ಸಾರಾ ಮಹೇಶ್ ಕಿಡಿ

    ಮೈಸೂರು: ಆಂಧ್ರದ ಹೆಣ್ಣು ಮಗಳಿಗಾಗಿ ಕನ್ನಡದ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿರುವುದಕ್ಕೆ ಮಾಜಿ ಸಚಿವ ಸಾ.ರಾ ಮಹೇಶ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

    ಮೈಸೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ವಿಶೇಷಾಧಿಕಾರಿ, ನೇಮಕಾಧಿಕಾರಿ ನೇಮಕವಾದ ನಂತರ ಜಿಲ್ಲಾಧಿಕಾರಿಯನ್ನ ಬದಲಾವಣೆ ಮಾಡಿರೋದು ಸರಿಯಲ್ಲ. ಅದು ಸ್ಥಳ ತೋರಿಸದೆ ದಲಿತ ಡಿಸಿಯನ್ನ ವರ್ಗಾವಣೆ ಮಾಡಿದ್ದಾರೆ. ಒಬ್ಬ ಆಂಧ್ರದ ಹೆಣ್ಣು ಮಗಳಿಗಾಗಿ ಕನ್ನಡದ ಮಗನನ್ನ ವರ್ಗಾವಣೆ ಮಾಡಿದ್ದೀರಾ. ಇದು ನಿಮ್ಮ ಸರ್ಕಾರದ ಸಾಧನೆಯಾ ಎಂದು ಪ್ರಶ್ನಿಸಿದ್ದಾರೆ.

    ಹಾಸನದಲ್ಲಿ ಅಲ್ಲಿನ ಜಿಲ್ಲಾಧಿಕಾರಿಯಾಗಿದ್ದಾಗ ವರ್ಗಾವಣೆಯನ್ನ ಪ್ರಶ್ನಿಸಿದ್ದರು. ಇದೀಗ 29 ದಿನದಲ್ಲಿಯೇ ಮೈಸೂರು ಡಿಸಿ ವರ್ಗಾವಣೆಯಾಗಿದೆ ಇದು ಸರಿಯೇ?, ಇಲ್ಲಿನ ಜಿಲ್ಲಾಧಿಕಾರಿಗೆ ಅನ್ಯಾಯವಾಗಿದೆ ಅನ್ನೋ ಮನಃಸಾಕ್ಷಿ ಇಲ್ವಾ?. ಅಧಿಕಾರದ ಆಸೆ ಇರುವ ಇಂತಹ ಜಿಲ್ಲಾಧಿಕಾರಿಯಿಂದ ಏನನ್ನು ನಿರೀಕ್ಷೆ ಮಾಡೋದು ಎಂದು ಹೇಳುವ ಮೂಲಕ ಮೈಸೂರಿಗೆ ರೋಹಿಣಿ ಸಿಂಧೂರಿ ವರ್ಗಾವಣೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

    ರೋಹಿಣಿ ಸಿಂಧೂರಿ ಅವರು ಹಠಕ್ಕೆ ಬಿದ್ದಿದ್ದಾರೆ. ನಾನು ಡಿಸಿ ಆಗಿಯೇ ಇರಬೇಕು ಎಂದಿಕೊಂಡಿದ್ದಾರೆ. ಅದಕ್ಕೆ ಹಾಸನದಲ್ಲಿ ಮೂರು ಬಾರಿ ಕೇಸ್ ಹಾಕಿ, ಇದೀಗ ಮೈಸೂರಿಗೆ ಬಂದಿದ್ದಾರೆ. ಜಿಲ್ಲಾ ಮಂತ್ರಿಗಳಿಗೆ ಮಾಹಿತಿ ಇಲ್ಲದೇ ವರ್ಗಾವಣೆ ಆಗಿದೆಯಾ?. ಹಾಗಿದ್ರೆ ನೀವೂ ಹೆಲ್ಪ್ ಲೆಸ್ಸಾ ಸಚಿವರೇ.?, ಇದಕ್ಕೆ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರೇ ಉತ್ತರ ಕೊಡಬೇಕು ಎಂದರು. ಇದನ್ನೂ ಓದಿ: ಮೈಸೂರು ನನಗೆ ಹೊಸದಲ್ಲ, ಇಲ್ಲೇ ಆಡಳಿತ ತರಬೇತಿ ಪಡೆದಿದ್ದೇನೆ: ರೋಹಿಣಿ

    ನಮ್ಮ ರಾಜ್ಯದಲ್ಲಿ ಯಡಿಯೂರಪ್ಪ ಆಡಳಿತ ನಡಸುತ್ತಿದ್ದಾರಾ? ಅಥವಾ ಆಂಧ್ರದ ಸಿಎಂ ಆಡಳಿತ ನಡೆಸುತ್ತಿದ್ದರಾ? ಈ ವರ್ಗಾವಣೆಯನ್ನ ಆಂಧ್ರದ ಸಿಎಂ ಮಾಡಿಸಿದ್ದಾರೆಯೋ ಅನ್ನೋ ಬಗ್ಗೆ ಅನುಮಾನ ಇದೆ. ಸರ್ಕಾರ ವರ್ಗಾವಣೆ ದಂಧೆ ನಡೆಸುತ್ತಿದೆ. ಅದರ ಭಾಗವಾಗಿ ರೋಹಿಣಿ ಸಿಂಧೂರಿ ವರ್ಗಾವಣೆ ಆಗಿದೆ ಎಂದು ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.

  • ಬ್ಲೂ ಫಿಲಂ ನೋಡುವವರು ಡಿಸಿಎಂ ಆಗುತ್ತಿದ್ದಾಗ ಜನರಿಗೂ ನಗು, ದುಃಖ ಆಗಿತ್ತು: ಸಾರಾ ಮಹೇಶ್

    ಬ್ಲೂ ಫಿಲಂ ನೋಡುವವರು ಡಿಸಿಎಂ ಆಗುತ್ತಿದ್ದಾಗ ಜನರಿಗೂ ನಗು, ದುಃಖ ಆಗಿತ್ತು: ಸಾರಾ ಮಹೇಶ್

    – ಸಚಿವ ಲಕ್ಷ್ಮಣ್ ಸವದಿಗೆ ಸಾರಾ ತಿರುಗೇಟು

    ಮೈಸೂರು: ಡ್ರಗ್ಸ್ ದಂಧೆ ಕುರಿತು ತನಿಖೆ ನಡೆಯುತ್ತಿರುವಾಗಲೇ ಈ ವಿಚಾರ ರಾಜಕೀಯವಾಗಿದ್ದು, ಒಬ್ಬರಿಗೊಬ್ಬರು ಕೆಸರೆರಚಾಟ ನಡೆಸಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ಮಾಜಿ ಸಚಿವ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿರುವ ಅವರು, ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‍ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯವಸನವೇ ಡ್ರಗ್ಸ್ ಆದರೂ, ಬ್ಲ್ಯೂ ಫಿಲಂ ಆದರೂ… ಎಂದು ಟಾಂಗ್ ನೀಡಿದ್ದಾರೆ.

    ಡ್ರಗ್ಸ್ ದಂಧೆಕೋರರು ಸರ್ಕಾರ ಬೀಳಿಸಿದರು ಎಂದು ಈ ಹಿಂದೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ಕುರಿತು ಲಕ್ಷ್ಮಣ್ ಅವದಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದ ಎಂದಿದ್ದರು. ಇದೀಗ ಟ್ವೀಟ್ ಮೂಲಕ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.

    ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಕುಮಾರಸ್ವಾಮಿ, ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯವರು. ಕೃಷಿ ಸಚಿವ ಬಿ.ಸಿ.ಪಾಟೀಲ್ ಕೂಡ ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಮಾಜಿ ಸಚಿವ ಸಾರಾ ಮಹೇಶ್ ಕಿಡಿಕಾರಿದ್ದಾರೆ.