Tag: ಸಾರಾ ಮಹೇಶ್

  • ಇಲ್ಲಿಗೆ ಎಲ್ಲವನ್ನೂ ನಿಲ್ಲಿಸೋಣ – ಸಾರಾ ಮಹೇಶ್ ಜೊತೆ ರಾಜಿಗೆ ನಿಂತ ವಿಶ್ವನಾಥ್

    ಇಲ್ಲಿಗೆ ಎಲ್ಲವನ್ನೂ ನಿಲ್ಲಿಸೋಣ – ಸಾರಾ ಮಹೇಶ್ ಜೊತೆ ರಾಜಿಗೆ ನಿಂತ ವಿಶ್ವನಾಥ್

    ಮೈಸೂರು: ಇಬ್ಬರೂ ತಪ್ಪು ಮಾಡಿದ್ದೇವೆ, ವೈಯುಕ್ತಿಕ ಟೀಕೆಗಳನ್ನು ನಿಲ್ಲಿಸೋಣ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಸಾರಾ ಮಹೇಶ್ ಹೇಳಿಕೆಗಳಿಗೆ ಮಾತಿನ ಚಾಟಿ ಬೀಸಿ ತಿರುಗೇಟು ನೀಡುತ್ತಿದ್ದ ವಿಶ್ವನಾಥ್ ಈಗ ಅವರ ಜೊತೆಗೆ ರಾಜಿಗೆ ಮುಂದಾಗಿದ್ದಾರೆ.

    ಹೌದು. ಇಷ್ಟು ದಿನ ಹಾವು ಮುಂಗುಸಿಯಂತೆ ವಿಶ್ವನಾಥ್ ಹಾಗೂ ಸಾರಾ ಮಹೇಶ್ ಒಬ್ಬರ ಮೇಲೊಬ್ಬರು ಆರೋಪ ಮಾಡಿಕೊಂಡು ಬಂದಿದ್ದರು. ಆದರೆ ಈಗ ಇದ್ದಕ್ಕಿದ್ದಂತೆ ವಿಶ್ವನಾಥ್ ಅವರು ಸಾರಾ ಮಹೇಶ್ ಜೊತೆ ರಾಜಿಗೆ ನಿಂತಿದ್ದಾರೆ. ಇಬ್ಬರು ಗಾಜಿನ ಮನೆಯಲ್ಲಿ ಇದ್ದೇವೆ. ಜನರು ನಮ್ಮನ್ನು ನೋಡುತ್ತಿದ್ದಿದ್ದಾರೆ. ಅವರ ಮುಂದೆ ನಾವು ಜಾರಿ ಬೀಳುವುದು ಬೇಡ. ಇಬ್ಬರೂ ತಪ್ಪು ಮಾಡುತ್ತಿದ್ದೇವೆ ಅಂತ ನನಗೆ ಅನಿಸುತ್ತಿದೆ. ನಾವಿಬ್ಬರು ಒಂದೇ ಊರಿನವರು, ಪರಸ್ಪರ ಈ ರೀತಿ ಮಾತನಾಡುವುದು ಬೇಡ. ನೀವೇನೋ ಮಾಡುತ್ತೀರಾ ಅಂತ ಹೆದರಿ ಈ ಮಾತುಗಳನ್ನ ಹೇಳುತ್ತಿಲ್ಲ. ನೀವು ಬೆಳೆಯಬೇಕಿರುವ ರಾಜಕಾರಣಿ. ನನ್ನದು ನಿವೃತ್ತಿಯ ರಾಜಕಾರಣ. ಆದ್ದರಿಂದ ಇಂತಹ ಪರಸ್ಪರ ವೈಯುಕ್ತಿಕ ಮಾತುಗಳು ನಮಗೆ ಒಳ್ಳೆಯದಲ್ಲ. ಅಭಿವೃದ್ಧಿ ಹಾಗೂ ವಿಷಯಾಧಾರಿತವಾಗಿ ಮಾತನಾಡೋಣ. ಇಬ್ಬರೂ ಕೂಡ ಮಂತ್ರಿಗಳಾಗಿದ್ದವರು. ಈ ರೀತಿ ಮಾತನಾಡಿದರೆ ಜನ ನೋಡುತ್ತಾರೆ. ಇಲ್ಲಿಗೆ ಎಲ್ಲವನ್ನು ನಿಲ್ಲಿಸೋಣ. ವೈಯುಕ್ತಿಕ ಟೀಕೆಗಳನ್ನ ನಿಲ್ಲಿಸೋಣ ಎಂದು ಸಾ.ರಾ.ಮಹೇಶ್ ಅವರಲ್ಲಿ ಮನವಿ ಮಾಡಿದರು. ಇದನ್ನೂ ಓದಿ:ಕುಮಾರಸ್ವಾಮಿ ಪ್ರಜ್ಞೆ ಇಟ್ಕೊಂಡು ಮಾತನಾಡಲಿ – ಹೆಚ್‍ಡಿಕೆ ವಿರುದ್ಧ ಟಗರು ಗುಟುರು

    ಯಡಿಯೂರಪ್ಪ ಸಿಎಂ ಆಗಲು ಸಿದ್ದರಾಮಯ್ಯ, ಕುಮಾರಸ್ವಾಮಿ ಕಾರಣ. ಇದನ್ನ ಸ್ವತಃ ಅವರಿಬ್ಬರೇ ಒಪ್ಪಿಕೊಂಡಿದ್ದಾರೆ. ಇದಕ್ಕೆ 17 ಜನ ಅನರ್ಹ ಶಾಸಕರು ಕಾರಣರಲ್ಲ. ನಮ್ಮ ಮೇಲೆ ಸರ್ಕಾರ ಬೀಳಿಸಿದ ಗೂಬೆ ಕೂರಿಸಿದ್ದಿರಿ ಇಷ್ಟು ದಿನ. ಈಗ ನಿಮ್ಮ ಮಾತಿನ ಮೂಲಕ ಸರ್ಕಾರ ಪತನಕ್ಕೆ ನೀವೇ ಕಾರಣ ಎನ್ನುವುದು ಸ್ಪಷ್ಟವಾಗಿದೆ. ಪರಸ್ಪರ ಅಸಮಾಧಾನ ಅಪನಂಬಿಕೆಯಲ್ಲಿ ಸರ್ಕಾರ ನಡೆಸಿದವರು ನೀವು. ಅದರ ಪರಿಣಾಮ ಸರ್ಕಾರ ಪತನವಾಯಿತು. ಈಗ ನೀವು ಹದ್ದು ಗಿಣಿ ಎಂಬ ಟೀಕೆ ಮಾಡಿಕೊಳ್ಳುತ್ತಿದ್ದೀರಿ. ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಕಾರಣ ಸಿದ್ದರಾಮಯ್ಯ, ಕುಮಾರಸ್ವಾಮಿ. ಕುಮಾರಸ್ವಾಮಿಯೇ ತಮ್ಮದು ಕೆಟ್ಟ ಸರ್ಕಾರ ಎಂದು ಹೇಳಿದ್ದಾರೆ. ನಾವು ಅದನ್ನ ಹೇಳಿಯೇ ಸರ್ಕಾರದಿಂದ ಹೊರ ಬಂದಿದ್ದು. ಈಗ ಅದನ್ನು ನೀವೇ ಖಚಿತ ಪಡಿಸುತ್ತಿದ್ದೀರಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ:ತೇಜಸ್ವಿ ಸೂರ್ಯ ರಾಕ್ಷಸ, ರಾಜ್ಯದ ಜನರ ದಿಕ್ಕು ತಪ್ಪಿಸ್ತಿದ್ದಾನೆ: ಈಶ್ವರ್ ಖಂಡ್ರೆ

    ಮಾಜಿ ಸಚಿವ ರೇವಣ್ಣರನ್ನ ಹೊಗಳುವುದರ ಜೊತೆಗೆ ವಿಶ್ವನಾಥ್ ಅವರು ಟಾಂಗ್ ಕೊಟ್ಟಿದ್ದಾರೆ. ಅವರು ಕೆಲಸ ಮಾಡುವುದರಲ್ಲಿ ದೈತ್ಯರು. ಅವರ ಕೆಲಸದ ಬಗ್ಗೆ ಯಾವುದೇ ಅನುಮಾನ ಬೇಡ. ಯಾವುದೇ ಖಾತೆ ಇದ್ದರು ಅದನ್ನ ಮಾಡುತ್ತಾರೆ. ಜೊತೆಗೆ ಎಲ್ಲಾ ಖಾತೆಗೂ ಕೈಯಾಡಿಸುತ್ತಾರೆ ಎಂದು ಕಾಲೆಳೆದಿದ್ದರು.

    15 ಕ್ಷೇತ್ರಗಳಿಗೆ ಉಪಚುನಾವಣೆ ವಿಚಾರವಾಗಿ ಮಾತನಾಡಿ, ಉಪಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ಅವಕಾಶ ನೀಡಿರುವ ಆಯೋಗದ ನಿರ್ಧಾರ ಸ್ವಾಗತಾರ್ಹ. ಆದರೆ ಚುನಾವಣೆ ಮುಂದೂಡಿಕೆ ಮಾಡಿ ಎನ್ನುವುದೇ ನಮ್ಮ ಮನವಿ ಎಂದು ಹೇಳಿದರು. ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಈಗ ನಡೆಯುತ್ತಿರುವ ಚುನಾವಣೆ ತರಾತುರಿಯಲ್ಲಿ ನಡೆಯುತ್ತಿದೆ. ಹಾಗಾಗಿ ಉಪಚುನಾವಣೆ ಈಗ ಬೇಡ ಎನ್ನುವುದು ನಮ್ಮ ಅಭಿಪ್ರಾಯ. ಅದೇನೆ ಇದ್ದರೂ ಬುಧವಾರ ಹಾಗೂ ಶುಕ್ರವಾರದವರೆಗೆ ಕಾಯಬೇಕು. ಸುಪ್ರೀಂಕೋರ್ಟ್ ತೀರ್ಮಾನದ ನಂತರ ಎಲ್ಲವು ನಿರ್ಧಾರ ಆಗಲಿದೆ. ಉಪಚುನಾವಣೆಗೆ ನಾನು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಹುಣಸೂರಿನ ಹಿರಿಯರು, ಮುಖಂಡರ ಜೊತೆ ಚರ್ಚೆ ಮಾಡುತ್ತೆನೆ. ಅವರ ಅಭಿಪ್ರಾಯ ಪಡೆದು ಮುಂದುವರಿಯುತ್ತೇನೆ. ಉಪಚುನಾವಣೆಗೆ ಸಮಯ ಕಡಿಮೆ ಇದೆ. ಹೀಗಾಗಿ ತಯಾರಿ ಮಾಡಿಕೊಳ್ಳಲೇಬೇಕು ಅಲ್ಲವೇ ಎಂದು ಹೇಳಿದರು.

  • ನೀವು ಸೆಕ್ಸ್ ಫಿಲಂ ಹೀರೋ, ಹೀರೋಯಿನ್ ಜೊತೆ ಮಾತಾಡಿದ್ದಕ್ಕೆ ದಾಖಲೆ ಇದೆ: ಸಾರಾ ಮಹೇಶ್

    ನೀವು ಸೆಕ್ಸ್ ಫಿಲಂ ಹೀರೋ, ಹೀರೋಯಿನ್ ಜೊತೆ ಮಾತಾಡಿದ್ದಕ್ಕೆ ದಾಖಲೆ ಇದೆ: ಸಾರಾ ಮಹೇಶ್

    ಮೈಸೂರು: ಯಾವ ಹೀರೋಯಿನ್ ಜೊತೆ ಯಾವ ರೀತಿ ಮಾತನಾಡಿದ್ದೀರಿ ಅನ್ನೋ ದಾಖಲೆ ಇದೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಅವರು ಅನರ್ಹ ಶಾಸಕ ಹೆಚ್ ವಿಶ್ವನಾಥ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶ್ವನಾಥ್ ಅತೃಪ್ತ ಪ್ರೇತಾತ್ಮ. ತಾನು ಮಾಡಿದ ತಪ್ಪನ್ನು ಬೇರೆಯವರ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ವೈಯಕ್ತಿಕವಾಗಿ ನನ್ನ ತೇಜೋವಧೆ ಮಾಡುತ್ತಿದ್ದಾರೆ. ವಿಶ್ವನಾಥ್ ಬಾಯಿ ಬಿಟ್ಟರೆ ಸುಳ್ಳು ಹೇಳುತ್ತಾರೆ. ಬನ್ನಿ ಚಾಮುಂಡಿ ಬೆಟ್ಟಕ್ಕೆ, ನಾನು ಯಾವುದೇ ಆಸೆ, ಆಮಿಷಗಳಿಗೂ ಬಲಿಯಾಗಿಲ್ಲ. ನನಗೆ ಮಂತ್ರಿ ಸ್ಥಾನ ಬೇಡ ಎಂದು ಚಾಮುಂಡಿ ದೇವಿ ಮುಂದೆ ಪ್ರಮಾಣ ಮಾಡಿ ಹೇಳಿ ಎಂದು ಸವಾಲ್ ಹಾಕಿದರು.

    ಯಾವ ಹೀರೋಯಿನ್ ಜೊತೆ ಹೇಗೆ ಮಾತಾಡಿದ್ದೀರಿ ಅನ್ನೋ ದಾಖಲೆ ಇದೆ. ನಿಮ್ಮಂಥ ಜೀವನ ನಾನು ಮಾಡಿದರೆ ಇಷ್ಟೊತ್ತಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ. ನೀವು ಸೆಕ್ಸ್ ಫಿಲಂ ಹೀರೋ. ನೀವು ಬ್ಲೂ ಬಾಯ್. ಯಾವ ಪುಣ್ಯಾತ್ಮ ನಿಮಗೆ ಹಳ್ಳಿ ಹಕ್ಕಿ ಎಂದು ಹೆಸರಿಟ್ಟನೋ. ಚಳಿಗಾಲದಲ್ಲಿ ಒಂದು ಗೂಡು, ಮಳೆಗಾಲದಲ್ಲಿ ಒಂದು ಗೂಡು, ಬೇಸಿಗೆ ಕಾಲದಲ್ಲಿ ಒಂದು ಗೂಡು ಹುಡುಕಿ ಕೊಳ್ಳುತ್ತೀರಾ ಎಂದು ಗುಡುಗಿದರು. ಇದನ್ನು ಓದಿ: ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡೋ ಮುನ್ನ ಎಚ್ಚರಿಕೆ ಇರಲಿ: ಹೆಚ್. ವಿಶ್ವನಾಥ್

    25 ಲಕ್ಷ ದುಡ್ಡು ಪಡೆದಿದ್ದೇನೆ ಈ ವರ್ಗಾವಣೆ ಮಾಡಿ ಕೊಡಿ ಎಂದು ಅವತ್ತು ಕೇಳಿದರಲ್ಲ. ಅದನ್ನು ನಾನು ಮಾಡಿಸಿ ಕೊಡಲಿಲ್ಲ ಎಂದು ಹೀಗೆ ಮಾತನಾಡುತ್ತಿದ್ದೀರಾ? ನೀವು ವಕೀಲರಾಗಿದ್ದಾಗ ಒಬ್ಬ ವಿಧವೆ ನಿಮ್ಮ ಬಳಿ ನ್ಯಾಯ ಕೇಳೋಕೆ ಬಂದ ಅವರ ಕಥೆ ಏನಾಯ್ತು ಎಂದು ಹೇಳಬೇಕಾ? 1994 ರಲ್ಲಿ ಕೆಆರ್ ನಗರದ ಹಳ್ಳಿಗಳಿಗೆ ನೀವು ಹೋದಾಗ ಮನೆ ಬಾಗಿಲು ಯಾಕೆ ಹಾಕಿ ಕೊಳ್ಳುತ್ತಿದ್ದರು ಅನ್ನೋದು ಹೇಳಬೇಕಾ? ಎಂದು ವಿಶ್ವನಾಥ್ ಅವರನ್ನು ಪ್ರಶ್ನೆ ಮಾಡಿದರು.

    ನಾನು ನಿಮಗಿಂತ ಏಕವಚನದಲ್ಲಿ ಮಾತಾಡಬಲ್ಲೆ. ಆದರೆ ನಮ್ಮ ತಂದೆ ಸಂಸ್ಕಾರ ಕಲಿಸಿದ್ದಾರೆ ಅದಕ್ಕೆ ಮಾತಾಡಲ್ಲ. ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಿ ಸಾಕು ನಾನು ರಾಜಕೀಯ ಜೀವನದಿಂದ ನಿವೃತ್ತಿ ಪಡೆಯುತ್ತೇನೆ. ನಾನಾ ಅಯೋಗ್ಯ ನೀವಾ ಅಂತಾ ತೀರ್ಮಾನವಾಗಲಿ. ಚಡ್ಡಿ ಒಗೆದರೆ ಪರವಾಗಿಲ್ಲ. ಆದರೆ ಕಂಡ ಕಂಡ ಕಡೆ ಅದನ್ನು ಬಿಚ್ಚಬಾರದು. ನಿಮ್ಮ ಯೋಗ್ಯತೆ ಮೈಸೂರು ಮತ್ತು ಮಡಿಕೇರಿ ಜನರಿಗೆ ಗೊತ್ತಿದೆ. ಕೊಚ್ಚೆ ಗುಂಡಿ ನೀವು, ನಿಮ್ಮ ಬಗ್ಗೆ ಮಾತನಾಡಿದರೆ ನಮ್ಮ ಬಾಯಿ ಹೊಲಸಾಗುತ್ತೆ. ನನ್ನ ವೈಯಕ್ತಿಕ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಕಿಡಿಕಾರಿದರು.

    ನಾನು ಜನರ ಮನೆಗೆ ಹೋದರೆ ನನ್ನ ಅಣ್ಣ ಬಂದ, ತಮ್ಮ ಬಂದ, ಮಗ ಬಂದಾ ಎಂದು ಮನೆಯೊಳಗೆ ಕರೆಯುತ್ತಾರೆ. ನೀವು ಹೋದರೆ ಜನ ಎಲ್ಲಿ ನಿಮ್ಮನ್ನು ಕೂರಿಸುತ್ತಾರೆ ಎಂದು ಗೊತ್ತಿದೆ. ಅನರ್ಹ ಆದ ಮೇಲೆ ಹೆಚ್ ವಿಶ್ವನಾಥ್ ಹೋಗಿ ಹುಚ್ಚು ವಿಶ್ವನಾಥ್ ಆಗಿದ್ದಾರೆ. ಅವರಿಗೆ ಮೊದಲು ಚಿಕಿತ್ಸೆ ಕೊಡಿಸಬೇಕು. 9 ದಿವಸದ ನವರಾತ್ರಿಯಲ್ಲಿ ಚಾಮುಂಡಿ ಬೆಟ್ಟಕ್ಕೆ ಬನ್ನಿ ಇಲ್ಲ ಯಾವುದೇ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡಿ ಎಂದು ಹೇಳಿದರು.

  • ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡೋ ಮುನ್ನ ಎಚ್ಚರಿಕೆ ಇರಲಿ: ಹೆಚ್. ವಿಶ್ವನಾಥ್

    ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡೋ ಮುನ್ನ ಎಚ್ಚರಿಕೆ ಇರಲಿ: ಹೆಚ್. ವಿಶ್ವನಾಥ್

    – ಏನೂ ಆಗಲ್ಲ, ಧೈರ್ಯವಾಗಿರಿ ಎಂದಿದ್ದಾರೆ ಸಿಎಂ

    ಮೈಸೂರು: ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ ಎಂದು ಅನರ್ಹ ಶಾಸಕ ಹೆಚ್ ವಿಶ್ವನಾಥ್ ಅವರು ಮಾಜಿ ಸಚಿವ ಸಾರಾ ಮಹೇಶ್ ವಿರುದ್ಧ ಗುಡುಗಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲೂ ಫಿಲಂ ಮಾಡಲು ಹೋಗಿ ಸಿಕ್ಕಿ ಹಾಕಿಕೊಂಡವನಲ್ಲ. ಯಾರದ್ದೋ ಮನೆಯ ಲೋಟ ತೊಳೆದಿಲ್ಲ. ರಾಮದಾಸ್ ಮನೆ ಚಡ್ಡಿ ತೊಳೆದಿಲ್ಲ. ನಮ್ಮ ತಂದೆ ಆ ಕಾಲದಿಂದಲೂ ಜಮೀನ್ದಾರರು. ಆ ಕಾಲದಲ್ಲೇ ಕುರುಬ ಸಮಾಜಕ್ಕೆ ಜಮೀನು ಕೊಟ್ಟ ವಂಶ ನಮ್ಮದು ಎಂದು ಸಾರಾ ಮಹೇಶ್ ವಿರುದ್ಧ ವಾಗ್ದಾಳಿ ಮಾಡಿದರು.

    ನಾನು ದಿನದ ಖರ್ಚಿಗಾಗಿ ಯಾರನ್ನೂ ಕೇಳುವುದಿಲ್ಲ. ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ. ನಾವು ಐದು ತಲೆಮಾರಿನಿಂದ ಜಮೀನ್ದಾರರು. ಬಾಯಿಗೆ ಬಂದಂತೆ ಮಾತಾಡಬೇಡ. ನಾನು ಆಸ್ತಿ ಮಾರಿಕೊಂಡ ದಾಖಲೆ ಇದ್ದರೆ ತೆಗೆದುಕೊಂಡು ಪತ್ರಕರ್ತರ ಭವನಕ್ಕೆ ಬಾ. ಸಂವಿಧಾನದ ಮೇಲೆ ಆಣೆ ಇಟ್ಟು ಚರ್ಚೆ ಮಾಡೋಣ. ಅದನ್ನು ಬಿಟ್ಟು ಆ ದೇವಸ್ಥಾನಕ್ಕೆ ಬಾ ಈ ದೇವಸ್ಥಾನಕ್ಕೆ ಬಾ ಎಂದು ಮೆರೆಯಾಗಬೇಡ ಎಂದು ಸಾರಾ ಮಹೇಶ್‍ಗೆ ಅವಾಜ್ ಹಾಕಿದರು. ಇದನ್ನು ಓದಿ: ಯಾರ ಸಾಧನೆ ಎಷ್ಟು? ಭಾನುವಾರ ಜನರಿಗೆ ಗೊತ್ತಾಗುತ್ತೆ: ವಿಶ್ವನಾಥ್‍ಗೆ ಸಾ.ರಾ.ಮಹೇಶ್ ಸವಾಲ್

    ನಾನು ಯಾರ ಕುಟುಂಬಕ್ಕೂ ವಿಷ ಹಿಂಡಿಲ್ಲ. ನೀವು ಹಿಂಡಿದ ವಿಷದಿಂದ ಆ ಕುಟುಂಬದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಹೆಚ್‍ಡಿಕೆ ಅವರ ಸುತ್ತ ಇದ್ದ ಎಚ್. ವಿಶ್ವನಾಥ್ ಎಲ್ಲಿ ಹೋದರು? ಕುಮಾರಪರ್ವ ಮಾಡಿದ ಜಿಟಿಡಿ ಎಲ್ಲಿ. ಡಾ. ರಂಗಪ್ಪ, ಎಲ್.ಆರ್. ಶಿಮರಾಮೇಗೌಡ ಮತ್ತು ಪುಟ್ಟರಾಜು ಎಲ್ಲಿ ಹೋದರು. ಕುಮಾರಸ್ವಾಮಿ ಸುತ್ತ ಇದ್ದ ಈ ನಾಯಕರೆಲ್ಲ ಯಾಕೆ ಅವರಿಂದ ದೂರವಾದರು. ಹೆಚ್‍ಡಿಕೆ ಅವರ ನಾಯಕತ್ವ ಬಲಹೀನವಾಗಬಾರದು. ಯಾರೋ ಒಬ್ಬ ಶಾಸಕನ ಮಾತು ಕೇಳಿಕೊಂಡು ನಾಯಕತ್ವ ಹಾಳು ಮಾಡಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

    ನಮ್ಮ ಪದತ್ಯಾಗ ಪದವಿಗಾಗಿ ಅಲ್ಲ. ರಾಜ್ಯದಲ್ಲಿ ನಡೆಯುತ್ತಿದ್ದ ರಾಕ್ಷಸ ರಾಜಕಾರಣ ವಿರೋಧಿಸಿ ರಾಜೀನಾಮೆ ಕೊಟ್ಟಿದ್ದು. ದುಡ್ಡಿಗಾಗಿ ಇಲ್ಲಿ ಯಾರು ಯಾರನ್ನೂ ಮಾರಿಕೊಂಡಿಲ್ಲ. ಕಳೆದು ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಎಂ.ಟಿ.ಬಿ. ನಾಗರಾಜ್ ಅವರ ಗುಂಪು 80 ಕೋಟಿ ರೂಪಾಯಿ ಕೊಟ್ಟಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಬೇಕೆಂದು ಈ ಹಣ ಕೊಟ್ಟರು. ಈಗ ಅವರೇ ಇವರು ದುಡ್ಡಿಗಾಗಿ ಮಾರಿಕೊಂಡರು ಎಂದು ಹೇಳುತ್ತಿದ್ದಾರೆ ಎಂದು ಸಿದ್ದು ವಿರುದ್ಧವೂ ಕಿಡಿಕಾರಿದರು.

    ಏನೂ ಆಗಲ್ಲ, ಧೈರ್ಯವಾಗಿರಿ. ಖುದ್ದಾಗಿ ನಾನೇ ವಕೀಲರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ನಿನ್ನೆ ಕೆಲ ಅನರ್ಹ ಶಾಸಕರು ಸಿಎಂ ಭೇಟಿ ಮಾಡಿದ್ದಾರೆ ಇದು ಸಾಮಾನ್ಯ ಭೇಟಿ ಅಷ್ಟೇ. ವಿಶೇಷ ಅರ್ಥ ಇಲ್ಲ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ.

    ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ನಮ್ಮ ಕೇಸ್ ಸುಪ್ರೀಂ ಕೋರ್ಟಿನಲ್ಲಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸರಿಯಾದ ಮಾದರಿಯಲ್ಲಿ ರಾಜೀನಾಮೆ ಕೊಟ್ಟಿದ್ದೇವೆ. ರಾಜೀನಾಮೆಯ ಎಲ್ಲಾ ಬೆಳವಣಿಗೆಗಳು ಸುಪ್ರೀಂ ಕೋರ್ಟ್ ಗಮನದಲ್ಲಿದೆ. ಸುಪ್ರೀಂ ಕೋರ್ಟ್ ನಮ್ಮ ಅರ್ಹತೆಯನ್ನು ಎತ್ತಿಹಿಡಿಯಬೇಕು. ಇಲ್ಲವೇ ಅದನ್ನು ರದ್ದು ಮಾಡಬೇಕು ಅಥವಾ ಈ ಚುನಾವಣೆಗೆ ತಡೆಯಾಜ್ಞೆ ನೀಡಬೇಕು. ನಾಳೆ ಈ ಬಗ್ಗೆ ಸುಪ್ರೀಂ ಕೋರ್ಟ್ ಒಂದು ನಿರ್ಧಾರ ಪ್ರಕಟಿಸಲಿದೆ. ನಮ್ಮ ರಕ್ಷಣೆಗೆ ನ್ಯಾಯಾಲಯ ಬರಬೇಕಿದೆ ಎಂದು ವಿಶ್ವನಾಥ್ ತಿಳಿಸಿದರು.

  • ಹೆಚ್‍ಡಿಕೆಯೇ ನನ್ನನ್ನು ಬಿಜೆಪಿ ಜೊತೆ ಕಳುಹಿಸಿದ್ದಾರೆ – ಜಿಟಿಡಿ ಹೊಸ ಬಾಂಬ್

    ಹೆಚ್‍ಡಿಕೆಯೇ ನನ್ನನ್ನು ಬಿಜೆಪಿ ಜೊತೆ ಕಳುಹಿಸಿದ್ದಾರೆ – ಜಿಟಿಡಿ ಹೊಸ ಬಾಂಬ್

    ಮೈಸೂರು: ದಸರಾ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿ ಅವರೇ ನನ್ನನ್ನು ಬಿಜೆಪಿ ಜೊತೆ ಕಳುಹಿಸಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆಗೂ ಬಿಜೆಪಿ ಜೊತೆ ಕುಮಾರಸ್ವಾಮಿ ಅವರೇ ಕಳುಹಿಸಿದ್ದು, ಅವರು ನೀಡಿದ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಈಗಲೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.

    ಈ ವೇಳೆ ಜಿಟಿಡಿ ನಮ್ಮ ಹಿರಿಯ ನಾಯಕರು ಅವರನ್ನು ಬಿಟ್ಟರೆ ಅವರ ಮಗ ಜಿ.ಡಿ ಹರೀಶ್ ಚುನಾವಣೆಗೆ ನಿಲ್ಲುಸುತ್ತೇವೆ ಎಂಬ ಸಾರಾ ಮಹೇಶ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹರೀಶ್ ಮೇಲೆ ಪ್ರೀತಿ ಇದ್ದರೆ ಸಾ.ರಾ ಮಹೇಶ್ ಅವರೇ ನೇರವಾಗಿ ಅವನ ಜೊತೆ ಮಾತನಾಡಲಿ. ಹರೀಶ್ ಮೇಲೆ ಸಾ.ರಾ ಮಹೇಶ್‍ಗೆ ಎಷ್ಟು ಪ್ರೀತಿ ಇದೆ ಅನ್ನೋದು ದೇವರಿಗೆ ಗೊತ್ತಿದೆ. ಹರೀಶ್ ಮೇಲೆ ಸಾ.ರಾ ಮಹೇಶ್‍ಗೆ ಎಷ್ಟು ಪ್ರೀತಿ ಇದೆ ಅನ್ನೋದು ನನಗೆ ಗೊತ್ತಿದೆ. ಖುದ್ದು ಸಾ.ರಾ ಮಹೇಶ್‍ಗೂ ಗೊತ್ತಿದೆ ಎಂದು ವ್ಯಂಗ್ಯವಾಡಿದರು.

  • ರಾಜಕೀಯ ವ್ಯವಸ್ಥೆಯಲ್ಲಿ ನಾನು ನನ್ನನ್ನು ಮಾರಿಕೊಂಡಿಲ್ಲ: ಸಾರಾ ಮಹೇಶ್

    ರಾಜಕೀಯ ವ್ಯವಸ್ಥೆಯಲ್ಲಿ ನಾನು ನನ್ನನ್ನು ಮಾರಿಕೊಂಡಿಲ್ಲ: ಸಾರಾ ಮಹೇಶ್

    ಮೈಸೂರು: ಯಾರ ಮೇಲೆ ಆರೋಪ ಇತ್ತು ಅವರು ನಾನಲ್ಲ ಎಂದು ಹೇಳೋಕೆ ಇನ್ನೊಬ್ಬರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಅನರ್ಹ ಶಾಸಕ ವಿಶ್ವನಾಥ್ ವಿರುದ್ಧ ಮಾಜಿ ಸಚಿವ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ವ್ಯವಸ್ಥೆಯಲ್ಲಿ ಜನರಿಗೆ ನನ್ನ ಕೈಲಾದಷ್ಟು ಹಣ ಸಹಾಯ ಮಾಡುತ್ತಿರುವುದು ಸತ್ಯ. ಆದರೆ ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ ನಾನು ನನ್ನನ್ನ ಮಾರಿಕೊಂಡಿಲ್ಲ ಎಂದು ವಿಶ್ವನಾಥ್ ಮೇಲೆ ಕಿಡಿಕಾರಿದ್ದಾರೆ. ಇದನ್ನು ಓದಿ: ಹೆಚ್‍ಡಿಡಿ ಕುಟುಂಬದ ಕಣ್ಣೀರಿಗೆ ಸಾರಾ ಮಹೇಶ್ ಕಾರಣ: ಎಚ್. ವಿಶ್ವನಾಥ್

    ನೀವು ಮಾರಿಕೊಂಡು ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮನಸಾಕ್ಷಿ ಆತ್ಮಗೌರವ ಇದಿಯಾ ನಿಮಗೆ? ಇಷ್ಟು ಅನ್ಯಾಯ ಮಾಡಿ ಮಾತನಾಡುತ್ತಿದ್ದೀರಲ್ಲಾ ಏನು ಅನ್ನಿಸಲ್ವಾ. ನನ್ನನ್ನು ಕರೆದುಕೊಂಡು ಹೋಗಿ ಯಾರ ಹತ್ತಿರ ಮಾತನಾಡಿಸಿದ್ರಿ? ನೀವು ಬಾಂಬೆಯಿಂದ ಕರೆಸಿ ಯಾರನ್ನು ಮಾತನಾಡಿಸಿದ್ರಿ ಗೊತ್ತಿಲ್ವಾ. ನಿಮ್ಮ ಮನೆ ದೇವರ ಬಳಿಗೆ ಕರೆಯಿರಿ, ನೀವು ಏನ್ ಏನ್ ಮಾತನಾಡಿದ್ದೀರಿ ಎಂದು ಎಲ್ಲವನ್ನೂ ಹೇಳುತ್ತೇನೆ ಎಂದು ಸವಾಲು ಹಾಕಿದ್ದಾರೆ.

  • ಹೆಚ್‍ಡಿಡಿ ಕುಟುಂಬದ ಕಣ್ಣೀರಿಗೆ ಸಾರಾ ಮಹೇಶ್ ಕಾರಣ: ಎಚ್. ವಿಶ್ವನಾಥ್

    ಹೆಚ್‍ಡಿಡಿ ಕುಟುಂಬದ ಕಣ್ಣೀರಿಗೆ ಸಾರಾ ಮಹೇಶ್ ಕಾರಣ: ಎಚ್. ವಿಶ್ವನಾಥ್

    ಮೈಸೂರು: ಹೆಚ್. ಡಿ ದೇವೇಗೌಡರ ಕುಟುಂಬದ ಕಣ್ಣೀರಿಗೆ ಮಾಜಿ ಸಚಿವ ಸಾರಾ ಮಹೇಶ್ ಕಾರಣ ಎಂದು ಅನರ್ಹ ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ.

    ಇಂದು ಕೆ.ಆರ್. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ದೇವೇಗೌಡರ ಮನೆಯವರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದರೆ ಎಂದರೆ ಅದಕ್ಕೆ ಸಾರಾ ಮಹೇಶ್ ಮತ್ತು ಆತನ ಕೆಲ ಸ್ನೇಹಿತರು ಕಾರಣ. ದೇವೇಗೌಡರ ಮನೆಗೆ ಇವತ್ತು ಅನ್ಯಾಯವಾಗಿದ್ದರೆ ಅದಕ್ಕೂ ಸಾರಾ ಮಹೇಶ್ ಕಾರಣ. ದೇವೇಗೌಡರ ಕಣ್ಣೀರಿಗೂ ಅವರೇ ಕಾರಣ ಎಂದು ಕಿಡಿಕಾರಿದರು.

    ಸಾರಾ ಮಹೇಶ್ ದುರಹಂಕಾರದಿಂದ ಒಕ್ಕಲಿಗ ಶಾಸಕರೇ ಜೆಡಿಎಸ್‍ನಿಂದ ದೂರವಾದರು. ಇವತ್ತಿನ ದೇವೇಗೌಡರ ಈ ಸ್ಥಿತಿಗೆ ನಾವಲ್ಲ ಕಾರಣ ನೀವು. ಮಹೇಶ್ ಕ್ಷೇತ್ರದಲ್ಲಿ ಕೆಲವರಿಗೆ 500 ರೂಪಾಯಿ, 1 ಸಾವಿರ ರೂಪಾಯಿ ಕೊಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಆದರೆ ನನ್ನದ್ದು ಅಭಿವೃದ್ಧಿ ರಾಜಕಾರಣ. ಮೊದಲು ಸುಳ್ಳು ಹೇಳುವುದನ್ನು ನಿಲ್ಲಿಸಿ. ಕೆ.ಆರ್. ನಗರದ ಅಭಿವೃದ್ಧಿಗೆ ನಾನು ಮಾಡಿದಷ್ಟು ಕೆಲಸ ನೀವು ಮಾಡಿಲ್ಲ ಎಂದು ವಾಗ್ದಾಳಿ ಮಾಡಿದರು.

    ಈ ವೇಳೆ ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಗ್ಗೆ ಮಾತನಾಡಿದ ವಿಶ್ವನಾಥ್, ಕಾನೂನುಗಿಂತ ಯಾರು ದೊಡ್ಡವರಲ್ಲ. ಡಿಕೆಶಿ ಇದೆಲ್ಲದರಿಂದ ಬಹು ಬೇಗ ಮುಕ್ತವಾಗಿ ಹೊರ ಬರಲಿ. ಹೊರ ಬಂದು ರಾಜಕಾರಣ ಮಾಡಬೇಕು ಎಂದು ಹಾರೈಸಿದರು.

  • ಎಚ್‍ಡಿಕೆ ವಿರುದ್ಧ ಇನ್ನಷ್ಟು ಚೂರಿಗಳು ಬರುವುದು ಬಾಕಿ ಇದೆ- ಸಾರಾ ಮಹೇಶ್

    ಎಚ್‍ಡಿಕೆ ವಿರುದ್ಧ ಇನ್ನಷ್ಟು ಚೂರಿಗಳು ಬರುವುದು ಬಾಕಿ ಇದೆ- ಸಾರಾ ಮಹೇಶ್

    ಮೈಸೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಇನ್ನಷ್ಟು ಚೂರಿಗಳು ಬರುವುದು ಬಾಕಿ ಇದೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಪರೋಕ್ಷವಾಗಿ ಜಿ.ಟಿ.ದೇವೇಗೌಡರ ವಿರುದ್ಧ ಹರಿಹಾಯ್ದಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ಅಲ್ಲಲ್ಲಿ ಚೂರಿಗಳ ಮಾತುಗಳು ಕೇಳುತ್ತಿವೆ. ಅವೆಲ್ಲವು ಶೀಘ್ರದಲ್ಲೇ ಹೊರ ಬರಲಿವೆ. ನಮ್ಮ ಪಕ್ಷದಲ್ಲೇ ಚೂರಿಗಳ ಸದ್ದು ಕೇಳಿಸುತ್ತಿದೆ. ಆದರೆ ಎಲ್ಲ ಚೂರಿಗಳನ್ನು ಅರಗಿಸಿಕೊಳ್ಳುವ ಶಕ್ತಿ ಕುಮಾರಸ್ವಾಮಿ ಅವರಿಗಿದೆ ಎಂದು ಹೇಳಿದರು.

    14 ತಿಂಗಳು ಮುಖ್ಯಮಂತ್ರಿಯಾಗಿದ್ದಾಗ ಎಚ್‍ಡಿಕೆ ಉಂಡಷ್ಟು ನೋವು ಯಾರು ಉಣ್ಣಲಿಲ್ಲ. ಬೆಳಗ್ಗೆ ಒಂದು ಗಂಟೆ ಅಧಿಕಾರಿಗಳ ಸಭೆ ಮಾಡಿದರೆ ಮುಗಿಯಿತು. ನಂತರ ಅಸಮಾಧಾನಗೊಂಡ ಶಾಸಕರ ಸಮಾಧಾನದಲ್ಲೇ ಸಮಯ ಕಳೆಯಬೇಕಾಗಿತ್ತು. ಕುಮಾರಸ್ವಾಮಿಯವರ ಹತ್ತಿರವೇ ನಾನಿದ್ದ ಕಾರಣ ಅವರು ಉಂಡ ಎಲ್ಲ ನೋವುಗಳು ನನಗೆ ತಿಳಿದಿದೆ. ಇದೀಗ ಅಧಿಕಾರ ಹೋದ ನಂತರದಲ್ಲಿ ಮತ್ತೆ ಅದೇ ನೋವು ಮುಂದುವರಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ನಿನ್ನೆ ಮೈಸೂರಿನಲ್ಲಿ ನಡೆದ ಜೆಡಿಎಸ್ ಸಭೆಗೆ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಗೈರಾಗಿರುವುದರ ಕುರಿತು ಜಿಟಿಡಿ ಹಾಗೂ ದೇವೇಗೌಡರ ನಡುವೆ ವಾಗ್ವಾದ ನಡೆದಿತ್ತು. ಎಚ್‍ಡಿಡಿ ಪ್ರತಿಕ್ರಿಯಿಸಿ ಅವರು ಎಲ್ಲಿಗಾದರೂ ಹೋಗಲಿ ಬಿಡಿ, ಅವರ ಪಾಡಿಗೆ ಅವರನ್ನು ಬಿಡಿ ಎಂದು ಹೇಳಿದ್ದರು. ಇದಕ್ಕೆ ಜಿಟಿಡಿ ಪ್ರತಿಕ್ರಿಯಿಸಿ, ಜೆಡಿಎಸ್ ಸಭೆಗೆ ನನ್ನನ್ನು ಆಹ್ವಾನಿಸಿರಲಿಲ್ಲ. ಹೀಗಾಗಿ ನಾನು ಸಭೆಗೆ ಹೋಗಿಲ್ಲ ಎಂದು ತಿಳಿಸಿದ್ದರು. ಈ ಮಧ್ಯೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಸಾರಾ ಮಹೇಶ್‍ಗೆ ಸಚಿವ ಸ್ಥಾನ ನೀಡಬೇಡಿ ಎಂದು ಜಿಟಿಡಿ ಹೇಳಿದ್ದರು ಎಂದು ಹೇಳಿದ್ದರು. ಇದಕ್ಕೆ ಜಿಟಿಡಿ ಆಕ್ರೋಶ ವ್ಯಕ್ತಪಡಿಸಿ, ಚಾಮುಂಡಿ ತಾಯಿಯಾಣೆ ನಾನು ಸಾರಾ ಮಹೇಶ್‍ಗೆ ಸಚಿವ ಸ್ಥಾನ ನೀಡಬೇಡಿ ಎಂದು ಹೇಳಿಲ್ಲ ಎಂದು ತಿರುಗೇಟು ನೀಡಿದ್ದರು. ಇದೀಗ ಸಾರಾ ಮಹೇಶ್ ಪರೋಕ್ಷವಾಗಿ ಜಿಟಿಡಿ ವಿರುದ್ಧ ಹರಿಹಾಯ್ದಿದ್ದಾರೆ.

  • ಕೊನೆಗೂ ಬಿಎಸ್‍ವೈಗೆ ಲಕ್ಕಿ ಸರ್ಕಾರಿ ಬಂಗಲೆ ಬಿಟ್ಟು ಕೊಟ್ಟ ಸಾರಾ ಮಹೇಶ್

    ಕೊನೆಗೂ ಬಿಎಸ್‍ವೈಗೆ ಲಕ್ಕಿ ಸರ್ಕಾರಿ ಬಂಗಲೆ ಬಿಟ್ಟು ಕೊಟ್ಟ ಸಾರಾ ಮಹೇಶ್

    ಬೆಂಗಳೂರು: ಮಾಜಿ ಸಚಿವ ಸಾರಾ ಮಹೇಶ್ ಅವರು ಕೊನೆಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸರ್ಕಾರಿ ಬಂಗಲೆಯನ್ನು ಬಿಟ್ಟುಕೊಟ್ಟಿದ್ದಾರೆ.

    ಇನ್ನೂ 15 ದಿನ ಇರುವಾಗಲೇ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಂಬರ್ 2 ನಿವಾಸವನ್ನು ಮಾಜಿ ಸಚಿವರು ಖಾಲಿ ಮಾಡಿದ್ದಾರೆ. ಈ ಮೊದಲು ನಿವಾಸ ಬಿಟ್ಟು ಕೊಡುವಂತೆ ಸಿಎಂ ಬಿಎಸ್‍ವೈ ಅವರು ಅಧಿಕಾರಿಗಳ ಮೂಲಕ ಸಾರಾ ಮಹೇಶ್ ಗೆ ಸೂಚನೆ ನೀಡಿದ್ದರು. ಆದರೆ ಯಡಿಯೂರಪ್ಪ ಅವರ ಮಾತಿಗೆ ಸಾರಾ ಮಹೇಶ್ ಅವರು ಕ್ಯಾರೇ ಎಂದಿರಲಿಲ್ಲ.

    ಬಿಎಸ್‍ವೈ ಮಾತಿಗೆ ಕಿವಿಗೊಡದೆ ಇಷ್ಟು ದಿನ ಮಹೇಶ್ ನಿವಾಸದಲ್ಲೇ ಇದ್ದರು. ಮೈತ್ರಿ ಸರ್ಕಾರ ಬಿದ್ದು, ಅಧಿಕಾರ ಹೋದರೂ ಆ ಮನೆ ಬಿಡದೆ ಇಷ್ಟು ದಿನ ಅಲ್ಲೇ ವಾಸ್ತವ್ಯವಿದ್ದರು. ಇದೀಗ ಸರ್ಕಾರ ಬಿದ್ದ 50 ದಿನಕ್ಕೆ ಮಾಜಿ ಸಚಿವರು ಮನೆ ಖಾಲಿ ಮಾಡಿದ್ದಾರೆ. ಈ ಬೆನ್ನಲ್ಲೇ ಸಿಎಂ ಅವರ ವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಖಾಲಿ ಮಾಡಿದ ಒಂದೇ ದಿನಕ್ಕೆ ಸಿಬ್ಬಂದಿ ಮನೆಗೆ ಸುಣ್ಣ ಬಣ್ಣ ಹಚ್ಚುವ ಮೂಲಕ ಸರ್ಕಾರಿ ಬಂಗಲೆಯನ್ನು ನವೀಕರಣ ಮಾಡುವ ಕೆಲಸ ಆರಂಭಿಸಿದ್ದಾರೆ.

    ಮನೆಯೊಳಗಿರುವ ಗೋಡೆಗಳನ್ನು ಸರಿ ಪಡಿಸುವುದು, ಗೋಡೆಗೆ ಮತ್ತೊಮ್ಮೆ ಪ್ಲಾಸ್ಟಿಂಗ್ ಮಾಡುವುದು, ಹಾಗೂ ಹೊಸದಾಗಿ ಗೋಡೆಗೆ ಪೇಂಟಿಂಗ್ ಮಾಡುವ ಕೆಲಸವನ್ನು ಕಾರ್ಮಿಕರು ಮಾಡುತ್ತಿದ್ದಾರೆ. ಪಿಡಬ್ಲ್ಯೂಡಿ ಅಧಿಕಾರಿಗಳ ಸೂಚನೆಯ ಮೇರೆಗೆ ಬಿಎಸ್‍ವೈ ಅವರ ಲಕ್ಕಿ ಹೌಸ್ ನ ನವೀಕರಣ ನಡೆಯುತ್ತಿದೆ.

    ಲಕ್ಕಿ ಮನೆಗಾಗಿ ಬಿಎಸ್‍ವೈ ಪಟ್ಟು:
    ನಾಲ್ಕನೇ ಬಾರಿ ಮುಖ್ಯಮಂತ್ರಿಯಾದರೂ ಬಿಎಸ್‍ವೈ ಅವರು ತಮ್ಮ ಹಳೆಯ ಈ ಲಕ್ಕಿ ಹೌಸನ್ನು ಬಿಟ್ಟಿಲ್ಲ. ಮುಖ್ಯಮಂತ್ರಿಯಾಗಿ ಅಧಿಕಾರ ಮಹಿಸಿಕೊಂಡರೂ ಗೃಹ ಕಚೇರಿ ಕೃಷ್ಣಾದಲ್ಲಿ ನೆಲೆಸದೇ ತಮ್ಮ ಹಳೆಯ ರೇಸ್ ಕೋರ್ಸ್ ನಿವಾಸಕ್ಕೆ ಮರಳಲು ನಿರ್ಧರಿಸಿದ್ದರು. ಈ ಹಿಂದೆಯೂ ಸಿಎಂ ಆಗಿದ್ದಾಗ ಬಿಎಸ್‍ವೈ ಅವರು ಇದೇ ನಿವಾಸದಲ್ಲಿ ನೆಲೆಸಿದ್ದರು. ಅಲ್ಲದೆ 2004ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾಗಲೂ ಇದೇ ನಿವಾಸದಲ್ಲಿ ವಾಸವಾಗಿದ್ದರು. ಇದೇ ಮನೆಯಲ್ಲಿ ಇದ್ದಾಗ ಬಬಿಎಸ್‍ವೈ ಅವರು ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿ ಗದ್ದುಗೆಯನ್ನೂ ಏರಿದ್ದರು.

    ಸಮ್ಮಿಶ್ರ ಸರ್ಕಾರ ಬಂದ ಸಮಯದಲ್ಲಿ ಯಡಿಯೂರಪ್ಪ ವಿರೋಧ ಪಕ್ಷದ ನಾಯಕರಾಗಿದ್ದಾಗಲೂ ನನಗೆ ಇದೇ ಮನೆ ಬೇಕು ಎಂದು ಕುಮಾರಸ್ವಾಮಿಗೆ ಮನವಿ ಮಾಡಿದ್ದರು. ಯಡಿಯೂರಪ್ಪನವರ ಮನವಿಯನ್ನು ತಿರಸ್ಕರಿಸಿ ಶಿವಾನಂದ ಸರ್ಕಲ್ ಬಳಿಯ ನಿವಾಸವನ್ನು ಬಿಎಸ್‍ವೈ ನೀಡಿದ್ದರು. ಆದರೆ, ಯಡಿಯೂರಪ್ಪ ಮಾತ್ರ ಶಿವಾನಂದ ಸರ್ಕಲ್ ಬಳಿ ನಿವಾಸಕ್ಕೆ ಹೋಗಿರಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಸಾರಾ ಮಹೇಶ್ ನನಗೆ ರೇಸ್ ಕೋರ್ಸ್ ಮನೆಯೇ ಬೇಕು ಎಂದು ಹಠ ಹಿಡಿದು, ಅದೇ ಮನೆ ಪಡೆದಿದ್ದರು. ಬದಲಾದ ಕಾಲ ಘಟ್ಟದಲ್ಲಿ ಮತ್ತೆ ಯಡಿಯೂರಪ್ಪ ಸಿಎಂ ಆಗಿದ್ದು, ಮಾಜಿ ಸಚಿವರಾಗಿದ್ದ ಸಾರಾ ಮಹೇಶ್ ಮನೆ ಖಾಲಿ ಮಾಡಲು ಸೂಚನೆ ನಿಡಿದ್ದರು. ಸದ್ಯ ಮಾಜಿ ಸಚಿವರು ಮುಖ್ಯಮಂತ್ರಿಗಳಿಗೆ ನಿವಾಸ ಬಿಟ್ಟುಕೊಟ್ಟಿದ್ದಾರೆ.

    ಲಕ್ಕಿ ಮನೆ ಯಾಕೆ?
    ಒಂದು ರೀತಿಯಲ್ಲಿ ಬಿಎಸ್‍ವೈಗೆ ಇದು ಲಕ್ಕಿ ಮನೆ ಎಂದು ಹೇಳಲಾಗುತ್ತಿದ್ದು, ಇನ್ನು ಮನೆಯ ವಾತಾವರಣವೂ ಸಹ ಉತ್ತಮವಾಗಿದೆ. ಹೀಗಾಗಿ ಬಹುತೇಕ ನಾಯಕರು ಇದೇ ಮನೆ ಬೇಕು ಎನ್ನುತ್ತಾರೆ ಎಂದು ತಿಳಿದು ಬಂದಿದೆ. ಈ ಲಕ್ಕಿ ಮನೆಯಲ್ಲಿ ಉತ್ತಮವಾದ ಪರಿಸರ ವಾತಾವರಣ ಇದೆ. ಅಲ್ಲದೆ, ವಾಕಿಂಗ್ ಪಾಥ್, ಹುಲ್ಲು ಹಾಸು, ಬೃಹತ್ ಮರಗಳ ನೆರಳು ಈ ರೇಸ್ ಕೋರ್ಸ್ ನಿವಾಸದಲ್ಲಿ ಇದೆ. ಹೀಗಾಗಿ ಯಡಿಯೂರಪ್ಪ ಅವರಿಗೆ ಈ ಮನೆ ಇಷ್ಟ ಆಗಿದೆ. 2008ರಲ್ಲಿ ಸಿಎಂ ಆದಾಗ ಯಡಿಯೂರಪ್ಪ ಇದೇ ಮನೆಯಲ್ಲಿ ಇದ್ದರು. ಈ ಮನೆಗೆ ಬಂದ ಮೇಲೆ ಸಿಎಂ ಸ್ಥಾನ ಸಿಕ್ಕಿತು ಎಂಬ ನಂಬಿಕೆ ಯಡಿಯೂರಪ್ಪ ಅವರಿಗೆ ಇದೆ. ಹೀಗಾಗಿ ಮತ್ತೆ ತಮ್ಮ ಅದೃಷ್ಟದ ಮನೆಗೆ ಹೋಗುತ್ತಿದ್ದಾರೆ.

  • ಜೆಡಿಎಸ್‍ನಲ್ಲಿ ನಾನಿರೋದು ಬಹಳ ಜನಕ್ಕೆ ಇಷ್ಟವಿಲ್ಲ – ಜಿಟಿಡಿ

    ಜೆಡಿಎಸ್‍ನಲ್ಲಿ ನಾನಿರೋದು ಬಹಳ ಜನಕ್ಕೆ ಇಷ್ಟವಿಲ್ಲ – ಜಿಟಿಡಿ

    – ಗೌಡರ ಕುಟುಂಬದ ವಿರುದ್ಧ ಸ್ಫೋಟಕ ಹೇಳಿಕೆ
    – ಚುನಾವಣಾ ನಿವೃತ್ತಿ ಘೋಷಿಸಿದ ಜಿಟಿಡಿ

    ಮೈಸೂರು: ಗೌಡರ ಕುಟುಂಬದ ವಿರುದ್ಧ ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಜೆಡಿಎಸ್‍ನಲ್ಲಿ ಇರುವುದು ಬಹಳ ಮಂದಿಗೆ ಇಷ್ಟವಿಲ್ಲ ಎಂದು ಹೇಳಿಕೆ ನೀಡಿ ಭಾರೀ ಚರ್ಚೆಗೆ ಕಾರಣವಾಗಿದ್ದಾರೆ.

    ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದರು. ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ನನಗೆ ಉನ್ನತ ಶಿಕ್ಷಣ ಸಚಿವ ಸ್ಥಾನ ಬೇಡ ಎಂದು ಮುನಿಸಿಕೊಂಡಿದ್ದೆ. ಆಗ ಅವರು ನಾನು ಹಾಗೇ ದೂರವಾಗಲಿ ಎಂದು ಕಾಯುತ್ತಿದ್ದರು. ಮಂತ್ರಿ ಸ್ಥಾನ ತೆಗೆದುಕೊಳ್ಳದೆ ವಾಪಸ್ ಹೋಗಲಿ ಎಂದು ಕಾಯುತ್ತಿದ್ದರು. ನಾನು ಮಾತ್ರ ಈ ಸರ್ಕಾರ ಉಳಿಸಲು ಕೊನೆ ಕ್ಷಣದವರೆಗೂ ಹೋರಾಡಿದೆ. ಕುಮಾರಸ್ವಾಮಿಯನ್ನು ಸಿಎಂ ಮಾಡಲು, ಉಳಿಸಲು ನಾನು ಶತ ಪ್ರಯತ್ನ ಮಾಡಿದ್ದೇನೆ. ಆದರೆ ನಾನು ಜೆಡಿಎಸ್‍ನಲ್ಲಿ ಇರುವುದು ಬಹಳ ಮಂದಿಗೆ ಇಷ್ಟವಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಜಿ.ಟಿ.ದೇವೆಗೌಡ ಅವರ ಈ ಹೇಳಿಕೆ ಸದ್ಯ ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

    ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯರನ್ನು ಜನ ಸೋಲಿಸಿ, ನನ್ನನ್ನು ಗೆಲ್ಲಿಸಿ ಕುಮಾರಸ್ವಾಮಿ ಅವರು ಸಿಎಂ ಆಗಲು ಕಾರಣವಾದರು. ಆಗ ಎಲ್ಲಾ ಕಡೆ ಕುಮಾರಸ್ವಾಮಿ ಅವರು ಸಿಎಂಗೆ ಇರುವ ಅಧಿಕಾರ ಜಿಟಿಡಿಗೂ ಇದೆ ಎಂದು ಹೇಳಿದ್ದರು. ಆದರೆ ಸಿಎಂ ಆದ ಮೇಲೆ ನಾನು ಯಾವ ಖಾತೆ ಬೇಡ ಎಂದು ಹೇಳಿದ್ದೆನೋ ಅದೇ ಖಾತೆ ಕೊಟ್ಟರು. ನಾನು ಮುನಿಸಿಕೊಂಡರೂ ಸಮಾಧಾನ ಮಾಡಲು ಬರಲಿಲ್ಲ. ನಾನು ಖಾತೆ ಬಿಟ್ಟು ಹೋಗಲಿ ಎಂದು ಕಾಯುತ್ತಿದ್ದರು. ಬಳಿಕ ಮಂಡ್ಯ ರಮೇಶ್ ಅವರು ಸಹಕಾರ ಕೊಡುತ್ತೇನೆ ಎಂದು ಕರೆದುಕೊಂಡು ಹೋದರೂ ಸಹಕರಿಸಲಿಲ್ಲ. ಕೊನೆಗೆ ಉನ್ನತ ಶಿಕ್ಷಣ ಖಾತೆಯನ್ನೇ ತಗೆದುಕೊಂಡು ಯಶಸ್ವಿಯಾಗಿ ನಿರ್ವಹಿಸಿದೆ. ನಾನು ಡಿ.ಕೆ ಶಿವಕುಮಾರ್ ಅವರು ಮುಂಬೈಗೆ ಹೋಗಿದ್ದ ಶಾಸಕರನ್ನು ಕರೆತರಲು ಹೋಗಿದ್ದೇವು. ಕೊನೆ ಕ್ಷಣದವರೆಗೂ ಕುಮಾರಸ್ವಾಮಿ ಸಿಎಂ ಆಗಿರಬೇಕು ಎಂದು ಹೋರಾಡಿದೆವು. ಆದರೆ ಪ್ರಯೋಜನವಾಗಿಲ್ಲ ಎಂದು ಹೇಳಿದರು.

    ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಮಾಜಿ ಸಚಿವ ಸಾರಾ ಮಹೇಶ್ ಅವರೇ ಸಿಎಂ ಆಗಿರುವ ರೀತಿ ಆ್ಯಕ್ಟಿಂಗ್ ಮಾಡಿ ಕೆಲಸ ಮಾಡಿದ್ದಾರೆ. ಆದ್ದರಿಂದ ಅವರನ್ನೇ ಕಾರ್ಯಕಾರಣ ಸಮಿತಿಗೆ ಹಾಕಿದ್ದಾರೆ. ರಾಜ್ಯ ಮಟ್ಟದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ, ರಾಷ್ಟ್ರಮಟ್ಟದಲ್ಲೂ ಪಕ್ಷ ಬೆಳೆಸುವ ಕೆಲಸ ಮಾಡಲಿ ಎಂದು ಸಾರಾ ಮಹೇಶ್ ಅವರನ್ನು ಸಮಿತಿಗೆ ಹಾಕಿದ್ದಾರೆ. ಅವರಿಗೆ ನಾನು ಅಭಿನಂದನೆ ತಿಳಿಸುತ್ತೇನೆ ಎಂದರು.

    ನನ್ನನ್ನು ಜೆಡಿಎಸ್ ಬೇಡ ಎಂದಿಲ್ಲ, ನಾನು ಕೂಡ ಜೆಡಿಎಸ್ ಪಕ್ಷವನ್ನು ಬೇಡ ಎಂದಿಲ್ಲ. ಆದರೆ ನಾನು ಬಿಜೆಪಿಗೆ ಹೋದಾಗ ಹುಣಸೂರು ಕ್ಷೇತ್ರದಿಂದ ಸೋತಿದ್ದೆ. ಆಗ ಸಿಎಂ ಯಡಿಯೂರಪ್ಪ ಅವರು ನನಗೆ ಸೋತ್ತಿದ್ದರೂ ಕ್ಯಾಬಿನೆಟ್ ದರ್ಜೆ ಕೊಟ್ಟು, ಗೃಹ ಮಂಡಳಿ ಅಧ್ಯಕ್ಷನ್ನಾಗಿ ಮಾಡಿದ್ದರು. ಬಳಿಕ ಇವರೇ ನನ್ನನ್ನು ವಾಪಸ್ ಪಕ್ಷಕ್ಕೆ ಬನ್ನಿ ಎಂದು ಕರೆದರು. ಧರ್ಮಸಿಂಗ್ ಅವರು ಸಿಎಂ ಆಗಿದ್ದಾಗ ನನಗೆ ಸಚಿವ ಸ್ಥಾನ ನೀಡಲಿಲ್ಲ, ಬೇರೆ ನಾಯಕರಿಗೆ ಸಚಿವ ಸ್ಥಾನ ಕೊಟ್ಟಿದ್ದರು. ಆದರೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಸೋತ ಬಳಿಕ ನನ್ನನ್ನು ಏಳು ತಿಂಗಳ ಕಾಲ ಮಂತ್ರಿ ಮಾಡಿದರು ಎಂದು ಕಿಡಿಕಾರಿದರು.

    ಹುಣಸೂರು ಉಪಚುನಾವಣೆ ನಡೆದರೆ ಜೆಡಿಎಸ್ ಸೋಲುತ್ತದೆ ಎಂದು ಚುನಾವಣೆಗೂ ಮುನ್ನವೆ ಜಿಟಿಡಿ ಭವಿಷ್ಯ ನುಡಿದಿದ್ದಾರೆ. ಹುಣಸೂರು ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲು ಖಚಿತ. ಕಾಂಗ್ರೆಸ್ ಅಭ್ಯರ್ಥಿ ಅಲ್ಲಿ ಗೆಲ್ಲುತ್ತಾರೆ. ನನ್ನ ಮಗನನ್ನು ಅಲ್ಲಿಂದ ಸ್ಪರ್ಧಿಸುವಂತೆ ಹೆಚ್‍ಡಿಕೆ ಕೇಳಿದ್ದರು. ನಾನು ಇಲ್ಲ ಎಂದಿದ್ದೇನೆ. ನನ್ನ ಮಗ ಬೇಕಾದರೆ ಚಾಮುಂಡೇಶ್ವರಿ ಕ್ಷೇತ್ರದಿಂದ ಮುಂದೆ ಸ್ಪರ್ಧೆ ಮಾಡಲಿ. ಸದ್ಯಕ್ಕೆ ನಾವು ಯಾವ ಉಪಚುನಾವಣೆಯಲ್ಲು ಸ್ಪರ್ಧೆ ಮಾಡುತ್ತಿಲ್ಲ ಎಂದು ತಮ್ಮ ನಿರ್ಧಾರ ತಿಳಿಸಿದರು.

    ಸಚಿವನಾಗಿದ್ದಾಗ ಕ್ಷಣ ಕ್ಷಣಕ್ಕೂ ಅವಮಾನ ಮತ್ತು ನೋವು ಉಣ್ಣುತ್ತಿದ್ದೆ. ನಾನು ಈಗ ಬಹಳ ಆರಾಮಾಗಿದ್ದೇನೆ. ಯಾವ ಅವಮಾನವು ಇಲ್ಲ, ನೋವು ಇಲ್ಲ. ಈಗ ಜೆಡಿಎಸ್ ಸಂಘಟನೆ ಪಟ್ಟಿಯಲ್ಲಿ ನನ್ನ ಹೆಸರಿಲ್ಲದ ಕಾರಣ ತಲೆಯ ಮೇಲಿದ್ದ ದೊಡ್ಡ ಬಂಡೆ ಇಳಿದಂತಾಗಿದೆ. ಚುನಾವಣೆ ರಾಜಕಾರಣದಿಂದ ನಿವೃತ್ತಿ ಪಡೆದು ಮಗನಿಗೆ ಬಿಟ್ಟುಕೊಡುತ್ತಿದ್ದೇನೆ. ಈಗ ಬಡವರ ಸೇವೆ ಮಾಡಿಕೊಂಡು ನೆಮ್ಮದಿಯಾಗಿದ್ದೇನೆ ಎಂದು ಹೇಳಿದರು.

    ದಸರಾದಲ್ಲಿ ಬಿಜೆಪಿಯವರ ಜೊತೆ ಕೂರೋಲ್ಲ ಎಂಬ ಸಾ.ರಾ.ಮಹೇಶ್ ಹೇಳಿಕೆ ವಿಚಾರವಾಗಿ ಮಾತನಾಡಿ, ನಾನು ಸಾ.ರಾ.ಮಹೇಶ್‍ರನ್ನ ಬಹು ಹತ್ತಿರದಿಂದ ನೋಡಿದ್ದೇನೆ. ಅವರು ಬಿಜೆಪಿಯಲ್ಲಿದ್ದಾಗ, ನಂತರ ಜೆಡಿಎಸ್ ಬಂದಾಗಲೂ ಅವರನ್ನು ನೋಡಿದ್ದೇನೆ. ಸಿಎಂ ಜೊತೆ ಇದ್ದಾಗಲೂ ನೋಡಿದ್ದೇನೆ. ಅವರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

  • ವಿಶ್ವನಾಥ್ ಕರೆದಲ್ಲಿಗೆ ನಾನು ಹೋಗುತ್ತೇನೆ- ಸಾರಾ ಮಹೇಶ್

    ವಿಶ್ವನಾಥ್ ಕರೆದಲ್ಲಿಗೆ ನಾನು ಹೋಗುತ್ತೇನೆ- ಸಾರಾ ಮಹೇಶ್

    ಬೆಂಗಳೂರು: ಅನರ್ಹ ಶಾಸಕ ಎಚ್ ವಿಶ್ವನಾಥ್ ಅವರು ನನ್ನನ್ನು ಕರೆಯುತ್ತಾರೆ ಎಂದು ಕಾಯುತ್ತಿದ್ದೆ. ಆದರೆ ಅವರು ನನ್ನ ಕರೆದಿಲ್ಲ. ಹೀಗಾಗಿ ಅವರು ಕರೆದಲ್ಲಿಗೆ ನಾನು ಹೋಗುತ್ತೇನೆ ಎಂದು ಮಾಜಿ ಸಚಿವ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಗೌಡರ ಕುಟುಂಬಕ್ಕೆ ವಿಷವುಣಿಸಿದ ಕೀರ್ತಿ ಪುರುಷ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಾರಾ ಮಹೇಶ್, ಅವರು ಏನು ಹೇಳಿದ್ದಾರೋ ಅದೆಲ್ಲ ಸರಿಯಾಗಿಯೇ ಇದೆ. ಯಾಕೆಂದರೆ 2008ರಲ್ಲಿ ನನ್ನಿಂದಾಗಿ ನನ್ನ ಕ್ಷೇತ್ರದ ಜನ 20,848 ಮತಗಳ ಅಂತರದಿಂದ ಅವರನ್ನು ಸೋಲಿಸಿದರು. 10 ವರ್ಷ ಅಜ್ಞಾತ ವಾಸದಲ್ಲಿದ್ದಂತವರನ್ನು ಜೆಡಿಎಸ್ ಪಕ್ಷಕ್ಕೆ ಕರೆದುಕೊಂಡು ಬರಲು ಒಪ್ಪಿಕೊಂಡಿದ್ದೆ ಅಲ್ವ ಅದರ ಪಶ್ಚಾತ್ತಾಪ ಈಗ ಕಾಡುತ್ತಿದೆ ಎಂದರು.

    ಅವರು 30 ವರ್ಷ ರಾಜಕಾರಣ ಮಾಡಿ ಇಂದು ಸುದ್ದಿಗೋಷ್ಠಿ ಮಾಡಲು ಪೊಲೀಸ್ ಭದ್ರತೆ ಕೇಳಿದ್ದಾರೆ. ಇದರಿಂದ ಅವರ ಸ್ಥಿತಿ ಏನು ಎಂಬುದನ್ನು ನೀವೇ ಅರ್ಥಮಾಡಿಕೊಳ್ಳಿ ಎಂದು ತಿಳಿಸಿದರು.

    ಅವರು ನನ್ನನ್ನು ಕರೆದಿದ್ದರೆ ಇಂದು ನಾನು ಅವರ ಸುದ್ದಿಗೋಷ್ಠಿಗೆ ಹೋಗುತ್ತಿದ್ದೆ. ಆದರೆ ಅವರು ನನ್ನ ಕರೆದಿಲ್ಲ. ಅವರು ಕರೆಯಬಹುದೆಂಬ ನಿರೀಕ್ಷೆಯಿಂದ ನಾನು ಮೈಸೂರಿನಲ್ಲೇ ಇದ್ದೆ. ನಾನು ಅವರಿಗೆ ಏನು ಹೇಳಿದ್ದೀನಿ ಎಂಬುದರ ಕುರಿತು ಅವರೊಂದಿಗೆ ನಾಳೆ ಮಾತನಾಡುತ್ತೇನೆ. ಅವರು ಕರೆಯುವುದಕ್ಕೆ ನಾನು ಕಾಯುತ್ತಿದ್ದೇನೆ. ಅವರು ಎಲ್ಲಿ ಕರೆಯುತ್ತಾರೋ ಅಲ್ಲಿಗೆ ಹೋಗುತ್ತೇನೆ ಎಂದರು.

    ಸಿದ್ದರಾಮಯ್ಯ ಇರುವಲ್ಲಿ ನನ್ನನ್ನು ಬರಬೇಡಿ ಎಂದು ಹೇಳಿದವರಲ್ಲಿ ನೀವೂ ಕೂಡ ಒಬ್ಬರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹೋಗ್ಲಿ ಬಿಡಿ ನಾನು ಅಷ್ಟು ಶಕ್ತಿವಂತ ನಾನು ಎಂಬುದನ್ನು ಒಪ್ಪಿಕೊಂಡಿದ್ದಾರಲ್ವ. ಈ ಮೂಲಕ ಕಾಂಗ್ರೆಸ್ ನಲ್ಲೂ ನಾನು ಪ್ರಭಾವಶಾಲಿ ಎಂದು ಹೇಳಿರುವುದಕ್ಕೆ ಖುಷಿ ಇದೆ ಅಂದರು. ಅವರೇನು ನಾನೇನು ಎಂಬುದು ನಮ್ಮ ಕ್ಷೇತ್ರದ ಜನರಿಗೆ ತಿಳಿದಿದೆ. ನನ್ನನ್ನು ನನ್ನ ಕ್ಷೇತ್ರದ ಜನ ಮೂರು ಸಾರಿ ಗೆಲ್ಲಿಸಿದ್ದಾರೆ. ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ ಎಂದರು.

    ವಿಶ್ವನಾಥ್ ಹೇಳಿದ್ದೇನು?:
    ನನ್ನನ್ನು ಸಿದ್ದರಾಮಯ್ಯ ಅವರಿಂದ ದೂರ ಮಾಡಿದ್ದೇ ಜೆಡಿಎಸ್. ಸಿದ್ದರಾಮಯ್ಯ ಇದ್ದಾರೆ ಸಮನ್ವಯ ಸಮಿತಿಗೆ ಬರಬೇಡಿ. ಸಿದ್ದರಾಮಯ್ಯ ಇದ್ದಾರೆ ದೋಸ್ತಿ ಸಭೆಗೆ ಬರಬೇಡಿ ಎಂದು ಹೇಳುತ್ತಾರೆ. ಯಾವ ಸಿದ್ದರಾಮಯ್ಯರಿಂದ ನಾನು ಕಾಂಗ್ರೆಸ್ ಬಿಡಬೇಕಾಯ್ತೋ, ಅದೆ ಸಿದ್ದರಾಮಯ್ಯರಿಂದ ಇಲ್ಲಿ ಕಿರುಕುಳ. ವಿಶ್ವನಾಥ್ ಬರಲಿ ಎಂದು ಹೇಳುವ ನೈತಿಕತೆ ನಿಮ್ಮಲ್ಲಿ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

    ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಎಂಜಿನಿಯರ್ ಆಗಿರುವ ನನ್ನ ಅಳಿಯನಿಗೆ ಏಯ್, ಅಮಾನತು ಮಾಡುತ್ತೇವೆ ಎಂದು ಬ್ಲಾಕ್ ಮೇಲ್ ಮಾಡಿದ್ದಾರೆ. ಆಗ ನಾನು ಅಮಾನತು ಮಾಡಿದ್ರೆ ಮಾಡಲಿ ಎಂದು ಆತನಿಗೆ ಸಮಾಧಾನ ಮಾಡಿದೆ. ಇದನ್ನೆಲ್ಲಾ ಗಮನಿಸಿದಾಗ ಈ ರಾಜಕಾರಣ ಎಲ್ಲಿಗೆ ಬಂದು ತಲುಪಿದೆ ಎಂಬ ಪ್ರಶ್ನೆ ಮೂಡುತ್ತದೆ. ಇಷ್ಟು ವರ್ಷ ರಾಜಕಾರಣ ಮಾಡಿದ ನನ್ನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಕಚೇರಿಯಿಂದ ಬೆದರಿಕೆ ಹಾಕುತ್ತೀರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.

    ನಿನ್ನೆ ಕೆಆರ್ ಪೇಟೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಆದರೆ ಇದೇ ಸಾರಾ ಮಹೇಶ್ ಅವರು ಈ ಹಿಂದೆ, ಕೆ.ಆರ್ ಪೇಟೆ, ಮಂಡ್ಯ ಜನ ನಮಗೆ ವಿಷವುಣಿಸಿದ್ದರು ಎಂದಿದ್ದರು. ಆದರೆ ಜನ ನಮಗೆ ವಿಷವುಣಿಸಿದ್ದಾರೆ ಎಂದು ನಿನ್ನೆ ಹೇಳಿದ್ದೀರಿ. ದೇವೇಗೌಡ ಕುಟುಂಬಕ್ಕೆ ವಿಷವುಣಿಸಿದ ಕೀರ್ತಿ ಪುರುಷ ಸಾರಾ ಮಹೇಶ್ ಹೊರತು ಇನ್ಯಾರೂ ಅಲ್ಲ. ಯಾವ ರಾಜಕಾರಣಿಗೂ ಕರ್ನಾಟಕ ರಾಜ್ಯದ ಜನತೆ ವಿಷವುಣಿಸಲ್ಲ ಎಂದು ಮಾಜಿ ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿದರು.

    ಪಾಪ ಯಾರು ನಿಮ್ಮನ್ನು ಎತ್ತರಕ್ಕೆ ಬೆಳೆಸಿದ್ದಾರೋ, ಅವರನ್ನು ಕರೆದುಕೊಂಡು ತುಮಕೂರಿಗೆ ಹೋಗಿ ಖೆಡ್ಡಾಕ್ಕೆ ಹಾಕಿದ್ದೀರಿ. ಆ ಬಳಿಕ ಏನೇನು ಆಯ್ತು, ಯಾರು ಕಾರಣ ಇದಕ್ಕೆಲ್ಲ ಎಂದು ವಾಗ್ದಾಳಿ ನಡೆಸಿದರು.