Tag: ಸಾರಿಗೆ ಇಲಾಖೆ

  • ಮಂಗಳವಾರ ಸಾರಿಗೆ ಬಂದ್: ಏನಿರುತ್ತೆ? ಏನಿರಲ್ಲ?

    ಮಂಗಳವಾರ ಸಾರಿಗೆ ಬಂದ್: ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ನೂತನ ಮೋಟಾರು ವಾಹನ ತಿದ್ದುಪಡಿ ಮಸೂದೆಯನ್ನು ಹಿಂಪಡೆದುಕೊಳ್ಳುವಂತೆ ದೇಶಾದ್ಯಂತ ವಿವಿಧ ಸಾರಿಗೆ  ಸಂಘಟನೆಗಳು ಬಂದ್‍ಗೆ ಕರೆ ಕೊಟ್ಟಿವೆ.

    ಸಂಘಟನೆಗಳು ಕರೆ ನೀಡಿದ್ದರೂ ಮಂಗಳವಾರ ಸಾರಿಗೆ ಬಂದ್ ಠುಸ್ ಪಠಾಕಿಯಾಗುವ ಸಾಧ್ಯತೆಯಿದೆ. ಬಿಎಂಟಿಸಿ ಸೇರಿದಂತೆ ಕೆಎಸ್​ಆರ್​ಟಿಸಿ, ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡಿಲ್ಲ. ನಮ್ಮ ಮೆಟ್ರೋ ಮತ್ತು ಶಾಲಾ ವಾಹನಗಳ ಮಾಲೀಕರು ಬೆಂಬಲ ನೀಡಿಲ್ಲ.

    ಬಂದ್ ಗೆ ನಮ್ಮ ಮೆಟ್ರೋ ನೌಕರರು ನೈತಿಕ ಬೆಂಬಲ ನೀಡಿದ್ದಾರೆ. ನೌಕರರು ತಮ್ಮ ಪಾಳಿ ಮುಗಿದ ಬಳಿಕ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೆಟ್ರೋ ನೌಕರರ ಸಂಘ ಹೇಳಿದೆ. ಲಾರಿಗಳು ಎಂದಿನಂತೆ ರಸ್ತೆಗಿಳಿಯಲಿವೆ. ಬಂದ್‍ಗೆ ನಮ್ಮ ನೈತಿಕ ಬೆಂಬಲ ಇದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿಕೆ ನೀಡಿದ್ದಾರೆ.

    ಆಟೋ ಚಾಲಕರ ಸಂಘ ಮತ್ತು ಟ್ಯಾಕ್ಸಿ ಮಾಲೀಕರ ಸಂಘ ಬಂದ್‍ಗೆ ಬೆಂಬಲ ನೀಡಿದೆ. ಹೀಗಾಗಿ ಮಂಗಳವಾರ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಾ ಓಲಾ-ಊಬರ್ ಹಾಗೂ ಇತರೆ ಟ್ಯಾಕ್ಸಿಗಳು ಸೇವೆಯಲ್ಲಿ ವ್ಯತ್ಯಯ ಉಂಟಾತ್ತದೆ. ಬಂದ್ ಗೆ ಬೆಂಬಲ ನೀಡಿರುವುದಾಗಿ ಟ್ಯಾಕ್ಸಿ ಮಾಲೀಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳರವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ನೌಕರರ ಒಕ್ಕೂಟವಾದ ಸಿಐಟಿಯು ದೇಶಾದ್ಯಂತ ನಡೆಯುತ್ತಿರುವ ಬಂದ್ ಗೆ ಎಲ್ಲಾ ವಾಹನ ಸವಾರರು ಸಹಕರಿಸುವಂತೆ ನಗರದ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಕರಪತ್ರ ಹಂಚುತ್ತಿದ್ದಾರೆ.

    ಮಂಗಳವಾರದ ಸಾರಿಗೆ ಬಂದ್ ಗೆ ಎಐಟಿಯುಸಿ ಬೆಂಬಲ ನೀಡಿಲ್ಲ. ಸಿಐಟಿಯು ಕರೆ ಕೊಟ್ಟ ಬಂದ್ ಗೆ ಸಾರಿಗೆ ನಿಗಮದ ನೌಕರರ ಸಂಘದಲ್ಲಿಯೇ ಅಪಸ್ವರ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎಐಟಿಯುಸಿಯು ಮಸೂದೆಗೆ ವಿರೋಧವಿದ್ದರೂ ಮಂಗಳವಾರದ ಬಂದ್ ಗೆ ಪಾಲ್ಗೊಳ್ಳದಂತೆ ತನ್ನ ಸಾರಿಗೆ ನೌಕರರಿಗೆ ಸೂಚನೆ ನೀಡಿದೆ.

    ಈ ತಿದ್ದುಪಡಿ ಮಸೂದೆ ಕಾಯ್ದೆಯಾಗಿ ಜಾರಿಯಾದರೆ ಸಾರಿಗೆ ಉದ್ದಿಮೆ ಕಾರ್ಪೋರೇಟ್ ಕಂಪನಿಗಳ ವಶವಾಗಲಿದೆ. ಅಲ್ಲದೇ ದಂಡ ವಸೂಲಿ ಅವೈಜ್ಞಾನಿಕವಾಗಿದೆ ಎಂದು ನೌಕರರು ಆರೋಪಿಸಿದ್ದಾರೆ. ಕೂಡಲೇ ಮಸೂದೆಯನ್ನು ಹಿಂಪಡೆಯುವಂತೆ ಸಾರಿಗೆ ನೌಕರರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಟೌನ್ ಹಾಲ್ ನಿಂದ ರ‍್ಯಾಲಿ ಪ್ರಾರಂಭವಾಗಿ ಫ್ರೀಡಂ ಪಾರ್ಕ್ ನಲ್ಲಿ ಅಂತಿಮಗೊಳ್ಳುತ್ತದೆ. ನೌಕರರು ಫ್ರೀಡಂ ಪಾಕ್‍ನಲ್ಲಿ ಬೃಹತ್ ಸಭೆಯನ್ನು ನಡೆಸಲಿದ್ದಾರೆ ಸಿದ್ಧತೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಗಮನಿಸಿ, ಆಗಸ್ಟ್ 7 ರಂದು ಸಾರಿಗೆ ಮುಷ್ಕರ – ಬಿಎಂಟಿಸಿ, ಕೆಎಸ್ಆರ್‌ಟಿಸಿ ರಸ್ತೆಗೆ ಇಳಿಯಲ್ಲ

    ಗಮನಿಸಿ, ಆಗಸ್ಟ್ 7 ರಂದು ಸಾರಿಗೆ ಮುಷ್ಕರ – ಬಿಎಂಟಿಸಿ, ಕೆಎಸ್ಆರ್‌ಟಿಸಿ ರಸ್ತೆಗೆ ಇಳಿಯಲ್ಲ

    ಬೆಂಗಳೂರು: 2017ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿ ರಸ್ತೆ ಸಾರಿಗೆ ಕಾರ್ಮಿಕ ಮತ್ತು ಮಾಲೀಕರ ಸಂಘಟನೆ ದೇಶಾದ್ಯಂತ ಆಗಸ್ಟ್ 7 ರಂದು ಮುಷ್ಕರಕ್ಕೆ ಕರೆ ನೀಡಿದೆ.

    ಈ ಕುರಿತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವೇದಿಕೆ ಮುಖಂಡರು, ಕೇಂದ್ರ ಸರ್ಕಾರದ ಜಾರಿಗೆ ತಂದಿರುವ 2017 ರ ಮೋಟಾರು ತಿದ್ದುಪಡಿ ಕಾಯ್ದೆಯ ವಿರುದ್ಧ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. ಈ ಹೋರಾಟದಲ್ಲಿ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳು ಸೇರಿದಂತೆ ಬಿಎಂಟಿಸಿ ಸಾರಿಗೆ ಸೇವೆ ಸ್ಥಗಿತಗೊಳ್ಳಲಿದೆ. ಬೆಳಗ್ಗೆ 6 ರಿಂದ ಸಂಜೆ 6ವರೆಗೂ ಮುಷ್ಕರ ನಡೆಯಲಿದೆ ಎಂದು ತಿಳಿಸಿದ್ದಾರೆ.

    ಸದ್ಯ ಆಗಸ್ಟ್ 07 ರಂದು ನಡೆಯುವ ಮುಷ್ಕರಕ್ಕೆ ಆಟೋ ಚಾಲಕರ ಸಂಘ, ಏರ್ ಪೋರ್ಟ್ ಟ್ಯಾಕ್ಸಿ ಚಾಲಕರ ಸಂಘ ಹಾಗೂ ಬಿಎಂಟಿಸಿ ಯೂನಿಯನ್ ಸಾಥ್ ನೀಡಿದೆ. ಬಂದ್ ಕುರಿತು ಹೀಗಾಗಲೇ ನೌಕರರಿಗೆ ಮಾಹಿತಿ ನೀಡಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಫೆಡರೇಷನ್ ಅಧ್ಯಕ್ಷ ಹೆಚ್ ಡಿ ರೇವಪ್ಪ ಪಬ್ಲಿಕ್ ಟಿವಿಗೆ ಹೇಳಿಕೆದ್ದಾರೆ.

    ಮಸೂದೆಗೆ ವಿರೋಧ ಯಾಕೆ?
    ಕೇಂದ್ರ ಜಾರಿಗೆ ತಂದಿರುವ ಹೊಸ ನೀತಿ ಇಂದ ರಾಜ್ಯ ವಾಹನಗಳಿಗೆ ಪರ್ಮೀಟ್ ನೀಡುದಕ್ಕೆ ಹಾಗೂ ಸಾರಿಗೆ ನೀತಿರೂಪಣೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರ ಮೊಟಕಾಗಲಿದೆ. ಕೇಂದ್ರ ಸರ್ಕಾರದ ಹಸ್ತಕ್ಷೇಪ ಹೆಚ್ಚಾಗಲಿದೆ. ರಾಷ್ಟ್ರೀಯ ಸಾರಿಗೆ ನೀತಿ ಅಡಿ ರಾಜ್ಯಗಳ ಒಪ್ಪಿಗೆ ಇಲ್ಲದೇ ಕೇವಲ ಅಭಿಪ್ರಾಯವಷ್ಟೇ ಪಡೆದು ಹೊಸ ನೀತಿಯನ್ನು ಕೇಂದ್ರ ಜಾರಿಗೆ ತರಬಹುದು. ಇದರಿಂದ ಸಾರಿಗೆ ಇಲಾಖೆ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಅಗ್ರಿಗೇಟರ್ ಲೈಸೆನ್ಸ್ ಅನ್ನು ರಾಜ್ಯಸರ್ಕಾರ ನೀಡಬಹುದಾದರೂ ನೀಡುವ ಮಾನದಂಡವನ್ನ ಕೇಂದ್ರ ತೀರ್ಮಾನಿಸಲಿದೆ.

    ಹೊಸ ಕಾಯ್ದೆಯಿಂದ ಊಬರ್, ಓಲಾ ದಂತಹ ಖಾಸಗಿ ದೊಡ್ಡ ಸಂಸ್ಥೆಗಳ ಆರ್ಭಟ ಹೆಚ್ಚಾಗಲಿದೆ. ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ, ಮುಂತಾದವುಗಳನ್ನು ಕಾರ್ಪೋರೇಟ್, ಆಟೋ ಮೊಬೈಲ್ ಕಂಪನಿಗಳ ಹಿಡಿತಕ್ಕೆ ಒಪ್ಪಿಸಲಾಗುತ್ತದೆ. ಎಲ್ಲವೂ ದುಬಾರಿ ಶುಲ್ಕ ಗಳ ಸುಲಿಗೆ ಕೇಂದ್ರಗಳಾಗುತ್ತೆ. ದಂಡಗಳ ಪ್ರಮಾಣ ಭಾರೀ ಹೆಚ್ಚಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

  • ಪೆಟ್ರೋಲ್, ವಿದ್ಯುತ್ ಆಯ್ತು ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ?

    ಪೆಟ್ರೋಲ್, ವಿದ್ಯುತ್ ಆಯ್ತು ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ?

    ಬೆಂಗಳೂರು: ಬಸ್ ಪ್ರಯಾಣದ ದರವನ್ನು ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೊರ ಹಾಕಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಪೆಟ್ರೋಲ್ ಹಾಗೂ ಡೀಸೆಲ್ ತೆರಿಗೆ ಹೆಚ್ಚಳದಿಂದ ಸಾರಿಗೆ ಇಲಾಖೆಯ ನಷ್ಟದ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಇಲಾಖೆಗೆ ಕನಿಷ್ಟ 1 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ಕೇಳಿದ್ದೇವೆ. ಇದರೊಂದಿಗೆ 20%ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಎಲ್ಲ ಸಾರಿಗೆ ನಿಗಮಗಳೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

    ಬಸ್ ಪ್ರಯಾಣ ದರವನ್ನು ಏರಿಕೆ ಮಾಡಬೇಕು ಎಂದು ಈ ಹಿಂದೆ ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಈ ನಿರ್ಧಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೈಗೆ ಒಪ್ಪಿಸಲಾಗಿದೆ ಎಂದರು.

    ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿಚಾರವಾಗಿ ಮಾತನಾಡಿದ ಸಚಿವರು, ಉಚಿತ ಬಸ್ ಪಾಸ್ ಗೆ 2 ಸಾವಿರ ಕೋಟಿ ರೂ. ಖರ್ಚು ಬರಲಿದೆ. ಹೀಗಾಗಿ ಶಿಕ್ಷಣ ಸಚಿವ ಎಂ.ಮಹೇಶ್ ಶಿಕ್ಷಣ ಇಲಾಖೆಯಿಂದ 25% ಅನುದಾನ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದಕ್ಕೆ ಸಾರಿಗೆ ಇಲಾಖೆಯಿಂದ 25% ರಷ್ಟು ಅನುದಾನ ಕೂಡಿಸುತ್ತೇವೆ. ಆದರೆ ಉಳಿದ 50%ರಷ್ಟು ಅನುದಾನವನ್ನು ಸರ್ಕಾರ ಕೊಡಲಿದೆ. ಹಿಂದಿನ ಸರ್ಕಾರವು ಇಷ್ಟೇ ನೆರವು ಕೊಡುತ್ತಿತ್ತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿದ್ದಾರೆ. ರಾಜ್ಯಕ್ಕೆ ಮರಳಿದ ಬಳಿಕ ಉಚಿತ ಬಸ್ ಪಾಸ್ ಕುರಿತು ಚರ್ಚೆ ನಡೆಸಲಾಗುತ್ತದೆ. ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಾರಿಗೆ ಸೆಸ್ ಸಂಗ್ರಹಿಸುವಂತೆ ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮಹಾನಗರ ಪಾಲಿಕೆ ಈಗಾಗಲೇ ಭಿಕ್ಷುಕರ ಕರ ಸೇರಿದಂತೆ ವಿವಿಧ ಸೆಸ್‍ಗಳನ್ಮು ವಿಧಿಸಲಾಗುತ್ತಿದೆ. ಅದೇ ರೀತಿ ಸಾರಿಗೆ ಸೆಸ್ ಸಂಗ್ರಹಿಸಿ ಕೊಟ್ಟರೆ ನಗರ ಸಾರಿಗೆಗೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ:  ಬೆಂಗಳೂರಿಗರ ಮೇಲೆ ಟ್ರಾನ್ಸ್ ಪೋರ್ಟ್ ಸೆಸ್: ಸಾರಿಗೆ ಸಚಿವರಿಂದ ಶಾಕ್!

    ಮನಸ್ಸಿಗೆ ದುಃಖ ಆದಾಗ ಅತ್ತು ಬಿಡಬೇಕು. ಆಗಲೇ ಮನಸ್ಸಿಗೆ ಸಮಾಧಾನವಾಗುತ್ತದೆ. ಕುಮಾರಸ್ವಾಮಿ ಭಾವನಾತ್ಮಕ ವ್ಯಕ್ತಿ. ಹೀಗಾಗಿ ಅವರು ಅಳುವಿನ ಮೂಲಕ ತಮ್ಮ ದುಃಖ ಶಮನ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಯಾರ ಮೇಲೂ ಆರೋಪ ಮಾಡಿಕೊಂಡಿಲ್ಲ. ಅಲ್ಲದೆ ತಮಗೆ ನೋವು ಕೊಟ್ಟಿದ್ದಾರೆ ಎಂದು ಹೇಳಿಲ್ಲ ಎಂದು ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದರು.

    ನಿಗಮಗಳ ಬೇಡಿಕೆ ಏನು:
    ಸಾರಿಗೆ ಇಲಾಖೆ ಮೂರುವರೆ ವರ್ಷಗಳ ಹಿಂದೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿತ್ತು. ಈಗ ಸಾರಿಗೆ ಇಲಾಖೆ 65 ರೂ. ಗೆ ಹೋಲ್ ಸೇಲ್ ದರದಲ್ಲಿ ಪ್ರತಿ ಲೀಟರ್ ಡೀಸೆಲ್ ಪಡೆಯುತ್ತಿದೆ. ಆಗುತ್ತಿರುವ ನಷ್ಟವನ್ನು ಸರಿದೂಗಿಸಲು 8% ದಿಂದ 10% ದರ ಏರಿಸಲು ಸಾರಿಗೆ ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.

    ಕಳೆದ ಕೆಲ ತಿಂಗಳಿಂದ ಡೀಸೆಲ್ ದರ ಹೆಚ್ಚಾಗುತ್ತಿದೆ. ಏಪ್ರಿಲ್ ನಲ್ಲಿ ಲೀಟರ್ ಗೆ 61.02 ರೂ. ಇತ್ತು. ಆದರೆ ಮೇ ತಿಂಗಳಲ್ಲಿ 70.25 ರೂ. ಗೆ ಏರಿಕೆ ಆಗಿದೆ. ಇದರ ಜೊತೆ ಬಜೆಟ್‍ನಲ್ಲಿ ತೈಲ ದರದ ಮೇಲೆ ವಿಧಿಸಲಾಗುತ್ತಿದ್ದ ಸೆಸ್ ದರವನ್ನು 30% ದಿಂದ 32%ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಶನಿವಾರದಿಂದ ಪೆಟ್ರೋಲ್ ಪ್ರತಿ ಲೀಟರ್ ಗೆ 1.14 ರೂ. ಮತ್ತು ಡೀಸೆಲ್ ಲೀಟರ್ ಗೆ 1.12 ರೂ. ದುಬಾರಿಯಾಗಿದೆ.

    ಡೀಸೆಲ್ ಏರಿಕೆಯಿಂದ ದಿನಕ್ಕೆ ಲಕ್ಷಾಂತರ ಲೀಟರ್ ಡೀಸೆಲ್ ಉಪಯೋಗಿಸುವ ಸಾರಿಗೆ ನಿಗಮಗಳು ಈಗ ಡೀಸೆಲ್ ಗಾಗಿ ಅಧಿಕ ಹಣ ಪಾವತಿಸುತ್ತಿದೆ. ಮೊದಲೇ ಸಾರಿಗೆ ನಿಮಗ ನಷ್ಟದಲ್ಲಿರುವುದರಿಂದ ಈಗ ಟಿಕೆಟ್ ಬೆಲೆ ಏರಿಕೆ ಅನಿವಾರ್ಯವಾಗಿದೆ. ಅಷ್ಟೇ ಅಲ್ಲದೆ ತೈಲ ಕಂಪೆನಿಗಳು ಸಗಟು ಡೀಸೆಲ್ ಬೆರೆಯನ್ನು ಏರಿಕೆ ಮಾಡಿವೆ. ಆದ್ದರಿಂದ ಸಾರಿಗೆ ನಿಗಮಗಳಿಗೆ ಪ್ರತಿದಿನ 30.97 ಲಕ್ಷ ರೂ. ಅಧಿಕವಾಗಿ ಆರ್ಥಿಕ ಹೊರೆ ಬೀಳುತ್ತಿದ್ದು, ತಿಂಗಳಿಗೆ 9.29 ಕೋಟಿ ರೂ. ಅಧಿಕ ವೆಚ್ಚವಾಗುತ್ತಿದೆ ಎಂದು ವರದಿಯಾಗಿತ್ತು.

  • ಸಾರಿಗೆ ಇಲಾಖೆಯಿಂದ ಮಹಿಳಾ ಸಿಬ್ಬಂದಿಗೆ ಶಾಕಿಂಗ್ ನ್ಯೂಸ್!

    ಸಾರಿಗೆ ಇಲಾಖೆಯಿಂದ ಮಹಿಳಾ ಸಿಬ್ಬಂದಿಗೆ ಶಾಕಿಂಗ್ ನ್ಯೂಸ್!

    ಹಾಸನ: ಮೋದಿ ಸರ್ಕಾರದಲ್ಲಿ ಭೇಟಿ ಪಡಾವೋ, ಭೇಟಿ ಬಚಾವೋ ಎಂದು ಮಹಿಳೆಯ ಅಭಿವೃದ್ಧಿಗೆ ಪಣತೊಟ್ಟಿದೆ. ಆದರೆ ರಾಜ್ಯ ಸಾರಿಗೆ ಇಲಾಖೆಯಲ್ಲಿ ಮಾತ್ರ ಮಹಿಳೆಯರು ಕೆಲಸಕ್ಕೆ ಬೇಡ ಎಂದು ಹೇಳಲಾಗುತ್ತಿದೆ.

    ಹಾಸನ ಕೆಎಸ್‍ಆರ್ ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿ, ಮಹಿಳೆಯರಿಗೆ ಕೆಲಸ ಕೊಡೋದು ಬೇಡ ಪ್ಲೀಸ್ ಎಂದು ಎಡವಟ್ಟು ಪತ್ರವನ್ನು ಬರೆದಿದ್ದಾರೆ. ಕೆಎಸ್‍ಆರ್ ಟಿಸಿ ತಾಂತ್ರಿಕ ವಿಭಾಗದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಈ ಕೆಲಸಕ್ಕೆ ಮಹಿಳೆಯರ ನೇಮಕ ಬೇಡ, ಪುರುಷರಿಗಷ್ಟೇ ಅವಕಾಶ ನೀಡೋಣ ಅಂತಾ ಬೆಂಗಳೂರು ಕೆಎಸ್‍ಆರ್ ಟಿಸಿ ಕೇಂದ್ರ ಕಚೇರಿಗೆ ಪತ್ರ ಬರೆದಿದ್ದಾರೆ.

    ಮಹಿಳೆಯರಿಗೆ ಕೆಲ್ಸ ಕೊಡೋದು ಬೇಡ!
    * ತಾಂತ್ರಿಕ ವಿಭಾಗದಲ್ಲಿ ಭದ್ರತೆಗಾಗಿ ಮಹಿಳೆಯರನ್ನು ನಿಯೋಜಿಸೋದಕ್ಕೆ ಕಷ್ಟವಾಗುತ್ತೆ.
    * ಮಹಿಳೆಯರು ಸಿಕ್ಕಾಪಟ್ಟೆ ಸೂಕ್ಷ್ಮ ಮನಸ್ಥಿತಿಯವರು ರಜೆ ಜಾಸ್ತಿ ಹಾಕುತ್ತಾರೆ.
    * ಪ್ರಸೂತಿ ರಜೆ, ಆರೋಗ್ಯ ಸರಿ ಇಲ್ಲ ಹೀಗೆ ನಾನಾ ಕಾರಣದಿಂದ ದೀರ್ಘ ರಜೆ ಹಾಕುತ್ತಾರೆ. ಪಾಪ ಆಗ ಪುರುಷ ಸಿಬ್ಬಂದಿಗಳ ಮೇಲೆ ಹೊರೆ ಬೀಳುತ್ತೆ.
    * ಮಕ್ಕಳ ಲಾಲಾನೆ ಪಾಲನೆ ಅಂತಾ ಹೆಚ್ಚಿನ ರಜೆ ಕೇಳುತ್ತಾರೆ.

    ಹೀಗೆ ನಾನಾ ಕಾರಣವನ್ನು ಅಧಿಕಾರಿ ಮುಂದಿಟ್ಟಿದ್ದಾರೆ. ಈಗಾಗಲೇ ತಾಂತ್ರಿಕ ವಿಭಾಗದಲ್ಲಿ ಇರುವ ಮಹಿಳೆಯರು ಕಾರ್ಯ ನಿರ್ವಹಿಸುತ್ತಿಲ್ಲ ಅಂತಾ ಅವಲತ್ತುಕೊಂಡಿದ್ದಾರೆ.

  • ಓಲಾ, ಊಬರ್ ಮಾದರಿಯಲ್ಲೇ ಇನ್ಮುಂದೆ ಸರ್ಕಾರಿ ಟ್ಯಾಕ್ಸಿ ಸೇವೆ!

    ಓಲಾ, ಊಬರ್ ಮಾದರಿಯಲ್ಲೇ ಇನ್ಮುಂದೆ ಸರ್ಕಾರಿ ಟ್ಯಾಕ್ಸಿ ಸೇವೆ!

    ಬೆಂಗಳೂರು: ಓಲಾ ಮತ್ತು ಊಬರ್ ಗೆ ಪೈಪೋಟಿ ನೀಡಲು ಕರ್ನಾಟಕ ಸಾರಿಗೆ ಇಲಾಖೆ ಮುಂದಾಗಿದೆ. ಓಲಾ ಮತ್ತು ಊಬರ್ ಮಾದರಿಯಲ್ಲೇ ಕ್ಯಾಬ್ ಸೇವೆ ಜಾರಿಗೆ ತರಲು ಸಾರಿಗೆ ಇಲಾಖೆ ಯೋಜಿಸಿದೆ.

    ಜುಲೈ 5ರಂದು ಮಂಡಿಸಲು ಉದ್ದೇಶಿಸಿರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಮಾಡುವುದು ಬಹುತೇಕ ಖಚಿತವಾಗಿದೆ. ಮೆಟ್ರೋ ರೈಲಿನಿಂದ ಇಳಿದವರು ಮುಂದಿನ ದಾರಿಗೆ ಸಂಪರ್ಕ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇದಕ್ಕಾಗಿ ಓಲಾ ಹಾಗೂ ಊಬರ್ ಮಾದರಿಯಲ್ಲೇ ಆ್ಯಪ್ ರಚಿಸಿ, ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ.

    ಈಗಾಗಲೇ ಇದಕ್ಕಾಗಿ ಆ್ಯಪ್ ರೂಪಿಸಿ ಯೋಜನೆ ಜಾರಿಗೊಳಿಸಲು ಬಜೆಟ್ ಪ್ರಸ್ತಾವನೆಗೆ ಸಲ್ಲಿಕೆಯಾಗಿದ್ದು, ಪ್ರಸ್ತಾವನೆಗೆ ಸಿಕ್ಕಿದೆ ಪ್ರಾಥಮಿಕ ಅನುಮತಿಯೂ ಕೂಡ ಸಿಕ್ಕಿದೆ. ಅಧಿಕೃತವಾಗಿ ಘೋಷಣೆಯೊಂದೇ ಬಾಕಿ ಇದೆ. ಜೊತೆಗೆ ಮುಂದಿನ ಹಂತದಲ್ಲಿ ಬೈಕ್ ಟ್ಯಾಕ್ಸಿ ಯೋಜನೆಗೂ ಸರ್ಕಾರ ಚಿಂತಿಸಿದೆ.

    ಈ ಯೋಜನೆಯಲ್ಲಿ ಕಾರು, ಆಟೋ ಸೇವೆ ಮೊದಲ ಹಂತದಲ್ಲಿ ಸಿಗಲಿದೆ. ಮುಂದಿನ ಹಂತದಲ್ಲಿ ಬೈಕ್ ಟ್ಯಾಕ್ಸಿ ಒದಗಿಸುವ ಕುರಿತು ಚಿಂತನೆ ನಡೆಸಲಾಗಿದೆ. ಮೆಟ್ರೋ ನಿಲ್ದಾಣದಿಂದ ಮುಂದಿನ ಸ್ಥಳಗಳಿಗೆ ಬಸ್ ಕಲ್ಪಿಸುವ ಯೋಜನೆಯಲ್ಲಿ ಬಿಎಂಟಿಸಿಗೆ ನಷ್ಟ ಆದ್ದರಿಂದ ಈ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ಆಕರ್ಷಕ, ಕ್ಯಾಚಿ ಹೆಸರು ಇಡುವ ಹೊಣೆಯನ್ನ ನಾಗರಿಕರಿಗೆ ವಹಿಸುವ ಕುರಿತು ಸಾರಿಗೆ ಇಲಾಖೆ ಆಲೋಚಿಸಿದೆ.

  • ಜೆಡಿಎಸ್‍ಗೆ ಸೇರ್ಪಡೆ ಆದ್ರಾ ಮಂಡ್ಯದ ಗಂಡು ಅಂಬರೀಶ್?

    ಜೆಡಿಎಸ್‍ಗೆ ಸೇರ್ಪಡೆ ಆದ್ರಾ ಮಂಡ್ಯದ ಗಂಡು ಅಂಬರೀಶ್?

    ಮಂಡ್ಯ: ಸಚಿವರಾದ ನಂತರ ಇದೇ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಮಂಡ್ಯದ ಮದ್ದೂರಿಗೆ ಆಗಮಿಸುತ್ತಿರುವ ಸಚಿವ ಡಿಸಿ ತಮ್ಮಣ್ಣ ಅವರನ್ನು ಸ್ವಾಗತಿಸಲು ಹಾಕಿರುವ ಫ್ಲೆಕ್ಸ್ ಗಳು ಮಂಡ್ಯದ ಗಂಡು ಅಂಬರೀಶ್ ಫೋಟೋ ರಾರಾಜಿಸುತ್ತಿದ್ದು, ಅಂಬಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

    ಮದ್ದೂರಿಗೆ ಆಗಮಿಸಿದ ಡಿಸಿ ತಮ್ಮಣ್ಣ ಅವರಿಗೆ ಸ್ವಾಗತ ಕೋರಲು ಬೆಂಬಲಿಗರು ದಾರಿ ಉದ್ದಕ್ಕೂ ಫ್ಲೆಕ್ಸ್ ಹಾಕಿದ್ದಾರೆ. ಸ್ವಾಗತ ಕೋರಿ ಹಾಕಿರುವ ಫ್ಲೆಕ್ಸ್ ಗಳಲ್ಲಿ ಜೆಡಿಎಸ್ ಮುಖಂಡರ ಭಾವಚಿತ್ರದ ಜೊತೆಗೆ ಅಂಬರೀಶ್ ಭಾವಚಿತ್ರವೂ ರಾರಾಜಿಸುತ್ತಿದೆ. ಇದನ್ನು ಓದಿ: ಅಂಬರೀಶ್, ನಾನು ಅಣ್ಣ-ತಮ್ಮಂದಿರಿದ್ದಂತೆ: ಕುಮಾರಸ್ವಾಮಿ

    ಸಮ್ಮಿಶ್ರ ಸರ್ಕಾರದಲ್ಲಿ ಡಿಸಿ ತಮ್ಮಣ್ಣಗೆ ಪ್ರಮುಖ ಸಾರಿಗೆ ಸಚಿವ ಸ್ಥಾನ ಸಿಗಲು ಅಂಬರೀಶ್ ಪ್ರಮುಖ ಕಾರಣ ಎಂಬ ಮಾತು ಕೇಳಿ ಬಂದಿತ್ತು. ಚುನಾವಣೆಯ ಮತದಾನದ ವೇಳೆಯೂ ಅಂಬರೀಶ್ ಅವರು ಡಿಸಿ ತಮ್ಮಣ್ಣ ಅವರ ಕಾರಿನಲ್ಲಿ ಬಂದು ಮತ ಚಲಾಯಿಸಿದ್ದರು. ಇಷ್ಟೆಲ್ಲ ಚರ್ಚೆಗಳ ಜೊತೆಗೆ ಇದೀಗ ಡಿಸಿ ತಮ್ಮಣ್ಣ ಅವರಿಗೆ ಸ್ವಾಗತ ಕೋರಲು ಹಾಕಿರುವ ಫ್ಲೆಕ್ಸ್ ಗಳಲ್ಲಿ ಜೆಡಿಎಸ್ ಮುಖಂಡರ ಜೊತೆ ಅಂಬಿ ಭಾವಚಿತ್ರವೂ ಕಾಣಿಸಿಕೊಂಡಿದೆ. ಸದ್ಯ ಜೆಡಿಎಸ್ ಫ್ಲೆಕ್ಸ್ ನಲ್ಲಿ ಅಂಬರೀಶ್ ಭಾವಚಿತ್ರ ಹಾಕಿರುವುದರಿಂದ ಮಂಡ್ಯದಲ್ಲಿ ಅಂಬರೀಶ್ ಜೆಡಿಎಸ್ ಪಕ್ಷದ ಮೂಲಕ ಮತ್ತೆ ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಶುರು ಮಾಡಲಿದ್ದಾರಾ ಎನ್ನುವ ಚರ್ಚೆ ಈಗ ಆರಂಭವಾಗಿದೆ. ಇದನ್ನು ಓದಿ:  ಅಂಬರೀಶ್ ಜೊತೆಗಿನ ಮಾತುಕತೆಯ ಗುಟ್ಟು ಜೆಡಿಎಸ್ ಅಭ್ಯರ್ಥಿಯಿಂದ ಬಯಲು!

  • ಇಷ್ಟವಾದ ವಾಹನ ನೋಂದಣಿ ಸಂಖ್ಯೆಗೆ ಇನ್ಮುಂದೆ ತಿಂಗಳುಗಟ್ಟಲೆ ಕಾಯಬೇಕಿಲ್ಲ- ಬರ್ತಿದೆ `ವಾಹನ್ 4′ ವೆಬ್‍ಸೈಟ್

    ಇಷ್ಟವಾದ ವಾಹನ ನೋಂದಣಿ ಸಂಖ್ಯೆಗೆ ಇನ್ಮುಂದೆ ತಿಂಗಳುಗಟ್ಟಲೆ ಕಾಯಬೇಕಿಲ್ಲ- ಬರ್ತಿದೆ `ವಾಹನ್ 4′ ವೆಬ್‍ಸೈಟ್

    ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಸಂತಸದ ಸಂಗತಿಯೊಂದನ್ನು ಹೊತ್ತು ತಂದಿದೆ. ಇಷ್ಟು ದಿನ ವಾಹನಗಳಿಗೆ ಇಷ್ಟವಾದ ನೋಂದಣಿ ಸಂಖ್ಯೆ ಅಥವಾ ತಮ್ಮ ಜನ್ಮದಿನಾಂಕದ ನಂಬರ್ ಪಡೆಯಲು ಜನರು ತಿಂಗಳಿನಿಂದ ಹಿಡಿದು ವರ್ಷಾನುಗಟ್ಟಲೆ ಕಾಯುತ್ತಿದ್ದರು. ಈಗ ತಕ್ಷಣ ಪಡೆಯವಂತಹ ಹೊಸ ಸಾಫ್ಟ್ ವೇರ್ ವೊಂದನ್ನ ಸಾರಿಗೆ ಇಲಾಖೆ ಲಾಂಚ್ ಮಾಡುತ್ತಿದೆ.

    ಇಷ್ಟು ದಿನ ತಮಗೆ ಇಷ್ಟವಾದ ನಂಬರ್ ಪಡೆಯಲು ಜನರು ವರ್ಷಾನುಗಟ್ಟಲೆ ಕಾದು, ಆ ನಂಬರಿನ ಸೀರೀಸ್ ಬರುವ ತನಕ ವಾಹನಗಳನ್ನೇ ಖರೀದಿ ಮಾಡುತ್ತಿರಲಿಲ್ಲ. ಕೆಲವೊಮ್ಮೆ ಇಂತಹ ನಂಬರ್ ಪಡೆಯಲು ಹಣವನ್ನು ಸಹ ನೀಡಬೇಕಿತ್ತು. ಆದರೆ ಇದಕ್ಕೆಲ್ಲ ಕಡಿವಾಣ ಹಾಕೋದಕ್ಕೆ ಅಂತಾನೆ ಸಾರಿಗೆ ಇಲಾಖೆ ಇನ್ನು ಕೆಲವೇ ದಿನಗಳಲ್ಲಿ ‘ವಾಹನ್ 4’ ಎಂಬ ವಿನೂತನ ವೆಬ್‍ಸೈಟ್ ಹೊರತರುತ್ತಿದೆ. ಇದರಲ್ಲಿ ಸಾರಿಗೆ ಇಲಾಖೆಯ ಜೊತೆ ವ್ಯವಹಾರ ಮಾಡುವವರು ಸಂಪೂರ್ಣವಾಗಿ ಆನ್‍ಲೈನ್ ಮುಖಾಂತರವೇ ವ್ಯವಹಾರ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಷ್ಟೇ ಅಲ್ಲದೆ ತಮಗೆ ಇಷ್ಟವಾದ ನಂಬರನ್ನು ಸಹ ವೆಬ್‍ಸೈಟ್ ಮೂಲಕ ಲಾಕ್ ಮಾಡಿಸಿ 24 ಗಂಟೆಗಳ ಒಳಗೆ ಖರೀದಿ ಮಾಡಬಹುದು.

    ವೆಬ್‍ಸೈಟ್‍ನ ಪ್ರಯೋಜನ

    * ಎಲ್ಲಾ ವಾಹನಗಳ ನೋಂದಣಿ ಸೇವೆಗಳಿಗೆ ಆನ್‍ಲೈನ್ ಅರ್ಜಿ ಸಲ್ಲಿಕೆ.
    * ಆನ್‍ಲೈನ್‍ನಲ್ಲೇ ಶುಲ್ಕ ಪಾವತಿ.
    * ಅರ್ಜಿದಾರರಿಗೆ ಎಸ್‍ಎಂಎಸ್ ಮೂಲಕ ಮಾಹಿತಿ.
    * ರ‍್ಯಾಂಡಮ್‌ ಪದ್ಧತಿಯಲ್ಲಿ ವಾಹನ ನೊಂದಣಿ ಸಂಖ್ಯೆ ಹಂಚಿಕೆ.
    * ವಾಹನದ ಎನ್‍ಓಸಿ ಶೀಘ್ರವಾಗಿ ನೀಡುವಿಕೆ.
    * ವಾಹನಗಳ ನೊಂದಣಿಗಳ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ಪಡಯಬುದು ಎಂದು ಸಾರಿಗೆ ಇಲಾಖೆಯ ಕಮಿಷನರ್ ದಯಾನಂದ್ ತಿಳಿಸಿದ್ದಾರೆ.

  • ಗಮನಿಸಿ, ದಾಖಲೆ ಇದ್ರೆ ಮಾತ್ರ ಇನ್ನು ಮುಂದೆ ಈ ದ್ವಿಚಕ್ರ ವಾಹನಗಳು ನೋಂದಣಿ ಆಗುತ್ತೆ!

    ಗಮನಿಸಿ, ದಾಖಲೆ ಇದ್ರೆ ಮಾತ್ರ ಇನ್ನು ಮುಂದೆ ಈ ದ್ವಿಚಕ್ರ ವಾಹನಗಳು ನೋಂದಣಿ ಆಗುತ್ತೆ!

    ಬೆಂಗಳೂರು: 100 ಸಿಸಿ ಸಾಮರ್ಥ್ಯದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿಷೇಧ ಹೇರಿರುವ ಸಾರಿಗೆ ಇಲಾಖೆ ಈಗ, ಈ ವಾಹನಗಳ ಪಟ್ಟಿಯನ್ನು ಪಟ್ಟಿಯನ್ನು ಬಿಡುಗಡೆ ಮಾಡಿ ನೋಂದಣಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ಪ್ರಕಟಿಸಿದೆ.

    ಈ ವಾಹನಗಳನ್ನು ನೋಂದಣಿ ಮಾಡಿಸಬೇಕಾದರೆ ಒಂದು ಸೀಟಿಗೆ ಬದಲಾಯಿಸಿಕೊಂಡು, ಬೈಕಿನ ಆಸನ ಸಾಮರ್ಥ್ಯ ಒಂದು ಎಂಬುದಾಗಿ ನಮೂದಿಸಿದ ದಾಖಲೆಗಳನ್ನು ಸಲ್ಲಿಸಿದ್ದಲ್ಲಿ ಮಾತ್ರ ಈ ವಾಹನವನ್ನು ನೋಂದಾಯಿಸಲಾಗುವುದು ಎಂದು ಸಾರಿಗೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.

    100 ಸಿಸಿ ಕಡಿಮೆ ಸಾಮರ್ಥ್ಯ ಹೊಂದಿರುವ ದ್ವಿಚಕ್ರ ವಾಹನಗಳು: ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್(87.8 ಸಿಸಿ), ಟಿವಿಎಸ್ ಸ್ಪೋಟ್ರ್ಸ್ (99.77ಸಿಸಿ), ಹೀರೋ ಎಸ್‍ಎಫ್ ಡಿಲಕ್ಸ್ (97.2 ಸಿಸಿ), ಹೀರೋ ಸ್ಪ್ಲೆಂಡರ್ ಪ್ಲಸ್ (97.2 ಸಿಸಿ), ಟಿವಿಎಕ್ಸ್ ಎಕ್ಸ್‍ಎಲ್ 100 (99.7 ಸಿಸಿ), ಹೀರೋ ಸ್ಪ್ಲೆಂಡರ್ ಪ್ರೋ (97.2 ಸಿಸಿ), ಬಜಾಜ್ ಸಿಟಿ 100 (99.27ಸಿಸಿ), ಹೀರೋ ಎಸ್‍ಎಫ್ ಡಿಲಕ್ಸ್ ಎಕೋ (97ಸಿಸಿ), ಹೀರೋ ಪ್ಯಾಷನ್ ಪ್ರೋ ಐ3ಎಸ್ (97.2 ಸಿಸಿ).

    ಅಪಘಾತದಿಂದಾಗಿ ಹಿಂಬದಿ ಸವಾರರು ಮೃತಪಡುವುದನ್ನು ತಡೆಯುವ ನಿಟ್ಟಿನಲ್ಲಿ ಹೈಕೋರ್ಟ್ ಆದೇಶದಂತೆ ಕರ್ನಾಟಕ ಸರ್ಕಾರ ಮೋಟಾರು ವಾಹನ ಕಾಯ್ದೆಯಲ್ಲಿ ಈ ನಿಯಮವನ್ನು ರಾಜ್ಯಾದ್ಯಂತ ಜಾರಿಗೆ ತರಲು ತೀರ್ಮಾಸಿದೆ. ಈ ಕುರಿತು ಎಲ್ಲ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ರವಾನಿಸಲಾಗಿದೆ. ಮೋಟಾರು ವಾಹನ ಕಾಯ್ದೆಯ ನಿಯಮಗಳಲ್ಲಿ 100 ಸಿಸಿ ಸಾಮರ್ಥ್ಯಕ್ಕಿಂತ ಕಡಿಮೆ ಇರುವ ಬೈಕ್‍ಗಳಲ್ಲಿ ಹಿಂಬದಿ ಸಾವರರು ಪ್ರಯಾಣ ಮಾಡಲು ಸೂಕ್ತವಲ್ಲ ಎಂದು ತಿಳಿಸಲಾಗಿದೆ.

  • ಯಶವಂತಪುರದಿಂದ ದಾಬಸ್‍ಪೇಟೆ ಕೈಗಾರಿಕಾ ಪ್ರದೇಶಕ್ಕೆ 6 ನೂತನ ಬಸ್‍ಗಳು

    ಯಶವಂತಪುರದಿಂದ ದಾಬಸ್‍ಪೇಟೆ ಕೈಗಾರಿಕಾ ಪ್ರದೇಶಕ್ಕೆ 6 ನೂತನ ಬಸ್‍ಗಳು

    ಬೆಂಗಳೂರು: ಗ್ರಾಮೀಣ ಭಾಗದ ಕಾರ್ಮಿಕರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಇಲಾಖೆ 6 ನೂತನ ಬಸ್‍ಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕೈಗಾರಿಕ ಪ್ರದೇಶದಲ್ಲಿ ನೂತನ ಬಸ್‍ಗಳಿಗೆ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಹಾಗೂ ಸಂಸದ ವೀರಪ್ಪ ಮೊಯ್ಲಿ ಚಾಲನೆ ನೀಡಿದರು. ಇನ್ನೂ ಗ್ರಾಮೀಣ ಭಾಗದ ಸಾವಿರಾರು ಕಾರ್ಮಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಲ್ಲಿಯವರೆಗೂ ಖಾಸಗಿ ಬಸ್ ಮೂಲಕ ಸಂಚಾರ ಮಾಡುತ್ತಿದ್ದರು. ಹೀಗಾಗಿ ಸಾರಿಗೆ ಇಲಾಖೆ ವತಿಯಿಂದ ಇಂದು 6 ನೂತನ ಬಿಎಂಟಿಸಿ ಬಸ್‍ಗಳ ಸೇವೆ ಕಲ್ಪಿಸಲಾಗಿದೆ. ಈ ಬಸ್‍ಗಳು ಪ್ರತಿನಿತ್ಯ ಯಶವಂತಪುರದಿಂದ ದಾಬಸ್‍ಪೇಟೆ ಕೈಗಾರಿಕಾ ಪ್ರದೇಶಕ್ಕೆ 6 ಸುತ್ತುವಳಿಗಳನ್ನ ಅರ್ಧ ಗಂಟೆಯ ಅಂತರದಲ್ಲಿ ಕಾರ್ಯಾಚರಣೆ ಮಾಡುತ್ತವೆ.

    ಉದ್ಘಾಟನೆಯ ನಂತರ ಮಾತನಾಡಿದ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ, ಪ್ರಮುಖವಾಗಿ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ನೆಲಮಂಗಲದ ಪಟ್ಟಣಕ್ಕೆ ಹೈಟೆಕ್ ಬಸ್ ಕೋರ್ಟ್ ನಿರ್ಮಿಸಲಾಗುವುದು ಎಂದರು. ಬಸ್ ನಿಲ್ದಾಣದ ಜೊತೆಗೆ ಶಾಪಿಂಗ್ ಮಾಲ್, ಕಚೇರಿಗಳು, ಅಂಗಡಿಗಳನ್ನ ಒಳಗೊಂಡಿರುವಂತೆ ಕರ್ನಾಟಕ ರಾಜ್ಯದಲ್ಲೇ ವಿನೂತನ ಬಸ್ ನಿಲ್ದಾಣವನ್ನ ನಿರ್ಮಿಸಲಾಗುವುದು ಎಂದರು.

    ಬಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಜನರಿಲ್ಲದ ಕಾರಣ ಸ್ಥಳೀಯ ಕಾಂಗ್ರೆಸ್ ಮುಖಂಡರು ಕಾರ್ಖಾನೆಗಳಿಂದ ನೂರಾರು ಮಹಿಳಾ ಕಾರ್ಮಿಕರನ್ನ ಕರೆತಂದ ಪ್ರಸಂಗವೂ ಕೂಡ ನಡೆದು ಮುಜುಗರಕ್ಕೀಡಾಯಿತು.