Tag: ಸಾರಿಗೆ ಸಂಸ್ಥೆ

  • ಮಹಾ ಕುಂಭಮೇಳದಿಂದ UP ರಸ್ತೆ ಸಾರಿಗೆ ಸಂಸ್ಥೆಗೆ ಬಂಫರ್ – 45 ದಿನಗಳಲ್ಲಿ ವರ್ಷದ ಆದಾಯ

    ಮಹಾ ಕುಂಭಮೇಳದಿಂದ UP ರಸ್ತೆ ಸಾರಿಗೆ ಸಂಸ್ಥೆಗೆ ಬಂಫರ್ – 45 ದಿನಗಳಲ್ಲಿ ವರ್ಷದ ಆದಾಯ

    – 38.76 ಲಕ್ಷ ಕೋಟಿ ಆದಾಯ ಸಂಗ್ರಹ

    ಪ್ರಯಾಗ್‌ರಾಜ್: ಮಹಾಕುಂಭಮೇಳದಿಂದಾಗಿ (Maha Kumbh Mela) ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಭಾರೀ ಆದಾಯ ಗಳಿಸಿದೆ. ಒಂದು ವರ್ಷಕ್ಕೆ ಸಂಗ್ರಹವಾಗಬಹುದಾದ ಆದಾಯ ಕಳೆದ 45 ದಿನಗಳಲ್ಲಿ ಗಳಿಸಿದೆ.

    ಕುಂಭಮೇಳದ ಕೇವಲ 45 ದಿನಗಳಲ್ಲಿ ವಾರಣಾಸಿ ವಿಭಾಗದಿಂದ 29.02 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ ಇದರಿಂದಾಗಿ 38 ಕೋಟಿ 76 ಲಕ್ಷ ರೂ. ಆದಾಯಗಳಿಸಿದೆ. ಇದರಲ್ಲಿ ಗ್ರಾಮೀಣ ಡಿಪೋ ಅತಿ ಹೆಚ್ಚು ಅದಾಯ ಸಂಗ್ರಹಿಸಿವೆ. ಇದನ್ನೂ ಓದಿ: ಬದರಿನಾಥದಲ್ಲಿ ಹಿಮಪಾತ, 47 ಕಾರ್ಮಿಕರ ರಕ್ಷಣೆ – ಮೂವರ ಸ್ಥಿತಿ ಗಂಭೀರ, ಮೋದಿಯಿಂದ ಅಗತ್ಯ ನೆರವಿನ ಭರವಸೆ

    2024ರ ವಾರ್ಷಿಕ ಆದಾಯ 30 ಕೋಟಿ 76 ಲಕ್ಷ 22 ಸಾವಿರ ರೂ. ಗಳಷ್ಟಿತ್ತು ಎಂದು ರೋಡ್‌ವೇಸ್ ವಾರಣಾಸಿ (Varanasi) ಪ್ರದೇಶದ ಪ್ರಾದೇಶಿಕ ವ್ಯವಸ್ಥಾಪಕ ಪರಶುರಾಮ್ ಪಾಂಡೆ ತಿಳಿಸಿದ್ದಾರೆ. ಈ ಮಹಾಕುಂಭ ಮೇಳದ ಕೇವಲ 45 ದಿನಗಳಲ್ಲಿ 38 ಕೋಟಿ 76 ಲಕ್ಷ ರೂಪಾಯಿ ಆದಾಯ ಬಂದಿದೆ.

    2024 ರಲ್ಲಿ 24 ಲಕ್ಷ 42 ಸಾವಿರ ಪ್ರಯಾಣಿಕರು ಪ್ರಯಾಣಿಸಿದ್ದರು. ಈ ಮಹಾ ಕುಂಭಮೇಳ ಅವಧಿಯಲ್ಲಿ 29.02 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದರು. ವಾರಣಾಸಿ ಗ್ರಾಮೀಣ ಡಿಪೋದಿಂದ ಗರಿಷ್ಠ ಸಂಖ್ಯೆಯ ಪ್ರಯಾಣಿಕರು ಅಂದರೆ 5.50 ಲಕ್ಷ ಪ್ರಯಾಣಿಸಿದ್ದಾರೆ ಇದರಿಂದ ಆದಾಯ 7.41 ಕೋಟಿ ರೂ ಬಂದಿತ್ತು. ಇದನ್ನೂ ಓದಿ: ಮಂಡ್ಯ ವಿವಿ ವಿಲೀನಗೊಳಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ – ಬಿಜೆಪಿ, ಜೆಡಿಎಸ್ ಪ್ರತಿಭಟನೆ

    ಕ್ಯಾಂಟ್ ಡಿಪೋ 3.23 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದು 5.13 ಕೋಟಿ ರೂ. ಆದಾಯ ಗಳಿಸಿದೆ‌. ಕಾಶಿ ಡಿಪೋ 3.40 ಲಕ್ಷ ಪ್ರಯಾಣಿಕರನ್ನು ಸಾಗಿಸಿ 5.81 ಕೋಟಿ ರೂ. ಆದಾಯ ಗಳಿಸಿದೆ. ಇದರೊಂದಿಗೆ ಚಂದೌಲಿ ಡಿಪೋದ ಆದಾಯ 2.45 ಕೋಟಿ ರೂ.ಗಳಾಗಿದ್ದು, 1.86 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಇದನ್ನೂ ಓದಿ: ತುಮಕೂರು | ಮನೆ ಮುಂದಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ – ಭಯಭೀತರಾದ ಗ್ರಾಮಸ್ಥರು

    ಘಾಜಿಪುರ ಡಿಪೋದಿಂದ 3.14 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದು, 4.55 ಕೋಟಿ ರೂ. ಆದಾಯ ಗಳಿಸಿದೆ. ಜೌನ್‌ಪುರದ ಆದಾಯ 5.63 ಕೋಟಿ ರೂ.ಗಳಾಗಿದ್ದು, 5.33 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಸೋನಭದ್ರ ಡಿಪೋದಿಂದ 3.41 ಲಕ್ಷ ಪ್ರಯಾಣಿಕರ ಸಂಚಾರ ಮಾಡಿದ್ದು 4.37 ಕೋಟಿ ರೂ. ಆದಾಯ ಬಂದಿದೆ‌. ವಿಂಧ್ಯನಗರ ಡಿಪೋದ ಆದಾಯ 3.39 ಕೋಟಿ ರೂ.ಗಳಾಗಿದ್ದು, 2.15 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

  • ರಾಜ್ಯದ 4 ಸಾರಿಗೆ ಸಂಸ್ಥೆಗಳಲ್ಲಿ ಆರ್ಥಿಕ ಮುಗ್ಗಟ್ಟು – 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಅನುಮೋದನೆ

    ರಾಜ್ಯದ 4 ಸಾರಿಗೆ ಸಂಸ್ಥೆಗಳಲ್ಲಿ ಆರ್ಥಿಕ ಮುಗ್ಗಟ್ಟು – 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಅನುಮೋದನೆ

    ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ (Transportation Agency) ಆರ್ಥಿಕ ಮುಗ್ಗಟ್ಟು ಹಿನ್ನೆಲೆ ಸಾರಿಗೆ ಸಂಸ್ಥೆಗಳಿಗೆ ಹಣಕಾಸಿನ ಸಂಸ್ಥೆಗಳಿಂದ ಸಾಲ (Loan) ತೆಗೆದುಕೊಳ್ಳಲು ಸರ್ಕಾರ ಅನುಮೋದನೆ ನೀಡಿದೆ.

    ಸರ್ಕಾರದ ಗ್ಯಾರಂಟಿಯೊಂದಿಗೆ ಷರತ್ತುಬದ್ಧ ಅನುಮತಿಯನ್ನು ಸರ್ಕಾರ ಕೊಟ್ಟಿದೆ. ನಾಲ್ಕೂ ಸಾರಿಗೆ ಸಂಸ್ಥೆಗಳಿಂದ ಒಟ್ಟು 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಅನುಮತಿ ನೀಡಿದೆ. ಸಾರಿಗೆ ನೌಕರರ ಭವಿಷ್ಯನಿಧಿ ಹಾಗೂ ಇಂಧನ ಪಾವತಿಗೆ ಸಾಲ ಪಡೆಯಲು ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: ಮೋದಿ ಮೆಚ್ಚಿದ ಗಾಯಕಿಯನ್ನು ಮದ್ವೆಯಾಗಲಿದ್ದಾರೆ ತೇಜಸ್ವಿ ಸೂರ್ಯ

    ಯಾವ ಸಾರಿಗೆ ಸಂಸ್ಥೆಗೆ ಎಷ್ಟು ಸಾಲ?
    ಕೆಎಸ್‌ಆರ್‌ಟಿಸಿ – 623 ಕೋಟಿ ರೂ.
    ಬಿಎಂಟಿಸಿ – 589 ಕೋಟಿ ರೂ.
    ಎನ್‌ಡಬ್ಲ್ಯೂಕೆಆರ್‌ಟಿಸಿ – 646 ಕೋಟಿ ರೂ.
    ಕೆಕೆಆರ್‌ಟಿಸಿ – 141 ಕೋಟಿ ರೂ.

  • ಸಾಲಕ್ಕಾಗಿ ಕಟ್ಟಡವನ್ನೇ ಅಡವಿಟ್ಟ ಬಿಎಂಟಿಸಿ – ಯಾವ ಬ್ಯಾಂಕ್‍ನಿಂದ ಎಷ್ಟು ಕೋಟಿ ಸಾಲ?

    ಸಾಲಕ್ಕಾಗಿ ಕಟ್ಟಡವನ್ನೇ ಅಡವಿಟ್ಟ ಬಿಎಂಟಿಸಿ – ಯಾವ ಬ್ಯಾಂಕ್‍ನಿಂದ ಎಷ್ಟು ಕೋಟಿ ಸಾಲ?

    ಬೆಂಗಳೂರು: ಜನರ ಜೀವನಾಡಿ ಬಿಎಂಟಿಸಿ(ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ). ಈಗ ಇದು ಅಧೋಗತಿಯತ್ತ ಸಾಗುತ್ತಿದೆ. ಕೋಟಿ ಕೋಟಿ ಸಾಲ ಮಾಡಿ ಕಟ್ಟಡವನ್ನೇ ಅಡವಿಡುತ್ತಿದೆ.

    ದೇಶದ ನಂಬರ್ 1 ಸಾರಿಗೆ ಸಂಸ್ಥೆಯಾದ ಬಿಎಂಟಿಸಿ ಸಾಲದ ಶೂಲದಿಂದ ಹೊರಬರಲು ಆಗುತ್ತಿಲ್ಲ. ಸಾಲಕ್ಕಾಗಿ ಸಂಸ್ಥೆಯ ಕಟ್ಟಡ ಹಾಗೂ ಸ್ಥಳವನ್ನು ವಿವಿಧ ಬ್ಯಾಂಕ್‍ಗಳಲ್ಲಿ ಅಡವಿಟ್ಟಿರೋದು ಮಾಹಿತಿ ಹಕ್ಕು ಕಾಯ್ದೆಯಿಂದ ಬಹಿರಂಗವಾಗಿದೆ. ಇದನ್ನೂ ಓದಿ: ಕಾರ್ಯಕಾರಿಣಿ ಸಭೆ ಬಳಿಕ ಸಂಪುಟ ಸರ್ಜರಿ ಫೈನಲ್: ಸಿಎಂ

    ಎಲ್ಲಿ ಎಷ್ಟು?
    2018ರಲ್ಲಿ ಕೆನರಾ ಬ್ಯಾಂಕ್‍ನಲ್ಲಿ 100 ಕೋಟಿ ರೂ. ಸಾಲ ಪಡೆದ್ರೆ, 2018-19ರಲ್ಲಿ ಇದೇ ಬ್ಯಾಂಕ್‍ನಲ್ಲಿ ಮತ್ತೆ 19.95 ಕೋಟಿ ಸಾಲ ಪಡೆಯಲಾಗಿದೆ. 2018ರಲ್ಲಿ ಕೆಯುಐಡಿಎಫ್‍ಸಿ ಬ್ಯಾಂಕ್‍ನಲ್ಲಿ 125 ಕೋಟಿ ರೂ. ಸಾಲ ಮಾಡಿದ್ರೆ, 2019-20ರಲ್ಲಿ ಕೆನರಾ ಬ್ಯಾಂಕ್‍ನಲ್ಲಿ 160 ಕೋಟಿ ರೂ. ಸಾಲ ಮಾಡಲಾಗಿದೆ.

    2020-21ರಲ್ಲಿ ಕೆಯುಐಡಿಎಫ್‍ಸಿ ಬ್ಯಾಂಕ್‍ನಲ್ಲಿ 135.05 ಕೋಟಿ ರೂ. ಸಾಲ ಪಡೆದ್ರೆ, 2020-21ರಲ್ಲಿ ಕೆನರಾ ಬ್ಯಾಂಕ್‍ನಲ್ಲಿ 230 ಕೋಟಿ ರೂ. ಸಾಲ ಮಾಡಲಾಗಿದೆ. ಅಷ್ಟೇ ಅಲ್ಲದೆ 2020-21 ಕೆಯುಐಡಿಎಫ್‍ಸಿ ಬ್ಯಾಂಕ್‍ನಲ್ಲಿ 42 ಕೋಟಿ ರೂ ಸಾಲ ಮಾಡಲಾಗಿದೆ. ಮಾರ್ಚ್ 13, 2022ರವರೆಗೆ ಒಟ್ಟು ಕೆಯುಐಡಿಎಫ್‍ಸಿ ಬ್ಯಾಂಕ್‍ನಲ್ಲಿ 183 ಕೋಟಿ ಸಾಲ ಮಾಡಲಾಗಿದೆ. ಇದನ್ನೂ ಓದಿ: 2 ಲಕ್ಷ ದೋಚಲು ಬಂದು 2 ಕೋಟಿ ಕಳ್ಳತನ – ಓನರ್ ಮನೆಗೆ ಐಟಿ, ಇಡಿ, ಎಂಟ್ರಿ ಸಾಧ್ಯತೆ

    ಈ ಮೇಲಿನ ಸಾಲದಲ್ಲಿ 160 ಕೋಟಿ ರೂ. ಹಾಗೂ 230 ಕೋಟಿ ರೂ. ಸಾಲ ಪಡೆಯಲು ಶಾಂತಿನಗರ ಟಿಟಿಎಂಸಿಯನ್ನು ಅಡಮಾನ ಇಡಲಾಗಿದೆ.

  • 1 ತಿಂಗಳಲ್ಲಿ ಬಿಎಂಟಿಸಿ 2.68 ಲಕ್ಷ ರೂ. ದಂಡ ವಸೂಲಿ

    1 ತಿಂಗಳಲ್ಲಿ ಬಿಎಂಟಿಸಿ 2.68 ಲಕ್ಷ ರೂ. ದಂಡ ವಸೂಲಿ

    ಬೆಂಗಳೂರು: ಜುಲೈ ತಿಂಗಳಿನಲ್ಲಿ 17,799 ಟ್ರಿಪ್ ಗಳಲ್ಲಿ ತಪಾಸಣೆ ನಡೆಸಿರುವ ಬಿಎಂಟಿಸಿ(ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ತನಿಖಾ ತಂಡ 1,704 ಪ್ರಯಾಣಿಕರು ಟಿಕೆಟ್ ಇಲ್ಲದೆ ಪ್ರಯಾಣ ಮಾಡಿರುವುದನ್ನು ಪತ್ತೆ ಹಚ್ಚಿ, ಪ್ರಯಾಣಿಕರಿಂದ 2,67,950 ರೂ. ದಂಡ ವಸೂಲಿ ಮಾಡಿದೆ.

    ಟಿಕೆಟ್ ನೀಡದ ಕಂಡಕ್ಟರ್ ಗಳ ಮೇಲೆ 1,188 ಕೇಸ್ ಗಳು ದಾಖಲಿಸಲಾಗಿದೆ. ಮಹಿಳೆಯರಿಗೆ ಮೀಸಲಿಟ್ಟ ಸೀಟ್ ನಲ್ಲಿ ಪ್ರಯಾಣ ಮಾಡಿದ ನಾಲ್ಕು ಪುರುಷ ಪ್ರಯಾಣಿಕರಿಂದ 400 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ಇಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ತಾಯ್ನಾಡಿಗೆ ಕರೆತಂದ ಮೋದಿಗೆ ಹಾಡಿನ ಧನ್ಯವಾದ ತಿಳಿಸಿದ ಸಿಖ್ಖರು

    ಒಟ್ಟಾರೆಯಾಗಿ 2021 ಜುಲೈ ತಿಂಗಳಲ್ಲಿ 1,708 ಪ್ರಯಾಣಿಕರಿಂದ ಒಟ್ಟು 2,68,350 ರೂ. ದಂಡವನ್ನು ವಸೂಲಿ ಮಾಡಲಾಗಿದ್ದು, ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಪಡೆದು ಪ್ರಯಾಣಿಸಬೇಕು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ. ಟಿಕೆಟ್ ಪಡೆದು ಪ್ರಯಾಣಿಸುವ ಪ್ರವೃತ್ತಿಯಿಂದ ಸಂಸ್ಥೆಯ ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಸಾರಿಗೆ ಸಂಸ್ಥೆ ಕೋರಿದೆ. ಇದನ್ನೂ ಓದಿ: ಮೈಸೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್

  • ಪ್ರಯಾಣಿಕರೇ ಗಮನಿಸಿ, ಬೆಂಗ್ಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಓಡುತ್ತೆ ಬಸ್

    ಪ್ರಯಾಣಿಕರೇ ಗಮನಿಸಿ, ಬೆಂಗ್ಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಓಡುತ್ತೆ ಬಸ್

    – ಕೊನೆಯ ಬಸ್ ಸಂಜೆ 7ಕ್ಕೆ ಹೊರಡುತ್ತದೆ
    – ಎಲ್ಲೂ ನಿಲ್ಲಲ್ಲ, ರಾತ್ರಿ ಊಟವನ್ನು ಕಟ್ಟಿಕೊಂಡು ಬಸ್ ಹತ್ತಿ

    ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಕೇವಲ 5 ಮಾರ್ಗಗಳಲ್ಲಿ ಮಾತ್ರ ಬಸ್ ಸಂಚಾರ ಆರಂಭಿಸಿದ್ದಕ್ಕೆ ಜನತೆಯಿಂದ ಅಸಮಾಧಾನ ಸ್ಫೋಟಗೊಂಡ ಬೆನ್ನಲ್ಲೇ ಈಗ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಬಸ್ ಆರಂಭಿಸಲು ಸಾರಿಗೆ ಇಲಾಖೆ ಮುಂದಾಗಿದೆ.

    ಸಾರಿಗೆ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಸುತ್ತೋಲೆಯಲ್ಲಿ ಬೆಂಗಳೂರಿನಿಂದ ಮೈಸೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಗಳೂರು ಮಾರ್ಗದಲ್ಲಿ ಮಾತ್ರ ಬಸ್ ಸಂಚಾರ ಆರಂಭಿಸುವುದಾಗಿ ಹೇಳಿತ್ತು. ಆದರೆ ಇಂದು ಬೆಳಗ್ಗೆ ಮೆಜೆಸ್ಟಿಕ್ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗಕ್ಕೂ ಬಸ್ ಆರಂಭಗೊಳ್ಳಲಿದೆ ಎಂಬ ವಿಚಾರ ತಿಳಿದು ಅಲ್ಲಿನ ಜನತೆ ಆಗಮಿಸಿದ್ದರು.

    ರಾತ್ರಿ 7 ರಿಂದ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯ ಒಳಗಡೆ ತಲುಪುವ ಮಾರ್ಗದಲ್ಲಿ ಮಾತ್ರ ಬಸ್ ಸಂಚಾರವನ್ನು ಕೆಎಸ್‌ಆರ್‌ಟಿಸಿ ಆರಂಭಿಸಿತ್ತು. ಉತ್ತರ ಕರ್ನಾಟಕದ ಕೆಲ ಜಿಲ್ಲಾ ಕೇಂದ್ರಗಳನ್ನು ಈ ಅವಧಿಯಲ್ಲಿ ತಲುಪುವುದು ಕಷ್ಟವಾದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಈ ಭಾಗಕ್ಕೆ ಬಸ್ ಓಡಿಸದೇ ಇರಲು ನಿರ್ಧರಿಸಿತ್ತು.

    ಈ ವಿಚಾರ ತಿಳಿಯದ ಹಲವು ಜನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದಿದ್ದು ಇವರಿಗೆ ಸಮಸ್ಯೆಯಾಗಿತ್ತು. ಪಬ್ಲಿಕ್ ಟಿವಿ ಈ ವಿಚಾರವನ್ನು ಪ್ರಸ್ತಾಪ ಮಾಡಿ ಒಂದು ಭಾಗಕ್ಕೆ ಮಾತ್ರ ಯಾಕೆ ಈ ಸೇವೆ? ಉಳಿದ ಜಿಲ್ಲೆಗಳಿಗೆ ಯಾಕೆ ಬಸ್ ಸೇವೆ ಇಲ್ಲ ಎಂದು ಪ್ರಶ್ನಿಸಿತ್ತು. ಜನರಿಂದಲೂ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಾರಿಗೆ ಇಲಾಖೆ ಈಗ ಉತ್ತರ ಕರ್ನಾಟಕದ ಭಾಗಗಳಿಗೂ ಬಸ್ ಓಡಿಸಲು ಮುಂದಾಗಿದೆ.

    ವ್ಯವಸ್ಥೆ ಹೇಗಿದೆ?
    ರಾತ್ರಿ ಹತ್ತಿ ಬೆಳಗ್ಗೆ ತಲುಪುವ ಸ್ಥಳಗಳಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಬಸ್ಸುಗಳ ಕಾರ್ಯಾಚರಣೆಯ ಸಮಯವನ್ನು ಸಂಜೆ 7 ಗಂಟೆಯವರೆಗೆ ವಿಸ್ತರಿಸಲಾಗಿದೆ. ಅಂದರೆ ಕೊನೆಯ ಬಸ್ಸು ಸಂಜೆ 7 ಗಂಟೆಗೆ ಬೆಂಗಳೂರು ಬಿಡಲಿದೆ. ಉದಾಹರಣೆಗೆ ಕಲುಬುರಗಿ, ಬೀದರ್ ಸಂಜೆ 7ಕ್ಕೆ ಬೆಂಗಳೂರಿನಿಂದ ಹೊರಟು ನಾಡಿದ್ದು ಬೆಳಗ್ಗೆ ನಿಗದಿತ ನಿಲ್ದಾಣ ತಲುಪುತ್ತದೆ. ನಾಳೆಯ ಪ್ರಯಾಣಕ್ಕಾಗಿ 148 ಬಸ್ಸುಗಳು, 3,600 ಅಸನಗಳನ್ನ ಕಾಯ್ದಿರಿಸಲಾಗಿದೆ.

    ಬೆಂಗಳೂರಿನಿಂದ ಎಲ್ಲಾ ಜಿಲ್ಲಾ ಕೇಂದ್ರಕ್ಕೆ ಸಂಜೆ 7 ಗಂಟೆಯ ಒಳಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದ್ದು, ಒಂದು ಬಸ್ಸಿನಲ್ಲಿ 30 ಜನ ಒಂದು ಜಿಲ್ಲೆಗೆ ಹೋಗುವಂತಿರಬೇಕು. ಬೇರೆ ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಜೆ 7 ಗಂಟೆಗೆ ಬಸ್ ಹೊರಡಲಿದೆ.

    ಒಂದು ಬಸ್ಸಿನಲ್ಲಿ 30 ಜನರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದ್ದು, ಬಸ್ ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ಆದ ಬಳಿಕವೇ ಬಸ್ ಹತ್ತಲು ಅವಕಾಶ ನೀಡಲಾಗುತ್ತದೆ. 10 ವರ್ಷದ ಒಳಗಡೆ ಮತ್ತು 60 ವರ್ಷ ಮೀರಿದ ಪ್ರಯಾಣಿಕರು ಪ್ರಯಾಣಿಸುವಂತಿಲ್ಲ.

    ಹವಾನಿಯಂತ್ರಿತ ಬಸ್ಸುಗಳ ಕಾರ್ಯಾಚರಣೆಗೆ ಅವಕಾಶ ನೀಡಿಲ್ಲ. ಮುಂಗಡ ಆಸನಗಳನ್ನು ಕೆಎಸ್‌ಆರ್‌ಟಿಸಿ ವೆಬ್‍ಸೈಟ್ ಮುಖಾಂತರ ಕಾಯ್ದಿರಿಸಿಕೊಳ್ಳಬಹುದಾಗಿದೆ. ಅಲ್ಲದೇ ಪ್ರಯಾಣಿಕರಿಗೆ ಕಡಿಮೆ ಲಗೇಜ್ ಹಾಗೂ ಐಡಿ ಕಾರ್ಡ್ ತರುವಂತೆ ಸೂಚನೆ ನೀಡಿದೆ. ಅಲ್ಲದೇ ಸುರಕ್ಷತೆಯ ದೃಷ್ಟಿಯಿಂದ ಮಾರ್ಗ ಮಧ್ಯೆ ಯಾವುದೇ ಸ್ಥಳದಲ್ಲಿ ನಿಲುಗಡೆ ಇಲ್ಲದೇ ಇರುವುದರಿಂದ ನೀರು, ಅಗತ್ಯ ಆಹಾರವನ್ನು ತರಲು ಮನವಿ ಮಾಡಿದೆ.

    ಬುಕ್ಕಿಂಗ್ ವ್ಯವಸ್ಥೆ ಹೇಗೆ?
    ಬೆಂಗಳೂರಿನಿಂದ – ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬಳ್ಳಾರಿ, ಕುಂದಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಕಲಬುರಗಿ, ರಾಯಚೂರು, ಹುಬ್ಬಳ್ಳಿ, ಹೊಸಪೇಟೆ, ಹಾವೇರಿ, ಹರಪ್ಪನ ಹಳ್ಳಿ, ಕೊಪ್ಪಳ, ಕಾರವಾರ, ಮಂಗಳೂರು, ಮಡಿಕೇರಿ, ಮೈಸೂರು, ಶಿವಮೊಗ್ಗ, ಸಿರ್ಸಿ, ಉಡುಪಿ, ಯಾದಗಿರಿ.

    ಬೆಂಗಳೂರಿಗೆ – ಬೆಳಗಾವಿ, ಬಳ್ಳಾರಿ, ಕುಂದಾಪುರ, ಚಿಕ್ಕಮಗಳೂರು, ದಾವಣಗೆರೆ, ಕಲಬುರ್ಗಿ, ಹುಬ್ಬಳ್ಳಿ, ಗಂಗಾವತಿ, ಹಡಗಲಿ, ಹರಿಹರ, ಹೊಸಪೇಟೆ, ಕಂಪ್ಲಿ, ಕುಮಟಾ, ಕುಷ್ಟಗಿ, ಕೊಪ್ಪಳ, ಶಿರಸಿ, ಉಡುಪಿ, ಯಾದಗಿರಿ, ಯಲಬುರ್ಗಾ, ಸಂಡೂರು, ಶಿರಗುಪ್ಪ, ಯಲ್ಲಾಪುರ, ಮಂಗಳೂರು, ಮೈಸೂರು, ವಿಜಯಪುರ.

  • ಬೆಂಗಳೂರಿನಿಂದ ಐದು ಜಿಲ್ಲೆಗಳ ಮಾರ್ಗದಲ್ಲಿ ಮಾತ್ರ ಬಸ್ ಸಂಚಾರ

    ಬೆಂಗಳೂರಿನಿಂದ ಐದು ಜಿಲ್ಲೆಗಳ ಮಾರ್ಗದಲ್ಲಿ ಮಾತ್ರ ಬಸ್ ಸಂಚಾರ

    – ಪಿಕ್ ಆಪ್ ಪಾಯಿಂಟ್‍ಗಳಲ್ಲಿ ಮಾತ್ರ ಪ್ರಯಾಣಿಕರು ಹತ್ತಲು ಅವಕಾಶ

    ಬೆಂಗಳೂರಿಗೆ: ರಾಜ್ಯ ಸರ್ಕಾರ ಲಾಕ್‍ಡೌನ್ 4.0ನಲ್ಲಿ ಜನರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿ ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಆದರೆ ನಾಳೆ ಬೆಂಗಳೂರಿನಿಂದ ರಾಜ್ಯದ 5 ಜಿಲ್ಲೆಗಳ ಮಾರ್ಗದಲ್ಲಿ ಮಾತ್ರ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಿರುವುದಾಗಿ ಕೆಎಸ್‌ಆರ್‌ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಕೆಎಸ್‌ಆರ್‌ಟಿಸಿ ನಿಗಮದ ಸಾರಿಗೆಗಳ ಕಾರ್ಯಾಚರಣೆಯನ್ನು ಮೇ 19ರಿಂದ ಪುನರಾಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಟ್ಟು 14 ನಿಯಮಗಳನ್ನು ಕೆಎಸ್‌ಆರ್‌ಟಿಸಿ ರೂಪಿಸಿಕೊಂಡಿದೆ. ಮೊದಲಿಗೆ ಸುಮಾರು 1,500 ಬಸ್‍ಗಳ್ನು (ಶೇ.25 ರಷ್ಟು) ರಸ್ತೆಗಳಿಸಲು ಸರ್ಕಾರದ ಆದೇಶದಲ್ಲಿ ಅವಕಾಶ ನೀಡಲಾಗಿದೆ. ತದನಂತರ ಹಂತ ಹಂತವಾಗಿ ಬಸ್‍ಗಳ ಸಂಖ್ಯೆಯನ್ನು ಹೆಚ್ಚಿಸಿ ಕಾರ್ಯಾಚರಣೆಗೊಳಿಸಲಾಗುವುದು ಎಂದು ತಿಳಿಸಿದೆ.

    ದರ ಹೆಚ್ಚಳವಿಲ್ಲ: ಬಸ್‍ಗಳಲ್ಲಿ ನಿಗದಿತ ಸೀಟ್‍ಗಳ ಪ್ರಯಾಣಿಕರಿಗಷ್ಟೇ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಬಸ್ ಪ್ರಯಾಣ ದರಗಳಲ್ಲಿ ಹೆಚ್ಚಳವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಹಗಲು ವೇಳೆಯಲ್ಲಿ ಅಂದರೆ ಬೆಳಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ಬಸ್ ಕಾರ್ಯಾಚರಣೆಗೆ ಅವಕಾಶ ನೀಡಲಾಗಿದೆ.

    5 ಜಿಲ್ಲೆಗಳಿಗೆ ಮಾತ್ರ ಬಸ್: ಬೆಳಗ್ಗೆ 7 ಗಂಟೆಗೆ ಬಸ್ ಪ್ರಯಾಣ ಆರಂಭವಾದರೆ ಸಂಜೆ 7 ಗಂಟೆ ವೇಳೆಗೆ ಗಮ್ಯ ಸ್ಥಳಗಳನ್ನು ತಲುಪುವ ಮಾರ್ಗಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದರ ಅನ್ವಯ ಬೆಂಗಳೂರಿನ ಮೆಜೆಸ್ಟಿಕ್ ನಿಂದ ಮೈಸೂರು, ಶಿವಮೊಗ್ಗ, ದಾವರಣಗೆರೆ, ಹಾಸನ, ಮಂಗಳೂರು ಜಿಲ್ಲೆಗಳಿಗೆ ಮಾತ್ರ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಸಂಜೆ 4ಗಂಟೆ, ಶಿವಮೊಗಕ್ಕೆ ಮಧ್ಯಾಹ್ನ 12 ಗಂಟೆ, ದಾವಣಗೆರೆಗೆ ಮಧ್ಯಾಹ್ನ 1 ಗಂಟೆ, ಹಾಸನಕ್ಕೆ 3.30 ಗಂಟೆಗೆ ಹಾಗೂ ಮಂಗಳೂರಿಗೆ ಬೆಳಗ್ಗೆ 11.30 ಗಂಟೆಗೆ ಅಂತಿಮ ಬಸ್ ನಿರ್ಗಮಿಸುತ್ತದೆ.  ಮೈಸೂರು, ಮಡಿಕೇರಿ ಮಾರ್ಗದಲ್ಲಿ ಸಂಚರಿಸುವ ಬಸ್ಸುಗಳು ಎಂದಿನಂತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಸಂಚರಿಸುತ್ತವೆ.

    ನಿಲುಗಡೆ ಇಲ್ಲ: ಪಿಕ್ ಆಪ್ ಪಾಯಿಂಟ್ ಗಳಲ್ಲಿ ಮಾತ್ರ ಪ್ರಯಾಣಿಕರು ಹತ್ತಲು ಅವಕಾಶ ನೀಡಲಾಗಿದೆ. ಉಳಿದ ಬಸ್ ನಿಲ್ದಾಣಗಳಲ್ಲಿ ಬಸ್ ನಿಲುಗಡೆ ಇರುವುದಿಲ್ಲ. ರಾಜ್ಯ ಸರ್ಕಾರ ಗುರುತಿಸಿರುವ ಕಂಟೈನ್‍ಮೆಂಟ್ ಝೋನ್‍ಗಳಿಗೆ ಯಾವುದೇ ಬಸ್ ಸಂಚಾರ ಇಲ್ಲ. ಪ್ರತಿ ಭಾನುವಾರ ಯಾವುದೇ ಬಸ್‍ಗಳ ಕಾರ್ಯಾಚರಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೇ ಒಂದು ಬಸ್ಸಿನಲ್ಲಿ 30 ಜನರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಕಡ್ಡಾಯವಾಗಿ ಬಸ್ ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ಆದ ಬಳಿಕವೇ ಬಸ್ ಹತ್ತಲು ಅವಕಾಶ ನೀಡಲಾಗುತ್ತದೆ.

    ಅಂತರ ರಾಜ್ಯ, ಹವಾನಿಯಂತ್ರಿತ ಬಸ್ಸುಗಳ ಕಾರ್ಯಾಚರಣೆಗೆ ಅವಕಾಶ ನೀಡಿಲ್ಲ. ಮುಂಗಡ ಆಸನಗಳನ್ನು ಕೆಎಸ್‌ಆರ್‌ಟಿಸಿ ವೆಬ್‍ಸೈಟ್ ಮುಖಾಂತರ ಕಾಯ್ದಿರಿಸಿಕೊಳ್ಳಬಹುದಾಗಿದೆ. ಅಲ್ಲದೇ ಪ್ರಯಾಣಿಕರಿಗೆ ಕಡಿಮೆ ಲಗ್ಗೇಜ್ ಹಾಗೂ ಐಡಿ ಕಾರ್ಡ್ ತರುವಂತೆ ಸೂಚನೆ ನೀಡಿದೆ. ಅಲ್ಲದೇ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಮಾರ್ಗ ಮಧ್ಯ ಯಾವುದೇ ಸ್ಥಳದಲ್ಲಿ ನಿಲುಗಡೆ ಇಲ್ಲದೇ ಇರುವುದರಿಂದ ನೀರು, ಅಗತ್ಯ ಆಹಾರವನ್ನು ತರಲು ಮನವಿ ಮಾಡಿದೆ.

    ಬುಕ್ಕಿಂಗ್ ಆರಂಭ:  ಬೆಂಗಳೂರು-ಶಿವಮೊಗ್ಗ, ಶಿವಮೊಗ್ಗ-ಬೆಂಗಳೂರು, ಬೆಂಗಳೂರು-ಚಿಕ್ಕಮಗಳೂರು, ಚಿಕ್ಕಮಗಳೂರು-ಬೆಂಗಳೂರು, ಬೆಂಗಳೂರು-ದಾವಣಗೆರೆ, ದಾವಣಗೆರೆ-ಬೆಂಗಳೂರು, ಬೆಂಗಳೂರು- ಮೈಸೂರು, ಮೈಸೂರು-ಬೆಂಗಳೂರು, ಬೆಂಗಳೂರು-ಮಡಿಕೇರಿ, ಮಡಿಕೇರಿ-ಬೆಂಗಳೂರು, ಬೆಂಗಳೂರು-ಮಂಗಳೂರು, ಮಂಗಳೂರು-ಬೆಂಗಳೂರು, ಬೆಂಗಳೂರು-ಕುಂದಾಪುರ, ಕುಂದಾಪುರ-ಬೆಂಗಳೂರು, ಬೆಂಗಳೂರು-ಹೊಸಪೇಟೆ, ಹೊಸಪೇಟೆ-ಬೆಂಗಳೂರು, ಬೆಂಗಳೂರು-ಬಳ್ಳಾರಿ, ಬಳ್ಳಾರಿ- ಬೆಂಗಳೂರು, ಬೆಂಗಳೂರು-ಹುಬ್ಬಳ್ಳಿ, ಬೆಂಗಳೂರು-ಸಿರ್ಸಿ, ಬೆಂಗಳೂರು-ರಾಯಚೂರು, ಬೆಂಗಳೂರು-ಬೆಳಗಾವಿ, ಬೆಂಗಳೂರು-ಧಾರವಾಡ.

    ಪ್ರಯಾಣಿಕರು ಕೆ ಎಸ್ ಆರ್ ಟಿ‌ ಸಿ‌, ವೆಬ್‌ಸೈಟ್ www.ksrtc.in‌ಮೂಲಕ ಅಥವಾ ಫ್ರಾಂಚೈಸಿ ಕೌಂಟರುಗಳು / ನಿಗಮದ‌ ಟಿಕೇಟು ಕೌಂಟರುಗಳ ಮೂಲಕ‌ ಟಿಕೇಟುಗಳನ್ನು ಕಾಯ್ದಿರಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಕಾಲ್ ಸೆಂಟರ್ ನಂಬರ್ ಗೆ ಸಂಪರ್ಕಿಸಿ : 94495 96666

  • ‘ರಸ್ತೆ ಸುರಕ್ಷತಾ ನಿಯಮದ ಅರಿವಿಲ್ಲದಿರುವುದು ಒಂದು ಸಾಂಕ್ರಾಮಿಕ ರೋಗ’

    ‘ರಸ್ತೆ ಸುರಕ್ಷತಾ ನಿಯಮದ ಅರಿವಿಲ್ಲದಿರುವುದು ಒಂದು ಸಾಂಕ್ರಾಮಿಕ ರೋಗ’

    ಮಂಡ್ಯ: ಈ ಹಿಂದೆ ಸಾಂಕ್ರಾಮಿಕ ರೋಗಗಳಾದ ಕಾಲರಾ ಮತ್ತು ಪ್ಲೇಗ್‍ಗಳು ಬಂದಾಗ ಸಾವಿರಾರು ಗ್ರಾಮೀಣ ಜನರು ಸೂಕ್ತ ಚಿಕಿತ್ಸೆಯಿಲ್ಲದೇ ಅಕಾಲಿಕವಾದ ಮೃತ್ಯುವಿಗೆ ಶರಣಾಗುತ್ತಿದ್ದರು. ಆದರೆ ಈಗ ಜಾಗತಿಕ ಜಗತ್ತಿನ ಸ್ಪರ್ಧಾ ಪ್ರಪಂಚದಲ್ಲಿ ರಸ್ತೆ ಅಪಘಾತಗಳಲ್ಲಿ ಬೇಜವಾಬ್ದಾರಿತನದಿಂದ ಅಕಾಲಿಕವಾಗಿ ಸಾಯುವ ಜನರ ಸಂಖ್ಯೆಯೇ ಹೆಚ್ಚಾಗಿದೆ ಎಂದು ಕೆ.ಆರ್.ಪೇಟೆ ಪಟ್ಟಣ್ಣ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಅಭಿಪ್ರಾಯ ಪಟ್ಟಿದ್ದಾರೆ.

    ಕೆ.ಆರ್.ಪೇಟೆ ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋದಲ್ಲಿ ನಾಗಮಂಗಲದ ಪ್ರಾದೇಶಿಕ ಸಾರಿಗೆ ಇಲಾಖೆಯ ವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ರಸ್ತೆ ಸುರಕ್ಷತಾ ನಿಯಮದ ಬಗ್ಗೆ ಅರಿವು ಮೂಡಿಸುವ ಪೋಸ್ಟರ್ ಮತ್ತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

    ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸದೇ ಅಪಘಾತವು ಸಂಭವಿಸಿ ನಮ್ಮ ಅಮೂಲ್ಯವಾದ ಪ್ರಾಣವು ಹೋಗುತ್ತದೆ. ನಾವುಗಳು ಶಾಶ್ವತವಾಗಿ ಅಂಗವಿಕಲರಾಗುತ್ತೇವೆ ಎಂದು ತಿಳಿದಿದ್ದರೂ ಅಡ್ಡಾದಿಡ್ಡಿಯಾಗಿ ಬೇಕಾಬಿಟ್ಟಿ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಬಲಿಯಾಗಿ ನಮ್ಮನ್ನು ನಂಬಿರುವ ಕುಟುಂಬದ ಸದಸ್ಯರು, ತಂದೆ-ತಾಯಿ, ಹೆಂಡತಿ-ಮಕ್ಕಳನ್ನು ಅನಾಥರನ್ನಾಗಿ ಮಾಡುತ್ತಿದ್ದೇವೆ ಎಂದರು.

    ಮನಸ್ಸನ್ನು ಸ್ಥಿಮಿತದಲ್ಲಿಟ್ಟುಕೊಳ್ಳದೇ ಮೊಬೈಲ್ ಫೋನಿನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಿದರೆ ಅಪಘಾತ ನಡೆಯುತ್ತದೆ. ಕುಡಿದು ವಾಹನ ಚಾಲನೆ ಮಾಡುವುದು, ಓವರ್ ಲೋಡ್ ಮಾಡಿಕೊಂಡು ವಾಹನವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳದೇ ವಾಹನವನ್ನು ಚಾಲನೆ ಮಾಡುವುದರಿಂದಲೂ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಿ ವಾಹನ ಚಲಾಯಿಸಬೇಕು ಎಂದು ಹೇಳಿದರು.

  • ಸೂರ್ಯಗ್ರಹಣದ ಎಫೆಕ್ಟ್ – KSRTC ಕಲೆಕ್ಷನ್‍ಗೆ ಬಿತ್ತು ಹೊಡೆತ

    ಸೂರ್ಯಗ್ರಹಣದ ಎಫೆಕ್ಟ್ – KSRTC ಕಲೆಕ್ಷನ್‍ಗೆ ಬಿತ್ತು ಹೊಡೆತ

    ಚಿಕ್ಕಬಳ್ಳಾಪುರ: ಶತಮಾನದ ಕೇತುಗ್ರಸ್ಥ ಸೂರ್ಯಗ್ರಹಣದಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಭಾರೀ ಹೊಡೆತ ಬಿದ್ದಿದೆ. ನಿರೀಕ್ಷಿತ ಪ್ರಮಾಣದ ಪ್ರಯಾಣಿಕರಿಲ್ಲದೆ ಈ ದಿನದ ಕಲೆಕ್ಷನ್‍ನಲ್ಲಿ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ.

    ಸೂರ್ಯ ಗ್ರಹಣದ ಹಿನ್ನೆಲೆಯಲ್ಲಿ ಜನ ಮನೆಯಿಂದ ಹೊರಗೆ ಬಾರದ ಕಾರಣ ಬಸ್‍ಗಳೆಲ್ಲವೂ ಬೆರಳಣಿಕೆ ಪ್ರಯಾಣಿಕರನ್ನು ಹೊತ್ತು ಸಾಗುವಂತಾಗಿದೆ. ಚಿಕ್ಕಬಳ್ಳಾಪುರ ನಗರದ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣ ಗ್ರಹಣದ ಎಫೆಕ್ಟ್ ನಿಂದ ಬಿಕೋ ಎನ್ನುವಂತಿತ್ತು. ಪ್ರಯಾಣಿಕರಿಲ್ಲದೆ ಖಾಲಿ ಖಾಲಿ ಹೊಡೆಯುತ್ತಿದ್ದ ಬಸ್ ಗಳು ನಿಂತಲ್ಲೇ ನಿಂತ ದೃಶ್ಯಗಳು ಸಾಮಾನ್ಯವಾಗಿತ್ತು. ಇಷ್ಟು ದಿನ ಬಸ್ ಗಳಿಗಾಗಿ ಪ್ರಯಾಣಿಕರು ಕಾಯುವಂತಹ ಪರಿಸ್ಥಿತಿ ಇರುತ್ತಿತ್ತು. ಆದರೆ ಇಂದು ಬಸ್ ಚಾಲಕ, ನಿರ್ವಾಹಕರು ಪ್ರಯಾಣಿಕರಿಗಾಗಿ ಕಾಯುವಂತಾಗಿತ್ತು.

    ಸಾಮಾನ್ಯ ದಿನಗಳಲ್ಲಿ ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ 10 ರಿಂದ 15 ನಿಮಿಷಕ್ಕೆ ಒಂದು ಬಸ್ ಪ್ರಯಾಣಿಕರನ್ನು ಹೊತ್ತ ಬಸ್ ಸಾಗುತ್ತಿತ್ತು. ಆದರೆ ಇಂದು ಅರ್ಧ ಗಂಟೆಯಾದರು ಒಂದು ಬಸ್ ಕೂಡ ತುಂಬಿರಲಿಲ್ಲ. ಪರಿಣಾಮ ಟಿಕೆಟ್ ಕಲೆಕ್ಷನ್‍ನಲ್ಲೂ ಸಹ ಸಾಕಷ್ಟು ಕಡಿಮೆಯಾಗಿದೆ. ಗ್ರಹಣದ ಸಮಯದಲ್ಲಿ 8 ರಿಂದ 11:30ರ ವೇಳೆಗೆ ಸುಮಾರು 45 ಬಸ್ ಗಳು ಬೆಂಗಳೂರು ಕಡೆಗೆ ಸಾಗಬೇಕಿತ್ತು. ಆದರೆ ಎಲ್ಲಾ ಬಸ್ ಗಳು ಅರ್ಧ ಗಂಟೆ ಲೇಟಾಗಿ ಖಾಲಿ ಖಾಲಿಯಾಗಿ ಬೆರಳಣೆಕೆ ಪ್ರಯಾಣಿಕರನ್ನ ಹೊತ್ತು ರಾಜಧಾನಿಯತ್ತ ಸಾಗಿವೆ. ಇದರಿಂದ ಸಹಜವಾಗಿ ಕಲೆಕ್ಷನ್ ಸಾಕಷ್ಟು ಕಡಿಮೆ ಆಗಿದೆ ಎಂದು ಚಿಕ್ಕಬಳ್ಳಾಪುರ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ಟಿಸಿ ಬಿ.ಸೊಣ್ಣಪ್ಪ ಪಬ್ಲಿಕ್ ಟಿ ವಿಗೆ ಮಾಹಿತಿ ನೀಡಿದರು.

    ಖಾಸಗಿ ಬಸ್‍ಗಳಿಗೂ ಎಫೆಕ್ಟ್: ಕೆಎಸ್‍ಆರ್ ಟಿಸಿ ಬಸ್ ಗಳ ಒಂದೆಡೆಯಾದರೆ ಖಾಸಗಿ ಬಸ್ ಗಳ ವ್ಯಥೆಯೂ ಸಾಕಷ್ಟಿದೆ. ಚಿಕ್ಕಬಳ್ಳಾಪುರ ನಗರದ ಖಾಸಗಿ ಬಸ್ ನಿಲ್ದಾಣದಲ್ಲೂ ಪ್ರಯಾಣಿಕರಿಲ್ಲದೆ ಬಸ್ ಗಳೆಲ್ಲವೂ ಖಾಲಿ ಖಾಲಿಯಾಗಿ ನಿಂತಿತ್ತು. ಬೆಂಗಳೂರು ಕಡೆಗೆ ಎರಡು ಟ್ರಿಪ್ ಹೊಡೆದರೂ ಪ್ರಯಾಣಿಕರು ಬರುತ್ತಿಲ್ಲ. ಬೆರಳೆಣಿಕೆ ಪ್ರಯಾಣಿಕರು ಮಾತ್ರ ಬಸ್ ಹತ್ತಲು ಬರುತ್ತಿದ್ದಾರೆ. ಕನಿಷ್ಠ ಡಿಸೇಲ್‍ಗೂ ಸಹ ಕಲೆಕ್ಷಕನ್ ಆಗುತ್ತಿಲ್ಲ ಎಂದು ಖಾಸಗಿ ಬಸ್ ಚಾಲಕ ಪಬ್ಲಿಕ್ ಟಿವಿ ಬಳಿ ಅಳಲು ತೋಡಿಕೊಂಡರು.

    ಒಂದೆಡೆ ವಾಹನಗಳ ಸಂಚಾರ ವಿರಳವಾಗಿ ರಸ್ತೆಗಳು ಬಿಕೋ ಎನ್ನುತ್ತಿದ್ದರೆ, ಮತ್ತೊಂದೆಡೆ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದರೂ ವ್ಯಾಪಾರ ವಹಿವಾಟು ಇಲ್ಲದೆ ವ್ಯಾಪಾರಸ್ಥರು ನಿರಾಸೆ ಅನುಭವಿಸಿದರು.

  • ಮತ್ತೊಂದು ಶಾಕ್, ಇನ್ನು ಮುಂದೆ ಪ್ರತಿ ತಿಂಗಳು ಬಸ್ ಟಿಕೆಟ್ ಪರಿಷ್ಕರಣೆ!

    ಮತ್ತೊಂದು ಶಾಕ್, ಇನ್ನು ಮುಂದೆ ಪ್ರತಿ ತಿಂಗಳು ಬಸ್ ಟಿಕೆಟ್ ಪರಿಷ್ಕರಣೆ!

    ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಸಿದ್ದವಾಗಿದೆ. ತೈಲ ಬೆಲೆ ಹೆಚ್ಚಳದಿಂದಾಗಿ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರಿಗೆ ಸಚಿವ ಡಿಸಿ ತಮ್ಮಣ್ಣ, ದಿನೇ ದಿನೇ ತೈಲ ಬೆಲೆ ಹೆಚ್ಚಳವಾಗ್ತಿದೆ. ಅನಿವಾರ್ಯವಾಗಿ ಟಿಕೆಟ್ ದರ ಹೆಚ್ಚಿಸಬೇಕಾಗಿದೆ. ಹೀಗಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.  ಇದನ್ನೂ ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ಈ ವಾರದಲ್ಲಿ ಸಿಎಂ ಕುಮಾರಸ್ವಾಮಿ ಜೊತೆ ಮಾತನಾಡಿ ಟಿಕೆಟ್ ದರ ಹೆಚ್ಚಳ ಮಾಡುತ್ತೇವೆ. ಈಗಾಗಲೇ 18% ಟಿಕೆಟ್ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೀಗಾಗಿ ಸಿಎಂ ಜೊತೆ ಅಂತಿಮವಾಗಿ ಚರ್ಚಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.

    ಈ ಕುರಿತು ಕೆಎಸ್ಆರ್‌ಟಿಸಿಯ ವ್ಯವಸ್ಥಾಪಕ ನಿದೇಶಕರಾದ ಉಮಾ ಶಂಕರ್ ಪ್ರತಿಕ್ರಿಯಿಸಿ, ದಿನೇ ದಿನೇ ತೈಲ ಬೆಲೆಗಳು ಏರಿಕೆಯಾಗುತ್ತಿರುವುದಿಂದ ನಿಗಮಕ್ಕೆ ಆರ್ಥಿಕ ಹೊರೆ ಉಂಟಾಗುತ್ತಿದೆ. ಕೂಡಲೇ ಸರ್ಕಾರ ಸಾರಿಗೆ ನಿಗಮಗಳ ನೆರವಿಗೆ ಆಗಮಿಸಬೇಕು. ಈಗಾಗಲೇ ಸರ್ಕಾರಕ್ಕೆ ಪ್ರತಿ ತಿಂಗಳು ಪ್ರಯಾಣದರವನ್ನು ಪರಿಷ್ಕರಣೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಕ್ಟೋಬರ್ ನಿಂದ ನಂದಿನಿ ಹಾಲಿನ ದರ ಹೆಚ್ಚಳ?

    ಕಳೆದ 5 ವರ್ಷಗಳಿಂದಲೂ ಬಸ್ ದರ ಏರಿಕೆಯಾಗಿಲ್ಲ. ಇದರಿಂದಾಗಿ ನಷ್ಟದಲ್ಲೇ ವಾಹನಗಳನ್ನು ಓಡಿಸಲು ಸಾಧ್ಯವಿಲ್ಲ. ಹೀಗಾಗಿ ಪ್ರಯಾಣ ದರಗಳ ನಿಗದಿ ಪಡಿಸುವ ಬಗ್ಗೆ ಸಮಿತಿ ರಚನೆ ಮಾಡಿ, ಪ್ರತಿ ತಿಂಗಳು ಪರಿಷ್ಕರಣೆ ಮಾಡುವ ಯೋಜನೆಯನ್ನು ಜಾರಿಗೆ ತರಲಾಗುತ್ತದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರತಿಷ್ಠಿತ ಐಶಾರಾಮಿ ವೋಲ್ವೋ ಕಂಪೆನಿಗೆ ಶಾಕ್ ನೀಡಿದ ಸಾರಿಗೆ ಸಚಿವರು!

    ಪ್ರತಿಷ್ಠಿತ ಐಶಾರಾಮಿ ವೋಲ್ವೋ ಕಂಪೆನಿಗೆ ಶಾಕ್ ನೀಡಿದ ಸಾರಿಗೆ ಸಚಿವರು!

    ಬೆಂಗಳೂರು: ರಾಜ್ಯದ ಎಲ್ಲಾ ಸಾರಿಗೆ ನಿಗಮಗಳಲ್ಲಿನ ಹೊಸ ವೋಲ್ವೋ ಬಸ್ ಖರೀದಿಗೆ ಸಾರಿಗೆ ಸಚಿವರಾದ ಡಿ.ಸಿ.ತಮ್ಮಣರವರು ಬ್ರೇಕ್ ಹಾಕಿದ್ದಾರೆ.

    ವೋಲ್ವೋ ಬಸ್‍ಗಳ ವ್ಯಾಮೋಹಕ್ಕೆ ಒಳಗಾಗಿದ್ದ ಬಿಎಂಟಿಸಿ, ಕೆಎಸ್‍ಆರ್ ಟಿಸಿ, ಎನ್‍ಇಕೆಎಸ್‍ಆರ್ ಟಿಸಿ, ಎನ್‍ಡಬ್ಲ್ಯೂಕೆಎಸ್‍ಆರ್ ಟಿಸಿಯ ನಿಗಮಗಳಿಗೆ ಸಾರಿಗೆ ಇಲಾಖೆ ತಣ್ಣೀರು ಎರಚಿದ್ದು, ಸಾರಿಗೆ ಸಂಸ್ಥೆಯವರು ಹೊಸ ಬಸ್ ಗಳ ಖರೀದಿಗೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸಚಿವರು ಬ್ರೇಕ್ ಹಾಕುವ ಮೂಲಕ ವೋಲ್ವೋ ಕಂಪೆನಿಗೆ ಬಿಗ್ ಶಾಕ್ ನೀಡಿದ್ದಾರೆ.

    ಅನಗತ್ಯ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾರಿಗೆ ಸಚಿವರು ಈ ನಿರ್ಧಾರ ತೆಗೆದುಕೊಂಡಿದ್ದು, ನಗರ ಸಾರಿಗೆಗೆ ವೋಲ್ವೋ ಬಸ್ ಖರೀದಿ ಮಾಡೋ ಹಾಗಿಲ್ಲ ಹಾಗೂ ದುಬಾರಿ ಬೆಲೆ ಬಸ್ ಖರೀದಿ ಪ್ರಸ್ತಾವನೆ ನನ್ನ ಮುಂದೆ ತರಬೇಡಿ ಎಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಚಿವರ ಈ ಖಡಕ್ ನಿರ್ಧಾರವು ವೋಲ್ವೋ ಕಂಪೆನಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

    ಈ ವೇಳೆ ಮಾತನಾಡಿದ ಸಚಿವರು, ವೋಲ್ವೋ ಬಸ್ ನಿರ್ವಹಣೆ ದುಬಾರಿಯಾಗಿದ್ದು, ಮೈಲೇಜ್ ಸಹ ಕಡಿಮೆ ನೀಡುತ್ತದೆ. ಆದ್ದರಿಂದ ಹೊಸ ವೋಲ್ವೋ ಬಸ್ ಖರೀದಿ ನಿಲ್ಲಿಸಿದ್ದೇನೆ. ಈಗಾಗಲೇ ನಾಲ್ಕು ಸಾರಿಗೆ ಸಂಸ್ಥೆಗಳು ಐಷಾರಾಮಿ ಬಸ್ ಗಳಿಂದ ಕೈ ಸುಟ್ಟುಕೊಂಡಿವೆ ಎಂದು ತಿಳಿಸಿದರು.

    ವೋಲ್ವೋ ಬಸ್ ಖರೀದಿಯಿಂದ ಅಧಿಕಾರಿಗಳು ದುಡ್ಡು ಮಾಡುತ್ತಾರೆಯೇ ಹೊರತು, ಸಂಸ್ಥೆಗೆ ಯಾವುದೇ ಪ್ರಯೋಜನವಿಲ್ಲ ಎಂದು ಆರೋಪಿಸಿದ ಅವರು 1 ಕೋಟಿ ಬೆಲೆಯ ಬಸ್‍ಗಳು ಬೇಡ ಎಂದು ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದಾರೆ.