Tag: ಸಾರ್ಕ್

  • ಚೀನಾ, ಪಾಕಿಸ್ತಾನದೊಂದಿಗೆ ಸಂಬಂಧ ಕಷ್ಟ: ಜೈಶಂಕರ್

    ಚೀನಾ, ಪಾಕಿಸ್ತಾನದೊಂದಿಗೆ ಸಂಬಂಧ ಕಷ್ಟ: ಜೈಶಂಕರ್

    ಎಲ್ಲಿಯವರೆಗೆ ಪಾಕ್ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುತ್ತೋ ಅಲ್ಲಿಯವರೆಗೆ ಮಾತುಕತೆ ಇಲ್ಲ

    ನವದೆಹಲಿ: ಯಾವುದೇ ಒಂದು ಸದಸ್ಯ ರಾಷ್ಟ್ರ ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿದ್ದರೂ ಭಾರತ ‘ಸಾರ್ಕ್’ನೊಂದಿಗೆ (ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ) ಸಭೆ ನಡೆಸುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಹೇಳಿದ್ದಾರೆ.

    ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೈಶಂಕರ್, ಪಾಕಿಸ್ತಾನದಲ್ಲಿ (Pakistan) ಸಮಸ್ಯೆಗಳಿವೆ ಎಂಬುದು ನಮಗೆ ತಿಳಿದಿದೆ. ಹಾಗೂ ಸಮಸ್ಯೆಗಳ ಗಂಭೀರತೆಯನ್ನು ಗುರುತಿಸುವ ಸಮಯ ಇದಾಗಿದೆ. ಪಾಕಿಸ್ತಾನ ಕತ್ತಲಿನ ವೇಳೆಯಲ್ಲಿ ಭಯೋತ್ಪಾದನೆಯನ್ನು ನಡೆಸಿ, ಹಗಲಿನ ವೇಳೆಯಲ್ಲಿ ವ್ಯಾಪಾರವನ್ನು ನಡೆಸುವ ಪರಿಸ್ಥಿತಿಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ. ಹಾಗೇನಾದರೂ ಆದರೆ ದೇಶ ಸರಿಯಾಗಿ ಕಾರ್ಯ ನಿರ್ವಹಿಸುವುದರಲ್ಲಿ ವಿಫಲವಾಗುತ್ತದೆ ಎಂದು ಹೇಳಿದ್ದಾರೆ.

    ಗಡಿಯಲ್ಲಿ ಶಾಂತಿ ನಿರ್ಮಾಣದತ್ತ ಚೀನಾ ಮುಖ ಮಾಡಬೇಕು:
    ಭಾರತ ಹಾಗೂ ಚೀನಾ (China) ನಡುವಿನ ಗಡಿ ಭಾಗದ ಸ್ಥಿತಿ ಇಂದಿಗೂ ಅಸಹಜವಾಗಿದೆ. ಗಡಿ ನಿರ್ವಹಣೆಗೆ ಸಂಬಂಧಿಸಿದ ಒಪ್ಪಂದಗಳ ಉಲ್ಲಂಘನೆಯಾಗಿರುವುದರಿಂದಾಗಿ ಭಾರತ ಹಾಗೂ ಚೀನಾ ನಡುವಿನ ಸಂಬಂಧ ಕಷ್ಟದ ಹಂತದಲ್ಲಿ ಸಾಗುತ್ತಿದೆ. ಇದನ್ನೂ ಓದಿ: ದೇಶದಾದ್ಯಂತ ಬಕ್ರೀದ್ ಹಬ್ಬ ಆಚರಣೆ – ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ

    ಯಾವುದೇ ಸಂಬಂಧಗಳು ಪರಸ್ಪರರ ಆಸಕ್ತಿಗಳನ್ನು ಹಾಗೂ ಸೂಕ್ಷ್ಮತೆಗಳಿಗೆ ಗೌರವ ನೀಡಬೇಕು. ಚೀನಾ ಗಡಿಯಲ್ಲಿ ಶಾಂತಿ ನಿರ್ಮಾಣದತ್ತ ಮುಖ ಮಾಡಬೇಕು. ಶಾಂತಿ ಒಪ್ಪಂದಗಳನ್ನು ಮೀರಿ ಕೃತ್ಯಗಳನ್ನು ನಡೆಸಿದರೆ ಕಷ್ಟ ಎಂದು ಜೈಶಂಕರ್ ಹೇಳಿದರು. ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊರೊನಾ ನಿಯಂತ್ರಣಕ್ಕೆ ಕ್ರಮ- ಮೋದಿ ಸರ್ಕಾರಕ್ಕೆ WHO ಮೆಚ್ಚುಗೆ

    ಕೊರೊನಾ ನಿಯಂತ್ರಣಕ್ಕೆ ಕ್ರಮ- ಮೋದಿ ಸರ್ಕಾರಕ್ಕೆ WHO ಮೆಚ್ಚುಗೆ

    ಬೆಂಗಳೂರು: ಭಾರತದಲ್ಲಿ ಕೊರೊನಾ ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಪ್ರಶಂಸೆ ವ್ಯಕ್ತಪಡಿಸಿದೆ.

    ಖುದ್ದು ಪ್ರಧಾನಿ ಮೋದಿಯೇ ಎಲ್ಲವನ್ನು ಪರಿಶೀಲಿಸುತ್ತಿದ್ದಾರೆ. ಸೋಂಕು ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ. ಇನ್ನು ಸಾರ್ಕ್ ರಾಷ್ಟ್ರಗಳಲ್ಲಿ ಕೊರೊನಾ ತಡೆಗೆ ಪ್ರಧಾನಿ ಮೋದಿ ಮುಂದಾಳತ್ವ ವಹಿಸಿರೋದಕ್ಕೆ ಅಮೆರಿಕ ಮತ್ತು ರಷ್ಯಾ ದೇಶಗಳು ಮೆಚ್ಚುಗೆ ವ್ಯಕ್ತಪಡಿಸಿವೆ.

    ಕೊರೊನಾದಂತಹ ಮಾರಕ ಸೋಂಕು ತಡೆ ಸಲುವಾಗಿ ನೆರೆಹೊರೆಯ ದೇಶಗಳ ಜೊತೆಗೂಡಿ ಹೋರಾಟ ಮಾಡಲು ನಿರ್ಧರಿಸಿರುವ ಮೋದಿ ಕ್ರಮ ಸ್ವಾಗತಾರ್ಹ. ಕೊರೋನ ತಡೆಗಾಗಿ 74 ಕೋಟಿ ಪ್ರಾದೇಶಿಕ ನಿಧಿ ಸ್ಥಾಪನೆ ಒಳ್ಳೆಯ ಬೆಳವಣಿಗೆ ಎಂದು ಅಮೆರಿಕ ಶ್ಲಾಘಿಸಿದೆ.

    ರಷ್ಯಾ ಕೂಡ ಮೋದಿ ನಡೆಯನ್ನು ಸ್ವಾಗತಿಸಿದೆ. ಇಂತಹ ಸಂದರ್ಭದಲ್ಲಿ ಮೋದಿ ತೆಗದುಕೊಂಡ ನಿಲುವು ಸರಿಯಾಗಿದೆ ಎಂದು ರಷ್ಯಾ ಶ್ಲಾಘಿಸಿದೆ.

  • ಸಾರ್ಕ್ ಶೃಂಗ ಸಭೆಗೆ ಪ್ರಧಾನಿ ಮೋದಿಗೆ ಪಾಕ್ ಆಹ್ವಾನ

    ಸಾರ್ಕ್ ಶೃಂಗ ಸಭೆಗೆ ಪ್ರಧಾನಿ ಮೋದಿಗೆ ಪಾಕ್ ಆಹ್ವಾನ

    ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಡೆಯುವ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಸ್ಥೆ(ಸಾರ್ಕ್)ಯ 19ನೇ ಶೃಂಗ ಸಭೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಆಹ್ವಾನಿಸುವುದಾಗಿ ಪಾಕಿಸ್ತಾನ ಹೇಳಿದೆ.

    ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಾಕ್ ವಿದೇಶಾಂಗ ವಕ್ತಾರ ಡಾ. ಮೊಹಮ್ಮದ್ ಫೈಸಲ್, ಸಾರ್ಕ್ ಶೃಂಗಸಭೆಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗುವುದು. ಅಲ್ಲದೇ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಮೊದಲ ಭಾಷಣದಲ್ಲಿ ಭಾರತ ಮತ್ತು ಪಾಕಿಸ್ತಾನದ ದ್ವಿಪಕ್ಷೀಯ ಮಾತುಕತೆಯ ವಿಚಾರದಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ, ಪಾಕ್ ಎರಡು ಹೆಜ್ಜೆ ಮುಂದಿಡುತ್ತದೆ ಎನ್ನುವ ವಿಚಾರವನ್ನೂ ಸಹ ಪ್ರಸ್ತಾಪಿಸಿದರು.

    ಸಾರ್ಕ್ ಶೃಂಗ ಸಭೆ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುತ್ತವೆ. 2014ರಲ್ಲಿ ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಮೋದಿಯವರು ಪಾಲ್ಗೊಂಡಿದ್ದರು. ಆದರೆ 2016ರಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ನಡೆಯಬೇಕಿದ್ದ ಸಭೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿರಲಿಲ್ಲ. ಏಕೆಂದರೆ 2016ರ ಸೆಪ್ಟೆಂಬರ್ 18 ರಂದು ಪಾಕ್ ಉಗ್ರಗಾಮಿಗಳು ಜಮ್ಮು ಕಾಶ್ಮೀರದ ಉರಿ ಪ್ರದೇಶದಲ್ಲಿನ ಭಾರತೀಯ ಸೇನಾ ಶಿಬಿರದ ಮೇಲೆ ದಾಳಿ ನಡೆಸಿ, 19 ಯೋಧರನ್ನು ಬಲಿ ಪಡೆದುಕೊಂಡಿದ್ದರು. ಹೀಗಾಗಿ ದಾಳಿಯನ್ನು ಖಂಡಿಸಿ ಭಾರತ ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯವೆಂದು ತಿಳಿಸಿತ್ತು.

    ಉಗ್ರ ದಾಳಿಯಿಂದಾಗಿ ಭಾರತ ಶೃಂಗ ಸಭೆಗೆ ಹಿಂದೆ ಸರಿದ ಬೆನ್ನಲ್ಲೇ, ಸಾರ್ಕ್ ಸದಸ್ಯ ರಾಷ್ಟ್ರಗಳಾದ ಬಾಂಗ್ಲಾದೇಶ, ಭೂತಾನ್ ಹಾಗೂ ಅಪ್ಘಾನಿಸ್ತಾನ ದೇಶಗಳು ಕೂಡ ಸಭೆಗೆ ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ಪಾಕಿಸ್ತಾನ ಅನಿವಾರ್ಯವಾಗಿ ಶೃಂಗಸಭೆಯನ್ನು ಮುಂದೂಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಪಾಕ್ ವಿದೇಶಾಂಗ ಇಲಾಖೆ, ಶೃಂಗಸಭೆಯನ್ನು ಮುಂದೂಡಿದ್ದರೂ ಭವಿಷ್ಯದಲ್ಲಿ ಮತ್ತೆ ಸಭೆಯ ಆತಿಥ್ಯವನ್ನು ನಾವೇ ವಹಿಸುತ್ತೇವೆ ಎಂದು ಹೇಳಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋದಿಂದ ಮತ್ತೊಂದು ಇತಿಹಾಸ: ದಕ್ಷಿಣ ಏಷ್ಯಾ ಉಪಗ್ರಹ ಉಡಾವಣೆ ಯಶಸ್ವಿ

    ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋದಿಂದ ಮತ್ತೊಂದು ಇತಿಹಾಸ: ದಕ್ಷಿಣ ಏಷ್ಯಾ ಉಪಗ್ರಹ ಉಡಾವಣೆ ಯಶಸ್ವಿ

    ಶ್ರೀಹರಿಕೋಟಾ: ಕಡಿಮೆ ವೆಚ್ಚದಲ್ಲಿ ಏಕಕಾಲದಲ್ಲಿ 104 ಉಪಗ್ರಹಗಳನ್ನು ಉಡಾಯಿಸಿದ್ದ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದೆ. ಸಾರ್ಕ್ ರಾಷ್ಟ್ರಗಳ ಬಾಂಧವ್ಯವೃದ್ಧಿಗೆ ಎರಡು ವರ್ಷಗಳ ಹಿಂದೆ ಪ್ರಧಾನಿ ಮೋದಿ ಕೊಟ್ಟಿದ್ದ ‘ಸೌತ್ ಏಷ್ಯಾ ಸ್ಯಾಟಲೈಟ್’ ಅನ್ನು  ಜಿಎಸ್‍ಎಲ್‍ವಿ ರಾಕೆಟ್ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.

    ಸಂಜೆ 4.57ಕ್ಕೆ ಆಂಧ್ರದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಉಡಾವಣೆಯಾದ ಜಿಸ್ಯಾಟ್–9  ಉಪಗ್ರಹ ಯಶಸ್ವಿಯಾಗುತ್ತಿದ್ದಂತೆಯೇ ಇಸ್ರೋ ಮತ್ತು ಸಾರ್ಕ್ ರಾಷ್ಟ್ರಗಳ ಪ್ರತಿನಿಧಿಗಳು ಸಂಭ್ರಮಿಸಿದ್ರು. ಪಾಕಿಸ್ತಾನ ಹೊರತುಪಡಿಸಿ ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಮಾಲ್ಡೀವ್ಸ್, ಶ್ರೀಲಂಕಾ, ಅಫ್ಘಾನಿಸ್ತಾನ ಇದರ ಸೇವೆ ಪಡೆಯಲಿದೆ.

     ಪ್ರಧಾನಿ ಮೋದಿ ಮಾತನಾಡಿ ಇದೊಂದು ಐತಿಹಾಸಿಕ ಹೆಜ್ಜೆ. ಸಾರ್ಕ್ ರಾಷ್ಟ್ರಗಳ ಪರಸ್ಪರ ಅಭಿವೃದ್ಧಿಗೆ ಸಹಕಾರವಾಗಲಿದೆ ಎಂದರೆ, ಸಾರ್ಕ್ ರಾಷ್ಟ್ರಗಳ ಪ್ರಧಾನಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡ್ರು.

    ಉಪಗ್ರಹದ ವಿಶೇಷತೆ ಏನು?
    235 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಉಪಗ್ರಹ 2,230 ಕೆ.ಜಿ ತೂಕ, 50 ಮೀಟರ್ ಉದ್ದ, 12 ವರ್ಷ ಕಾರ್ಯಾವಧಿಯನ್ನು ಹೊಂದಿದೆ. ಇಸ್ರೋದ ಐ-2ಕೆ ಬಸ್ ಮಟ್ಟಕ್ಕೆ ಅನುಗುಣವಾಗಿ ಅಭಿವೃದ್ಧಿಯಾಗಿದ್ದು, ದೂರಸಂಪರ್ಕ, ದೂರಸಂವಹನ, ಡಿಟಿಎಚ್, ವಿಸ್ಯಾಟ್, ದೂರಶಿಕ್ಷಣ ಮತ್ತು ಟೆಲಿ ಮೆಡಿಸಿನ್ ಕ್ಷೇತ್ರಕ್ಕೆ ಉಪಯೋಗವಾಗಲಿದೆ. ಅಷ್ಟೇ ಅಲ್ಲದೇ ಪ್ರಕೃತಿ ವಿಕೋಪ ಸಂಭವಿಸಿದಾಗ ಹಾಟ್‍ಲೈನ್ ಸಂಪರ್ಕ ಮೂಲಕ ಪರಿಹಾರ ಕಾರ್ಯಾಚರಣೆ ನಡೆಸಬಹುದಾಗಿದೆ.

    ಮುಂದಿನ ವರ್ಷದ ಆರಂಭದಲ್ಲಿ ಇಸ್ರೋ ಚಂದ್ರಯಾನ-2 ಉಡಾವಣೆ ಮಾಡಲಿದೆ ಎಂದು ಇಸ್ರೋ ಅಧ್ಯಕ್ಷರಾದ ಎಎಸ್ ಕಿರಣ್ ಕಿಮಾರ್ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.