Tag: ಸಾರ್ವಜನಿಕರು

  • ತಲ್ವಾರ್‌ನಿಂದ ಕೇಕ್ ಕತ್ತರಿಸಿ ಜೆಡಿಎಸ್ ಮುಖಂಡನ ಹುಟ್ಟುಹಬ್ಬ ಆಚರಣೆ

    ತಲ್ವಾರ್‌ನಿಂದ ಕೇಕ್ ಕತ್ತರಿಸಿ ಜೆಡಿಎಸ್ ಮುಖಂಡನ ಹುಟ್ಟುಹಬ್ಬ ಆಚರಣೆ

    ಕೊಪ್ಪಳ: ಜೆಡಿಎಸ್ ಮುಖಂಡರೊಬ್ಬರು ತಮ್ಮ ಹುಟ್ಟುಹಬ್ಬವನ್ನು ತಲ್ವಾರ್‌ನಿಂದ ಕೇಕ್ ಕತ್ತರಿಸಿ ಆಚರಿಸುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಜೆಡಿಎಸ್ ಮುಖಂಡ ಮೆಹಮೂದ್ ಹುಸೇನ್ ಬಲ್ಲೆ ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಕೊಪ್ಪಳದಲ್ಲಿ ಮಂಗಳವಾರ ಹುಟ್ಟುಹಬ್ಬ ಆಚರಿಕೊಂಡ ಹುಸೇನ್ ಅವರು ಸ್ನೇಹಿತರ ಜೊತೆಗೂಡಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಖುಷಿಪಟ್ಟ ವಿಡಿಯೋವನ್ನು ತಮ್ಮ ಫೇಸ್‍ಬುಕ್ ಖಾತೆಯಿಂದಲೇ ಪೋಸ್ಟ್ ಮಾಡಿದ್ದಾರೆ.

    ರಾಜಕೀಯಕ್ಕೆ ಸೇರುವ ಮೊದಲು ಹುಸೇನ್ ರೌಡಿ ಶೀಟರ್ ಸಹ ಆಗಿದ್ದರು. ಈಗ ರೌಡಿಸಂ ಬಿಟ್ಟು ರಾಜಕೀಯಕ್ಕೆ ಸೇರಿ ಒಂದು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಆದರೆ ತಮ್ಮ ಸ್ಥಾನದ ಬೆಲೆ ಮರೆತು ವಿಕೃತವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರೋದಕ್ಕೆ ಸಾರ್ವಜನಿಕರು ಟೀಕೆ ವ್ಯಕ್ತಪಡಿಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸುವುದು ತಪ್ಪು. ಅದರಲ್ಲೂ ತಲ್ವಾರ್‌ನಿಂದ ಕೇಕ್ ಕಟ್ ಮಾಡ್ತಿರೋದನ್ನು ಫೇಸ್‍ಬುಕ್ ನಲ್ಲಿ ಹಾಕಿಕೊಂಡು ರೌಡಿ ಚಟುವಟಿಕೆಗೆ ಪ್ರೇರೇಪಿಸುತ್ತಿದ್ದಾರೆ ಎಂಬ ಆರೋಪ ಅವರ ವಿರುದ್ಧ ಕೇಳಿಬರುತ್ತಿದೆ.

    ಈ ಹಿಂದೆ ಕೂಡ ಹಲವು ಮಂದಿ ಹೀಗೆ ತಲ್ವಾರ್‌ನಿಂದ ಕೇಕ್ ಕತ್ತರಿಸಿ ವಿಕೃತವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಹೀಗೆ ಮಾಡುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ರೌಡಿ ಚಟುವಟಿಕೆಗಳನ್ನು ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಗಳ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅನ್ಯಧರ್ಮಕ್ಕೆ ಮತಾಂತರಿಸಲು ಯತ್ನ- ಮೂವರು ಮಹಿಳೆಯರಿಗೆ ಸಾರ್ವಜನಿಕರಿಂದ ತರಾಟೆ

    ಅನ್ಯಧರ್ಮಕ್ಕೆ ಮತಾಂತರಿಸಲು ಯತ್ನ- ಮೂವರು ಮಹಿಳೆಯರಿಗೆ ಸಾರ್ವಜನಿಕರಿಂದ ತರಾಟೆ

    ಚಿಕ್ಕಬಳ್ಳಾಪುರ: ಬಸ್ ನಿಲ್ದಾಣದಲ್ಲಿರುವ ಒಂಟಿ ಯುವತಿಯರನ್ನ ಟಾರ್ಗೆಟ್ ಮಾಡಿ ಅನ್ಯಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸುತ್ತಿದ್ದ ಮೂವರು ಮಹಿಳೆಯರನ್ನ ಸಾರ್ವಜನಿಕರು ತರಾಟೆಗೆ ತೆಗದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ನಡೆದಿದೆ.

    ಆರೋಪಿಗಳಾದ ಮೂವರು ಮಹಿಳೆಯರನ್ನು ಭಾರತಿ, ನಿರ್ಮಲ ಹಾಗೂ ಐಶ್ವರ್ಯ ಎಂದು ಗುರುತಿಸಲಾಗಿದೆ. ಈ ಮಹಿಳೆಯರು ನಗರದ ಕೆಎಸ್‌ಆರ್‌ಟಿಸಿ  ಬಸ್ ನಿಲ್ದಾಣದಲ್ಲಿ ಏಕಾಂಗಿಯಾಗಿರುತ್ತಿದ್ದ ಯುವತಿಯರ ಬಳಿ ಹೋಗಿ ತಮ್ಮ ಧರ್ಮಕ್ಕೆ ಸೇರುವಂತೆ ಮನಪರಿವರ್ತನೆಗೆ ಮುಂದಾಗಿದ್ದರು. ಇದನ್ನ ಕಂಡ ಸ್ಥಳೀಯರು ಮನಪರಿವರ್ತನೆಯ ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದು ತದನಂತರ ಮೂವರು ಮಹಿಳೆಯರನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದಾರೆ.

    ಸದ್ಯ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಪೊಲೀಸರು ಮೂವರು ಮಹಿಳೆಯರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳಪೆ ಕಾಮಗಾರಿ ಪ್ರಶ್ನಿಸಿದ ಜನರಿಗೆ ಶಾಸಕ ಲಮಾಣಿ ಪುತ್ರ ಅವಾಜ್!

    ಕಳಪೆ ಕಾಮಗಾರಿ ಪ್ರಶ್ನಿಸಿದ ಜನರಿಗೆ ಶಾಸಕ ಲಮಾಣಿ ಪುತ್ರ ಅವಾಜ್!

    ಗದಗ: ರಸ್ತೆ ಕಾಮಗಾರಿ ಗುಣಮಟ್ಟ ಕಳಪೆಯಾಗಿದೆ, ಸರಿಪಡಿಸಿ ಎಂದು ಕಾಮಗಾರಿ ತಡೆದ ಸಾರ್ವಜನಿಕರಿಗೆ ಶಾಸಕ ಲಮಾಣಿ ಪುತ್ರ ಲಕ್ಷ್ಮೇಶ್ವರ ಪಟ್ಟಣದಲ್ಲಿ ಅವಾಜ್ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಿಂದ ಗದಗ ನಾಕಾವರೆಗೆ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಒಳ್ಳೆ ಕಾಮಗಾರಿ ಮಾಡಿ ಎಂದು ಸ್ಥಳಿಯರು ಪ್ರತಿಭಟಿಸಿ ಸ್ಥಗಿತಗೊಳಿಸಿದ್ದರು.

    ಈ ವಿಚಾರ ತಿಳಿದು ಗುತ್ತಿಗೆದಾರರ ಬೆಂಗಾವಲಾಗಿ ಬಂದ ಶಾಸಕರ ಪುತ್ರ ಮಹೇಶ ಲಮಾಣಿ ಜನರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇದರಿಂದ ಅಂಬೇಡ್ಕರ್ ಸೇನಾ ಸಮಿತಿಯಿಂದ ಸಾರ್ವಜನಿಕರು ರಸ್ತೆ ತಡೆದು, ಜೆಸಿಬಿ ಅಡ್ಡನಿಲ್ಲಿಸಿ ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಆಗಮಿಸಿ ಮಹೇಶ ಲಮಾಣಿ ಕ್ಷಮೆ ಕೇಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇಕ್ ಪ್ರಿಯರಿಗಾಗಿಯೇ ಸಿಲಿಕಾನ್ ಸಿಟಿಯಲ್ಲಿ ಸಖತ್ ಟೇಸ್ಟಿ ಶೋ

    ಕೇಕ್ ಪ್ರಿಯರಿಗಾಗಿಯೇ ಸಿಲಿಕಾನ್ ಸಿಟಿಯಲ್ಲಿ ಸಖತ್ ಟೇಸ್ಟಿ ಶೋ

    ಬೆಂಗಳೂರು: ಕೇಕ್ ಅಂದರೆ ಯಾರಿಗೆ ತಾನೇ ಇಷ್ಟ ಆಗಲ್ಲ. ಕೇಕ್ ಪ್ರಿಯರಿಗಾಗಿಯೇ ಸಿಲಿಕಾನ್ ಸಿಟಿಯಲ್ಲಿ ಸಖತ್ ಟೇಸ್ಟಿ ಶೋವೊಂದನ್ನು ಆಯೋಜಿಸಲಾಗಿದೆ.

    ಸೇಂಟ್ ಜೋಸೆಫ್ ಹೈಸ್ಕೂಲ್ ಮೈದಾನದಲ್ಲಿ ವಿಶ್ವದ ಅತೀ ದೊಡ್ಡ 44ನೇ ಕೇಕ್ ಶೋ ಏರ್ಪಡಿಸಲಾಗಿದೆ. ಇನ್ಸ್ ಸ್ಟಿಟ್ಯೂಟ್ ಆಫ್ ಬೇಕಿಂಗ್ ಆ್ಯಂಡ್ ಕೇಕ್ ಆರ್ಟ್‍ನಿಂದ, ಇಂದಿನಿಂದ ಜನವರಿ 1ರವರೆಗೆ ಈ ಟೇಸ್ಟಿ ಶೋ ಆಯೋಜಿಸಲಾಗಿದೆ. ಈ ಶೋ ಸಕ್ಸಸ್ ಗೆ 40 ಜನ 5 ತಿಂಗಳುಗಳ ಕಾಲ ಶ್ರಮಿಸಿದ್ದಾರೆ. ಈ ಶೋ ಇಕೋ ಫ್ರೇಂಡ್ಲಿಯಾಗಿದ್ದು, ಕೊಡಗು, ಕೇರಳದ ಪಾಕೃತಿಕ ವಿಕೋಪಗಳನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ.

    ಶೋನಲ್ಲಿರುವ ಒಂದೊಂದು ಕೇಕ್ ಗಳು ಒಂದೊಂದು ಕತೆ ಹೇಳುತ್ತವೆ. ಈ ಬಾರಿಯ ಕೇಕ್ ಶೋದ ಪ್ರಮುಖ ಅಟ್ರಾಕ್ಷನ್ ಮೊಘಲರು ಕಟ್ಟಿದ ಕೆಂಪು ಕೋಟೆಯಾಗಿದೆ. ಈ ಐತಿಹಾಸಿಕ ಕಟ್ಟಡವನ್ನು 1600 ಕೆ.ಜಿ. ಸಕ್ಕರೆ ಹಾಗೂ ರಾಯಲ್ ಐಸಿಂಗ್ ನಿಂದ ತಯಾರಿಸಲಾಗಿದೆ. ಇದರ ಜೊತೆಗೆ ಹಿಮಬಂಡೆಯ ಮೇಲೆ ನಿಂತಿರುವ ನೂರಾರು ಪೆಂಗ್ವಿನ್‍ಗಳು, 140 ತೂಕದ ಅಲ್ಲಾವುದ್ದೀನ್ ಮಾಯಾದೀಪ ಗಮನ ಸೆಳೆಯುತ್ತಿದೆ.

    ಮಕ್ಕಳನ್ನು ಬಟರ್ ಫ್ಲೈ ಫೇರಿ ಡಾಲ್, ಸಾಂತಾ ಕ್ಲಾಸ್ ಹಾಗೂ ಜೋಕರ್ ಗಳು ಕೈ ಬೀಸಿ ಕರೆಯುತ್ತಿವೆ. ಬಾನಂಗಳದಲ್ಲಿ ವಿವಾಹ ಮಹೋತ್ಸವ ಆಚರಿಸುವ ಹಾಲೋ ವೆಡ್ಡಿಂಗ್ ಕೇಕ್ ತಯಾರಿಸಲಾಗಿದೆ. ಶಾಂತಚಿಂತದ ಬುದ್ಧ, ಚೈನೀಸ್ ಪಗೋಡಾ, ಚಿಟ್ಟೆ, ಗೊಂಬೆಗಳು, ಏಸು ಮೂರ್ತಿ ಸೆಂಟರ್ ಆಫ್ ಅಟ್ರಾಕ್ಷನ್ ಆಗಿವೆ. ಈ ಶೋ ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದ್ದು, 49 ರೂಪಾಯಿ ಪ್ರವೇಶ ಶುಲ್ಕ ವಿಧಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡು ರಸ್ತೆಯಲ್ಲೇ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಕಾಮುಕ

    ನಡು ರಸ್ತೆಯಲ್ಲೇ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಕಾಮುಕ

    ಬೆಂಗಳೂರು: ಗಾಂಜಾ ಗುಂಗಿನಲ್ಲಿದ್ದ ಕಾಮುಕನೊಬ್ಬ ಹಾಡಹಗಲೇ ನಡು ರಸ್ತೆಯಲ್ಲಿ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಘಟನೆ ಬೆಂಗಳೂರಿನ ಕಲ್ಯಾಣನಗರ ಸಮೀಪ ಚಲ್ಲಕೆರೆ ಬಳಿ ನಡೆದಿದೆ.

    ಇದೇ ತಿಂಗಳ 8 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಿಂದ ಅಂಗಡಿಗೆ ತೆರಳುತ್ತಿದ್ದ ಮಹಿಳೆಯನ್ನು ಹಿಂಬದಿಯಿಂದ ಬಂದು ಕೈ ಹಿಡಿದ ಕಾಮುಕ ಆಕೆಯ ಬಟ್ಟೆ ಬಿಚ್ಚಲು ಯತ್ನಿಸಿದ್ದಾನೆ. ಈ ವೇಳೆ ಬೀದಿ ಕಾಮುಕನಿಂದ ಬಿಡಿಸಿಕೊಳ್ಳಲು ರಸ್ತೆಯಲ್ಲಿ ಮಹಿಳೆ ಕಿರುಚಾಡಿದ್ದಾಳೆ. ಆಗ ಮಹಿಳೆಯ ಕಿರುಚಾಟ ಕೇಳಿ ಸ್ಥಳಕ್ಕೆ ಆಗಮಿಸಿದ ಸುತ್ತಮುತ್ತಲ ನಿವಾಸಿಗಳು ಕಾಮುಕನನ್ನು ಹಿಡಿದು ಸರಿಯಾಗಿ ಥಳಿಸಿದ್ದಾರೆ.

    ಡ್ರಗ್ಸ್ ಹಾಗೂ ಗಾಂಜಾ ಸೇವಿಸಿ ಬೀದಿಯಲ್ಲಿ ಓಡಾಡ್ತಿದ್ದ ಅಸಾಮಿ ಅಮಲಿನಲ್ಲಿ ಮಹಿಳೆಯನ್ನು ಎಳೆದಾಡಿದ್ದಾನೆ. ಘಟನೆ ಬಳಿಕ ಕಾಮುಕನನ್ನು ಹೆಣ್ಣೂರು ಪೊಲೀಸರಿಗೆ ಸಾರ್ವಜನಿಕರು ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ಮಾಡುವ ವೇಳೆ ಆರೋಪಿಯು ಯಲಹಂಕ ಮೂಲದ ಅಲುಮೀನ್ ಎಂಬುದು ಪತ್ತೆಯಾಗಿದೆ. ಗಾಂಜಾ ಸೇವನೆಗಾಗಿ ಹೆಣ್ಣೂರು ಕಡೆ ಬಂದಿದ್ದ ಆರೋಪಿ ಹೆಣ್ಣೂರು ಬಳಿಯ ವಿದೇಶಿ ಪ್ರಜೆಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಘಟನೆ ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜನರ ಗಂಭೀರ ಸಮಸ್ಯೆಗಳ ಚರ್ಚೆ ವೇಳೆ ಮೊಬೈಲ್‍ನಲ್ಲೇ ಮುಳುಗಿದ ಅಧಿಕಾರಿಗಳು

    ಜನರ ಗಂಭೀರ ಸಮಸ್ಯೆಗಳ ಚರ್ಚೆ ವೇಳೆ ಮೊಬೈಲ್‍ನಲ್ಲೇ ಮುಳುಗಿದ ಅಧಿಕಾರಿಗಳು

    ಹಾಸನ: ಜಿಲ್ಲೆಯ ಜನರ ಪ್ರಮುಖ ಸಮಸ್ಯೆಗಳ ಬಗ್ಗೆ ಗಂಭೀರವಾದ ಚರ್ಚೆ ನಡೆಯುವ ವೇಳೆ ಅಧಿಕಾರಿಗಳು ಮೊಬೈಲ್ ನಲ್ಲೇ ಮುಳುಗಿ ಕಾಲ ಕಳೆದ ಘಟನೆ ಜಿಲ್ಲಾ ಪಂಚಾಯಿತಿ ಮಾಸಿಕ ಪ್ರಗತಿ ಸಭೆಯಲ್ಲಿ ನಡೆದಿದೆ.

    ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಸೇರಿದಂತೆ ಸಾಮಾನ್ಯ ಜನರಿಗೆ ಹೆಚ್ಚಿನ ಹಾನಿ ಆಗಿತ್ತು. ಈ ಬಗ್ಗೆ ಹಾಸನ ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳ ಸಭೆ ನಡೆಸಿದ್ದರು. ಈ ವೇಳೆ ಚರ್ಚೆ ಏನೋ ಗಂಭೀರವಾಗಿಯೇ ನಡೆಯಿತು. ಕೆಲ ಅಧಿಕಾರಿಗಳು ತಮ್ಮ ಇಲಾಖಾವಾರು ಪ್ರಗತಿಯನ್ನು ಸಭೆಯ ಮುಂದಿಟ್ಟರು. ಆದರೆ ಸಭೆಯಲ್ಲಿ ಹಾಜರಾಗಿದ್ದ ಬಹುತೇಕ ಅಧಿಕಾರಿಗಳು ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು.

    ಮಹಿಳಾ ಹಾಗೂ ಪುರುಷ ಅಧಿಕಾರಿಗಳು ಎನ್ನದೇ ಬಹುತೇಕ ಅಧಿಕಾರಿಗಳು ಸಭೆಗೆ ಯಾವುದೇ ರೀತಿಯ ಮಹತ್ವ ನೀಡದೇ ತಮ್ಮ ಪಾಡಿಗೆ ತಾವು ಮೊಬೈಲ್ ನಲ್ಲಿ ಮುಳುಗಿದ್ದರು. ಕೆಲವರು ಕಾಲ್ ನಲ್ಲಿ ಬ್ಯುಸಿಯಾಗಿದ್ದರೆ, ಮತ್ತೆ ಕೆಲವರು ವಾಟ್ಸಾಪ್ ನಲ್ಲಿ ಮಗ್ನರಾಗಿದ್ದರು. ಇನ್ನೂ ಕೆಲವರು ಯಾವ ಪರಿ ಫ್ರೀಯಾಗಿದ್ರು ಎಂದರೆ ಆನ್‍ಲೈನ್ ಶಾಪಿಂಗ್ ತಾಣದ ಮೂಲಕ ಹೊಸ ಹೊಸ ವಸ್ತುಗಳ ಬುಕ್ಕಿಂಗ್ ಮಾಡಲು ಸಮಯ ಮೀಸಲಿಟ್ಟಿದ್ದರು.

    ಮಾಸಿಕ ಪ್ರಗತಿ ಪರಿಶೀಲನಾ ಸಭೆಗೂ, ನಮಗೂ ಯಾವುದೇ ಸಂಬಂಧ ಇಲ್ಲ ಎಂಬಂತೆ ಮೊಬೈಲ್ ಮೊರೆ ಹೋಗಿದ್ದು ಅಧಿಕಾರಿಗಳ ಬದ್ಧತೆಯನ್ನು ಪ್ರಶ್ನಿಸುವಂತೆ ಮಾಡಿದೆ. ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಜನ ಸಾಮಾನ್ಯರ ಅಧಿಕಾರಿಗಳ ಬಳಿ ಹೋದರೆ ಸಭೆಯ ಕಾರಣ ನೀಡುವ ಅಧಿಕಾರಗಳು ಕೆಲಸ ಮುಂದೂಡುತ್ತಾರೆ. ಆದರೆ ಸಭೆಗೆ ಬರುವ ಅಧಿಕಾರಿಗಳು ಮಾತ್ರ ತಮ್ಮ ಕರ್ತವ್ಯ ಮಾಡದೇ ಅಸಡ್ಡೆ ತೋರಿದ್ದಾರೆ. ಸದ್ಯ ಅಧಿಕಾರಿಗಳ ಈ ವರ್ತನೆ ಗಮನಿಸಿದ ಸಾರ್ವಜನಿಕರು ಯಾವ ಪುರುಷಾರ್ಥಕ್ಕೆ ಸಭೆ ನಡೆಸಲಾಗುತ್ತದೆ ಎಂದು ಪ್ರಶ್ನಿಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾವಿನ ಮನೆಗೆ ತೆರಳಿ ತನ್ನದೇ ಭಾಷೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಸಾಂತ್ವಾನ ಹೇಳಿದ ಕಪಿರಾಯ

    ಸಾವಿನ ಮನೆಗೆ ತೆರಳಿ ತನ್ನದೇ ಭಾಷೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಸಾಂತ್ವಾನ ಹೇಳಿದ ಕಪಿರಾಯ

    ಗದಗ: ಮನುಷ್ಯ ಮರಣಹೊಂದಿದಾಗ ಬಂಧು-ಬಾಂಧವರು, ಮಿತ್ರರು ಬೇಗ ಬರುವುದಿಲ್ಲ. ಆದರೆ ಕೋತಿಯೊಂದು ಸಾವಿನ ಮನೆಗೆ ತೆರಳಿ ತನ್ನದೇ ಭಾಷೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಸಾಂತ್ವಾನ ಹೇಳಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ನಡೆದಿದೆ.

    ನಾಗನಗೌಡ ಪಾಟೀಲ್(71) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಕುಟುಂಬದವರು ಅತೀವ ಶೋಕದಲ್ಲಿದ್ದರು. ಅಷ್ಟರಲ್ಲಿ ಕಪಿಯೊಂದು ಮೃತರ ಮನೆಗೆ ಧಾವಿಸಿದೆ. ಅರ್ಚಕರು ಪೂಜೆ ಸಲ್ಲಿಸುವ ವೇಳೆ ಶವದ ಬಳಿ ಸುಮ್ಮನೆ ಕೂತು ಶ್ರದ್ಧಾಂಜಲಿ ಸಲ್ಲಿಸಿದೆ.

    ನಂತರ ಮನೆಯಿಂದ ಹೊರಬಂದು, ಮೃತನ ಹಿರಿಯ ಪುತ್ರ ಮರಿಗೌಡ ಅವರ ಪಕ್ಕದಲ್ಲಿ ಹಾಗೂ ಅವರ ಹೆಗಲೇರಿ ತಲೆಮೇಲೆ ಕೈಯಾಡಿಸಿದೆ. ಅವರ ಕಿವಿಯಲ್ಲಿ ತನ್ನದೆ ಭಾಷೆಯಲ್ಲಿ ಸಾಂತ್ವಾನ ಹೇಳಿದೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಜನರಿದ್ದರೂ ಯಾರೋಬ್ಬರಿಗೂ ತೊಂದರೆ ಮಾಡದೆ, ಕುಟುಂಬದವರಿಗೆ ಪ್ರೀತಿ ಕನಿಕರ ತೋರಿಸಿದೆ.

    ಕಪಿರಾಯನ ವರ್ತನೆ ಸಾರ್ವಜನಿಕರನ್ನು ಒಂದು ವೇಳೆ ನಿಬ್ಬೆರಗಾಗುವಂತೆ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಆರ್ ಪೇಟೆಯಲ್ಲಿ ಒಂದೇ ದಿನ ನಾಲ್ವರು ಮಕ್ಕಳಿಗೆ ಕಚ್ಚಿತು ನಾಯಿ- ತಾಯಿ ಜೊತೆ ಇದ್ದ ಮಕ್ಕಳನ್ನು ಬಿಡಲಿಲ್ಲ

    ಕೆಆರ್ ಪೇಟೆಯಲ್ಲಿ ಒಂದೇ ದಿನ ನಾಲ್ವರು ಮಕ್ಕಳಿಗೆ ಕಚ್ಚಿತು ನಾಯಿ- ತಾಯಿ ಜೊತೆ ಇದ್ದ ಮಕ್ಕಳನ್ನು ಬಿಡಲಿಲ್ಲ

    ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಹುಚ್ಚು ನಾಯಿ ಹಾವಳಿಯನ್ನು ನಿಯಂತ್ರಿಸದ್ದಕ್ಕೆ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ ಒಂದು ವಾರದಿಂದ ಐವರು ಮಕ್ಕಳು ಸೇರಿ ಒಟ್ಟು ಏಳು ಜನರಿಗೆ ನಾಯಿ ಕಚ್ಚಿವೆ. ಇಂದು ಒಂದೇ ದಿನದಲ್ಲಿ ಕೆಆರ್ ಪೇಟೆಯ ಸುಭಾಷ್‍ನಗರದಲ್ಲಿ ನಾಲ್ವರು ಮಕ್ಕಳು ಸೇರಿ ಓರ್ವ ಮಹಿಳೆ ಮೆಲೆ ನಾಯಿಯೊಂದು ಏಕಾಏಕಿ ದಾಳಿ ಮಾಡಿದೆ.

    ತಾಯಿ ಜೊತೆ ಇದ್ದ ಮಕ್ಕಳನ್ನೂ ಬಿಡದೇ ನಾಯಿ ಕಚ್ಚಿದೆ. ನಾಯಿ ಕಚ್ಚಿದ ಪರಿಣಾಮ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನುಳಿದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ದಾಳಿ ಮಾಡಿರುವ ನಾಯಿಗೆ ಬಹುಶಃ ಹುಚ್ಚು ಹಿಡಿದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

    ಜಿಲ್ಲೆಯಲ್ಲಿ ನಾಯಿ ಕಾಟ ಹೆಚ್ಚಾಗಿದ್ದು, ನಾಯಿ ದಾಳಿಗೆ ಭಯಭೀತರಾದ ಪೋಷಕರು ತಮ್ಮ ಮಕ್ಕಳನ್ನು ಹೊರಗೆ ಕಳುಹಿಸಲು ಹೆದರುತ್ತಿದ್ದಾರೆ. ನಗರದಲ್ಲಿ ನಾಯಿಗಳ ದಾಳಿ ನಿರಂತರವಾಗಿ ನಡೆಸುತ್ತಿದ್ದರೂ ಕ್ರಮ ಕೈಗೊಳ್ಳದೇ ಪುರಸಭೆ ಸದಸ್ಯರು, ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾರಿಗೆ ಇಲಾಖೆ ಇನ್ನಾದರೂ ಎಚ್ಚೆತ್ತುಕೊಳ್ಳಲಿ – ಸಾವಿನ ಜೊತೆ ಸವಾರಿಗೆ ಬೀಳುತ್ತಾ ಬ್ರೇಕ್?

    ಸಾರಿಗೆ ಇಲಾಖೆ ಇನ್ನಾದರೂ ಎಚ್ಚೆತ್ತುಕೊಳ್ಳಲಿ – ಸಾವಿನ ಜೊತೆ ಸವಾರಿಗೆ ಬೀಳುತ್ತಾ ಬ್ರೇಕ್?

    ಚಿಕ್ಕಬಳ್ಳಾಪುರ: ಇತ್ತ ಮಂಡ್ಯ ಸಾವಿನ ಬಸ್ ದುರಂತ ರಾಜ್ಯದ ಜನರನ್ನು ಬೆಚ್ಚಿಬೀಳಿಸುವಂತೆ ಮಾಡಿದರೆ, ಅತ್ತ ಇಡೀ ರಾಜ್ಯಾದ್ಯಾಂತ ಇಂತಹ ಅದೆಷ್ಟೋ ಕಡೆಗಳಲ್ಲಿ ಖಾಸಗಿ ಬಸ್‍ಗಳಲ್ಲಿ ಸಾರ್ವಜನಿಕರು ಸಾವಿನ ಜೊತೆ ಸವಾರಿ ನಡೆಸುತ್ತಿದ್ದಾರೆ.

    ಇದಕ್ಕೆ ಪ್ರಮುಖ ಸಾಕ್ಷಿ ಎಂಬಂತೆ ರಾಜ್ಯ ರಾಜಧಾನಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಖಾಸಗಿ ಬಸ್‍ಗಳು ಸಾವಿನ ಬಸ್‍ಗಳಾಗಿ ಸಂಚರಿಸುತ್ತಿರುವ ದೃಶ್ಯ ಎಲ್ಲಡೆ ಸಾಮಾನ್ಯ ಎಂಬಂತಾಗಿದೆ. ಜಿಲ್ಲೆಯ ಗಡಿಭಾಗದ ಬಾಗೇಪಲ್ಲಿ ಹಾಗೂ ಚಿಂತಾಮಣಿ ತಾಲೂಕುಗಳಲ್ಲಿ ಯಾರ ಭಯವೂ ಇಲ್ಲದೆ ಖಾಸಗಿ ಬಸ್‍ಗಳು ಕಾನೂನುಗಳನ್ನು ಉಲ್ಲಂಘಿಸಿ ರಾಜರೋಷವಾಗಿ ಸಂಚರಿಸುತ್ತಿವೆ.

    ಚಿಂತಾಮಣಿ-ಚೇಳೂರು, ಚಿಂತಾಮಣಿ-ಕೆಂಚಾರ್ಲಹಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್‍ಗಳ ಸಂಚಾರ ವಿರಳವಾಗಿರುವುದರಿಂದ ಖಾಸಗಿ ಬಸ್‍ಗಳು ಎಗ್ಗಿಲ್ಲದೇ ಸಂಚರಿಸುತ್ತಿವೆ. ಕೇವಲ ಖಾಸಗಿ ಬಸ್‍ನ ಓಳಭಾಗದಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿರೋದು ಮಾತ್ರವಲ್ಲದೆ ಸಾವಿನ ಸವಾರಿಗೆ ಸ್ಪಷ್ಟ ಸಾಕ್ಷಿ ಎಂಬಂತೆ ಬಸ್‍ನ ಟಾಪ್ ಮೇಲೆ ಕೂತು ಸಾರ್ವಜನಿಕರು ಪ್ರಯಾಣ ಮಾಡುತ್ತಿದ್ದಾರೆ. ಪ್ರತಿ ದಿನವೂ ಇದೇ ರೀತಿ ಸಾರ್ವಜನಿಕರು ಬಸ್‍ನ ಟಾಪ್ ಹಾಗೂ ಬಸ್‍ನ ಹಿಂಭಾಗದ ಮೆಟ್ಟಿಲುಗಳು ಸೇರಿದಂತೆ ಬಾಗಿಲಲ್ಲಿ ನೇತಾಡಿಕೊಂಡು ಪ್ರಯಾಣ ಮಾಡುತ್ತಿದ್ದರೂ ಖಾಸಗಿ ಬಸ್‍ಗಳಿಗೆ ಕಡಿವಾಣ ಹಾಕುವ ಕೆಲಸ ಆರ್‍ಟಿಓ ಇಲಾಖೆ ಮಾಡಿಲ್ಲ.

    ಪ್ರತಿದಿನವೂ ರಾಜ್ಯದ ನಾನಾ ಕಡೆಯೂ ಇಂತಹ ಅದೆಷ್ಟೂ ಸಾವಿನ ಬಸ್ ಗಳು ಸಾರ್ವಜನಿಕರ ಜೀವನದ ಜೊತೆ ಚೆಲ್ಲಾಟ ಆಡುತ್ತಾ ಸವಾರಿ ಮಾಡುತ್ತಿವೆ. ಹೀಗಾಗಿ ಈಗಾಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಮುಂದಿನ ದಿನಗಳಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳ್ಳತನ ಎಸಗಿದ್ದಕ್ಕೆ ಪ್ಯಾಂಟ್ ಕಳಚಿ, ಚಡ್ಡಿಯಲ್ಲಿ ನಿಲ್ಲಿಸಿ ಧರ್ಮದೇಟು!

    ಕಳ್ಳತನ ಎಸಗಿದ್ದಕ್ಕೆ ಪ್ಯಾಂಟ್ ಕಳಚಿ, ಚಡ್ಡಿಯಲ್ಲಿ ನಿಲ್ಲಿಸಿ ಧರ್ಮದೇಟು!

    ಉಡುಪಿ: ಕಳ್ಳತನ ಮಾಡಿದ್ದಕ್ಕೆ ಇಬ್ಬರು ಯುವಕರ ಪ್ಯಾಂಟ್ ಕಳಚಿ, ಚಡ್ಡಿಯಲ್ಲಿ ನಿಲ್ಲಿಸಿ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಗುರುವಾರ ನಡೆದಿದೆ.

    ಇಂಡಸ್ಟ್ರಿಯಲ್ ಏರಿಯಾದ ಗ್ಯಾರೇಜ್‍ನಲ್ಲಿ ರಿಪೇರಿಗೆ ಬಂದಿದ್ದ ಕಾರಿನ ಮ್ಯೂಸಿಕ್ ಸಿಸ್ಟಂ, ಬೆಲೆಬಾಳುವ ಪಾರ್ಟ್‍ಗಳನ್ನು ಕದಿಯುತ್ತಿದ್ದ ಇಬ್ಬರು ಕಳ್ಳರಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಇತ್ತೀಚೆಗೆ ಉಡುಪಿಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರಿನಲ್ಲಿರುವ ಬೆಲೆ ಬಾಳುವ ವಸ್ತುಗಳ ಕಳ್ಳತನ ಹೆಚ್ಚಾಗಿತ್ತು. ಮ್ಯೂಸಿಕ್ ಸಿಸ್ಟಂ, ಕಾರಿನ ಕ್ಯಾಮೆರಾಗಳು, ಸ್ಪೀಕರ್, ಪೆಟ್ರೋಲ್, ಕಾರಿನಲ್ಲಿದ್ದ ಹಣ, ಪರ್ಸ್ ಹೀಗೆ ಸಿಕ್ಕಿದ್ದೆಲ್ಲವನ್ನು ಕಳ್ಳರು ದೋಚಿ ಪರಾರಿಯಾಗುತ್ತಿದ್ದರು.

    ಕಳೆದ ಎರಡು ದಿನದ ಹಿಂದೆ ಮಣಿಪಾಲದಲ್ಲಿ ಇಬ್ಬರು ಯುವಕರು ಕಳ್ಳತನ ಮಾಡುವಾಗ ಸ್ಥಳೀಯರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಳ್ಳರ ಕಾಟಕ್ಕೆ ಬೇಸತ್ತಿದ್ದ ಗ್ಯಾರೇಜ್ ಮಾಲೀಕರು ಹಾಗೂ ಸ್ಥಳೀಯರು ಸೇರಿ ಕಳ್ಳರಿಗೆ ಗೂಸಾ ಕೊಟ್ಟಿದ್ದಾರೆ. ನಂತರ ಕಳ್ಳರು ನಾವು ಕಾಲೇಜು ವಿದ್ಯಾರ್ಥಿಗಳು ಖರ್ಚಿಗೆ ಹಣ ಇಲ್ಲ ಅಂತ ಕಳ್ಳತನ ಮಾಡುತ್ತಿದ್ದೆವು ಎಂದು ಹೇಳಿದಾಗ, ಜನರು ಯುವಕರನ್ನು ಪೊಲೀಸರಿಗೆ ಒಪ್ಪಿಸದೆ ಬುದ್ದಿ ಹೇಳಿ ಬಿಟ್ಟು ಕಳುಹಿಸಿದ್ದಾರೆ.

    ಹಲ್ಲೆ ನಡೆಸುತ್ತಿರುವ ವೀಡಿಯೋ ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಈ ಸಾಮೂಹಿಕ ಹಲ್ಲೆ ಈಗ ಪೊಲೀಸರ ನಿದ್ದೆ ಕೆಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv