Tag: ಸಾರ್ವಜನಿಕ ಸ್ಥಳ

  • ಸಾರ್ವಜನಿಕ ಸ್ಥಳದಲ್ಲಿ ಮೈತುಂಬಾ ಬಟ್ಟೆ ಧರಿಸಿಲ್ಲವೆಂದು ಪತ್ನಿಯ ಕೊಲೆಗೈದ ಪತಿ

    ಸಾರ್ವಜನಿಕ ಸ್ಥಳದಲ್ಲಿ ಮೈತುಂಬಾ ಬಟ್ಟೆ ಧರಿಸಿಲ್ಲವೆಂದು ಪತ್ನಿಯ ಕೊಲೆಗೈದ ಪತಿ

    ಲಕ್ನೋ: ಸಾರ್ವಜನಿಕ ಸ್ಥಳದಲ್ಲಿ (Public Place) ಮೈತುಂಬಾ ಬಟ್ಟೆ (Dress) ಧರಿಸಿಲ್ಲ ಎಂದು ಪತ್ನಿಯನ್ನೇ (Wife) ವ್ಯಕ್ತಿಯೊಬ್ಬ ಹತ್ಯೆಗೈದ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಸ್ವಪ್ನಾ ಮೃತ ಮಹಿಳೆ ಹಾಗೂ ಮೋಹಿತ್ ಕುಮಾರ್ ಬಂಧಿತ ವ್ಯಕ್ತಿ. ಬರ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಗಾಜಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಸ್ವಪ್ನಾ ಸಾರ್ವಜನಿಕ ಸ್ಥಳದಲ್ಲಿ ಮೈತುಂಬಾ ಬಟ್ಟೆ ಧರಿಸದೇ ಬಂದಿದ್ದಕ್ಕೆ ಮೋಹಿತ್ ಕುಮಾರ್ ಸಿಟ್ಟಾಗಿದ್ದಾನೆ. ಅಷ್ಟೇ ಅಲ್ಲದೇ ಇದೇ ವಿಚಾರವಾಗಿ ಸ್ವಪ್ನಾ ಹಾಗೂ ಮೋಹಿತ್ ಕುಮಾರ್ ಮಧ್ಯೆ ಜಗಳ ನಡೆದಿದೆ. ಪದೇ ಪದೇ ಎಚ್ಚರಿಕೆ ನೀಡಿದರೂ ಪತ್ನಿ ಕಿವಿಗೊಡುತ್ತಿಲ್ಲ ಎಂದು ಕೋಪಿಸಿಕೊಂಡಿದ್ದಾನೆ. ಇದರಿಂದಾಗಿ ಆಕ್ರೋಶಗೊಂಡ ಮೋಹಿತ್ ಕುಮಾರ್, ಸ್ವಪ್ನಾಳ ಕುತ್ತಿಗೆಯ ಮೇಲೆ ಚಾಕುವಿನಿಂದ ಸೀಳಿ ಹತ್ಯೆ ಮಾಡಿದ್ದಾನೆ.

    ಘಟನೆ ಬಗ್ಗೆ ನೆರೆಹೊರೆಯವರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಸ್ವಪ್ನಾಳ ಮೃತದೇಹದ ಪಕ್ಕದಲ್ಲಿ ಮೋಹಿತ್ ಕುಮಾರ್ ಕುಳಿತಿರುವುದು ಕಂಡು ಬಂದಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಗವಾನ್ ಶ್ರೀಕೃಷ್ಣನನ್ನೇ ವರಿಸಿದ ಎಲ್‍ಎಲ್‍ಬಿ ಪದವೀಧರೆ!

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಆರೋಪಿ ಮೋಹಿತ್ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸರ್ಕಲ್ ಆಫಿಸರ್ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ದಶಪಥ ರಸ್ತೆ ಸರಿಯಿಲ್ಲ, ನಾನು ಬರೋವಾಗ ಶೌಚಾಲಯಕ್ಕೆ ನಿಲ್ಲಿಸಲೂ ಅವಕಾಶ ಇರ್ಲಿಲ್ಲ – ಡಿಕೆಶಿ

  • ಪಬ್ಲಿಕ್ ಪ್ಲೇಸ್‍ನಲ್ಲಿ ಸ್ನಾನ ಮಾಡುವಂತೆ ಪತ್ನಿಗೆ ಕಿರುಕುಳ – ಪತಿ ವಿರುದ್ಧ ಕೇಸ್

    ಪಬ್ಲಿಕ್ ಪ್ಲೇಸ್‍ನಲ್ಲಿ ಸ್ನಾನ ಮಾಡುವಂತೆ ಪತ್ನಿಗೆ ಕಿರುಕುಳ – ಪತಿ ವಿರುದ್ಧ ಕೇಸ್

    ಮುಂಬೈ: ಸಾರ್ವಜನಿಕವಾಗಿ ಸ್ನಾನ ಮಾಡುವಂತೆ ಪತ್ನಿಗೆ ಕಿರುಕುಳ ನೀಡಿದ್ದ ಪತಿ ವಿರುದ್ಧ ಪುಣೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

    ಪತ್ನಿ ಗರ್ಭಧರಿಸಬೇಕಾದರೆ ಸಾರ್ವಜನಿಕವಾಗಿ ಸ್ನಾನ ಮಾಡಬೇಕೆಂದು ಮಾಂತ್ರಿಕನೋರ್ವ ಸಲಹೆ ನೀಡಿದ್ದರಿಂದ ವ್ಯಕ್ತಿಯೊರ್ವ ತನ್ನ ಪತ್ನಿಗೆ ಸಾರ್ವಜನಿಕವಾಗಿ ಎಲ್ಲರ ಮುಂದೆ ಸ್ನಾನ ಮಾಡುವಂತೆ ಕಿರುಕುಳ ನೀಡಿದ ಹಿನ್ನೆಲೆ ಆತ ಮತ್ತು ಆತನ ಪೋಷಕರ ವಿರುದ್ಧ  ಪ್ರಕರಣ ದಾಖಲಾಗಿದೆ.

    ಮಾಂತ್ರಿಕ ನೀಡಿದ ಸಲಹೆಯ ಮೇರೆಗೆ ಮಹಿಳೆಯನ್ನು ರಾಯಗಡ ಜಿಲ್ಲೆಯ ಜಲಪಾತಕ್ಕೆ ಕರೆದೊಯ್ದು ವ್ಯಕ್ತಿ ಎಲ್ಲರ ಮುಂದೆ ಸ್ನಾನ ಮಾಡುವಂತೆ ಒತ್ತಾಯಿಸಿದ್ದಾನೆ. ಇದನ್ನೂ ಓದಿ: ಮಡಿಕೇರಿಯಲ್ಲಿ ನಡೆದ ಮೊಟ್ಟೆ ಎಸೆತ ಪ್ರಕರಣ ನನಗೆ ಗೊತ್ತಿಲ್ಲ: ಅಪ್ಪಚ್ಚು ರಂಜನ್

    ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 498 (ವಿವಾಹಿತ ಸ್ತ್ರೀಯನ್ನು ಆಪರಾಧಿಕ ಉದ್ದೇಶದಿಂದ ಪುಸಲಾಯಿಸುವುದು ಅಥವಾ ಕರೆದುಕೊಂಡುಹೋಗುವುದು) ಮತ್ತು ಮಾನವಬಲಿ, ಅಮಾನವೀಯ, ದುಷ್ಟ, ಅಘೋರಿ ಆಚರಣೆಗಳು ಸೇರಿದಂತೆ ಮಹಾರಾಷ್ಟ್ರದ 2013ರ ಬ್ಲ್ಯಾಕ್ ಮ್ಯಾಜಿಕ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಭಾರತಿ ವಿದ್ಯಾಪೀಠದ ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ತನಿಖೆ ನಡೆಸುವ ವೇಳೆ ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಮಾಂತ್ರಿಕನ ಸಲಹೆಯ ಮೇರೆಗೆ ಮಹಿಳೆಯನ್ನು ರಾಯಗಡ ಜಿಲ್ಲೆಯ ಜಲಪಾತಕ್ಕೆ ಕರೆದೊಯ್ದು ನಂತರ ಎಲ್ಲರ ಮುಂದೆ ಸ್ನಾನ ಮಾಡುವಂತೆ ಹಿಂಸೆ ನೀಡಿದ್ದಾನೆ ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಕೊಡಗಿನಲ್ಲಿ ನಾಳೆಯಿಂದ ಶನಿವಾರದವರೆಗೆ ನಿಷೇಧಾಜ್ಞೆ- ಮದ್ಯ ಮಾರಾಟ ನಿಷೇಧ

    Live Tv
    [brid partner=56869869 player=32851 video=960834 autoplay=true]

  • ಹೈದರಾಬಾದ್‌ನಲ್ಲಿ ಇನ್ಮುಂದೆ ಶ್ವಾನಗಳ ನೋಂದಾಯಿಸದವರಿಗೆ 50 ಸಾವಿರ ರೂ. ದಂಡ!

    ಹೈದರಾಬಾದ್‌ನಲ್ಲಿ ಇನ್ಮುಂದೆ ಶ್ವಾನಗಳ ನೋಂದಾಯಿಸದವರಿಗೆ 50 ಸಾವಿರ ರೂ. ದಂಡ!

    ಹೈದರಾಬಾದ್: ಸಾಕುಪ್ರಾಣಿಗಳನ್ನು ನೋಂದಾಯಿಸದವರಿಗೆ 50 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಆದೇಶವನ್ನು ಹೊರಡಿಸಿದೆ.

    ಈ ಕಾನೂನಿನ ಪ್ರಕಾರ ಕಡ್ಡಾಯ ನೋಂದಣಿ ಸಾಕು ನಾಯಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇತರೆ ಸಾಕು ಪ್ರಾಣಿಗಳಿಗೆ ವಿನಾಯಿತಿಯನ್ನು ನೀಡಿದೆ. ಶ್ವಾನಪ್ರೇಮಿಗಳು ನೋಂದಣಿಯಾಗದ ನಾಯಿಗಳನ್ನು ಸಾರ್ವಜನಿಕ ಸ್ಥಳಗಳಿಗೆ ಕರೆದೊಯ್ದರೆ ಶೀಘ್ರದಲ್ಲೇ ದಂಡವನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ನೋಂದಾಯಿಸದ ಸಾಕುಪ್ರಾಣಿಗಳನ್ನು ಉದ್ಯಾನವನಗಳು, ಬೀದಿಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಿಗೆ ಕರೆದೊಯ್ಯುವುದು, ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ಸಾಕುನಾಯಿಗಳ ನೋಂದಣಿ ಕಡ್ಡಾಯವಾಗಿದೆ. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಮಗಳು – ತಾಳಿ ಕಿತ್ತು, ಜುಟ್ಟು ಹಿಡಿದು ಧರ, ಧರನೇ ಎಳೆದಾಡಿದ ತಂದೆ

    ಒಂದು ವೇಳೆ ನೋಂದಾಯಿಸದ ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶಕ್ಕೆ ಕರೆತಂದರೆ ಅವುಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ 1,000 ರಿಂದ 50,000 ರೂ.ವರೆಗೂ ದಂಡವನ್ನು ವಿಧಿಸಲಾಗುತ್ತದೆ. ದಂಡವನ್ನು ಪಾವತಿಸಿದ ನಂತರವೇ ಮಾಲೀಕರು ತಮ್ಮ ಸಾಕುಪ್ರಾಣಿಗಳನ್ನು ಮರಳಿ ಪಡೆಯಬಹುದು ಎಂದು ಹೇಳಿದರು.

    ಈ ನಿಯಮಗಳ ಅಡಿಯಲ್ಲಿ, ಶ್ವಾನ ಮಾಲೀಕರು ಪರವಾನಗಿ ಪಡೆಯಬೇಕು. ಜೊತೆಗೆ ಸಾಕು ನಾಯಿಗಳಿಗೆ ಪ್ರತಿ ವರ್ಷ ರೇಬಿಸ್ ಲಸಿಕೆ ಹಾಕಿಸುವುದು ಕಡ್ಡಾಯವಾಗಿದೆ. ಅಲ್ಲದೆ ಸಾಕುಪ್ರಾಣಿಗಳಿಗೆ ಮೈಕ್ರೋಚಿಪ್ ಅಳವಡಿಸಬೇಕು. ಮೈಕ್ರೋಚಿಪ್ ಮೂಲಕ ಅವುಗಳು ನಗರದ ಯಾವುದೇ ಮೂಲದಲ್ಲಿದ್ದರೂ ಸುಲಭವಾಗಿ ಮಾಲೀಕರು ಟ್ರ್ಯಾಕ್ ಮಾಡಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಮಗಳು – ತಾಳಿ ಕಿತ್ತು, ಜುಟ್ಟು ಹಿಡಿದು ಧರ, ಧರನೇ ಎಳೆದಾಡಿದ ತಂದೆ

    ಅಧಿಕೃತ ಅಂಕಿ ಅಂಶಗಳ ಪ್ರಕಾರ, ನಗರದಲ್ಲಿ ಪ್ರಸ್ತುತ 50,000 ಸಾಕುನಾಯಿಗಳಿದ್ದು, ಅವುಗಳಲ್ಲಿ 465 ಸಾಕು ನಾಯಿಗಳು ಎಂದು ನೋಂದಾಯಿಸಲಾಗಿದೆ.

  • ಸಾರ್ವಜನಿಕ, ಕೆಲಸದ ಸ್ಥಳಗಳಲ್ಲೂ ಕಠಿಣ ರೂಲ್ಸ್

    ಸಾರ್ವಜನಿಕ, ಕೆಲಸದ ಸ್ಥಳಗಳಲ್ಲೂ ಕಠಿಣ ರೂಲ್ಸ್

    ಬೆಂಗಳೂರು: ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದರೆ ಲಾಕ್‍ಡೌನ್ ಮೂರರಲ್ಲಿ ಹೆಚ್ಚುವರಿ ನಿರ್ಬಂಧಗಳಿದ್ದು, ಈ ಬಾರಿ ಸಾರ್ವಜನಿಕ ಪ್ರದೇಶಗಳಲ್ಲೂ ರೂಲ್ಸ್ ಜಾರಿ ಮಾಡಲಾಗಿದೆ.

    ಕೊರೊನಾದ ಮೂರನೇ ಲಾಕ್‍ಡೌನ್‍ನಲ್ಲಿ ಸಾರ್ವಜನಿಕ ಸ್ಥಳಗಳಲ್ಲೂ ಕಠಿಣ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಬೇಕಾಬಿಟ್ಟಿ ಓಡಾಡುವಂತಿಲ್ಲ. ಓಡಾಡಿದರೆ ಮಾಸ್ಕ್ ಧರಿಸಿರಲೇಬೇಕು, ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡಿರಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

    ಸಾರ್ವಜನಿಕ ಸ್ಥಳಗಳಲ್ಲಿ ರೂಲ್ಸ್:
    * ಮಾಸ್ಕ್ ಧರಿಸೋದು ಕಡ್ಡಾಯ
    * ಸಾಮಾಜಿಕ ಅಂತರ ಪಾಲನೆ (ಸಾರ್ವಜನಿಕ ಸ್ಥಳ, ಸಮೂಹ ಸಾರಿಗೆಗೆ ಅನ್ವಯ)
    * 5 ಅಥವಾ 5ಕ್ಕಿಂತ ಹೆಚ್ಚಿನ ಜನ ಗುಂಪು ಸೇರುವಂತಿಲ್ಲ.
    * ಮದುವೆ ಕಾರ್ಯಕ್ರಮಕ್ಕೆ 50 ಜನರಿಗೆ ಅವಕಾಶ (ಸಾಮಾಜಿಕ ಅಂತರ ಕಡ್ಡಾಯ)
    * ಅಂತ್ಯಸಂಸ್ಕಾರ, ತಿಥಿಗಳಲ್ಲಿ 20 ಜನರಿಗೆ ಅವಕಾಶ (ಸಾಮಾಜಿಕ ಅಂತರ ಕಡ್ಡಾಯ)
    * ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ, ಪಾನ್-ಗುಟ್ಕಾ, ತಂಬಾಕು ನಿಷೇಧ
    * ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ

    ಇನ್ನೂ ಕೆಲಸದ ಸ್ಥಳಗಳಿಗೂ ಕೇಂದ್ರ ಸರ್ಕಾರ ಕೆಲವು ನಿಯಮಗಳನ್ನು  ಪ್ರಕಟಿಸಿದೆ.

    ವರ್ಕ್ ಪ್ಲೇಸ್‍ಗಳಲ್ಲಿ ರೂಲ್ಸ್
    * ಗುಣಮಟ್ಟದ ಪರಿಶುದ್ಧತೆಗೆ ಪ್ರಾಶಸ್ತ್ಯ
    * ಮಾಸ್ಕ್ ಧರಿಸೋದು ಕಡ್ಡಾಯ
    * ಕೆಲಸದ ಸ್ಥಳ, ಸಾರಿಗೆಯಲ್ಲಿ ಸಾಮಾಜಿಕ ಅಂತರ ಕಡ್ಡಾಯ
    * ಶಿಫ್ಟ್, ಊಟದ ವಿರಾಮದಲ್ಲಿ ಸಾಮಾಜಿಕ ಅಂತರ
    * ಥರ್ಮಲ್ ಸ್ಕ್ರೀನಿಂಗ್, ಹ್ಯಾಂಡ್ ವಾಶ್, ಸ್ಯಾನಿಟೈಸರ್ ವ್ಯವಸ್ಥೆ (ಎಂಟ್ರಿ-ಎಕ್ಸಿಟ್, ಕಾಮನ್ ಪ್ಲೇಸ್‍ಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು)
    * ಕೆಲಸದ ಸ್ಥಳ, ಸಾಮಾನ್ಯ ಪ್ರದೇಶಗಳಲ್ಲಿ ಪದೇ ಪದೇ ಸ್ವಚ್ಛತೆ
    * ಎಲ್ಲಾ ಸಿಬ್ಬಂದಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ
    * ಅತಿಹೆಚ್ಚು ಜನ ಸೇರುವಂತೆ ಮೀಟಿಂಗ್ ಬೇಡ
    * ಕೊರೊನಾ ಗುಣಲಕ್ಷಣ ಕಂಡುಬಂದಲ್ಲಿ ತಡಮಾಡದೆ ಹತ್ತಿರದ ಆಸ್ಪತ್ರೆ, ಕ್ವಾರಂಟೈನ್ ಸೆಂಟರ್‌ಗೆ ಶಿಫ್ಟ್ ಮಾಡಬೇಕು.

  • ಯುವ ಬ್ರಿಗೇಡ್ ಬಳ್ಳಾರಿಯಿಂದ ಸ್ವಚ್ಛತಾ ಕಾರ್ಯ – ಜನರ ಮೆಚ್ಚುಗೆಗೆ ಪಾತ್ರವಾದ ಯುವಕರ ಕೆಲಸ

    ಯುವ ಬ್ರಿಗೇಡ್ ಬಳ್ಳಾರಿಯಿಂದ ಸ್ವಚ್ಛತಾ ಕಾರ್ಯ – ಜನರ ಮೆಚ್ಚುಗೆಗೆ ಪಾತ್ರವಾದ ಯುವಕರ ಕೆಲಸ

    ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಭಿತ್ತಿ ಚಿತ್ರಗಳು ಜಾಹೀರಾತು ಫಲಕಗಳದ್ದೇ ಕಾರುಬಾರು. ಈ ಭಿತ್ತಿ ಚಿತ್ರಗಳನ್ನು ಎಲ್ಲಂದರಲ್ಲಿ ಅಂಟಿಸಿ ನಗರದ ಸೌಂದರ್ಯ ಹಾಳಾಗುತಿತ್ತು.

    ಹೀಗಾಗಿ ಬಳ್ಳಾರಿಯ ಯುವ ಬ್ರಿಗೇಡ್ ಕಾರ್ಯಕರ್ತರ ವತಿಯಿಂದ ಸ್ವಚ್ಛತಾ ಕಾರ್ಯ ಹಮ್ಮಿಕೊಂಡು, ಬಳ್ಳಾರಿ ನಗರದ ತಾಲೂಕು ಕಚೇರಿ ಬಸ್ ನಿಲ್ದಾಣದ ಹೀಗೆ ಅನೇಕ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛ ಮಾಡಿದ್ದಾರೆ. ಬ್ರಿಗೇಡ್ ಯುವಕರ ತಂಡ ಸ್ವಂತ ಖರ್ಚಿನಲ್ಲಿ ಈ ಕಲಸ ಮಾಡಿದ್ದು, ಸಾರ್ವಜನಿಕ ಬಸ್ ನಿಲ್ದಾಣಕ್ಕೆ ಪೈಂಟ್ ಮಾಡಿದ್ದಾರೆ.

    ಪ್ರತಿ ರವಿವಾರ ಈ ಯುವಕರ ಪಡೆ ಒಂದೊಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ಮಾಡುತ್ತಿದ್ದಾರೆ. ಯುವ ಬ್ರಿಗೇಡ್ ನಲ್ಲಿ ಬಹುತೇಕವಾಗಿ ವಿದ್ಯಾರ್ಥಿಗಳಿದ್ದು ಭಾನುವಾರದಲ್ಲಿ ಸಿನಿಮಾ ನೋಡಿ ಕಾಲಹರಣ ಮಾಡದೇ ನಗರವನ್ನು ಕ್ಲೀನ್ ಮಾಡುವುದನ್ನು ಹವ್ಯಾಸ ಮಾಡಿಕೊಂಡಿದ್ದಾರೆ. ಯುವಕರು ಈ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಸಾರ್ವಜನಿಕ ಸ್ಥಳದಲ್ಲಿ ಮೂತ್ರ- ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ ಅಧಿಕಾರಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ- ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ ಅಧಿಕಾರಿ

    ಭೋಪಾಲ್: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಇಬ್ಬರು ವ್ಯಕ್ತಿಗಳಿಗೆ ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ಬಸ್ಕಿ ಹೊಡೆಸಿದ್ದಾರೆ.

    ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆಟೋ ಚಾಲಕ ಹಾಗೂ ಪ್ರಯಾಣಿಕನಿಗೆ ಅಧಿಕಾರಿ ಬಸ್ಕಿ ಹೊಡೆಸಿದ್ದಾರೆ. ಸಿಕ್ಕಿಬಿದ್ದ ತಕ್ಷಣ ಅಧಿಕಾರಿ ದಂಡ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಇಬ್ಬರೂ ತಮ್ಮ ಬಳಿ ಹಣವಿಲ್ಲ ಎಂದು ಹೇಳಿದ್ದಾರೆ. ಆಗ ಅಧಿಕಾರಿ ಹಾಗೂ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ.

    ಅಧಿಕಾರಿಯ ಮುಂದೆ ಇಬ್ಬರೂ ಬಸ್ಕಿ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ರವಿ ಎಂದು ಗುರುತಿಸಲಾಗಿದೆ. ಆಟೋ ರೈಲ್ವೇ ನಿಲ್ದಾಣದಿಂದ ಬರುತ್ತಿತ್ತು.

    ಐಎಂಸಿ ಮುಖ್ಯ ನೈರ್ಮಲ್ಯ ಅಧಿಕಾರಿ(ವಲಯ-1) ಶೈಲೇಂದ್ರ ಪಾಲ್ ಅವರ ಪ್ರಕಾರ, ಆಟೋ ಪ್ರಯಾಣಿಕ ರವಿ ಹಾಗೂ ಚಾಲಕ ಇಬ್ಬರೂ ಮಾರಿಮಾತಾ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಇದನ್ನು ಕಂಡು ಅಧಿಕಾರಿ ಇಬ್ಬರನ್ನೂ ಪ್ರಶ್ನಿಸಿದ್ದಾರೆ.

    ಅಧಿಕಾರಿ ಇಬ್ಬರಿಗೆ ತಲಾ 250 ರೂ. ದಂಡ ಪಾವತಿಸುವಂತೆ ಕೇಳಿದ್ದಾರೆ. ಆಟೋ ಚಾಲಕ ತನ್ನ ಬಳಿ ಹಣವಿಲ್ಲ ಎಂದು ಹೇಳಿದ್ದಾನೆ. ಪ್ರಯಾಣಿಕ ರವಿ ತನ್ನ ಬಳಿ ಕೇವಲ 100 ರೂ. ಇರುವುದಾಗಿ ಹೇಳಿದ್ದಾನೆ. ಆಗ ಅಧಿಕಾರಿ 100 ರೂ. ಪಡೆದು, ಇಬ್ಬರೂ ಸಹ ಬಸ್ಕಿ ಹೊಡೆಯುವಂತೆ ಸೂಚಿಸಿದ್ದಾರೆ. ಈ ರೀತಿ ಶಿಕ್ಷೆ ನೀಡಿದರೆ ಇಬ್ಬರೂ ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲ ಎಂದು ಶೈಲೇಂದ್ರ ಪಾಲ್ ಹೇಳಿದ್ದಾರೆ.