Tag: ಸಾಲಬಾಧೆ

  • ಸಾಲಬಾಧೆ ತಾಳದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

    ಸಾಲಬಾಧೆ ತಾಳದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

    ರಾಯಚೂರು: ರೈತನೋರ್ವ (Farmer) ಸಾಲಬಾಧೆ (Indebtedness) ತಾಳದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಉಪ್ಪಲದೊಡ್ಡಿ ಗ್ರಾಮದಲ್ಲಿ ನಡೆದಿದೆ.

    ಮಲ್ಲಪ್ಪ ತೆಗ್ಗಿಹಾಳ (32) ಸಾವನ್ನಪ್ಪಿರುವ ಯುವ ರೈತ. ಬ್ಯಾಂಕ್ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಸಾಲ ತೀರಿಸಲು ಆಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ರಾಹುಲ್‌ ವಿರುದ್ಧ ವಿಡಿಯೋ – ಯೂಟ್ಯೂಬರ್‌ ಬಂಧನಕ್ಕೆ ನೋಯ್ಡಾಗೆ ತೆರಳಿ ಬರಿಗೈಯಲ್ಲಿ ಕರ್ನಾಟಕ ಪೊಲೀಸರು ವಾಪಸ್‌

    ತನ್ನ ಮನೆಯ ಬಳಿ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಹಿನ್ನೆಲೆ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜೈಲುಪಾಲಾದ ಅಮ್ಮನ ಕಂಡು ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಗೌಡ ಮಗಳು

  • ಸಾಲಬಾಧೆ ತಾಳಲಾರದೇ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಸಾಲಬಾಧೆ ತಾಳಲಾರದೇ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ತುಮಕೂರು: ಸಾಲಬಾಧೆ (Indebtedness) ತಾಳಲಾರದೇ ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು (Tumakuru) ತಾಲೂಕಿನ ಪಂಡಿತನಹಳ್ಳಿಯ ರೈಲ್ವೆಗೇಟ್ ಬಳಿ ನಡೆದಿದೆ.

    ಸಿದ್ದಗಂಗಯ್ಯ (62), ಸುನಂದಮ್ಮ ಹಾಗೂ ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕಳೆದ ಎರಡು ವರ್ಷಗಳ ಹಿಂದೆ ಕೆಇಬಿಯಲ್ಲಿ (KEB) ನಿವೃತ್ತಿ ಹೊಂದಿದ್ದು, ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಅಲ್ಲದೇ ಬೆಂಗಳೂರಿನ ಮಲ್ಲೇಶ್ವರಂ (Malleshwaram) ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ (KC General Hospital) ಬಳಿ ಟೀ ಶಾಪ್ ಇಟ್ಟುಕೊಂಡು ಸಾಲ ತೀರಿಸಲು ದುಡಿಯುತ್ತಿದ್ದರು. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆ

     ಆದರೂ ಸಾಲ ಮಿತಿ ಮೀರಿದ್ದರಿಂದ ಮನನೊಂದು ಸೋಮವಾರ ಬೆಳಗ್ಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಪರಿಣಾಮ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ. ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹಗಳು ರವಾನೆಯಾಗಿದ್ದು, ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಖ್ಯಾತ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೇಣು ಬಿಗಿದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ನೇಣು ಬಿಗಿದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಹಾವೇರಿ: ನೇಣು ಬಿಗಿದು ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆಯ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಒಂದೇ ಕುಟುಂಬದವರಾದ ತಂದೆ ಹನುಮಂತಗೌಡ ಪಾಟೀಲ (54), ತಾಯಿ ಲಲಿತಾ ಪಾಟೀಲ (50), ಮತ್ತು ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ದುಬೈನಲ್ಲಿ ಭೀಕರ ರಸ್ತೆ ಅಪಘಾತ – ರಾಯಚೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವು

    ಹನುಮಂತಗೌಡ ಪಾಟೀಲ ದಂಪತಿ ಸುಮಾರು 25 ಲಕ್ಷ ರುಪಾಯಿ ಸಾಲ ಮಾಡಿ ಮಗಳ ಮದುವೆಯನ್ನು ಮಾಡಿದ್ದರು. ಈ ಸಾಲಬಾಧೆಯನ್ನು ತಾಳಲಾರದೆ ದಂಪತಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ತನ್ನ ಕಾರಣಕ್ಕೆ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ತಿಳಿದು ನೊಂದ ಮಗಳು ತಾನೂ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾಳೆ.

    ಘಟನೆ ನಡೆದ ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಲಮಿಶ್ರಿತ ನೀರು ಕುಡಿದು ಮೂವರು ದುರ್ಮರಣ- ನೀರಿನ ಪರೀಕ್ಷೆಯಲ್ಲಿ ಬಹಿರಂಗವಾಯ್ತು ಸತ್ಯ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾಲಬಾಧೆ ತಾಳಲಾರದೆ ಬೀದರ್ ರೈತ ಆತ್ಮಹತ್ಯೆ

    ಸಾಲಬಾಧೆ ತಾಳಲಾರದೆ ಬೀದರ್ ರೈತ ಆತ್ಮಹತ್ಯೆ

    ಬೀದರ್: ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಔರಾದ್ ತಾಲೂಕಿನ ಪಾಶಾಪೂರ್ ಗ್ರಾಮದಲ್ಲಿ ನಡೆದಿದೆ.

    ರಾಜಪ್ಪ ಬಿರಾದರ್ (42) ಆತ್ಮಹತ್ಯೆಗೆ ಶರಣಾದ ರೈತ. ವಿವಿಧ ಬ್ಯಾಂಕುಗಳಲ್ಲಿ ಆರು ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅಲ್ಲದೆ, ಈ ಬಾರಿಯಾದರೂ ಮುಂಗಾರು ಮಳೆ ಉತ್ತಮವಾಗಿ ಬೆಳೆ ಚೆನ್ನಾಗಿ ಬರುತ್ತದೆ ಎಂಬ ನಂಬಿಕೆಯಿಂದ ಮತ್ತೆ ಬ್ಯಾಂಕ್‍ನಲ್ಲಿ ಸಾಲ ಮಾಡಿ ಬಿತ್ತನೆ ಮಾಡಿದ್ದರು. ಆದರೆ, ಮುಂಗಾರು ಮಳೆ ಕೈಕೊಟ್ಟಿದೆ. ಇದೇ ಬೇಸರದಿಂದ ರಾಜಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತನಿಗೆ ಮುಂಗಾರು ಬಳೆ ಸಮರ್ಪಕವಾಗಿ ಬಾರದೇ ಬರದ ಛಾಯೆ ಆವರಿಸಿದೆ. ಇನ್ನೊಂದೆಡೆ ಸರ್ಕಾರದ ಸಾಲ ಮನ್ನಾ ಯೋಜನೆಯು ಸಮರ್ಪಕವಾಗಿ ಜಾರಿಯಾಗಿಲ್ಲ. ಇದೆಲ್ಲದರಿಂದ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದು ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇತ್ತೀಚೆಗಷ್ಟೇ ಸಾಲಬಾಧೆ ತಾಳಲಾರದೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಈ ಘನೆ ನಡೆದಿದೆ. ಅಲ್ಲದೆ, ಮಂಡ್ಯದ ರೈತನೋರ್ವ ರೈತರಿಗೆ ಎದುರಾಗಿರುವ ನೀರಿನ ಸಮಸ್ಯೆಯನ್ನು ಮುಖ್ಯಮಂತ್ರಿಗೆ ತಿಳಿಸಲು ಆತ್ಮಹತ್ಯೆ ಮಾಡಿಕೊಂಡಿದ್ದರು. ನಮ್ಮ ಜಿಲ್ಲೆಯಲ್ಲಿ 150 ಅಡಿ ಕೊಳವೆ ಬಾವಿ ಕೊರೆದರೆ ನೀರು ಉಕ್ಕುತ್ತಿತ್ತು. ಇದೀಗ 1,500 ಅಡಿ ಕೊಳವೆ ಬಾವಿ ಕೊರೆದರೂ ನೀರು ಬರುತ್ತಿಲ್ಲ. ಇದಕ್ಕೆ ಪರಿಹಾರ ಕಲ್ಪಿಸಬೇಕಿದೆ ಹೀಗಾಗಿ ಮುಖ್ಯಮಂತ್ರಿಗಳು ನನ್ನ ಅಂತ್ಯ ಸಂಸ್ಕಾರಕ್ಕೆ ಬರಬೇಕು ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದರು.

  • ನಮ್ಮ ಶವಗಳನ್ನು ಕಾರ್ಪೊರೇಶನ್ ನಲ್ಲಿ ಬಿಸಾಕಿ- ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

    ನಮ್ಮ ಶವಗಳನ್ನು ಕಾರ್ಪೊರೇಶನ್ ನಲ್ಲಿ ಬಿಸಾಕಿ- ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

    ಮಂಡ್ಯ: ನಮ್ಮ ಶವಗಳನ್ನು ಕಾರ್ಪೊರೇಶನ್ ನಲ್ಲಿ ಬಿಸಾಕಿ ಅಂತ ಹೇಳಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಸುಂಕಾತಣ್ಣೂರು ಗ್ರಾಮದಲ್ಲಿ ನಡೆದಿದೆ.

    ನಂದೀಶ್(35), ಕೋಮಲ(28), ಚಂದನ(10), ಮೀನ(13) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾವೂ ವಿಷ ಸೇವಿಸಿ ದಂಪತಿ ಸಾವಿಗೆ ಶರಣಾಗಿದ್ದಾರೆ. ಈ ಕುಟುಂಬಕ್ಕೆ ಎರಡು ಎಕರೆ ಜಮೀನು ಹೊಂದಿದ್ದು, ಇದರಲ್ಲಿ ಕಬ್ಬು ಬೆಳೆಯುತ್ತಿದ್ದರು. ಈ ಬೆಳೆ ಬೆಳೆಯಲು ದಂಪತಿ ಸುಮಾರು 10 ಲಕ್ಷ ಬ್ಯಾಂಕ್ ಮತ್ತು ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

    ಸಿಎಂ ಭೇಟಿ ಮಾಡಿದ್ದ ದಂಪತಿ:
    ಸದ್ಯ ಕುಟುಂಬ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಅಂತ ಹೇಳಲಾಗುತ್ತಿದೆ. ಯಾಕಂದ್ರೆ ಮೃತ ದಂಪತಿ ಈ ಹಿಂದೆ 2 ಬಾರಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದು, ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಆದ್ರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮನನೊಂದು ದಂಪತಿ ಈ ಕೃತ್ಯ ಎಸಗಿದ್ದಾರೆ. ಆತ್ಮಹತ್ಯೆಗೂ ಮುನ್ನ ದಂಪತಿ ಡೆತ್ ನೋಟ್ ಬರೆದಿಟ್ಟು ಮನವಿ ಮಾಡಿಕೊಂಡಿದ್ದಾರೆ.

    ಡೆತ್ ನೋಟ್ ನಲ್ಲೇನಿದೆ?:
    ಈ ಹಿಂದೆ ನಾವು ಕುಮಾರಸ್ವಾಮಿಯವರನ್ನು ಭೇಟಿಯಾಗಿ ನನ್ನ ಸಮಸ್ಯೆಯನ್ನು ಹೇಳಿಕೊಂಡಿದ್ದೇನೆ. ಆದ್ರೆ ನಮ್ಮ ಸಮಸ್ಯೆ ಪರಿಹಾರವಾಗಿಲ್ಲ. ಇದೀಗ ನಾವು ಹೇಡಿತನದಿಂದ ಸಾಯ್ತಿಲ್ಲ. ಆದ್ರೆ ಬದುಕೋದಕ್ಕೆ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ನಾವು ಸಾಯ್ತಾ ಇದ್ದೀವಿ. ಕಡೆಯದೊಂದು ನಮ್ಮ ಮನವಿ ಇದೆ. ನಮ್ಮ ಮೃತದೇಹಗಳನ್ನು ಯಾರೂ ಕೂಡ ಮುಟ್ಟಬಾರದು. ನಮ್ಮ ಶವಗಳನ್ನು ಕಾರ್ಪೊರೇಷನ್ ಗೆ ಬಿಸಾಕಿ ಅಂತ ದಂಪತಿ ಡೆತ್ ನೋಟ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಸಕ್ಕರೆ ಕಾರ್ಖಾನೆ ಎದುರೇ ರೈತ ನೇಣಿಗೆ ಶರಣು!

    ಸಕ್ಕರೆ ಕಾರ್ಖಾನೆ ಎದುರೇ ರೈತ ನೇಣಿಗೆ ಶರಣು!

    ಬಾಗಲಕೋಟೆ: ಕಬ್ಬಿನ ಬಾಕಿ ಹಣ ನೀಡದಕ್ಕೆ ಬೇಸತ್ತು ಸಾಲಬಾಧೆ ತಾಳಲಾರದೇ ಮನನೊಂದು ರೈತನೋರ್ವ ಸಕ್ಕರೆ ಕಾರ್ಖಾನೆ ಎದುರಿಗೆ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಗ್ರಾಮದಲ್ಲಿ ನಡೆದಿದೆ.

    ಬೆಳಗಾವಿ ಜಿಲ್ಲೆಯ ಶೇಗುಣಸಿ ಗ್ರಾಮದ 42 ವರ್ಷದ ಹನುಮಂತ ಕಾಡಪ್ಪನವರ್ ಎಂಬವರೇ ಆತ್ಮಹತ್ಯೆಗೆ ಶರಣಾದ ರೈತ. ತೇರದಾಳ ಸಮೀಪದ ಸಾವರಿನ್ ಸಕ್ಕರೆ ಕಾರ್ಖಾನೆಗೆ 200 ಟನ್ ಕಬ್ಬು ಕಳಿಸಿ 5 ತಿಂಗಳಾಗಿತ್ತು. ಆದ್ರೆ ಈವರೆಗೂ ಕಾರ್ಖಾನೆ ಬಿಲ್ ಪಾವತಿಯಾಗಿರಲಿಲ್ಲ, ಬಿಲ್ ಗಾಗಿ ಹಲವು ಬಾರಿ ರೈತ ಹನುಮಂತ ಸಾಕಷ್ಟು ಸಕ್ಕರೆ ಕಾರ್ಖಾನೆಗೆ ಅಲೆದಾಡಿದ್ರು. ಆದ್ರೆ ಯಾವುದೇ ಪ್ರಯೋಜನೆ ಸಹ ಆಗಿರಲಿಲ್ಲ.

    ಈ ನಡುವೆ ಹನುಮಂತ್ ಬ್ಯಾಂಕ್ ಗಳಲ್ಲಿ ಸಾಲ ಸಹ ಮಾಡಿಕೊಂಡಿದ್ದರು. ಹೀಗಾಗಿ ಒಂದೆಡೆ ಸಾಲಬಾಧೆ, ಮತ್ತೊಂದೆಡೆ ಕಬ್ಬಿನ ಬಿಲ್ ಬಾರದೇ ಇದ್ದದ್ರಿಂದ ಹತಾಶೆಗೊಂಡ ಹನುಮಂತ ಕಾಡಪ್ಪನವರ, ರಾತ್ರಿ ಕಾರ್ಖಾನೆ ಮುಂದಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಾವರಿನ್ ಶುಗರ್ ಕಂಪನಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶಿವಕುಮಾರ ಮಲಘಾಣ ಅವ್ರಿಗೆ ಸೇರಿದ್ದಾಗಿದೆ.

    ಸ್ಥಳಕ್ಕೆ ತೇರದಾಳ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ನಟ, ಸಿಸಿಎಲ್ ಆಟಗಾರ ಧ್ರುವ ಸಾವಿಗೆ ಟ್ವಿಸ್ಟ್- ಆತ್ಮಹತ್ಯೆ ಎಂದು ಪೊಲೀಸರಿಗೆ ತಂದೆಯಿಂದ ದೂರು

    ನಟ, ಸಿಸಿಎಲ್ ಆಟಗಾರ ಧ್ರುವ ಸಾವಿಗೆ ಟ್ವಿಸ್ಟ್- ಆತ್ಮಹತ್ಯೆ ಎಂದು ಪೊಲೀಸರಿಗೆ ತಂದೆಯಿಂದ ದೂರು

    ಬೆಂಗಳೂರು: ನಟ, ಸಿಸಿಎಲ್ ಆಟಗಾರ ಧೃವ ಶರ್ಮಾ ಸಾವು ಆತ್ಮಹತ್ಯೆ ಎಂದು ತಿಳಿದುಬಂದಿದೆ.

    ಸಾಲಬಾಧೆಯಿಂದ ಧ್ರುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಂದೆ ಸುರೇಶ್ ಶರ್ಮಾರಿಂದಲೇ ರಾಜನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಅವರು ಶನಿವಾರ ರಾತ್ರಿ 9 ಗಂಟೆಗೆ ವಿಷ ಕುಡಿದು ಬಂದು ಮನೆಯಲ್ಲಿ ಪ್ರಜ್ಞೆ ಇಲ್ಲದೆ ಬಿದ್ದಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಮೂರ್ಛೆ ರೋಗ ಅಂತಾ ದಾಖಲಿಸಲಾಗಿತ್ತು. ಆದ್ರೆ ಮಧ್ಯರಾತ್ರಿ 01:30ಕ್ಕೆ ಧ್ರುವ ಕೊನೆಯುಸಿರೆಳೆದಿದ್ದಾರೆ.

    ಬೆಳಿಗ್ಗೆ ಮೂರು ಗಂಟೆಗೆ ನಟ ಸುದೀಪ್, ಪ್ರದೀಪ್, ನಂದ ಕಿಶೊರ್ ಆಸ್ಪತ್ರೆಗೆ ಭೇಟಿ ನೀಡಿದ್ರು. ಧ್ರುವ ಅವರು ಪತ್ನಿ, 5 ವರ್ಷದ ಮಗಳು ಹಾಗೂ 2 ವರ್ಷದ ಮಗನನ್ನ ಅಗಲಿದ್ದಾರೆ.

    ಮರಣೋತ್ತರ ಪರೀಕ್ಷೆ ನಂತರ ಪಾರ್ಥೀವ ಶರೀರ ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ ಬಳಿ ಇರೋ ಪ್ರಿಸ್ಟೀಜ್ ವಿಲ್ಲಾಗೆ ರವಾನೆ ಆಗಲಿದೆ. ಇಂದು ಬೆಳಗ್ಗೆ 7:30ಕ್ಕೆ ಮರಣೋತ್ತರ ಪರೀಕ್ಷೆಗಾಗಿ ಧ್ರುವ ಶರ್ಮಾ ಪಾರ್ಥಿವ ಶರೀರ ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆಯಾಗಲಿದೆ.

    ಧ್ರುವ ಅವರಿಗೆ ವಿದ್ಯಾರಣ್ಯಪುರದಲ್ಲಿ ನಾಯಿಗೆ ಆಹಾರ ತಯಾರು ಮಾಡೋ ಫ್ಯಾಕ್ಟರಿ ಇದ್ದು, ಅದು ನಷ್ಟದಲ್ಲಿ ನಡೆಯುತ್ತಾ ಇತ್ತು ಎನ್ನಲಾಗಿದೆ.

    ಧ್ರುವ ಒಪ್ಪಿಕೊಂಡ ಸಿನಿಮಾವೊಂದರ ಶೂಟಿಂಗ್ ಕಂಪ್ಲೀಟ್ ಮಾಡಿದ್ದರು. ಸಿನಿಮಾದಲ್ಲಿ ಧ್ರುವ ಮೂಗನ ಪಾತ್ರದಲ್ಲಿ ಅಭಿನಯಿಸಿದ್ದು, ಮುಂದಿನ ತಿಂಗಳು ಆಡಿಯೋ ಲಾಂಚ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿತ್ತು.

    ಧ್ರುವ ಅವರಿಗೆ 35 ವರ್ಷ ವಯಸ್ಸಾಗಿತ್ತು. ಇವರು ಸಿಸಿಎಲ್‍ನಲ್ಲಿ ಕರ್ನಾಟಕ ಬುಲ್ಡೋಜರ್ಸ್‍ನಲ್ಲಿ ಉಪ ನಾಯಕರಾಗಿದ್ದರು. ಸ್ನೇಹಾಂಜಲಿ, ನೀನಂದ್ರೆ ನನಗಿಷ್ಟ, ತಿಪ್ಪಾಜಿ ಸರ್ಕಲ್ ಸಿನಿಮಾದಲ್ಲಿ ನಟಿಸಿದ್ದರು.

    ಉದ್ಯಮಿ, ನಟರೂ ಆಗಿರುವ ಸತೀಶ್ ಶರ್ಮಾ ಅವರ ಪುತ್ರರಾಗಿರುವ ಧ್ರುವ ಶರ್ಮಾ 2005ರಲ್ಲಿ ವಿಶ್ವ ಕಿವುಡರ ಕ್ರಿಕೆಟ್‍ನಲ್ಲಿ ಭಾರತ ತಂಡದಲ್ಲಿ ಆಡಿದ್ದರು. ವಾಕ್-ಶ್ರವಣ ದೋಷದಿಂದಾಗಿ ಬಾಲ್ಯದಿಂದಲೇ ಸಾಕಷ್ಟು ಅವಮಾನ ಎದುರಿಸಿದ್ದ ಧ್ರುವ ಶರ್ಮಾ ಆ ಎಲ್ಲ ನಿಂದನೆಗಳನ್ನು ಮೆಟ್ಟಿ ನಿಂತಿದ್ದರು.

     ಕಾಲೇಜು ದಿನಗಳಲ್ಲಿ ಪ್ರಾಧ್ಯಾಪಕರ ಪಾಠ ಕೇಳ್ತಿಲ್ಲ ಅನ್ನೋ ಕಾರಣ ಕೊಟ್ಟು ಕಾಲೇಜಿನಿಂದಲೇ ಹೊರಹಾಕಿದ್ದರು. ಸ್ಯಾಂಡಲ್‍ವುಡ್‍ನ ಅಮ್ಮ ಪಾರ್ವತಮ್ಮ ರಾಜ್‍ಕುಮಾರ್ ಕೂಡ ಧ್ರುವ ಅವರ ಪ್ರತಿಭೆಗೆ ಮಾರು ಹೋಗಿದ್ದರು. ಕೇವಲ ನಟ ಮಾತ್ರವಲ್ಲದೇ ಧ್ರುವ ಒಳ್ಳೆಯ ಸ್ಟಂಟ್ ಕೂಡಾ ಮಾಡುತ್ತಿದ್ದರು.
  • ಮಂಡ್ಯ: ಸಾಲಬಾಧೆ ತಾಳಲಾರದೆ ಜಮೀನು ತಡೆಬೇಲಿಗೆ ಹಾಕಿದ ಬೆಂಕಿಗೆ ಹಾರಿ ರೈತ ಆತ್ಮಹತ್ಯೆ!

    ಮಂಡ್ಯ: ಸಾಲಬಾಧೆ ತಾಳಲಾರದೆ ಜಮೀನು ತಡೆಬೇಲಿಗೆ ಹಾಕಿದ ಬೆಂಕಿಗೆ ಹಾರಿ ರೈತ ಆತ್ಮಹತ್ಯೆ!

    ಮಂಡ್ಯ: ಸಾಲಬಾಧೆಯಿಂದ ಮನನೊಂದು ಜಮೀನಿನ ತಡೆಬೇಲಿಗೆ ಬೆಂಕಿ ಹಾಕಿ ಬಳಿಕ ಅದಕ್ಕೆ ಹಾರಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಚೆಲುವೇಗೌಡ(70) ಆತ್ಮಹತ್ಯೆಗೆ ಶರಣಾದ ರೈತ. ಚೆಲುವೇಗೌಡ ಅವರಿಗೆ ನಾಲ್ಕು ಎಕರೆ ಜಮೀನಿದ್ದು, ಬ್ಯಾಂಕ್ ಮತ್ತು ಕೈ ಸಾಲ ಸೇರಿ ಸುಮಾರು ನಾಲ್ಕು ಲಕ್ಷ ರೂ. ಸಾಲ ಮಾಡಿಕೊಂಡಿದ್ರು. ಜಮೀನಿನಲ್ಲಿ ಬೆಳೆ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಇವರಿಗೆ ಸಾಲದ ಹೊರೆ ಹೆಚ್ಚಾಗಿತ್ತು. ಈ ವಿಚಾರವನ್ನ ರೈತ ಚೆಲುವೇಗೌಡ ತನ್ನ ಪತ್ನಿ ಪಾರ್ವತಮ್ಮ ಮತ್ತು ಮಗ ಮೋಹನ್ ಕುಮಾರನೊಂದಿಗೆ ಹೇಳಿಕೊಳ್ಳುತ್ತಿದ್ರು. ಇದರಿಂದ ಮನನೊಂದು ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಜಮೀನಿನ ಬಳಿ ಹೋದ ಚೆಲುವೇಗೌಡ, ಜಮೀನಿನ ಬಳಿ ಇದ್ದ ಬೇಲಿಗೆ ಬೆಂಕಿ ಹಾಕಿ ನಂತರ ಅದರೊಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಗಂಡ ಮನೆಗೆ ಬಾರದ ಹಿನ್ನೆಲೆಯಲ್ಲಿ ಪತ್ನಿ ಪಾರ್ವತಮ್ಮ ಜಮೀನಿನ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತಿ ಬೆಂಕಿ ನಡುವೆ ಬಿದ್ದಿರುವುದನ್ನ ಗಮನಿಸಿದ ಪಾರ್ವತಮ್ಮ, ಗ್ರಾಮಕ್ಕೆ ಓಡಿ ಹೋಗಿ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಗ್ರಾಮಸ್ಥರು, ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದಾರೆ. ಆದ್ರೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಚೆಲುವೇಗೌಡ ಹೆಣವಾಗಿ ಹೋಗಿದ್ರು.

    ಘಟನೆ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

     

  • ಸಾಲಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

    ಸಾಲಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

    ರಾಯಚೂರು : ಸಾಲಬಾಧೆ ತಾಳಲಾರದೆ ಜಿಲ್ಲೆಯ ಸಿಂಧನೂರು ತಾಲೂಕಿನ ಚಿತ್ರಾಲಿ ಗ್ರಾಮದ ರೈತರೊಬ್ಬರು ಇಂದು ಬೆಳಗಿನ ಜಾವ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

    45 ವರ್ಷದ ಸಿದ್ದಯ್ಯಸ್ವಾಮಿ ಮೃತ ರೈತ. 9 ಎಕರೆ ಜಮೀನು ಹೊಂದಿದ್ದ ಸಿದ್ದಯ್ಯಸ್ವಾಮಿ ಅವರು ನೀರಿನ ಕೊರತೆಯಿಂದ ಬೆಳೆ ನಷ್ಟವಾಗಿ ಕೈ ಸಾಲ ಸೇರಿದಂತೆ ಬ್ಯಾಂಕ್‍ನಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ವಿದ್ಯುತ್ ಮೋಟಾರ್ ತಂತಿ ಹಿಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಸಿದ್ದಯ್ಯಸ್ವಾಮಿ ಅವರು ತಮ್ಮ ಒಂಬತ್ತು ಎಕರೆಯಲ್ಲಿ ಭತ್ತವನ್ನು ಬೆಳದಿದ್ದರು. ತುಂಗಭದ್ರ ಕಾಲುವೆಯ ನೀರನ್ನೇ ನಂಬಿ ಭತ್ತ ಬೆಳದಿದ್ದರು. ಬರಗಾಲದಿಂದ ನದಿಯಲ್ಲಿ ನೀರು ಕಡಿಮೆಯಾಗಿದ್ದರಿಂದ ಕಾಲುವೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿತ್ತು. ಹೀಗಾಗಿ ಸಿದ್ದಯ್ಯಸ್ವಾಮಿ ಬೆಳೆದ ಭತ್ತ ಸಂಪೂರ್ಣವಾಗಿ ಒಣಗಿ ಹೋಗಿತ್ತು. ರೈತ ಸಿದ್ದಯ್ಯಸ್ವಾಮಿ ಜವಳಗೇರಾ ಸಿಂಡಿಕೇಟ್ ಬ್ಯಾಂಕ್ ನಲ್ಲಿ 8 ಲಕ್ಷ ಸಾಲ, ಖಾಸಗಿಯಾಗಿ 8 ಲಕ್ಷ ಸಾಲ ಮಾಡಿಕೊಂಡಿದ್ದು ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಹಾವೇರಿ: ಜಮೀನಿನಲ್ಲಿ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ

    ಹಾವೇರಿ: ಜಮೀನಿನಲ್ಲಿ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ

    – ಸಾಲಗಾರರ ಕಾಟಕ್ಕೆ ಬೇಸತ್ತು ರಾಯಚೂರಿನ ರೈತ ಆತ್ಮಹತ್ಯೆಗೆ ಶರಣು
    – ಚಿಕ್ಕಬಳ್ಳಾಪುರದಲ್ಲಿ ಜಮೀನು ವಿವಾದದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ

    ಹಾವೇರಿ/ರಾಯಚೂರು/ಚಿಕ್ಕಬಳ್ಳಾಪುರ: ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿರೋ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮದಲ್ಲಿ ನಡೆದಿದೆ.

    ಮೃತ ರೈತನನ್ನ 50 ವರ್ಷ ದ ಉಜ್ಜನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. ಐದು ಎಕರೆ ಜಮೀನು ಹೊಂದಿದ್ದ ರೈತ ಉಜ್ಜನಗೌಡ, ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಸಂಪೂರ್ಣ ಹಾಳಾಗಿದ್ದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಟ್ರ್ಯಾಕ್ಟರ್ ಸಾಲ, ಬೆಳೆಸಾಲ ಸೇರಿದಂತೆ ರೈತ 10 ಲಕ್ಷ ರೂಪಾಯಿ ಸಾಲಮಾಡಿಕೊಂಡಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

    ರಾಯಚೂರು ತಾಲೂಕಿನ ವಡ್ಲೂರು ಗ್ರಾಮದಲ್ಲಿ ಸಾಲಗಾರರ ಕಾಟ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. 31 ವರ್ಷದ ನಾಗೇಶ್ ನೇಣಿಗೆ ಶರಣಾದ ರೈತ. 5 ಲಕ್ಷ ರೂ. ಖಾಸಗಿ ಸಾಲ ಮಾಡಿಕೊಂಡಿದ್ದ ನಾಗೇಶ್, ಕಳೆದ ಎರಡು ವರ್ಷಗಳಿಂದ ಕೈಗೆ ಬೆಳೆ ಬಾರದ ಹಿನ್ನೆಲೆಯ್ಲಲಿ ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿದಿನ ಮನೆಗೆ ಬರುತ್ತಿದ್ದ ಸಾಲಗಾರರ ಕಾಟ ತಾಳಲಾರದೆ ನೊಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸತತ ಬರಗಾಲದಿಂದಾಗಿ ತನ್ನ ಎರಡು ಎಕರೆ ಹೊಲದಲ್ಲಿ ಬೆಳೆದ ಬೆಳೆ ನಷ್ಟವಾಗಿದ್ದರಿಂದ ಬೇರೆ ದಾರಿ ಕಾಣದೆ ನಾಗೇಶ್ ಸಾವಿನ ನಿರ್ಧಾರಕ್ಕೆ ಬಂದಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಚಿಕ್ಕಬಳ್ಳಾಪುರದಲ್ಲಿ ಜಮೀನು ವಿವಾದದಿಂದ ಮನನೊಂದ ವ್ಯಕ್ತಿಯೊರ್ವ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅರಲಹಳ್ಳಿ ಗ್ರಾಮದ 38 ವರ್ಷದ ದೇವರಾಜ್ ಮನೆಯ ಪಕ್ಕದಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ದೇವರಾಜ್ ಹಾಗೂ ಅವರ ತಮ್ಮನ ನಡುವೆ ಜಮೀನು ವಿವಾದ ಇದ್ದು ಬಹಳಷ್ಟು ಬಾರಿ ರಾಜಿ ಪಂಚಾಯತಿ ಮಾಡಲಾಗಿತ್ತು ಎನ್ನಲಾಗಿದೆ. ಆದ್ರೆ ವಿವಾದ ಬಗೆಹರಿಯದ ಕಾರಣ ನನ್ನ ಸಾವಿಗೆ ತಮ್ಮ ಹಾಗೂ ಆತನ ಪತ್ನಿ ಕಾರಣ ಅಂತ ಡೆತ್‍ನೋಟ್ ಬರೆದು ದೇವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.