Tag: ಸಾಲ

  • ಸಾಲ ಕೊಡ್ತೀವಿ ಕಾಂಗ್ರೆಸ್ ಗೆ ಓಟ್ ಹಾಕಿ – ಮತದಾರರಿಗೆ ಅಮಿಷ

    ಸಾಲ ಕೊಡ್ತೀವಿ ಕಾಂಗ್ರೆಸ್ ಗೆ ಓಟ್ ಹಾಕಿ – ಮತದಾರರಿಗೆ ಅಮಿಷ

    ತುಮಕೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ರೈತರಿಗೆ ಸಾಲ ವಿತರಣೆ ಮಾಡಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ವಿಎಸ್‍ಎಸ್‍ಎನ್ ಬ್ಯಾಂಕಿನಲ್ಲಿ ನಡೆದಿದೆ. ಸಾಲ ವಿತರಣೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಕಾರ್ಯ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

    ಸದ್ಯ ಘಟನೆಯ ಕುರಿತು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣನ ಕ್ಷೇತ್ರದಲ್ಲಿ ಮತದಾರರಿಗೆ ಸಾಲದ ರೂಪದಲ್ಲಿ ಆಮಿಷ ಒಡ್ಡುತ್ತಿದ್ದಾರೆ ಎನ್ನುವ ಆರೋಪ ಮಾಡಲಾಗಿದೆ. ಶಾಸಕ ರಾಜಣ್ಣ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಕಾರಣ ಈ ಕೃತ್ಯಕ್ಕೆ ಅಧಿಕಾರಿಗಳು ಸಾಥ್ ನೀಡಿದ್ದಾರೆ ಎನ್ನಲಾಗಿದೆ.

    ಮಧುಗಿರಿ ತಾಲೂಕಿನ ಕಡಗತ್ತೂರು ವಿಎಸ್‍ಎಸ್‍ಎನ್ ಬ್ಯಾಂಕ್ ನಲ್ಲಿ ಸಾಲ ವಿತರಣೆ ಮಾಡಲಾಗುತ್ತಿದೆ. ಅಲ್ಲದೇ ಚೆಕ್ ಅಥವಾ ಆರ್ ಟಿಜಿಎಸ್ ಮೂಲಕ ನೀಡಬೇಕಿದ್ದ ಸಾಲವನ್ನು ನಗದು ರೂಪದಲ್ಲಿ ಕೊಟ್ಟು ಕಾಂಗ್ರೆಸ್ ಗೆ ಮತಹಾಕುವಂತೆ ಹೇಳಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ.

    ಜಮೀನಿನ ಪಹಣಿ ಹೊಂದಿರುವ ಕಾಂಗ್ರೆಸ್ ಬೆಂಬಲಿತ ರೈತರಿಗೆ ಮಾತ್ರ ಹಳೇ ದಿನಾಂಕ ನಮೂದಿಸಿ ಸಾಲ ವಿತರಣೆ ಮಾಡಲಾಗುತ್ತಿದೆ. ಈ ಮೂಲಕ ಕಾನೂನಿನ ಕ್ರಮದಿಂದ ತಪ್ಪಿಸಿಕೊಳ್ಳಲು ವಿಎಸ್‍ಎಸ್‍ಎನ್ ಅಧಿಕಾರಿಗಳ ಜಾಣ ನಡೆಗೆ ಮುಂದಾಗಿದ್ದಾರೆ. ರೈತರಿಗೆ ಸಾಲ ನೀಡುತ್ತಿರುವ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

  • ಸಾಲ ತೀರಿಸಲು 5 ವರ್ಷದ ಮಗುವನ್ನ ಕಿಡ್ನಾಪ್ ಮಾಡಿದ ಐಎಎಸ್ ಆಕಾಂಕ್ಷಿ

    ಸಾಲ ತೀರಿಸಲು 5 ವರ್ಷದ ಮಗುವನ್ನ ಕಿಡ್ನಾಪ್ ಮಾಡಿದ ಐಎಎಸ್ ಆಕಾಂಕ್ಷಿ

    ನವದೆಹಲಿ: ತನ್ನ ಸಾಲ ತೀರಿಸಲು 5 ವರ್ಷದ ಮಗುವನ್ನ ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟ ಯುಪಿಸ್‍ಸಿ ಆಕಾಂಕ್ಷಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಆಸಿಫ್ ಸೈಫಿ(27) ಬಂಧಿತ ಆರೋಪಿ. ಈತ ದೆಹಲಿಯ ಭಜನ್‍ಪುರ ಪ್ರದೇಶದಿಂದ ಮಗುವನ್ನ ಕಿಡ್ನಾಪ್ ಮಾಡಿದ್ದ. ಬಾಲಿವುಡ್ ಸಿನಿಮಾದಿಂದ ಪ್ರೇರಣೆಗೊಂಡಿದ್ದ ಈತ, ಅದರಲ್ಲಿನ ಡೈಲಾಗ್‍ಗಳನ್ನ ಪ್ರಾಕ್ಟೀಸ್ ಮಾಡಿ ನಂತರ ಪೋಷಕರಿಗೆ ಕರೆ ಮಾಡಿ ಮಾತನಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

    ಎಂ.ಟೆಕ್ ಪೂರೈಸಿರೋ ಸೈಫಿ, ನಾಗರೀಕ ಸೇವಾ ಪರೀಕ್ಷೆಗಾಗಿ ತಯಾರಾಗುತ್ತಿದ್ದ. ಆದ್ರೆ ಆತ ಸಾಲದಲ್ಲಿ ಮುಳುಗಿದ್ದ. ವ್ಯಕ್ತಿಯೊಬ್ಬರು ಈತನಿಗೆ ಸರ್ಕಾರಿ ಕೆಲಸ ಕೊಡಿಸುವ ಭರವಸೆ ನೀಡಿದ್ದು, ಅವರಿಗೆ ಕೊಡಲು 4-5 ಲಕ್ಷ ರೂ. ಸಾಲ ಪಡೆದಿದ್ದ. ಆದ್ರೆ ಆ ವ್ಯಕ್ತಿ ಈತನಿಗೆ ಮೋಸ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

    ಹಣ ಮಾಡಬೇಕೆಂಬ ಉದ್ದೇಶದಿಂದ ಸೈಫಿ 5 ವರ್ಷದ ಮಗುವನ್ನ ಪತ್ತೆಹಚ್ಚಿ ಆ ಮಗುವಿನ ತಂದೆಯ ಫೋನ್ ನಂಬರ್ ಕಲೆ ಹಾಕಿದ್ದ. ಒಂದು ದಿನ ಆರೋಪಿ ಸೈಫಿ ಮಗುವನ್ನ ಹೊತ್ತೊಯ್ದು ಗುಡಿಸಲಿನಲ್ಲಿ ಇರಿಸಿದ್ದ. ನಂತರ ಬೇರೆ ಬೇರೆ ಫೋನ್‍ಗಳಿಂದ ಮಗುವಿನ ತಂದೆಗೆ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಎಂದು ತಿಳಿಸಿದ್ದಾರೆ.

    ಕೊನೆಗೆ ಸೈಫಿಯನ್ನ ಬುಧವಾರದಂದು ಉತ್ತರಪ್ರದೇಶದ ದಾದ್ರಿಯಲ್ಲಿ ಬಂಧಿಸಲಾಗಿದ್ದು, ಮಗುವನ್ನ ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

  • ಸಾಲ ತೀರಿಸಲಿಲ್ಲವೆಂದು ರೈತನ ಮನೆಯಲ್ಲಿ ಬ್ಯಾಂಕ್ ಸಿಬ್ಬಂದಿಯಿಂದ ಗೂಂಡಾಗಿರಿ!

    ಸಾಲ ತೀರಿಸಲಿಲ್ಲವೆಂದು ರೈತನ ಮನೆಯಲ್ಲಿ ಬ್ಯಾಂಕ್ ಸಿಬ್ಬಂದಿಯಿಂದ ಗೂಂಡಾಗಿರಿ!

    ಕೊಪ್ಪಳ: ಹತ್ತಾರು ಬ್ಯಾಂಕಿನಲ್ಲಿ ಸಾವಿರಾರು ಕೋಟಿ ಸಾಲ ಮಾಡಿರೋ ಉದ್ಯಮಿಗಳ ವಿರುದ್ಧ ಕ್ರಮಕ್ಕೆ ಬ್ಯಾಂಕ್‍ಗಳು ಮುಂದಾಗುತ್ತಿಲ್ಲ. ಆದರೆ ಇಲ್ಲೊಂದು ಸಹಕಾರಿ ಬ್ಯಾಂಕ್ ರೈತನಿಗೆ ಕೊಟ್ಟ 3 ಲಕ್ಷ ರೂ. ಸಾಲಕ್ಕೆ ಮನೆಯನ್ನೇ ಗುಡಿಸಿ ಗುಂಡಾಂತರ ಮಾಡಿದೆ.

    ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಳ್ಳಿ ಕ್ರಾಸ್‍ನಲ್ಲಿನ ರೈತ ಸುಕೊ ಸಹಕಾರಿ ಬ್ಯಾಂಕ್ ನಲ್ಲಿ ಹೈನುಗಾರಿಕೆಗಾಗಿ ಸಾಲ ಮಾಡಿದ್ದರು. ಚಿನ್ನ ಮತ್ತು ಭೂಮಿಯನ್ನು ಅಡವಿಟ್ಟುಕೊಂಡು ಬ್ಯಾಂಕ್ ಸಾಲ ನೀಡಿತ್ತು. ಆದ್ರೆ ಪ್ರಕೃತಿ ವಿಕೋಪದಿಂದ ಹೈನುಗಾರಿಕೆಯಲ್ಲಿ ನಷ್ಟ ಉಂಟಾಗಿದ್ದರಿಂದ ರೈತ ವಿಷ್ಟುವರ್ಧನ ರೆಡ್ಡಿಗೆ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿಲ್ಲ. ಇದರಿಂದ ಬ್ಯಾಂಕ್ ಸಿಬ್ಬಂದಿ ರೈತನ ಮನೆಗೆ ನುಗ್ಗಿ ಗೂಂಡಾಗಿರಿ ಮಾಡಿದ್ದಾರೆ.

    ಒಂದು ವಾರದ ಹಿಂದೆ ಪೊಲೀಸರ ಸಮೇತ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿ, ಮನೆಯಲ್ಲಿನ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ರೈತನ ಮನೆ ಬೀಗ ಮುರಿದು, ಗೃಹ ಉಪಯೋಗಿ ವಸ್ತುಗಳನ್ನು ಎತ್ತೊಯ್ಯುವ ಮೂಲಕ ಅಕ್ಷರಶಃ ಗೂಂಡಾಗಿರಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮನೆಗೆ ಬೀಗ ಮುದ್ರೆ ಹಾಕಿದ್ದಾರೆ. ಆಗ ಬ್ಯಾಂಕ್ ಗೆ ಹೋಗಿರೋ ರೈತ, ಯಾವ ಕಾನೂನಿನಡಿ ನಮ್ಮ ಮನೆಗೆ ನುಗ್ಗಿ ಹೀಗೆ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಬ್ಯಾಂಕ್ ಮ್ಯಾನೇಜರ್ ನಮಗೂ ಮತ್ತು ಮನೆಗೆ ನುಗ್ಗಿ ವಸ್ತು ತೆಗದುಕೊಂಡು ಹೋಗಿದ್ದಕ್ಕೂ ಸಂಬಂಧವಿಲ್ಲ ಎಂದು ಹಿಂಬರಹ ನೀಡಿದ್ದಾರೆ.

    ಇದರ ವಿರುದ್ಧ ರೈತ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬ್ಯಾಂಕ್ ಸಿಬ್ಬಂದಿಯ ಕೃತ್ಯಕ್ಕೆ ರೈತನ ಕುಟುಂಬ ಕಂಗಾಲಾಗಿದೆ.

  • ವಂಚನೆ ಆರೋಪ ನಟಿ ಸಿಂಧು ಮೆನನ್ ವಿರುದ್ಧ ಎಫ್‍ಐಆರ್- ಸಹೋದರ ಅರೆಸ್ಟ್

    ವಂಚನೆ ಆರೋಪ ನಟಿ ಸಿಂಧು ಮೆನನ್ ವಿರುದ್ಧ ಎಫ್‍ಐಆರ್- ಸಹೋದರ ಅರೆಸ್ಟ್

    ಬೆಂಗಳೂರು: ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಸಿಂಧು ಮೆನನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಆಫ್ ಬರೋಡಗೆ 36 ಲಕ್ಷ ರೂ. ವಂಚನೆಗೈದ ಆರೋಪದ ಮೇಲೆ ಸಿಂಧು ಮೆನನ್ ಸೇರಿದಂತೆ ನಾಲ್ವರ ವಿರುದ್ಧ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 420 ಅಡಿಯಲ್ಲಿ ಪ್ರಕರಣ ಎಫ್‍ಐಆರ್ ದಾಖಲಾಗಿದೆ.

    ಸಿಂಧು ಮೆನನ್ ಸಹೋದರ ಮನೋಜ್ ಕೆ ವರ್ಮಾ ಹಾಗೂ ನಾಗಶ್ರೀ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ  ಮನೋಜ್ ಕೆ ವರ್ಮಾ ಮೊದಲ ಆರೋಪಿ ಆಗಿದ್ದರೆ ನಾಗಶ್ರೀ ಶಿವಣ್ಣ ಎ2 ಆಗಿದ್ದಾರೆ. ಸಿಂಧು ಮೆನನ್ ಎ3 ಆಗಿದ್ದು, ಸುಧಾ ರಾಜಶೇಖರ್ ಎ4 ಆಗಿದ್ದಾರೆ.

    ಏನಿದು ಪ್ರಕರಣ?
    ಬ್ಯಾಂಕ್ ಆಫ್ ಬರೋಡಾದಲ್ಲಿ ಕಾರ್ ಖರೀದಿಗಾಗಿ ಆರೋಪಿ ಮನೋಜ್ ಶರ್ಮಾ 36 ಲಕ್ಷ ರೂ. ಸಾಲ ಪಡೆದಿದ್ದ. ಸಾಲ ಪಡೆಯಲು ಜ್ಯುಬಿಲೆಂಟ್ ಮೋಟಾರ್ಸ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ದಾಖಲೆ ಸೃಷ್ಟಿಸಿದ್ದರು. ಪರಿಶೀಲನೆ ವೇಳೆ ನಕಲಿ ದಾಖಲೆ ನೀಡಿದ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ರಮೇಶ್ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮನೋಜ್ ಶರ್ಮಾ ಸಾಲ ಪಡೆದ ಬಳಿಕ ಹಣವನ್ನು ಸಿಂಧು ಮೆನನ್ ಅವರ ಖಾತೆಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ನಟಿ ಮೇಲೂ ಎಫ್‍ಐಆರ್ ದಾಖಲಾಗಿದೆ.

  • ಒಂದೂವರೆ ವರ್ಷದ ಮಗುವನ್ನು ಸಾಯಿಸಿ ದಂಪತಿ ಆತ್ಮಹತ್ಯೆ!

    ಒಂದೂವರೆ ವರ್ಷದ ಮಗುವನ್ನು ಸಾಯಿಸಿ ದಂಪತಿ ಆತ್ಮಹತ್ಯೆ!

    ರಾಮನಗರ: ಸಾಲಬಾಧೆ ತಾಳಲಾರದೆ ಮಗುವನ್ನು ತಾವೂ ನೇಣಿಗೆ ಶರಣಾದ ಆಘಾತಕಾರಿ ಘಟನೆಯೊಂದು ಕನಕಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ.

    ಪತಿ ಸೋಮಶೇಖರ್ (36), ಪತ್ನಿ ಸುಧಾ (27) ಹಾಗೂ ಮಗು ಪ್ರೀತಂ ಮೃತರು. ಗೂಡಿನ ವ್ಯಾಪಾರ ಮಾಡಿಕೊಂಡಿದ್ದ ಮೃತ ಸೋಮಶೇಖರ್ ರೈತರ ಬಳಿ ಸಾಲಕ್ಕೆ ಗೂಡು ಖರೀದಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದರು.

    ಕಳೆದ ಕೆಲವು ದಿನಗಳ ಹಿಂದೆ ರೈತರ ಬಳಿ ರೇಷ್ಮೆ ಗೂಡು ತೆಗೆದುಕೊಂಡಿದ್ದು, ಹಣ ನೀಡಿರಲಿಲ್ಲ. ಅಲ್ಲದೇ ವ್ಯಾಪಾರ ಕೂಡಾ ಕೈಕೊಟ್ಟು ಸುಮಾರು 3 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದರು. ಸೋಮವಾರ ಮನೆಯ ಬಳಿ ಹಣಕ್ಕಾಗಿ ರೈತರು ಬಂದಿದ್ದು, ಹಣ ನೀಡದೇ ಇದ್ದದ್ದಕ್ಕೆ ಗಲಾಟೆ ಮಾಡಿದ್ದರು. ಈ ವಿಚಾರವಾಗಿ ಮನನೊಂದ ಸುಧಾ ಸಂಜೆ ವೇಳೆಗೆ ತನ್ನ ಮಗುವಿನ ಜೊತೆ ನೇಣು ಬಿಗಿದುಕೊಂಡಿದ್ದಾರೆ.

    ನಂತರ ಮನೆಗೆ ಬಂದ ಸೋಮಶೇಖರ್ ಪತ್ನಿ ಹಾಗೂ ಮಗುವಿನ ಸಾವು ಕಂಡು ತಾನೂ ಸಹ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸಂಜೆ ಬಳಿಕ ಟ್ಯೂಷನ್ ಗೆ ಹೋಗಿದ್ದ ಸೋಮಶೇಖರ್ ಅವರ ಇನ್ನೋರ್ವ ಮಗಳು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

    ಕನಕಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ನನ್ನ ಜಮೀನು ವಶಪಡಿಸಿಕೊಂಡು ಸಾಲ ತೀರಿಸಿ: ಸಿಎಂ, ಮೋದಿ, ರಾಹುಲ್ ಗಾಂಧಿಗೆ ಮಂಡ್ಯ ರೈತ ಮನವಿ

    ನನ್ನ ಜಮೀನು ವಶಪಡಿಸಿಕೊಂಡು ಸಾಲ ತೀರಿಸಿ: ಸಿಎಂ, ಮೋದಿ, ರಾಹುಲ್ ಗಾಂಧಿಗೆ ಮಂಡ್ಯ ರೈತ ಮನವಿ

    ಮಂಡ್ಯ: ನನ್ನ ಜಮೀನನ್ನು ವಶಪಡಿಸಿಕೊಂಡು ಸಾಲವನ್ನು ತೀರಿಸಿ ಎಂದು ರೈತರೊಬ್ಬರು ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಹಲವರಿಗೆ ಕಳೆದೊಂದು ವರ್ಷದಿಂದ ಮನವಿ ಮಾಡುತ್ತಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೋಳಾರೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರೈತ ಬಿ. ಜವರೇಗೌಡ ಅವರಿಗೆ ಸುಮಾರು ಎರಡು ಎಕರೆ ಹತ್ತು ಗುಂಟೆ ಜಮೀನಿದೆ. ಇವರು ವ್ಯವಸಾಯದ ಜೊತೆಗೆ ತೃತೀಯ ದರ್ಜೆ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಉದ್ಯೋಗ ಖಾತರಿ ಯೋಜನೆಯಡಿ ಮಾಡಿಸಿದ ಕೆಲಸಕ್ಕೆ ಹಣ ಸಂದಾಯವಾಗಿಲ್ಲವಂತೆ. ಅಲ್ಲದೆ ಬರದಿಂದಾಗಿ ಕಳೆದ ಮೂರು ನಾಲ್ಕು ವರ್ಷದಿಂದ ಸರಿಯಾಗಿ ಬೆಳೆಯೂ ಕೈ ಸೇರಿಲ್ಲ. ಇವೆಲ್ಲದರ ನಡುವೆ ಸಾಲ ಮಾಡಿ ಮೂವರು ಹೆಣ್ಣು ಮಕ್ಕಳನ್ನು ಮದುವೆ ಮಾಡಿದ್ದಾರೆ. ಇದರಿಂದಾಗಿ ಅಸಲು ಬಡ್ಡಿ ಎಲ್ಲ ಸೇರಿ ಸುಮಾರು 30 ಲಕ್ಷದಷ್ಟು ಸಾಲವಾಗಿದೆ.

    ಇದನ್ನು ತೀರಿಸಲು ದಾರಿ ಕಾಣದ ರೈತ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಹಲವರಿಗೆ ಪತ್ರ ಬರೆದು ನನ್ನ ಜಮೀನನ್ನು ವಶಕ್ಕೆ ಪಡೆದು ಸಾಲ ತೀರಿಸಿ. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಮನವಿ ಮಾಡಿದ್ದಾರೆ. ಆದರೆ ಕಳೆದೊಂದು ವರ್ಷದಿಂದ ಮನವಿ ಮಾಡುತ್ತಿದ್ದರೂ, ಯಾರೊಬ್ಬರೂ ಸಹಾಯಕ್ಕೆ ಬರುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

  • ಅನಾರೋಗ್ಯ, ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆಗೆ ಶರಣು

    ಅನಾರೋಗ್ಯ, ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆಗೆ ಶರಣು

    ಕೋಲಾರ: ಅನಾರೋಗ್ಯ ಹಾಗೂ ಸಾಲಬಾಧೆ ತಾಳಲಾರದೆ ದಂಪತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಂಡಿಕಲ್ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ವೆಂಕಟರಮಣಪ್ಪ (57), ಪಾರ್ವತಮ್ಮ (45) ಆತ್ಮಹತ್ಯೆಗೆ ಶರಣಾದ ದಂಪತಿ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಗಂಡನ ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಸತಿ-ಪತಿ ನೇಣಿಗೆ ಶರಣಾಗಿದ್ದಾರೆ ಎಂದು ಮಗ ನರೇಶ್ ದೂರಿನಲ್ಲಿ ತಿಳಿಸಿದ್ದಾರೆ.

    ಕಳೆದ 5 ವರ್ಷಗಳಿಂದ ವೆಂಕಟರಮಣಪ್ಪ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದರು. ಸಾಲಬಾಧೆ ತಾಳಲಾರದೆ ಸಾವಿಗೆ ಶರಣಾಗಿದ್ದಾರೆ ಎಂದು ಮಗ ನರೇಶ್ ಮುಳಬಾಗಿಲು ಪೊಲೀಸರಿಗೆ ತಿಳಿಸಿದ್ದಾರೆ.

    ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  • ಕುತ್ತಿಗೆಗೆ ಚಾಕುವಿನಿಂದ ಇರಿದು, ದಿಂಬಿನಿಂದ ಉಸಿರುಗಟ್ಟಿಸಿ ಸ್ನೇಹಿತನಿಂದ್ಲೇ ಮಹಿಳೆಯ ಕೊಲೆ!

    ಕುತ್ತಿಗೆಗೆ ಚಾಕುವಿನಿಂದ ಇರಿದು, ದಿಂಬಿನಿಂದ ಉಸಿರುಗಟ್ಟಿಸಿ ಸ್ನೇಹಿತನಿಂದ್ಲೇ ಮಹಿಳೆಯ ಕೊಲೆ!

    ಬೆಂಗಳೂರು: ಕೊಟ್ಟ ಸಾಲವನ್ನು ವಾಪಾಸ್ ಕೇಳಿದ್ದಕ್ಕೆ ಮಹಿಳೆಯನ್ನು ಆಕೆಯ ಸ್ನೇಹಿತನೇ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ

    ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಎರಡು ದಿನಗಳ ಹಿಂದೆ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸದ್ಯ ಪ್ರಕರಣ ಸಂಬಂಧ ಆರೋಪಿ ಗೋಪಿನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯನ್ನು ತಾರಾ ಎಂದು ಗುರುತಿಸಲಾಗಿದೆ.

    ಎಚ್‍ಎಎಲ್ ನಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿರೋ ಆರೋಪಿ ಗೋಪಿನಾಧ್ ಬೆಂಗಳೂರಿನ ಹೊರಮಾವು ನಿವಾಸಿಯಾಗಿದ್ದು, ತಾರಾ ಕುಟುಂಬಕ್ಕೆ ಆತ್ಮೀಯ ಸ್ನೇಹಿತನಾಗಿದ್ದ.

    ಇತ್ತೀಚೆಗೆ ಗೋಪಿನಾಥ್ ತಾರಾ ಬಳಿ 11 ಲಕ್ಷ ಸಾಲ ಪಡೆದಿದ್ದ. ಹೀಗಾಗಿ ತಾರಾ ಆ ಹಣವನ್ನು ವಾಪಸ್ ಕೊಡುವಂತೆ ಪದೇ ಪದೇ ಕೇಳುತ್ತಿದ್ದರು. ಈ ವಿಚಾರದಲ್ಲಿ ಇವರಿಬ್ಬರ ಮಧ್ಯೆ ನಡೆದ ಜಗಳ ತಾರಕಕ್ಕೇರಿದ್ದು, ತಾರಾ ತನ್ನ ತಾಯಿ ಮನೆಗೆ ಬಂದಿದ್ದ ವೇಳೆ ಗೋಪಿನಾಥ್ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದು, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಮನೆಗೆ ಬೀಗ ಹಾಕಿದ್ದಾನೆ. ಅಲ್ಲದೇ ಮನೆ ಕೀ ಹಾಗೂ ಚಾಕುವನ್ನು ಪಕ್ಕದ ಚರಂಡಿಗೆ ಬಿಸಾಡಿ ಅಲ್ಲಿಂದ ಪರಾರಿಯಾಗಿದ್ದಾನೆ.

    ಇತ್ತ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಗೋಪಿನಾಥ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಕಮರ್ಷಿಯಲ್ ಸ್ಟ್ರೀಟ್ ಠಾಣಾ ವ್ಯಾಪ್ತಿಯ ಸಂಗಮ್ ರಸ್ತೆಯ ತಾಯಿ ಮನೆಯಲ್ಲಿ ಈ ಕೊಲೆ ನಡೆದಿದ್ದು, ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

     

  • ಬಜರಂಗದಳ ಕಾರ್ಯಕರ್ತನಿಂದ ಕಿರುಕುಳ- ನೇತ್ರಾವತಿ ನದಿಗೆ ಬಿದ್ದು ಸಾಲಗಾರ ಆತ್ಮಹತ್ಯೆ

    ಬಜರಂಗದಳ ಕಾರ್ಯಕರ್ತನಿಂದ ಕಿರುಕುಳ- ನೇತ್ರಾವತಿ ನದಿಗೆ ಬಿದ್ದು ಸಾಲಗಾರ ಆತ್ಮಹತ್ಯೆ

    ಮಂಗಳೂರು: ಬಜರಂಗದಳ ಮುಖಂಡನ ಕಿರುಕುಳದಿಂದ ಸಾಲಗಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಗರೋಡಿಯ ತಾರಾನಾಥ್ ಆತ್ಮಹತ್ಯೆಗೆ ಶರಣಾಗಿರುವವರು. ಇವರು ತಮ್ಮ ಕಾರನ್ನು ಬಜರಂಗದಳದ ಮುಖಂಡ ಪ್ರಮೋದ್ ಪಂಪ್‍ವೆಲ್‍ಗೆ ಫೈನಾನ್ಸ್ ನಲ್ಲಿ ಅಡವಿಟ್ಟು ಸುಮಾರು 2.5 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ತಿಂಗಳಿಗೆ 25 ಸಾವಿರ ರೂಪಾಯಿ ಬಡ್ಡಿ ಕಟ್ಟೋ ಷರತ್ತಿನಡಿ ಹಣ ಪಡೆದಿದ್ದ ತಾರಾನಾಥ್ 6 ತಿಂಗಳ ನಂತರ ಬಡ್ಡಿ ಕಟ್ಟಲಾರದೇ ಸಾಲದಲ್ಲಿ ಮುಳುಗಿದ್ದಾರೆ.

    ಈ ವೇಳೆ ತಾರಾನಾಥ್ ಬಡ್ಡಿ ಕಟ್ಟಿಲ್ಲ ಎಂದು ಪ್ರಮೋದ್ ತನ್ನ ಸಹಚರರ ಜೊತೆಗೂಡಿ ತಾರನಾಥ್ ಮನೆಗೆ ತೆರಳಿ ಪತ್ನಿ ಮತ್ತು ಮಕ್ಕಳನ್ನು ಪೀಡಿಸಿದ್ದಾನೆ. ಇದರಿಂದ ಬೇಸತ್ತ ತಾರನಾಥ್, ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಪ್ರಮೋದ್ ಪಂಪ್‍ವೆಲ್ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಆರೋಪಿಯ ಬಂಧನಕ್ಕೆ ಮೀನಾಮೇಷ ಎಣಿಸುತ್ತಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

  • 1 ಸಾವಿರ ರೂ. ಸಾಲ ವಾಪಸ್ ನೀಡದ್ದಕ್ಕೆ ಬೆರಳನ್ನೇ ಕತ್ತರಿಸಿದ!

    1 ಸಾವಿರ ರೂ. ಸಾಲ ವಾಪಸ್ ನೀಡದ್ದಕ್ಕೆ ಬೆರಳನ್ನೇ ಕತ್ತರಿಸಿದ!

    ತುಮಕೂರು: 1 ಸಾವಿರ ರೂಪಾಯಿ ಸಾಲವನ್ನು ವಾಪಸ್ ನೀಡದ್ದಕ್ಕೆ ವ್ಯಕ್ತಿಯೊಬ್ಬರ ಬೆರಳನ್ನೇ ಕತ್ತರಿಸಿರುವ ಅಮಾನುಷ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ತುಮಕೂರು ತಾಲೂಕಿನ ನಿಡುಹೊಳಲು ಗ್ರಾಮದ ನಿವಾಸಿ ಶಿವಣ್ಣ ಕೈ ಬೆರಳನ್ನು ಕಳೆದುಕೊಂಡ ವ್ಯಕ್ತಿ. ಶಿವಣ್ಣ ಅದೇ ಗ್ರಾಮದ ಕುಮಾರ್ ಎಂಬುವರಿಂದ ಕಳೆದ 15 ದಿನದ ಹಿಂದೆ ಒಂದು ಸಾವಿರ ರೂ. ಸಾಲ ಪಡೆದಿದ್ದರು.

    ಭಾನುವಾರ ಕುಮಾರ್ ಸಾಲ ಹಿಂದಿರುಗಿಸುಂತೆ ಶಿವಣ್ಣಗೆ ತಾಕೀತು ಮಾಡಿದ್ದಾನೆ. ದುಡ್ಡು ಹೊಂದಿಸಲು ಆಗದೇ ಇದ್ದುದರಿಂದ ಇಂದು ಸೋಮವಾರ ಮರಳಿಸುವುದಾಗಿ ಹೇಳಿದ್ದಾರೆ. ಇದಕ್ಕೆ ಒಪ್ಪದ ಕುಮಾರ್ ಹಾಗೂ ಆತನ ಪತ್ನಿ ವೀಣಾ ಶಿವಣ್ಣರ ಜೊತೆ ಜಗಳ ಮಾಡಿದ್ದಾರೆ. ಜಗಳ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

    ಹಲ್ಲೆ ಮಾಡಿದ ಪರಿಣಾಮ ಶಿವಣ್ಣನ ಬಲಗೈಯ ಮಧ್ಯದ ಬೆರಳು ತುಂಡಾಗಿ ಬಿದ್ದಿದೆ. ಅಷ್ಟೇ ಅಲ್ಲದೇ ಎದೆ ಭಾಗಕ್ಕೂ ಏಟಾಗಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.