ಬೆಳಗಾವಿ: ಪತ್ನಿ ಹಾಗೂ ಅತ್ತೆ ಸೇರಿಕೊಂಡು ಸಾಲಗಾರ ಪತಿಯನ್ನು (Husband) ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.
ಬೆಳಗಾವಿಯ ಪೀರವನಾಡಿ ನಿವಾಸಿ ವಿನಾಯಕ್ ಜಾಧವ್ (48) ಕೊಲೆಯಾದ ಪತಿ. ಜುಲೈ 29ರಂದು ರಾತ್ರಿ ಅಮ್ಮ-ಮಗಳು ಸೇರಿಕೊಂಡು ಸಾಲಗಾರ ಪತಿಯನ್ನು ಹತ್ಯೆ ಮಾಡಿದ್ದಾರೆ. ವಿನಾಯಕ್ ಜಾಧವ್ ಉದ್ಯಮಬಾಗದಲ್ಲಿ ಸ್ವಂತ ಉದ್ಯಮ ಹೊಂದಿದ್ದ. ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ವಿಪರೀತ ಸಾಲ ಮಾಡಿಕೊಂಡಿದ್ದ. ಬಳಿಕ ಸಾಲಗಾರರ ಕಾಟಕ್ಕೆ ಬೇಸತ್ತು ಮನೆಯನ್ನು ಸಾಲಕ್ಕೆ ಅಡಮಾನವಾಗಿ ಇಟ್ಟು ಜನರ ಕಿರುಕುಳಕ್ಕೆ ನೊಂದು ಬೆಳಗಾವಿ ಬಿಟ್ಟು ಮೂರು ವರ್ಷಗಳಿಂದ ಪರಾರಿಯಾಗಿದ್ದ. ಇದನ್ನೂ ಓದಿ: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್
ಜುಲೈ 29ರಂದು ವಿನಾಯಕ್ ಜಾಧವ್ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಮನೆಯಲ್ಲಿ ಪತ್ನಿ ರೇಣುಕಾ ಜೊತೆಗೆ ವಿಪರೀತ ಜಗಳ ಮಾಡಿದ್ದ. ಬಳಿಕ ಪತಿಯನ್ನು ಹಗ್ಗದಿಂದ ಕುತ್ತಿಗೆ ಕಟ್ಟಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಹತ್ಯೆಗೆ ಪತ್ನಿ ರೇಣುಕಾಗೆ ಆಕೆಯ ತಾಯಿ ಶೋಭಾ ಸಾಥ್ ನೀಡಿದ್ದರು. ಹತ್ಯೆ ಬಳಿಕ ಶವವನ್ನು ಮನೆಯ ಮುಂಭಾಗದಲ್ಲಿ ಬಿಸಾಡಿದ್ದರು. ಬೆಳಗ್ಗೆ ಅಕ್ಕಪಕ್ಕದ ಮನೆಯವರನ್ನು ಕರೆದು ಪತಿ ಮದ್ಯಪಾನ ಮಾಡಿ ಬಿದ್ದಿದ್ದಾನೆ. ಇದು ಕೊಲೆಯಲ್ಲ, ಸಹಜ ಸಾವು ಎಂದು ತಾಯಿ, ಮಗಳು ಬಿಂಬಿಸಿದ್ದರು. ಆದರೆ ವಿನಾಯಕ್ ಜಾಧವ್ ಸಹೋದರ ಅರುಣ್ ಸಾವಿನಲ್ಲಿ ಶಂಕೆ ಇದೆ ಎಂದು ದೂರು ನೀಡಿದ್ದರು. ಪೋಸ್ಟ್ ಮಾರ್ಟಮ್ ರಿಪೋರ್ಟ್ನಿಂದ ಕೊಲೆ ರಹಸ್ಯ ಬಯಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸರು ಕೊಲೆಯ ರಹಸ್ಯ ಬಯಲು ಮಾಡಿದ್ದಾರೆ. ಪ್ರಕರಣ ಸಂಬಂಧ ಪತ್ನಿ ರೇಣುಕಾ ಹಾಗೂ ಆಕೆಯ ತಾಯಿ ಶೋಭಾಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: Shivamogga Airport| 20 ದಿನಕ್ಕಷ್ಟೇ ಲೈಸೆನ್ಸ್- ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು
ಹಾಸನ: ಸಾಲಭಾದೆ (Loan) ತಾಳಲಾರದೇ ಒಂದೇ ಕುಟುಂಬದ ಮೂವರು ನಾಲೆಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯಲ್ಲಿ ನಡೆದಿದೆ.
ಶ್ರೀನಿವಾಸ್ (43), ಆತನ ಪತ್ನಿ ಶ್ವೇತಾ (36) ಹಾಗೂ ಪುತ್ರಿ ನಾಗಶ್ರೀ (13) ಮೃತ ದುರ್ದೈವಿಗಳು. ಶ್ರೀನಿವಾಸ್ ಕಾರು ಚಾಲಕನಾಗಿದ್ದು, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಪುತ್ರಿ ನಾಗಶ್ರೀ ಏಳನೇ ತರಗತಿ ಓದುತ್ತಿದ್ದಳು. ಇದನ್ನೂ ಓದಿ: 12 ವರ್ಷಗಳಲ್ಲೇ ಬೆಂಗ್ಳೂರು ಮೆಟ್ರೋದಲ್ಲಿ ದಾಖಲೆ ಪ್ರಯಾಣ
ಶ್ರೀನಿವಾಸ್ ಕೊರೊನಾ ಸಂದರ್ಭದಲ್ಲಿ ಡ್ರೈವರ್ ಕೆಲಸ ಬಿಟ್ಟು ಊರಿಗೆ ಮರಳಿದ್ದ. ಆನಂತರದಲ್ಲಿ ಕೆಲಸಕ್ಕೆ ಹೋಗದೇ ಆನ್ಲೈನ್ ರಮ್ಮಿ (Online Rummy) ಚಟಕ್ಕೆ ಬಿದ್ದು, ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲ ಮರು ಪಾವತಿಸುವಂತೆ ಸಾಲ ನೀಡಿದವರು ಪೀಡಿಸುತ್ತಿದ್ದರು. ಸಾಲ ವಾಪಾಸ್ ನೀಡಲು ಸಾಧ್ಯವಾಗದೇ ಶ್ರೀನಿವಾಸ್ ಸಂಕಷ್ಟಕ್ಕೆ ಸಿಲುಕಿದ್ದ.
ಪೊಲೀಸರು ಹುಡುಕಾಟ ನಡೆಸಿದ್ದು ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ಹೇಮಾವತಿ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಎರಡು ಮೃತದೇಹಗಳನ್ನು ಹೊರತೆಗೆದಿದ್ದು, ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಕರಣದಲ್ಲಿ ಮಲ್ಯ ಸೇರಿ ಹತ್ತು ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ವಿಜಯ್ ಮಲ್ಯಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಬಾಕಿ ಉಳಿದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ (Renuka Swamy Murder) ಮುಚ್ಚಿ ಹಾಕಲು ದರ್ಶನ್ (Darshan) ಏನೆಲ್ಲಾ ಮಾಡಲು ಯತ್ನಿಸಿದ್ದರು ಎಂಬ ಸ್ಪೋಟಕ ವಿಚಾರ ಬಯಲಾಗಿದೆ. ಮೊನ್ನೆಯಷ್ಟೇ ದರ್ಶನ್ ಮನೆಯಲ್ಲಿ 37 ಲಕ್ಷ ರೂ., ಪತ್ನಿ ವಿಜಯಲಕ್ಷ್ಮಿ ಬಳಿಯಿಂದ 3 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿತ್ತು.
ವಿಚಾರಣೆ ಮುಂದಾಗುತ್ತಿದ್ದಂತೆ ಮೋಹನ್ರಾಜ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ದರ್ಶನ್ಗೆ ಈ ಹಣ ನೀಡುವಾಗ ಮೋಹನ್ರಾಜ್ಗೆ ಕೊಲೆ ವಿಚಾರ ಗೊತ್ತಾಗಿತ್ತಾ ಇಲ್ವಾ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಒಂದೊಮ್ಮೆ ಕೊಲೆ ಪ್ರಕರಣ ಮೊದಲೇ ಗೊತ್ತಿತ್ತು ಎನ್ನುವುದಾದ್ರೆ ಮೋಹನ್ರಾಜ್ಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
ದರ್ಶನ್ ಹಣದ ವಹಿವಾಟುಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೊಲೀಸರು ಐಟಿ ಇಲಾಖೆಗೆ ಪತ್ರ ಬರೆಯಲು ಚಿಂತನೆ ನಡೆಸಿದ್ದಾರೆ.
– ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿರುವ ಆಂಧ್ರ – ಜನಪ್ರಿಯ ಯೋಜನೆ ಘೋಷಣೆ ಮಾಡಿ ಹೀನಾಯವಾಗಿ ಸೋತ ಜಗನ್
ಹೈದರಾಬಾದ್: ಚುನಾವಣೆಯಲ್ಲಿ ಹಲವು ಭರವಸೆ ನೀಡಿ ಆಂಧ್ರಪ್ರದೇಶದ (Andhra Pradesh) ಅಧಿಕಾರ ಹಿಡಿದಿರುವ ಚಂದ್ರಬಾಬು ನಾಯ್ಡು (Chandrababu Naidu) ನೇತೃತ್ವದ ತೆಲುಗು ದೇಶಂ ಪಕ್ಷ (TDP) ಈ ಭರವಸೆಯನ್ನು ಹೇಗೆ ಈಡೇರಿಸುತ್ತದೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.
ನಿರುದ್ಯೋಗಿ ಯುವಕರಿಗೆ ನಗದು ಪಾವತಿ, ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಉಚಿತ ಎಲ್ಪಿಜಿ ಸಿಲಿಂಡರ್ ಸೇರಿದಂತೆ ಹಲವು ಭರವಸೆ ಈಡೇರಿಸಲು ಸರ್ಕಾರಕ್ಕೆ ವಾರ್ಷಿಕ ಸುಮಾರು 60 ಸಾವಿರ ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಸಾಲ ಎಷ್ಟಿದೆ?
ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಸರ್ಕಾರ ಅಧಿಕಾರ ವಹಿಸಿಕೊಂಡ ನಾಲ್ಕು ವರ್ಷದಲ್ಲಿ ಆಂಧ್ರಪ್ರದೇಶದ ಒಟ್ಟು ಸಾಲವು 2023 ರ ಮಾರ್ಚ್ ಅಂತ್ಯದ ವೇಳೆಗೆ 67% ಏರಿಕೆಯಾಗಿ 4,42,442 ಕೋಟಿ ರೂ.ಗೆ ಜಿಗಿದಿದೆ. 2018-19 ರಲ್ಲಿ ರಾಜ್ಯದ ಒಟ್ಟು ವಿತ್ತೀಯ ಕೊರತೆಯು 35,441 ಕೋಟಿ ರೂ. ಇದ್ದರೆ ಮಾರ್ಚ್ 31, 2024 ಕ್ಕೆ ಇದು 57% ಏರಿಕೆಯಾಗಿ 55,817.50 ಕೋಟಿ ರೂ. ತಲುಪಿದೆ.
ಆಡಳಿತದ ವಿಕೇಂದ್ರಿಕರಣ ಮಾಡಲು ಆಂಧ್ರಕ್ಕೆ ಮೂರು ರಾಜಧಾನಿ ಮಾಡಲು ಜಗನ್ ಮುಂದಾಗಿದ್ದರೆ ಚಂದ್ರಬಾಬು ನಾಯ್ಡು ಅಮರಾವತಿಯನ್ನೇ ರಾಜಧಾನಿ ಮಾಡಲು ಮುಂದಾಗಿದ್ದರು. ಜಗನ್ ಸರ್ಕಾರ ಅಧಿಕಾರಕ್ಕೆ ಏರಿದ ಬಳಿಕ ಅಮರಾವತಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಯಾಗಿರಲಿಲ್ಲ. ಆದರೆ ಈಗ ಚಂದ್ರಬಾಬು ನಾಯ್ಡು ಮರಳಿ ಮುಖ್ಯಮಂತ್ರಿಯಾಗಿರುವ ಕಾರಣ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದರೆ ಸಾಲ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಸೂಪರ್ ಸಿಕ್ಸ್ ಘೋಷಣೆಗಳು:
ಕರ್ನಾಟಕದಲ್ಲಿ ಕಾಂಗ್ರೆಸ್ ಹೇಗೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತ್ತೋ ಅದೇ ಮಾದರಿಯಲ್ಲಿ ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ʼಸೂಪರ್ ಸಿಕ್ಸ್ ಗ್ಯಾರಂಟಿʼ ಹೆಸರಿನಲ್ಲಿ ಘೋಷಣೆ ಪ್ರಕಟಿಸಿದ್ದರು. ಪ್ರತಿ ತಿಂಗಳು ನಿರುದ್ಯೋಗಿಗಳಿಗೆ 3000 ರೂ. ನಿರುದ್ಯೋಗ ಭತ್ಯೆ, ಶಾಲೆಗೆ ತೆರಳು ಪ್ರತಿ ಮಗುವಿಗೆ ವರ್ಷಕ್ಕೆ 15,000 ರೂ., ಪ್ರತಿ ರೈತರಿಗೆ ವಾರ್ಷಿಕ 20,000 ರೂ., ಸರ್ಕಾರದಿಂದ ಪ್ರತಿ ಮನೆಗೆ ವರ್ಷಕ್ಕೆ 3 ಗ್ಯಾಸ್ ಸಿಲಿಂಡರ್ ಉಚಿತ, 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೆ ತಿಂಗಳಿಗೆ 1,500 ರೂ., ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಗಳನ್ನು ಟಿಡಿಪಿ ಘೋಷಣೆ ಮಾಡಿತ್ತು.
ಕೇಂದ್ರದ ಅನುದಾನ ಸಿಗುತ್ತಾ?
ಟಿಡಿಪಿ ತನ್ನ ಮೈತ್ರಿಪಕ್ಷವಾಗಿರುವ ಕಾರಣ ಕೇಂದ್ರದಲ್ಲಿರುವ ಎನ್ಡಿಎ ಸರ್ಕಾರದ ಅನುದಾನದ ಮೇಲೆ ಚಂದ್ರಬಾಬು ನಾಯ್ಡ ಗಮನ ಕೇಂದ್ರಿಕರಿಸಿದ್ದಾರೆ. ಕೇಂದ್ರದ ವಿಶೇಷ ಅನುದಾನ ಪ್ರಕಟಿಸಿದರೆ ಈ ಯೋಜನೆಗಳನ್ನು ಈಡೇರಿಸಲು ಸ್ವಲ್ಪ ನೆರವಾಗಬಹುದು. ಆದರೆ ಆಂಧ್ರಪ್ರದೇಶಕ್ಕೆ ವಿಶೇಷ ಅನುದಾನ ನೀಡಿದರೆ ಬೇರೆ ರಾಜ್ಯಗಳು ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ ಮೊರೆ ಹೋಗಬಹುದು. ಹೀಗಾಗಿ ಘೋಷಣೆ ಮಾಡಿದ ಭರವಸೆ ಈಡೇರಿಕೆಗೆ ಟಿಡಿಪಿ ಹಣ ಎಲ್ಲಿಂದ ತರುತ್ತದೆ ಎನ್ನುವುದು ದೊಡ್ಡ ಪ್ರಶ್ನೆ
ಈ ಬಾರಿ ಒಟ್ಟು 175 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಟಿಡಿಪಿ 135, ಜನಸೇನಾ 21, ವೈಎಸ್ಆರ್ಸಿಪಿ 11, ಬಿಜೆಪಿ 8 ಸ್ಥಾನಗಳನ್ನು ಗೆದ್ದುಕೊಂಡಿತ್ತು. 2019ರ ಚುನಾವಣೆಯಲ್ಲಿ ಜಗನ್ ಸರ್ಕಾರ ಬಹಳಷ್ಟು ಸೊಷಿಯಲಿಸ್ಟ್, ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡಿದ್ದ ಪರಿಣಾಮ ವೈಎಸ್ಅರ್ಸಿಪಿ ಕಾಂಗ್ರೆಸ್ 151, ಟಿಡಿಪಿ 23, ಜನಸೇನಾ 1 ಸ್ಥಾನವನ್ನು ಗೆದ್ದುಕೊಂಡಿತ್ತು.
ಬೆಂಗಳೂರು: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಯುವತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮೋನಿಕಾ (24) ಬಂಧಿತ ಆರೋಪಿ. ಮೇ 10 ರಂದು ಕೆಂಗೇರಿ (Woman Murder Case Kengeri) ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿತ್ತು.
ಪ್ರಕರಣದ ವಿವರ: ಕಂಪನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡಿದ್ದ ಮೋನಿಕಾ ಮೂಲತಃ ಕೋಲಾರ ಜಿಲ್ಲೆಯವಳಾಗಿದ್ದು, ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಈ ವೇಳೆ ಆಕೆ ಪ್ರಿಯಕರನನ್ನೇ ತನ್ನ ಗಂಡ ಎಂದು ಹೇಳಿ ಬಾಡಿಗೆ ಮನೆ ಗಿಟ್ಟಿಸಿದ್ದಳು. ಆದ್ರೆ ಒಬ್ಬಂಟಿಯಾಗಿ ವಾಸವಿದ್ದ ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ. ಇದನ್ನೂ ಓದಿ: ಭಾಗಮಂಡಲ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ – ಗ್ರಾಮಗಳಿಗೆ ನೆರೆ ಭೀತಿ ಇಲ್ಲ
ಇತ್ತ ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳು. ಜೊತೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಲು ಹಣ ಬೇಕಾಗಿತ್ತು. ಹೀಗಾಗಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಮೋನಿಕಾ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗಾದ್ರೆ ಕೆಲಸಕ್ಕೆ ಹೋಗುತ್ತಿದ್ದರು.
ದಿವ್ಯಾ ಹಾಗೂ ಆಕೆಯ 2 ವರ್ಷದ ಮಗು ಮಾತ್ರ ಮನೆಯಲ್ಲಿರುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದು ಕುತ್ತಿಗೆ ಹಿಸುಕಿ ಮೋನಿಕಾ ಕೊಲೆ ಮಾಡಿದ್ದಳು. ಕೊಲೆ ಮಾಡಿ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರ ಕಸಿದುಕೊಂಡುತ್ತಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದರು.
– ವಿದೇಶಗಳಿಂದ ಆರ್ಥಿಕ ಸಹಾಯ ಪಡೆಯುವುದನ್ನು ನಿಲ್ಲಿಸಿ – ಪ್ರವಾಸೋದ್ಯಮಕ್ಕೆ ಪೂರಕವಾಗಿರುವ ಯೋಜನೆಗಳನ್ನು ಕೂಡಲೇ ರೂಪಿಸಿ
ಮಾಲೆ: ಭಾರತದೊಂದಿಗೆ (India) ಕಿತ್ತಾಟ ನಡೆಸಿ ಚೀನಾಗೆ (China) ಹತ್ತಿರವಾಗಿರುವ ಮಾಲ್ಡೀವ್ಸ್ (Maldives) ಈಗ ಸಾಲದ ಸುಳಿಯಲ್ಲಿ (Debt Distress) ಸಿಲುಕಿದೆ. ಈಗ ಚೀನಾದಿಂದ ಮತ್ತಷ್ಟು ಸಾಲ ಪಡೆಯಲು ಮುಂದಾಗಿರುವ ಮಾಲ್ಡೀವ್ಸ್ಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಮತ್ತೊಮ್ಮೆ ಎಚ್ಚರಿಕೆ ನೀಡಿದೆ.
ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಮಾಲ್ಡೀವ್ಸ್ ಕೂಡಲೇ ತನ್ನ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರ ವೆಚ್ಚವನ್ನು ಕಡಿತ ಮಾಡಬೇಕು ಮತ್ತು ಹೊರ ದೇಶಗಳಿಂದ ಆರ್ಥಿಕ ಸಹಾಯ ಪಡೆಯುವುದನ್ನು ಕಡಿಮೆ ಮಾಡಬೇಕು ಎಂದು ಸೂಚಿಸಿದೆ.
ಸಾಲದ ಸುಳಿಯಲ್ಲಿ ಸಿಲುಕಿರುವ ಮಾಲ್ಡೀವ್ಸ್ ಆರ್ಥಿಕತೆ ಕುಸಿಯುವ ಲಕ್ಷಣಗಳು ಕಾಣಿಸುತ್ತಿವೆ. ಸಾಲದ ಜೊತೆಗೆ ಆದಾಯ ವೃದ್ಧಿಸುವ ಯಾವುದೇ ಯೋಜನೆಗಳನ್ನು ಸರ್ಕಾರ ಕೈಗೊಂಡಿಲ್ಲ. ಹೀಗಾಗಿ ರಾಷ್ಟ್ರದ ಪ್ರಮುಖ ಆದಾಯದ ಮೂಲವಾಗಿರುವ ಪ್ರವಾಸೋದ್ಯಮಕ್ಕೆ (Tourism) ಪೂರಕವಾಗಿರುವ ಯೋಜನೆಗಳನ್ನು ಕೂಡಲೇ ರೂಪಿಸಬೇಕು ಎಂದು ಐಎಂಎಫ್ ಹೇಳಿದೆ. ಇದನ್ನೂ ಓದಿ: ಇಂದು ರಾಜ್ಯದ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ
ಕಳೆದ ವರ್ಷ ಅಂತ್ಯಕ್ಕೆ ಮಾಲ್ಡೀವ್ಸ್ ವಿದೇಶಗಳಿಂದ 4.038 ಬಿಲಿಯನ್ ಡಾಲರ್ (ಅಂದಾಜು 33.71 ಸಾವಿರ ಕೋಟಿ ರೂ.) ಸಾಲ ಪಡೆದಿದೆ. ಇದು ಮಾಲ್ಡೀವ್ಸ್ ಜಿಡಿಪಿಗಿಂತ 118%ರಷ್ಟು ಹೆಚ್ಚಿದೆ. ಈ ಪೈಕಿ 25% ರಷ್ಟು ಸಾಲವನ್ನು ಚೀನಾದ ಎಕ್ಸ್ಪೋರ್ಟ್-ಇಂಪೋರ್ಟ್ ಬ್ಯಾಂಕ್ನಿಂದಲೇ ಪಡೆದಿದೆ.
ಭಾರತ ವಿರೋಧಿಯಾಗಿರುವ ಮೊಹಮ್ಮದ್ ಮುಯಿಜು ಅಧ್ಯಕ್ಷರಾದ ಬಳಿಕ ಚೀನಾಗೆ ಭೇಟಿ ನೀಡಿ ಸಹಾಯ ಪಡೆದ್ದರು. ಚುನಾವಣಾ ಪ್ರಚಾರದಲ್ಲಿ ಮಾಲ್ಡೀವ್ಸ್ನಲ್ಲಿರುವ ಭಾರತದ ಸೈನಿಕರನ್ನು ಹೊರ ಹಾಕುವುದಾಗಿ ಘೋಷಿಸಿದ್ದರು. ಅದರಂತೆ ಭಾರತದ ಸೈನಿಕರು ಈಗ ಮಾಲ್ಡೀವ್ಸ್ ತೊರೆದಿದ್ದು ಚೀನಾ ಈಗ ರಕ್ಷಣಾ ಸಹಾಯ ಒದಗಿಸುವುದಾಗಿ ಹೇಳಿದೆ. ಇದನ್ನೂ ಓದಿ: ಚೀನಾದ ತಾಳಕ್ಕೆ ಕುಣಿಯುತ್ತಿದ್ದರೂ ಮಾನವೀಯ ನೆರವು – ಭಾರತದ ಸಹಾಯಕ್ಕೆ ಧನ್ಯವಾದ ಹೇಳಿದ ಮಾಲ್ಡೀವ್ಸ್
ಚೀನಾದಿಂದ ಭಾರೀ ಹೂಡಿಕೆ
ಮಾಲ್ಡೀವ್ಸ್ನ ಐದಕ್ಕೂ ಹೆಚ್ಚು ದ್ವೀಪಗಳನ್ನು ಚೀನಾದ ಕಂಪನಿಗಳು 50 ವರ್ಷಗಳಿಗೆ ಗುತ್ತಿಗೆ ಪಡೆದಿವೆ. ಮಾಲೆ ಸಮುದ್ರ ಸೇತುವೆ ಅಭಿವೃದ್ಧಿ ಯೋಜನೆಯ ವೆಚ್ಚದ 50% ರಷ್ಟು ಹಣವನ್ನು ಚೀನಾವೇ ಭರಿಸಿದೆ. ಅಷ್ಟೇ ಅಲ್ಲದೇ 50% ರಷ್ಟು ವೆಚ್ಚವನ್ನು ಸಾಲದ ರೂಪದಲ್ಲಿ ನೀಡಿದೆ. ಚೀನಾ -ಮಾಲ್ಡೀವ್ಸ್ ಸ್ನೇಹ ಸೇತುವೆ, ವಿಮಾನ ನಿಲ್ದಾಣ ನವೀಕರಣ, ಮನೆಗಳ ನಿರ್ಮಾಣ ಸೇರಿದಂತೆ ಹಲವು ಮೂಲಸೌಕರ್ಯ ಯೋಜನೆಗಳಿಗೆ ಚೀನಾ ಸರ್ಕಾರ ಬಿಲಿಯನ್ಗಟ್ಟಲೇ ಡಾಲರ್ ಹಣವನ್ನು ಹೂಡಿಕೆ ಮಾಡಿದೆ. ಮಾಲ್ಡೀವ್ಸ್ ಮತ್ತು ಚೀನಾದ ಸಂಬಂಧ ಈಗ ಆರಂಭವಾಗಿದ್ದಲ್ಲ. 1975 ರಿಂದಲೇ ಚೀನಾ ಮಾಲ್ಡೀವ್ಸ್ನಲ್ಲಿ ಹೂಡಿಕೆ ಮಾಡಲು ಆರಂಭಿಸಿತ್ತು.
ಏನಿದು ಚೀನಾದ ಕುತಂತ್ರ?
ವ್ಯಾಪಾರ ಮಾರುಕಟ್ಟೆಯನ್ನು ವಿಸ್ತರಿಸುವ ನೆಪದಲ್ಲಿ ಆರಂಭಿಸಿರುವ ಒನ್ ಬೆಲ್ಟ್ ಒನ್ ರೋಡ್ ಯೋಜನೆ ಮೂಲಕ ಚೀನಾ ಇಡೀ ವಿಶ್ವವನ್ನೇ ಆಳಲು ಹೊರಟಿದೆ. ಈ ಯೋಜನೆಗೆ ಈಗ 10 ವರ್ಷ ಪೂರ್ಣಗೊಂಡಿದೆ. ಸರಳವಾಗಿ ಹೇಳುವುದಾರೆ ರಸ್ತೆ, ರೈಲು, ಹಡಗಿನ ಮೂಲಕ ವಸ್ತುಗಳನ್ನು ಸಾಗಿಸಲು ಆರಂಭವಾದ ಯೋಜನೆ ಇದು. ರಷ್ಯಾ, ಸೌದಿ ಅರೇಬಿಯಾ, ಕತಾರ್, ಇರಾನ್, ಅರ್ಜೈಂಟಿನಾ, ದಕ್ಷಿಣ ಆಫ್ರಿಕಾ, ದಕ್ಷಿಣ ಕೊರಿಯಾ ಸೇರಿದಂತೆ ಬರೋಬ್ಬರಿ 150 ದೇಶಗಳು ಈ ಯೋಜನೆಗೆ ಸಹಿ ಹಾಕಿದೆ.
ಯೋಜನೆಯನ್ನು ಸರಳವಾಗಿ ವಿವರಿಸುವುದಾರೆ ಹಿಂದುಳಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಚೀನಾ ಭಾರೀ ದೊಡ್ಡ ಮೊತ್ತದ ಯೋಜನೆಯನ್ನು ಕೈಗೊಳ್ಳುತ್ತದೆ. ಈ ಯೋಜನೆಗೆ ಅರ್ಧದಷ್ಟು ಹಣವನ್ನು ಚೀನಾ ಹೂಡಿಕೆ ಮಾಡಿದರೆ ಉಳಿದ ಅರ್ಧ ಹಣವನ್ನು ಆ ದೇಶಗಳು ಹೂಡಿಕೆ ಮಾಡಬೇಕು. ಆ ದೇಶಗಳಿಗೆ ಹಣ ಹೂಡಿಕೆ ಮಾಡಲು ಶಕ್ತಿ ಇಲ್ಲದ ಕಾರಣ ಚೀನಾದ ಬ್ಯಾಂಕ್ಗಳೇ ದೇಶಗಳಿಗೆ ಸಾಲ ನೀಡುತ್ತದೆ. ಸಾಲ ಪಾವತಿ ಆಗದೇ ಇದ್ದಾಗ ಯೋಜನೆಯನ್ನೇ ಚೀನಾ ಸಂಪೂರ್ಣ ಸ್ವಾಧೀನಪಡಿಸಿಕೊಳ್ಳುತ್ತದೆ. ಚೀನಾ -ಪಾಕಿಸ್ತಾನ ಎಕಾನಮಿಕ್ ಕಾರಿಡಾರ್ ಹೆಸರಿನಲ್ಲಿ ಪಾಕ್ ಸಾಲ ಪಡೆದುಕೊಂಡಿತ್ತು ಸದ್ಯ ಅಂದಾಜು 30 ಬಿಲಿಯನ್ ಡಾಲರ್ ಹಣವನ್ನು ಪಾಕಿಸ್ತಾನ ಚೀನಾಗೆ ಪಾವತಿ ಮಾಡಬೇಕಿದೆ. ಚೀನಾ ಹಣವನ್ನು ಪಾವತಿ ಮಾಡಲು ಕನಿಷ್ಟ 40 ವರ್ಷ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಶ್ರೀಲಂಕಾದ ಹಂಬನ್ತೋಟ ಬಂದರನ್ನು ಚೀನಾ ಸಹಕಾರದಿಂದ ಅಭಿವೃದ್ಧಿ ಪಡಿಸಲಾಗಿದೆ. ಅಭಿವೃದ್ಧಿ ಪಡಿಸಿದರೂ ನಿರೀಕ್ಷಿತ ಪ್ರಮಾಣದ ಲಾಭವಾಗಿಲ್ಲ. ಸಾಲ ಮರುಪಾವತಿ ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ 2017ರಲ್ಲಿ 99 ವರ್ಷಗಳ ಕಾಲ ಚೀನಾದ ಚೀನಾ ಮರ್ಚಂಟ್ ಪೋರ್ಟ್ ಹೋಲ್ಡಿಂಗ್ಗೆ ಲೀಸ್ಗೆ ನೀಡಲಾಗಿದೆ.
ಪಾಕಿಸ್ತಾನ, ಶ್ರೀಲಂಕಾ ಮಾತ್ರವಲ್ಲ ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡ, ಮಲೇಷ್ಯಾ ಸೇರಿದಂತೆ ಹಲವು ದೇಶಗಳು ಸಾಲದ ಸುಳಿಯಲ್ಲಿ ಸಿಲುಕಿವೆ. ಈ ಕಾರಣಕ್ಕೆ ಚೀನಾದ ಒನ್ ರೋಡ್, ಒನ್ ಬೆಲ್ಟ್ ಈಗ ಡೆಟ್ ಟ್ರ್ಯಾಪ್ ಡಿಪ್ಲೊಮಸಿ ಎಂದೇ ಎಂದೇ ಕುಖ್ಯಾತಿ ಪಡೆದಿದೆ.
ರಾಯಚೂರು: ಜಿಲ್ಲೆಯ ಮಾನ್ವಿ (Manvi) ಪಟ್ಟಣದಲ್ಲಿ ಮದ್ಯದಂಗಡಿಯಲ್ಲಿ (Bar) ಎಣ್ಣೆ ಸಾಲ (Debt) ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬಾರ್ ಶಾಪ್ ಮಾಲೀಕ ಮಲ್ಲಿಕಾರ್ಜುನಗೌಡರ ಮೇಲೆ ಸ್ಥಳೀಯ ನಿವಾಸಿ ಚಾಂದ್ ಎಂಬಾತನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.
ಹಲ್ಲೆ ದೃಶ್ಯಗಳು ಬಾರ್ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಪದೇ ಪದೇ ಬಾರ್ ಶಾಪ್ನಲ್ಲಿ ಸಾಲ ಕೇಳುತ್ತಿದ್ದ ಆರೋಪಿ ಚಾಂದ್ಗೆ ಮದ್ಯದಂಗಡಿ ಮಾಲೀಕ ಸಾಲ ಕೊಡಲ್ಲ ಎಂದಿದ್ದಕ್ಕೆ ಕಿರಿಕ್ ಮಾಡಿ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾಗಿರೋ ಮಲ್ಲಿಕಾರ್ಜುನಗೌಡ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ನನ್ನ ವಿರುದ್ಧ ರಾಘವೇಂದ್ರ ಷಡ್ಯಂತ್ರ – ಬಂಧಿಸುವಂತೆ ಈಶ್ವರಪ್ಪ ದೂರು
ಮೇ 9 ರಂದು ನಡೆದಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಚಾಂದ್ ವಿರುದ್ಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಜೈಲಿನಿಂದ ಹೊರಬರುತ್ತಿದ್ದಂತೆ ರೇವಣ್ಣ ದೇಗುಲ ಯಾತ್ರೆ!
ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ (Suicide) ಶರಣಾದ ಘಟನೆ ಬೆಂಗಳೂರಿನ (Bengaluru) ಜೆಪಿ ನಗರದ (JP Nagar) ಮೂರನೇ ಹಂತದಲ್ಲಿ ನಡೆದಿದೆ.
ಉಡುಪಿ (Udupi) ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್ ಮತ್ತು ನಿಶ್ಚಿತ್ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಕಾಂಗ್ರೆಸ್ 2ನೇ ಪಟ್ಟಿ ಇಂದು ಬಿಡುಗಡೆ – ಸಂಭಾವ್ಯ ಅಭ್ಯರ್ಥಿಗಳು ಯಾರು?
ಸುಕನ್ಯಾ ಪತಿ ಜಯಾನಂದ್ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್ನಿಂದ (Covid 19) ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್ ಫ್ಯಾಕ್ಟರಿ ಬಂದ್ ಮಾಡಿದ್ದರು. ಜಯಾನಂದ್ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದರು. ಇದನ್ನೂ ಓದಿ: ಪಾಕಿಸ್ತಾನ ಸೂಪರ್ ಲೀಗ್ಗಿಂತಲೂ ನಮ್ಮ ಹೆಣ್ಮಕ್ಕಳ ಟೂರ್ನಿಯೇ ಹೆಚ್ಚು ಶ್ರೀಮಂತ
ವ್ಯವಹಾರ (Business) ನಷ್ಟವಾಗಿದ್ದರಿಂದ ಜಯಾನಂದ್ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.
ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.
ಬೆಳಗಾವಿ: ರಾಜ್ಯದ ರೈತರಿಗೆ (Farmers) ಸರ್ಕಾರ ಗುಡ್ನ್ಯೂಸ್ ನೀಡಿದ್ದು ಸಹಕಾರಿ ಸಾಲದ (Cooperative Bank Loans) ಮೇಲಿನ ಬಡ್ಡಿಯನ್ನು (Interest) ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ.
ಮಧ್ಯಮ ಅವಧಿ, ದೀರ್ಘಾವಧಿ ಸಾಲ ಕಟ್ಟಿದರೆ ಅದರ ಮೇಲಿನ ಬಡ್ಡಿಯನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು ಎದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರದ ಬಡ್ಡಿ ಮನ್ನಾ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದ ರೈತರಿಗೆ ಮಾತ್ರ ಅನ್ವಯವಾಗುತ್ತದೆ. ಇದನ್ನೂ ಓದಿ: ಈ ಯತ್ನಾಳ್ ಪೆದ್ದ ಜಾಣ: ಬಿಜೆಪಿ ನಾಯಕರ ಕಾಲೆಳೆದ ಸಿದ್ದರಾಮಯ್ಯ
ಸಿದ್ದರಾಮಯ್ಯ ಹೇಳಿದ್ದೇನು?
ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ.
ಬಿಜೆಪಿಯವರು 2018 ರ ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರಿಕೃತ ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ. ಯಡಿಯೂರಪ್ಪನವರು 2019 ರ ಆಗಸ್ಟ್ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? “ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಹೇಳಿದ್ದರು. ಇದನ್ನೂ ಓದಿ: ಪ್ರತಾಪ್ ಸಿಂಹ ಭಯೋತ್ಪಾದಕ – ಮೈಸೂರು ಮಹಾರಾಜ ವೃತ್ತ ಬಳಿ ಫ್ಲೆಕ್ಸ್
ಯಡಿಯೂರಪ್ಪನವರು ಈ ರೀತಿ ಹೇಳಿದ್ದು ಇದೇ ಮೊದಲಲ್ಲ. 2009 ರಲ್ಲಿ ವಿಧಾನಪರಿಷತ್ತಿನಲ್ಲಿ ನಮ್ಮ ವಿರೋಧ ಪಕ್ಷದ ನಾಯಕರಾಗಿದ್ದ ವಿ ಎಸ್ ಉಗ್ರಪ್ಪ ಮುಂತಾದ ನಮ್ಮ ಪಕ್ಷದವರು ಸಾಲ ಮನ್ನಾ ಮಾಡಿ ಎಂದು ಆಗ್ರಹಿಸಿದ್ದಾಗಲೂ ಯಡಿಯೂರಪ್ಪನವರು ಇದೇ ಮಾತುಗಳನ್ನಾಡಿದ್ದರು.
“ಮತಕ್ಕಾಗಿ ಇತರ ಪಕ್ಷಗಳವರು ಹೇಳಿದಂತೆ ನಾನು ಕೂಡ ರೈತರ ಕೃಷಿ ಮನ್ನಾ ಮಾಡುತ್ತೇನೆಂದು ಚುನಾವಣೆಯ ಸಂದರ್ಭದಲ್ಲಿ ಆಶ್ವಾಸನೆ ನೀಡಿದ್ದೆ. ಆದರೆ ಇದು ಸಾಧ್ಯವಿಲ್ಲ ಎಂಬುದು ಈಗ ಅರ್ಥವಾಗುತ್ತಿದೆ, ಸಾಲ ಮನ್ನಾ ಮಾಡಲು ಹಣ ಎಲ್ಲಿದೆ?” ಎಂದು ವಿರೋಧ ಪಕ್ಷದ ಸದಸ್ಯರನ್ನೇ ಯಡಿಯೂರಪ್ಪ ಪ್ರಶ್ನಿಸಿದ್ದರು. “ರೈತರ ಸಾಲ ಮನ್ನಾ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ಬೊಕ್ಕಸದಲ್ಲಿ ಹಣದ ಕೊರತೆ ಇದೆ. ಆದುದರಿಂದ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ” ಎಂದಿದ್ದರು ಜೊತೆಗೆ “ವಿಧಾನಸೌಧದಲ್ಲಿ ಕೂತು ನಾನು ನೋಟ್ ಪ್ರಿಂಟ್ ಮಾಡುತ್ತಿಲ್ಲ” ಎಂದು ಉತ್ತರ ಹೇಳಿದ್ದರು.