Tag: ಸಾಲ

  • KMDC ಸಾಲ ವಸೂಲಾತಿ 50% ಪ್ರಗತಿ ತೋರಿಸಲು ಸಚಿವ ಜಮೀರ್ ಟಾರ್ಗೆಟ್!

    KMDC ಸಾಲ ವಸೂಲಾತಿ 50% ಪ್ರಗತಿ ತೋರಿಸಲು ಸಚಿವ ಜಮೀರ್ ಟಾರ್ಗೆಟ್!

    ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ನೀಡಿರುವ ಸಾಲ ವಸೂಲಾತಿ (Loan Recovery) ಪ್ರಸಕ್ತ ವರ್ಷ 50% ಪ್ರಗತಿ ಸಾಧಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಟಾರ್ಗೆಟ್ ನೀಡಿದ್ದಾರೆ.

    KMDC ಭವನದಲ್ಲಿ ಗುರುವಾರ ನಿರ್ದೇಶಕ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಸಾಲ ವಸೂಲಾತಿಯಲ್ಲಿ ಕಳಪೆ ಪ್ರದರ್ಶನದ ತೋರಿದ ಹಿನ್ನೆಲೆಯಲ್ಲಿ ಜಿಲ್ಲೆಯ ಅಧಿಕಾರಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಈ ವರ್ಷ 50% ವಸೂಲಾತಿ ಆಗಲೇಬೇಕು ಎಂದು ನಿರ್ದೇಶನ ನೀಡಿದರು. ಇದನ್ನೂ ಓದಿ: Chandrayaan-3: ಚಂದ್ರನ ಅಂಗಳದಲ್ಲಿ 3ನೇ ಹೆಜ್ಜೆ ಇಡಲು ಕ್ಷಣಗಣನೆ; ಚಂದ್ರಯಾನ-1, 2 ಕ್ಕೆ ಹೋಲಿಸಿದ್ರೆ ಚಂದ್ರಯಾನ-3 ಹೇಗೆ ಭಿನ್ನ?

    ಶೈಕ್ಷಣಿಕ, ಉದ್ದಿಮೆ, ಸ್ವಾವಲಂಬಿ ಯೋಜನೆ ಸೇರಿ ನಿಗಮ ನೀಡಿರುವ ಸಾಲದ ಪೈಕಿ 582 ಕೋಟಿ ರೂ. ವಸೂಲಾತಿ ಆಗಬೇಕಿದೆ. ವಸೂಲಾತಿ ಪ್ರಮಾಣ 2021 ರಲ್ಲಿ 15%, 2022 ರಲ್ಲಿ 25% ಇದೆ. 2023-24 ರಲ್ಲಿ 50% ಗುರಿ ಸಾಧಿಸಬೇಕು ಎಂದು ಸೂಚನೆ ನೀಡಿದರು. ಇದನ್ನೂ ಓದಿ: 26/11 ರಂತೆ ಮತ್ತೊಂದು ಭಯೋತ್ಪಾದನಾ ದಾಳಿಗೆ ಸಿದ್ಧರಾಗಿ- ಮುಂಬೈ ಪೊಲೀಸ್ರಿಗೆ ಬೆದರಿಕೆ ಕರೆ

    ಕಲಬುರಗಿ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಬೆಂಗಳೂರು ಕೇಂದ್ರ ಜಿಲ್ಲೆಗಳಲ್ಲಿ ಸಾಲ ವಸೂಲಾತಿ ಪ್ರಮಾಣ ಕೇವಲ ಶೇ.1.36 ರಿಂದ 2.64 ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, ಅಧಿಕಾರಿಗಳು ಏನು ಮಾಡುತ್ತಿದ್ದಾರೆ, ಅದಕ್ಕಾಗಿ ವೇತನ, ಸೌಲಭ್ಯ ನೀಡಬೇಕೆ ಎಂದು ಪ್ರೆಶ್ನೆ ಮಾಡಿದರು. ಜಿಲ್ಲಾ ವ್ಯವಸ್ಥಾಪಕರು ಹಾಗೂ ವಸೂಲಾತಿ ಅಧಿಕಾರಿಗಳ ಸಭೆ ಇದೇ ತಿಂಗಳು 25 ರಂದು ಕರೆಯುವಂತೆ ಸೂಚಿಸಿದರು. ಇನ್ಮುಂದೆ ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ಸಭೆ ನಡೆಸುತ್ತೇನೆ ಎಂದು ಹೇಳಿದರು.

    ಸಾಲ ಮರು ಪಾವತಿ ವಿಚಾರದಲ್ಲಿ ಒನ್ ಟೈಮ್ ಸೆಟ್ಲ್ ಮೆಂಟ್ ಯೋಜನೆ ಬಗ್ಗೆ ಪ್ರಸ್ತಾವನೆ ಸಿದ್ದಪಡಿಸಿ, ಸಾಲ ಮರುಪಾವತಿ ಸರಿಯಾಗಿ ಮಾಡುವವರಿಗೆ ಪ್ರಸಂಶನಾ ಪ್ರಮಾಣ ಪತ್ರ ನೀಡಿ ಮತ್ತೆ ಹೊಸದಾಗಿ ಸಾಲ ನೀಡುವ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು. ಸಾಲ ವಸೂಲಾತಿಗಾಗಿ ಅಭಿಯಾನ ಆರಂಭಿಸಿ ಅದಕ್ಕಾಗಿ ವಾಹನ ವ್ಯವಸ್ಥೆ ಮಾಡಿಕೊಳ್ಳಲು ಅನುಮತಿ ನೀಡಿದರು.

    ಅಧಿಕಾರಿಗಳಿಗೆ ತೀವ್ರ ತರಾಟೆ:
    2016-17ನೇ ಸಾಲಿನಿಂದ ಕೇಂದ್ರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆಗಳನ್ನ ರಾಜ್ಯದಲ್ಲಿ ಪಡೆಯದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ತಕ್ಷಣದಿಂದ ಪ್ರಾರಂಭ ಮಾಡಲು ಸೂಚಿಸಿದರು. ಶಿಕ್ಷಣ ಹಾಗೂ ಉದ್ದಿಮೆಗೆ ಎನ್‌ಎಂಡಿಸಿಯಿಂದ ವರ್ಷಕ್ಕೆ 10 ಕೋಟಿ ರೂ. ವರೆಗೆ ಸಾಲ ದೊರೆಯಲಿದ್ದು ರಾಜ್ಯದ ವಿದ್ಯಾರ್ಥಿ, ಯುವ ಉದ್ಯಮಿಗಳಿಗೆ ನೆರ ವಾಗಲಿದೆ. ಇಷ್ಟು ವರ್ಷ ಕೇಂದ್ರದ ಯೋಜನೆ ಯಾಕೆ ಪಡೆಯಲಿಲ್ಲ ಎಂದು ಪ್ರೆಶ್ನೆ ಮಾಡಿದರು.

    ಇದೇ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಸಾಲ ಹಾಗೂ ಕಂತು ಮರುಪಾವತಿ ವ್ಯವಸ್ಥೆಗೆ ಸಚಿವರು ಚಾಲನೆ ನೀಡಿದರು. ನಿಗಮದ ಯೋಜನೆಗಳ ಬಗ್ಗೆ ಒನ್ ಟೈಮ್ ಸೆಟ್ಲ್ ಮೆಂಟ್, ಸಾಲ ವಸೂಲಾತಿಅಭಿಯಾನ ಬಗ್ಗೆ ವ್ಯಾಪಕ ಪ್ರಚಾರ ನೀಡಲು ನಿರ್ದೇಶನ ನೀಡಿದರು. ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ನಜೀರ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಹುಬಲಿ ಚಿತ್ರಕ್ಕಾಗಿ ನಿರ್ದೇಶಕ ರಾಜಮೌಳಿ ತಂದಿದ್ದರಂತೆ ₹400 ಕೋಟಿ ಸಾಲ ಬಡ್ಡಿಗೆ

    ಬಾಹುಬಲಿ ಚಿತ್ರಕ್ಕಾಗಿ ನಿರ್ದೇಶಕ ರಾಜಮೌಳಿ ತಂದಿದ್ದರಂತೆ ₹400 ಕೋಟಿ ಸಾಲ ಬಡ್ಡಿಗೆ

    ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ‘ಬಾಹುಬಲಿ’ (Baahubali) ಚಿತ್ರಗಳು ಇತಿಹಾಸ ಬರೆದಿವೆ. ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಬಾಚಿವೆ. ಬಾಹುಬಲಿ 1 ಮತ್ತು ಬಾಹುಬಲಿ 2 ಮಾಡಿದ ದಾಖಲೆ ಅಷ್ಟಿಷ್ಟಲ್ಲ. ಒಂದು ವೇಳೆ ಈ ಸಿನಿಮಾ ಸೋತಿದ್ದರೆ ನಿರ್ದೇಶಕ ರಾಜಮೌಳಿ ಯಾವ ಸ್ಥಿತಿಯಲ್ಲಿ ಇರುತ್ತಿದ್ದರು ಎನ್ನುವ ಅಂದಾಜನ್ನು ನಟ ರಾಣಾ ದುಗ್ಗುಬಾಟಿ ಬಿಚ್ಚಿಟ್ಟಿದ್ದಾರೆ. ಬಹುಶಃ ಆ ನೋವಿನಿಂದ ಈಗಲೂ ರಾಜಮೌಳಿ (Rajamouli) ಬರುವುದಕ್ಕೆ ಅಸಾಧ್ಯವಾಗಿರುತ್ತಿತ್ತು ಎಂದು ಅವರು ಹೇಳಿದ್ದಾರೆ.

    ಮಾಧ್ಯಮವೊಂದರ ಸಂವಾದಲ್ಲಿ ಮಾತನಾಡಿರುವ ದಗ್ಗುಬಾಟಿ (Rana Daggubati), ‘ಬಾಹುಬಲಿ ಚಿತ್ರ ಮಾಡಲು ರಾಜಮೌಳಿ ಹೆಚ್ಚಿನ ಮೊತ್ತದ ಬಡ್ಡಿಯೊಂದಿಗೆ ನಾಲ್ಕು ನೂರು ಕೋಟಿ ರೂಪಾಯಿ ಸಾಲ ತಂದಿದ್ದರು ಎಂಬ ಅಂಶವನ್ನು ಬಿಚ್ಚಿಟ್ಟಿದ್ದಾರೆ. ಶೇಕಡಾ 24ರ ಬಡ್ಡಿಯಲ್ಲಿ ಆ ಹಣವನ್ನು ಸಾಲವಾಗಿ ತಂದಿದ್ದರು ಎಂದು ಹೇಳುವ ಮೂಲಕ ಬೆಚ್ಚಿ ಬೀಳಿಸಿದ್ದಾರೆ. ಬಾಹುಬಲಿ ಸಿನಿಮಾ ಮಾಡುವಾಗಿನ ಆರ್ಥಿಕ ತೊಂದರೆಯನ್ನು ರಾಜಮೌಳಿ ಹೇಳಿದ್ದರು. ಆದರೆ, ಎಷ್ಟು ಎನ್ನುವುದನ್ನು ಬಹಿರಂಗ ಪಡಿಸಿರಲಿಲ್ಲ. ಇದನ್ನೂ ಓದಿ:ವರುಣ್‌ ತೇಜ್-‌ ನಟಿ ಲಾವಣ್ಯ ಎಂಗೇಜ್‌ಮೇಟ್ ಡೇಟ್ ಫಿಕ್ಸ್

    ‘ಸಿನಿಮಾದವರು ಹಣ ತರಬೇಕು ಎಂದರೆ ಎರಡೇ ಹಾದಿಗಳಿವೆ. ಒಂದು ಆಸ್ತಿಯನ್ನು ಅಡ ಇಡುವುದು ಅಥವಾ ಮಾರುವುದು. ಮತ್ತೊಂದು ಬಡ್ಡಿ ತೆತ್ತು ಸಾಲ ತರುವುದು. ಈ ಎರಡೂ ಅಪಾಯದ ಮಾರ್ಗಗಳು. ಆದರೆ ವಿಧಿಯಿಲ್ಲ. ಸಿನಿಮಾ ಗೆದ್ದರೆ ಬಚಾವ್ ಆಗುತ್ತೇವೆ. ಸೋತರೆ ಅಷ್ಟೇ’ ಎಂದು ರಾಣಾ ದಗ್ಗುಬಾಟಿ ಹೇಳಿದ್ದಾರೆ.

    ಬಾಹುಬಲಿ ಸಿನಿಮಾ ಹಿಟ್ ಆಯಿತು. ಹಾಗಾಗಿ ಎಲ್ಲರೂ ಬಚಾವ್ ಆದೆವು ಎಂದು ಹೇಳಿರುವ ರಾಣಾ, ಸೋತಿದ್ದರೆ ಅದನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ಈಗಲೂ ಆ ಸನ್ನಿವೇಶಗಳು ನನ್ನ ಎದುರಿಗೆ ಬಂದರೆ, ಭಯವಾಗುತ್ತದೆ ಎಂದಿದ್ದಾರೆ ರಾಣಾ. ಈ ಮೂಲಕ ಬಾಹುಬಲಿ ಚಿತ್ರಕ್ಕೆ ರಾಜಮೌಳಿಯು ತಂದಿದ್ದ ಸಾಲದ ಮೊತ್ತವನ್ನು ಅವರು ಬಹಿರಂಗ ಪಡಿಸಿದ್ದಾರೆ

  • ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

    ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

    ಬಳ್ಳಾರಿ: ಶಾಲೆ ಆರಂಭವಾದ ಎರಡನೆ ದಿನವೇ ಮಕ್ಕಳಿಗೆ ಶಾಕ್ ಎದುರಾಗಿದೆ. ಆಡಳಿತ ಮಂಡಳಿ ಮಾಡಿರುವ ಎಡವಟ್ಟಿನಿಂದ ಮಕ್ಕಳಿಗೆ ಸಮಸ್ಯೆಯಾಗಿದೆ.

    ಹೌದು. ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಬ್ಯಾಂಕ್ ಸಿಬ್ಬಂದಿ ಶಾಲೆಯನ್ನೇ ಸೀಜ್ (School Seize) ಮಾಡಿದ ಘಟನೆಯೊಂದು ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿರುವ ರಾಜೀವ್ ಗಾಂಧಿ ಸ್ಮಾರಕ ವಿದ್ಯಾ ಸಂಸ್ಥೆ ಸೀಜ್ ಆಗಿರುವ ಸ್ಕೂಲ್. ಶಾಲೆ ಸೀಜ್ ಆಗಿರುವ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಯ ಹೊರಗಡೆ ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ಬಂದಿದೆ.

    ಎಂ. ಸವಿತಾ, ಎಂ ಕೃಷ್ಣಕಿಶೋರ್ ರೆಡ್ಡಿ, ಎಂ.ಸತ್ಯನಾರಾಣ ಸೇರಿದಂತೆ ಆಡಳಿತ ಮಂಡಳಿಯವರು ಶಾಲೆಯ ಮೇಲೆ ಸಾಲ ಪಡೆದಿದ್ದಾರೆ. ಆಂಧ್ರ ಮೂಲದ ಇನ್‍ಕ್ರೆಡ್ ಫೈನಾನ್ಸಿಯಲ್ ಸರ್ವೀಸ್ ಲಿಮಿಟೆಡ್‍ನಿಂದ ಒಂದು ಕೋಟಿಗೂ ಅಧಿಕ ಮೊತ್ತದ ಸಾಲವನ್ನು ಪಡೆದುಕೊಂಡಿದ್ದಾರೆ. ಆ ಬಳಿಕ ಸರಿಯಾಗಿ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ನ್ಯಾಯಲಯ (Court) ದಿಂದ ಆದೇಶ ತಂದು ಸೀಜ್ ಮಾಡಿದ್ದಾರೆ. ಇದನ್ನೂ ಓದಿ: ಸ್ಟೇಜ್‌ನಲ್ಲೇ ಎಡವಿ ಬಿದ್ದ US ಅಧ್ಯಕ್ಷ ಜೋ ಬೈಡನ್‌ – ವೀಡಿಯೋ ವೈರಲ್‌

    ಆಡಳಿತ ಮಂಡಳಿ ಹಾಗೂ ಬ್ಯಾಂಕ್ (Bank) ನವರ ವ್ಯವಹಾರದಿಂದಾಗಿ ಇಂದು ಮಕ್ಕಳು ಪರದಾಡುವಂತಾಗಿದೆ. ಮಕ್ಕಳನ್ನು ಹೊರಗಡೆ ಕೂರಿಸದೇ ಬೇರೆಡೆ ವ್ಯವಸ್ಥೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಒಂದು ವೇಳೆ ವ್ಯವಸ್ಥೆ ಮಾಡದಿದ್ದರೆ ಕ್ರಮದ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ. ಇತ್ತ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಹಿಡಿ ಶಾಪ ಹಾಕುತ್ತಿದ್ದಾರೆ.

     

  • ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

    ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

    ಯಾದಗಿರಿ: ಸಾಲಬಾಧೆ (Debt) ತಾಳಲಾರದೆ ಮನನೊಂದು ರೈತನೋರ್ವ ನೇಣು ಬಿಗಿದು ಆತ್ಮಹತ್ಯೆಗೆ (Suicide) ಶರಣಾದ ಘಟನೆ ಯಾದಗಿರಿಯಲ್ಲಿ (Yadgiri) ನಡೆದಿದೆ.

    ಜಿಲ್ಲೆಯ ಹುಣಸಗಿ (Hunasagi) ತಾಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಮರಣ್ಣ ಕುಂಬಾರ (60) ಆತ್ಮಹತ್ಯೆಗೆ ಶರಣಾದ ರೈತ. ಇವರು ಬ್ಯಾಂಕ್ ಹಾಗೂ ಖಾಸಗಿ ಸೇರಿದಂತೆ 10 ಲಕ್ಷಕ್ಕೂ ಅಧಿಕ ಹಣವನ್ನು ಸಾಲಮಾಡಿದ್ದರು. ಅಲ್ಲದೇ ಬೆಳೆ ಸರಿಯಾಗಿ ಬಾರದೇ ಸಾಲ ತೀರಿಸಲು ಪರದಾಡುತ್ತಿದ್ದರು. ಹೀಗಾಗಿ ತನ್ನ 8 ಎಕರೆ ಜಮೀನನ್ನು ಖಾಸಗಿಯವರಿಗೆ ಸಾಲಕ್ಕೆ ಬರೆದುಕೊಟ್ಟಿದ್ದರು. ಇದನ್ನೂ ಓದಿ: ಹೈಟೆನ್ಷನ್ ತಂತಿ ತಾಗಿ 13ರ ಬಾಲಕಿ ಸಾವು

    ಇದರಿಂದ ಮನನೊಂದ ಅವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆಸ್ತಿಯಲ್ಲಿ ಪಾಲು ಕೇಳಬಹುದೆಂದು ಮರಿಮೊಮ್ಮಗನನ್ನೇ ಮುಗಿಸಿದ ಅಜ್ಜ!

  • 2 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ ರೈತ ಆತ್ಮಹತ್ಯೆಗೆ ಶರಣು

    2 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ ರೈತ ಆತ್ಮಹತ್ಯೆಗೆ ಶರಣು

    ಬೀದರ್: ಸಾಲಬಾಧೆ ತಾಳಲಾರದೆ ರೈತ (Farmer) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾದ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ (Hedgapur) ಗ್ರಾಮದಲ್ಲಿ ನಡೆದಿದೆ.

    ನಾಗಪ್ಪ ಹಲಗೆ (43) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ಪಿಕೆಪಿಎಸ್ ಸೇರಿದಂತೆ ವಿವಿಧ ಬ್ಯಾಂಕ್‌ಗಳಲ್ಲಿ 2 ಲಕ್ಷಕ್ಕೂ ಅಧಿಕ ಸಾಲ (Loan) ಮಾಡಿದ್ದರು. ಸಾಲ ಮರುಪಾವತಿ ಮಾಡಲಾಗದೆ ಮನನೊಂದು ತನ್ನ ಜಮೀನಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಟೆಕ್ಕಿ ದುರ್ಮರಣ 

    ವಿಷಯ ತಿಳಿದು ಠಾಣಾ ಕುಸುನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಠಾಣಾ ಕುಸುನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೇವಿಗೆ ವಿದ್ಯುತ್ ತಂತಿ ಸ್ಪರ್ಶ- ಟ್ರ‍್ಯಾಕ್ಟರ್ ಭಸ್ಮ

  • ಬೇಳೂರು ರಾಘವೇಂದ್ರ ಶೆಟ್ಟಿ ಮನೆ ಹರಾಜು – ಸೆಕ್ಯುರಿಟಿ ಗಾರ್ಡ್ ಕಣ್ತಪ್ಪಿಸಿ ಅಕ್ರಮ ಪ್ರವೇಶ

    ಬೇಳೂರು ರಾಘವೇಂದ್ರ ಶೆಟ್ಟಿ ಮನೆ ಹರಾಜು – ಸೆಕ್ಯುರಿಟಿ ಗಾರ್ಡ್ ಕಣ್ತಪ್ಪಿಸಿ ಅಕ್ರಮ ಪ್ರವೇಶ

    ಬೆಂಗಳೂರು: ಕರ್ನಾಟಕ ಕರಕುಶಲ ವಸ್ತುಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿಯವರ (Beluru Raghavendra Shetty) ಮನೆಯನ್ನು ಬ್ಯಾಂಕ್ ಹರಾಜಿಗಿಟ್ಟಿದೆ. ಆದರೆ ಹರಾಜಿಗೂ ಮುನ್ನವೇ ಬ್ಯಾಂಕ್ (Bank) ಕಾವಲಿಗಿಟ್ಟಿದ್ದ ಸೆಕ್ಯುರಿಟಿ ಗಾರ್ಡ್ ಕಣ್ತಪ್ಪಿಸಿ ಅಕ್ರಮ ಪ್ರವೇಶ ಮಾಡಿದ್ದಾರೆ.

    ಬೇಳೂರು ರಾಘವೇಂದ್ರ ಶೆಟ್ಟಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 5 ಕೋಟಿ ರೂ.ಗೂ ಅಧಿಕ ಸಾಲ (Loan) ಪಡೆದಿದ್ದರು. ಸಾಲವನ್ನು ಮರುಪಾವತಿ ಮಾಡದ ಹಿನ್ನೆಲೆ ನ್ಯಾಯಾಲಯ ರಾಘವೇಂದ್ರ ಅವರ ಮನೆಯನ್ನು ಬ್ಯಾಂಕ್ ವಶಕ್ಕೆ ನೀಡಿತ್ತು. ಇದೀಗ ಬ್ಯಾಂಕ್ 3 ದಿನಗಳಲ್ಲಿ ಮನೆಯನ್ನು ಹರಾಜಿಗಿಡಲು ಮುಂದಾಗಿದೆ.

    ಸಂಜಯನಗರದ ಡಾಲರ್ಸ್ ಕಾಲೋನಿಯಲ್ಲಿ ಎಸ್‌ಎಂಸಿ ಬೆವರ್ಲಿ ಅಪಾರ್ಟ್ಮೆಂಟ್‌ನಲ್ಲಿ ರಾಘವೇಂದ್ರ ಅವರ ಈ ಫ್ಲ್ಯಾಟ್ ಇದೆ. ರಾಘವೇಂದ್ರ ಮಾಡಿದ್ದ ಸಾಲ ಮರುಪಾವತಿ ಮಾಡದ ಹಿನ್ನೆಲೆ ನ್ಯಾಯಾಲಯ ಕಳೆದ ಡಿಸೆಂಬರ್‌ನಲ್ಲಿ ಆದೇಶ ನೀಡಿ ಮನೆಯನ್ನು ಬ್ಯಾಂಕ್ ವಶಕ್ಕೆ ನೀಡಿದೆ. ಇದನ್ನೂ ಓದಿ: ಅನ್ಯಕೋಮಿನವರ ವ್ಯಾಪಾರಕ್ಕೆ ನಿರ್ಬಂಧ ಹೇರಿ – ಈಗ ಕಿಗ್ಗಾದಲ್ಲೂ ಧರ್ಮ ದಂಗಲ್

    ಇದೀಗ ಬ್ಯಾಂಕ್ ವಶಕ್ಕೆ ಪಡೆದಿರುವ ಮನೆಯನ್ನು ಹರಾಜು ಹಾಕಲು ಸಿದ್ಧತೆ ನಡೆಸುತ್ತಿದೆ. ಆದರೆ ಈ ನಡುವೆ ಬುಧವಾರ ಮಧ್ಯರಾತ್ರಿ ರಾಘವೆಂದ್ರ ಶೆಟ್ಟಿ ಕಡೆಯವರು ಮನೆಗೆ ಹಾಕಲಾಗಿದ್ದ ಸೀಲ್ ಅನ್ನು ಒಡೆದು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ.

    ಮನೆಯಲ್ಲಿ ಅಕ್ರಮ ಪ್ರವೇಶ ಮಾಡಿರುವುದನ್ನು ತಿಳಿದ ಪೊಲೀಸರು ಹಾಗೂ ಬ್ಯಾಂಕ್ ಅಧಿಕಾರಿಗಳು ಮನೆಯೊಳಗಿದ್ದವರಿಗೆ ಬಾಗಿಲು ತೆರೆಯುವಂತೆ ಸೂಚಿಸಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಬಾಗಿಲನ್ನು ತೆರೆದಿದ್ದಾರೆ. ಅವರನ್ನು ಬಲವಂತವಾಗಿ ಮನೆಯಿಂದ ಹೊರಹಾಕಲು ಪ್ರಯತ್ನಿಸಿದರೆ ಆತ್ಮಹತ್ಯೆಯ ಬೆದರಿಕೆ ಒಡ್ಡುತ್ತಿದ್ದಾರೆ.

    ಇದೀಗ ಅತಿಕ್ರಮವಾಗಿ ಮನೆ ಪ್ರವೇಶ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ ಪ್ರತಿಷ್ಠಿತ ವರ್ಷದ ಗವರ್ನರ್‌ ಪ್ರಶಸ್ತಿ

  • ನನ್ನಿಂದ 50 ಸಾವಿರ ಸಾಲ ಪಡೆದಿದ್ದ ಹೆಬ್ಬಾಳ್ಕರ್ 500 ಕೋಟಿ ಹೇಗೆ ಸಂಪಾದನೆ ಮಾಡಿದ್ರು: ಸಂಜಯ್ ಪಾಟೀಲ್

    ನನ್ನಿಂದ 50 ಸಾವಿರ ಸಾಲ ಪಡೆದಿದ್ದ ಹೆಬ್ಬಾಳ್ಕರ್ 500 ಕೋಟಿ ಹೇಗೆ ಸಂಪಾದನೆ ಮಾಡಿದ್ರು: ಸಂಜಯ್ ಪಾಟೀಲ್

    ಬೆಳಗಾವಿ: 20 ವರ್ಷಗಳ ಹಿಂದೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ನನ್ನ ಬಳಿ 50 ಸಾವಿರ ರೂ. ಹಣ ಪಡೆದಿದ್ದರು. ಇಂದು ಅವರು 500 ಕೋಟಿ ರೂ. ಮಾಲೀಕರು ಹೇಗೆ ಆಗ್ತಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ (BJP) ಮಾಜಿ ಶಾಸಕ ಸಂಜಯ್ ಪಾಟೀಲ್ (Sanjay Patil) ಪ್ರಶ್ನೆಯಿಟ್ಟಿದ್ದಾರೆ.

    ಸಂಜಯ್ ಪಾಟೀಲ್ ರಾಜಹಂಸಗಡ ಕೋಟೆ ಬಳಿಯ ಮಣ್ಣು ಮಾರಿದ್ದಾರೆ ಎಂಬ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಕ್ಕೆ ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಹೆಬ್ಬಾಳ್ಕರ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏನಾದರೂ ದಾಖಲೆ ಕೊಟ್ಟರೆ ನಾನು ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ತಿರುಗೇಟು ನೀಡಿದರು,

    20 ವರ್ಷಗಳ ಹಿಂದೆ ನಾನು ರಾಜಕೀಯದಲ್ಲಿ ಇರಲಿಲ್ಲ. ಅವರೂ ಸಕ್ರಿಯ ರಾಜಕಾರಣದಲ್ಲಿ ಇರಲಿಲ್ಲ. ಅಂದು ಅವರು ಗೋಮಟೇಶ್ ವಿದ್ಯಾಪೀಠದ ನನ್ನ ಕಚೇರಿಗೆ ಬಂದಿದ್ದರು. ಆಗ 50 ಸಾವಿರ ರೂ. ನನಗೆ ಸಹಾಯ ಮಾಡಿ ಎಂದು ಕೇಳಿ ಹೋಗಿದ್ದರು. ಆ ಸಮಯ ನನ್ನಿಂದ 50 ಸಾವಿರ ರೂ. ತೆಗೆದುಕೊಂಡು ಹೋದವರು ವಾಪಾಸ್ ಬರಲೇ ಇಲ್ಲ ಎಂದು ಆರೋಪಿಸಿದರು.

    ಅಂದು ನನ್ನ ಕಡೆಯಿಂದ 50 ಸಾವಿರ ರೂ. ಸಾಲ ತೆಗೆದುಕೊಂಡು ಹೋಗುವಂತಹ ಸ್ಥಿತಿಯಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಈಗ 500 ಕೋಟಿ ರೂ. ಮಾಲೀಕರು ಹೇಗೆ ಆಗ್ತಾರೆ? ಅವತ್ತೇ ಸಂಜಯ್ ಪಾಟೀಲ್ ನಿಮಗೆ 50 ಸಾವಿರ ರೂ. ಸಾಲ ಕೊಟ್ಟಿದ್ದಾನೆ. ಅವನಿಗೆ ದುಡ್ಡಿನ ಅವಶ್ಯಕತೆ ಇಲ್ಲ. ಮಣ್ಣು ಮಾರುವಂತಹ ಬಡತನ ಬಂದಿಲ್ಲ. ಸಂಜಯ್ ಪಾಟೀಲ್‌ಗೆ ಕೊಂಡು ತೆಗೆದುಕೊಳ್ಳೋ, ಎರಡು ನಂಬರ್ ಬ್ಯುಸಿನೆಸ್ ಮಾಡುವಂತಹ ಆಶೀರ್ವಾದ ದೇವರು ನನಗೆ ಮಾಡಿಲ್ಲ. ನಾನು ಲಕ್ಷ್ಮಿ ಪುತ್ರ ಎಂಬುದು ನನಗೆ ಗೊತ್ತಿದೆ. ದುಡ್ಡಿನ ಸಲುವಾಗಿ ಸಗಣಿ ತಿನ್ನುವಂತಹ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ತಿರುಗೇಟು ನೀಡಿದರು.

    ಆ ಮಣ್ಣು ಮಾರೋಕೆ ನಾನು ರಾಜಹಂಸಗಡ ಕೆಲಸ ಪ್ರಾರಂಭ ಮಾಡಿರಲಿಲ್ಲ. ಶಿವಾಜಿ ಮಹಾರಾಜರನ್ನು ದೇವರು ಎಂದು ಪೂಜೆ ಮಾಡುತ್ತೇನೆ. ಆ ಶಿವಾಜಿ ಮಹಾರಾಜರ ಸ್ಮಾರಕ ಮಾಡಲು ಆ ಕೆಲಸ ಪ್ರಾರಂಭ ಮಾಡಿದ್ದೇನೆ. ನಾನು ಕೊಟ್ಟ 50 ಸಾವಿರ ರೂ. ವಾಪಸ್ ಕೊಟ್ಟಿಲ್ಲ. ಅದಕ್ಕೂ ಆಣೆ ಮಾಡಲಿ ಬರಲಿ ಅವರು. ಮಳೇಕರಣಿ ದೇವಿ ಅಲ್ಲ, ಅವರಿಗೆ ಯಾವ ದೇವರ ಮೇಲೆ ಭಕ್ತಿ ಇದೆ, ಆ ದೇವರ ಕಡೆ ಬರಬೇಕು. ಸಂಜಯ್ ಪಾಟೀಲ್ ಬಳಿ 50 ಸಾವಿರ ರೂ. ಪಡೆದಿಲ್ಲ ಎಂದು ಆಣೆ ಮಾಡಬೇಕು. ನನಗೆ ಅವಶ್ಯಕತೆ ಇದೆ ಸಹಾಯ ಮಾಡಿ ಎಂದು 50 ಸಾವಿರ ರೂ. ಕೊಡಿ ಎಂದಿದ್ದರು. 2 ಗಂಟೆ ನನ್ನ ಕಚೇರಿಯಲ್ಲಿ ಕುಳಿತು ಹಣ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.

    ಸಂಜಯ ಪಾಟೀಲ್ ಗೋಮಟೇಶ್ ವಿದ್ಯಾಪೀಠಕ್ಕೆ ಶಾಸಕರ ಅನುದಾನದ 40 ಲಕ್ಷ ರೂ. ಹಣ ಪಡೆದ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವಲ್ಪ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಅದರ ಬಗ್ಗೆ ಅಭ್ಯಾಸ ಮಾಡಿ ಹೇಳಬೇಕು. ಗೋಮಟೇಶ್ ವಿದ್ಯಾಪೀಠಕ್ಕೆ ತೆಗೆದುಕೊಂಡಿದ್ದೇವೋ ಇಲ್ಲವೋ, ಹಣ ವಾಪಾಸ್ ಆಗಿದೆಯೋ ಇಲ್ಲವೋ ಅಂತ. ಗೋಮಟೇಶ್ ವಿದ್ಯಾಪೀಠದ ಹಣ ಉಪಯೋಗ ಆಗಿದೆಯೋ ಇಲ್ಲವೋ ಅದರ ಬಗ್ಗೆ ತಿಳಿದುಕೊಳ್ಳಬೇಕು. ಆ ಬಳಿಕ ನಾನು ಯಾವಾಗ ಬೇಕಾದರೂ ಉತ್ತರಿಸಲು ವೇದಿಕೆ ಮೇಲೆ ಬರುತ್ತೇನೆ ಎಂದರು.

    ಅವರು ಸುಳ್ಳು ಆರೋಪ ಮಾಡುವುದನ್ನು ಬಿಡಬೇಕು. ಯಾವ ವಿಚಾರ ಬಂದರೂ ದಾಖಲೆ ತೆಗೆದುಕೊಂಡು ಬರಬೇಕು. ನೀವು 10 ವರ್ಷ ಎಂಎಲ್‌ಎ ಆಗಿದ್ದು, 20 ಕೋಟಿ ರೂ. ಶಾಸಕರ ಅನುದಾನ ಬಂದಿತ್ತು. ಶಿವಾಜಿ ಮೂರ್ತಿ ಏಕೆ ಪ್ರತಿಷ್ಠಾಪಿಸಿಲ್ಲ ಎಂದು ಕೇಳಿದ್ರು. ನಾನು ಶಿವಾಜಿ ಮೂರ್ತಿ ಸಲುವಾಗಿ ಎಂಎಲ್‌ಎ ಫಂಡ್ ನೀಡುವಂತೆ ಡಿಸಿಗೆ ಪತ್ರ ಬರೆದಿದ್ದೇನೆ. ಅದಕ್ಕೆ ಅದು ಪ್ರೊವಿಜಿನ್ ಇಲ್ಲ, ಕೊಡೋಕೆ ಆಗಲ್ಲ ಎಂದು ಡಿಸಿ ಉತ್ತರಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ತೆರೆದ ವಾಹನದಲ್ಲಿ ಎಚ್‌ಡಿಡಿ 100 ಕಿ.ಮೀ. ರೋಡ್ ಶೋ

    ಎಂಎಲ್‌ಎ ಫಂಡ್ ಯಾವ್ಯಾವ ಕೆಲಸಕ್ಕೆ ಉಪಯೋಗ ಮಾಡಬೇಕು ಎಂಬ ಜ್ಞಾನ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೇಕಲ್ಲ. ಎಂಎಲ್‌ಎ ಫಂಡ್ ಯಾವ್ಯಾವ ಕಾಮಗಾರಿಗಳಿಗೆ ಕೊಡಬೇಕು ಅಂತಾ ಕಾನೂನು ಇದೆ. ಆ ಕಾನೂನು ಬಿಟ್ಟು ಮಾಡೋಕೆ ಆಗಲ್ಲ. ಸುಮ್ಮನೆ ಭಾಷಣ ಏನೇನೋ ಮಾಡೋದು, ಜನರಿಗೆ ಸುಳ್ಳು ಹೇಳಿ ಮೋಸ ಮಾಡುವ ಸ್ವಭಾವವನ್ನು ಲಕ್ಷ್ಮಿ ಹೆಬ್ಬಾಳ್ಕರ್ ಹೊಂದಿದ್ದಾರೆ ಎಂದು ಕಿಡಿ ಕಾರಿದರು.

    ಶಾಸಕಿ ಅಂದ್ರೆ ಏನು? ಶಾಸಕರ ಅಧಿಕಾರ ಏನಿದೆ? ಇದರ ಬಗ್ಗೆ ಅವರು ಅಧ್ಯಯನ ಮಾಡಬೇಕು. ನಾನು ರಾಜಹಂಸಗಡ ಕೋಟೆ ಅಭಿವೃದ್ಧಿ ಕೆಲಸ ಪ್ರಾರಂಭ ಮಾಡಿದ್ದ ದಾಖಲೆಗಳಿವೆ. ಅವರಿಗೆ ಬಹಳ ಸಲ ವಿನಂತಿ ಮಾಡಿದ್ದೇನೆ. ಅವರು ಕೇವಲ ಭಾಷಣ ಮಾಡುತ್ತಿದ್ದಾರೆ. ಸರ್ಕಾರಿ ದಾಖಲಾತಿಗಳೊಂದಿಗೆ ಅವರು ಉತ್ತರಿಸಲು ಪ್ರಾರಂಭ ಮಾಡಬೇಕು. ಅಲ್ಲಿ ಎಲ್ಲಾದರೂ ತಪ್ಪಿದ್ದರೆ ನಾನು ಕ್ಷಮೆ ಕೇಳೋಕೆ ರೆಡಿ ಎಂದು ಸಂಜಯ್ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: HDK ಕುಟುಂಬದಿಂದ ದೇವರ ಮೊರೆ – ಚಂಡಿಕಾ ಯಾಗ, ಮಹಾಮೃತ್ಯುಂಜಯ ಜಪ ಆಯೋಜನೆ

  • ಪಾಕಿಸ್ತಾನಕ್ಕೆ ಸಾಲ ನೀಡಿದ ಚೀನಾ – ಅಮೆರಿಕ ಕಳವಳ

    ಪಾಕಿಸ್ತಾನಕ್ಕೆ ಸಾಲ ನೀಡಿದ ಚೀನಾ – ಅಮೆರಿಕ ಕಳವಳ

    ಇಸ್ಲಾಮಾಬಾದ್: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ (Pakistan) ಆಪತ್ಭಾಂದವ, ಮಿತ್ರನೇ ಆಗಿರುವ ಚೀನಾ (China) 5,804 ಕೋಟಿ ರೂ. (700 ಮಿಲಿಯನ್‌ ಡಾಲರ್‌) ಸಾಲ ನೀಡಿದೆ.

    ಈ ವಾರದ ಆರಂಭದಲ್ಲಿ ಪಾಕಿಸ್ತಾನವು ಚೀನಾದಿಂದ ಸಹಾಯ ಪಡೆಯಲಿದೆ ಎಂದು ಹಣಕಾಸು ಸಚಿವ ಇಶಾಕ್ ದಾರ್ ಎಂದು ಹೇಳಿದ್ದರು. ಅದರಂತೆ ಹಣವನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ಹಣ್ಣು-ತರಕಾರಿಗಳಿಗೆ ಹಾಹಾಕಾರ ಸಾಧ್ಯತೆ

    “ಚೀನಾ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನ್ (SBP) 700 ಮಿಲಿಯನ್ ಡಾಲರ್‌ ಹಣವನ್ನು ಸ್ವೀಕರಿಸಿದೆ” ಎಂದು ಟ್ವೀಟ್‌ ಮಾಡಿ ತಿಳಿಸಿದ್ದಾರೆ.

    ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ (IMF) ನೆರವು ಕೇಳಿತ್ತು. ಇದೇ ಸಂದರ್ಭದಲ್ಲಿ ಚೀನಾ ಆರ್ಥಿಕ ಸಹಾಯ ನೀಡಿದೆ. ಚೀನಾದ ಸಹಾಯವನ್ನು ಎಂದಿಗೂ ಮರೆಯುವುದಿಲ್ಲ ಎಂದು ಪಾಕ್‌ ಸರ್ಕಾರ ಕೃತಜ್ಞತೆ ಸಲ್ಲಿಸಿದೆ. ಇದನ್ನೂ ಓದಿ: ಸಚಿವರು ವಿಮಾನದ ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಪ್ರಯಾಣಿಸುವಂತಿಲ್ಲ, 5 ಸ್ಟಾರ್‌ ಹೋಟೆಲ್‌ನಲ್ಲಿ ಉಳಿಯುವಂತಿಲ್ಲ – ಪಾಕ್‌ ಸರ್ಕಾರ

    ಹಣಕಾಸು ನೆರವಿನ ವಿಚಾರವಾಗಿ ಐಎಂಎಫ್‌ನೊಂದಿಗೆ ಪಾಕಿಸ್ತಾನ ಸರ್ಕಾರ ನಿರಂತರ ಮಾತುಕತೆ ನಡೆಸುತ್ತಿದೆ. ಆದರೆ ಇದುವರೆಗೂ ನೆರವು ಸಿಕ್ಕಿಲ್ಲ. ಇಂತಹ ಸನ್ನಿವೇಶದಲ್ಲಿ ಚೀನಾ ಸಾಲ ನೀಡಿರುವುದು ಅಮೆರಿಕ ಆತಂಕಕ್ಕೆ ಕಾರಣವಾಗಿದೆ.

    “ಭಾರತದ (India) ನೆರೆ ರಾಷ್ಟ್ರಗಳಾದ ಪಾಕಿಸ್ತಾನ, ಶ್ರೀಲಂಕಾ ಹಾಗೂ ನೇಪಾಳಕ್ಕೆ ಚೀನಾ ನೀಡಿದೆ. ಇದು ನಿಜಕ್ಕೂ ಕಳವಳಕಾರಿಯಾದದ್ದು. ಸಾಲ ನೀಡುವ ಮೂಲಕ ಈ ರಾಷ್ಟ್ರಗಳನ್ನು ಬಲವಂತವಾಗಿ ಹತೋಟಿಗೆ ತರುವ ಸಾಧ್ಯತೆ ಇದೆ” ಎಂದು ದಕ್ಷಿಣ ಹಾಗೂ ಮಧ್ಯ ಏಷ್ಯಾಗೆ ಸಹ ಕಾರ್ಯದರ್ಶಿಯಾಗಿರುವ ಡೊನಾಲ್ಡ್‌ ಲು ಹೇಳಿದ್ದಾರೆ.

  • ಸಾಲಗಾರರ ಕಿರುಕುಳ – ಸೆಲ್ಫಿ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

    ಸಾಲಗಾರರ ಕಿರುಕುಳ – ಸೆಲ್ಫಿ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

    ರಾಮನಗರ: ಸಾಲಗಾರರ ಕಿರುಕುಳ ತಾಳಲಾರದೆ ಸೆಲ್ಫಿ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬೆಂಗಳೂರಿನ (Bengaluru) ವಾಸುದೇವನಪುರದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ ಶಿವರಾಜ್ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಫೆ.3ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತರಿಗೆ (Friends) ಸಾಲಕ್ಕೆ ಜಾಮೀನು (Land) ನೀಡಿದ್ದ ಶಿವರಾಜ್‌ಗೆ ಪ್ರತಿ ವಾರ ಬಡ್ಡಿ ನೀಡುವಂತೆ ಸಾಲಗಾರರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಕಂಡವರ ಎಂಜಲು ಚಪ್ಪರಿಸುವ ಜಮೀರ್‌ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS

    crime

    ಸ್ನೇಹಿತರಿಗೆ ಮಧ್ಯಸ್ಥಿಕೆ ವಹಿಸಿ ಹಣ ಕೊಡಿಸಿದ್ದ ಶಿವರಾಜ್‌ಗೆ ರೇಣುಕಾರಾಧ್ಯ‌, ಧನು, ವೆಂಕಟೇಶ್ ಎಂಬುವವರು ಮೀಟರ್ ಬಡ್ಡಿ ಕಟ್ಟಿಲ್ಲವೆಂದು ಬೈಕ್ (Bike) ಕಸಿದುಕೊಂಡಿದ್ದರು. ಇದರಿಂದ ಮಾನಸಿಕ ಹಿಂಸೆ ಆಗುತ್ತಿದೆ ಎಂದು ಸೆಲ್ಫಿ ವೀಡಿಯೋ ಮಾಡಿ ಶಿವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಮೃತ ಶಿವರಾಜ್ ಪತ್ನಿ ಕಗ್ಗಲೀಪುರ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: 8 ರಿಂದ 10 ಬಿಜೆಪಿ ಸಂಸದರು ಚುನಾವಣೆಗೆ ನಿಲ್ಲಲ್ಲ ಎನ್ನುತ್ತಿದ್ದಾರೆ: ಡಿಕೆಶಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ

    ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ

    ರಾಮನಗರ: ಸಾಲಬಾಧೆ (Loan) ತಾಳಲಾರದೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನಿಸಿರುವ (Suicide Attempt)  ಹೃದಯವಿದ್ರಾವಕ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ.

    ಹುಟ್ಟೂರು ಬಿಟ್ಟುರೂ ಬೆಂಬಿಡದ ಸಾಲಗಾರ ಕಾಟಕ್ಕೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಿಂದ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಜಗತ್ತನ್ನೇ ಅರಿಯದ ಮೂರು ಮುದ್ದು ಕಂದಮ್ಮಗಳು ಸೇರಿದಂತೆ 6 ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

    ಮೂಲತಃ ರಾಮನಗರ ತಾಲೂಕಿನ ಕುಂಬಳಗೂಡು ನಿವಾಸಿ ರಾಜು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಅಲ್ಲದೇ ವಿಪರೀತ ಸಾಲ ಮಾಡಿಕೊಂಡಿದ್ದ. ಸಾಲಗಾರರ ಕಾಟಕ್ಕೆ ಹುಟ್ಟೂರು ತೊರೆದು ಅತ್ತೆ ಮನೆ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದ. ಹುಟ್ಟೂರು ತೊರೆದರೂ ರಾಜುಗೆ ಸಾಲಗಾರರ ಕಾಟ ಮಾತ್ರ ತಪ್ಪಿರಲಿಲ್ಲ. ಪಡೆದ ಹಣಕ್ಕೆ ಬಡ್ಡಿಯನ್ನು ಕಟ್ಟಲಾಗದ ಬಡ ಕುಟುಂಬ, ಸಾಲ ಪಡೆದವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿ ಬೇಸತ್ತಿದ್ದ. ಕೊನೆಗೆ ಸಾಲಕ್ಕೆ ಹೆದರಿ ಇಡೀ ಕುಟುಂಬದ ಜನರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಗುರುವಾರ ಮಧ್ಯಾಹ್ನ ಇಡೀ ಕುಟುಂಬ ಆತ್ಮಹತ್ಯೆಯ ನಿರ್ಧಾರ ಮಾಡಿತ್ತು. ಊರ ಹೊರಗಿದ್ದ ರಾಜು ಮಾವನ ಸಮಾಧಿ ಬಳಿಗೆ ತೆರಳಿದ್ದ ಕುಟುಂಬ, ಊಟ ಹಾಗೂ ತಿಂಡಿಗಳ ಜೊತೆ ಇಲಿ ಪಾಷಾಣ ಸೇವಿದ್ದಾರೆ. ಬಳಿಕ ಸಕ್ಕರೆ ಅಚ್ಚು, ಬಾಳೆ ಹಣ್ಣು ತಿಂದಿದ್ದರು. ತಲಾ 2 ಪ್ಯಾಕೆಟ್ ಇಲಿ ಪಾಷಾಣ ಸೇವಿಸಿದ್ದ 7 ಮಂದಿ ಸಾವಿಗಾಗಿ ಕಾದು ಸಮಾಧಿ ಬಳಿಯೇ ಕೆಲಕಾಲ ಕುಳಿತಿದ್ದರು. ಇದನ್ನೂ ಓದಿ: ಟ್ರಾಫಿಕ್‌ ನಿಯಮ ಉಲ್ಲಂಘನೆ – ದಂಡ ಪಾವತಿಗೆ 50% ಡಿಸ್ಕೌಂಟ್‌

    ಕೆಲ ಹೊತ್ತಿನ ಬಳಿಕ ರಾಜು ಪತ್ನಿ ಮಂಗಳಮ್ಮ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಉಳಿದವರು ಸಂಕಟ ತಾಳಲಾರದೆ ಅಲ್ಲಿಂದ ಹೊರಟು ಊರ ಕಡೆಗೆ ಬಂದು ಗ್ರಾಮದ ಜನರಿಗೆ ವಿಷ ಸೇವಿಸಿರುವುದಾಗಿ ತಿಳಿಸಿದ್ದಾರೆ. ಗ್ರಾಮಸ್ಥರು ತಕ್ಷಣವೇ ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಡ್ಯ ಮೀಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

    ರಾಜು ಪತ್ನಿ ಮಂಗಳಮ್ಮ (28) ಸಾವನ್ನಪ್ಪಿದ್ದರೆ, ರಾಜು(31), ಅತ್ತೆ ಸೊಲ್ಲಾಪುರದಮ್ಮ (48), ಮಕ್ಕಳಾದ ಆಕಾಶ್ (9), ಕೃಷ್ಣ (13), ಹಾಗೂ ಮಂಗಳಮ್ಮ ತಂಗಿ ಸವಿತಾ (24), ಸವಿತಾ ಮಗಳು ದರ್ಶಿನಿ (4) ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ತಾನು ಮಾತ್ರ ಸತ್ತರೆ ಕುಟುಂಬಸ್ಥರಿಗೆ ಸಾಲಗಾರರ ಕಾಟ ತಪ್ಪುವುದಿಲ್ಲ ಎಂದು ಎಲ್ಲರಿಗೂ ವಿಷವುಣಿಸುವ ನಿರ್ಧಾರ ರಾಜು ಮಾಡಿದ್ದ. ಸದ್ಯ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ರಾಜು ಸಾಲಗಾರರ ಕಾಟಕ್ಕೆ ಈ ರೀತಿಯ ತೀರ್ಮಾನ ಮಾಡಿದ್ದ. ನನ್ನ ತಮ್ಮ ಹಾಗೂ ಸ್ನೇಹಿತರು ಸೇರಿ ಸಾಲವನ್ನು ನನ್ನ ಮೇಲೆ ಹೊರಿಸಿದ್ದಾರೆ ಎಂದಿದ್ದಾನೆ.

    ಒಟ್ಟಾರೆ ಸಾಲದ ಶೂಲಕ್ಕೆ ಸಿಲುಕಿದ ರಾಜು ಏನೂ ಅರಿಯದ ಮಕ್ಕಳನ್ನೂ ಸಹ ಸಾವಿನ ದವಡೆಗೆ ನೂಕಿದ್ದಾನೆ. ಮಾಡದ ತಪ್ಪಿಗೆ ರಾಜು ಕುಟುಂಬ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಇದನ್ನೂ ಓದಿ: ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k