Tag: ಸಾವರ್ಕರ್ ಫೋಟೋ

  • ಸಿಎಂ ಬೊಮ್ಮಾಯಿ ಸುಳ್ಳಿನ ರಾಜ – ನಮ್ಮ ಒತ್ತಾಯದಿಂದ ಅಧಿವೇಶನ ನಡೆಯುತ್ತಿದೆ: ಡಿಕೆಶಿ ಕಿಡಿ

    ಸಿಎಂ ಬೊಮ್ಮಾಯಿ ಸುಳ್ಳಿನ ರಾಜ – ನಮ್ಮ ಒತ್ತಾಯದಿಂದ ಅಧಿವೇಶನ ನಡೆಯುತ್ತಿದೆ: ಡಿಕೆಶಿ ಕಿಡಿ

    ಬೆಳಗಾವಿ: ಸುವರ್ಣಸೌಧದಲ್ಲಿ (Suvarna Soudha) ಸಾವರ್ಕರ್ (Savarkar) ಫೋಟೋ ವಿಚಾರವಾಗಿ ನನಗೆ ಗೊತ್ತೆ ಇಲ್ಲಾ ಅಂತ ಮುಖ್ಯಮಂತ್ರಿಗಳು ಹೇಳಿದ್ರು. ಅವರು ಸುಳ್ಳಿನ ರಾಜ. ಮುಖ್ಯಮಂತ್ರಿಗಳಿಗೆ ಸುಳ್ಳಿನ ರಾಜ ಅಂತ ಕರೆಯಬೇಕಾಗುತ್ತೆ ಎಂದು ಡಿ.ಕೆ ಶಿವಕುಮಾರ್ (DK Shivakumar)  ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಾವು ಉತ್ತರ ಕರ್ನಾಟಕದಲ್ಲಿ ಅಧಿವೇಶನ ಮಾಡಲೇಬೇಕೆಂಬ ಒತ್ತಾಯದಿಂದಾಗಿ ಅಧಿವೇಶನ ನಡೆಯುತ್ತಿದೆ. ಬಿಜೆಪಿ ಸರ್ಕಾರ ಬಂದ ನಂತರ ಉತ್ತರ ಕರ್ನಾಟಕವನ್ನು ಸಂಪೂರ್ಣ ಮರೆತಿದ್ದಾರೆ. ಉತ್ತರ ಕರ್ನಾಟಕವನ್ನು ಸರ್ಕಾರ ಮರೆತಿದ್ದು, ಇಲ್ಲಿನ ಪರಿಸ್ಥಿತಿಯನ್ನು ಸಮಸ್ಯೆಗಳನ್ನು ಆಲಿಸಲು ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಏಯ್‌ ಯತ್ನಾಳ್‌ – ಕಾರಿಡಾರ್‌ನಲ್ಲಿ ಸಿದ್ದು ಇತಿಹಾಸ ಪಾಠ

    ಸರ್ಕಾರ ಇಲ್ಲಿನ ಪರಿಸ್ಥಿಯನ್ನು ಮರೆತು ಅಧಿವೇಶನದ ದಾರಿ ತಪ್ಪಿಸಲು ಹೊರಟಿದೆ. ಸ್ವಾತಂತ್ರಕ್ಕೆ ಸಾವರ್ಕರ್ ಕೊಡುಗೆ ಇಲ್ಲ. ಅವರು ತಪ್ಪು ಒಪ್ಪಿಕೊಂಡು ಪತ್ರ ಬರೆದು ಕೊಟ್ಟಿದ್ದರು. ಅವರು ಬ್ರಿಟಿಷರ ಜೊತೆ ಕೈ ಜೋಡಿಸಿದ್ದರು. ಕಮೀಷನ್, ಮತದಾರರ ಪಟ್ಟಿ ಹಗರಣ ಯಾವುದೂ ಚರ್ಚೆ ಆಗಬಾರದು ಅಂತ ಬಿಜೆಪಿಯವರು ಇದೀಗ ಸವರ್ಕರ್ ಫೋಟೋ ಹಾಕಿ ವಿವಾದ ಸೃಷ್ಟಿಸುತ್ತಿದ್ದಾರೆ. ಸ್ಪೀಕರ್ ಗಾಂಧಿ ಹಾಗೂ ಅಂಬೇಡ್ಕರ್ ಸೇರಿದಂತೆ ಮಹನಿಯರ ಫೋಟೋ ಹಾಕ್ತೀವಿ ಅಂತ ಹೇಳಿದ್ದರು. ಆದರೆ ಇಲ್ಲಿಗೆ ಬಂದ ಮೇಲೆ ಮಾಧ್ಯಮ ಮೂಲಕ ಸಾವರ್ಕರ್ ಫೋಟೋ ಹಾಕೋದು ಗೊತ್ತಾಯಿತು. ಸಾವರ್ಕರ್‌ಗೂ ನಮ್ಮ ರಾಜ್ಯಕ್ಕೂ ಏನು ಸಂಬಂಧ? ಸಾವರ್ಕರ್ ವಿವಾದಾತ್ಮಕ ವ್ಯಕ್ತಿ ಅಂತ ಎಲ್ಲರಿಗೂ ಗೊತ್ತು. ಇದೀಗ ಬಿಜೆಪಿ ಅಧಿವೇಶನಕ್ಕೆ ಅಡ್ಡಿ ತರಲು ಹೊರಟಿದೆ ಎಂದು ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ನಾವು ಹಿಂದೂಗಳೇ – ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ: ಡಿಕೆಶಿ

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳು ಅನಿವಾರ್ಯವಾಗಿ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ: ಸಂತೋಷ್ ಗುರೂಜಿ

    ಹಿಂದೂಗಳು ಅನಿವಾರ್ಯವಾಗಿ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ: ಸಂತೋಷ್ ಗುರೂಜಿ

    ಶಿವಮೊಗ್ಗ: ಸಾವರ್ಕರ್ ಫೋಟೋ ವಿವಾದದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಚಾಕು ಇರಿತದಿಂದ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಸಿಂಗ್ ಆರೋಗ್ಯವನ್ನು ಸಂತೋಷ್ ಗುರೂಜಿ ವಿಚಾರಿಸಿದ್ದಾರೆ.

    ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೂ ಯುವಕರು ಇನ್ನು ಮುಂದೆ ವೆಪನ್ ಗಳನ್ನು ಇಟ್ಟುಕೊಂಡು ಓಡಾಡಬೇಕು. ಶಿವಮೊಗ್ಗದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಮಂಗಳೂರು ಮಾದರಿಯನ್ನು ಶಿವಮೊಗ್ಗ ಯುವಕರು ಅನುಸರಿಸಬೇಕಿದೆ ಎಂದರು. ಇದನ್ನೂ ಓದಿ: ಸಾವರ್ಕರ್ ಪೋಸ್ಟರ್ ವಿವಾದ – ನಾಲ್ವರು ಅರೆಸ್ಟ್

    ಬಾವುಟ ಕಟ್ಟೋದು, ಪ್ಲೆಕ್ಸ್ ಹಾಕುವುದು ನಂತರ ಸಾಯೋದು ತಪ್ಪಬೇಕಿದೆ. ಆತ್ಮ ರಕ್ಷಣೆಗಾಗಿ ಸರ್ಕಾರಗಳನ್ನು ಕಾಯುವುದು ತರವಲ್ಲ. ಆತ್ಮರಕ್ಷಣೆ ಮಾಡಿಕೊಳ್ಳಬಹುದು ಎಂದು ಸಂವಿಧಾನವೇ ಹೇಳಿದೆ. ಯಾವುದೇ ಸರ್ಕಾರವಾದ್ರು ಹಿಂದೂಗಳ ರಕ್ಷಣೆ ಮಾಡುವವರನ್ನು ಬೆಂಬಲಿಸಿ ಎಂದು ಸ್ವಾಮೀಜಿ ಕಿವಿಮಾತು ಹೇಳಿದರು.

    ಈ ಪ್ರಕರಣದಲ್ಲಿ ಶಿವಮೊಗ್ಗದ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ದಕ್ಷ ಎಸ್‍ಪಿ ಮತ್ತು ಡಿಸಿ ಶಿವಮೊಗ್ಗ ಜಿಲ್ಲೆಯಲ್ಲಿದ್ದಾರೆ. ಹಿಂದೂಗಳು ಅನಿವಾರ್ಯವಾಗಿ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಶಸ್ತ್ರಾಸ್ತ್ರಗಳನ್ನು ಓಡಾಟ ಮಾಡುವುದು ಅನಿವಾರ್ಯ. ಶಿವಮೊಗ್ಗದಲ್ಲಿ ಮುಂದೆ 10 ವರ್ಷದ ನಂತರ ಹಿಂದೂಗಳ ಪರಿಸ್ಥಿತಿ ಗಂಭೀರವಾಗಲಿದೆ ಎಂದು ಅವರು ಭವಿಷ್ಯ ನುಡಿದರು.

    Live Tv
    [brid partner=56869869 player=32851 video=960834 autoplay=true]