Tag: ಸಾವರ್ಕರ್

  • ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರನ್ನೇ ಇಡುತ್ತೇವೆ: ಭೀಮಾಶಂಕರ ಪಾಟೀಲ್ ಸವಾಲು

    ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರನ್ನೇ ಇಡುತ್ತೇವೆ: ಭೀಮಾಶಂಕರ ಪಾಟೀಲ್ ಸವಾಲು

     – ‘ತಾಕತ್ತಿದ್ದರೆ ತಡೆದು ನೋಡಿ’

    ದಾವಣಗೆರೆ: ಬೆಂಗಳೂರಿನ ಯಲಹಂಕ ಫ್ಲೈಓವರಿಗೆ ಸಾವರ್ಕರ್ ನಾಮಕರಣ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ತಾಕತ್ತಿದ್ದರೆ ತಡೆದು ನೋಡಿ ಎಂದು ದಾವಣಗೆರೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಭೀಮಾಶಂಕರ ಪಾಟೀಲ್ ವಿರೋಧಿ ಪಕ್ಷಗಳಿಗೆ ಸವಾಲೆಸೆದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಹೆಸರು ಕೇಳಿದರೆ ಏಕೆ ಚೇಳು ಕಡಿದಂತೆ ಆಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ಈಗಿನ ಕಾಂಗ್ರೆಸ್ ನಾಯಕರಿಗೆ ಸಾವರ್ಕರ್ ಹೆಸರು ಕೇಳಿದರೆ ಇಷ್ಟೋಂದು ಹೆದರಿಕೆ ಆಗುತ್ತೆ. ಸ್ವಾತಂತ್ರ್ಯ ಪೂರ್ವದ ಕಾಂಗ್ರೆಸ್ ನಾಯಕರು ಇನ್ನೆಷ್ಟು ಹೆದರಿರಬೇಡ ಎಂದರು.

    ಸಾರ್ವಕರ್ ರಂತಹ ದೇಶ ಭಕ್ತ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ನಾಡು-ನುಡಿ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಸಾವರ್ಕರ್ ನಾಮಕರಣದ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಬೇಡ. ಬೆಂಗಳೂರು ಮಹಾನಗರ ಪಾಲಿಕೆಯಿಂದ ಅಧಿಕೃತವಾಗಿ ಪರವಾನಗಿ ಪಡೆದು ಫ್ಲೈಓವರಿಗೆ ಸಾವರ್ಕರ್ ಹೆಸರು ನಾಮಕರಣ ಮಾಡುತ್ತೇವೆ. ಈ ವಿಚಾರದಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟ ನಿಲುವನ್ನು ಸ್ಪಷ್ಟಪಡಿಸಿದರು.

    ಬೆಳಗಾವಿ, ಕಲಬುರಗಿ, ವಿಜಯಪುರ ಜಿಲ್ಲೆಗಳ ಹೆಸರು ಬಿಜೆಪಿ ಅಧಿಕಾರ ಅವಧಿಯಲ್ಲಿ ಮರುನಾಮಕರಣಗೊಂಡಿದ್ದು, ಇಂದಿರಾ ಕ್ಯಾಂಟೀನ್‍ಗೆ ಅಕ್ಕಮಹಾದೇವಿ ಹೆಸರು ಸೂಚಿಸಿದ್ದೇವು. ಆದರೆ ಸಿದ್ದರಾಮಯ್ಯ ಅರು ಹಠಕ್ಕೆ ಬಿದ್ದವರಂತೆ ಇಂದಿರಾ ಅವರ ಹೆಸರು ನಾಮಕರಣ ಮಾಡಿದರು. ಆದರೂ ನಾವು ವಿರೋಧ ಮಾಡಿರಲಿಲ್ಲ. ಆದರೆ ಈಗ ಕಾಂಗ್ರೆಸ್ ಹಾಗೂ ಜೆಡಿಎಸ್ ವಿನಾಕಾರಣ ವಿವಾದ ಎಬ್ಬಿಸುತ್ತಿದ್ದಾರೆ. ಸ್ವಾತಂತ್ರ ವೀರನಿಗೆ ವಿರೋಧ ಪಕ್ಷಗಳು ಅಪಮಾನ ಮಾಡುತ್ತಿದ್ದಾರೆ ಎಂದರು.

    ಸಾರ್ವಕರ್ ಮುಂದಾಳತ್ವ ಹೋರಾಟ ಕಾಂಗ್ರೆಸ್ ಪೂರ್ವಜರಿಗೆ ಇರಲಿಲ್ಲ. ಸಾವರ್ಕರ್ ಹೆಸರು ಇಟ್ಟ ತಕ್ಷಣ ಸಿದ್ದರಾಮಯ್ಯ ನವರಿಗೆ ಚೇಳು ಕಡಿದಂತಾಗುತ್ತದೆ. ಹೋರಾಟಗಾರರನ್ನು ಅಪಮಾನ ಮಾಡುವ ನೀಚ ಕೆಲಸಕ್ಕೆ ಕಾಂಗ್ರೆಸ್ ಕೈಹಾಕಿದೆ. ಸಾವರ್ಕರ್ ವಿಚಾರಕ್ಕೆ ಬಂದರೆ ತಕ್ಕ ಪಾಠ ಕಲಿಸುತ್ತೇವೆ. ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ಇಟ್ಟೇ ಇಡುತ್ತೇವೆ ತಾಖತ್ ಇದ್ದವರು ಎದುರು ಬರಬಹುದು ಎಂದು ಸವಾಲು ಎಸೆದರು.

  • ಸಾವರ್ಕರ್ ಬಗ್ಗೆ ವಿವಾದಾತ್ಮಕ ಪುಸ್ತಕ ಪ್ರಕಟಿಸಿರೋ ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಮನವಿ

    ಸಾವರ್ಕರ್ ಬಗ್ಗೆ ವಿವಾದಾತ್ಮಕ ಪುಸ್ತಕ ಪ್ರಕಟಿಸಿರೋ ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಮನವಿ

    – ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ ಪತ್ರ

    ಬೆಂಗಳೂರು: ಸಾವರ್ಕರ್ ಬಗ್ಗೆ ಅಶ್ಲೀಲವಾಗಿ ಪುಸ್ತಕವನ್ನು ಬರೆಯುವ ಲೇಖಕ ಹಾಗೂ ಅದನ್ನು ಪ್ರಕಟಿಸುವವರ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸಿಎಂ ಮತ್ತು ಪ್ರಧಾನಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು, ಪುಸ್ತಕವನ್ನು ದೇಶಾದ್ಯಂತ ತಕ್ಷಣ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಆಗ್ರಹಿಸಿದೆ.

    ಹಿಂದೂ ಜನಜಾಗೃತಿ ಸಮಿತಿ, ಹಿಂದೂ ಮಹಾಸಭಾದ ವತಿಯಿಂದ ವೀರ ಸಾವರ್ಕರ್ ಬಗ್ಗೆ ಕೆಟ್ಟದಾಗಿ ಪುಸ್ತಕದಲ್ಲಿ ಬರೆದಿರುವ ಬಗ್ಗೆ ಬೆಂಗಳೂರು ಜಿಲ್ಲಾಧಿಕಾರಿ ಮೂಲಕ ಕರ್ನಾಟಕ ಸಿಎಂ ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಯಂತ್ ಮತ್ತು ಹಿಂದೂ ಮಹಾಸಭೆಯ ಲೋಹಿತ್ ಮುಂತಾದವರು ಉಪಸ್ಥಿತರಿದ್ದರು.

    ಭೋಪಾಲ್‍ನಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ವೀರ್ ಸಾವರ್ಕರ್ ಕಿತನೆ ವೀರ್? (ವೀರ ಸಾವರ್ಕರ್ ಎಷ್ಟು ವೀರರು?) ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಅತ್ಯಂತ ತ್ಯುಚ್ಛವಾಗಿ ದ್ವೇಷ ಪೂರಕವಾಗಿ ಕಟ್ಟುಕಥೆಗಳನ್ನು ಬರೆಯಲಾಗಿದೆ. ಇದರಿಂದ ಕಾಂಗ್ರೆಸ್ಸಿನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳು ಮಟ್ಟಕ್ಕೆ ಹೋಗಬಹುದು ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸಾವರ್ಕರ್ ಮಾತ್ರವಲ್ಲದೇ ಯಾವುದೇ ರಾಷ್ಟ್ರಪುರುಷರು ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ. ಅದಕ್ಕಾಗಿ ಕೇಂದ್ರ ಸರ್ಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ ಅವಶ್ಯಕತೆ ಇದೆ ಎಂದು ಹಿಂದೂ ಜನಜಾಗೃತಿ ಸಮಿತಿ ಮನವಿ ಮಾಡಿದೆ.

    ಕಾಂಗ್ರೆಸ್ಸಿನ ಶಿಬಿರದಲ್ಲಿ ದೇಶದ ಕ್ರಾಂತಿಕಾರರು ಸಲಿಂಗ ಸಂಬಂಧವನ್ನು ಇಟ್ಟುಕೊಳ್ಳುವ, ಮಸೀದಿಯ ಮೇಲೆ ಕಲ್ಲೆಸೆಯುವ, ಅದೇ ರೀತಿ ಅಲ್ಪಸಂಖ್ಯಾತ ಮಹಿಳೆಯರ ಬಲಾತ್ಕಾರ ಮಾಡುವವರಿದ್ದರು ಎಂದು ಹೇಳುವ ಅತ್ಯಂತ ಕೀಳುಮಟ್ಟದ ಪುಸ್ತಕವನ್ನು ವಿತರಿಸಿದ್ದಾರೆ. ಇದನ್ನ ಕೂಡಲೇ ನಿಷೇಧಿಸಿ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.