Tag: ಸಿಂಡಿಕೇಟ್ ಬ್ಯಾಂಕ್

  • ಹಳೆ ಮಾಲೀಕ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಯಾರು ಪಾವತಿಸಬೇಕು – ಸುಪ್ರೀಂನಿಂದ ಮಹತ್ವದ ತೀರ್ಪು

    ಹಳೆ ಮಾಲೀಕ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಯಾರು ಪಾವತಿಸಬೇಕು – ಸುಪ್ರೀಂನಿಂದ ಮಹತ್ವದ ತೀರ್ಪು

    ನವದೆಹಲಿ: ಬಾಕಿ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಹೊಸ ಕಂಪನಿ ಪಾವತಿ ಮಾಡಬೇಕೇ? ಬೇಡವೇ? ಈ ಪ್ರಶ್ನೆಗೆ ಇಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಪ್ರಕಟಿಸುವ ಮೂಲಕ ಉತ್ತರ ನೀಡಿದೆ.

    ಪ್ರಕರಣ ಒಂದರ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾ. ಸಂಜಯ್ ಕಿಶನ್ ಮತ್ತು ನ್ಯಾ.ಕೆಎಂ ಜೋಸೆಫ್ ಅವರಿದ್ದ ದ್ವಿಸಸ್ಯ ಪೀಠ ಹೊಸ ಕಂಪನಿಯೇ ವಿದ್ಯುತ್ ಬಿಲ್ ಅನ್ನು ಪಾವತಿಸಬೇಕೆಂದು ಆದೇಶಿಸಿದೆ.

    ಏನಿದು ಪ್ರಕರಣ?
    ನಷ್ಟದಲ್ಲಿದ್ದ ತೆಲಂಗಾಣದ ಮಿನರಲ್ ಕಂಪನಿಯೊಂದನ್ನು ಮತ್ತೊಬ್ಬ ಮಾಲೀಕ ಖರೀದಿಸಿದ್ದರು. ಈ ವೇಳೆ ಮಾಲೀಕ ಹೊಸದಾಗಿ 500 ಕಿ.ವಾ ವಿದ್ಯುತ್ ಸಂಪರ್ಕ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಹಿಂದಿನ ಮಾಲೀಕ ವಿದ್ಯುತ್ ಬಿಲ್ ಪಾವತಿ ಮಾಡದ್ದಕ್ಕೆ ಹೊಸದಾಗಿ ಕಂಪನಿಗೆ ವಿದ್ಯುತ್ ಸಂಪರ್ಕ ನೀಡುವುದಿಲ್ಲ ಎಂದು ಹೇಳಿ ತೆಲಂಗಾಣ ಎಲೆಕ್ಟ್ರಿಸಿಟಿ ಬೋರ್ಡ್ ಅರ್ಜಿಯನ್ನು ತಿರಸ್ಕರಿಸಿತ್ತು.

    ತನ್ನ ಬೇಡಿಕೆಯನ್ನು ಮನ್ನಿಸದ ಹಿನ್ನೆಲೆಯಲ್ಲಿ ಮಾಲೀಕರು ತೆಲಂಗಾಣ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್ ಮಾಲೀಕರ ಪರವಾಗಿ ತೀರ್ಪು ನೀಡಿತ್ತು. ಹೈಕೋರ್ಟ್ ನೀಡಿದ್ದ ಈ ಆದೇಶವನ್ನು ಪ್ರಶ್ನಿಸಿ ತೆಲಂಗಾಣ ಎಲೆಕ್ಟ್ರಿಸಿಟಿ ಬೋರ್ಡ್ ಸುಪ್ರೀಂ ಮೊರೆ ಹೋಗಿತ್ತು.

    ಮಾಲೀಕನೇ ಪಾವತಿಸಬೇಕು ಯಾಕೆ?
    ಈ ಪ್ರಕರಣದ ಮೂಲ ಮಾಲೀಕ ಸಾಲವನ್ನು ಪಾವತಿಸದ ಹಿನ್ನೆಲೆಯಲ್ಲಿ ಮಿನರಲ್ ಕಂಪನಿಯನ್ನು ಮಾರಾಟ ಮಾಡಲು ಸಿಂಡಿಕೇಟ್ ಬ್ಯಾಂಕ್ ಇ-ಹರಾಜು ಹಾಕಿತ್ತು. ಈ ವೇಳೆ ಈ ಕಂಪನಿ ಯಾವ ಸ್ಥಿತಿಯಲ್ಲಿದೆಯೇ ಆ ಸ್ಥಿತಿಯಲ್ಲೇ ಮಾರಾಟ ಮಾಡುತ್ತಿದ್ದೇವೆ. ಎಲ್ಲದ್ದಕ್ಕೂ ಹೊಸ ಮಾಲೀಕನೇ ಹೊಣೆಗಾರನಾಗುತ್ತಾನೆ ಎಂಬ ಅಂಶವನ್ನು ನೋಟಿಸ್ ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿತ್ತು.

     

    ಅರ್ಜಿ ವಿಚಾರಣೆ ಸಂದರ್ಭದಲ್ಲಿ ಈ ಎಲ್ಲ ಅಂಶಗಳನ್ನು ಆಲಿಸಿದ್ದ ಪೀಠ ಕಂಪನಿಯ ಎಲ್ಲ ವಿವರಗಳು, ಉಲ್ಲೇಖಿಸಲ್ಪಟ್ಟ ವಿಚಾರಗಳನ್ನು ತಿಳಿದುಕೊಂಡು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಹಳೆಯ ಮಾಲೀಕ ಪಾವತಿಸದ ಕಾರಣಕ್ಕೆ ವಿದ್ಯುತ್ ಶುಲ್ಕವನ್ನು ಮನ್ನಾ ಮಾಡಲು ಸಾಧ್ಯವಿಲ್ಲ. ನೋಟಿಸ್‍ನಲ್ಲಿ ಉಲ್ಲೇಖಿಸಿದ್ದ ಕಂಪನಿಯನ್ನು ಯಥಾಸ್ಥಿತಿಯಲ್ಲಿ ಮಾರಾಟ ಮಾಡಲಾಗುತ್ತದೆ ಎಂಬ ಅಂಶವನ್ನೇ ಗಂಭೀರವಾಗಿ ಪರಿಗಣಿಸಿದ ಕೋರ್ಟ್ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶವನ್ನು ರದ್ದುಗೊಳಿಸಿ ಹೊಸ ಕಂಪನಿಯ ಮಾಲೀಕನೇ ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಶುಲ್ಕವನ್ನು ಪಾವತಿಸಬೇಕು ಎಂದು ಮಹತ್ವದ ಆದೇಶ ಪ್ರಕಟಿಸಿತು.

  • ರಾಜ್ಯ ಕೃಷಿ ಮಾರಾಟ ಮಂಡಳಿಯ 50 ಕೋಟಿ ರೂ. ಲಪಟಾಟಯಿಸಿದ್ದ ಆರೋಪಿಗಳು ಅರೆಸ್ಟ್

    ರಾಜ್ಯ ಕೃಷಿ ಮಾರಾಟ ಮಂಡಳಿಯ 50 ಕೋಟಿ ರೂ. ಲಪಟಾಟಯಿಸಿದ್ದ ಆರೋಪಿಗಳು ಅರೆಸ್ಟ್

    ಬೆಂಗಳೂರು: ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ನಿಶ್ಚಿತ ಠೇವಣಿ ಹಣದ ನೂರು ಕೋಟಿ ರೂ.ಗಳಲ್ಲಿ 48 ಕೋಟಿ ರೂ. ಹಣ ನುಂಗಿ ನೀರು ಕುಡಿದಿದ್ದ ಸಿಂಡಿಕೇಟ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಸೇರಿ 6 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಅಸಿಸ್ಟೆಂಟ್ ಮ್ಯಾನೇಜರ್ ಜಯರಾಮ್, ಮುಸ್ತಪಾ, ಅಬ್ದುಲ್ ಅಸ್ಲಾಂ, ಸಿದ್ದಗಂಗಯ್ಯ, ರೇವಣ್ಣ ನನ್ನ ಬಂಧಿಸಿರುವ ಸಿಸಿಬಿ ಪೊಲೀಸರು ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. 2019ರ ನವೆಂಬರ್ ನಲ್ಲಿ ಮಂಡಳಿಯ ಅವರ್ತ ನಿಧಿಯಿಂದ ಉತ್ತರ ಹಳ್ಳಿ ಬ್ರಾಂಚ್‍ನ ಸಿಂಡಿಕೇಟ್ ಬ್ಯಾಂಕ್‍ನಲ್ಲಿ ಬರೋಬ್ಬರಿ 100 ಕೋಟಿ ರೂ. ನಿಶ್ಚಿತ ಠೇವಣಿ ಮಾಡಲಾಗಿತ್ತು.

    ಅಧಿಕ ಬಡ್ಡಿ ಆಸೆಗಾಗಿ ಸಿಂಡಿಕೇಟ್ ಬ್ಯಾಂಕ್‍ನಲ್ಲಿದ್ದ 100 ಕೋಟಿ ರೂ. ನಿಶ್ಚಿತ ಠೇವಣಿ ಮಾಡಿದ್ದ ಮಂಡಳಿ ಪ್ರತ್ಯೇಕವಾಗಿ ಎರಡು ಅಕೌಂಟ್‍ನಲ್ಲಿ ತಲಾ 50 ಕೋಟಿ ರೂ. ಹಣ ಇಟ್ಟಿತ್ತು. ಜನವರಿಯಲ್ಲಿ ನಿಶ್ಚಿತ ಠೇವಣಿ ಬಗ್ಗೆ ಮಾಹಿತಿ ಕೇಳಿದ ಕೃಷಿ ಅಧಿಕಾರಿಗಳು ಸಿಂಡಿಕೇಟ್ ಬ್ಯಾಂಕ್‍ನಲ್ಲಿ ಕೇವಲ 50 ಕೋಟಿ ರೂ. ಇದೇ ಎಂದು ಮಾಹಿತಿ ಕೊಟ್ಟಿದ್ದರು. ಬ್ಯಾಂಕ್ ಅಧಿಕಾರಿಗಳ ಮಾಹಿತಿ ಇಂದ ಕಂಗಾಲಾದ ಮಂಡಳಿ ಅಧಿಕಾರಿಗಳು ಕಮರ್ಷಿಯಲ್ ಪೊಲೀಸ್ ಠಾಣೆಯಲ್ಲಿ ವಂಚನೆಯ ಬಗ್ಗೆ ದೂರು ದಾಖಲಿಸಿದ್ದರು.

    ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡ ಸರ್ಕಾರ ಸಿಸಿಬಿ ಹೆಗಲಿಗೆ ನೀಡಿತ್ತು. ಮೊದಲು ಬಂಧಿತರು ನೀಡಿದ್ದ 2 ನಿಶ್ಚಿತ ಠೇವಣಿ ಸಂಖ್ಯೆ ನಕಲಿ ಎಂದು ತಿಳಿದು ಬಂದಿತ್ತು. ಸದ್ಯ ಉಳಿದ 50 ಕೋಟಿ ರೂ. ಹಣದ ಮಾಹಿತಿಯನ್ನು ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಡಿಸಿಪಿ ರವಿಕುಮಾರ್ ನೇತೃತ್ವದ ತಂಡ ತನಿಖೆ ನಡೆಸಿ 50 ಕೋಟಿ ರೂ. ಹಣವನ್ನು ವಶಕ್ಕೆ ಪಡೆದು ಉಳಿದ 50 ಕೋಟಿ ರೂ. ಹಣದ ಮಾಹಿತಿಯನ್ನು ಬಂಧಿತ ಆರೋಪಿಗಳಿಂದ ಪಡೆದು ರಿಕವರಿ ಮಾಡಲು ಮುಂದಾಗಿದ್ದಾರೆ.

  • ಕೆನರಾ ಜೊತೆ ಸಿಂಡಿಕೇಟ್ ಬ್ಯಾಂಕ್ ವಿಲೀನ

    ಕೆನರಾ ಜೊತೆ ಸಿಂಡಿಕೇಟ್ ಬ್ಯಾಂಕ್ ವಿಲೀನ

    ನವದೆಹಲಿ: ಕರ್ನಾಟಕದ ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್‍ಗಳನ್ನು ವಿಲೀನ ಮಾಡಲು ಸರ್ಕಾರ ಮುಂದಾಗಿದೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, 2017 ರಲ್ಲಿ 17 ಸಾರ್ವಜನಿಕ ವಲಯದ ಬ್ಯಾಂಕ್‍ಗಳಿದ್ದವು. ಇದನ್ನು 13ಕ್ಕೆ ಇಳಿಸುವ ನಿಟ್ಟಿನಲ್ಲಿ ಈ ವಿಲೀನ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

    ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಹಾಗೂ ಯುನೈಟೆಡ್ ಬ್ಯಾಂಕ್ ವಿಲೀನವಾದರೆ ಇಂಡಿಯನ್ ಬ್ಯಾಂಕ್ ಜೊತೆ ಅಲಹಾಬಾದ್ ಬ್ಯಾಂಕ್ ವಿಲೀನವಾಗಲಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್ ವಿಲೀನವಾಗಲಿದೆ.

    ವಸೂಲಾಗದ ಸಾಲ(ಎನ್‍ಪಿಎ) ಪ್ರಮಾಣ 8.65 ಲಕ್ಷ ಕೋಟಿಯಿಂದ 7.90 ಲಕ್ಷ ಕೋಟಿ ರೂ.ಗೆ ಇಳಿಕೆಯಾಗಿದೆ. ಆರ್ಥಿಕತೆಯನ್ನು 5 ಟ್ರಿಲಿಯನ್ ಗುರಿ ತಲುಪಲು ಕೇಂದ್ರ ಸರಕಾರ ಎಲ್ಲ ರೀತಿಯ ಆರ್ಥಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ 10 ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

    1906ರಲ್ಲಿ ಮಂಗಳೂರಿನಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಕೆನರಾ ಬ್ಯಾಂಕ್ ಆರಂಭಿಸಿದ್ದರೆ, ಸಿಂಡಿಕೇಟ್ ಬ್ಯಾಂಕ್ ಅನ್ನು ಉಪೇಂದ್ರ ಅನಂತ್ ಪೈ, ಟಿಎಂಎ ಪೈ, ವಾಮನ ಕುಡುವ 1924 ರಲ್ಲಿ ಮಣಿಪಾಲದಲ್ಲಿ ಆರಂಭಿಸಿದ್ದರು. ಕಾರ್ಪೋರೇಷನ್ ಬ್ಯಾಂಕ್ ಅನ್ನು 1906 ರಲ್ಲಿ ಖಾನ್ ಬಹದ್ದೂರ್ ಹಾಜಿ ಅಬ್ದುಲ್ಲಾ ಮಂಗಳೂರಿನಲ್ಲಿ ಸ್ಥಾಪಿಸಿದ್ದರು. ಈ ಹಿಂದೆ ಮಂಗಳೂರು ಮೂಲದ ವಿಜಯ್ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾದ ಜೊತೆ ವಿಲೀನಗೊಂಡಿತ್ತು.

  • ಬಡವರ ಸಾಲಕ್ಕೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳು ಈಗ ಸುಮ್ಮನಿದ್ದಾರೆ ಯಾಕೆ: ಟಿ.ಜೆ ಅಬ್ರಹಂ

    ಬಡವರ ಸಾಲಕ್ಕೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳು ಈಗ ಸುಮ್ಮನಿದ್ದಾರೆ ಯಾಕೆ: ಟಿ.ಜೆ ಅಬ್ರಹಂ

    ಉಡುಪಿ: ದಾವೂದ್ ಯಾವತ್ತೂ ನಗು ನಗ್ತಾ ಇರ್ತಾನೆ. ಆತ ಅಳೋದನ್ನು ನಾನು ನೋಡಿಲ್ಲ. ಸಚಿವ ಪ್ರಮೋದ್ ಮಧ್ವರಾಜ್ ಕೂಡಾ ದಾವುದ್ ರೀತಿ ನಗ್ತಾರೆ ಎಂದು ಆರ್‍ಟಿಐ ಹೋರಾಟಗಾರ ಟಿ.ಜೆ ಅಬ್ರಹಂ ಹೇಳಿಕೆ ನೀಡಿದ್ದಾರೆ.

    ಮಲ್ಪೆ ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ 1.1 ಕೋಟಿ ರೂಪಾಯಿ ಆಸ್ತಿಪತ್ರ ಅಡವಿಟ್ಟು 193 ಕೋಟಿ ರೂಪಾಯಿ ಸಚಿವರು ಸಾಲ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಗರಣ ಮಾಡಿದ್ದಾರೆ ಅಂತ ದಾಖಲೆ ಕೊಟ್ಟರೂ ಮಾಧ್ಯಮದ ಮುಂದೆ ನಗ್ತಾರೆ ಅಂತ ಟೀಕಿಸಿದರು.

    ಪ್ರಮೋದ್ ಮಧ್ವರಾಜ್ ಅವರೇ ನೀವು ನಿರಪರಾಧಿ ಎಂದು ದಾಖಲೆ ಬಿಡುಗಡೆ ಮಾಡಿ. ಮುಚ್ಚುಮರೆ ಮಾಡುವುದ್ಯಾಕೆ? ನಾನು ಸವಾಲು ಹಾಕುತ್ತಿದ್ದೇನೆ. ದಾಖಲೆ ಕೊಡಿ ಎಂದು ಒತ್ತಾಯಿಸಿದ್ದಾರೆ. ಸತ್ಯ ಹೊರ ತೆಗೆಯಲು ಹೊರಟರೆ ನಮ್ಮ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲು ಹೊರಡ್ತಾರೆ. ನಾನು ಯಾವುದನ್ನೂ ಕೇರ್ ಮಾಡಲ್ಲ ಅಂತ ತಿರುಗೇಟು ನೀಡಿದರು. ಇದನ್ನೂ ಓದಿ: 193 ಕೋಟಿ ರೂ. ವಂಚನೆ: ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ದೂರು ದಾಖಲು

    ಸಿಂಡಿಕೇಟ್ ಬ್ಯಾಂಕ್ ಸಚಿವ ಪ್ರಮೋದ್ ಪರವಾಗಿ ನಿಂತಿದೆ. ಬ್ಯಾಂಕ್ ಅಧಿಕಾರಿಗಳು ಕಾನೂನು ಬಾಹಿರವಾಗಿ ಸಾಲ ನೀಡಿದ್ದಾರೆ. ರಾಜ್ಯದಲ್ಲಿ ಸಾಲ ಮಾಡಿ ಸತ್ತಿರೋ ರೈತರು ಎರಡು ಲಕ್ಷಕ್ಕೆ ಹೆಚ್ಚು ಬ್ಯಾಂಕಿಂದ ತೆಗೆದುಕೊಂಡಿಲ್ಲ. ಶ್ರೀಮಂತರಿಗೆ ಕೋಟಿ ಕೋಟಿ, ರೈತರು ಲಕ್ಷ ಸಾಲ ಮಾಡಿದ್ರೆ ಬ್ಯಾಂಕುಗಳು ಬೆನ್ನತ್ತುತ್ತದೆ. ಬಡವರು ಸಾಲ ಪಡೆದರೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳು ಈಗ ಯಾಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.

    ಬ್ಯಾಂಕ್ ಡಿಜಿಎಂ ಮಾಧ್ಯಮಗಳ ಮೂಲಕ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಬ್ಯಾಂಕ್ ಮೇಲೆ ಐದು ಕೋಟಿ ರೂ. ಮಾನ ನಷ್ಟ ಮೊಕದ್ದಮೆ ಹಾಕುತ್ತೇನೆ. ಕೇಂದ್ರ ಸರ್ಕಾರ ಸರಿಯಾಗಿಯೇ ತನಿಖೆ ಮಾಡುತ್ತದೆ ಎಂದು ಹೇಳಿದರು.

    ಚುನಾವಣೆಗೂ ಈ ಕೇಸಿಗೂ ಸಂಬಂಧವಿಲ್ಲ. ಯಡಿಯೂರಪ್ಪನವರ ಮೇಲೂ ಕೇಸು ಹಾಕಿದ್ದೇನೆ. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ ಮೇಲೂ ಕೇಸ್ ಇದೆ ಎಂದು ಸ್ಪಷ್ಟನೆ ನೀಡಿದರು.